Tag: ಕೃಷಿ ಸಚಿವ

  • ನಮ್ಮ ಇಲಾಖೆಯಲ್ಲಿರುವ ಕಳ್ಳ ಅಧಿಕಾರಿಗಳಿಗೆ ನಾನೇ ಬಾಸ್‌ ಎಂದಿದ್ದ ಕೃಷಿ ಸಚಿವ ರಾಜೀನಾಮೆ

    ನಮ್ಮ ಇಲಾಖೆಯಲ್ಲಿರುವ ಕಳ್ಳ ಅಧಿಕಾರಿಗಳಿಗೆ ನಾನೇ ಬಾಸ್‌ ಎಂದಿದ್ದ ಕೃಷಿ ಸಚಿವ ರಾಜೀನಾಮೆ

    ಪಾಟ್ನಾ: ನಮ್ಮ ಇಲಾಖೆಯಲ್ಲಿರುವ ಅಧಿಕಾರಿಗಳು, ನೌಕರರು ಕಳ್ಳರು. ಈ ಕಳ್ಳರಿಗೆ ನಾನೇ ಸರ್ದಾರ (ಮುಖ್ಯಸ್ಥ) ಎಂದು ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದ್ದ ಬಿಹಾರದ ಕೃಷಿ ಸಚಿವ ಸುಧಾಕರ್‌ ಸಿಂಗ್‌ (Sudhakar Singh) ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ಅವರು ಸಿಂಗ್‌ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ (CMO) ಹೇಳಿಕೆಯಲ್ಲಿ ತಿಳಿಸಿದೆ. ಪ್ರವಾಸೋದ್ಯಮ ಸಚಿವ ಕುಮಾರ್ ಸರ್ವಜೀತ್ ಅವರನ್ನು ರಾಜ್ಯದ ನೂತನ ಕೃಷಿ ಸಚಿವರನ್ನಾಗಿ ನೇಮಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ನಿರ್ವಹಿಸಲಿದ್ದಾರೆ. ಇದನ್ನೂ ಓದಿ: ದುರ್ಗಾ ಪೂಜೆ ವೇಳೆ ಪೆಂಡಾಲ್‍ಗೆ ಬೆಂಕಿ – ಮಕ್ಕಳು ಸೇರಿದಂತೆ ಐವರು ಸಾವು, 66 ಮಂದಿಗೆ ಗಾಯ

    ಜೆಡಿಯು ಸಂಸದೀಯ ಮಂಡಳಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಮಾತನಾಡಿ, ಈ ಬೆಳವಣಿಗೆಯು ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ. ಲಾಲು ಪ್ರಸಾದ್ ಮತ್ತು ತೇಜಸ್ವಿ ಅವರು ರಾಜೀನಾಮೆ ಕೇಳಿದರೆ ನೀಡುತ್ತೇನೆ ಎಂದು ಸುಧಾಕರ್ ಸಿಂಗ್ ಈ ಹಿಂದೆಯೇ ಹೇಳಿದ್ದರು. ಬಹುಶಃ ಅವರಿಗೆ ರಾಜೀನಾಮೆ ನೀಡುವಂತೆ ಕೇಳಿರಬಹುದು ಎಂದು ತಿಳಿಸಿದ್ದಾರೆ.

    ಈಚೆಗೆ ಸುಧಾಕರ್‌ ಸಿಂಗ್‌ ಅವರು ರೈತರ ಸಮಾವೇಶವೊಂದರಲ್ಲಿ ಮಾತನಾಡುವಾಗ, ನನ್ನ ಇಲಾಖೆಯಲ್ಲಿ ಅನೇಕ ಕಳ್ಳರಿದ್ದು, ಹಣವನ್ನು ದೋಚುತ್ತಿದ್ದಾರೆ. ನಾನು ಇಲಾಖೆಗೆ ಪ್ರಭಾರಿಯಾಗಿರುವುದರಿಂದ ಅವರಿಗೆ ಮುಖ್ಯಸ್ಥನಾಗುತ್ತೇನೆ. ನನಗಿಂತ ಮೇಲಿರುವ ಅನೇಕ ಮುಖ್ಯಸ್ಥರಿದ್ದಾರೆ. ಈ ಸರ್ಕಾರವು ಹಳೆಯದು. ಅದರ ಕಾರ್ಯಶೈಲಿಯೂ ಹಳೆಯದು. ಸರ್ಕಾರವನ್ನು ಎಚ್ಚರಿಸುವುದು ಸಾಮಾನ್ಯ ಜನರ ಕರ್ತವ್ಯ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಐಸಿಯುನಲ್ಲಿ ಮುಲಾಯಂ ಸಿಂಗ್ – ಅಖಿಲೇಶ್‍ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • Exclusive Photos – ಗರಡಿಗಾಗಿ ಬಣ್ಣ ಹಚ್ಚಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

    Exclusive Photos – ಗರಡಿಗಾಗಿ ಬಣ್ಣ ಹಚ್ಚಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

    ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಗರಡಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್. ಮತ್ತೋರ್ವ ಸಚಿವ ಬಿ.ಸಿ. ಪಾಟೀಲ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಗೆಳೆಯನಿಗಾಗಿ ಪಾತ್ರ ಮಾಡಿದೆ ಎಂದಿದ್ದಾರೆ ಸೋಮಶೇಖರ್. ಇದನ್ನೂ ಓದಿ : ಜೇಮ್ಸ್ ಚಿತ್ರದ ಬೆಳಗ್ಗಿನ 6 ಗಂಟೆಯ 200 ಶೋಗಳ ಟಿಕೆಟ್ ಸೋಲ್ಡ್ ಔಟ್: ಏನೆಲ್ಲ ದಾಖಲೆ?

