Tag: ಕುಷ್ಕಾ

  • ನಾನ್‍ವೆಜ್ ಪ್ರಿಯರ ಆಲ್‍ಟೈಮ್ ಫೇವರೆಟ್ ‘ಕುಷ್ಕಾ’ ಮಾಡುವ ರೆಸಿಪಿ

    ನಾನ್‍ವೆಜ್ ಪ್ರಿಯರ ಆಲ್‍ಟೈಮ್ ಫೇವರೆಟ್ ‘ಕುಷ್ಕಾ’ ಮಾಡುವ ರೆಸಿಪಿ

    ನಾನ್‍ವೆಜ್ ಪ್ರಿಯರಿಗೆ ಕುಷ್ಕಾ ಮಾಡುವ ವಿಧಾನ ತುಂಬಾ ಸುಲಭವಾಗಿದೆ. ಇದು ಎಲ್ಲ ನಾನ್‍ವೆಜ್ ಪ್ರಿಯರಿಗೆ ತುಂಬಾ ಇಷ್ಟವಾದ ಪಾಕವಿಧಾನವಾಗಿದೆ. ‘ಕುಷ್ಕಾ’ ತಿನ್ನಲು ಇಷ್ಟಪಡದವರೂ ಸಹ ಇಂದು ನಾವು ಹೇಳಿಕೊಡುವ ರೆಸಿಪಿ ಮಾಡಿ ಸವಿದ್ರೆ, ಇಷ್ಟಪಡುತ್ತಾರೆ.

    ಬೇಕಾಗಿರುವ ಪದಾರ್ಥಗಳು:
    * ಬಾಸ್ಮತಿ ಅಕ್ಕಿ – 1 ಕಪ್
    * ನೀರು – 2 ಕಪ್
    * ಕಟ್ ಮಾಡಿದ ಈರುಳ್ಳಿ – 1 ಕಪ್
    * ಕಟ್ ಮಾಡಿದ ಟೊಮೆಟೊ – ಅರ್ಧ ಕಪ್


    * ಹಸಿರು ಮೆಣಸಿನಕಾಯಿ – 1
    * ಎಣ್ಣೆ – 2 ಟೀಸ್ಪೂನ್
    * ದಾಲ್ಚಿನ್ನಿ – 1
    * ಲವಂಗ – 4
    * ಏಲಕ್ಕಿ – 3
    * ಮೊಸರು – 2 ಟೀಸ್ಪೂನ್
    * ರೆಡ್ ಚಿಲ್ಲಿ ಪೌಡರ್ – 2 ಟೀಸ್ಪೂನ್


    * ಅರಿಶಿನ ಪುಡಿ – 1 ಟೀಸ್ಪೂನ್
    * ಕೊತ್ತಂಬರಿ ಸೊಪ್ಪು – 2 ಟೀಸ್ಪೂನ್
    * ಪುದೀನ ಸೊಪ್ಪು – 1 ಕಪ್
    * ಅಗತ್ಯವಿರುವಷ್ಟು ಉಪ್ಪು
    * ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 2 ಟೀಸ್ಪೂನ್
    * ಹಸಿರು ಮೆಣಸಿನಕಾಯಿ – 2

