Tag: ಕೃನಾಲ್ ಪಾಂಡ್ಯ

  • ಆಡಿದ್ದು 4 ಎಸೆತವಾದ್ರೂ, ಐಪಿಎಲ್‍ನಲ್ಲಿ ಕೃನಾಲ್ ಪಾಂಡ್ಯ ಆಲ್‍ಟೈಮ್ ರೆಕಾರ್ಡ್

    ಆಡಿದ್ದು 4 ಎಸೆತವಾದ್ರೂ, ಐಪಿಎಲ್‍ನಲ್ಲಿ ಕೃನಾಲ್ ಪಾಂಡ್ಯ ಆಲ್‍ಟೈಮ್ ರೆಕಾರ್ಡ್

    ಶಾರ್ಜಾ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಆಲ್‍ರೌಂಡರ್ ಕೃನಾಲ್ ಪಾಂಡ್ಯ ಅಪರೂಪದ ದಾಖಲೆ ಬರೆದಿದ್ದಾರೆ.

    ಮುಂಬೈ ಇನ್ನಿಂಗ್ಸ್ ನ ಅಂತ್ಯದಲ್ಲಿ ಕೇವಲ 4 ಎಸೆತಗಳನಷ್ಟೇ ಎದುರಿಸಿದ ಕೃನಾಲ್, 500ರ ಸ್ಟ್ರೈಕ್ ರೇಟ್‍ನೊಂದಿಗೆ 20 ರನ್ ಸಿಡಿಸಿದ್ದಾರೆ. ಐಪಿಎಲ್‍ನಲ್ಲಿ ಕನಿಷ್ಠ 10 ರನ್ ಗಳಿಸಿದ ಆಟಗಾರರಲ್ಲಿ 500 ಸ್ಟ್ರೈಕ್ ರೇಟ್‍ ಹೊಂದಿರುವ ಮೊದಲ ಆಟಗಾರ ಎಂಬ ಇತಿಹಾಸ ಬರೆದಿದ್ದಾರೆ.

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡದ ಪರ ಕಣಕ್ಕಿಳಿದ ಹಾರ್ದಿಕ್ ಪಾಂಡ್ಯ ಅಂತಿಮ ಓವರಿನ 2ನೇ ಎಸೆತದಲ್ಲಿ ಔಟಾಗಿದ್ದರು. ಆ ಬಳಿಕ ಕ್ರಿಸ್‍ಗೆ ಬಂದ ಕೃನಾಲ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಸಿದ್ಧಾರ್ಥ್ ಕೌಲ್ ಓವರಿನ ಮೂರನೇ ಎಸೆತವನ್ನು ಸಿಕ್ಸರ್ ಸಿಡಿಸಿದ ಕೃನಾಲ್, ಮುಂದಿನ 2 ಎಸೆತಗಳಲ್ಲಿ 2 ಬೌಂಡರಿ ಸಿಡಿದ್ದರು. ಅಂತಿಮ ಎಸೆತವನ್ನು ಸಿಕ್ಸರ್ ಸಿಡಿಸುವ ಮೂಲಕ 4 ಎಸೆತಗಳಲ್ಲಿ 20 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಕೃನಾಲ್ ಸ್ಫೋಟಕ ಬ್ಯಾಟಿಂಗ್‍ನಿಂದ ಮುಂಬೈ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತ್ತು.

    ಮುಂಬೈ ಪರ ಮಾಧ್ಯಮ ಕ್ರಮಾಂಕದಲ್ಲಿ ಎದುರಾಳಿ ಬೌಲರ್ ಗಳ ಬೆವರು ಹರಿಸಿದ ಪೋರ್ಲಾಡ್, ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಅಂತಿಮ 5 ಓವರ್ ಗಳಲ್ಲಿ 61 ರನ್ ಗಳಿಸಿದ್ದರು. ಆ ಬಳಿಕ ಭಾರೀ ರನ್ ಮೊತ್ತವನ್ನು ಬೆನ್ನಟ್ಟಿದ್ದ ಹೈದರಾಬಾದ್ ತಂಡ ವಿಕೆಟ್ ಕಳೆದುಕೊಂಡು ನಿಗದಿತ 20 ಓವರ್ ಗಳಲ್ಲಿ 174 ರನ್ ಗಳಿಸಲಷ್ಟೇ ಶಕ್ತವಾಯಿತು. 34 ರನ್ ಗಳ ಗೆಲುವು ಪಡೆದ ಮುಂಬೈ ತಂಡ ಅಂಕಪಟ್ಟಿಯಲ್ಲಿ 6 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದೆ.

  • ಇಬ್ಬರ ನಡುವೆ ಒಂದೇ ಬ್ಯಾಟ್- ಕಷ್ಟದ ದಿನಗಳನ್ನ ನೆನೆದ ಪಾಂಡ್ಯ ಬ್ರದರ್

    ಇಬ್ಬರ ನಡುವೆ ಒಂದೇ ಬ್ಯಾಟ್- ಕಷ್ಟದ ದಿನಗಳನ್ನ ನೆನೆದ ಪಾಂಡ್ಯ ಬ್ರದರ್

    ಮುಂಬೈ: ಒಂದೇ ಕುಟುಂಬದಿಂದ ಇಬ್ಬರು ಅಂತರರಾಷ್ಟ್ರೀಯ ಕ್ರಿಕೆಟಿಗರನ್ನು ನಾವು ಹೆಚ್ಚಾಗಿ ನೋಡಿಲ್ಲ. ಇಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ಭಾರೀ ಸ್ಪರ್ಧೆ ಇದೆ. ಆದರೆ ಪಾಂಡ್ಯ ಸಹೋದರರಾದ ಕೃನಾಲ್ ಮತ್ತು ಹಾರ್ದಿಕ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರ್ಯಾಂಚೈಸ್ ಮುಂಬೈ ಇಂಡಿಯನ್ಸ್ ಮತ್ತು ಭಾರತೀಯ ರಾಷ್ಟ್ರೀಯ ತಂಡಕ್ಕೆ ಸ್ಥಿರವಾದ ಪ್ರದರ್ಶನ ನೀಡಿ, ಗುರುತಿಸಿಕೊಂಡಿದ್ದಾರೆ.

    ಪಾಂಡ್ಯ ಸಹೋದರರು ಆರಂಭಿಕ ದಿನಗಳಿಂದ ಇಲ್ಲಿಯವರೆಗೆ ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದಾರೆ. ಕೃನಾಲ್ ಮತ್ತು ಹಾರ್ದಿಕ್ ಅವರ ಬಾಲ್ಯ, ಬೆಳವಣಿಗೆ ಕುರಿತು ‘ರಾಗ್ಸ್ ಟು ರಿಚಸ್’ ಕಥೆ ತಿಳಿಸುತ್ತಿದೆ. ಇದೇ ವಿಚಾರವಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಕೃನಾಲ್ ಪಾಂಡ್ಯ, ಆರಂಭಿಕ ದಿನಗಳಲ್ಲಿ ಸೋಹದರರಿಬ್ಬರು ಒಂದೇ ಬ್ಯಾಟ್ ಬಳಸುತ್ತಿದ್ದ ಕಥೆಯನ್ನು ಬಿಚ್ಚಿಟ್ಟಿದ್ದಾರೆ.

    ಇಂದು ನಾವು ಹೀಗೆ ಇರುವುದು ನಿಜವೇ? ನಮ್ಮ ಸದ್ಯದ ಸ್ಥಿತಿಯನ್ನುನಂಬಲು ನಾನು ಆಗಾಗ್ಗೆ ನನ್ನನ್ನು ಪ್ರಶ್ನಿಸಿಕೊಳ್ಳುತ್ತಲೇ ಇರುತ್ತೇನೆ ಎಂದು ಕೃನಾಲ್ ಹೇಳಿದ್ದಾರೆ.

    ”ಗುಜರಾತ್‍ನ ವಡೋದರಾದ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ನಮಗೆ ಎಲ್ಲ ರೀತಿಯ ಸೌಲಭ್ಯಗಳು ಸಿಗುವುದು ಸುಲಭದ ವಿಚಾರವಲ್ಲ. ಆ ಸಮಯದಲ್ಲಿ ಉತ್ತಮ-ಗುಣಮಟ್ಟದ ಇಂಗ್ಲಿಷ್ ವಿಲೋ ಬ್ಯಾಟ್ ಐಎನ್‍ಆರ್ ಬೆಲೆ 7ರಿಂದ 8 ಸಾವಿರ ರೂ. ಆಗಿತ್ತು. ಆಗ ಅದು ದೊಡ್ಡ ಮೊತ್ತ. ನಾನು ಹಾಗೂ ಹಾರ್ದಿಕ್ ಕ್ರಿಕೆಟ್ ಆಡುತ್ತಿದ್ದರಿಂದ ಇಬ್ಬರಿಗೂ ದುಬಾರಿ ಮೌಲ್ಯದ ಬ್ಯಾಟ್, ಕಿಟ್ ಕೊಡಿಸಲು ಅಪ್ಪನಿಗೂ ಕಷ್ಟವಾಗುತ್ತಿತ್ತು. ತಂದೆಯ ಹೆಗಲ ಮೇಲೆ ನಮ್ಮಿಬ್ಬರ ಮೇಲೆ ಜವಾಬ್ದಾರಿ ಇತ್ತು” ಎಂದು ಕೃನಾಲ್ ಬಹಿರಂಗಪಡಿಸಿದ್ದಾರೆ.

    ”ರಣಜಿ ಟ್ರೋಫಿ ಆಡುವವರೆಗೂ ನಮ್ಮ ಬಳಿ ಬ್ಯಾಟ್ ಇರಲಿಲ್ಲ. ವಿಜಯ್ ಹಜಾರೆ ಟೂರ್ನಿಯಲ್ಲಿ ನಾವು ವಡೋದರಾ ಪರ ಆಡುತ್ತಿದ್ದಾಗ ಹಾರ್ದಿಕ್‍ಗೆ ಟೀಂ ಇಂಡಿಯಾ ಮಾಜಿ ಆಲ್‍ರೌಂಡರ್ ಇರ್ಫಾನ್ ಪಠಾಣ್ ಅವರು ಉಡುಗೊರೆಯಾಗಿ ಬ್ಯಾಟ್ ನೀಡಿದ್ದರು. ಆದರೆ ನಾನು ಇನ್ನೊಂದು ಬ್ಯಾಟ್ ಹೊಂದಿದ್ದೆ. ನಿರ್ಣಾಯಕ ಆಟದ ವೇಳೆ ಹಾರ್ದಿಕ್‍ನ ಬ್ಯಾಟ್ ಮುರಿಯಿತು. ಆಗ ಅವರು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರೆ, ನಾನು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಿತ್ತು. ಹೀಗಾಗಿ ಹಾರ್ದಿಕ್ ನನ್ನ ಬ್ಯಾಟ್ ತೆಗೆದುಕೊಂಡು ಆಟ ಮುಂದುವರಿಸಿದ್ದ” ಎಂದು ಕೃನಾಲ್ ನೆನೆದಿದರು.

    ”ನಾನು ನಂತರ ಬ್ಯಾಟಿಂಗ್ ಮಾಡಲು ಹೊರಟಾಗ ಹಾರ್ದಿಕ್ ಇನ್ನೂ ಕ್ರೀಸ್‍ನಲ್ಲಿದ್ದ. ಆಗ ನನಗೆ ಬ್ಯಾಟ್ ಕೂಡ ಇರಲಿಲ್ಲ. ಹೀಗಾಗಿ ಸ್ಪೇರ್ ಬ್ಯಾಟ್ ನೀಡುವಂತೆ ತಂಡದ ಸಹ ಆಟಗಾರನಿಗೆ ವಿನಂತಿಸಿಕೊಂಡಿದ್ದೆ. ಈ ಸನ್ನಿವೇಶ ಬಹಳ ಮುಜುಗರ ತಂದಿತ್ತು. ಹೀಗೆ ಮತ್ತೊಬ್ಬರ ಬ್ಯಾಟ್ ಕೇಳುವುದು ರಣಜಿ ಟ್ರೋಫಿ ಮಟ್ಟದಲ್ಲಿಯೂ ಸರಿಯಾದ ಕ್ರಮವಲ್ಲ. ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಅಂತ ತೀರ್ಮಾನಿಸಿದೆ ಎಂದು ಹೇಳಿದರು.