    “ನನಗೆ ನಟನೆಯ ಗಂಧಗಾಳಿ ಗೊತ್ತಿಲ್ಲ. ಗೆಳೆಯ ಪಾಟೀಲರು ಅವರ ಸಿನಿಮಾದಲ್ಲಿ ನಟಿಸುವಂತೆ ಕೇಳಿದರು. ಗೆಳೆಯನ ಪ್ರೀತಿಗಾಗಿ ಬಣ್ಣ ಹಚ್ಚಿದೆ. ನಾನು ಪಾತ್ರ ಮಾಡುತ್ತಿರುವುದರಿಂದ ಬೇರೊಬ್ಬ ನಟನ ಅವಕಾಶ ಕಸಿದುಕೊಂಡೆ ಅನಿಸುತ್ತಿದೆ’ ಎಂದಿದ್ದಾರೆ ಸಚಿವರು. ಇದನ್ನೂ ಓದಿ : ರಾಮ್ ಗೋಪಾಲ ವರ್ಮಾ ಡೇಂಜರೆಸ್ ಹುಡುಗಿ ಅಂತ ಹೇಳಿದ್ದು ಯಾರಿಗೆ?

    ಈ ಸಿನಿಮಾದಲ್ಲಿ ಅವರು ಸೋಮಣ್ಣ ಎನ್ನುವ ಪಾತ್ರ ನಿರ್ವಹಿಸುತ್ತಿದ್ದಾರೆ. ಅದು ಬಿ.ಸಿ. ಪಾಟೀಲ್ ಗೆಳೆಯನ ಪಾತ್ರವೇ ಎನ್ನುವುದು ವಿಶೇಷ. ಈ ಸಿನಿಮಾದಲ್ಲಿ ಪಾಟೀಲ್ ರು ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಇದನ್ನೂ ಓದಿ : ರಣಬೀರ್ ಮತ್ತು ಆಲಿಯಾ ಮದ್ವೆ ಡೇಟ್ ಮತ್ತೆ ಬದಲು: ಪ್ರಣಯ ಹಕ್ಕಿಗಳ ಪ್ರಲಾಪ

    “ಬೆಳಗ್ಗೆ ನಿರ್ದೇಶಕ ಯೋಗರಾಜ್ ಭಟ್ಟರು ನನ್ನ ಪಾತ್ರವನ್ನು ವಿವರಿಸಿದರೆ, ಡೈಲಾಗ್ ಹೇಳಿದರು. ಅವರು ಏನು ಹೇಳಿದರೋ ಅಷ್ಟನ್ನು ಮಾಡಿದ್ದೇನೆ. ಅದರಾಚೆ ನನಗೆ ನಟನೆ ಬಾರದು. ಪ್ರೇಕ್ಷಕರು ನನ್ನ ಪಾತ್ರವನ್ನು ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ’ ಎನ್ನುವುದು ಸೋಮಶೇಖರ್ ಮಾತು. ಇದನ್ನೂ ಓದಿ : ನಟ ಚೇತನ್ ಗಡಿಪಾರು? : ಹೋರಾಟಗಳೇ ನಟನಿಗೆ ಮುಳುವಾಗುತ್ತಾ..?

    ಬೆಂಗಳೂರಿನ ಜಿ.ವಿ ಅಯ್ಯರ್ ಸ್ಟುಡಿಯೋದಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ. ಬಿ.ಸಿ.ಪಾಟೀಲ್, ಸೋಮಶೇಖರ್, ಚಿತ್ರದ ನಾಯಕ ಯಶಸ್ ಸೂರ್ಯ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿದ್ದರು. ಇದನ್ನೂ ಓದಿ: ಕಂಗನಾಳನ್ನು ಹೀರೋಯಿನ್ ಮಾಡಿದ್ದು ಆ ಜ್ಯೋತಿಷಿ: ಅಸಲಿ ಸತ್ಯ ಬಾಯ್ಬಿಟ್ಟ ನಟ ಪ್ರಭಾಸ್

    ಅಂದಹಾಗೆ ಗಾಳಿಪಟ 2 ಸಿನಿಮಾದ ನಂತರ ಯೋಗರಾಜ್ ಭಟ್ ನಿರ್ದೇಶನ ಮಾಡಿರುವ ಚಿತ್ರವಿದು. ಹಳ್ಳಿ ಸೊಗಡಿನಲ್ಲಿ ಕಥೆಯನ್ನು ಈ ಸಿನಿಮಾದ ಮೂಲಕ ಹೇಳಲು ಹೊರಟಿದ್ದಾರಂತೆ ನಿರ್ದೇಶಕರು. ಇಂತಹ ಕಥೆಯನ್ನು ಅವರು ಇದೇ ಮೊದಲ ಬಾರಿಗೆ ಆಯ್ಕೆ ಮಾಡಿಕೊಂಡಿದ್ದಾರಂತೆ ಯೋಗರಾಜ್ ಭಟ್.

  • ನನ್ನ ವಿರುದ್ಧದ ಭ್ರಷ್ಟಾಚಾರ ದೂರು ದುರುದ್ದೇಶ ಪೂರಿತ: ಬಿ.ಸಿ ಪಾಟೀಲ್

    ನನ್ನ ವಿರುದ್ಧದ ಭ್ರಷ್ಟಾಚಾರ ದೂರು ದುರುದ್ದೇಶ ಪೂರಿತ: ಬಿ.ಸಿ ಪಾಟೀಲ್

    -ಮಾನನಷ್ಟ ಮೊಕದ್ದಮೆ ಹಾಕುತ್ತೇನೆ

    ಚಿತ್ರದುರ್ಗ: ರಾಜಕೀಯದಲ್ಲಿ ಆರೋಪ ಮಾಡುವವರು ಇರುತ್ತಾರೆ. ಯಾರು ಉತ್ತಮ ಕೆಲಸ ಮಾಡುತ್ತಾರೆ ಅಂತವರ ವಿರುದ್ಧ ಕೆಲವರು ಸುಮ್ಮನೆ ಆರೋಪ ಮಾಡುತ್ತಾರೆ. ನನ್ನ ವಿರುದ್ಧದ ಭ್ರಷ್ಟಾಚಾರ ದೂರು ದುರುದ್ದೇಶ ಪೂರಿತ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

