Tag: ಕುದ್ರೋಳಿ

  • ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಭಾಗಿ

    ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಭಾಗಿ

    – ದಸರಾ ಮೆರವಣಿಗೆಗೆ ಮೆರುಗು ನೀಡಿದ ವಿವಿಧ ಸ್ತಬ್ಧ ಚಿತ್ರಗಳು

    ಮಂಗಳೂರು: ಜಗತ್ ಪ್ರಸಿದ್ಧ ಮಂಗಳೂರು ದಸರಾ (Mangaluru Dasara) ಮೆರವಣಿಗೆ ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ (Kudroli Gokarnanatha Temple) ಸಂಜೆ 4 ಗಂಟೆಗೆ ಆರಂಭಗೊಂಡಿತು. ಸುಮಾರು 60ಕ್ಕೂ ಅಧಿಕ ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರುಗು ನೀಡಿತು. ದೇಶ – ವಿದೇಶಗಳಿಂದ ಬಂದ ಲಕ್ಷಾಂತರ ಮಂದಿ ಭಕ್ತರು ಈ ದಸರಾ ಮೆರವಣಿಗೆಗೆ ಸಾಕ್ಷಿಯಾದರು.

    ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕಳೆದ 10 ದಿನಗಳಿಂದ ಅದ್ಧೂರಿಯಾಗಿ ನಡೆದ ನವರಾತ್ರಿ ಮಹೋತ್ಸವಕ್ಕೆ ದಸರಾ ಮೆರವಣಿಗೆಯೊಂದಿಗೆ ತೆರೆ ಕಾಣಲಿದೆ. ಅಕ್ಟೋಬರ್ 3 ರಂದು ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ದೀಪ ಬೆಳಗಿಸುವುದರೊಂದಿಗೆ ಆರಂಭಗೊಂಡ ಈ ದಸರಾ ಮೆರವಣಿಗೆ ಇಂದು ಬೃಹತ್ ಮೆರವಣಿಗೆಯೊಂದಿಗೆ ಸಂಪನ್ನಗೊಳ್ಳಲಿದೆ. ಸಂಜೆ ಸುಮಾರು 4 ಗಂಟೆಗೆ ಕ್ಷೇತ್ರದಿಂದ ಹೊರಟ ಈ ಬೃಹತ್ ದಸರಾ ಮೆರವಣಿಗೆಯಲ್ಲಿ ವಿಘ್ನನಿವಾರಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯರ ಮೂರ್ತಿಗಳನ್ನು ಸ್ತಬ್ಧ ಚಿತ್ರದೊಂದಿಗೆ ಕೊಂಡೊಯ್ಯಲಾಯಿತು. ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬೃಹತ್ ದಸರಾ ಮೆರವಣಿಗೆ ನಡೆಯುತ್ತಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಇಷ್ಟು ಅಚ್ಚುಕಟ್ಟಾಗಿ ನಡೆಯುವ ಈ ದಸರಾವನ್ನು ಭಕ್ತರ ಸಹಕಾರದಿಂದ ಅದ್ಧೂರಿಯಾಗಿ ನಡೆಸಲಾಗುತ್ತದೆ. ಇದನ್ನೂ ಓದಿ: ಮಂಚಹಳ್ಳಿ, ಕೋಟೆಕೆರೆಯಲ್ಲಿ ಆನೆ ದಾಳಿಗೆ ರೈತರ ಟೊಮೆಟೊ, ತೆಂಗು ನಾಶ

    ಸುಮಾರು ಒಂದು ಸಾವಿರ ಆಕರ್ಷಕ ಕೇರಳ ಕೊಡೆಗಳು, ನೂರಕ್ಕೂ ಅಧಿಕ ಬ್ಯಾಂಡ್ ಸೆಟ್‌ಗಳು, ಸುಮಾರು 50 ಜಾನಪದ ಕುಣಿತಗಳ ತಂಡ, ಕೇರಳ ಚೆಂಡೆವಾದನ, ಕೊಂಬು ಕಹಳೆ, ದೇಶದ ಇತಿಹಾಸವನ್ನು ಬಿಂಬಿಸುವ ಸುಮಾರು 63 ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರಗು ನೀಡಿತು. ದಾರಿಯುದ್ದಕ್ಕೂ ಆಕರ್ಷಕ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದರು. ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಶ್ರೀ ಕ್ಷೇತ್ರದಿಂದ ಇಂದು ಸಂಜೆ ಹೊರಟ ಈ ಮೆರವಣಿಗೆ ನಗರದ ಸುಮಾರು 7 ಕಿಲೋ ಮೀಟರ್ ಸಾಗಿದ್ದು, ಸೋಮವಾರ ಮುಂಜಾನೆ 8 ಗಂಟೆಗೆ ಮತ್ತೆ ಶ್ರೀ ಕ್ಷೇತ್ರಕ್ಕೆ ತಲುಪಲಿದೆ. ಕ್ಷೇತ್ರದ ಪುಷ್ಕರಣಿಯಲ್ಲಿ ಗಣೇಶ, ಆದಿಶಕ್ತಿ, ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಯನ್ನು ವಿಸರ್ಜಿಸಲಾಗುವುದು. ಇದರೊಂದಿಗೆ ಈ ದಸರಾ ಮೆರವಣಿಗೆಗೆ ತೆರೆ ಬೀಳಲಿದೆ. ಇದನ್ನೂ ಓದಿ: ರಾಜ್ಯದ ಜನರ ಆಶೀರ್ವಾದ ಇರೋವರೆಗೂ ನನ್ನ ಯಾರೂ ಅಲ್ಲಾಡಿಸೋಕೆ ಆಗಲ್ಲ: ಸಿದ್ದರಾಮಯ್ಯ

  • ಮಂಗಳೂರು ದಸರಾ| ಅ.6ರಂದು ಹಾಫ್ ಮ್ಯಾರಥಾನ್

    ಮಂಗಳೂರು ದಸರಾ| ಅ.6ರಂದು ಹಾಫ್ ಮ್ಯಾರಥಾನ್

    ಮಂಗಳೂರು: ಕುದ್ರೋಳಿ (Kudroli) ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ (  Gokarnanatheshwara Temple) ನಡೆಯುತ್ತಿರುವ ಮಂಗಳೂರು (Mangaluru) ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೇಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅ.6ರಂದು ದಸರಾ ಹಾಫ್ ಮ್ಯಾರಥಾನ್ ಪಂದ್ಯಾಟ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.

    ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ವನ್ ಸಿಟಿ ವನ್ ಸ್ಪಿರಿಟ್’ ಧ್ಯೇಯದೊಂದಿಗೆ `ಎಲ್ಲಿ ಒಗ್ಗಟ್ಟಿದೆಯೂ ಅಲ್ಲಿ ಬಲವಿದೆ’ ಎಂಬ ವಾಕ್ಯದೊಂದಿಗೆ ಈ ಪಂದ್ಯಾಟ ನಡೆಯಲಿದೆ. 21 ಕಿ.ಮೀ., 10 ಕಿ.ಮೀ. ಹಾಗೂ 5 ಕಿ.ಮೀ.ಗಳ ಮೂರು ವಿಭಾಗಗಳಲ್ಲಿ ಹ್ಯಾಪ್ ಮ್ಯಾರಥಾನ್ ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ಭಯೋತ್ಪಾದನೆ ಆರೋಪದಿಂದ ಕುಟುಂಬ ರಕ್ಷಿಸಲು 2.5 ಕೋಟಿ ಲಂಚಕ್ಕೆ ಬೇಡಿಕೆ – NIA ಅಧಿಕಾರಿಯನ್ನೇ ಬಂಧಿಸಿದ ಸಿಬಿಐ

    ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಯಲಿರುವ ಹಾಫ್ ಮ್ಯಾರಥಾನ್‌ನಲ್ಲಿ ಪ್ರಥಮ ವಿಜೇತರಿಗೆ 25ಸಾವಿರ ರೂ. ನಗದು ಬಹುಮಾನ, ದ್ವಿತೀಯ ಬಹುಮಾನ 15ಸಾವಿರ ರೂ. ಆಗಿರುತ್ತದೆ. 21 ಕಿ.ಮೀ. ಮ್ಯಾರಥಾನ್ ಬೆಳಗ್ಗೆ 5 ಗಂಟೆಗೆ, 10 ಕಿ.ಮೀ. ಮ್ಯಾರಥಾನ್ 5.30ಕ್ಕೆ ಹಾಗೂ 5ಕಿ.ಮೀ. ನಡಿಗೆ 6.30ಕ್ಕೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ:  Chhattisgarh | ಭದ್ರತಾ ಪಡೆಗಳಿಂದ ಎನ್‌ಕೌಂಟರ್‌ – 14 ನಕ್ಸಲರು ಬಲಿ

    ಹಾಫ್ ಮ್ಯಾರಥಾನ್ (Half Marathon) ಕ್ಷೇತ್ರದಿಂದ ಹೊರಟು ನಾರಾಯಣ ಗುರು ಸರ್ಕಲ್ ಆಗಿ, ಚಿಲಿಂಬಿ, ಪೈ ಸೇಲ್ಸ್ ದೇರೇಬೈಲ್, ಕರ್ನಾಟಕ ಬ್ಯಾಂಕ್, ಭಾರತ್ ಮಾಲ್, ಬಿಜೈನಿಂದ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಮಲ್ಲಿಕಟ್ಟೆ ಭಾರತ್ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್, ಕ್ಲಾಕ್‌ಟವರ್ ಆಗಿ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಬೆನ್ನು ನೋವು

    ಮ್ಯಾರಥಾನ್‌ನಲ್ಲಿ ಭಾಗವಹಿಸುವವರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಸ್ವಯಂ ಸೇವಕರ ಜತೆಗೆ, ಫಿಸಿಯೋತೆರಪಿಸ್ಟ್‌ಗಳು, ಆಂಬುಲೆನ್ಸ್‌ಗಳನ್ನು ನಿಗದಿತ ಸ್ಥಳಗಳಲ್ಲಿ ಸ್ಥಿತಗೊಳಿಸಲಾಗಿರುತ್ತದೆ. ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ಲೋಕೇಷನ್ ದೃಷ್ಟಿಯಿಂದ ಮೈಕ್ರೋ ಚಿಪ್‌ಗಳನ್ನು ನೀಡಲಾಗುತ್ತದೆ. ಭಾಗವಹಿಸುವ ಎಲ್ಲರಿಗೂ ಪದಕ, ಪ್ರಮಾಣ ಪತ್ರ ಹಾಗೂ ಟೀ ಶರ್ಟ್‌ಗಳನ್ನು ಒದಗಿಸಲಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿಗೆ ತೀರ್ಮಾನ: ಸಿಎಂ

    ಈಗಾಗಲೇ ಸುಮಾರು 1200ರಷ್ಟು ಮಂದಿ ನೋಂದಣಿ ಮಾಡಿಕೊಂಡಿದ್ದು, ಸ್ಥಳದಲ್ಲೇ ನೋಂದಣಿಗೂ ಅವಕಾಶವಿರಲಿದೆ. ಸುಮಾರು 2000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಹಿತ ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸರ್ಕಾರಿ ನಿವಾಸ ತೊರೆದು ಆಪ್ ಸಂಸದನ ಮನೆಗೆ‌ ತೆರಳಿದ ಕೇಜ್ರಿವಾಲ್

    ಪತ್ರಿಕಾಗೋಷ್ಟಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ರಕ್ಷಿತ್, ಜಯರಾಂ ಶಾಂ ಸುಂದರ್, ರಾಜೇಶ್, ರವಿ, ಧನರಾಜ್, ಸುಖ್ ಪಾಲ್ ಪೊಳಲಿ, ರಕ್ಷಿತ್ ಉಪಸ್ಥಿತರಿದ್ದರು. ಇದನ್ನೂ ಓದಿ: ಮೂರು ಜಿಲ್ಲೆಗಳ ಕಾಡಾನೆ ಹಾವಳಿ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ್ ಖಂಡ್ರೆ

  • ಅದ್ಧೂರಿಯಾಗಿ ತೆರೆಕಂಡ ಮಂಗಳೂರು ದಸರಾ

    ಅದ್ಧೂರಿಯಾಗಿ ತೆರೆಕಂಡ ಮಂಗಳೂರು ದಸರಾ

    ಮಂಗಳೂರು: ಇಲ್ಲಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ (Kudroli Gokarnanath Temple) ಕಳೆದ 9 ದಿನಗಳಿಂದ ಅದ್ದೂರಿಯಾಗಿ ನಡೆದ ನವರಾತ್ರಿ ಮಹೋತ್ಸವಕ್ಕೆ ದಸರಾ ಮೆರವಣಿಗೆಯೊಂದಿಗೆ ತೆರೆ ಬಿದ್ದಿತು.

    ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಹೊರಟ ಬೃಹತ್ ದಸರಾ ಮೆರವಣಿಗೆಯಲ್ಲಿ ವಿಘ್ನನಿವಾರಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯರ ಮೂರ್ತಿಗಳನ್ನು ಸ್ತಬ್ಧಚಿತ್ರದೊಂದಿಗೆ (Tableau) ಕೊಂಡೊಯ್ಯಲಾಯಿತು. ಬೃಹತ್ ದಸರಾ ಮೆರವಣಿಗೆ ಕೇಂದ್ರದ ಮಾಜಿ ಸಚಿವ ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ (Janardhan Poojary) ನೇತೃತ್ವದಲ್ಲಿ ನಡೆಯಿತು. ಸರ್ಕಾರದ ಯಾವುದೇ ಅನುದಾನವಿಲ್ಲದೆ ಇಷ್ಟು ಅಚ್ಚುಕಟ್ಟಾಗಿ ನಡೆಯುವ ಈ ದಸರಾವನ್ನು ಎಲ್ಲರು ಕೊಂಡಾಡಿದರು.

    ಸುಮಾರು ಒಂದು ಸಾವಿರ ಆಕರ್ಷಕ ಕೇರಳ (Kerala) ಕೊಡೆಗಳು, ನೂರಕ್ಕೂ ಅಧಿಕ ಬ್ಯಾಂಡ್ ಸೆಟ್‍ಗಳು, ಸುಮಾರು 40 ಜಾನಪದ ಕುಣಿತಗಳ ತಂಡ, ಕೇರಳ ಚೆಂಡೆವಾದನ, ಕೊಂಬು ಕಹಳೆ ದೇಶದ ಇತಿಹಾಸವನ್ನು ಬಿಂಬಿಸುವ ಸುಮಾರು 60 ಕ್ಕೂ ಅಧಿಕ ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರುಗು ನೀಡಿತು. ದಾರಿಯುದ್ದಕ್ಕೂ ಆಕರ್ಷಕ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು. ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದರು. ಇದೊಂದು ಜಗತ್ ಪ್ರಸಿದ್ಧ ದಸರಾ ಮೆರವಣಿಗೆ ಎಂದು ನೋಡಿದ ಜನ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬನ್ನಿಮಂಟಪದಲ್ಲಿ ದಸರಾಗೆ ವರ್ಣರಂಜಿತ ತೆರೆ; See You In 2024

    ಶ್ರೀ ಕ್ಷೇತ್ರದಿಂದ ಸಂಜೆ ಹೊರಟ ಮೆರವಣಿಗೆ ನಗರದ ಸುಮಾರು 7 ಕಿಲೋ ಮೀಟರ್ ಸಾಗಿದ್ದು, ಬುಧವಾರ ಮುಂಜಾನೆ ಮತ್ತೆ ಶ್ರೀ ಕ್ಷೇತ್ರಕ್ಕೆ ತಲುಪಲಿದೆ. ಕ್ಷೇತ್ರದ ಪುಷ್ಕರಣಿಯಲ್ಲಿ ಗಣೇಶ, ಆದಿಶಕ್ತಿ, ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಯನ್ನು ವಿಸರ್ಜಿಸಲಾಗಿದೆ. ಇದರೊಂದಿಗೆ ಈ ದಸರಾ ಮೆರವಣಿಗೆಗೆ ತೆರೆಬಿದ್ದಿದೆ. ಈ ದಸರಾ ಇನ್ನಷ್ಟು ಪ್ರಸಿದ್ಧಿ ಹೊಂದಲಿ ಅನ್ನೋದು ಭಕ್ತರ ಆಶಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವದ ಸ್ತಬ್ದಚಿತ್ರಕ್ಕಿಲ್ಲ ಅವಕಾಶ

    ಮಂಗಳೂರು ದಸರಾ ಮೆರವಣಿಗೆಯಲ್ಲಿ ದೈವದ ಸ್ತಬ್ದಚಿತ್ರಕ್ಕಿಲ್ಲ ಅವಕಾಶ

    – ಡಿಜೆ ಸಂಸ್ಕೃತಿಗೂ ಕಡಿವಾಣ

    ಮಂಗಳೂರು: ಕಾಂತಾರ (Kantara) ಸಿನಿಮಾ ಕರಾವಳಿಯ ದೈವಗಳ ಪ್ರಸಿದ್ಧಿಯನ್ನು ವಿಶ್ವದಾದ್ಯಂತ ಪಸರಿಸಿತ್ತು. ಆದರೆ ಈ ಸಿನಿಮಾದ ಕಾರಣಕ್ಕೆ ಇದೇ ದೈವಗಳು ಕೆಲವರಿಗೆ ತಮಾಷೆಯ ವಸ್ತುವಾಗಿದೆ. ಬೀದಿ ಬೀದಿಯಲ್ಲೂ ದೈವಗಳ ವೇಷ ಹಾಕಿ ಅವಮಾನ ಮಾಡೋ ಪ್ರಕರಣಗಳೂ ನಡೆದಿದೆ. ಹೀಗಾಗಿಯೇ ಈ ಬಾರಿಯ ಮಂಗಳೂರು ದಸರಾದಲ್ಲಿ (Mangaluru Dasara) ದೈವಗಳ ಸ್ತಬ್ಧ ಚಿತ್ರಗಳಿಗೆ ಬ್ರೇಕ್ ಹಾಕಲಾಗಿದೆ. ಡಿಜೆ ಸಂಸ್ಕೃತಿಗೂ ಕಡಿವಾಣ ಹಾಕುವ ಮೂಲಕ ವಿಭಿನ್ನ ದಸರಾ ಆಚರಣೆಗೆ ಮಂಗಳೂರಿನ ಕುದ್ರೋಳಿ ದೇವಸ್ಥಾನದ ಆಡಳಿತ ಹೊಸ ಹೆಜ್ಜೆ ಇಟ್ಟಿದೆ.