    ಮಾಡುವ ವಿಧಾನ:
    * ಬಾಸ್ಮತಿ ಅಕ್ಕಿಯನ್ನು 2 ಕಪ್ ನೀರಿನಲ್ಲಿ ತೊಳೆದು 15-20 ನಿಮಿಷಗಳ ಕಾಲ ನೆನೆಸಿಡಿ. ಕುಷ್ಕಾ ಮಸಾಲಾ ಪೇಸ್ಟ್‌ಗೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಹಸಿರು ಮೆಣಸಿನಕಾಯಿ, ದಾಲ್ಚಿನ್ನಿ, ಏಲಕ್ಕಿ, ಲವಂಗ ಎಲ್ಲವನ್ನು ಸರಿಯಾಗಿ ಮಿಶ್ರಣ ಮಾಡಿ ಪೇಸ್ಟ್ ರೆಡಿ ಮಾಡಿಕೊಳ್ಳಿ.
    * ಬಾಣಲೆ ಬಿಸಿ ಮಾಡಿ ಎಣ್ಣೆ ಹಾಕಿ. ಮೆಂತ್ಯ ಎಲೆ, ಲವಂಗ, ಏಲಕ್ಕಿ ಮತ್ತು ದಾಲ್ಚಿನ್ನಿ ಸೇರಿಸಿ. ಕೆಲವು ಸೆಕೆಂಡುಗಳ ಕಾಲ ಫ್ರೈ ಮಾಡಿ.
    * ನಂತರ ಕಟ್ ಮಾಡಿದ ಈರುಳ್ಳಿ, ಟೊಮೆಟೊ ಜೊತೆಗೆ ಹಸಿರು ಮೆಣಸಿನಕಾಯಿಯನ್ನು ಸೇರಿಸಿ ಫ್ರೈ ಮಾಡಿ.
    * ಮಸಾಲಾ ಮಿಶ್ರಣವನ್ನು ಪೇಸ್ಟ್ ಅನ್ನು ಹಾಕಿ, ಹಸಿ ವಾಸನೆ ಹೋಗುವವರೆಗೆ ಕೆಲವು ನಿಮಿಷಗಳ ಕಾಲ ಫ್ರೈ ಮಾಡಿ.
    * ನಂತರ ಅದಕ್ಕೆ ಅರಿಶಿನ ಪುಡಿ, ಕೆಂಪು ಮೆಣಸಿನ ಪುಡಿ ಮತ್ತು ಅಗತ್ಯಕ್ಕೆ ಉಪ್ಪು ಸೇರಿಸಿ. 2-3 ನಿಮಿಷಗಳ ಕಾಲ ಫ್ರೈ ಮಾಡಿ.
    * ಮೊಸರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ, ಒಂದೆರಡು ನಿಮಿಷ ಬೇಯಿಸಿ. ಈಗ ಸಣ್ಣಗೆ ಕತ್ತರಿಸಿದ ಪುದೀನಾ ಮತ್ತು ಕೊತ್ತಂಬರಿ ಸೊಪ್ಪು ಸೇರಿಸಿ ಫ್ರೈ ಮಾಡಿ.

    * ನಂತರ ನೆನೆಸಿದ ಬಾಸ್ಮತಿ ಅಕ್ಕಿಯಿಂದ ನೀರನ್ನು ಸುರಿಯಿರಿ ಮತ್ತು ಅಗತ್ಯವಿದ್ದರೆ ಉಪ್ಪನ್ನು ಹಾಕಿ. ನೀರು ಕುದಿಯಲು ಪ್ರಾರಂಭಿಸಿದಾಗ, ನೆನೆಸಿದ ಬಾಸ್ಮತಿ ಅಕ್ಕಿಯನ್ನು ಸೇರಿಸಿ ಚೆನ್ನಾಗಿ ಫ್ರೈ ಮಾಡಿ.
    * ಪ್ಯಾನ್ ಅನ್ನು ಮುಚ್ಚಳದಿಂದ ಮುಚ್ಚಿ ಮತ್ತು ಕಡಿಮೆ ಉರಿಯಲ್ಲಿ 12-15 ನಿಮಿಷ ಬೇಯಿಸಿ.
    * ಶಾಖವನ್ನು ಆಫ್ ಮಾಡಿ ಮತ್ತು ಅದನ್ನು ತೆರೆಯುವ ಮೊದಲು 5-10 ನಿಮಿಷಗಳ ಕಾಲ ಬಿಡಿ.

    – ಕುಷ್ಕಾ ಈಗ ಸವಿಯಲು ಸಿದ್ಧವಾಗಿದ್ದು, ಈರುಳ್ಳಿ ಮತ್ತು ರೈಯಿತಾ ಜೊತೆಗೆ ಬಿಸಿಯಾಗಿ ಬಡಿಸಿ.