    ಚಿತ್ರದುರ್ಗ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಎಲ್ಲರ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸುತ್ತಾರೆ. ಈ ಹಿಂದೆ ಸಿದ್ದರಾಮಯ್ಯ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಸಿಲ್ವರ್ ಬ್ರಿಡ್ಜ್ ನಿರ್ಮಾಣಕ್ಕೆ 500 ಕೋಟಿ ಕಿಕ್ ಬ್ಯಾಕ್ ಆರೋಪ ಬಂದಿತ್ತು. ಆರೋಪ ಮಾಡುವವರು ಇರುವುದು ಸಹಜ ನಾವು ಮಧ್ಯವರ್ತಿ, ಏಜೆಂಟ್‍ಗಳನ್ನು ದೂರವಿಟ್ಟಾಗ ಅವರು ಅಸಮಾಧಾನಗೊಂಡು ಈ ರೀತಿ ಹೇಳಿಕೆ ಕೊಡುವುದು ಸಹಜ. ಭ್ರಷ್ಟಾಚಾರ ಆರೋಪದ ಬಗ್ಗೆ ಯಾವುದೇ ತನಿಖೆಗೆ ನಾನು ಸಿದ್ಧ. ನಮ್ಮಲ್ಲಿ ಯಾವುದೇ ಕಳ್ಳತನದ ಪ್ರಕ್ರಿಯೆ ಇಲ್ಲ. ಕೃಷಿ ಇಲಾಖೆ ಒಂದೇ ಸಂಪೂರ್ಣ ಪಾರದರ್ಶಕವಾಗಿ ಕೆಲಸ ವಿರ್ವಹಿಸುತ್ತದೆ. ಯಾರು ಆರೋಪ ಮಾಡಿದ್ದಾರೆ ಅವರು ಆರೋಪವನ್ನು ಸಾಬೀತು ಮಾಡಬೇಕು ಇಲ್ಲದಿದದ್ದಲ್ಲಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಚಿತ್ರರಂಗವಷ್ಟೇ ಅಲ್ಲ ಕನ್ನಡ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿರುವುದಕ್ಕೆ ಹೆಮ್ಮೆಯಾಗ್ತಿದೆ: ಬೊಮ್ಮಾಯಿ

    ಕಾಂಗ್ರೆಸ್ ಜನವಿರೋಧಿ ಆಗಿದ್ದಕ್ಕೆ ಜನರಿಂದ ತಿರಸ್ಕಾರವಾಗಿ ವಿರೋಧ ಪಕ್ಷದ ಸ್ಥಾನದಲ್ಲಿದೆ. ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಅವಕಾಶವಿಲ್ಲ. ಅವರು ಹಾಗೆ ಇರುತ್ತಾರೆ. 21ದಿನ ಗಣೇಶೋತ್ಸವ ಆಚರಣೆಗೆ ಸಂಘ ಪರಿವಾರ ಪಟ್ಟು ವಿಚಾರವಾಗಿ ಮಾತನಾಡಿ, ಗಣೇಶೋತ್ಸವ 2ನೇ ದಿನ ನಡೆಯುತ್ತಿದ್ದು, ಸರ್ಕಾರದಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉಡುಪಿಯಲ್ಲಿ ಮತಾಂತರ ಪ್ರಕರಣ ಬಗ್ಗೆ ಸರ್ಕಾರ ಸೂಕ್ತ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿಸಿದರು.

    ಹಿರಿಯೂರು ಕ್ಷೇತ್ರದತ್ತ ಬಿ.ಸಿ.ಪಾಟೀಲ್ ಹಚ್ಚು ಒಲವು ವಿಚಾರವಾಗಿ ಮಾತನಾಡಿ, ಕ್ಷೇತ್ರದ ಶಾಸಕಿ ಆಹ್ವಾನದ ಮೇರೆಗೆ ಆಗಮಿಸಿದ್ದೇನೆ. ಹಿರಿಯೂರಲ್ಲಿ ಹಿಂದೆ ಪಿಎಸ್‍ಐ ಆಗಿ ನಾನು ಕರ್ತವ್ಯ ನಿರ್ವಹಿಸಿದ್ದೇನೆ. ಹಿರಿಯೂರು ಜನರ ಮೇಲೆ ನನಗೆ ಪ್ರೀತಿ ಜಾಸ್ತಿ ಇದೆ. ನನ್ನನ್ನು ನಾಲ್ಕು ಬಾರಿ ಗೆಲ್ಲಿಸಿದ ಹಿರಿಕೇರೂರು ಕ್ಷೇತ್ರ ಭದ್ರವಾಗಿದೆ ನನಗೆ ಅದೇ ಸಾಕು ಎಂದರು. ಇದನ್ನೂ ಓದಿ: ಸುದೀಪ್ ಒಬ್ಬ ನಟರಾಗುತ್ತಾರೆ ಅಂತ ಅಂದುಕೊಂಡಿರಲಿಲ್ಲ: ಬೊಮ್ಮಾಯಿ

  • ಬಿಜೆಪಿಯಲ್ಲಿ ಬಾಂಬೆ ಟೀಂ ಅಲ್ಲ, ಬಿಎಸ್ ವೈ, ಬಿಜೆಪಿ ಟೀಂ ಇದೆ: ಬಿ.ಸಿ ಪಾಟೀಲ್

    ಬಿಜೆಪಿಯಲ್ಲಿ ಬಾಂಬೆ ಟೀಂ ಅಲ್ಲ, ಬಿಎಸ್ ವೈ, ಬಿಜೆಪಿ ಟೀಂ ಇದೆ: ಬಿ.ಸಿ ಪಾಟೀಲ್

    ಚಾಮರಾಜನಗರ: ನಮ್ಮದು ಈಗ ಬಾಂಬೆ ಟೀಂ ಅಲ್ಲ. ಬಿಎಸ್ ವೈ ಟೀಂ, ಬಿಜೆಪಿ ಟೀಂ. ನಮ್ಮಲ್ಲಿ ಯಾವುದೇ ರೀತಿಯ ಬಿರುಕಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

