Tag: ಕುಟ್ಟಪ್ಪ

  • ಟಿಪ್ಪು ಗಲಾಟೆಯಲ್ಲಿ ಕುಟ್ಟಪ್ಪ ಜೀವ ಕಳಕೊಂಡು 3 ವರ್ಷ- ಕೊಟ್ಟ ಮಾತು ತಪ್ಪಿದ ಸಿಎಂ..!

    ಟಿಪ್ಪು ಗಲಾಟೆಯಲ್ಲಿ ಕುಟ್ಟಪ್ಪ ಜೀವ ಕಳಕೊಂಡು 3 ವರ್ಷ- ಕೊಟ್ಟ ಮಾತು ತಪ್ಪಿದ ಸಿಎಂ..!

    – ಇಂದಿಗೂ ಕಣ್ಣೀರಿಡುತ್ತಿದ್ದಾರೆ ಕುಟುಂಬಸ್ಥರು

    ಮಡಿಕೇರಿ: 2015ರಲ್ಲಿ ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಬಂದ್ ಗಲಭೆ ಲಾಠಿಚಾರ್ಜ್‍ಗಳು ನಡೆದು ಹೋಗಿತ್ತು. ಆ ಸಂದರ್ಭದಲ್ಲಿ ಇಬ್ಬರು ಅಮಾಯಕರು ಟಿಪ್ಪು ಜಯಂತಿಗೆ ಬಲಿಯಾದ್ರು. ಕೊಡಗಿನ ಕುಟ್ಟಪ್ಪ ಹಾಗೂ ಶಾವುಲ್ ಹಮ್ಮಿದ್ ಬಲಿಯಾಗಿ 3 ವರ್ಷ ಕಳೆದಿದೆ.

    ವಿವಾದಿತ ಟಿಪ್ಪು ಜಯಂತಿ ಗಲಭೆಯಲ್ಲಿ ಕುಟ್ಟಪ್ಪ ಜೀವ ಕಳೆದುಕೊಂಡು ಇಂದಿಗೆ ಮೂರು ವರ್ಷ ಕಳೆಯಿತು. ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿದ್ದ ಕುಟ್ಟಪ್ಪ 2015ರ ನವೆಂಬರ್ 10ಕ್ಕೆ ಮಡಿಕೇರಿಗೆ ಹೋಗಿ ಬರುವುದಾಗಿ ಹೇಳಿ, ಬೆಳಗ್ಗೆ 8 ಗಂಟೆಗೆ ಮನೆ ಬಿಟ್ಟವರು ವಾಪಸ್ ಬಂದೇ ಇರಲಿಲ್ಲ. ಟಿಪ್ಪು ಜಯಂತಿ ಗಲಭೆಯಲ್ಲಿ ಮೃತಪಟ್ಟಿದ್ದರು.

    ಕುಟ್ಟಪ್ಪನನ್ನು ಕಳೆದುಕೊಂಡ ಮನೆಯವರ ದುಃಖ ಇನ್ನೂ ಹಾಗೇ ಇದೆ. ಕುಟ್ಟಪ್ಪ ಮೃತಪಟ್ಟ ನಂತರ ರಾಜ್ಯ ಸರ್ಕಾರ 5 ಲಕ್ಷ ರೂಪಾಯಿ, ಕೊಡವ ಸಮಾಜ ಮತ್ತು ದಾನಿಗಳಿಂದ 4 ಲಕ್ಷ ರೂಪಾಯಿ ನೆರವು ಬಿಟ್ಟರೆ ಇನ್ನೇನೂ ಬರಲಿಲ್ಲ. ಟಿಪ್ಪು ಜಯಂತಿಯಿಂದ ಇಂದಿಗೂ ಕುಟ್ಟಪ್ಪ ಮನೆಯಲ್ಲಿ ನೆಮ್ಮದಿಯ ವಾತಾವರಣ ಇಲ್ಲ. ಕುಮಾರಸ್ವಾಮಿಯವರು ಮನೆಗೆ ಭೇಟಿ ನೀಡಿದ್ದ ವೇಳೆ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಟಿಪ್ಪು ಜಯಂತಿ ನಿಲ್ಲಿಸೋದಾಗಿ ಭರವಸೆ ನೀಡಿದ್ರು. ಆದ್ರೆ ಈಗ ಅವರು ಮಾತು ತಪ್ಪಿದ್ದಾರೆ ಅಂತ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ರು.


