Tag: ಕುಮಾರಸ್ವಮಿ

  • ಆ ಮನುಷ್ಯನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ: ಶ್ರೀನಿವಾಸ್ ಗೌಡ ವಿರುದ್ಧ ಹೆಚ್‌ಡಿಕೆ ಕಿಡಿ

    ಆ ಮನುಷ್ಯನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ: ಶ್ರೀನಿವಾಸ್ ಗೌಡ ವಿರುದ್ಧ ಹೆಚ್‌ಡಿಕೆ ಕಿಡಿ

    ಬೆಂಗಳೂರು: ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವ ವಿಚಾರ ತಿಳಿದು ಬರುತ್ತಲೇ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಕಿಡಿ ಕಾರಿದ್ದಾರೆ.

    ಆ ಮನುಷ್ಯನಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ. ಕೋಲಾರ ಜನತೆಯ ಜೆಡಿಎಸ್ ಮತದಾರರಿಗೆ ಅವರು ಅವಮಾನ ಮಾಡಿದ್ದಾರೆ. ನಮ್ಮ ಪಕ್ಷದ ಚಿಹ್ನೆ ಅಡಿ ಗೆದ್ದು, ಅವರಿಗೆ ಮತ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಮೊದಲ ಅಡ್ಡಮತದಾನ

    ಕಾಂಗ್ರೆಸ್‌ನವರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. 2016ರಲ್ಲಿ 8 ಶಾಸಕರ ಕೈಯಲ್ಲಿ ಅಡ್ಡ ಮತ ಹಾಕಿಸಿಕೊಂಡಿದ್ದರು. ಇದೀಗ ಶ್ರೀನಿವಾಸ್ ಗೌಡ ಅವರ ಕೈಯಲ್ಲಿ ಅಡ್ಡ ಮತ ಹಾಕಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

    ಗುಬ್ಬಿ ಶ್ರೀನಿವಾಸ್ ಬಗ್ಗೆ ಮಾತನಾಡಿದ ಹೆಚ್‌ಡಿಕೆ, ಗುಬ್ಬಿ ಶ್ರೀನಿವಾಸ್ ಯಾರಿಗೂ ಮತ ಹಾಕಿಲ್ಲ. ಖಾಲಿ ಪೇಪರ್ ಕೊಟ್ಟು ಹೋಗಿದ್ದಾರೆ. ಆದರೆ ಮಾಧ್ಯಮದ ಮುಂದೆ ಜೆಡಿಎಸ್‌ಗೆ ಮತ ಹಾಕಿದ್ದೇನೆ ಎಂದು ಹೇಳುತ್ತಿದ್ದಾರೆ. ಯಾಕೆ ಇಷ್ಟು ನಾಟಕವಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜೆಡಿಎಸ್‌ಗೆ ಬಿಗ್ ಶಾಕ್ ಕೊಟ್ಟ ಗುಬ್ಬಿ ಶ್ರೀನಿವಾಸ್

    ಇವರನ್ನು ಮಂತ್ರಿ ಮಾಡಿದ್ದೇ ತಪ್ಪಾಯಿತು. ಇವರ ಬಂಡವಾಳ ಸಂಜೆ ಗೊತ್ತಾಗಲಿದೆ. ಇವರಿಗೆ ಜನರೇ ತಕ್ಕ ಬುದ್ಧಿ ಕಲಿಸುತ್ತಾರೆ ಎಂದು ಹೇಳಿಕೆ ನೀಡಿದರು.

  • ಮಂಗ್ಳೂರನ್ನು ‘ಕಾಶ್ಮೀರ’ ಮಾಡಲು ಹೊರಟಿದೆ, ಇದನ್ನು ತೋರಿಸಲು 35 ವಿಡಿಯೋ ರಿಲೀಸ್ – ‘ಸಿಡಿ’ದ ಎಚ್‍ಡಿಕೆ

    ಮಂಗ್ಳೂರನ್ನು ‘ಕಾಶ್ಮೀರ’ ಮಾಡಲು ಹೊರಟಿದೆ, ಇದನ್ನು ತೋರಿಸಲು 35 ವಿಡಿಯೋ ರಿಲೀಸ್ – ‘ಸಿಡಿ’ದ ಎಚ್‍ಡಿಕೆ

    ಬೆಂಗಳೂರು: ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು 35 ದೃಶ್ಯಗಳ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಂದು ಕಾಶ್ಮೀರ ಮಾಡಲು ಸರ್ಕಾರ ಹೊರಟಿದೆ. ಇದನ್ನು ತೋರಿಸಲು ಈ ವಿಡಿಯೋ ಬಿಡುಗಡೆ ಮಾಡಿದ್ದೇನೆ ಎಂದು ಹೇಳಿದರು.

    ಸರ್ಕಾರ ಯಾವುದೇ ತಪ್ಪು ಮಾಡದೇ ಇದ್ದಿದ್ದರೆ, ಪೊಲೀಸರು ಇಂತಹ ವರ್ತನೆ ತೋರಿಸದೇ ಹೋಗಿದ್ದರೆ ಏನು ಆಗುತ್ತಿರಲಿಲ್ಲ. ಎಲ್ಲಾ ಜಿಲ್ಲೆಯಲ್ಲಿ ಪ್ರತಿಭಟನೆ ನಡೆದಿದೆ. ಆದರೆ ಮಂಗಳೂರಿನಲ್ಲಿ ಮಾತ್ರ ಇಂತಹ ಘಟನೆ ನಡೆದಿದ್ದು, ಇದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದರು. ಈ ಎಲ್ಲ ಘಟನೆಗಳಿಗೆ ಪೊಲೀಸ್ ಆಯುಕ್ತ ಹರ್ಷ ಅವರೇ ಕಾರಣ. ಕೂಡಲೇ ಅವರನ್ನು ಅಮಾನತುಗೊಳಿಸಬೇಕೆಂದು ಎಚ್‍ಡಿಕೆ ಆಗ್ರಹಿಸಿದರು.

    ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ತನಿಖೆ ಮಾಡುತ್ತಿದ್ದಾರೆ. ಸರ್ಕಾರ ಹೇಳಿದಂತೆ ಅವರು ವರದಿ ನೀಡುತ್ತಾರೆ. ಜನತಾ ಅದಾಲತ್ ನಲ್ಲಿ ಜನರೇ ಈ ವಿಡಿಯೋ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರೇ ಇಲ್ಲಿ ತಪ್ಪು ಮಾಡಿದ್ದಾರೆ ಎಂದು ಕುಮಾರಸ್ವಾಮಿ ದೂರಿದರು.

    ಅಂಗಡಿ ಮುಂದೆ ನಿಂತವರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಕಲ್ಲು ತುಂಬಿದ್ದ ಗಾಡಿ 4 ಟ್ರಿಪ್ ಬೇರೆ ಕಡೆ ಹೊಡೆದಿತ್ತು. ಉದ್ದೇಶ ಪೂರ್ವಕವಾಗಿ ಕಲ್ಲು ತುಂಬಿಸಿಕೊಂಡು ಬಂದಿರಲಿಲ್ಲ. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಬಿಡುಗಡೆ ಮಾಡಿದ್ದೇನೆ ಎಂದು ತಿಳಿಸಿದರು.

    ಸಿಟಿಜನ್ ಫೋರಂನಿಂದ ಜನತಾ ಆಂದೋಲನ ಮಾಡಲು ತೀರ್ಮಾನ ಮಾಡಲಾಗಿತ್ತು. ಈ ಸಂಬಂಧ ನಿವೃತ್ತ ನ್ಯಾ.ಗೋಪಾಲಗೌಡ, ಸುಗತ ಶ್ರೀನಿವಾಸ್ ಸೇರಿ 3 ಜನತಾ ತಂಡ ರಚನೆ ಮಾಡಿ ಜನತಾ ಅದಾಲತ್ ಮಾಡಲಾಗಿತ್ತು. ಮಂಗಳೂರು ಗಲಭೆ ಸಂಬಂಧ ದಾಖಲಾತಿ ಸಂಗ್ರಹ ಮಾಡಿದ್ದೇನೆ. ವಿಧಾನಸಭೆಯಲ್ಲಿ ಈ ವಿಚಾರದ ಬಗ್ಗೆ ಮಾಡುತ್ತೇನೆ. ಪೊಲೀಸರು ಮಾಡಿದ ತಪ್ಪನ್ನು ಚರ್ಚೆ ಮಾಡುತ್ತೇನೆ. ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಪ್ರಕರಣ ತಿರುಚಲು ಹೋಗುತ್ತಿದೆ. ಮೊನ್ನೆ ಜನತಾ ಅದಾಲತ್ ಮಾಡಲು ಹೋದಾಗ ಅಲ್ಲಿನ ಎಸ್‍ಐ ಅದಕ್ಕೆ ಅವಕಾಶ ನೀಡಲಿಲ್ಲ. ಪೊಲೀಸರಿಗೆ ಈ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದರು.

  • ಗೌಡ್ರ ಕುಟುಂಬದಲ್ಲೀಗ ಎಲೆಕ್ಷನ್ ಫಿಟ್‍ನೆಸ್ ಮಂತ್ರ – ಡಯೆಟ್‍ಗೆ ರೇವಣ್ಣ ನೋ ನೋ

    ಗೌಡ್ರ ಕುಟುಂಬದಲ್ಲೀಗ ಎಲೆಕ್ಷನ್ ಫಿಟ್‍ನೆಸ್ ಮಂತ್ರ – ಡಯೆಟ್‍ಗೆ ರೇವಣ್ಣ ನೋ ನೋ

    ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದಿಂದ ಮೂರು ಜನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಹೀಗಾಗಿ ಅವರ ಮನೆಯಲ್ಲಿ ಫುಲ್ ಟೈಂ ಪಾಲಿಟಿಕ್ಸ್ ಟೆನ್ಶನ್ ಇರುತ್ತದೆ. ಆದರೂ ಇದರ ಮಧ್ಯೆ ಗೌಡರ ಕುಟುಂಬ ಚುನಾವಣೆ ಸಮಯದಲ್ಲಿ ಫುಲ್ ಹೆಲ್ತ್ ಫಿಟ್‍ನೆಸ್ ಮಂತ್ರ ಪಠಿಸುತ್ತಿದೆ.

    ಹೌದು. ತುಮಕೂರು, ಹಾಸನ, ಮಂಡ್ಯ ಎಂದು ಫುಲ್ ಎಲೆಕ್ಷನ್ ಪ್ರಚಾರಕ್ಕೆ ಓಡಾಡುತ್ತಿರುವ ಗೌಡರು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಇವರ ಜೊತೆಗೆ ಸಿಎಂ ಕುಮಾರಸ್ವಾಮಿ ಅವರು ಕೂಡ ಆರೋಗ್ಯದ ಮಂತ್ರ ಜಪಿಸುತ್ತಲೇ ಮಗನಿಗಾಗಿ ಪ್ರಚಾರದ ಹುರುಪಿನಲ್ಲಿದ್ದಾರೆ.

    ದೇವೇಗೌಡರು ಮುದ್ದೆ ಬಸ್ಸಾರು ಬಿಟ್ರೆ ಮಾಂಸಹಾರ ಸೇವನೆ ಮಾಡುತ್ತಿಲ್ಲ. ಮಧ್ಯಾಹ್ನ, ಬೆಳಗ್ಗೆ ಹಸಿಕಾಳು ಇದ್ದೇ ಇರುತ್ತದೆ. ದೇವೇಗೌಡರು ಅಪ್ಪಿತಪ್ಪಿಯೂ ಜಿಡ್ಡು ಪದಾರ್ಥ ಮತ್ತು ಸ್ವೀಟ್ ಮುಟ್ಟವಂತಿಲ್ಲ. ನಿತ್ಯ ಬಿಸಿನೀರು ಸೇವನೆ ಮಾಡುತ್ತಾರೆ. ಸಮಯ ಸಿಕ್ಕಾಗ ಪ್ರಾಣಯಾಮ ಮಾಡುತ್ತಾರೆ. ಜೊತೆಗೆ ವೈದ್ಯರು ಕೊಟ್ಟ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕುಮಾರಸ್ವಾಮಿ ಕೂಡ ವಾಕಿಂಗ್, ಮುದ್ದೆಯೂಟ ಮಾಡುತ್ತಾರೆ. ಪ್ರತೀ ದಿನ ಹೆಲ್ತ್ ಚೆಕಪ್ ಇರುತ್ತದೆ. ಮನೆಯಲ್ಲಿ ಇಬ್ಬರು ರಕ್ತದೊತ್ತಡ, ಬಿಪಿ ಶುಗರ್ ಲೆವೆಲ್ ನಿತ್ಯ ಚೆಕ್ ಮಾಡುತ್ತಿದ್ದಾರೆ. ಅಗತ್ಯವಿದ್ದರೆ ಮಾತ್ರ ವೈದ್ಯರ ಸಲಹೆ ಪಡೆದುಕೊಳ್ಳುತ್ತಾರೆ ಎಂದು ಡಾ. ಮಂಜುನಾಥ್ ತಿಳಿಸಿದ್ದಾರೆ.

    ರೇವಣ್ಣ ಮಾತ್ರ ಚುನಾವಣೆ ಸಂದರ್ಭದಲ್ಲಿ ದೇವಸ್ಥಾನಕ್ಕೆ ಹೋಗುವ ಅವರು ಅಲ್ಲಿ ಕೊಡುವ ಪ್ರಸಾದ ತಿಂದು ತಿಂದು ಶುಗರ್ ಲೆವಲ್ ಹೆಚ್ಚು ಮಾಡಿಕೊಳ್ಳುತ್ತಾರೆ. ವೈದ್ಯರ ಡಯೆಟ್ ಟಿಪ್ಸ್ ಪಾಲಿಸೋದು ಸ್ವಲ್ಪ ಕಡಿಮೆ. ಇದಕ್ಕಾಗಿ ಚುನಾವಣಾ ಟೈಂನಲ್ಲಿ ಪ್ರಸಾದ ತಿನ್ನೋದು ಸ್ವಲ್ಪ ಕಡಿಮೆ ಮಾಡಿ ಎಂದು ವೈದ್ಯರು ಸಲಹೆ ಕೊಟ್ಟಿದ್ದಾರೆ.