    ಇಂದು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆಯ ಅಸಮಾಧಾನ ವಿಚಾರವಾಗಿ, ನಮ್ಮ ಐದು ಬೆರಳುಗಳೇ ಸಮವಿಲ್ಲ. ಅಂತೆಯೇ ಕೆಲವರಿಗೆ ಅತೃಪ್ತಿ ಆಗಿರುವುದು ಸಹಜ. ಶಾಸಕರು ಕೆಲ ಇಲಾಖೆಯನ್ನು ನಿರ್ವಹಿಸುವ ಇಚ್ಛೆ ಇರುವುದರಿಂದ ಅಸಮಾಧಾನ ಇರಲಿದ್ದು, ಬಳಿಕ ಶಮನ ಆಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

    ಮೂರು ಕೃಷಿ ಕಾನೂನು ವಿರುದ್ಧ ದೆಹಲಿಯಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರ 10 ಬಾರಿ ಸಭೆ ನಡೆಸಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ರೈತರೊಂದಿಗೆ ಹೊಂದಾಣಿಕೆ ಏರ್ಪಡಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

    ಶಿವಮೊಗ್ಗದಲ್ಲಿ ನಡೆದ ಗಣಿ ದುರಂತದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ. ಚಾಮರಾಜನಗರದಲ್ಲಿ ಗಣಿಗಾರಿಕೆಯಿಂದ ಎಲ್ಲೆಲ್ಲಿ ರೈತರಿಗೆ ತೊಂದರೆ ಉಂಟಾಗುತ್ತಿದೆ ಎಂಬ ಬಗ್ಗೆ ತಿಳಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಗಣಿ ಸಚಿವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

    ನಾನು ಇಚ್ಛೆಪಟ್ಟು ಕೃಷಿ ಖಾತೆಯನ್ನು ತೆಗೆದುಕೊಂಡಿದ್ದು, ರೈತರ ಬಾಳು ಹಸನಾದಾಗ ಮಾತ್ರ ನನಗೆ ತೃಪ್ತಿ. ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗಬೇಕು, ಉತ್ತಮ ಸೌಕರ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದೇನೆ ಎಂದು ಹೇಳಿದರು.

  • ವಿವಾದಕ್ಕೀಡಾದ ಕೃಷಿ ಸಚಿವರ ಹೇಳಿಕೆ – ಧೈರ್ಯ ತುಂಬಿದ್ದೇನೆ, ಕ್ಷಮೆ ಕೇಳಲ್ಲ ಅಂದ್ರು ಬಿ.ಸಿ.ಪಾಟೀಲ್

    ವಿವಾದಕ್ಕೀಡಾದ ಕೃಷಿ ಸಚಿವರ ಹೇಳಿಕೆ – ಧೈರ್ಯ ತುಂಬಿದ್ದೇನೆ, ಕ್ಷಮೆ ಕೇಳಲ್ಲ ಅಂದ್ರು ಬಿ.ಸಿ.ಪಾಟೀಲ್

    – ತಂದೆ ಹೇಳಿಕೆ ಸಮರ್ಥಿಸಿಕೊಂಡ ಸೃಷ್ಟಿ ಪಾಟೀಲ್

    ಬೆಂಗಳೂರು: ವಿವಾದಕ್ಕೀಡಾದ ತಮ್ಮ ಹೇಳಿಕೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ, ಧೈರ್ಯ ತುಂಬಿದ್ದೇನೆ, ಕ್ಷಮೆ ಕೇಳಲ್ಲ ಎಂದು ಹೇಳಿದ್ದಾರೆ.

    ನಾನು ಕ್ಷಮೆ ಕೇಳೋ ಪ್ರಶ್ನೆಯೇ ಇಲ್ಲ. ನಾನು ಏನ್ ಹೇಳಿದ್ದೇನೋ ಅದನ್ನ ಪೂರ್ಣವಾಗಿ ಕೇಳಿ ಅಂದಿದ್ದಾರೆ. ಕೆ.ಆರ್.ಪೇಟೆಯ ಲಕ್ಷ್ಮಿ ದೇವಿ ಅನ್ನೋವರು 6 ಎಕರೆ ಜಾಗದಲ್ಲಿ ಮಿಶ್ರಬೆಳೆ ಬೆಳೆದು ಯಶಸ್ವಿಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಂತರ ಶವಕ್ಕೆ, ಫೋಟೋಗೆ ಹಾರ ಹಾಕೋದಲ್ಲ. ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಹೇಳಿ ತಮ್ಮ ಹೇಳಿಕೆಯನ್ನ ಬಿ.ಸಿ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.

    ತಂದೆ ಹೇಳಿಕೆಗೆ ಪುತ್ರಿಯ ಸಮರ್ಥನೆ: ಮಾಧ್ಯಮಗಳು ಟಿಆರ್ ಪಿ ಹೆಚ್ಚಿಸಿಕೊಳ್ಳಲು ಅನಗತ್ಯ ವಿವಾದ ಸೃಷ್ಠಿಸುತ್ತಿವೆ. ನಮ್ಮಪ್ಪ ರೈತರಿಗೆ ಒಳ್ಳೆ ಕೆಲಸ ಮಾಡಿರುವಷ್ಟು ಇನ್ಯಾರೂ ಮಾಡಿಲ್ಲ ಎಂದು ತಂದೆಯನ್ನ ಹಾಡಿ ಹೊಗಳಿ ಅಟ್ಟಕ್ಕೇರಿಸಿದ್ದಾರೆ.