    ಹೌದು. ವಿಶ್ವವಿಖ್ಯಾತ ಮಂಗಳೂರು ದಸರಾಕ್ಕೆ ಕುದ್ರೋಳಿ (Kudroli Temple) ಶ್ರೀಕ್ಷೇತ್ರ ಸಜ್ಜಾಗುತ್ತಿದೆ. ಈ ಬಾರಿಯ ದಸರಾ ಮೆರವಣಿಗೆ ಅಕ್ಟೋಬರ್ 25ರಂದು ನಡೆಯಲಿದ್ದು, ತುಳುನಾಡಿನ ದೈವಗಳ ಸ್ತಬ್ಧಚಿತ್ರಕ್ಕೆ ಅವಕಾಶವಿಲ್ಲ ಎಂದು ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಆಡಳಿತ ಖಡಕ್ ನಿರ್ಧಾರ ತಳೆದಿದೆ. ತುಳುನಾಡಿನಲ್ಲಿ ದೈವಗಳ ಬಗ್ಗೆ ಅಪಾರ ನಂಬಿಕೆಯಿದೆ. ಭಕ್ತರ ಈ ನಂಬಿಕೆಗೆ ಘಾಸಿಯಾಗುವಂತಹ ಕಾರ್ಯ ಆಗಬಾರದೆಂದು ದೈವಗಳನ್ನು ಅವಹೇಳನ ಮಾಡುವಂತಹ ಟ್ಯಾಬ್ಲೊಗಳಿಗೆ (Tableau) ಅವಕಾಶ ನೀಡುತ್ತಿಲ್ಲ. ಆದ್ದರಿಂದ ಇಂತಹ ಟ್ಯಾಬ್ಲೊಗಳು ಬಂದಲ್ಲಿ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಟ ಪಡಿಸಲಾಗಿದೆ. ಯಾವುದೇ ಜಾತಿ, ಧರ್ಮ, ಮತದವರಿಗೆ ನಿಂದನೆ, ಅವಮಾನ ಮಾಡುವಂತಹ ಟ್ಯಾಬ್ಲೊಗಳಿಗೂ ಅವಕಾಶ ಕೊಡುವುದಿಲ್ಲ ಎಂದು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ನವರಾತ್ರಿ 2023: ಬ್ರಹ್ಮಚಾರಿಣಿ ದೇವಿಯ ಹಿನ್ನೆಲೆ ಏನು?

    ಈ ಬಾರಿಯ ಮಂಗಳೂರು ದಸರಾದ ಮೆರವಣಿಗೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಡಿಜೆಗೆ ನಿಷೇಧ ಹಾಕಲಾಗಿದ್ದು, ಭಜನಾ ತಂಡಗಳ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಲಾಗಿದೆ. ನೂರಾರು ಟ್ಯಾಬ್ಲೋಗಳು ಭಾಗವಹಿಸೋ ಹಿನ್ನೆಲೆಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಸಾಮರಸ್ಯದ ದಸರಾಕ್ಕೆ ಈ ಬಾರಿ ಮಂಗಳೂರು ದಸರಾ ಸಾಕ್ಷಿಯಾಗಲಿದೆ.ಎಲ್ಲಾ ಜಾತಿ ಮತ, ಧರ್ಮದವರು ಈ ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರಂತೆ ಕ್ರೈಸ್ತ ಧರ್ಮದವರು ಸೇರಿದಂತೆ ಬೇರೆ ಬೇರೆ ಧರ್ಮದವರು ಅವರವರ ಟ್ಯಾಬ್ಲೊಗಳನ್ನು ಮೆರವಣಿಗೆಯಲ್ಲಿ ತರಲಿದ್ದಾರೆ. ಮಂಗಳೂರು ದಸರಾದಲ್ಲಿ ಪ್ರತೀ ವರ್ಷ ಒಂದೊಂದು ವಿಶೇಷವಿರುತ್ತದೆ. ಈ ಬಾರಿ ಅಕ್ಟೋಬರ್ 15ರಂದು ರಾತ್ರಿ 8ಗಂಟೆಗೆ ಶ್ರಿಕ್ಷೇತ್ರದಿಂದ ಮಂಗಳೂರು ದಸರಾ ಮ್ಯಾರಥಾನ್ ನಡೆಯಲಿದೆ. ಜ್ಯೂಯೀಸ್ ಫಿಟ್ ನೆಸ್ ಕ್ಲಬ್ ಹಾಗೂ ಶ್ರೀಕ್ಷೇತ್ರ ಜೊತೆಯಾಗಿ ಸೇರಿ ಈ ಮ್ಯಾರಥಾನ್ ನಡೆಸಲಿದೆ. ಸಾವಿರಾರು ಮಂದಿ ಈ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.

