Tag: ಕೃಷಿ ಚಟುವಟಿಕೆ

  • ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ ರೈತ

    ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ ರೈತ

    ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅಗಲಿ ಐದು ತಿಂಗಳು ಕಳೆದರೂ, ಅವರನ್ನು ಆರಾಧಿಸುವವರ ಸಂಖ್ಯೆ ಇಳಿದಿಲ್ಲ. ತಮ್ಮ ನೆಚ್ಚಿನ ನಟನನ್ನು ನಾನಾ ರೀತಿಯಲ್ಲಿ ನೆನಪಿಸುವಂತಹ ಕೆಲಸಗಳನ್ನು ಅವರ ಅಭಿಮಾನಿಗಳು ಮಾಡುತ್ತಿದ್ದಾರೆ. ರಕ್ತದಾನ, ಅಂಗಾಂಗ ದಾನ, ನೇತ್ರದಾನ ಹಾಗೂ ಸಮಾಜಮುಖಿ ಕೆಲಸಗಳನ್ನು ಮಾಡುತ್ತಲೇ ಅಪ್ಪು ಅವರನ್ನು ಜೀವಂತವಾಗಿರಿಸುವ ಕೆಲಸ ನಿರಂತರವಾಗಿ ನಡೆಯುತ್ತಲೇ ಇದೆ. ಈಗ ಮತ್ತೊಂದು ಹೊಸ ಕೆಲಸ ಮಾಡುವ ಮೂಲಕ ಅಪ್ಪುವನ್ನು ಕೃಷಿಕರು ಕೂಡ ತಮ್ಮದೇ ಮನೆಮಗ ಎನ್ನುವಂತೆ ಅಪ್ಪಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಆಮ್ಲಜನಕದ ಕೊರತೆಯಿಂದ ಬಳಲುತ್ತಿದ್ದ ಮಗುವಿನ ನೆರವಿಗೆ ಬಂದ ರೈಲ್ವೆ ಅಧಿಕಾರಿಗಳು

    ಯುಗಾದಿ ಹಬ್ಬದ ಹಿನ್ನೆಲೆ ರೈತರೆಲ್ಲರೂ ಭೂತಾಯಿಗೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭ ಮಾಡುವುದು ವಾಡಿಕೆ. ಭೂತಾಯಿಯ ಪೂಜೆಯ ಜತೆ ಜತೆಗೆ ತಮ್ಮಿಷ್ಟದ ದೇವರನ್ನೂ ಈ ಸಂದರ್ಭದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಅದರಂತೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ರೈತನೋರ್ವ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕೃಷಿ ಚಟುವಟಿಕೆ ಆರಂಭಿಸಿದ್ದಾನೆ.

    ರೈತ ಅಶೋಕ ಕುರಿ ಇಂದು ತನ್ನ ಹೊಲದಲ್ಲಿ ಪುನೀತ್ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ್ದು, ಪುನೀತ್ ರಾಜ್ ಕುಮಾರ್ ಅವರನ್ನು ಉತ್ತಿಲ್ಲ, ಬಿತ್ತಿದ್ದೇವೆ ಎನ್ನುವ ಸಾಲುಗಳನ್ನು ಸಾರ್ಥಕಗೊಳಿಸಿದ್ದಾನೆ. ಸಾಮಾನ್ಯವಾಗಿ ಎಲ್ಲರೂ ಯುಗಾದಿ ದಿನದಂದು ಹೊಸ ವರ್ಷಾಚರಣೆಯ ಸಡಗರದಲ್ಲಿರುತ್ತಾರೆ. ಇಂಥದ್ದೊಂದು ಸಡಗರಕ್ಕೆ ಅಪ್ಪು ಅವರನ್ನು ಸಾಕ್ಷಿಗೊಳಿಸಿದ್ದಾರೆ ಅಶೋಕ ಕುರಿ. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ, ಭಗವಂತ್ ಮಾನ್, ಕೇಜ್ರಿವಾಲ್

    ಈ ರೈತ ಪುನೀತ್ ರಾಜಕುಮಾರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ, ಗೌರವ ಸಲ್ಲಿಸಿ ಹೊಸ ವರ್ಷಾವನ್ನು ಬರಮಾಡಿಕೊಂಡಿದ್ದಾರೆ.

