Tag: ಕುರಿ ಪ್ರತಾಪ್

  • ಐವರು ನಿರೂಪಕರು, ಒಂದು ಕಾಮಿಡಿ ಶೋ

    ಐವರು ನಿರೂಪಕರು, ಒಂದು ಕಾಮಿಡಿ ಶೋ

    ರ್ನಾಟಕವನ್ನ ಸತತವಾಗಿ ನಗಿಸುತ್ತ ಬಂದಿರುವ ಜೀ಼ ಕನ್ನಡ ವಾಹಿನಿಯ ಜನಮೆಚ್ಚಿದ ರಿಯಾಲಿಟಿ ಶೋ, ಕಾಮಿಡಿ ಕಿಲಾಡಿಗಳು (Comedy Kiladigalu) ಈ ಬಾರಿ ಹೊಸ ಅವತಾರದಲ್ಲಿ ಪ್ರೇಕ್ಷಕರು ಮುಂದೆ ಬರಲಿದೆ. ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ ಹೆಸರಿನಲ್ಲಿ ವೀಕೆಂಡಲ್ಲಿ ನಗುವಿನ ಟಾನಿಕ್‌ ನೀಡೋಕೆ ಸಿದ್ದವಾಗಿರುವ ಈ ಶೋನಲ್ಲಿ ನಗುವಿನ ಮಹಾಯುದ್ದ ನಡೆಯೋದಿದೆ. ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಈಗಾಲೇ ಸಾಕಷ್ಟು ಹಾಸ್ಯ ಕಲಾವಿದರನ್ನ ಕನ್ನಡ ಚಿತ್ರರಂಗಕ್ಕೆ ನೀಡಿರುವ ಜೀ಼ ಕನ್ನಡ ವಾಹಿನಿ, ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ ಮೂಲಕ ಮನೋರಂಜನೆಯನ್ನ ಮತ್ತಷ್ಟು ಹೆಚ್ಚು ಮಾಡವುದರ ಜೊತೆಗೆ ಮತ್ತಷ್ಟು ಹಾಸ್ಯ ಕಲಾವಿದರನ್ನ ಕರುನಾಡಿಗೆ ಪರಿಚಯಿಸುವ ಕೆಲಸ ಮಾಡಲಿದೆ.

    JAGGESH

    ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಜನರ ಮನಸ್ಸನ್ನ ಗೆದ್ದು, ಲಕ್ಷಾಂತರ ವೀಕ್ಷಕಣೆ ಕಂಡಿರುವ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ ಪ್ರೋಮೋ, ಕಾರ್ಯಕ್ರಮದ ಬಗ್ಗೆ ಇರುವ ಕುತೂಹಲವನ್ನ ಹಿನ್ನಷ್ಟು ಹೆಚ್ಚು ಮಾಡಿದೆ. ತಮ್ಮ ಮಾತುಗಳ ಮೂಲಕ ಜನರನ್ನ ಮಂತ್ರ ಮುಗ್ದರನ್ನಾಗಿ ಮಾಡಿದ ಕರ್ನಾಟಕದ ಶ್ರೇಷ್ಟ ನಿರೂಪಕರುಗಳಾದ ಅನುಶ್ರೀ (Anushree), ಮಾಸ್ಟರ್‌ ಆನಂದ್‌ (Master Anand), ಅಕುಲ್‌, ಶ್ವೇತಾ ಚಂಗಪ್ಪ ಮತ್ತು ಕುರಿ ಪ್ರತಾಪ್‌ (Kuri Pratap) ಈ ಶೋನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಹೊಸ ರೂಪದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

    ಈ ಕಾರ್ಯಕ್ರಮ ಮುಖ್ಯ ಆರ್ಕಷಣೆಗಳಲ್ಲಿ ಒಂದಾಗಿರುವ ನವರಸ ನಾಯಕ ಜಗ್ಗೇಶ್ (Jaggesh) ಈಗಾಗಲೇ ಜನರ ತಲೆಯಲ್ಲಿ ಹೊಸ ಯೋಚನಯೊಂದನ್ನ ಪ್ರೋಮೋ ಮೂಲಕ ಬಿಟ್ಟಿದ್ದು, ಇಲ್ಲಿ ನಗಿಸ್ತಾರೆ ನಗಬಾರದು ಅಂತ ಹೇಳುವ ಮೂಲಕ ಕಾರ್ಯಕ್ರಮದ ಬಗ್ಗೆ ಜನರಿಗಿರುವ ಕುತೂಹಲವನ್ನ ಮತ್ತಷ್ಟು ಜಾಸ್ತಿ ಮಾಡಿದ್ದಾರೆ.

    ಶೋನ ಹೆಸರೇ ಹೇಳುವಂತೆ ಇಲ್ಲಿ ನಗುವಿನ ಲೀಗ್‌ ಮ್ಯಾಚ್‌ ನಡೆಯಲ್ಲಿದ್ದು ಇಲ್ಲಿ ಟೀ ಟ್ವಂಟಿ ಮ್ಯಾಚುಗಳಲ್ಲಿ ಇರುವಂತೆ ತಂಡಗಳು, ಮಾಲೀಕರು, ಕ್ಯಾಪ್ಟನ್‌ಗಳು ಇದ್ದು ಕ್ರಿಕೆಟಿಗರನ್ನ ಹರಾಜು ಪ್ರಕ್ರಿಯೆಯಲ್ಲಿ ಕೊಂಡುಕೊಳ್ಳುವಂತೆ ಇಲ್ಲೂ ಕೂಡ ಕರ್ನಾಟಕದ ಮೂವತ್ತೊಂದು ಜಿಲ್ಲೆಗಳಿಂದ ಆಯ್ದು ತಂದ ಕಲಾವಿದರನ್ನ ಮೆಗಾ ಆಕ್ಷನ್‌ ಮೂಲಕ ತಮ್ಮ ತಂಡಗಳಿಗೆ ಸೇರಿಸಿಕೊಳ್ಳುವ ಕೆಲಸ ನಡೆಯಲಿದ್ದು, ಇಲ್ಲಿ ಐದು ತಂಡಗಳು ಒಂದು ಟ್ರೋಫಿಗಾಗಿ ಹಣಾಹಣಿ ನಡೆಸಲಿದೆ.

    ಕಾರ್ಯಕ್ರಮದ ಬಗ್ಗೆ ಸಣ್ಣ ಸುಳಿವೊಂದನ್ನ ಬಿಟ್ಟುಕೊಟ್ಟಿರುವ ಜೀ಼ ಕನ್ನಡ ವಾಹಿನಿಯ ಪ್ರಕಾರ, ಈ ಶೋನಲ್ಲಿ ತಂಡವಾಗಿ ಪ್ರರ್ದಶನ ನೀಡುವ ಕಲಾವಿದರಿಗೆ ವೀಕೆಂಡಿನಲ್ಲಿ ಅವರ ಪ್ರರ್ದಶನ ಆಧಾರದ ಮೇಲೆ ಪ್ರತಿವಾರ ಒಂದು ಲಕ್ಷಮೌಲ್ಯದ ನಗದು ಬಹುಮಾನವನ್ನ ಗೆಲ್ಲುವ ಅವಕಾಶವನ್ನ ಈ ಕಾರ್ಯಕ್ರಮದಲ್ಲಿ ನೀಡಲಾಗಿದ್ದು ಇದು ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್ನ ವಿಶೇಷತೆಗಳಲ್ಲಿ ಒಂದಾಗಿದೆ.