    ಕೌರವನ ಕಾಲೆಳೆದ ಕಾಂಗ್ರೆಸ್: ನಿಜವಾದ ಹೇಡಿಗಳು ಯಾರು? ರೈತರೋ? ಅಥವಾ ರಾತ್ರೋರಾತ್ರಿ ಮುಂಬೈಗೆ ಹಾರಿದವರೋ?, ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರ್ಕಾರವೋ? ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ? ಪರಿಹಾರ ಕೇಳಿದ್ದಕ್ಕೆ ರೈತನ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವವರೋ? ಅಂತ ಕಾಂಗ್ರೆಸ್ ಟ್ವೀಟ್ ಮಾಡಿ ಪಾಟೀಲರ ಕಾಲೆಳೆದಿದೆ

    ಅನ್ನದಾತ ಸ್ವಾಭಿಮಾನಿ: ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ. ಹೆಂಡತಿ, ಮಕ್ಕಳು, ನೆಂಟರು, ಊರಿನವರ ಮುಂದೆ ಮರ್ಯಾದೆ ಹೋಯಿತಲ್ಲ ಎಂದು ಸಾವಿಗೆ ಶರಣಾಗುತ್ತಾನೆ. ಕೃಷಿ ಸಚಿವರ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅಪಮಾನ. ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

    ಬಿ.ಸಿ.ಪಾಟೀಲ್ ಹೇಳಿದ್ದೇನು?: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಅವರು ಸಾಯುವಾಗ ತನ್ನ ಕುಟುಂಬದ ಬಗ್ಗೆ ಚಿಂತನೆ ಮಾಡಲ್ಲ ಅಂದಿದ್ದಾರೆ. ಮಾತು ಮುಂದುವರಿಸಿ ರೈತರ ಆತ್ಮಹತ್ಯೆಗೆ ನೀರಾವರಿ ಕಾರಣ ಅಲ್ಲ. ಮಂಡ್ಯದಲ್ಲಿ ನೀರಾವರಿ ಸೌಲಭ್ಯವಿದ್ದರೂ ಅತಿಹೆಚ್ಚು ರೈತ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ನೀರಾವರಿ ಸೌಲಭ್ಯವಿಲ್ಲದ ಕೋಲಾರದಲ್ಲಿ ಆತ್ಮಹತ್ಯೆ ಪ್ರಕರಣ ಕಡಿಮೆ ಇದೆ. ಸಾವಯವಗೊಬ್ಬರ ಬಳಸಿ, ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡ್ರೆ ಲಾಭ ಸಾಧ್ಯ. ಇಸ್ರೇಲ್ ಮಾದರಿಯಲ್ಲ, ಕೋಲಾರ ಮಾದರಿಯಲ್ಲಿ ಕೃಷಿ ಮಾಡುವುದನ್ನು ರಾಜ್ಯಕ್ಕೆ ಹೇಳಿ ಕೊಡುತ್ತೇವೆ ಎಂದು ಕೊಡಗಿನ ಪೊನ್ನಂಪೇಟೆಯಲ್ಲಿ ಹೇಳಿದ್ದರು.

  • ಕೊರೊನಾ ವಿರುದ್ಧದ ಹೋರಾಟಕ್ಕೆ 50 ಸಾವಿರ ರೂ. ದೇಣಿಗೆ ನೀಡಿದ ಕೌರವನ ಪುತ್ರಿ

    ಕೊರೊನಾ ವಿರುದ್ಧದ ಹೋರಾಟಕ್ಕೆ 50 ಸಾವಿರ ರೂ. ದೇಣಿಗೆ ನೀಡಿದ ಕೌರವನ ಪುತ್ರಿ

    ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಅನೇಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ದೇಣಿಗೆ ನೀಡಿ ಬೆಂಬಲ ಸೂಚಿಸಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಪುತ್ರಿ ಸೃಷ್ಟಿ ಪಾಟೀಲ್ ಅವರು ಕೂಡ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 50 ಸಾವಿರ ರೂ. ದೇಣಿಗೆ ನೀಡಿದ್ದಾರೆ.

    ತಾವು ದೇಣಿಗೆ ನೀಡುವ ಮಾಹಿತಿಯನ್ನು ಟ್ವೀಟ್ ಮಾಡಿರುವ ಸೃಷ್ಟಿ ಪಾಟೀಲ್, ಮಹಾಮಾರಿ ಕೊರೊನಾ ವೈರಸ್ ಅನ್ನು ತಡೆಗಟ್ಟಲು ರಾಜ್ಯ ಸರ್ಕಾರವು, ನಮ್ಮಲೆಲ್ಲರ ಹಿತ ಕಾಯುತ್ತಿದೆ. ನಾವೆಲ್ಲರೂ ಸೇರಿ ನಮ್ಮ ಕೈಯಲ್ಲಿ ಎಷ್ಟಾಗುತ್ತೋ ಅಷ್ಟು ಧನಸಹಾಯವನ್ನು ರಾಜ್ಯ ಸರ್ಕಾರಕ್ಕೆ ಮಾಡೋಣ. ನನ್ನ ಕಡೆಯಿಂದ ಆದಷ್ಟು ನಾನು ಮಾಡಿದ್ದೇನೆ. ನೀವೂ ಕೂಡ ಸಿಎಂ ರಿಲೀಫ್ ಫಂಡ್‍ಗೆ ಧನ ಸಹಾಯ ಮಾಡಬಹುದು ಎಂದು ಬರೆದುಕೊಂಡಿದ್ದಾರೆ.

    ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಇದರಿಂದಾಗಿ ಸಾಮಾನ್ಯ ಜನರ ಜೀವನ ಕಷ್ಟವಾಗಿದೆ. ಹೀಗಾಗಿ ಸೃಷ್ಟಿ ಪಾಟೀಲ್ ಕಳೆದ ಕೆಲವು ದಿನಗಳಿಂದ ತಂದೆ ಬಿ.ಸಿ.ಪಾಟೀಲ್ ಅವರ ಕ್ಷೇತ್ರದ ಜನರ ಸಹಾಯಕ್ಕೆ ನಿಂತಿದ್ದಾರೆ.