  • ಭತ್ತದ ಗದ್ದೆಯಲ್ಲಿ ಕಳೆ ಕಿತ್ತು ರೈತರ ಹಿತ ಕಾಪಾಡುತ್ತೇನೆ ಎಂದ ಕೃಷಿ ಸಚಿವೆ

    ಭತ್ತದ ಗದ್ದೆಯಲ್ಲಿ ಕಳೆ ಕಿತ್ತು ರೈತರ ಹಿತ ಕಾಪಾಡುತ್ತೇನೆ ಎಂದ ಕೃಷಿ ಸಚಿವೆ

    ಉಡುಪಿ: ಜಿಲ್ಲೆಯ ಕೇದಾರೋತ್ಥಾನ ಟ್ರಸ್ಟ್ ಮಾಡುತ್ತಿರುವ ಹಡಿಲು ಗದ್ದೆ ಬೇಸಾಯ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ಜನಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಕಡೆಕಾರು ಗದ್ದೆಯ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಾರೆ.

    ಶೋಭಾ ಕರಂದ್ಲಾಜೆಯವರು ಕಳೆದ 2 ದಿನಗಳಿಂದ ಉಡುಪಿ ಪ್ರವಾಸ ಮಾಡುತ್ತಿದ್ದಾರೆ. ಜನಾಶೀರ್ವಾದ ಯಾತ್ರೆಯ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಸದನ ನಡೆಸಲು ಬಿಡದ ಪಕ್ಷದ ವಿರುದ್ಧ ಅಭಿಯಾನ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 15ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಶೋಭಾ ಕರಂದ್ಲಾಜೆ ಭಾಗಿಯಾಗುತ್ತಿದ್ದಾರೆ. ಇದನ್ನೂ ಓದಿ:ಆಗಸ್ಟ್ 21 ರಿಂದ ರಾಯರ 350ನೇ ಆರಾಧನಾ ಮಹೋತ್ಸವ: ಸುಬುಧೇಂದ್ರ ತೀರ್ಥ ಸ್ವಾಮಿ

    ಕೇದಾರೋತ್ಥಾನ ಟ್ರಸ್ಟ್, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 3,000 ಎಕರೆ ಗದ್ದೆಯಲ್ಲಿ ಈ ಬಾರಿ ಬೇಸಾಯ ಮಾಡಲಾಗುತ್ತಿದ್ದು, ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಳೆದ ನಾಲ್ಕು ತಿಂಗಳಿನಿಂದ ಈ ಅಭಿಯಾನ ನಡೆಯುತ್ತಿದೆ. ಕಡೆಕಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ನಾಟಿ ಕಾರ್ಯ ಮುಗಿಸಿದ್ದು, ಕಾಲೇಜು ವಿದ್ಯಾರ್ಥಿಗಳು ಕಳೆ ತೆಗೆಯುವ ಕೆಲಸದಲ್ಲಿ ತೊಡಗಿದ್ದಾರೆ. ಈ ಚಟುವಟಿಕೆಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಪಾಲ್ಗೊಂಡಿದ್ದು, ವಿದ್ಯಾರ್ಥಿಗಳು ಶಾಸಕರ ಜೊತೆ ಗದ್ದೆಗಿಳಿದು ಕಳೆ ಕಿತ್ತಿದ್ದಾರೆ.