    ಒಟ್ಟಾರೆ ದೈವಗಳ ಅವಹೇಳನ ವಿರುದ್ಧ ಈ ಬಾರಿಯ ಮಂಗಳೂರು ದಸರಾ ಹೊಸ ಸಂದೇಶ ಸಾರಿದೆ. ದೇವಸ್ಥಾನದ ಆಡಳಿತ ಮಂಡಳಿಯ ಈ ನಡೆ ಇದೀಗ ಭಾರೀ ಪ್ರಸಂಶೆಗೆ ಕಾರಣವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುದ್ರೋಳಿಯಲ್ಲಿ ದೀಪಾವಳಿ ಸಂಭ್ರಮ- ಎಲ್ಲರನ್ನೂ ಆಕರ್ಷಿಸಿದ ಗೂಡುದೀಪದ ಕಾರ್ಯಕ್ರಮ

    ಕುದ್ರೋಳಿಯಲ್ಲಿ ದೀಪಾವಳಿ ಸಂಭ್ರಮ- ಎಲ್ಲರನ್ನೂ ಆಕರ್ಷಿಸಿದ ಗೂಡುದೀಪದ ಕಾರ್ಯಕ್ರಮ

    ಮಂಗಳೂರು: ದೀಪಾವಳಿ (Deepavali) ಬಂತೆಂದರೆ ತುಳುನಾಡಿನ ಮನೆಮುಂದೆಲ್ಲಾ ಬೆಳಗುತ್ತಿದ್ದ ಗೂಡುದೀಪಗಳು(ಆಕಾಶಬುಟ್ಟಿ) ಇಂದು ಆ ದೇವಸ್ಥಾನದ ಮುಂದೆಯೂ ಸಹಸ್ರಾರು ಸಂಖ್ಯೆಯಲ್ಲಿ ಕಂಗೊಳಿಸುತ್ತಿತ್ತು. ಒಂದನ್ನೊಂದು ಮೀರಿಸುವ ಆ ಗೂಡುದೀಪಗಳು ಜನರನ್ನು ತನ್ನತ್ತ ಸೆಳೆಯುತ್ತಿತ್ತು. ಗೂಡುದೀಪಗಳ ತಯಾರಕರಂತೂ ನನ್ನ ಗೂಡುದೀಪ ಚೆನ್ನಾಗಿದೆ ಎಂದು ಮೀಸೆ ತಿರುಗಿಸುತ್ತಿದ್ದರು.

    ವಾವ್.. ಒಂದಕ್ಕಿಂತ ಒಂದು ಚೆಂದ. ಈ ರೀತಿ ಸುಂದರವಾಗಿ ಕಂಗೊಳಿಸುತ್ತಿರುವ ಇಂತಹ ಗೂಡುದೀಪಗಳು ಹಿಂದಿನ ಕಾಲದಲ್ಲಿ ತುಳುನಾಡಿನ ಪ್ರತೀ ಮನೆ ಮುಂದೆಯೂ ಇತ್ತು. ಮನೆ ಮಂದಿಯೆಲ್ಲಾ ಸೇರಿ ಇಂತಹ ಸುಂದರವಾದ ಗೂಡುದೀಪಗಳನ್ನು ತಯಾರಿಸುತ್ತಿದ್ದರು. ದೀಪಗಳ ಜೊತೆಗೆ ಈ ಗೂಡುದೀಪವೂ ಮೆರುಗು ನೀಡುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆಲ್ಲ ಯಾರಿಗೂ ಪುರುಸೋತ್ತಿಲ್ಲದೆ, ಕೆಲವರು ಅಂಗಡಿಗಳಲ್ಲಿ ಸಿಗುವ ರೆಡಿಮೆಡ್ ಗೂಡುದೀಪಗಳನ್ನು ತಂದರೆ, ಇನ್ನು ಕೆಲವರು ಗೂಡುದೀಪಗಳನ್ನು ಹಾಕುವ ಸಂಪ್ರದಾಯವನ್ನೇ ಮರೆತಿದ್ದಾರೆ. ಹೀಗಾಗಿ ಈ ಗೂಡುದೀಪಗಳು ಇನ್ನೂ ಉಳಿಯಬೇಕು ಜೊತೆಗೆ ಯುವಕರಲ್ಲೂ ಈ ಗೂಡುದೀಪ (Gududeepa) ಗಳ ಬಗ್ಗೆ ಆಸಕ್ತಿ ಬರಬೇಕು ಅನ್ನುವ ನಿಟ್ಟಿನಲ್ಲಿ ಮಂಗಳೂರಿನ ಸ್ಥಳೀಯ ಸುದ್ದಿವಾಹಿನಿ ಕಳೆದ 20 ವರ್ಷಗಳಿಂದ ಗೂಡುದೀಪ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದೆ.

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವಠಾರದಲ್ಲಿ ಕ್ಷೇತ್ರದ ಸಹಯೋಗದೊಂದಿಗೆ ಈ ಗೂಡುದೀಪ ಸ್ಫರ್ಧೆಯನ್ನು ಆಯೋಜಿಸಲಾಗುತ್ತದೆ. ಈ ಸ್ಪರ್ಧೆ 3 ವಿಭಾಗಳಾದ ಸಾಂಪ್ರದಾಯಿಕ, ಆಧುನಿಕ ಹಾಗೂ ಮೋಡೆಲ್ ವಿಭಾಗದಲ್ಲಿ ನಡೆಯುತ್ತಿದ್ದು ಎಲ್ಲರಿಗೂ ಮುಕ್ತ ಅವಕಾಶ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನಿಂದ ಸ್ಪರ್ಧಾಳುಗಳು ತಮ್ಮ ಗೂಡು ದೀಪಗಳೊಂದಿಗೆ ಬಂದು ಇಲ್ಲಿ ಪ್ರದರ್ಶನಕ್ಕಿಡುತ್ತಾರೆ. ಇಲ್ಲಿರುವ ಪ್ರತಿಯೊಂದು ಗೂಡುದೀಪವೂ ವಿಭಿನ್ನವಾಗಿದೆ. ದಿನ ಬಳಕೆಯ ವಸ್ತುಗಳು ಕಲಾಕಾರನ ಕೈಯಲ್ಲಿ ಜೀವ ಪಡೆದಿದೆ. ಕಾಂತಾರ ಚಿತ್ರದ ಶೈಲಿಯ ಗೂಡುದೀಪ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಇದನ್ನೂ ಓದಿ: ಬ್ರಿಟನ್ ಪ್ರಧಾನಿಯಾದ ಗಂಟೆಗಳೊಳಗೆ ಸುನಾಕ್ ಹೊಸ ಕ್ಯಾಬಿನೆಟ್‌ಗೆ ಸಿದ್ಧತೆ

    ಈ ಗೂಡದೀಪ ಸ್ಫರ್ಧೆಯನ್ನು ನೋಡಿದವರಂತು ನಾವು ಮುಂದಿನ ದಿನಗಳಲ್ಲಿ ಗೂಡುದೀಪಗಳನ್ನು ತಯಾರಿಸಬೇಕೆಂದರು. ಈ ಸ್ಫರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರೆ, ಮೂರು ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ಚಿನ್ನದ ಪದಕ ನೀಡಲಾಯಿತು. ಒಟ್ಟಿನಲ್ಲಿ ಅವನತಿಯತ್ತ ಸಾಗುತ್ತಿರುವ ಈ ಗೂಡುದೀಪಗಳನ್ನು ಈ ರೀತಿಯ ಸ್ಪರ್ಧೆ ಮಾಡಿಯಾದರೂ ಉಳಿಸಿಕೊಳ್ಳಬೇಕೆನ್ನುವ ಸಂಘಟಕರ ಪ್ರಯತ್ನಕ್ಕೆ ಎಲ್ಲರೂ ಸೈ ಎಂದರು.

    Live Tv
    [brid partner=56869869 player=32851 video=960834 autoplay=true]

  • ಶ್ರೀಕ್ಷೇತ್ರ ಕುದ್ರೋಳಿಗೆ ನಟ ಕಿಚ್ಚ ಸುದೀಪ್ ಭೇಟಿ

    ಶ್ರೀಕ್ಷೇತ್ರ ಕುದ್ರೋಳಿಗೆ ನಟ ಕಿಚ್ಚ ಸುದೀಪ್ ಭೇಟಿ

    ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ನಟ ಕಿಚ್ಚ ಸುದೀಪ್ ಅವರು ಗುರುವಾರ ಸಂಜೆ ಶ್ರೀಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

    ಕರಾವಳಿಯ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಕುದ್ರೋಳಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಳಿಕ ದೇವರ ಪ್ರಸಾದ ಸ್ವೀಕರಿಸಿದರು. ಈ ವೇಳೆ ಸುದೀಪ್ ಗೆ ದೇವಸ್ಥಾನದ ಆಡಳಿತ ಸಮಿತಿ ಶಾಲು ಹೊದಿಸಿ ಗೌರವಿಸಿದೆ. ಇದನ್ನೂ ಓದಿ: ಫೆಬ್ರವರಿ 24ಕ್ಕೆ ತೆರೆ ಮೇಲೆ ವಿಕ್ರಾಂತ್ ರೋಣ

    ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್ ಸಾಯಿರಾಂ, ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ನಟನನ್ನು ಆದರದಿಂದ ಬರಮಾಡಿಕೊಂಡರು. ಸುದೀಪ್ ಅವರಿಗೆ ನಿರ್ದೇಶಕ ರಾಜೇಶ್ ಭಟ್ ಸಾಥ್ ನೀಡಿದರು. ಕಿಚ್ಚ ನಟನೆಯ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ 2022ರ ಫೆಬ್ರವರಿಯಲ್ಲಿ ಬಿಡುಗಡೆಗೊಳ್ಳಲಿದೆ. ಇದನ್ನೂ ಓದಿ: ಕಿಚ್ಚ ಸುದೀಪ್‍ಗೆ ದೇವಾಲಯ ಕಟ್ಟಿಸುತ್ತಿದ್ದಾರೆ ಅಭಿಮಾನಿಗಳು

    https://www.youtube.com/watch?v=V7Y70iCLr98

  • ಕುದ್ರೋಳಿಯಲ್ಲಿ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬೋ ಕಲಾವಿದರು ಯಾರು ಗೊತ್ತಾ?

    ಕುದ್ರೋಳಿಯಲ್ಲಿ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬೋ ಕಲಾವಿದರು ಯಾರು ಗೊತ್ತಾ?

    ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಸಂಭ್ರಮಕ್ಕೆ ಮೆರುಗು ನೀಡುವ ಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಅನ್ನುತ್ತಾರೆ.

    ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲೂ ಕಾಣಿಸಿಕೊಳ್ಳುವುದಿಲ್ಲ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು. ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ನಾಲ್ಕು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ.

    ದೇವತಾ ಸ್ವರೂಪವಾದ ಈ ಮೂರ್ತಿಗಳನ್ನು ರಚಿಸುವಾಗ ಈ ಎಲ್ಲಾ ಕಲಾವಿದರು ಶ್ರದ್ಧೆ, ನಿಷ್ಠೆ, ಭಕ್ತಿಯ ಜೊತೆ ವೃತಾಚರಣೆ , ಜಪವನ್ನು ಮಾಡಿ ಮೂರ್ತಿಗಳನ್ನು ರಚಿಸುತ್ತಾರೆ. ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ಮೂರ್ತಿಗಳ ರಚನೆ ಮಾಡುತ್ತಾರೆ. ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಮೂರ್ತಿಗಳನ್ನು ರಚಿಸುತ್ತಾರೆ. ಇಂತಹ ಅದ್ಭುತ ಕಲಾವಿದರಿಗೊಂದು ಸೆಲ್ಯೂಟ್.

  • ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರಿಗೆ ಕುದ್ರೋಳಿ ಕ್ಷೇತ್ರದಿಂದ ಸಹಾಯ

    ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರಿಗೆ ಕುದ್ರೋಳಿ ಕ್ಷೇತ್ರದಿಂದ ಸಹಾಯ

    ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ಬಡವರು, ನಿರ್ಗತಿಕರಿಗೆ ರಾಜ್ಯದ ಪ್ರಮುಖ ಪುಣ್ಯ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಿತ್ಯವೂ ಹಸಿವು ನೀಗಿಸುವ ಮಹತ್ವ ಕಾರ್ಯ ನಡೆಯುತ್ತಿದೆ.