    ಕುಟ್ಟಪ್ಪ ಕುಟುಂಬದ ಕಥೆ ಹೀಗಾದ್ರೆ ಇತ್ತ ಟಿಪ್ಪು ಜಯಂತಿ ಹೆಸರಲ್ಲೇ ಸಾವನ್ನಪ್ಪಿದ ವಿರಾಜಪೇಟೆ ತಾಲೂಕಿನ ಸಿದ್ಧಾಪುರದ ಶಾಹುಲ್ ಹಮೀದ್ ಕಥೆ ಇನ್ನೂ ಘೋರ. ಕುಟ್ಟಪ್ಪ ಅವರ ಸಾವಿಗೆ ಪ್ರತೀಕಾರವಾಗಿ ಕೊಲೆಯಾದವರು ಶಾಹುಲ್ ಹಮೀದ್. ಈತ ಟಿಪ್ಪು ಜಯಂತಿ ದಿನವೇ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ನೋಡಿಕೊಂಡು ಮನೆಗೆ ಹಿಂತಿರುಗುತ್ತಿದ್ದ. ಈ ವೇಳೆ ಆತನ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದ. ಅಂದಿನ ದಿನವನ್ನು ನೆನಪಿಸಿಕೊಂಡು ಶಾಹುಲ್ ತಂದೆ, ನನ್ನ ಮಗನಿಗೆ ಬಂದ ಸಾವು ಯಾರಿಗೂ ಬರಬಾರದು ಅಂತ ಬೇಸರ ವ್ಯಕ್ತಪಡಿಸಿದ್ರು.


    ಈ ಮಧ್ಯೆ ಯಾರೇ ಕೂಗಾಡಲಿ ಊರೇ ಹೋರಾಡಲಿ.. ಇಂದು ಟಿಪ್ಪು ಜಯಂತಿ ಮಾಡಿಯೇ ತೀರುತ್ತೇವೆ ಅಂತ ಸರ್ಕಾರ ಹೊರಟಿದೆ. ಬಿಜೆಪಿ ತಡೆಯುತ್ತೇವೆ ಎಂದು ಅಖಾಡಕ್ಕೆ ಇಳಿದಿದೆ. ಒಟ್ಟಾರೆ ಮೇಲ್ಮಟ್ಟದ ರಾಜಕೀಯ ಪರಿಣಾಮಗಳನ್ನಷ್ಟೆ ಮಾನದಂಡ ಮಾಡಿಕೊಂಡವರು ಆಚರಿಸುವ ಜಯಂತಿ ಉಳಿಸಿ ಹೋಗುವ ಕಹಿ ನೆನಪುಗಳು ಹೇಗಿರುತ್ತವೆ ಎಂಬುದಕ್ಕೆ ಈ ವರದಿ ಸಾಕ್ಷಿ ಅಷ್ಟೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟಿಪ್ಪು ಪೇಟಾ ಧರಿಸಿ, ಕೈಯಲ್ಲಿ ಖಡ್ಗ ಹಿಡಿದು ಕುಣಿದ ಎಂಎಲ್‍ಎ ಶಿವಳ್ಳಿ ವಿಡಿಯೋ ವೈರಲ್

    ಟಿಪ್ಪು ಪೇಟಾ ಧರಿಸಿ, ಕೈಯಲ್ಲಿ ಖಡ್ಗ ಹಿಡಿದು ಕುಣಿದ ಎಂಎಲ್‍ಎ ಶಿವಳ್ಳಿ ವಿಡಿಯೋ ವೈರಲ್

    ಧಾರವಾಡ: ಬಿಜೆಪಿ ಹಾಗೂ ಕೆಲ ಸಂಘಟನೆಗಳ ಭಾರೀ ವಿರೋಧದ ನಡುವೆಯೂ ಶುಕ್ರವಾರ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ಆಚರಿಸಲಾಗಿತ್ತು.

