Tag: ಕೃಷಿ ಭಾಗ್ಯ ಯೋಜನೆ

  • ಕೇಂದ್ರದಲ್ಲಿ ʻಕೈʼ ಹಿಡಿದರೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ – ರೈತರಿಗೆ ಸಿಎಂ ಹೊಸ ಗ್ಯಾರಂಟಿ

    ಕೇಂದ್ರದಲ್ಲಿ ʻಕೈʼ ಹಿಡಿದರೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ – ರೈತರಿಗೆ ಸಿಎಂ ಹೊಸ ಗ್ಯಾರಂಟಿ

    ಬೆಳಗಾವಿ: ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಸ್‌ಪಿಪಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆಯ (Agriculture Department) ಆಶ್ರಯದಲ್ಲಿ ಸುವರ್ಣಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ಫಲಾನುಭವಿ ರೈತರಿಗೆ ವಿವಿಧ ಕೃಷಿ ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು. ಇದನ್ನೂ ಓದಿ: ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್‌ ಯುವಕ – ಯುದ್ಧದಲ್ಲಿ ದುರಂತ ಸಾವು

    ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇದರಲ್ಲಿ 196 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ. ಒಟ್ಟಾರೆ 18,171 ಕೋಟಿ ಬೆಳೆ ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದ್ರೆ ಯಾವುದೇ ರೀತಿಯ ನೆರವು ನೀಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ರೈತರಿಗೆ (Farmers) ತಲಾ 2 ಸಾವಿರ ರೂ.ಗಳಂತೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ 631 ಕೋಟಿ ರೂ. ನೆರವು ನೀಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೃಷಿಹೊಂಡ ಯೋಜನೆಯನ್ನು ಕೂಡ ಇದಕ್ಕೂ ಮುಂಚಿನ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಬಾರಿ 200 ಕೋಟಿ ರೂ. ಒದಗಿಸುವ ಮೂಲಕ ಕೃಷಿಭಾಗ್ಯ ಯೋಜನೆಗೆ (Krushi Bhagya Scheme) ಮರುಚಾಲನೆ ನೀಡಲಾಗಿದೆ.

    900 ಕೋಟಿ ಮೊತ್ತದ ಕೃಷಿ ಸಲಕರಣೆ ವಿತರಣೆ:
    ಬೆಳಗಾವಿ ವಿಭಾಗೀಯ ಮಟ್ಟದಲ್ಲಿ 2,700 ರೈತರಿಗೆ 13.12 ಕೋಟಿ ರೂ. ಮೊತ್ತದ ವಿವಿಧ ಬಗೆಯ ಕೃಷಿ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದೇ ರೀತಿ ರಾಜ್ಯದಾದ್ಯಂತ ಒಟ್ಟಾರೆ 900 ಕೋಟಿ ರೂ.ಗಿಂತಲೂ ಅಧಿಕ ಮೊತ್ತದ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ಗೆ ಈಗ ಮೆಟ್ರೋ ಸವಾರಿ; ಆಗ್ರಾ ಮೆಟ್ರೋ ಕಾರಿಡಾರ್ ಉದ್ಘಾಟಿಸಿದ ಮೋದಿ

    ಆಧುನಿಕ ಯಂತ್ರೋಪಕರಣಗಳ ಮೂಲಕ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಸಹಾಯಧನದ ಮೂಲಕ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ರೈತರಿಗೆ ಆಧುನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವೆಲ್ಲ ಕುರ್ಚಿಗಾಗಿ ಹೊಡೆದಾಡ್ತೀವಿ, ನೀವು ಕುರ್ಚಿ ಇದ್ರೂ ಯಾಕೆ ಕೂರಲ್ಲ: ಡಿಕೆಶಿ ಪ್ರಶ್ನೆ

    ಸೂಕ್ಷ್ಮ ನೀರಾವರಿ ಅಳವಡಿಸಿಕೊಂಡಿರುವ ರೈತರಿಗೂ ಸಹಾಯಧನ ಆಧಾರಿತ ಯಂತ್ರೋಪಕರಣ ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿ ಅಭಿವೃದ್ಧಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ನೀರಾವರಿ, ಕೃಷಿ ಪದ್ಧತಿ, ಬೆಳೆಗೆ ನ್ಯಾಯಯುತ ಬೆಲೆ ಒದಗಿಸುವುದು ಸೇರಿದಂತೆ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