    ಸೃಷ್ಟಿ ಪಾಟೀಲ್ ಅವರು ಏಪ್ರಿಲ್ 5ರಂದು ಹಂಸಭಾವಿ ಹಾಗೂ ರಟ್ಟಿಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಪೊಲೀಸ್, ಗ್ರಾಮ ಪಂಚಾಯತಿ ಸ್ವಚ್ಛತಾ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಿದ್ದರು. ಜೊತೆಗೆ ಅಂದು ಅನೇಕರಿಗೆ ಮಾಸ್ಕ್ ಗಳನ್ನು ವಿತರಿಸಿದ್ದರು. ಹೀಗೆ ಹಾವೇರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಜನರಿಗೆ ಸಹಾಯ ಮಾಡುತ್ತಿದ್ದಾರೆ.

  • ರೈತ ಸಂಪರ್ಕ ಕೇಂದ್ರ ತೆರೆಯದ ಮೂವರು ಅಧಿಕಾರಿಗಳ ಅಮಾನತು

    ರೈತ ಸಂಪರ್ಕ ಕೇಂದ್ರ ತೆರೆಯದ ಮೂವರು ಅಧಿಕಾರಿಗಳ ಅಮಾನತು

    ಬೆಂಗಳೂರು: ರೈತ ಸಂಪರ್ಕ ಕೇಂದ್ರಗಳನ್ನು ತೆರೆಯದೆ ಕರ್ತವ್ಯ ಲೋಪ ಎಸಗಿರುವ ಹಿನ್ನಲೆಯಲ್ಲಿ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಸೂಚನೆ ಮೇರೆಗೆ ಕೃಷಿ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

    ಲಾಕ್‍ಡೌನ್‍ನಿಂದ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂಬ ಉದ್ದೇಶದಿಂದ ಮಾರ್ಚ್ 30 ಹಾಗೂ ಏಪ್ರಿಲ್ 2ರಂದು ರೈತ ಸಂಪರ್ಕ ಕೇಂದ್ರಗಳು, ಕೃಷಿ ಪರಿಕರ ಮಾರಾಟ ಮಳಿಗೆಗಳು ಮತ್ತು ಕೃಷಿ ಯಂತ್ರಧಾರೆಗಳನ್ನು ತೆರೆದು ರೈತರಿಗೆ ಅಗತ್ಯ ಸೇವೆಯನ್ನು ಒದಗಿಸಲು ಸುತ್ತೋಲೆ ಮೂಲಕ ಸೂಚಿಸಲಾಗಿರುತ್ತದೆ. ಸಚಿವರ ಸೂಚನೆ ಹಾಗೂ ಇಲಾಖೆಯ ಸುತ್ತೋಲೆ ಸೂಚನೆಯಿದ್ದಾಗ್ಯೂ ಸಹ ದೇವನಹಳ್ಳಿ ಕಸಬಾ ರೈತ ಸಂಪರ್ಕ ತೆರೆಯದಿರುವ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲರಿಗೆ ದೂರು ಬಂದಿರುತ್ತದೆ.

    ಈ ದೂರನ್ನಾಧರಿಸಿ ಸಚಿವರು ಕೃಷಿ ನಿರ್ದೇಶಕರಿಗೆ ಈ ರೈತ ಸಂಪರ್ಕ ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿರುತ್ತಾರೆ. ಅದರಂತೆ ದೇವನಹಳ್ಳಿ ಕಸಬಾ ರೈತ ಸಂಪರ್ಕ ಕೇಂದ್ರಕ್ಕೆ ಕೃಷಿ ನಿರ್ದೇಶಕರಾದ ಶ್ರೀನಿವಾಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಎರಡು ದಿನಗಳಿಂದ ರೈತ ಸಂಪರ್ಕ ಕೇಂದ್ರ ತೆರೆಯದಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಕೃಷಿ ನಿರ್ದೇಶಕರು ಸಚಿವರಿಗೆ ಮಾಹಿತಿ ನೀಡಿದ್ದು, ರೈತ ಸಂಪರ್ಕ ಕೇಂದ್ರ ತೆರೆಯದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಆಯುಕ್ತರಿಗೆ ಸೂಚನೆ ನೀಡಿರುತ್ತಾರೆ.

    ಅದರಂತೆ ಕರ್ತವ್ಯ ಲೋಪ ಎಸಗಿದ ದೇವನಹಳ್ಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರೇವಣಪ್ಪಮನಗೂಳಿ, ಕೃಷಿ ಅಧಿಕಾರಿ ಅರುಣ ಎನ್. ಹಾಗೂ ಸಹಾಯಕ ಕೃಷಿ ಅಧಿಕಾರಿ ಶಿವಮೂರ್ತಿ ಬಿ.ಹೆಚ್ ಈ ಮೂವರು ಅಧಿಕಾರಿಗಳನ್ನು ಏಪ್ರಿಲ್ 3 ರಂದು ಅಮಾನತುಗೊಳಿಸಲಾಗಿದೆ.