    ಧಾರವಾಡದ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಕುಂದಗೋಳ ಕಾಂಗ್ರೆಸ್ ಶಾಸಕ ಸಿ.ಎಸ್ ಶಿವಳ್ಳಿ ತಲೆಗೆ ಟಿಪ್ಪು ಪೇಟಾ ಧರಿಸಿ ಕೈಯಲ್ಲಿ ಖಡ್ಗ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಶಾಸಕರ ಡ್ಯಾನ್ಸ್ ವಿಡಿಯೋ ಎಲ್ಲೆಡೆ ಇದೀಗ ವೈರಲ್ ಆಗಿದೆ.

    ಟಿಪ್ಪು ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅಲ್ಲದೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಟಿಪ್ಪು ಜಯಂತಿಗೆ ಶುಭಕೋರಿರುವ ಫ್ಲೆಕ್ಸ್ ಗಳಿಗೆ ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿತ್ತು. ಈ ವಿಚಾರಕ್ಕೆ ಬಿಜೆಪಿ ಭಾರೀ ಆಕ್ರೋಶ ವ್ಯಕ್ತಪಡಿಸಿತ್ತು.

    ಇದನ್ನೂ ಓದಿ: ಶಾಸಕ ಆನಂದ್ ಸಿಂಗ್‍ಗೆ ಬಿಜೆಪಿಯಿಂದ ಶೋಕಾಸ್ ನೋಟಿಸ್ 

    ಇನ್ನು ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆಯ ವಿರೋಧವಾಗಿ ರಸ್ತೆಗೆ ಮರಗಳನ್ನು ಕಡಿದು ಜಯಂತಿ ಆಚರಿಸದಂತೆ ಸ್ಥಳೀಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಕೆಲ ಕಿಡಿಗೇಡಿಗಳು ಕೆಎಸ್‍ಆರ್ ಟಿಸಿ ಬಸ್ ಗೆ ಕಲ್ಲು ತೂರಾಟ ನಡೆಸಿದ್ದರು. ಟಿಪ್ಪು ಜಯಂತಿ ಆಚರಣೆಯ ವೇಳೆ ಕುಟ್ಟಪ್ಪ ಎಂಬವರು ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿ ಆಚರಿಸಬಾರದೆಂದು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಶಾಸಕ ಅಪ್ಪಚ್ಚು ರಂಜನ್ ಸೇರಿ ಹಲವು ಕಾರ್ಯಕರ್ತರನ್ನು ಬಂಧಿಸಿದ್ದರು. ರಾಜ್ಯದ ಜಿಲ್ಲೆಗಳಲ್ಲಿ ಪ್ರತಿಭಟಿಸಿದ ಪ್ರತಿಭಟನಾಕಾರರನ್ನು ಪೊಲಿಸರು ಬಂಧಿಸಿದ್ದರು.

    ಇದನ್ನೂ ಓದಿ: ಟಿಪ್ಪು ಜಯಂತಿ ವಿರೋಧಿಸಿ, ಮತ್ತೊಂದೆಡೆ ಬೆಂಬಲಿಸುವ ಬಿಜೆಪಿಯ ದ್ವಿಮುಖ ಧೋರಣೆ ಅನಾವರಣ  

  • ಟಿಪ್ಪು ಜಯಂತಿ ವಿರೋಧಿಸಿ KSRTC ಬಸ್‍ಗೆ ಕಲ್ಲು- ಶಾಸಕ ಅಪ್ಪಚ್ಚುರಂಜನ್ ಸೇರಿ ಹಲವರ ಬಂಧನ

    ಟಿಪ್ಪು ಜಯಂತಿ ವಿರೋಧಿಸಿ KSRTC ಬಸ್‍ಗೆ ಕಲ್ಲು- ಶಾಸಕ ಅಪ್ಪಚ್ಚುರಂಜನ್ ಸೇರಿ ಹಲವರ ಬಂಧನ

    ಮಡಿಕೇರಿ: ಟಿಪ್ಪು ಜಯಂತಿ ಆಚರಣೆಗೆ ಈಗಾಗಲೇ ಕೊಡಗಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಿಡಿಗೇಡಿಗಳು ಕೆಎಸ್‍ ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