    ಕುದ್ರೋಳಿ ಕ್ಷೇತ್ರದ ಹರಿಕಾರ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಸಲಹೆ ಹಾಗೂ ಮಾರ್ಗದರ್ಶನದಂತೆ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದೆ. ಆರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುವ ಉದ್ದೇಶ ಹೊಂದಿತ್ತಾದರೂ ನಂತರ ಅದು ವಿಸ್ತರಣೆಗೊಂಡು ಇದುವರೆಗೆ ಒಟ್ಟ 250 ಕ್ವಿಂಟಾಲ್ ಅಕ್ಕಿ ವಿತರಿಸಲಾಗಿದೆ. ಅಷ್ಟೇ ಅಲ್ಲದೆ ನಿತ್ಯವೂ ದೇವಸ್ಥಾನದ ವತಿಯಿಂದ 1,000 ಸಾವಿರ ಮಂದಿಗೆ ಅನ್ನದಾನ ನೀಡಲಾಗುತ್ತಿದೆ.

    ಕುದ್ರೋಳಿ ಕ್ಷೇತ್ರದ ವತಿಯಿಂದ ನೀಡಲಾಗುತ್ತಿರುವ ನೆರವಿಗೆ ಭಕ್ತರು ಕೊಡುಗೈ ದಾನಿಗಳು ನೆರವು ನೀಡುತ್ತಿದ್ದಾರೆ. ದಿನದಿಂದ ದಿನಕ್ಕೆ ಕ್ಷೇತ್ರದ ವತಿಯಿಂದ ನೀಡಲಾಗುತ್ತಿರುವ ಅಕ್ಕಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಕಷ್ಟದಲ್ಲಿರುವ ಎಲ್ಲರಿಗೂ ಅಕ್ಕಿ ವಿತರಣೆ ನಡೆಯಲಿದೆ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ತಿಳಿಸಿದ್ದಾರೆ. ಮುಜರಾಯಿ ಇಲಾಖೆಗೆ ಸೇರದಿರುವ ಒಂದು ದೇವಸ್ಥಾನ ಈ ರೀತಿಯ ಪುಣ್ಯದ ಕೆಲಸ ಮಾಡುತ್ತಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

  • ಮೈಸೂರಿನಂತೆ ಮಂಗ್ಳೂರು, ಗದಗದಲ್ಲೂ ನಾಡಹಬ್ಬದ ಸಂಭ್ರಮ

    ಮೈಸೂರಿನಂತೆ ಮಂಗ್ಳೂರು, ಗದಗದಲ್ಲೂ ನಾಡಹಬ್ಬದ ಸಂಭ್ರಮ

    ಮಂಗಳೂರು/ಗದಗ: ಮೈಸೂರು ದಸರಾ ಮಾದರಿಯಲ್ಲೇ ಮಂಗಳೂರು ದಸರಾ ಖ್ಯಾತಿಯೂ ಏರುತ್ತಿದೆ. ಅಲ್ಲದೇ ಗದಗದ ಲಕ್ಷ್ಮೇಶ್ವರದಲ್ಲಿ 45 ವರ್ಷಗಳ ನಂತರ ಅದ್ಧೂರಿಯಾಗಿ 9 ದಿನಗಳವರೆಗೆ ದಸರಾ ದರ್ಬಾರ್ ನಡೆಯಲಿದ್ದು, ಲಕ್ಷ್ಮೇಶ್ವರ ಪಟ್ಟಣ ನವ ವಧುವಿನಂತೆ ಶೃಂಗಾರಗೊಂಡಿದೆ.

    ಹಿಂದೆ ದಸರಾ ಅಂದ್ರೆ ಮೈಸೂರು ಅನ್ನುವುದಷ್ಟೇ ರಾಜ್ಯದ ಜನರಿಗಿತ್ತು. ಆದ್ರೀಗ ಮಂಗಳೂರು ದಸರಾ ಕೂಡ ದೇಶದಲ್ಲಿ ಗುರುತಿಸುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಉತ್ಸವ ಕಳೆಗಟ್ಟಿದ್ದು, 10 ದಿನಗಳ ವೈಭವದ ಉತ್ಸವಕ್ಕೆ ಇಂದು ಅದ್ಧೂರಿ ಚಾಲನೆ ಸಿಗಲಿದೆ. ಅಕ್ಟೋಬರ್ 14ರಂದು ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

    ಈಗಾಗಲೇ ಇಡೀ ಮಂಗಳೂರು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ವಿಜಯದಶಮಿಯಂದು ಸುದೀರ್ಘ ದಸರಾ ಮೆರವಣಿಗೆ ನಡೆಯಲಿದೆ. 75ಕ್ಕೂ ಹೆಚ್ಚು ಸ್ತಬ್ಧಚಿತ್ರಗಳೊಂದಿಗೆ 9 ಕಿಮೀ ಉದ್ದಕ್ಕೆ 16 ಗಂಟೆಗಳ ಕಾಲ ಮೆರವಣಿಗೆ ನಡೆಯೋದು ಇಲ್ಲಿನ ವಿಶೇಷ ಅಂತ ಕುದ್ರೋಳಿ ಕ್ಷೇತ್ರದ ಟ್ರಸ್ಟಿ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.

    ಇತ್ತ ಗದಗದ ಲಕ್ಷ್ಮೇಶ್ವರದಲ್ಲಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ದಸರಾ ಧರ್ಮಸಮ್ಮೇಳನದ ದರ್ಬಾರ್ ಆರಂಭವಾಗಿದೆ. ಮಂಗಳವಾರ ಶ್ರೀಗಳು ಪುರಪ್ರವೇಶಿಸಿದ್ದು, 1008 ಮುತೈದೆಯರಿಂದ ಕುಂಭಮೇಳ ಗಜರಾಜನ ಹಾಗೂ ಕುದುರೆ ಗಾಂಭಿರ್ಯ ನಡಿಗೆ, ಮಹಿಳೆಯ ಡೊಳ್ಳು ಕುಣಿತ, ಜಗ್ಗಲಗಿ, ಕರಡಿ ಮಜಲು, ವೀರಗಾಸೆ ಕುಣಿತ ಹೀಗೆ ಅನೇಕ ಜಾನಪದ ಕಲಾತಂಡಗಳು ಮೆರವಣಿಗೆಗೆ ನಡೀತು.