     

    ಪಂಚ ಪಾಂಡವರಂತೆ ಇರುವ ಐದು ನಿರೂಪಕರು ಇಲ್ಲಿ ಹೊಸ ಜವಾಬ್ದಾರಿಯನ್ನ ಹೊತ್ತಿರುವ ಕಾರಣ  ಹೊಸ ನಿರೂಪಕರನ್ನ ಈ ಕಾರ್ಯಕ್ರಮದ ಮೂಲಕ ಜೀ಼ ಕನ್ನಡ ವಾಹಿನಿ ತೆರೆಗೆ ತರುವ ಪ್ರಯತ್ನ ಮಾಡಲಿದ್ದು, ಯಾರು ಆ ಹೊಸ ನಿರೂಪಕರು ಎಂಬ ಪ್ರಶ್ನಗೆ ಉತ್ತರವನ್ನ ಇದೇ ಶನಿವಾರ ಮತ್ತು ಭಾನುವಾರ ರಾತ್ರಿ 9.00ಕ್ಕೆ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್ನ ಮೊದಲ ಸಂಚಿಕೆ ನೀಡಲಿದೆ.

  • ಕನ್ನಡ ಕಿರುತೆರೆಯಲ್ಲಿ ‘ಕಾಮಿಡಿ ಗ್ಯಾಂಗ್ಸ್’ ಹಾವಳಿ

    ಕನ್ನಡ ಕಿರುತೆರೆಯಲ್ಲಿ ‘ಕಾಮಿಡಿ ಗ್ಯಾಂಗ್ಸ್’ ಹಾವಳಿ

    ನ್ನಡ ಕಿರುತೆರೆಯಲ್ಲಿ ಸದ್ಯ ನಗೆಹಬ್ಬಗಳದ್ದೇ ಹಾವಳಿ. ಬಹುತೇಕ ಟಿವಿ ಚಾನೆಲ್ ಗಳಲ್ಲಿ ಕಾಮಿಡಿ ಶೋಗಳು ಶುರುವಾಗಿವೆ. ಇದೀಗ ಸುವರ್ಣ ಮನರಂಜನಾ ವಾಹಿನಿಯು ಕೂಡ ‘ಕಾಮಿಡಿ ಗ್ಯಾಂಗ್ಸ್’ ಎಂಬ ವಿನೂತನ ಕಾಮಿಡಿ ಶೋ ಪ್ರಾರಂಭ ಮಾಡಿದೆ. ಇಂದಿನಿಂದ ರಾತ್ರಿ 9 ಗಂಟೆಗೆ ಪ್ರತಿ ಶನಿವಾರ ಮತ್ತು ಭಾನುವಾರ ಮನೆ ಮನದಲ್ಲಿ ಕಾಮಿಡಿ ಕಚಗುಳಿಯ ರಂಗೇರಲಿದೆ. ಇದನ್ನೂ ಓದಿ : ಪೂಜಾ ಹೆಗ್ಡೆ 1 ಕೋಟಿ ಸಂಭಾವನೆ ಪಡೆದ ಹಾಡಿನಲ್ಲಿ ಏನಿದೆ?: ಫನ್ ಅಂಡ್ ಫ್ರಸ್ಟ್ರೇಷನ್

    ಕರುನಾಡಿನಾದ್ಯಂತ ಆಯ್ಕೆಯಾಗಿ ಬಂದಿರುವ ಕಂಟೆಸ್ಟೆಂಟ್ಸ್,  ಅವರಿಗೆ ಸ್ಕಿಟ್ ಕೊಡುವ ರೈಟರ್ಸ್, ಅವರ ಕಾಮಿಡಿಯ ಕಾಗುಣಿತ ತಿದ್ದುತಿರುವ ಮೆಂಟರ್ಸ್, ಇವರೆಲ್ಲರ ಪರಿಪೂರ್ಣ ಪ್ರದರ್ಶನದ ಹೊಣೆ ಹೊತ್ತಿರುವ ಕ್ಯಾಪ್ಟನ್ಸ್ ಇದೇ ಕಾಮಿಡಿ ಗ್ಯಾಂಗ್ಸ್ ವಿಶೇಷತೆ. ಒಟ್ಟು 6 ತಂಡಗಳು ಪ್ರತಿ ಶನಿವಾರ ಮತ್ತು ಭಾನುವಾರ ಒಂದಿಕ್ಕಿಂತ ಒಂದು ವಿಭಿನ್ನ ಮತ್ತು ವಿಶೇಷವಾದ ವಿಡಂಬನೆಗಳ ಮೂಲಕ, ನಗು ಹಂಚಲಿದ್ದಾರೆ. ಈ ಶೋನ ವಿಶೇಷತೆ ಅಂದರೆ ‘ಕಾಮಿಡಿ ಗ್ಯಾಂಗ್ಸ್’ ನಲ್ಲಿ ಎಲಿಮಿನೇಷನ್ ಇರುವುದಿಲ್ಲ. ಈ ಸ್ಕಿಟ್ ಗಳಿಗೆ ಸ್ಕೋರ್ ನೀಡಲಾಗುವುದು, ಅಂತಿಮವಾಗಿ ಅಧಿಕ ಅಂಕಗಳನ್ನು ಪಡೆವ ಗ್ಯಾಂಗ್ ಗೆ ಗೆಲುವು ಸಿಗಲಿದೆ.  ಇದನ್ನೂ ಓದಿ : ಕೆಜಿಎಫ್-2 : ಎರಡನೇ ದಿನಕ್ಕೆ 240 ಕೋಟಿ ಬಾಚಿದ ರಾಕಿ ಭಾಯ್ : ಗ್ರೌಂಡ್ ರಿಪೋರ್ಟ್

    ಈ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಖ್ಯಾತ ನಟಿ ಶ್ರುತಿ ಹರಿಹರನ್ ಮತ್ತು ಮಜಾ ಟಾಕೀಸ್ ಖ್ಯಾತಿಯ ಕುರಿ ಪ್ರತಾಪ್ ಇರುತ್ತಾರೆ.  ಇನ್ನು ಕಾರ್ಯಕ್ರಮದ ನಿರೂಪಕರಾಗಿರುವ ಶಿವರಾಜ್ ಕೆ. ಆರ್. ಪೇಟೆ, ಇದೇ ಮೊದಲ ಬಾರಿಗೆ ಕಿರುತೆರೆಯ ಹೋಸ್ಟ್ ಆಗಿದ್ದಾರೆ.  ಇದನ್ನೂ ಓದಿ : ಹನುಮ ಜಯಂತಿ : ದೂರದ ಬೆಟ್ಟ ಸಿನಿಮಾದಲ್ಲಿಯ ಡಾ.ರಾಜ್ ಅವರ ಹನುಮನ ಪಾತ್ರ ಏನಾಯಿತು?

    ಈ ಕಾರ್ಯಕ್ರಮದ ಕುರಿತು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿರುವ ಮುಖ್ಯಮಂತ್ರಿ ಚಂದ್ರು, ‘ನಗುವು ಸಹಜದ ಧರ್ಮ ; ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ವರವ, ಮಿಗೆ ನೀನು ಬೇಡಿಕೊಳೊ – ಮಂಕುತಿಮ್ಮ ;ಡಿವಿಜಿಯವರು ಹೇಳಿದ ಹಾಗೆ ನಗು ಹಂಚುವ ಕೆಲಸ ಸ್ಟಾರ್ ಸುವರ್ಣ ಮಾಡ್ತಿದೆ, ನಾನು ಈ ಕಾರ್ಯಕ್ರಮದ ಭಾಗಾವಾಗಿರೋದು ತುಂಬಾ ಖುಷಿಯ ವಿಚಾರ, ‘ಕಾಮಿಡಿ ಗ್ಯಾಂಗ್ಸ್’ ಮೇಲೆ ನನಗೆ ಬಹಳ ಭರವಸೆಯಿದ್ದು, ಜನರಿಗೆ ಖಂಡಿತ ಇಷ್ಟವಾಗುತ್ತ’ ಎನ್ನುತ್ತಾರೆ.