    ಮಡಿಕೇರಿ ತಾಲೂಕಿನ ಗಾಳಿಬೀಡು ಸಮೀಪದ ಕಾಲೂರು ಕಟ್ಟೆಕಲ್ಲು ಬಳಿ ಈ ಘಟನೆ ನಡೆದಿದೆ. ಕೆಎ-09-ಎಫ್ -5205 ನಂಬರಿನ ಕೆಎಸ್‍ಆರ್ ಟಿಸಿ ಬಸ್‍ಗೆ ಇಬ್ಬರು ದುಷ್ಕರ್ಮಿಗಳು ಕಲ್ಲು ತೂರಿದ್ದು, ಬಸ್ಸಿನ ಮುಂಭಾಗದ 1 ಗ್ಲಾಸ್ ಮತ್ತು ಸೈಡ್‍ನಲ್ಲಿ 2 ಗ್ಲಾಸ್ ಪುಡಿಪುಡಿಯಾಗಿದೆ.

    ಕೋಟೆ ಸಭಾಂಗಣದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ಮುಂದಾದ ಶಾಸಕ ಅಪ್ಪಚ್ಚುರಂಜನ್, ಎಂಎಲ್‍ಸಿ ಸುನೀಲ್ ಸುಬ್ರಹ್ಮಣಿ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ರಸ್ತೆಯಲ್ಲಿ ಜೈ ಶ್ರೀರಾಮ್ ನೃತ್ಯ ಮಾಡಿ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

    ಎರಡು ಬಸ್, 3 ಬೊಲೆರೋ ವಾಹನಗಳಲ್ಲಿ ಹಿಂದೂ ಕಾರ್ಯಕರ್ತರ ಬಂಧನವಾಗಿದ್ದು, ಅರೆಸ್ಟ್ ಮಾಡಲು ಪೊಲೀಸರಿಗೆ ವಾಹನಗಳ ಕೊರತೆ ಎದುರಾಗಿದೆ. ಎರಡು ಬಸ್, 3 ಬೊಲೆರೋ ಗಾಡಿ ಬಿಟ್ಟು ಬೇರೆ ಗಾಡಿ ವ್ಯವಸ್ಥೆ ಇಲ್ಲವಾಗಿದೆ. ಹೀಗಾಗಿ ಕಾರ್ಯಕರ್ತರನ್ನ ಬಂಧನ ಮಾಡಲು ಸಾಧ್ಯವಾಗಿಲ್ಲ. ನೂರುಕ್ಕು ಹೆಚ್ಚು ಕಾರ್ಯಕರ್ತರು ರಸ್ತೆ ಮಧ್ಯೆ ಪ್ರತಿಭಟನೆ ಮುಂದುವರಿಸಿದ್ದು, ಹಿಂದೂಪರ ಸಂಘಟನೆಗಳ ಪ್ರತಿಭಟನೆ ತಡಿಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

    ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಕೊಡಗು ಬಂದ್‍ಗೆ ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ಕರೆ ನೀಡಿರೋ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದಲೇ ಮಂಜಿನ ನಗರಿ ಮಡಿಕೇರಿಯ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿವೆ. ಅಲ್ಲದೆ ಖಾಸಗಿ ಬಸ್‍ನವರು ಪ್ರಯಾಣಿಕರ ಹಿತದೃಷ್ಠಿಯಿಂದ ಬಸ್ ಸಂಚಾರ ಮಾಡುವುದಿಲ್ಲವೆಂದು ತಿಳಿಸಿದ್ದಾರೆ. ಇನ್ನು ಅಟೋ ಚಾಲಕರು, ಟ್ಯಾಕ್ಸಿ ಚಾಲಕರು ಬಂದ್‍ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಮಡಿಕೇರಿ ತಾಲೂಕಿನ ಕಡಗದಳು ಗ್ರಾಮದಲ್ಲಿ ಕಳೆದ ರಾತ್ರಿ ಮುಖ್ಯ ರಸ್ತೆಗಳಿಗೆ ಮರಗಳನ್ನು ಕಡಿದು ಹಾಕುವ ಮೂಲಕ ರಸ್ತೆ ಸಂಚಾರಕ್ಕೆ ಅಡ್ಡಿಯುಂಟು ಮಾಡಲಾಗಿತ್ತು. ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿ ಮರಗಳನ್ನು ತೆರವುಗೊಳಿಸಿದ್ದಾರೆ.