    9 ದಿನಗಳವರೆಗೆ ಪ್ರತಿದಿನ ಬೆಳಗ್ಗೆ ಜಗದ್ಗರುಗಳ ಇಷ್ಟ ಲಿಂಗಪೂಜೆ, ದಸರಾ ಧರ್ಮ ಸಮ್ಮೆಳನ, ಸಂಗೀತ, ಕವಿಗೊಷ್ಠಿ, ಉಪನ್ಯಾಸ ಹೀಗೆ ಅನೇಕ ಕಾರ್ಯಕ್ರಮಗಳು ಜರುಗಲಿವೆ. ಜಗದ್ಗುರುಗಳ ಪಲ್ಲಕ್ಕಿ ಉತ್ಸವ ಮೂಲಕ ದಸರಾ ಸಮ್ಮೇಳನಕ್ಕೆ ಚಾಲನೆ ನೀಡಲಾಯ್ತು ಅಂತ ಮುಕ್ತಿಮಂದಿರದ ವಿಮಲ ರೇಣುಕ ಶಿವಾಚಾರ್ಯಸ್ವಾಮೀಜಿ ಹೇಳಿದ್ದಾರೆ.

    ಒಟ್ಟಿನಲ್ಲಿ ಕಡಲತಡಿ ಮಂಗಳೂರು, ಗದಗದ ಲಕ್ಷ್ಮೇಶ್ವರ 10 ದಿನಗಳ ಕಾಲ ದಸರಾ ಸಂಭ್ರಮದಲ್ಲಿ ಮಿಂದೇಳಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇಶದಾದ್ಯಂತ ದೀಪಾವಳಿ ಸಂಭ್ರಮ- ಕುದ್ರೋಳಿಯಲ್ಲಿ ಗೂಡು ದೀಪಗಳ ಚಿತ್ತಾರ

    ದೇಶದಾದ್ಯಂತ ದೀಪಾವಳಿ ಸಂಭ್ರಮ- ಕುದ್ರೋಳಿಯಲ್ಲಿ ಗೂಡು ದೀಪಗಳ ಚಿತ್ತಾರ

    ಮಂಗಳೂರು: ದೀಪಾವಳಿ ಬಂದರೆ ಸಾಕು ಕರಾವಳಿಯ ಮನೆ ಮನೆಗಳಲ್ಲಿ ಗೂಡುದೀಪಗಳು ಬೆಳಗುತ್ತಿದ್ದವು. ಆದರೆ ಈ ಬಾರಿ ಅಲ್ಲಿನ ಕುದ್ರೋಳಿಯ ಶ್ರೀ ಗೋಕರ್ಣನಾಥ ದೇವಸ್ಥಾನದ ಮುಂಭಾಗ ಸಹಸ್ರಾರು ಸಂಖ್ಯೆಯಲ್ಲಿ ಗೂಡುದೀಪಗಳು ಕಂಗೊಳಿಸುತ್ತಿವೆ. ಒಂದನ್ನೊಂದು ಮೀರಿಸುವ ಈ ಗೂಡುದೀಪಗಳು ಜನರನ್ನು ತನ್ನತ್ತ ಸೆಳೆಯುತ್ತಿವೆ.

    ದೀಪಗಳಿಂದಾಗಿರೋ ದೋಣಿ, ನವಿಲಿನಾಕೃತಿಯೊಳಗೆ ಬೆಳಕು, ಗೂಡುದೀಪದಲ್ಲಿ ಯಕ್ಷಗಾನ ಕಲಾವಿದರ ಚಿತ್ತಾರ, ಗೂಡುದೀಪಗಳ ಬೆಳಕಲ್ಲಿ ರಾಮಮಂದಿರ ಪರಿಕಲ್ಪನೆ, ಕಡಲೇಕಾಯಿ ಬೀಜದಲ್ಲಿ ಗೂಡುದೀಪ- ಹೀಗೆ ವಿವಿಧ ರೀತಿಯಲ್ಲಿ ಒಂದಕ್ಕಿಂತಾ ಒಂದು ಅದ್ಭುತವಾಗಿ ಕಂಗೊಳಿಸುತ್ತಿವೆ.

    ಸ್ಥಳೀಯ ವಾಹಿನಿ ಸುಮಾರು 18 ವರ್ಷಗಳಿಂದ ದೀಪಾವಳಿ ಹಬ್ಬದಂದು ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದೊಂದಿಗೆ ಗೂಡುದೀಪ ಸ್ಪರ್ಧೆಯನ್ನು ಆಯೋಜಿಸಿಕೊಂಡು ಬರುತ್ತಿದೆ.

    ದೀಪಾವಳಿ ಹಬ್ಬ ಬಂತು ಎಂದರೆ ತುಳುನಾಡಿನ ಪ್ರತಿ ಮನೆಗಳ ಮುಂದೆ ಗೂಡು ದೀಪಗಳು ಚಿತ್ತಾರಗೊಳ್ಳುತ್ತವೆ. ಯುವ ಪೀಳಿಗೆಯಲ್ಲಿ ಗೂಡುದೀಪಗಳನ್ನು ಹಾಕುವ ಸಂಪ್ರದಾಯ ರೂಢಿಸಬೇಕೆಂಬ ನಿಟ್ಟಿನಲ್ಲಿ ವಾಹಿನಿಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗುತ್ತೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುತ್ತದೆ.

    ಈ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನಿಂದ ಸಾವಿರಾರು ಸ್ಪರ್ಧಾಳುಗಳು ಭಾಗಿಯಾಗಿ ತಮ್ಮ ಕಲೆಯನ್ನು ಪ್ರದರ್ಶಿಸುತ್ತಾರೆ. ಈ ಗೂಡುದೀಪಗಳನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದಲೂ ಪ್ರವಾಸಿಗರು ಆಗಮಿಸುತ್ತಾರೆ.