  • ಕೊಹ್ಲಿ-ಧೋನಿಗಿಂತ ದುಬಾರಿ ಕಾರಿನ ಒಡೆಯರಾದ ಪಾಂಡ್ಯ ಬ್ರದರ್ಸ್

    ಕೊಹ್ಲಿ-ಧೋನಿಗಿಂತ ದುಬಾರಿ ಕಾರಿನ ಒಡೆಯರಾದ ಪಾಂಡ್ಯ ಬ್ರದರ್ಸ್

    ಮುಂಬೈ: ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಹಾಗೂ ಕೃನಾಲ್ ಪಾಂಡ್ಯ ಸಹೋದರರು ಮತ್ತೊಂದು ದುಬಾರಿ ಕಾರು ಖರೀದಿಸಿ, ಸುದ್ದಿಯಾಗಿದ್ದಾರೆ.

    ಕೆಲವು ತಿಂಗಳುಗಳ ಹಿಂದೆಯಷ್ಟೇ 2.19 ಕೋಟಿ ರೂ. ಮೌಲ್ಯದ ಮರ್ಸಿಡಿಸ್-ಎಎಂಜಿ ಜಿ 63 ಎಸ್‍ಯುವಿಯನ್ನು ಹಾರ್ದಿಕ್ ಪಾಂಡ್ಯ ತಮ್ಮದಾಗಿಸಿಕೊಂಡಿದ್ದರು. ಸದ್ಯ ಭಾರತ ತಂಡದ ವೆಸ್ಟ್ ಇಂಡೀಸ್ ಪ್ರವಾಸದಿಂದ ವಿಶ್ರಾಂತಿ ಪಡೆದಿರುವ ಹಾರ್ದಿಕ್ ಪಾಂಡ್ಯ ಹಾಗೂ ವಿಂಡೀಸ್ ಪ್ರವಾಸದಿಂದ ವಾಪಸ್ ಆಗಿರುವ ಕೃನಾಲ್ ಪಾಂಡ್ಯ ಮುಂಬೈನಲ್ಲಿ ದುಬಾರಿ ಲ್ಯಾಂಬೋರ್ಗಿನಿ ಹುರಾಕನ್ ಇವಿಒ ಸೂಪರ್ ಕಾರನ್ನು ಖರೀದಿಸಿದ್ದಾರೆ.

    https://www.instagram.com/p/B1Oeo8PhO8_/?utm_source=ig_embed

    ಲಂಬೋರ್ಗಿನಿ ಹುರಾಕನ್ ಇವಿಒ ಸೂಪರ್ ಕಾರಿನ ಪ್ರಸ್ತುತ ಬೆಲೆಯು 3.73 ಕೋಟಿ ರೂ. (ಎಕ್ಸ್ ಶೋ ರೂಂ) ಆಗಿದೆ. ಪಾಂಡ್ಯ ಬ್ರದರ್ಸ್ ಸದ್ಯ ಇಂತಹದೊಂದು ದುಬಾರಿ ಮೌಲ್ಯದ ಕಾರಿನ ಒಡೆಯರಾಗಿದ್ದಾರೆ.

    ಕಾರು ಪ್ರಿಯರಾಗಿರುವ ಪಾಂಡ್ಯ ಬ್ರದರ್ಸ್ ಭಾರತ ತಂಡ ಪ್ರವೇಶಿಸುವ ಮುನ್ನ ಲೋನ್ ಮೂಲಕ ಕಾರು ಖರೀದಿಸಿದ್ದರು. ಆದರೆ ಐಪಿಎಲ್ ನಲ್ಲಿ ದುಬಾರಿ ಬೆಲೆ ಪಡೆದಿರುವ ಅವರಿಬ್ಬರು ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲೂ ಮಿಂಚುತ್ತಿದ್ದಾರೆ. ಇದೀಗ ಇವರ ಬಳಿ ದುಬಾರಿ ಕಾರುಗಳಾದ ಲ್ಯಾಂಡ್ ರೋವರ್, ರೇಂಜ್ ರೋವರ್, ಮರ್ಸಡೀಸ್ AMG g63, ಆಡಿ A6 ಕಾರುಗಳ ಜೊತೆಗೆ ಲ್ಯಾಂಬೋರ್ಗಿನಿ ಸೇರಿಕೊಂಡಿದೆ.

