Tag: ಕುಮಟಾ

  • ಕುಮಟಾದಲ್ಲಿ ಭುಗಿಲೆದ್ದ ಹಿಂಸಾಚಾರ – ಐಜಿ ನಿಂಬಾಳ್ಕರ್ ಕಾರ್ ಗೆ ಬೆಂಕಿ, ಲಾಠಿಚಾರ್ಜ್

    ಕುಮಟಾದಲ್ಲಿ ಭುಗಿಲೆದ್ದ ಹಿಂಸಾಚಾರ – ಐಜಿ ನಿಂಬಾಳ್ಕರ್ ಕಾರ್ ಗೆ ಬೆಂಕಿ, ಲಾಠಿಚಾರ್ಜ್

    ಕಾರವಾರ: ಹೊನ್ನಾವರದ ಪರೇಶ್ ಮೇಸ್ತ ಸಾವಿನ ತನಿಖೆಗೆ ಆಗ್ರಹಿಸಿ ಕಾರವಾರದಲ್ಲಿ ಕರೆ ನೀಡಿರುವ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಅದರಲ್ಲೂ ಕುಮಟಾ ಪಟ್ಟಣ ಹೊತ್ತಿ ಉರಿಯುತ್ತಿದೆ.

    ಕಾರವಾರ ನಗರದಲ್ಲಿ ಬಂದ್ ಮಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟಯರ್ ಗೆ ಬೆಂಕಿ ಹಾಕಿ ವಾಹನಗಳು ಸಂಚರಿಸದಂತೆ ತಡೆದು ಪ್ರತಿಭಟನೆ ನೆಡೆಸಲಾಯ್ತು. ಕುಮಟಾದಲ್ಲಿ ಕೂಡ ಬಂದ್ ಮಾಡಲಾಗಿದ್ದು ಕುಮಟಾದ ಮಾಸ್ತಿಕಟ್ಟೆ ರಸ್ತೆ ಬಳಿ ನಿಂತಿದ್ದ ಪಶ್ಚಿಮ ವಲಯ ಐ.ಜಿ.ಪಿ ಹೇಮಂತ್ ನಿಂಬಾಳ್ಕರ್ ಅವರ ವಾಹನಕ್ಕೆ ಉದ್ರಿಕ್ತ ಗುಂಪು ಬೆಂಕಿ ಹಚ್ಚಿ ಕಲ್ಲು ತೂರಾಟ ನೆಡೆಸಿದೆ. ಈ ಸಂದರ್ಭದಲ್ಲಿ ಪೇದೆಯೊಬ್ಬರಿಗೆ ತೀವ್ರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

    ಉದ್ರಿಕ್ತ ಗುಂಪನ್ನು ಚದುರಿಸಲು ಅಶೃವಾಯು ಸಿಡಿಸಿ ಲಘು ಲಾಟಿ ಚಾರ್ಜ್ ಮಾಡಲಾಯ್ತು. ನಗರಾದ್ಯಾಂತ 144 ಸೆಕ್ಷನ್ ಜಾರಿ ಮಾಡಿದ್ದು 2000 ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಐದು ದಿನದ ಹಿಂದೆ ಎರಡು ಕೋಮುಗಳ ನಡುವೆ ನಡೆದ ಗಲಾಟೆ ವೇಳೆ ಪರೇಶ್ ಮೇಸ್ತಾ(19) ಎಂಬ ಯುವಕ ನಾಪತ್ತೆಯಾಗಿದ್ದ. ನಂತರ ಹೊನ್ನಾವರ ಕೆರೆಯಲ್ಲಿ ಯುವಕ ಶವವಾಗಿ ಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಪರೇಶ್ ಸಾವಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಇಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಬಂದ್‍ಗೆ ಕರೆ ನೀಡಿದ್ದವು.

  • ದುಬೈ ಕೆಲಸಕ್ಕೆ ಗುಡ್‍ಬೈ- ಬುದ್ಧಿಮಾಂದ್ಯ ಮಕ್ಕಳ ಪಾಲಿನ ತ್ರಿವಿಧ ದಾಸೋಹಿ ಕಾರವಾರದ ಸಿರಿಲ್

    ದುಬೈ ಕೆಲಸಕ್ಕೆ ಗುಡ್‍ಬೈ- ಬುದ್ಧಿಮಾಂದ್ಯ ಮಕ್ಕಳ ಪಾಲಿನ ತ್ರಿವಿಧ ದಾಸೋಹಿ ಕಾರವಾರದ ಸಿರಿಲ್

    ಕಾರವಾರ: ಸಮಾಜ ಸೇವೆಗಾಗಿ ವಿದೇಶದಲ್ಲಿ ಸಿಕ್ಕಿರುವ ಕೆಲಸವನ್ನು ಬಿಟ್ಟು ತಾಯ್ನಾಡಿನಲ್ಲಿ ಬುದ್ಧಿಮಾಂದ್ಯರ ಸೇವೆ ಮಾಡುತ್ತಿರುವ ವ್ಯಕ್ತಿಯೇ ಇವತ್ತಿನ ನಮ್ಮ ಪಬ್ಲಿಕ್ ಹೀರೋ.

    ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಅಳ್ವೆಕೋಡಿಯ ನಿವಾಸಿ ಸಿರಿಲ್ ಲೋಪಿಸ್ ನಮ್ಮ ಪಬ್ಲಿಕ್ ಹೀರೋ. ಬಡತನದಲ್ಲಿ ಹುಟ್ಟಿ ಕಷ್ಟಪಟ್ಟು ಓದಿ ದುಬೈನಲ್ಲಿ ಒಳ್ಳೇ ಕೆಲಸದಲ್ಲಿದ್ದರು. ದುಬೈನಲ್ಲಿದ್ದ ಕೆಲಸ ಬಿಟ್ಟು 2010ರಲ್ಲಿ ಕುಮಟಾಕ್ಕೆ ಬಂದು ತಮ್ಮ ದಯಾ ನಿಲಯ ಹೆಸರಿನ ಮನೆಯನ್ನೇ ಬುದ್ಧಿಮಾಂದ್ಯ ಮಕ್ಕಳ ಶಾಲೆಯಾಗಿ ಮಾಡಿದ್ದಾರೆ.

    ನಾಲ್ಕೈದು ಮಕ್ಕಳಿಂದ ಪ್ರಾರಂಭವಾದ ಈ ಶಾಲೆಯಲ್ಲೀಗ 32 ಮಕ್ಕಳಿದ್ದಾರೆ. ಊಟ, ವಸತಿ, ಶಿಕ್ಷಣ ಎಲ್ಲವೂ ಇಲ್ಲೇ ನಡೆಯುತ್ತಿದೆ. ಸಿರಿಲ್ ಒಂದು ರೀತಿ ತ್ರಿವಿಧ ದಾಸೋಹಿ ಆಗಿದ್ದಾರೆ. ಈ ವಿಶೇಷ ಮಕ್ಕಳಿಗೆ ಶಿಕ್ಷಣ ನೀಡುವುದು ಬಲು ಕಷ್ಟವಾಗಿತ್ತು. ಹಾಗಾಗಿ ಸಿರಿಲ್ ಈ ಮಕ್ಕಳಿಗೆ ಶಿಕ್ಷಣ ನೀಡೋಕೆ ಅಂತಾನೇ ವಿಶೇಷ ಟ್ರೈನಿಂಗ್ ಪಡೆದಿದ್ದಾರೆ. ಒಮ್ಮೆ ಶಾಲೆ ನಡೆಸುವುದು ಕಷ್ಟವಾದಾಗ ತನ್ನ ಬೈಕ್ ಮಾರಿದ್ದಾರೆ.

    ಈ ದಯಾ ನಿಲಯದಲ್ಲಿ ಸಂಗೀತ, ಕಂಪ್ಯೂಟರ್ ಜೊತೆಗೆ ಸ್ವ-ಉದ್ಯೋಗ ಕಲಿಕೆ ಭಾಗವಾಗಿ ಸಾವಯವ ಗೊಬ್ಬರ ಹಾಗೂ ಪಿನಾಯಿಲ್ ತಯಾರಿಕೆ ಬಗ್ಗೆ ಕಲಿಸಿಕೊಡಲಾಗ್ತಿದೆ. ಈ ಶಾಲೆ ಮಕ್ಕಳು ಟೇಬಲ್ ಟೆನ್ನಿಸ್‍ನಲ್ಲಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಿ ಬಂಗಾರದ ಪದಕ ಗೆದ್ದಿದ್ದಾರೆ.

    https://www.youtube.com/watch?v=-Fjf92zIIVQ

     

  • ಅಪರಿಚಿತ ವಾಹನ ಬೈಕಿಗೆ ಡಿಕ್ಕಿ: ಬೈಕ್ ಸವಾರ ಸಾವು

    ಅಪರಿಚಿತ ವಾಹನ ಬೈಕಿಗೆ ಡಿಕ್ಕಿ: ಬೈಕ್ ಸವಾರ ಸಾವು

    ಕಾರವಾರ: ಮಂಗಳವಾರ ನಸುಕಿನ 2 ಗಂಟೆಯ ವೇಳೆಯಲ್ಲಿ ಅಪರಿಚಿತ ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ದಂಡುಕುಳಿಯಲ್ಲಿ ನೆಡೆದಿದೆ.

    ಅಫ್ರೋಜ್ (16) ಮೃತ ಬೈಕ್ ಸವಾರ. ಸಹ ಸವಾರ ಅಫ್ರೋಜ್ ತಂದೆ ಇಕ್ಬಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‍ನಲ್ಲಿದ್ದ ಮತ್ತೊಬ್ಬ ಅಫ್ರೋಜ್ ಸಹೋದರನಿಗೂ ಗಾಯಗಳಾಗಿವೆ. ತಂದೆ ಮತ್ತು ಮಕ್ಕಳು ಮೂವರು ಒಂದೇ ಬೈಕ್‍ನಲ್ಲಿ ಕುಮಟಾದ ಕಡಲೆಯಿಂದ ಮಿರ್ಜಾನ್‍ಗೆ ಬರುತ್ತಿರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ.

    ಗಾಯಾಳು ಇಕ್ಬಾಲ್‍ರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‍ಗೆ ಡಿಕ್ಕಿ ಹೊಡೆದು ವಾಹನ ಸಮೇತವಾಗಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.