  • ಎಲ್ಲರೂ ರಾಜೀನಾಮೆಗೆ ಸಿದ್ಧ- ಸಚಿವ ಶಿವಶಂಕರ್ ರೆಡ್ಡಿ

    ಎಲ್ಲರೂ ರಾಜೀನಾಮೆಗೆ ಸಿದ್ಧ- ಸಚಿವ ಶಿವಶಂಕರ್ ರೆಡ್ಡಿ

    ಚಿಕ್ಕಬಳ್ಳಾಪುರ: ಪಕ್ಷದಲ್ಲಿ ಯಾರು ಅಸಮಾಧಾನವಾಗಿದ್ದಾರೆ ಅವರಿಗೆ ಇನ್ನೊಂದು ಹಂತದಲ್ಲಿ ಮಂತ್ರಿ ಸ್ಥಾನ ಕೊಡುವ ನಿರ್ಧಾರವನ್ನು ಹೈಕಮಾಂಡ್ ಮಾಡಿದೆ. ನಾವೆಲ್ಲರೂ ರಾಜೀನಾಮೆ ನೀಡಲು ಒಪ್ಪಿಗೆ ನೀಡಿದ್ದು, ಸಿದ್ಧರಾಗಿದ್ದೇವೆ ಎಂದು ಕೃಷಿ ಸಚಿವ ಶಿವಶಂಕರ್ ರೆಡ್ಡಿ ರಾಜೀನಾಮೆ ಕೊಡುವ ಮುನ್ಸೂಚನೆ ನೀಡಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಇಬ್ಬರು ಪಕ್ಷೇತರರಿಗೆ ಸಚಿವ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಅವಕಾಶ ಮಾಡಿಕೊಡಬೇಕು ಎಂದು ಈಗಾಗಲೇ ತೀರ್ಮಾನವನ್ನೂ ಮಾಡಲಾಗಿದ್ದು, ಅವಧಿ ನಿಗದಿಪಡಿಸಲಾಗಿದೆ. ಅವಧಿ ಮುಗಿದ ಬಳಿಕ ಪರ್ಯಾಯವಾಗಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಪಕ್ಷದ ಮಟ್ಟದಲ್ಲಿ ತೀರ್ಮಾನ ಆಗಿದೆ ಎಂದರು.

    ಮೈತ್ರಿ ಪಾಲನೆಯಲ್ಲಿ ಕೆಲವೊಂದು ತೊಂದರೆಗಳು ಆಗಿವೆ. ಆದರೆ ಬಿಜೆಪಿಯೆಂಬ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡಬೇಕು ಎಂಬ ದೃಷ್ಟಿಯಿಂದ ಇಂದು ನಾವು ಮೈತ್ರಿ ಮಾಡಿಕೊಂಡಿದ್ದೇವೆ. ಹೀಗಾಗಿ ಕೆಲವು ತೊಂದರೆಗಳಾಗಿವೆ. ಅವುಗಳನ್ನು ಸಹಿಸಿಕೊಂಡು ಮುಂದೆ ನಡೆಯಬೇಕಾಗಿದೆ ಎಂದು ತಿಳಿಸಿದರು.

    ಇದೇ ವೇಳೆ ಶಾಸಕ ಬಿಸಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪಾಟೀಲ್ ಸಚಿವರಾಗಬೇಕಿತ್ತು. ಆ ಭಾಗದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ಹತಾಶ ಮನೋಭಾವದಿಂದ ಹೇಳಿದ್ದಾರೆ ಅಂದ್ರು.

  • ಕುಮಾರಸ್ವಾಮಿ ಬದಲು ಸಿದ್ದರಾಮಯ್ಯನವ್ರಿಗೆ ಸಿಎಂ ಪಟ್ಟ ಕಟ್ಟೋದಾದ್ರೆ ಓಕೆ: ಸಚಿವ ಶಿವಶಂಕರ ರೆಡ್ಡಿ ಬಾಂಬ್

    ಕುಮಾರಸ್ವಾಮಿ ಬದಲು ಸಿದ್ದರಾಮಯ್ಯನವ್ರಿಗೆ ಸಿಎಂ ಪಟ್ಟ ಕಟ್ಟೋದಾದ್ರೆ ಓಕೆ: ಸಚಿವ ಶಿವಶಂಕರ ರೆಡ್ಡಿ ಬಾಂಬ್

    ಚಾಮರಾಜನಗರ: ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಬದಲಿಸಿ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರನ್ನು ನೂತನ ಸಿಎಂ ಆಗಿ ಆಯ್ಕೆ ಮಾಡುವುದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳುವ ಮೂಲಕ ಕೃಷಿ ಸಚಿವ ಶಿವಶಂಕರ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರಿಗೆ ಸಿದ್ದರಾಮಯ್ಯನವರ ಸಿಎಂ ಆಗುತ್ತೇನೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರು ಯಾವ ರೀತಿ ಹೇಳಿದ್ದಾರೋ ನಮಗೆ ಗೊತ್ತಿಲ್ಲ, ನಾವು ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡುವ ಆಸೆ ಹೊಂದಿದ್ದೆವು. ಹೀಗಾಗಿ ಸಿದ್ದರಾಮಯ್ಯನವರನ್ನು ಸಿಎಂ ಮಾಡಲೇಬೇಕೆಂದು ವಿಧಾನಸಭಾ ಚುನಾವಣೆಯಲ್ಲಿ ಪಣ ತೊಟ್ಟಿದ್ದೇವು. ಆದರೆ ನಮಗೆ ಬೇಕಾದ ಬಹುಮತ ಸಿಗಲಿಲ್ಲ. ಹೀಗಾಗಿ ಅವರು ಮುಖ್ಯಮಂತ್ರಿಯಾಗುವ ಅವಕಾಶ ಕೈ ತಪ್ಪಿತು. ಇಂದು ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಒಂದು ವೇಳೆ ಸಭೆಯಲ್ಲಿ ಎಲ್ಲರೂ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ನಿರ್ಧಾರ ಮಾಡಿದರೆ, ನಮ್ಮೆಲ್ಲರ ಸಂಪೂರ್ಣ ಬೆಂಬಲ ಇದೆ ಎಂದು ಮಾಜಿ ಸಿಎಂ ಪರವಾಗಿ ಬ್ಯಾಟ್ ಬೀಸಿದರು.

