Tag: ಕುಲ್ದೀಪ್ ಸಿಂಗ್ ಸೆಂಗಾರ್ ಬಿಜೆಪಿ ಶಾಸಕರು

  • ಶ್ರೀರಾಮನಿಂದ್ಲೂ ರೇಪ್ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ- ಬಿಜೆಪಿ ಶಾಸಕ ಸುರೇಂದ್ರ ಸಿಂಗ್

    ಶ್ರೀರಾಮನಿಂದ್ಲೂ ರೇಪ್ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ- ಬಿಜೆಪಿ ಶಾಸಕ ಸುರೇಂದ್ರ ಸಿಂಗ್

    ಲಕ್ನೋ: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಮರ್ಯಾದಾ ಪುರುಷ ಶ್ರೀರಾಮನಿಂದಲೂ ಇದಕ್ಕೆ ಅಂತ್ಯ ಹಾಡಲು ಸಾಧ್ಯವಿಲ್ಲ ಅಂತ ಉತ್ತರಪ್ರದೇಶದ ಬೈರಿಯಾ ಜಿಲ್ಲೆಯ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿವೆ ಎಂಬ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಸ್ವತಃ ಶ್ರೀರಾಮನೇ ಭೂಮಿಗೆ ಬಂದ್ರೂ ಅತ್ಯಾಚಾರದಂತಹ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ. ಈ ಮಾತನ್ನು ನಾನು ಸಂಪೂರ್ಣ ವಿಶ್ವಾಸದಿಂದ ಹೇಳುತ್ತಿದ್ದೇನೆ ಅಂದ್ರು.

    ಅತ್ಯಾಚಾರ ಎಂಬುದು ನೈಸರ್ಗಿಕ ಮಾಲಿನ್ಯವಾಗಿದೆ. ತಮ್ಮ ಕುಟುಂಬದವರಂತೆ ತಮ್ಮ ಸಹೋದರಿಯರಂತೆ ಇತರ ಕುಟುಂಬದ ಹೆಣ್ಣುಮಕ್ಕಳನ್ನು ಪರಿಗಣಿಸುವುದು ಜನರ ಜವಾಬ್ದಾರಿ. ಸಮಾಜದಲ್ಲಿ ಕೆಲವೊಂದು ಉತ್ತಮ ಮೌಲ್ಯಗಳನ್ನು ಹುಟ್ಟುಹಾಕುವ ಮೂಲಕ ಮಾತ್ರ ಇಂತಹ ಘಟನೆಗಳನ್ನು ನಿಯಂತ್ರಿಸಬಹುದೇ ಹೊರತು ಸಂವಿಧಾನದಿಂದ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

    ಸಿಂಗ್ ಅವರು ವಿವಾದಾತ್ಮಕ ಹೇಳಿಕೆ ನೀಡುವುದು ಇದೇ ಮೊದಲೇನಲ್ಲ. ಈ ಹಿಂದೆ `ಸರ್ಕಾರಿ ಅಧಿಕಾರಿಗಳಿಗಿಂತ ವೇಶ್ಯೆಯರೇ ಉತ್ತಮ’ ಎಂದು ಹೇಳಿಕೆ ನೀಡಿ ಸುದ್ದಿಯಾಗಿದ್ದರು.

    ಅತ್ಯಾಚಾರ ಪ್ರಕರಣಗಳಿಗೆ ಪೋಷಕರು ಮತ್ತು ಹದಿಹರೆಯದವರು ಸ್ಮಾಟ್ ಫೋನ್ ಗಳನ್ನು ಬಳಸುವುದೇ ಪ್ರಮುಖ ಕಾರಣ ಎಂದು ಆರೋಪಿಸಿದ್ದರು. ಇತ್ತೀಚೆಗೆ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿ ಸಿಟಾಪುರ ಜೈಲಿನಲ್ಲಿರುವ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್, ಮೂರು ಮಕ್ಕಳ ತಾಯಿಯನ್ನು ಯಾರೂ ಅತ್ಯಾಚಾರ ಮಾಡಬಾರದು. ಅದು ಸಾಧ್ಯವಿಲ್ಲ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.