    https://www.instagram.com/p/B1OEwF4nMls/?utm_source=ig_embed

    ಕಾರಿನ ವಿಶೇಷತೆ ಏನು?:
    ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಲಂಬೋರ್ಗಿನಿ ಹುರಾಕನ್ ಇವಿಒ ಅನ್ನು ಬಿಡುಗಡೆ ಮಾಡಲಾಯಿತು. 0-100 ಕಿಮೀ ವೇಗ ಪಡೆಯಲು ಈ ಕಾರು ತೆಗೆದುಕೊಳ್ಳುವ ಸಮಯ ಕೇವಲ 2.9 ಸೆಕೆಂಡುಗಳು ಮಾತ್ರ.

    ಪಾಂಡ್ಯ ಬ್ರದರ್ಸ್ ಮಾತ್ರವಲ್ಲದೆ ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ವಿರಾಟ್ ಕೊಹ್ಲಿ, ಸುರೇಶ್ ರೈನಾ ಸೇರಿದಂತೆ ಹಲವು ಆಟಗಾರರು ದುಬಾರಿ ಕಾರುಗಳ ಕಲೆಕ್ಷನ್ ನಲ್ಲಿ ಮಂಚೂಣಿಯಲ್ಲಿದ್ದಾರೆ.

  • ಧೋನಿಗೆ ಮಂಕಡ್ ವರ್ನಿಂಗ್ ನೀಡಿದ ಕೃನಾಲ್ ಪಾಂಡ್ಯ – ನೆಟ್ಟಿಗರು ಗರಂ

    ಧೋನಿಗೆ ಮಂಕಡ್ ವರ್ನಿಂಗ್ ನೀಡಿದ ಕೃನಾಲ್ ಪಾಂಡ್ಯ – ನೆಟ್ಟಿಗರು ಗರಂ

    ಮುಂಬೈ: ಐಪಿಎಲ್ 12ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೊದಲ ಸೋಲಿನ ಅನುಭವ ಪಡೆದಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕೃನಾಲ್ ಪಾಂಡ್ಯ ಧೋನಿ ಬ್ಯಾಟಿಂಗ್ ವೇಳೆ ಮಂಕಡ್ ಚಮಕ್ ಕೊಟ್ಟಿದ್ದಾರೆ.

    ಟೂರ್ನಿಯಲ್ಲಿ ಮೊದಲ ಬಾರಿಗೆ ಮಂಕಡ್ ರನೌಟ್ ಮಾಡಿ ಕಿಂಗ್ಸ್ ಇಲೆವೆನ್ ತಂಡದ ಆರ್ ಅಶ್ವಿನ್ ಭಾರೀ ಚರ್ಚೆಗೆ ಒಳಗಾಗಿದ್ದರು. ಆ ಬಳಿಕ ಇಂತಹದ್ದೇ ಪ್ರಯತ್ನವನ್ನು ಕೃನಾಲ್ ಮಾಡಿದ್ದಾರೆ. ಕ್ರಿಕೆಟ್ ವೃತ್ತಿಜೀವನದಲ್ಲಿ 15 ವರ್ಷಗಳನ್ನು ಪೂರ್ಣಗೊಳಿಸಿರುವ ಧೋನಿ ಯಾವುದೇ ಸಂದರ್ಭದಲ್ಲಿ ಫೀಲ್ಡ್ ನಲ್ಲಿ ಮೈಮರೆಯುವುದಿಲ್ಲ ಎಂಬುವುದು ಇದೇ ಸಂದರ್ಭದಲ್ಲಿ ಸಾಬೀತಾಗಿದೆ. ಪಂದ್ಯದಲ್ಲಿ ಬೌಲ್ ಮಾಡಲು ಯತ್ನಿಸಿದ ಅವರು ಕೊನೆ ಕ್ಷಣದಲ್ಲಿ ಚೆಂಡು ಎಸೆಯದೆ ಪೂರ್ಣಗೊಳಿಸಿದ್ದರು. ಆದರೆ ಈ ಸಮಯದಲ್ಲಿ ಧೋನಿ ಕ್ರಿಸಿನಲ್ಲೇ ಇದ್ದರು.

