ಸಾಮಾಜಿಕ ಜಾಲತಾಣಗಳಲ್ಲಿ ತಿಮರೋಡಿ ಗಡಿಪಾರು ವಿರುದ್ಧ ಪ್ರತಿಭಟನೆ ಅಂತಾ ಕರೆ ನೀಡಲಾಗಿತ್ತು. ಪೊಲೀಸರಿಂದ ಅನುಮತಿ ಸಿಗದೇ ಇದ್ದರೂ ಜನ ಸೇರುವಂತೆ ಕರೆ ಕೊಡಲಾಗಿತ್ತು. ಇದರಿಂದ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು: ಧರ್ಮಸ್ಥಳ (Dharmasthala) ಬುರುಡೆ ಪ್ರಕರಣದಲ್ಲಿ ಸಾಕ್ಷಿದಾರನಾಗಿ ಬಂದು ಈಗ ಆರೋಪಿಯಾಗಿರುವ ಚಿನ್ನಯ್ಯನ (Chinnayya) ವಿರುದ್ಧ ದೂರು ನೀಡಲು ಬಂದಿದ್ದ ಸೌಜನ್ಯ ತಾಯಿ ಕುಸುಮಾವತಿಗೆ ಎಸ್ಐಟಿ ಭೇಟಿಯನ್ನು ನಿರಾಕರಿಸಲಾಗಿದೆ.
ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (SIT) ಭೇಟಿಯಾಗಲು ಇಂದು ಸೌಜನ್ಯ (Soujanya) ತಾಯಿ ಕುಸುಮಾವತಿ (Kusumavathi) ಆಗಮಿಸಿದ್ದರು.
ಈ ಪ್ರಶ್ನೆಗೆ ಅನುಮತಿ ಪಡೆದಿಲ್ಲ ಎಂದು ಉತ್ತರಿಸಿದ್ದಾರೆ. ಅನುಮತಿ ಪಡೆಯದ ಕಾರಣ ಭೇಟಿಗೆ ಅವಕಾಶವಿಲ್ಲ ಎಂದು ಹೇಳಿ ಅವರನ್ನು ವಾಪಸ್ ಕಳುಹಿಸಿದ್ದಾರೆ. ಪೊಲೀಸರು ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಕುಸುಮಾವತಿ ಕಾರಿನಿಂದ ಇಳಿಯದೇ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು.
ಯೂಟ್ಯೂಬ್ ವಾಹಿನಿಗಳಲ್ಲಿ ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ಕೆಲ ಸ್ಫೋಟಕ ವಿಚಾರಗಳನ್ನು ತಿಳಿಸಿದ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಸಾಕ್ಷಿಯಾಗಿ ಪರಿಗಣಿಸುವಂತೆ ದೂರು ನೀಡಲು ಬಂದಿದ್ದರು ಎನ್ನಲಾಗುತ್ತಿದೆ.
ಸೌಜನ್ಯ ಪ್ರಕರಣ ಎಸ್ಐಟಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣವನ್ನು ಮಾತ್ರ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತದೆ. ಸೌಜನ್ಯ ಪ್ರಕರಣದ ತನಿಖೆ ನಡೆಸುವುದಿಲ್ಲ ಎಂದು ತಿಳಿಸಿದ್ದರು.
ಮಂಗಳೂರು: ಹನ್ನೊಂದು ವರ್ಷಗಳ ಬಳಿಕ ಮತ್ತೆ ಮುನ್ನೆಲೆಗೆ ಬಂದ ಧರ್ಮಸ್ಥಳದ ಸೌಜನ್ಯಾ (Soujanya Murder Case) ಅತ್ಯಾಚಾರ, ಕೊಲೆ ಪ್ರಕರಣ ಇದೀಗ ಮುಂಜುನಾಥನ ಸನ್ನಿಧಿ ಬಳಿಯಲ್ಲಿರುವ ಅಣ್ಣಪ್ಪನ ಬೆಟ್ಟದವರೆಗೆ (Annappa Swamy Betta) ಹೋಗಿದೆ.
ಹೌದು. ಇಂದು ಸೌಜನ್ಯ ತಾಯಿ (Soujanya Mother Kusumavathi) ಹಾಗೂ ಆರೋಪ ಹೊತ್ತವರು ಕೂಡ ಅಣ್ಣಪ್ಪನ ಬೆಟ್ಟಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೊದಲು ನೇತ್ರಾವತಿಯಿಂದ ಧರ್ಮಸ್ಥಳದವರೆಗೆ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗಳ ಕಾರ್ಯಕರ್ತರು ಪಾದಯಾತ್ರೆ ನಡೆಸಿದ್ದಾರೆ. ಈ ಪಾದಯಾತ್ರೆಯಲ್ಲಿ ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಸೌಜನ್ಯ ತಾಯಿ ಕುಸುಮಾವತಿ ಕೂಡ ಸೇರಿಕೊಂಡಿದ್ದಾರೆ. ನೇತ್ರಾವತಿಯಿಂದ ಧರ್ಮಸ್ಥಳದವರೆಗೆ ಪಾದಯಾತ್ರೆ ಮಾಡಿ, ನಂತರ ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗಕ್ಕೆ ತೆರಳಿದೆ.
ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಕಣ್ಣೀರಿಟ್ಟ ಸೌಜನ್ಯ ತಾಯಿ ಕುಸುಮಾವತಿ, ಅಣ್ಣಪ್ಪನಿಗೆ ನಾಣ್ಯ ಕಾಣಿಕೆ ಹಾಕಿ ಪ್ರಾರ್ಥನೆ ಸಲ್ಲಿಸಿದರು. ವಿಹಿಂಪ, ಬಜರಂಗಳ ಮುಖಂಡರ ಜೊತೆಗೂಡಿ ನೈಜ ಆರೋಪಿಗಳ ಪತ್ತೆ ಮಾಡಿಕೊಡುವಂತೆ ಅಣ್ಣಪ್ಪನಲ್ಲಿ ಬೇಡಿಕೊಂಡರು. ಕುಸುಮಾವತಿ ಪ್ರಾರ್ಥನೆಯ ಬಳಿಕ ಸೌಜನ್ಯ ತಾಯಿ ಆರೋಪಿಸಿದವರು ಕೂಡ ಪ್ರಾರ್ಥನೆ ಸಲ್ಲಿಸಲು ಬಂದಿದ್ದಾರೆ. ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಜೈನ್ ಕೂಡ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬಂದು, ಈ ಪ್ರಕರಣದಲ್ಲಿ ನಮ್ಮ ಯಾವುದೇ ಪಾತ್ರ ಇಲ್ಲ. ನಮ್ಮ ಹೆಸರನ್ನು ಅನಾವಶ್ಯಕವಾಗಿ ಎಳೆದು ತರಲಾಗಿದೆ ಎಂದು ಕೈಮುಗಿದಿದ್ದಾರೆ. ಇದನ್ನೂ ಓದಿ: ಸೌಜನ್ಯ ಪ್ರಕರಣದ ರಹಸ್ಯಗಳನ್ನು ಬಿಚ್ಚಿಟ್ರೆ ನನ್ನನ್ನೂ ಸಾಯಿಸ್ಬೋದು: ವಸಂತ ಬಂಗೇರ
ಒಟ್ಟಿನಲ್ಲಿ ಸಾವಿರಾರು ಜನರ ಮುಂಭಾಗ ಇಂದು ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿತ್ತು. ಸೌಜನ್ಯ ತಾಯಿ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಬರುವಾಗ ಗೊಂದಲ ಆಗದಂತೆ ಕ್ರಮವಹಿಸಲಾಗಿತ್ತು.