  • ಕಾಮಿಡಿ ಶೋಗಾಗಿ ಕಿರುತೆರೆಗೆ ಬಂದ ಶ್ರುತಿ ಹರಿಹರನ್

    ಕಾಮಿಡಿ ಶೋಗಾಗಿ ಕಿರುತೆರೆಗೆ ಬಂದ ಶ್ರುತಿ ಹರಿಹರನ್

    ಮೀಟೂ ಪ್ರಕರಣದ ನಂತರ ಕೆಲ ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ನಟಿ ಶ್ರುತಿ ಹರಿಹರನ್, ಇದೀಗ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಪರಮ್ ವಾ ಸ್ಪಾಟ್ ಲೈನ್ ‍ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ, ಅರ್ಜುನ್ ಲೂವಿಸ್ ನಿರ್ದೇಶನದ ಸ್ಟ್ರಾಬರಿ ಚಿತ್ರಕ್ಕೆ ಇವರೇ ನಾಯಕಿ. ಈಗಾಗಲೇ ‘ಸಾಲುಗಾರ’ ಹೆಸರಿನ ಸಿನಿಮಾದ ಶೂಟಿಂಗ್ ಅನ್ನು ಕಂಪ್ಲೀಟ್ ಮಾಡಿದ್ದಾರೆ. ಧನಂಜಯ್ ಮುಖ್ಯ ಭೂಮಿಕೆಯ ‘ಹೆಡ್ ಬುಷ್’ ಚಿತ್ರದಲ್ಲೂ ಶ್ರುತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಕಿರುತೆರೆಗೂ ಕಾಲಿಟ್ಟಿದ್ದಾರೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ಶ್ರುತಿ ಹರಿಹರನ್ ಕಿರುತೆರೆಗೆ ಕಾಲಿಡುತ್ತಿರುವುದು ಹೊಸದೇನೂ ಅಲ್ಲ. ಆದರೆ, ಈ ಬಾರಿ ಆಯ್ಕೆ ಮಾಡಿಕೊಂಡಿರುವ ವೇದಿಕೆ ಮಾತ್ರ ಹೊಸದು. ಶ್ರುತಿ ಸಿನಿಮಾ ರಂಗಕ್ಕೂ ಬರುವ ಮುನ್ನ ನೃತ್ಯ ಕಲಾವಿದೆ. ಈ ವೃತ್ತಿಯೇ ಅವರನ್ನು ‘ಲೂಸಿಯಾ’ ಚಿತ್ರಕ್ಕೆ ಆಯ್ಕೆ ಆಗುವಂತೆ ಮಾಡಿತ್ತು. ಆನಂತರ ಅವರು ಸ್ಟಾರ್ ನಟಿಯಾಗಿ ಬೆಳೆದರು. ಹಾಗಾಗಿ ಅವರನ್ನು ಖಾಸಗಿ ಮನರಂಜನಾ ವಾಹಿನಿಯೊಂದು ಡಾನ್ಸ್ ರಿಯಾಲಿಟಿ ಶೋ ಜಡ್ಜ್ ಆಗಿ ಆಯ್ಕೆ ಮಾಡಿಕೊಂಡಿತ್ತು. ಈ ಬಾರಿ ಅದೇ ವಾಹಿನಿಯೇ ಕಾಮಿಡಿ ಶೋಗೆ ತೀರ್ಪುಗಾರರಾಗಿ ಶ್ರುತಿ ಹೋಗಿದ್ದಾರೆ.

    ಈಗಾಗಲೇ ವಾಹಿನಿಯು ಪ್ರೊಮೋ ಬಿಡುಗಡೆ ಮಾಡಿದ್ದು, ಶ್ರುತಿ ಅವರ ಜತೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಕಾಮಿಡಿ ಕಲಾವಿದ ಕುರಿ ಪ್ರತಾಪ್ ತೀರ್ಪುಗಾರರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಈ ಕಾಮಿಡಿ ಕಾರ್ಯಕ್ರಮಕ್ಕೆ ಶಿವರಾಜ್ ಕೆ.ಆರ್ ಪೇಟೆ ಅವರ ನಿರೂಪಣೆ ಇರಲಿದೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ಪ್ರಕಾಶ್ ರೈ ಮಾಡಿದ ಟ್ವೀಟ್ ಗೆ ಜಗ್ಗಾಟ ಶುರು

    ಮುಖ್ಯಮಂತ್ರಿ ಚಂದ್ರ ಎಲ್ಲ ರೀತಿಯ ಪಾತ್ರವನ್ನೂ ಮಾಡಿದವರು. ಕಾಮಿಡಿ ಶೋಗಳಲ್ಲೂ ತೀರ್ಪುಗಾರರಾದವರು. ಕುರಿ ಪ್ರತಾಪ್ ಮಜಾ ಟಾಕೀಸ್ ಮೂಲಕ ಫೇಮಸ್ ಮತ್ತು ಕಾಮಿಡಿ ಕಲಾವಿದರು. ಆದರೆ, ಶ್ರುತಿ ಅವರು ಈ ಕಾರ್ಯಕ್ರಮದಲ್ಲಿ ಹೇಗೆ ಇರಲಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು.

  • ಫ್ಯಾಮಿಲಿ ಕುಳಿತು ಎಂಜಾಯ್ ಮಾಡುಬಹುದಾದ ಚಿತ್ರ ಶಿವಾರ್ಜುನ

    ಫ್ಯಾಮಿಲಿ ಕುಳಿತು ಎಂಜಾಯ್ ಮಾಡುಬಹುದಾದ ಚಿತ್ರ ಶಿವಾರ್ಜುನ

    ಚಿರು ಸರ್ಜಾ ಅಭಿನಯದ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾ ಶಿವಾರ್ಜುನ ಇಂದು ತೆರೆಗಪ್ಪಳಿಸಿದೆ. ಕೊರೊನಾ ಭೀತಿಯ ನಡುವೆಯೂ ಚಿತ್ರಕ್ಕೆ ದೊಡ್ಡ ಮಟ್ಟದ ಓಪನಿಂಗ್ ಸಿಕ್ಕಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಸಿನಿ ಪ್ರಿಯರನ್ನು ರಂಜಿಸುತ್ತಿರುವ ಯುವ ಸಾಮ್ರಾಟ್ ಚಿರು ಸರ್ಜಾ ಓನ್ಸ್ ಅಗೈನ್ ಶಿವಾರ್ಜುನ ಚಿತ್ರದ ಮೂಲಕ ಅಬ್ಬರಿಸಿದ್ದಾರೆ.

    ಮಾಸ್ ಹಾಗೂ ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಕಂಟೆಟ್‍ಗೆ ಪ್ರೇಕ್ಷಕ ಪ್ರಭು ಫಿದಾ ಆಗಿದ್ದಾನೆ. ನಾಯಕ ಶಿವು ಆಯುರ್ವೇಧಿಕ್ ಡಾಕ್ಟರ್ ಸಾಧು ಕೋಕಿಲ ಬಳಿ ಕೆಲಸಕ್ಕೆ ಸೇರಿ ಕೊಳ್ಳುತ್ತಾನೆ. ಆದ್ರೆ ಈ ಶಿವ ಯಾರು, ಈತನ ಹಿನ್ನೆಲೆ ಏನು ಅನ್ನೋದನ್ನ ನಿರ್ದೇಶಕರು ಪ್ರೇಕ್ಷಕರಿಗೆ ಕ್ಲೂ ಕೊಡದೆ ಮೊದಲಾರ್ಧ ಕ್ಯೂರಿಯಾಸಿಟಿ ಮೂಡಿಸುತ್ತಾರೆ. ಅಸಲಿ ಕಥೆ ಸೆಕೆಡ್ ಹಾಫ್ ನಲ್ಲಿದ್ದು, ಶಿವ ಯಾರು, ಆತ ತನ್ನ ಶತ್ರುಗಳನ್ನು ಹೇಗೆ ಬಗ್ಗು ಬಡಿಯುತ್ತಾನೆ ಅನ್ನೋದನ್ನ ಮಾಸ್ ಆಗಿ ಚಿತ್ರಿಸಿದ್ದಾರೆ ನಿರ್ದೇಶಕರು.

    ಎರಡು ಊರುಗಳ ನಡುವೆ ನಡೆಯುವ ಕಥೆಯೇ ಶಿವಾರ್ಜುನ. ರಾಮದುರ್ಗ ಹಾಗೂ ರಾಯದುರ್ಗ ಎರಡು ಊರುಗಳ ನಡುವೆ ಇಡೀ ಚಿತ್ರ ನಡೆಯುತ್ತೆ. ಪ್ರತಿ ವರ್ಷ ಈ ಎರಡು ಊರುಗಳ ನಡುವೆ ಸ್ಪರ್ಧೆ ನಡೆಯುತ್ತಿರುತ್ತೆ. ಸಡನ್ ಆಗಿ ಒಂದು ವರ್ಷ ಈ ಸ್ಪರ್ಧೆ ನಿಂತು ಹೋಗುತ್ತೆ. ಎರಡು ಊರುಗಳ ನಡುವೆ ಕಾದಾಟ ಶುರುವಾಗುತ್ತೆ. ಇದಕ್ಕೆ ಕಾರಣ ಏನು ಈ ಸ್ಪರ್ಧೆಗೂ, ಕಾದಾಟಕ್ಕೂ ನಾಯಕ ಶಿವುಗೂ ಏನು ಕಾರಣ, ಸಂಬಂಧ ಏನು ಅನ್ನೋದನ್ನು ನೀವು ಸಿನಿಮಾ ನೋಡಿಯೇ ತಿಳಿದುಕೊಳ್ಳಬೇಕು. ಚಿರು ಸರ್ಜಾ ಈ ಹಿಂದಿನ ಸಿನಿಮಾಗಳಿಗೆ ಹೋಲಿಕೆ ಮಾಡಿದ್ರೆ ಹೆಚ್ಚು ಇಷ್ಟವಾಗುತ್ತಾರೆ. ಡಾನ್ಸ್ ಹಾಗೂ ಫೈಟಿಂಗ್ ನಲ್ಲಿ ತೆರೆ ಮೇಲೆ ಚಿರು ನೋಡೋಕೆ ಸಖತ್ ಥ್ರಿಲ್ ನೀಡ್ತಾರೆ.

    ಪಾಪ್ ಕಾರ್ನ್ ಮಂಕಿ ಟೈಗರ್, ಲವ್ ಮೊಕ್ಟೈಲ್ ಚಿತ್ರದ ಮೂಲಕ ಸ್ಯಾಂಡಲ್‍ವುಡ್ ನಲ್ಲಿ ಗಮನ ಸೆಳೆದಿರುವ ಅಮೃತ ಐಯ್ಯಂಗಾರ್ ಈ ಚಿತ್ರದ ಮೂಲಕ ಪ್ರೇಕ್ಷಕರಿಗೆ ಸಖತ್ ಇಷ್ಟವಾಗುತ್ತಾರೆ ಜೊತೆಗೆ ಭರವಸೆಯ ನಾಯಕಿಯಾಗಿ ಹೊರಹೊಮ್ಮಿದ್ದಾರೆ. ತಾರಾ, ಕಿಶೋರ್ ಅಭಿನಯದ ಬಗ್ಗೆ ಮಾತನಾಡುವ ಹಾಗಿಲ್ಲ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ನಟಿ ತಾರಾ ಪುತ್ರ ಶ್ರೀಕೃಷ್ಣ ಬಾಲನಟನಾಗಿ ಪಾದಾರ್ಪಣೆ ಮಾಡಿದ್ದು, ಚಿತ್ರದಲ್ಲಿ ಶ್ರೀಕೃಷ್ಣನ ಮುದ್ದಾದ ನಟನೆ ನೋಡಲು ಖುಷಿಯಾಗುತ್ತೆ.

    ಸೂರಗ್ ಕೋಕಿಲ ಮ್ಯೂಸಿಕ್ ಚಿತ್ರದ ಸಂದರ್ಭ, ಸನ್ನೀವೇಶಕ್ಕೆ ತಕ್ಕ ಹಾಗೆ ಮೂಡಿಬಂದಿದ್ದು ಸ್ಯಾಂಡಲ್‍ವುಡ್‍ಗೆ ಮತ್ತೊಬ್ಬ ಭರವಸೆಯ ಯುವ ಸಂಗೀತ ನಿರ್ದೇಶಕ ಸಿಕ್ಕಿದ್ರು ಅಂದ್ರೆ ತಪ್ಪಾಗೊಲ್ಲ. ಸಾಹಸ ದೃಶ್ಯಗಳು ಮಾಸ್ ಪ್ರಿಯರ ಮನ ಸೆಳೆಯುತ್ತೆ. ರೆಗ್ಯೂಲರ್ ಸಿನಿಮಾ ಕಥೆಯೇ ಚಿತ್ರದಲ್ಲಿದ್ರು ಕೂಡ ನಿರ್ದೇಶಕರು ನೀಡಿರುವ ಹೊಸ ಸ್ಪರ್ಶ ನೋಡುಗರಿಗೆ ಇಷ್ಟವಾಗುತ್ತೆ. ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಚಿತ್ರದಲ್ಲಿರೋದ್ರಿಂದ ಇಡೀ ಫ್ಯಾಮಿಲಿ ಕುಳಿತು ಎಂಜಾಯ್ ಮಾಡಬಹುದು.

    ಚಿತ್ರ: ಶಿವಾರ್ಜುನ
    ನಿರ್ದೇಶನ: ಶಿವ ತೇಜಸ್
    ನಿರ್ಮಾಪಕ: ಶಿವಾರ್ಜುನ್
    ಸಂಗೀತ ನಿರ್ದೇಶನ: ಸುರಾಗ್ ಕೋಕಿಲ
    ಛಾಯಾಗ್ರಹಣ: ವೇಣು
    ತಾರಾಬಳಗ: ಚಿರಂಜೀವಿ ಸರ್ಜಾ, ಅಮೃತ ಐಯ್ಯಂಗರ್, ರವಿಕಿಶನ್, ಸಾಧಕೋಕಿಲ, ತಾರಾ, ಕಿಶೋರ್.

    ರೇಟಿಂಗ್: 3.5/5

  • ‘ಶಿವಾರ್ಜುನ’ನಾಗಿ ನಾಳೆ ಅಬ್ಬರಿಸಲಿದ್ದಾರೆ ಚಿರಂಜೀವಿ ಸರ್ಜಾ!

    ‘ಶಿವಾರ್ಜುನ’ನಾಗಿ ನಾಳೆ ಅಬ್ಬರಿಸಲಿದ್ದಾರೆ ಚಿರಂಜೀವಿ ಸರ್ಜಾ!

    ‘ಸಿಂಗ’ ಮತ್ತು ‘ಖಾಕಿ’ಯಲ್ಲಿ ಅಬ್ಬರಿಸಿದ್ದ ಚಿರು ಇದೀಗ ‘ಶಿವಾರ್ಜುನ’ನಾಗಿ ಎಲ್ಲರನ್ನು ರಂಜಿಸಲು ಬರುತ್ತಿದ್ದಾರೆ. ನಾಳೆ ಅಂದರೆ ಮಾರ್ಚ್ 12ರಂದು ಎಲ್ಲಾ ಚಿತ್ರಮಂದಿರಗಳಲ್ಲೂ ‘ಶಿವಾರ್ಜುನ’ ಲಗ್ಗೆ ಇಡುತ್ತಿದ್ದಾನೆ.

    ಸಿನಿಮಾ ಈಗಾಗಲೇ ಸಾಕಷ್ಟು ವಿಶೇಷತೆಗಳನ್ನು ಒಳಗೊಂಡಿರುವುದು ಎಲ್ಲರಿಗೂ ಗೊತ್ತೆ ಇದೆ. ಟೈಟಲ್ ನಿಂದ ಹಿಡಿದು, ಹೊಸಬರ ಎಂಟ್ರಿವರೆಗೆ ವಿಶೇಷವಾಗಿದೆ. ಸಿನಿಮಾದಲ್ಲಿ ಶಿವ-ಅರ್ಜುನನಿಗೆ ಸಂಬಂಧಿಸಿದಂತ ಎರಡು ಕ್ಯಾರೆಕ್ಟರ್ ಇದೆ. ಹೀಗಾಗಿ ಆ ಎರಡು ಕ್ಯಾರೆಕ್ಟರ್ ಗೆ ಮ್ಯಾಚ್ ಆಗುವಂತ ಟೈಟಲ್ ಹುಡುಕುವಾಗ ಚಿತ್ರತಂಡಕ್ಕೆ ಹೊಳೆದಿದ್ದು ಇದೆ ‘ಶಿವಾರ್ಜುನ’ ಹೆಸರು. ಕಾಕತಾಳೀಯವೆಂಬಂತೆ ಈ ಸಿನಿಮಾದ ನಿರ್ಮಾಪಕರ ಹೆಸರು ಕೂಡ ಶಿವಾರ್ಜುನ ಆಗಿದೆ. ಜೊತೆಗೆ ಈ ಚಿತ್ರ ನಿರ್ದೇಶಕರ ಹೆಸರು ಕೂಡ ಶಿವತೇಜಸ್. ಹೀಗಾಗಿ ಕಥೆಗೆ ಟೈಟಲ್ ಅದ್ಭುತವಾಗಿ ಮ್ಯಾಚ್ ಆಗುತ್ತಿದ್ದರಿಂದ ‘ಶಿವಾರ್ಜುನ’ನನ್ನೇ ಫೈನಲ್ ಮಾಡಿದ್ದಾರೆ ಅಂತಾರೆ ನಿರ್ದೇಶಕರು.

    ಇದೊಂದು ಕಮರ್ಷಿಯಲ್ ಎಂಟರ್ ಟೈನ್ಮೆಂಟ್ ಸಿನಿಮಾ. ಜನ ಸಿನಿಮಾಗೆ ಹೋಗೋದೆ ಮನರಂಜನೆಗಾಗಿ. ಆ ಎರಡು ಗಂಟೆಗಳ ಮನರಂಜನೆಯನ್ನ ‘ಶಿವಾರ್ಜುನ’ ಪಕ್ಕ ನೀಡಲಿದ್ದಾನೆ. ಕಾಮಿಡಿ, ಫ್ಯಾಮಿಲಿ, ಎಮೋಷನ್ ಹೀಗೆ ಎಲ್ಲಾ ಅಂಶಗಳು ಈ ಸಿನಿಮಾದಲ್ಲಿ ಅಡಕವಾಗಿದೆ. ಕಿಶೋರ್, ಸಾಧುಕೋಕಿಲಾ, ನಯನಾ, ಕುರಿ ಪ್ರತಾಪ್ ಸೇರಿದಂತೆ ಕಾಮಿಡಿ ಬಳಗವೇ ಸಿನಿಮಾದಲ್ಲಿರುವುದರಿಂದ ಮನರಂಜನೆ ಸಿಗುವುದರಲ್ಲಿ ಅನುಮಾನವೇ ಇಲ್ಲ.

    ಇನ್ನು ಸಿನಿಮಾ ಇಷ್ಟು ಅದ್ಭುತವಾಗಿ ಮೂಡಿ ಬರಲು ಕಾರಣ ನಿರ್ಮಾಪಕ ಸಹಕಾರ ಅಂತಾರೆ ನಿರ್ದೇಶಕ ಶಿವತೇಜಸ್. ಸಿನಿಮಾಗೆ ಏನೆಲ್ಲಾ ಬೇಕು, ಕ್ಯಾರೆಕ್ಟರ್ ಗಳು, ಜಾಗ ಎಲ್ಲವನ್ನು ಕೇಳಿದ್ದಂತೆ ಒದಗಿಸಿಕೊಟ್ಟಿದ್ದಾರೆ. ಯಾವುದಕ್ಕೂ ಕಾಂಪ್ರೊಮೈಸ್ ಆಗುವ ಸಂಭವವೇ ಬಂದಿಲ್ಲ. ಒಬ್ಬ ಡೈರೆಕ್ಟರ್ ಏನ್ ನಿರೀಕ್ಷೆ ಮಾಡ್ತಾನೋ ಎಲ್ಲವನ್ನು ಒದಗಿಸಿದ್ದಾರೆ ಎಂಬ ಖುಷಿಯ ಮಾತುಗಳನ್ನಾಡಿದ್ದಾರೆ.

    ಶಿವ ತೇಜಸ್ ಕಥೆ – ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ‘ಶಿವಾರ್ಜುನ’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿದ್ದಾರೆ. ಅಮೃತಾ ಅಯ್ಯಂಗಾರ್ ಮತ್ತು ಅಕ್ಷತಾ ನಾಯಕಿಯರಾಗಿ ಅಭಿನಯಿಸಿದ್ದಾರೆ. ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಕವಿರಾಜ್, ಯೋಗರಾಜ್ ಭಟ್ ಮತ್ತು ವಿ ನಾಗೇಂದ್ರ ಪ್ರಸಾದರ ಸಾಹಿತ್ಯದಲ್ಲಿ ಮೂಡಿ ಬಂದಿರುವ ಹಾಡುಗಳಿಗೆ ಸುರಾಗ್, ಸಾಧು ಕೋಕಿಲಾ ಸಂಗೀತ ನೀಡಿದ್ದಾರೆ. ಹೆಚ್.ಸಿ.ವೇಣು ಛಾಯಾಗ್ರಹಣ ಮತ್ತು ಕೆ.ಎಂ ಪ್ರಕಾಶ್ ಸಂಕಲನವಿದೆ. ನಾಳೆ ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರಲಿದೆ. ಇಡೀ ಫ್ಯಾಮಿಲಿ ಸಮೇತ ಕುಳಿತು ನೋಡುವಂತ ಕಂಟೆಂಟ್ ಸಿನಿಮಾದಲ್ಲಿದ್ದು, ವಾರಾಂತ್ಯಕ್ಕೆ ಒಂದೊಳ್ಳೆ ಸಿನಿಮಾ ನೋಡಿದ ಭಾವ ಮೂಡುವುದರಲ್ಲಿ ಸಂಶಯವಿಲ್ಲ.

  • ‘ಬಿಲ್ ಗೇಟ್ಸ್’ ಆಗ ಹೊರಟವರ ಅವಾಂತರ ನೋಡಿ ನಕ್ಕ ಪ್ರೇಕ್ಷಕ!

    ‘ಬಿಲ್ ಗೇಟ್ಸ್’ ಆಗ ಹೊರಟವರ ಅವಾಂತರ ನೋಡಿ ನಕ್ಕ ಪ್ರೇಕ್ಷಕ!