    ಮಂಕಡ್ ರನೌಟ್ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ನಡೆದಿದ್ದು, ಸದ್ಯ ಧೋನಿ ಅಭಿಮಾನಿಗಳು ಕೂಡ ಕೃನಾಲ್ ಪಾಂಡ್ಯ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಧೋನಿ ಸ್ಮಾರ್ಟ್ ಆಟಗಾರರಾಗಿದ್ದಾರೆ ಎಂದು ತಿಳಿಸಿ ಟ್ರೋಲ್ ಮಾಡಿದ್ದಾರೆ.

    ಟೂರ್ನಿಯಲ್ಲಿ ಮೊದಲ ಸೋಲುಂಡ ಬಳಿಕ ಮಾತನಾಡಿದ ಧೋನಿ, ಪಂದ್ಯದ 10ರಿಂದ 12 ಓವರಿಗೆ ಎದುರಾಳಿ ತಂಡವನ್ನು ಸಮರ್ಥವಾಗಿ ಬೌಲಿಂಗ್ ಮಾಡಿ ನಿಯಂತ್ರಿಸಿದೆವು. ಆದರೆ ಅಂತಿಮ ಓವರ್ ಗಳಲ್ಲಿ ಹೆಚ್ಚು ರನ್ ನೀಡಲಾಯಿತು. ಕೆಲ ಕ್ಯಾಚ್‍ಗಳನ್ನು ಮಿಸ್ ಮಾಡಿದ್ದು ಕೂಡ ತಂಡದ ಸೋಲಿಗೆ ಕಾರಣವಾಯಿತು. ತಂಡದ ಆಟಗಾರರು ಗಾಯದ ಸಮಸ್ಯೆಯನ್ನು ಎದುರಿಸುತ್ತಿದ್ದು, ಬ್ರಾವೋ ಕೂಡ ಲಭ್ಯರಾಗಿದ್ದಾರೆ. ಮುಂದಿನ ಪಂದ್ಯದಲ್ಲಿ ಸರಿಯಾದ ಕಂಬಿನೇಷನ್ ನೊಂದಿಗೆ ಕಣಕ್ಕೆ ಇಳಿಯುತ್ತೇವೆ ಎಂದು ತಿಳಿಸಿದ್ದಾರೆ.

  • ಹಿರಿಯ ಆಟಗಾರನಿಗೆ ಖಾಲಿ ಚೆಕ್ ನೀಡಿ ಮಾನವೀಯತೆ ಮೆರೆದ ಕೃನಾಲ್ ಪಾಂಡ್ಯ

    ಹಿರಿಯ ಆಟಗಾರನಿಗೆ ಖಾಲಿ ಚೆಕ್ ನೀಡಿ ಮಾನವೀಯತೆ ಮೆರೆದ ಕೃನಾಲ್ ಪಾಂಡ್ಯ

    ವಡೋದರಾ: ವೆಂಟಿಲೇಟರ್ ನಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಜೇಕಬ್ ಮಾರ್ಟಿನ್ ನೆರವಿಗೆ ಹಾರ್ದಿಕ್ ಪಾಂಡ್ಯ ಸಹೋದರ ಕೃನಾಲ್ ಪಾಂಡ್ಯ ಧಾವಿಸಿದ್ದಾರೆ.

    ಡಿಸೆಂಬರ್ 28 ರಂದು ನಡೆದ ರಸ್ತೆ ಅಪಘಾತದಿಂದಾಗಿ ಶ್ವಾಸಕೋಶ ಮತ್ತು ಲಿವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇಕಬ್ ಮಾರ್ಟಿನ್ ಆರ್ಥಿಕ ಸಮಸ್ಯೆಗೆ ಸಿಲುಕಿದ್ದಾರೆ.

    ಈಗಾಗಲೇ ಬಿಸಿಸಿಐ 5 ಲಕ್ಷ ರೂ. ನೀಡಿದ್ದರೆ ಬರೋಡಾ ಕ್ರಿಕೆಟ್ ಸಂಸ್ಥೆ 3 ಲಕ್ಷ ರೂ. ನೀಡಿದೆ. ಸೌರವ್ ಗಂಗೂಲಿ ಸೇರಿದಂತೆ ಹಲವು ಕ್ರಿಕೆಟಿಗರು ಮಾರ್ಟಿನ್ ಅವರಿಗೆ ಸಹಾಯ ಮಾಡಿದ್ದಾರೆ. ಈಗ ಕೃನಾಲ್ ಪಾಂಡ್ಯ ಸಹ ಸಹಾಯ ಹಸ್ತ ಚಾಚಿದ್ದಾರೆ.

    ಈ ಸಂಬಂಧ ಖಾಲಿ ಚೆಕ್ ನೀಡಿದ ಕೃನಾಲ್, ಎಷ್ಟು ಹಣ ಬೇಕಾದರೂ ಬರೆದುಕೊಳ್ಳಿ, ಆದರೆ ಯಾವುದೇ ಕಾರಣಕ್ಕೂ 1 ಲಕ್ಷ ರೂ. ಗಿಂತ ಕಡಿಮೆ ಮೊತ್ತವನ್ನು ಈ ಚೆಕ್ ನಲ್ಲಿ ಬರೆಯಬೇಡಿ ಎಂದು ಹೇಳಿದ್ದಾರೆ.

    ಆರಂಭದಲ್ಲಿ ಮಾಜಿ ಆಟಗಾರ ಮತ್ತು ಹಾಲಿ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಆಗಿರುವ ಸಂಜಯ್ ಪಟೇಲ್ ಸಹಾಯಹಸ್ತ ಚಾಚಿದ್ದು ಈಗ ಗಂಗೂಲಿ, ರವಿಶಾಸ್ತ್ರಿ ಸೇರಿದಂತೆ ಹಲವು ಮಂದಿ ಆರ್ಥಿಕ ಸಹಾಯ ಮಾಡಿದ್ದಾರೆ.

    ಮಾರ್ಟಿನ್ ಕುಟುಂಬ ಈಗ ಕಷ್ಟದಲ್ಲಿದ್ದು, ಎಷ್ಟು ಹಣ ಬೇಕೆಂದು ಕೇಳುವ ಪರಿಸ್ಥಿತಿಯಲ್ಲಿ ಅವರಿಲ್ಲ. ಹೀಗಾಗಿ ಅವರ ಕಷ್ಟಕ್ಕೆ ಕ್ರಿಕೆಟ್ ಸದಸ್ಯರು ಸಹಾಯ ಮಾಡುತ್ತಿದ್ದಾರೆ ಎಂದು ಸಂಜಯ್ ಪಟೇಲ್ ತಿಳಿಸಿದರು.

    1972 ಮೇ 11 ರಂದು ಗುಜರಾತಿನ ಬರೋಡಾದಲ್ಲಿ ಜನಿಸಿದ ಬಲಗೈ ಬ್ಯಾಟ್ಸ್ ಮನ್ ಜೇಕಬ್ ಮಾರ್ಟಿನ್ 1999ರಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯದ ವೇಳೆ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಒಟ್ಟು 10 ಏಕದಿನ ಪಂದ್ಯಗಳನ್ನು ಆಡಿದ್ದು, 22.57 ಸರಾಸರಿಯಲ್ಲಿ ಒಟ್ಟು 158 ರನ್ ಗಳಿಸಿದ್ದಾರೆ. ಗಂಗೂಲಿ ನಾಯಕತ್ವದಲ್ಲಿ 5 ಪಂದ್ಯ ಸಚಿನ್ ನಾಯಕತ್ವದಲ್ಲಿ ಮಾರ್ಟಿನ್ 5 ಪಂದ್ಯಗಳನ್ನು ಆಡಿದ್ದರು.

    2011ರಲ್ಲಿ ಮಾನವ ಕಳ್ಳ ಸಾಗಾಣೆ ಆರೋಪದಡಿಯಲ್ಲಿ ದೆಹಲಿ ಪೊಲೀಸರು ಜೇಕಬ್ ಅವರನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಬರೋಡದ ವಿವಿಧ ವಯೋಮಿತಿ ತಂಡಗಳಿಗೆ ತರಬೇತಿ ನೀಡುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂಗ್ಲೆಂಡ್ ವಿರುದ್ಧದ ಟಿ20 ಟೂರ್ನಿಗೆ ದೀಪಕ್ ಚಾಹರ್, ಕೃನಾಲ್ ಪಾಂಡ್ಯಗೆ ಬುಲಾವ್

    ಇಂಗ್ಲೆಂಡ್ ವಿರುದ್ಧದ ಟಿ20 ಟೂರ್ನಿಗೆ ದೀಪಕ್ ಚಾಹರ್, ಕೃನಾಲ್ ಪಾಂಡ್ಯಗೆ ಬುಲಾವ್

    ಮುಂಬೈ: ಬಹು ನಿರೀಕ್ಷಿತ ಇಂಗ್ಲೆಂಡ್ ವಿರುದ್ಧ ಕ್ರಿಕೆಟ್ ಟೂರ್ನಿಯಲ್ಲಿ ಗಾಯಗೊಂಡು ಅಲಭ್ಯರಾದ ವೇಗಿ ಜಸ್‍ಪ್ರೀತ್ ಬುಮ್ರಾ ಹಾಗೂ ವಾಷಿಂಗ್ಟನ್ ಸುಂದರ್ ಸ್ಥಾನಕ್ಕೆ ಬಿಸಿಸಿಐ ಬದಲಿ ಆಟಗಾರನ್ನು ಆಯ್ಕೆ ಮಾಡಿದೆ.

    ವೇಗಿ ಬುಮ್ರಾ ಅವರ ಸ್ಥಾನದಲ್ಲಿ ಟಿ20 ಸರಣಿಗೆ ದೀಪಕ್ ಚಾಹರ್ ಸ್ಥಾನ ಪಡೆದಿದ್ದು, ಇದೇ ವೇಳೆ ವಾಷಿಂಗ್ಟನ್ ಸುಂದರ್ ಸ್ಥಾನದಲ್ಲಿ ಟಿ20 ಪಂದ್ಯಗಳಿಗೆ ಕೃನಾಲ್ ಪಾಂಡ್ಯ, ಏಕದಿನ ಪಂದ್ಯಗಳಿಗೆ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ.

    ಐರ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ಫೀಲ್ಡಿಂಗ್ ವೇಳೆ ಬುಮ್ರಾ ಬಲಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಇದರಿಂದ ಅವರು ಇಂಗ್ಲೆಂಡ್ ಟೂರ್ನಿಯ ಮೂರು ಪಂದ್ಯಗಳ ಟಿ20 ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇನ್ನು ಸುಂದರ್ ಬಲ ಮೊಣಕಾಲಿಗೆ ಗಾಯವಾಗಿದ್ದು, ಐರ್ಲೆಂಡ್ ವಿರುದ್ಧದ 2ನೇ ಪಂದ್ಯಕ್ಕೂ ಮುನ್ನ ನಡೆದ ತರಬೇತಿ ಫುಟ್ಬಾಲ್ ಪಂದ್ಯದ ವೇಳೆ ಗಾಯಗೊಂಡಿದ್ದರು.

    ಸದ್ಯ ಬುಮ್ರಾ ಐಸಿಸಿ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿ 10ನೇ ಸ್ಥಾನ ಪಡೆದಿದ್ದು, ಟೀಂ ಇಂಡಿಯಾ ಪರ ಯಜುವೇಂದ್ರ ಚಹಲ್, ಬುಮ್ರಾ ಮಾತ್ರ ಮೊದಲ 10 ಬೌಲರ್ ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಇನ್ನು ಜುಲೈ 3 ರಂದು ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯ ನಡೆಯಲಿದ್ದು, ಜುಲೈ 12 ರಂದು ಏಕದಿನ ಪಂದ್ಯ ನಡೆಯಲಿದೆ. ಉಳಿದಂತೆ ಟಿ20, ಏಕದಿನ ಟೂರ್ನಿ ಬಳಿಕ ಆಗಸ್ಟ್ 1 ರಿಂದ 5 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.