    ಸಮನ್ವಯ ಸಮಿತಿಯಲ್ಲಿ ತೀರ್ಮಾನವಾದರೆ, ಮುಖ್ಯಮಂತ್ರಿಗಳ ಬದಲಾವಣೆ ಖಚಿತ. ಎರಡು ಪಕ್ಷಗಳ ಸಮನ್ವಯ ಸಮಿತಿಯವರು ಈ ಬಗ್ಗೆ ಕುಳಿತು ತೀರ್ಮಾನ ಕೈಗೊಳ್ಳಬೇಕು. ಸಮ್ಮಿಶ್ರ ಸರ್ಕಾರದ ಉಸ್ತುವಾರಿಯನ್ನು ಸಮನ್ವಯ ಸಮಿತಿ ಹೊಂದಿದೆ. ಸಮಿತಿಯ ನಿರ್ಧಾರಗಳಿಗೆ ಎಲ್ಲರೂ ಬದ್ಧರಾಗಿರಬೇಕು. ಒಂದು ವೇಳೆ ಸಭೆಯಲ್ಲಿ ಕುಮಾರಸ್ವಾಮಿಯವರನ್ನು ಬದಲಾಯಿಸಿ, ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದರೆ ನಮ್ಮ ಎಲ್ಲಾ ಶಾಸಕರುಗಳು ಬದ್ಧರಾಗಿರುತ್ತೇವೆ ಎಂದು ಹೇಳಿಕೆ ನೀಡಿದರು.

    ಬಿಜೆಪಿಯವರು ಸಮ್ಮಿಶ್ರ ಸರ್ಕಾರ ಬೀಳುತ್ತದೆಂಬ ಹಗಲುಗನಸು ಕಾಣುತ್ತಾ ಕುಳಿತುಕೊಂಡಿದ್ದಾರೆ. ಅವರುಗಳು ಒಡೆದು ಆಳುವ ನೀತಿಗೆ ಹೆಚ್ಚಿನ ಆಧ್ಯತೆ ನೀಡುವವರು. ನಮ್ಮ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಜಾತ್ಯತೀತ ಪಕ್ಷಗಳಾಗಿದ್ದು, ಸಮಾನ ಮನಸ್ಕರೊಂದಿಗೆ ಸರ್ಕಾರ ನಡೆಸುತ್ತಿದ್ದೇವೆ. ಸರ್ಕಾರಕ್ಕೆ ಯಾವುದೇ ಕಂಟಕ ಎದುರಾಗುವುದಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಕ್ಕಿ ಕಡಿತ ಮಾಡಿದ್ಯಾಕೆ, ನನಗೆ ಈಗ 2 ಕೆ.ಜಿ. ಅಕ್ಕಿ ಬೇಕು: ಕಾರ್ಯಕ್ರಮದಲ್ಲೇ ಸಚಿವರಿಗೆ ವ್ಯಕ್ತಿಯಿಂದ ಬೇಡಿಕೆ

    ಅಕ್ಕಿ ಕಡಿತ ಮಾಡಿದ್ಯಾಕೆ, ನನಗೆ ಈಗ 2 ಕೆ.ಜಿ. ಅಕ್ಕಿ ಬೇಕು: ಕಾರ್ಯಕ್ರಮದಲ್ಲೇ ಸಚಿವರಿಗೆ ವ್ಯಕ್ತಿಯಿಂದ ಬೇಡಿಕೆ

    ಚಿಕ್ಕಬಳ್ಳಾಪುರ: ಅನ್ನಭಾಗ್ಯ ಪಡಿತರದಲ್ಲಿ ಎರಡು 2 ಕೆ.ಜಿ. ಅಕ್ಕಿಯನ್ನು ಕಡಿತ ಮಾಡಿದ್ದು ಯಾಕೆ? ನನಗೆ 2 ಕೆಜಿ ಅಕ್ಕಿ ಬೇಕು ಕೊಡಿ ಎಂದು ಖಾಲಿ ಚೀಲ ಹಿಡಿದು ಸರ್ಕಾರಿ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ಕೃಷಿ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.

    ಗೌರಿಬಿದನೂರು ತಾಲೂಕಿನ ಕಾಚಮಾಚೇನಹಳ್ಳಿ ಗ್ರಾಮದ ಬೊಮ್ಮಲಿಂಗೇಶ್ವರ ದೇವಾಲಯದ ಆವರಣದಲ್ಲಿ 2018-19 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಉದ್ಘಾಟಿಸಿದರು. ಈ ವೇಳೆ ಕಾರ್ಯಕ್ರಮದ ಬಳಿ ಬಂದ ಸ್ಥಳೀಯ ವ್ಯಕ್ತಿಯೊರ್ವ ಏಕೆ ಎರಡು ಕೆ.ಜಿ. ಅಕ್ಕಿ ಕಡಿತ ಮಾಡಿದ್ದೀರಿ ಹೇಳಿ ಅಂತ ಪ್ರಶ್ನೆ ಮಾಡಿದ್ರು. ಅಷ್ಟೇ ಅಲ್ಲದೇ ನನಗೆ 2 ಕೆ.ಜಿ ಅಕ್ಕಿ ಕೊಡಲೇ ಬೇಕು ಅಂತಾ ಖಾಲಿ ಚೀಲ ತಂದು ಪ್ರದರ್ಶನ ಮಾಡಿದರು.

    ಕಾಯಕ್ರಮದ ಧ್ವನಿವರ್ಧಕದ ಧ್ವನಿಯಿಂದ ವ್ಯಕ್ತಿಯ ಮಾತು ಸಚಿವರ ಕಿವಿಗೆ ಬೀಳಲಿಲ್ಲ. ಅಷ್ಟರಲ್ಲಿಯೇ ಅಲ್ಲೇ ಇದ್ದ ಸ್ಥಳೀಯರು ವ್ಯಕ್ತಿಯನ್ನು ಸಮಾಧಾನ ಪಡಿಸಲು ಯತ್ನಿಸಿದರು. ಕೊನೆಗೆ ಯಾರ ಮಾತನ್ನು ಕೇಳದ ಸ್ಥಿತಿಯಲ್ಲಿದ್ದ ಅವರನ್ನು ಪೊಲೀಸರು ಕಾರ್ಯಕ್ರಮದಿಂದ ಹೊರಗೆ ಕರೆದುಕೊಂಡರು.

    https://youtu.be/IdCjm6_9ABA