    ಚಿಕ್ಕಣ್ಣ, ಶಿಶಿರ್ ಶಾಸ್ತ್ರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರೋ ‘ಬಿಲ್ ಗೇಟ್ಸ್’ ಚಿತ್ರ ಇಂದು ಬಿಡುಗಡೆಯಾಗಿದೆ. ಚಿತ್ರದ ಸ್ಯಾಂಪಲ್‍ಗಳಿಂದ ಗಮನ ಸೆಳೆದಿದ್ದ ಈ ಚಿತ್ರ ಪ್ರೇಕ್ಷಕರನ್ನು ನಕ್ಕು ನಗಿಸುತ್ತಾ ಮನರಂಜನೆ ನೀಡುವಲ್ಲಿ ಯಶಸ್ವಿಯಾಗಿದೆ.

    ಬಿಲ್ ಗೇಟ್ಸ್ ನಂತೆ ಆಗರ್ಭ ಶ್ರೀಮಂತನಾಗಬೇಕೆಂದು ಕನಸು ಯಾರು ಕಾಣೋದಿಲ್ಲ ಹೇಳಿ. ಹಾಗೇಯೇ ಕನಸು ಕಂಡ ಹಳ್ಳಿ ಹುಡುಗರೇ ಚಿಕ್ಕಣ್ಣ, ಶಿಶಿರ್. ಬಿಲ್ ಗೇಟ್ಸ್ ನಂತೆ ಆಗರ್ಭ ಶ್ರೀಮಂತರಾಗಬೇಕೆಂದು ಸಿಟಿ ಬಸ್ಸು ಹತ್ತೋ ಹುಡುಗರು ಶ್ರೀಮಂತರಾಗಲು ಏನೆಲ್ಲ ಸರ್ಕಸ್ ಮಾಡ್ತಾರೆ, ಆ ಸರ್ಕಸ್ ನಲ್ಲಿ ಏನೆಲ್ಲ ರಿಸ್ಕ್ ಅನುಭವಿಸುತ್ತಾರೆ ಅನ್ನೋದನ್ನ ಕಾಮಿಡಿ ಮುಖಾಂತರ ಹೇಳ ಹೊರಟಿದ್ದಾರೆ ನಿರ್ದೇಶಕ ಶ್ರೀನಿವಾಸ.

    ನಗುವಿನ ಜೊತೆ ಸಾಮಾಜಿಕ ಮೌಲ್ಯವನ್ನು ಹೇಳೋ ಈ ಚಿತ್ರ ಪ್ರೇಕ್ಷಕರ ಮನಸ್ಸಿಗೆ ಇಷ್ಟವಾಗಿದೆ. ಚಿಕ್ಕಣ್ಣ, ಶಿಶಿರ್ ತರ್ಲೆ, ಪೇಚಾಟಗಳು ತೆರೆ ಮೇಲೆ ನೋಡಲು ಮಜವಾಗಿದೆ. ಇನ್ನು ಕಾಮಿಡಿ ಜೊತೆ ಲವ್ ಕಹಾನಿಯೂ ಚಿತ್ರದಲ್ಲಿದ್ದು ನೋಡುಗರಿಗೆ ಬಿಲ್ ಗೇಟ್ಸ್ ಮನರಂಜನೆಯನ್ನು ನೀಡೋದ್ರಲ್ಲಿ ಮೇಲುಗೈ ಸಾಧಿಸಿದೆ.

    ಚಿಕ್ಕಣ್ಣ, ಶಿಶಿರ್ ಶಾಸ್ತ್ರಿ ಅಭಿನಯ ಚೆನ್ನಾಗಿ ಮೂಡಿ ಬಂದಿದೆ. ಉಳಿದಂತೆ ಎಲ್ಲಾ ಕಲಾವಿದರು ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದು ನೋಬಿನ್ ಪೌಲ್ ಸಂಗೀತ, ತಿಲಕ್ ಕ್ಯಾಮೆರಾ ವರ್ಕ್ ಗಮನ ಸೆಳೆಯುತ್ತೆ.

    ಚಿತ್ರ: ಬಿಲ್ ಗೇಟ್ಸ್
    ನಿರ್ದೇಶನ: ಶ್ರೀನಿವಾಸ
    ಸಂಗೀತ: ನೋಬಿಲ್ ಪೌಲ್
    ಛಾಯಾಗ್ರಹಣ: ತಿಲಕ್
    ತಾರಾಬಳಗ: ಚಿಕ್ಕಣ್ಣ, ಶಿಶಿರ್ ಶಾಸ್ತ್ರಿ, ಅಕ್ಷರ ರೆಡ್ಡಿ, ರಶ್ಮಿಕಾ ರೋಜಾ, ಕುರಿ ಪ್ರತಾಪ್, ಇತರರು.

    ರೇಟಿಂಗ್: 3.5/5

  • ರನ್ನರ್ ಅಪ್‍ಗೆ 6 ಲಕ್ಷ, ದೀಪಿಕಾಗೂ 6 ಲಕ್ಷ ರೂ. ಬಹುಮಾನ

    ರನ್ನರ್ ಅಪ್‍ಗೆ 6 ಲಕ್ಷ, ದೀಪಿಕಾಗೂ 6 ಲಕ್ಷ ರೂ. ಬಹುಮಾನ

    ಬೆಂಗಳೂರು: ಮೂರು ತಿಂಗಳು ಕನ್ನಡದ ವೀಕ್ಷಕರಿಗೆ ಮನರಂಜನೆಯ ರಸದೌತಣ ಉಣ ಬಡಿಸಿದ್ದ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಅದ್ಧೂರಿಯಾಗಿ ಮುಗಿದಿದೆ. ವಿನ್ನರ್ ಆಗಿ ನಟ ಶೈನ್ ಶೆಟ್ಟಿ ಹೊರಹೊಮ್ಮಿದ್ದಾರೆ. ಹ್ಯಾಸ ನಟ ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

    ಭಾನುವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಬಿಗ್‍ಬಾಸ್ ವೇದಿಕೆಯಲ್ಲಿ ನಟ ಕಿಚ್ಚ ಸುದೀಪ್ ತಮ್ಮ ಎಡಗಡೆ ನಿಂತಿದ್ದ ಶೈನ್ ಶೆಟ್ಟಿ ಕೈಯನ್ನು ಎತ್ತಿ ವಿಜೇತರೆಂದರು ಘೋಷಿಸಿದ್ದಾರೆ. ಬಲಗಡೆ ನಿಂತಿದ್ದ ಕುರಿ ಪ್ರತಾಪ್ ರನ್ನರ್ ಆಗಿ ಹೊರಹೊಮ್ಮಿದ್ದಾರೆ. ಕುರಿ ಪ್ರತಾಪ್ ಅವರು ತಮ್ಮ ಕಾಮಿಡಿ ಮೂಲಕ ಬಿಗ್ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡಿದ್ದರು. ಈ ಮೂಲಕ ಸಾಕಷ್ಟು ಅಭಿಮಾನಿಗಳು ಗಳಿಸಿಕೊಂಡಿದ್ದಾರೆ.

    ‘ಬಿಗ್‍ಬಾಸ್ ಸೀಸನ್ 7’ ರ ರನ್ನರ್ ಅಪ್ ಆಗಿದ್ದ ಕುರಿ ಪ್ರತಾಪ್‍ಗೆ ಆರು ಲಕ್ಷ ಬಹುಮಾನ ಸಿಕ್ಕಿದೆ. ರನ್ನರ್ ಅಪ್ ಕುರಿ ಪ್ರತಾಪ್‍ಗೆ ಇಂಡಸ್ಟ್ರಿ 555 ಡಿ. ಟಿಎಂಟಿ ಕಂಪನಿಯಿಂದ ಒಂದು ಲಕ್ಷ ರೂ. 7 ಅಪ್ ಕಡೆಯಿಂದ 5 ಲಕ್ಷ ರೂ. ಬಹುಮಾನ ಸಿಕ್ಕಿದೆ. ಹೀಗಾಗಿ ಒಟ್ಟಾಗಿ 6 ಲಕ್ಷ ರೂ. ಕುರಿ ಪ್ರತಾಪ್‍ಗೆ ಸಿಕ್ಕಿದೆ. ಇತ್ತ ಶನಿವಾರ ಬಿಗ್‍ಬಾಸ್ ಮನೆಯಿಂದ ಎಲಿಮಿನೇಟ್ ಆದ ದೀಪಿಕಾ ದಾಸ್‍ಗೂ 6 ಲಕ್ಷ ರೂ. ಬಹುಮಾನ ಸಿಕ್ಕಿದೆ.

    ಬಿಗ್‍ಬಾಸ್ ಸ್ಪರ್ಧಿಗಳಿಗೆ ‘ಇಂಡಿಯಾ ಗೇಟ್ ಬಾಸ್ಮತಿ ರೈಸ್’ ಅವರು ಸಂಕ್ರಾಂತಿ ಹಬ್ಬಕ್ಕಾಗಿ ಸ್ಪೆಷಲ್ ಊಟ ಕಳುಹಿಸಿದ್ದರು. ಆಗ ಸ್ಪರ್ಧಿಗಳು ಒಂದು ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ಕಂಪನಿಗೆ ಧನ್ಯವಾದ ತಿಳಿಸಿದ್ದರು. ಆ ಹಾಡನ್ನು ಕಂಪನಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಆ ಹಾಡಿನಲ್ಲಿ ಅಧಿಕ ವೋಟ್ ದೀಪಿಕಾ ದಾಸ್‍ಗೆ ಬಂದಿತ್ತು. ಹೀಗಾಗಿ ಕಂಪನಿ ಅವರಿಗೆ 5 ಲಕ್ಷ ರೂ. ಬಹುಮಾನ ಕೊಟ್ಟಿದೆ. ಇದಲ್ಲದೇ ‘ಬಿಗ್‍ಬಾಸ್ ಸೀಸನ್ 7’ ಐದು ಫೈನಲಿಸ್ಟ್ ಗಳಲ್ಲಿ ದೀಪಿಕಾ ದಾಸ್ ಒಬ್ಬರಾಗಿದ್ದರಿಂದ 1 ಲಕ್ಷ ರೂ. ಬಹುಮಾನ ಸಿಕ್ಕಿದೆ. ಹೀಗಾಗಿ ದೀಪಿಕಾ ದಾಸ್‍ಗೆ ಒಟ್ಟಾಗಿ 6 ಲಕ್ಷ ರೂ. ಬಹುಮಾನ ಸಿಕ್ಕಿದೆ.

    ದೀಪಿಕಾ ದಾಸ್ ಬಿಗ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಜೊತೆಗೆ ಯಾವುದೇ ಟಾಸ್ಕ್ ಇದ್ದರೂ ಕೂಡ ಉತ್ತಮವಾಗಿ ಆಟವಾಡುತ್ತಿದ್ದರು. ಆಟದ ಜೊತೆಗೆ ಬಿಗ್‍ಬಾಸ್ ಮನೆಯಲ್ಲಿ ತುಂಬಾ ಚೆನ್ನಾಗಿ ಅಡುಗೆ ಮಾಡುತ್ತಿದ್ದರು. ಆದರೆ ಬಿಗ್‍ಬಾಸ್ ಮುಗಿಯುವ ಹಂತದಲ್ಲಿ ದೀಪಿಕಾ ಸ್ವಲ್ಪ ಸೈಲೆಂಟ್ ಆಗಿದ್ದರು. ಆದರೂ ದೀಪಿಕಾ ದಾಸ್ ಅಪಾರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ.

  • ಆಲ್‍ರೌಂಡರ್ ಶೈನ್ ಬಿಗ್ ಮನೆಯ ವಿನ್ನರ್

    ಆಲ್‍ರೌಂಡರ್ ಶೈನ್ ಬಿಗ್ ಮನೆಯ ವಿನ್ನರ್

    ಬೆಂಗಳೂರು: ಬಿಗ್‍ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದು, ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

    ಬಿಗ್‍ಬಾಸ್ ವೇದಿಕೆಯಲ್ಲಿ ಭಾನುವಾರ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ನಟ ಕಿಚ್ಚ ಸುದೀಪ್ ಅವರು ತಮ್ಮ ಎಡಗಡೆ ನಿಂತಿದ್ದ ಶೈನ್ ಶೆಟ್ಟಿ ಅವರ ಕೈಯನ್ನು ಎತ್ತಿ ವಿಜೇತರೆಂದರು ಘೋಷಿಸಿದರು. ಇದೇ ವೇಳೆ ಸುದೀಪ್ ಬಲಕ್ಕೆ ನಿಂತಿದ್ದ ಪ್ರಬಲ ಸ್ಪರ್ಧಿ ಕುರಿ ಪ್ರತಾಪ್  ರನ್ನರ್ ಅಪ್ ಆದರು.

    18 ಬಿಗ್ ಸ್ಪರ್ಧಿಗಳಿಂದ ಆರಂಭವಾಗಿದ್ದ ಬಿಗ್ ಬಾಸ್ ಸೀಸನ್ 7ನಲ್ಲಿ ಅಂತಿಮ ವಾರದಲ್ಲಿ 5 ಸ್ಪರ್ಧಿಗಳು ಉಳಿದುಕೊಂಡಿದ್ದರು. 113 ದಿನಗಳನ್ನು ಕಳೆದಿರುವ ವಿನ್ನರ್ ಶೈನ್ ಶೆಟ್ಟಿ ಅವರಿಗೆ ನಿಗದಿ ಪಡಿಸಿದ್ದ 50 ಲಕ್ಷ ರೂ. ಹಾಗೂ ಸಂಭಾವನಿ ಮೊತ್ತವಾಗಿ 11 ಸೇರಿ ಒಟ್ಟು 61 ಲಕ್ಷ ರೂ. ನೀಡಲಾಗಿದೆ. ಅದರೊಂದಿಗೆ ಬಿಗ್ ಬಾಸ್ ಸೀಸನ್ 7 ವಿನ್ನರ್ ಪಟ್ಟ ದೊರೆತಿದೆ. ಕುರಿ ಪ್ರತಾಪ್ ಅವರಿಗೆ ರನ್ನರ್ ಕಿರೀಟ ದೊರೆಯಲಿದೆ.

    ಶೈನ್, ವಾಸುಕಿ ಮತ್ತು ಕುರಿ ಪ್ರತಾಪ್ ಮಧ್ಯೆ ಭರ್ಜರಿ ಸ್ಪರ್ಧೆ ನಡೆದಿತ್ತು. ಟಾಪ್ 2ನಲ್ಲಿ ವಾಸುಕಿ ವೈಭವ್ ಇರುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ ಅವರು ಭೂಮಿ, ದೀಪಿಕಾ ದಾಸ್ ಬಳಿಕ ಭಾನುವಾರದ ಗ್ರ್ಯಾಂಡ್ ಫಿನಾಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರ ಬಂದರು. ಹೀಗಾಗಿ ವಾಸುಕಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

    ಕುರಿ ಪ್ರತಾಪ್ ಅವರು ತಮ್ಮ ಕಾಮಿಡಿ ಮೂಲಕ ಬಿಗ್ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡಿದ್ದರು. ಈ ಮೂಲಕ ಸಾಕಷ್ಟು ಅಭಿಮಾನಿಗಳು ಗಳಿಸಿಕೊಂಡಿದ್ದಾರೆ. ಇತ್ತ ಶೈನ್ ಶೆಟ್ಟಿ ಅವರಿಗೂ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಹೀಗಾಗಿ ಇಬ್ಬರ ಮಧ್ಯೆ ಬಿಗ್ ಪೈಟ್ ನಡೆದಿತ್ತು. ಕೊನೆಗೆ ಆಲ್‍ರೌಂಡರ್ ಶೈನ್ ಶೆಟ್ಟಿ ಬಿಗ್ ಬಾಸ್ ಕನ್ನಡ 7ರ ವಿನ್ನರ್ ಆಗಿ ಶೈನ್ ಶೆಟ್ಟಿ ಹೊರ ಹೊಮ್ಮಿದ್ದಾರೆ.

  • ಮಗಳಿಗೆ ವಾರ್ನ್ ಮಾಡಿ ಪ್ರತಾಪ್‍ಗೆ ಧನ್ಯವಾದ ತಿಳಿಸಿದ ಪ್ರಿಯಾಂಕಾ ತಾಯಿ

    ಮಗಳಿಗೆ ವಾರ್ನ್ ಮಾಡಿ ಪ್ರತಾಪ್‍ಗೆ ಧನ್ಯವಾದ ತಿಳಿಸಿದ ಪ್ರಿಯಾಂಕಾ ತಾಯಿ

    ಬೆಂಗಳೂರು: ಬಿಗ್ ಬಾಸ್ ಮನೆಗೆ ಪ್ರಿಯಾಂಕಾ ಅವರ ತಾಯಿ ಎಂಟ್ರಿ ಕೊಟ್ಟಿದ್ದು, ಈ ವೇಳೆ ತಮ್ಮ ಮಗಳಿಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಕುರಿ ಪ್ರತಾಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

    ಮಂಗಳವಾರ ಮಧ್ಯರಾತ್ರಿ ಪ್ರಿಯಾಂಕಾ ಅವರ ತಾಯಿ ಸುಕನ್ಯ ಬಿಗ್ ಬಾಸ್ ಮನೆಗೆ ಆಗಮಿಸಿದ್ದರು. ಈ ವೇಳೆ ಪ್ರಿಯಾಂಕಾ ಜೊತೆ ಮಾತನಾಡಿದ ಅವರು ಮಗಳಿಗೆ ಭೂಮಿ ಜೊತೆ ಪದೇ ಪದೇ ಜಗಳ ಮಾಡ್ಕೋಬೇಡ ಎಂದು ಸಲಹೆ ನೀಡಿದರು. ಪ್ರಿಯಾಂಕಾ ಹಾಗೂ ಭೂಮಿ ಮೊದಲ ವಾರದಿಂದ ಆತ್ಮೀಯ ಸ್ನೇಹಿತರಾಗಿದ್ದು, ಬಳಿಕ ಇಬ್ಬರ ನಡುವೆ ಅಂತರ ಶುರುವಾಯಿತು. ಇದನ್ನು ಗಮನಿಸಿದ ಸುಕನ್ಯ ಅವರು ನನ್ನ ಮಗಳಿಗೆ ಜಗಳವಾಡಬೇಡ, ಕೋಪ ಕಂಟ್ರೋಲ್ ಮಾಡ್ಕೋ ಎಂದು ಹೇಳಿದ್ದಾರೆ.

    ಭೂಮಿ ಜೊತೆ ಮಾತನಾಡಿದ ಬಳಿಕ ಸುಕನ್ಯ ಅವರು ಕುರಿ ಪ್ರತಾಪ್ ಅವರನ್ನು ಹೊಗಳಿದ್ದಾರೆ. ಪ್ರಿಯಾಂಕಾ ಅವರ ತಂದೆ ನಿಧನರಾಗಿ ನಾಲ್ಕು ತಿಂಗಳಾಗಿದೆ. ಈ ಕಾರಣಕ್ಕಾಗಿ ಸುಕನ್ಯ ಅವರು ಪ್ರತಾಪ್ ಅವರ ಬಳಿ ಬಂದು ನಿಮ್ಮಿಂದ ನನ್ನ ಮಗಳು ತನ್ನ ತಂದೆಯನ್ನು ಕಳೆದುಕೊಂಡ ನೋವನ್ನು ಮರೆಯುತ್ತಿದ್ದಾಳೆ ಎಂದು ಅವರಿಗೆ ಧನ್ಯವಾದ ತಿಳಿಸಿದರು. ಸುಕನ್ಯ ಅವರ ಈ ನಡುವಳಿಕೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

  • ಪ್ರಿಯಾಂಕಾಗೆ ಧನ್ಯವಾದ ತಿಳಿಸಿದ ಕುರಿ ಪ್ರತಾಪ್ ಪತ್ನಿ

    ಪ್ರಿಯಾಂಕಾಗೆ ಧನ್ಯವಾದ ತಿಳಿಸಿದ ಕುರಿ ಪ್ರತಾಪ್ ಪತ್ನಿ

    ಬೆಂಗಳೂರು: ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

    ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ ಪ್ರಿಯಾಂಕಾ ಅವರ ಬಳಿ ಹೋಗಿ ಧನ್ಯವಾದ ತಿಳಿಸಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿ ಪ್ರತಾಪ್ ಹಾಗೂ ಪ್ರಿಯಾಂಕಾ ಆತ್ಮೀಯ ಸ್ನೇಹಿತರು. ಪ್ರಿಯಾಂಕಾ ಯಾವಾಗಲೂ ಪ್ರತಾಪ್ ಅವರನ್ನು ಕೇರ್ ಮಾಡುತ್ತಿರುತ್ತಾರೆ. ಅಲ್ಲದೆ ಆ ಬಟ್ಟೆ ಹಾಕಿ ನೀವು ಚೆನ್ನಾಗಿ ಕಾಣುತ್ತೀರಾ, ಚೆನ್ನಾಗಿ ಊಟ ಮಾಡಿ ಎಂದು ಟಿಪ್ಸ್ ಕೂಡ ನೀಡುತ್ತಿರುತ್ತಾರೆ. ಇದನ್ನೆಲ್ಲಾ ಗಮನಿಸಿದ ಸರಿತಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಪ್ರಿಯಾಂಕಾ ಅವರ ಬಳಿ ಹೋಗಿ ನೀವು ಪ್ರತಾಪ್ ಅವರನ್ನು ತುಂಬಾ ಕೇರ್ ಮಾಡುತ್ತಿದ್ದೀರಾ, ಧನ್ಯವಾದಗಳು ಎಂದು ಹೇಳಿದ್ದಾರೆ.

    ಪ್ರತಾಪ್ ಅವರ ಪತ್ನಿ ಜೊತೆ ಇಬ್ಬರು ಮಕ್ಕಳು ಕೂಡ ಆಗಮಿಸಿದ್ದು, ತಮ್ಮ ತಂದೆಗಾಗಿ ಉಡುಗೊರೆಯನ್ನು ನೀಡಿದ್ದರು. ಸರಿತಾ ಹಾಗೂ ಮಕ್ಕಳು ಮನೆಯಿಂದ ಹೊರಟು ಹೋದ ಮೇಲೆ ಪ್ರತಾಪ್ ರೂಮಿನಲ್ಲಿ ಕುಳಿತು ತಮ್ಮ ಮಕ್ಕಳು ನೀಡಿದ ಗಿಫ್ಟ್ ಅನ್ನು ನೋಡಿ ಭಾವುಕರಾದರು. ಈ ವೇಳೆ ಪ್ರಿಯಾಂಕಾ ಅಲ್ಲಿಗೆ ಬಂದು ಕುರಿ ಪ್ರತಾಪ್ ಅವರನ್ನು ಸಮಾಧಾನ ಮಾಡಿದ್ದಾರೆ.