  • 24 ಜಿಲ್ಲೆಗಳ 106 ತಾಲೂಕುಗಳಲ್ಲಿ `ಕೃಷಿ ಭಾಗ್ಯ’ ಯೋಜನೆ ಜಾರಿ: ಎನ್. ಚಲುವರಾಯಸ್ವಾಮಿ

    24 ಜಿಲ್ಲೆಗಳ 106 ತಾಲೂಕುಗಳಲ್ಲಿ `ಕೃಷಿ ಭಾಗ್ಯ’ ಯೋಜನೆ ಜಾರಿ: ಎನ್. ಚಲುವರಾಯಸ್ವಾಮಿ

    ಬೆಂಗಳೂರು: ಕರ್ನಾಟಕದ ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ (Agriculture) ಮಳೆ ನೀರನ್ನು ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸಲು 2023-24ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಕೃಷಿ ಭಾಗ್ಯ ಯೋಜನೆ (Krishi Bhagya Yojana) ಮರು ಜಾರಿಗೊಳಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ತಿಳಿಸಿದರು.

    ಕರ್ನಾಟಕ ವಿಧಾನಸಭೆಯಲ್ಲಿ ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ 100 ಕೋಟಿ ರೂ.ಗಳ ಅನುದಾನದಲ್ಲಿ ಸದರಿ ಯೋಜನೆಯನ್ನು 2023-24ನೇ ಸಾಲಿನಲ್ಲಿ ಪ್ಯಾಕೇಜ್ ಮಾದರಿಯಲ್ಲಿ (ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ತಂತಿಬೇಲಿ, ಪಂಪ್ ಸೆಟ್, ಸೂಕ್ಷ್ಮ ನೀರಾವರಿ ಘಟಕಗಳು) ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಶಿರಸಿಯ ಗೌರಿ ನಾಯ್ಕ್‌ಗೆ ಬಾವಿ ತೋಡಲು ಅನುಮತಿ

    ಮುಂಗಾರು 2023ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಸೇರ್ಪಡೆಯಾಗಿದ್ದರೂ ಸಹ 2023-24ನೇ ಸಾಲಿನಲ್ಲಿ ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ ಕೃಷಿ ಭಾಗ್ಯ ಯೋಜನೆ ರಾಜ್ಯದ ಒಣ ಕೃಷಿ ಹವಾಮಾನ ವಲಯಗಳಲ್ಲಿ ಇರುವ ತಾಲೂಕುಗಳಲ್ಲಿ ಮಾತ್ರ ಅನುಷ್ಠಾನ ಮಾಡಲಾಗುತ್ತಿದೆ. ಹಾಗಾಗಿ ಗದಗ ಜಿಲ್ಲೆಯ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಒಣ ಕೃಷಿ ಹವಾಮಾನ ವಲಯದಲ್ಲಿ ಇಲ್ಲದಿರುವ ಕಾರಣ ಸೇರ್ಪಡೆ ಮಾಡಲಾಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ ಪಕ್ಷದ ಖಾತೆಗಳಿಂದ 65 ಕೋಟಿ ರೂ. ಕಡಿತಗೊಳಿಸಿದೆ – IT ವಿರುದ್ಧ ಗಂಭೀರ ಆರೋಪ

    2023-24ನೇ ಸಾಲಿನ ಆಯವ್ಯಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ರಾಜ್ಯದ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ ರಾಜ್ಯದ 24 ಜಿಲ್ಲೆ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ನು ಈಗಾಗಲೇ ಜಿಲ್ಲೆಗಳಿಗೆ ನೀಡಲಾಗಿದೆ. ಅದರಂತೆ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಹಿಂದೂ ಧಾರ್ಮಿಕ ಸಂಸ್ಥೆಗಳು & ಧರ್ಮದಾಯ ದತ್ತಿಗಳ ವಿಧೇಯಕ ಅಂಗೀಕಾರ

    ಪ್ರಸಕ್ತ ಸಾಲಿನ ಆರ್ಥಿಕ ವರ್ಷಾಂತ್ಯಕ್ಕೆ ಕೇವಲ ಒಂದು ತಿಂಗಳು ಬಾಕಿ ಇದ್ದು, ಈ ಹಂತದಲ್ಲಿ ಯಾವುದೇ ಸೇರ್ಪಡೆ/ಬದಲಾವಣೆ ಹಾಗೂ ಅದರಂತೆಯೇ ಅನುಷ್ಠಾನ ಕಷ್ಟಸಾಧ್ಯವಾಗಿರುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮಕ್ಕಳ್ ನೀಧಿ ಮೈಯಂ INDIA ಒಕ್ಕೂಟಕ್ಕೆ ಸೇರಿಲ್ಲ – ಕಮಲ್ ಹಾಸನ್ ಸ್ಪಷ್ಟನೆ