    ಈ ಸಂದರ್ಭ ಮಾತನಾಡಿದ ಅವರು, ಒಬ್ಬ ಬಡ ರೈತನ ಮಗಳಿಗೆ ಕೇಂದ್ರ ಸಚಿವೆ ಆಗುವ ಅವಕಾಶವನ್ನು ಪ್ರಧಾನಿ ಮೋದಿ ಸರ್ಕಾರ ಕೊಟ್ಟಿದೆ. ರೈತರ ಕಷ್ಟ ಏನು ಎಂಬುದು ನನಗೆ ಸರಿಯಾಗಿ ಗೊತ್ತಿದೆ. ನಾಟಿ ಮಾಡಿ ಬೆಳೆ ಮಾರಾಟ ಆಗುವ ತನಕ, ಗ್ರಾಹಕರಿಗೆ ಕೈಸೇರುವ ತನಕ ಸಾಕಷ್ಟು ಸವಾಲುಗಳನ್ನು ರೈತರು, ಬೇಸಾಯಗಾರರು ಎದುರಿಸುತ್ತಾರೆ. ದೇಶದ ಬೆನ್ನೆಲುಬಾಗಿರುವ ರೈತರ ಕಷ್ಟ, ನಷ್ಟ ಅರಿತುಕೊಳ್ಳುವ ಕೆಲಸ ಮಾಡುತ್ತೇನೆ. ಹಡಿಲು ಗದ್ದೆ ಅಭಿಯಾನ ಉತ್ತಮ ಯೋಜನೆ. ರಾಜ್ಯ, ದೇಶದ ಜನ ಇದಕ್ಕೆ ಕೈ ಜೋಡಿಸಬೇಕು ಎಂದಿದ್ದಾರೆ. ಇದನ್ನೂ ಓದಿ:ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆ- ಕೃಷ್ಣ ಮಠಕ್ಕೆ ಭೇಟಿ

    ಇದೇ ವೇಳೆ ರಘುಪತಿ ಭಟ್ ಮಾತನಾಡಿ, ಹಲವಾರು ಜನನಾಯಕರು ಚಲನಚಿತ್ರ ನಟರು ಸಮಾಜದ ಗಣ್ಯರು ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಶೋಭಾ ಕರಂದ್ಲಾಜೆಯವರು ಕೃಷಿ ಚಟುವಟಿಕೆಯಲ್ಲಿ ಬಾಗಿಯಾಗಿದ್ದು, ಇಡೀ ದೇಶಕ್ಕೆ ಒಂದು ಉತ್ತಮ ಸಂದೇಶ ಹೋಗುತ್ತಿದೆ. ಅಭಿಯಾನದ ಉದ್ದೇಶ ಏನು ಎಂಬುದು ಇಡೀ ದೇಶದ ಜನಕ್ಕೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

  • ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ: ಬಿ.ಸಿ ಪಾಟೀಲ್

    ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ: ಬಿ.ಸಿ ಪಾಟೀಲ್

    ಕೊಪ್ಪಳ: ರೈತರು ಬೆಳೆದ ತರಕಾರಿ, ಹಣ್ಣು ಹಾಗೂ ಇತರ ದವಸ ಧಾನ್ಯಗಳ ಮಾರಾಟ ಮತ್ತು ಅವುಗಳ ಸಾಗಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಹೇಳಿದರು.

    ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕೋವಿಡ್-19 ಕುರಿತು ಜಿಲ್ಲಾಡಳಿತ ಕೈಗೊಂಡ ಕ್ರಮಗಳು, ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ ಮತ್ತು ಬೀಜ ಗೊಬ್ಬರಗಳ ಸರಬರಾಜು ಹಾಗೂ ಇತರೆ ಚಟುವಟಿಕೆಗಳ ಬಗ್ಗೆ ಸಭೆ ನಡೆಸಿ ಮಾತನಾಡಿದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸುತ್ತೋಲೆಯಂತೆ ರೈತರು ಬೆಳೆದ ಯಾವುದೇ ಬೆಳೆಗಳಿಗೆ ನಿರ್ಬಂಧವಿರುವುದಿಲ್ಲ. ರೈತರು ತಮ್ಮ ಬೆಳೆಗಳನ್ನು ಯಾವುದೇ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾಗಿದೆ. ರೈತರ ಅನುಕೂಲಕ್ಕಾಗಿ ಕೃಷಿ ಉತ್ಪನ್ನ ಮಾರುಕಟ್ಟೆಗಳ ಮೇಲಿನ ನಿರ್ಬಂಧವನ್ನು ತೆಗೆಯಲಾಗಿದ್ದು, ರೈತರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ತಾವು ಬೆಳೆದ ಫಸಲುಗಳನ್ನು ಮಾರಾಟ ಮಾಡಬಹುದಾಗಿದೆ ಎಂದರು.

    ಪ್ರತಿಯೊಂದು ಕಾಲದಲ್ಲಿ ರೈತರು ಒಂದಿಲ್ಲೊಂದು ಸಮಸ್ಯೆಗಳ ಹೊಡೆತಕ್ಕೆ ಸಿಲುಕಿಕೊಳ್ಳುತ್ತಾರೆ. ಈ ಹಿಂದೆ ಪ್ರಕೃತಿ ವಿಕೋಪ, ಬರಗಾಲ ಹಾಗೂ ಪ್ರಸ್ತುತ ಕೋವಿಡ್-19 ನಿಂದಾಗಿ ರೈತ ಬೆಳೆದ ಫಸಲುಗಳ ಮಾರಾಟಕ್ಕೆ ತೊಂದರೆಯಾಗುತ್ತಿದ್ದು, ಇದರ ನಿವಾರಣೆಗಾಗಿ ಸರ್ಕಾರವು ರೈತರ ಅನುಕೂಲಕ್ಕಾಗಿ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ರೈತರ ದೈನಂದಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದರು.

    ಜಿಲ್ಲೆಯ ಗಂಗಾವತಿ, ಕಾರಟಗಿ ಮತ್ತು ಕೊಪ್ಪಳದ ಕೆಲವು ಭಾಗಗಳಲ್ಲಿ ಮೊನ್ನೆ ಆಲಿಕಲ್ಲು ಮಳೆಯಿಂದಾಗಿ ಬಹಳ ದೊಡ್ಡ ಪ್ರಮಾಣದ ಭತ್ತದ ಬೆಳೆ ಹಾನಿಯಾಗಿದೆ. ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದ್ದು, ಈ ಕುರಿತು ಕೂಡಲೇ ಜಿಲ್ಲಾಡಳಿತ ತಾಲೂಕು ಮಟ್ಟದ ಅಧಿಕಾರಿಗಳ ವಿಶೇಷ ಸಮಿತಿ ರಚಿಸಿ, ಹಾನಿಯಾದ ಪ್ರದೇಶಕ್ಕೆ ಖುದ್ದು ಭೇಟಿ ನೀಡಿ, ಸಮೀಕ್ಷೆ ನಡೆಸಿ ಹಾನಿಯಾದ ಅಂದಾಜು ಮೊತ್ತದ ವರದಿಯನ್ನು ಸೋಮವಾರದೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

    ರೈತರಿಗೆ ಬೇಕಾಗುವ ಬೀಜ, ಗೊಬ್ಬರವನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಣೆಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ರೈತರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅವರಿಗೆ ಎಲ್ಲಾ ಅನುಕೂಲ ಮಾಡಿಕೊಡಲಾಗುವುದು. ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಭತ್ತ ಕಟಾವಿಗೆ ಬಂದಿದ್ದು, ಅವುಗಳ ಕಟಾವಿನ ಯಂತ್ರಗಳ ಮಾಲೀಕರು ತಮಗೆ ಬೇಕಾದ ರೀತಿಯಲ್ಲಿ ದರ ನಿಗದಿಪಡಿಸಿ ರೈತರಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಕೂಡಲೇ ಭತ್ತದ ಕಟಾವು ದರವನ್ನು ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲೆಯಲ್ಲಿ ಟೊಮೆಟೋ ಬೆಳೆಗಾರರು ತಮ್ಮ ಫಸಲನ್ನು ಕೆಚ್‍ಅಪ್ ಕಾರ್ಖಾನೆಗಳಿಗೆ ಮಾರಾಟ ಮಾಡಬಹುದು. ರಾಜ್ಯದಲ್ಲಿ ಸಾಧ್ಯವಾಗದಿದ್ದರೆ ಬೇರೆ ರಾಜ್ಯದ ಕಾರ್ಖಾನೆಗಳನ್ನು ಸಂಪರ್ಕಿಸಿ ಅವರಿಗೆ ನಮ್ಮ ಜಿಲ್ಲೆಯ ಟೊಮೆಟೋವನ್ನು ಮಾರಾಟ ಮಾಡಬಹುದು. ಕೇರಳ ಹೊರತುಪಡಿಸಿ ಬೇರೆ ರಾಜ್ಯಗಳ ಗಡಿಗಳಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ಅತ್ಯವಶ್ಯಕ ಸಾಮಗ್ರಿಗಳ ಸಾಗಾಟಕ್ಕೆ ವಿನಾಯಿತಿ ನೀಡಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ತೋಟಗಾರಿಕೆ ಇಲಾಖೆ ಅಧಿಕಾರಿಗಳು ಖರೀದಿಗಾರರ ಪಟ್ಟಿಯನ್ನು ಸಿದ್ಧಪಡಿಸಿ ರೈತರಿಗೆ ಹಾಗೂ ಜಿಲ್ಲೆಯಲ್ಲಿನ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಕುರಿತು ಖರೀದಿದಾರರಿಗೆ ಮಾಹಿತಿ ನೀಡಿದರೆ ಅವರಿಗೆ ಅನುಕೂಲವಾದೆಡೆ ಅಥವಾ ಅವಶ್ಯವಿದ್ದೆಡೆ ತಮ್ಮ ಕೃಷಿ ಉತ್ಪನ್ನವನ್ನು ಮಾರಾಟ ಮಾಡಬಹುದು ಎಂದರು.

    ಫಸಲ್ ಬೀಮಾ, ಪಿಎಂಕೆವೈ ಮುಂತಾದ ಯೋಜನೆಗಳಲ್ಲಿ ರೈತರ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತದೆ. ಯಾವುದೇ ಬ್ಯಾಂಕುಗಳು ಆ ಹಣವನ್ನು ರೈತರ ಸಾಲಕ್ಕೆ ಖಡಿತಗೊಳಿಸುವಂತಿಲ್ಲ. ಅಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಬ್ಯಾಂಕುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಕೋವಿಡ್ ನಿರ್ಮೂಲನೆಗೆ ಸಾಮಾಜಿಕ ಅಂತರವೇ ಒಳ್ಳೆಯ ಔಷಧಿಯಾಗಿದ್ದು, ನಮ್ಮಷ್ಟಕ್ಕೆ ನಾವೇ ನಿರ್ಬಂಧವನ್ನು ಹಾಕಿಕೊಳ್ಳುವ ಮೂಲಕ ಹಾಗೂ ಅನಾವಶ್ಯಕವಾಗಿ ಮನೆಗಳಿಂದ ಹೊರಬರದೇ ನಾವೆಲ್ಲರೂ ಸರ್ಕಾರದ ಸುತ್ತೋಲೆಗಳನ್ನು ಪಾಲಿಸಿ ಈ ಸಾಂಕ್ರಾಮಿಕ ರೋಗ ನಿರ್ಮೂಲನೆ ಕೈಜೋಡಿಸಬೇಕಾಗಿದೆ ಎಂದರು.

    ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಮಾತನಾಡಿ, ರೈತರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಅವರು ಬೆಳೆದ ಬೆಳೆಗಳ ಮಾರಾಟಕ್ಕಾಗಿ ಪಾಸ್‍ಗಳನ್ನು ಕೊಡಲಾಗಿದೆ. ಇದು ಕೇವಲ ರೈತರಿಗೆ ಮಾತ್ರವಲ್ಲದೇ ಹಮಾಲರಿಗೂ ನೀಡಲಾಗಿದೆ. ಅವರ ಹಣ್ಣು ಮತ್ತು ತರಕಾರಿಗಳ ಮಾರಾಟಕ್ಕಾಗಿ ಹಾಫ್‍ಕಾಮ್ಸ್ ಮಳಿಗೆಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಕಡಲೆ ಖರೀದಿಗೆ ಜಿಲ್ಲೆಯಾದ್ಯಂತ 13 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.