    Live Tv
    [brid partner=56869869 player=32851 video=960834 autoplay=true]

  • ನಾವು ಗಂಡಸರು ಮಾತಾಡಲು ಶುರು ಮಾಡಿದ್ರೆ, ಅವ್ರೆಲ್ಲಾ ಆತ್ಮಹತ್ಯೆ ಮಾಡ್ಕೋಬೇಕಾಗುತ್ತೆ: ಗುರುಪ್ರಸಾದ್

    ನಾವು ಗಂಡಸರು ಮಾತಾಡಲು ಶುರು ಮಾಡಿದ್ರೆ, ಅವ್ರೆಲ್ಲಾ ಆತ್ಮಹತ್ಯೆ ಮಾಡ್ಕೋಬೇಕಾಗುತ್ತೆ: ಗುರುಪ್ರಸಾದ್

    ಬೆಂಗಳೂರು: ಕೆಲವರು ಮೀಟೂ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡು ಪತಿವ್ರತೆಯವರಂತೆ ಪೋಸ್ ಕೊಡಲು ಹೊರಟ್ಟಿದ್ದಾರೆ. ನಾವು ಗಂಡಸರು ಮಾತಾಡಲು ಶುರು ಮಾಡಿದರೆ, ಅವರೆಲ್ಲಾ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ‘ಮಠ’ ಚಿತ್ರದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಮೀಟೂ ವೇದಿಕೆ ದುರ್ಬಳಕೆ ಮಾಡಿಕೊಂಡವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ‘ಕುಷ್ಕಾ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುರುಪ್ರಸಾದ್ ಅವರು, ಇಬ್ಬರು ತಮ್ಮ ಪತಿ, ಅತ್ತೆ, ಮಾವನ ಎದುರಿಗೆ ತಾವು ಪತಿವ್ರತೆಯರು ಅಂತ ಸಾಬೀತುಪಡಿಸಲು ಹೊರಟ್ಟಿದ್ದಾರೆ. ಯಾವಾಗಲೋ ಆಗಿದ್ದನ್ನು ಈಗ ಪ್ರತಿಕ್ರಿಯಿಸುವುದು ಸರಿಯಲ್ಲ. ಅವಕಾಶ ಸಿಗುವಾಗ ಹಾಗೂ ಕೆಲಸ ಮಾಡುವಾಗ ಸುಮ್ಮನಿದ್ದು, ಎರಡು ವರ್ಷಗಳ ನಂತರ ಮಾತನಾಡುವುದು ಸರಿಯಲ್ಲ ಎಂದು ಗುಡುಗಿದರು.

    ನಟಿ ಸಂಗೀತಾ ಭಟ್ ನೀಡಿರುವ ಹೇಳಿಕೆಗೂ ನನಗೂ ಸಂಬಂಧವಿಲ್ಲ. ಎರಡನೇ ಸಲ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿಯೇ ಎಲ್ಲಾ ಹೇಳಿದ್ದೀವಿ. ಬೆನ್ನು ತೋರಿಸುವ ಸೀನ್ ಶೂಟ್ ಮಾಡುವಾಗ ನನ್ನ ಹೆಂಡತಿ ಮತ್ತು ಮಗಳು ಅಲ್ಲೇ ಇದ್ದರು. ಯಾವುದೇ ರೀತಿಯ ಮುಜುಗರ ಆಗುವಂತಹ ಸನ್ನಿವೇಶ ಅಂದು ಆಗಿರಲಿಲ್ಲ ಎಂದು ಹೇಳಿದರು.

    ಸಂಗೀತಾ ಮೀಟೂ ಆರೋಪ ಮಾಡುವಾಗ ನಾನು ಯಾರನ್ನು ಉಲ್ಲೇಖಿಸಿ ಈ ಪೋಸ್ಟ್ ಹಾಕಿದ್ದೇನೆ ಎನ್ನುವುದನ್ನು ಹೇಳಲಿಲ್ಲ. ಹೀಗಾಗಿ ಈ ವಿಚಾರದ ಬಗ್ಗೆ ನಾನ್ಯಾಕೆ ಪ್ರತಿಕ್ರಿಯಿಸಲಿ. ಅವಕಾಶ ಬೇಕಿದ್ದಾಗ ಯಾವ ರೀತಿ ಇರುತ್ತಾರೆ ಹಾಗೂ ಬೆಳೆದಾಗ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವುದನ್ನು ನಾನು ನೋಡಿದ್ದೇನೆ. ದೊಡ್ಡ ದೊಡ್ಡ ನಟಿಯರ ಜೊತೆಗೂ ನಾನು ಕೆಲಸ ಮಾಡಿದ್ದೇನೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv