Tag: ಕೃಷ್ಣಪ್ರಿಯಾ

  • ಮಗುವಿನ ನಿರೀಕ್ಷೆಯಲ್ಲಿ ದಕ್ಷಿಣದ ಖ್ಯಾತ ನಿರ್ದೇಶಕ ಅಟ್ಲಿ

    ಮಗುವಿನ ನಿರೀಕ್ಷೆಯಲ್ಲಿ ದಕ್ಷಿಣದ ಖ್ಯಾತ ನಿರ್ದೇಶಕ ಅಟ್ಲಿ

    ಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು ಅಟ್ಲಿ. ಕಮರ್ಷಿಯಲ್​ ಸಿನಿಮಾದ ಮುಖ ಬದಲಿಸುವುದರ ಜತೆಗೆ ಅತ್ಯಂತ ಯಶಸ್ವಿ ನಿರ್ದೇಶಕ ಎಂಬ ಖ್ಯಾತಿ ಇರುವ ಅಟ್ಲಿ, ತಮಿಳಿನಲ್ಲಿ ಖ್ಯಾತ ನಟ ‘ಇಳಯ ದಳಪತಿ’ ವಿಜಯ್​ ಅಭಿನಯದಲ್ಲಿ ‘ಥೇರಿ’, ‘ಮರ್ಸಲ್​’, ‘ಬಿಜಿಲ್​’ ಮುಂತಾದ ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿದವರು. ಇದೀಗ ಶಾರೂಖ್​ ಅಭಿನಯದ ‘ಜವಾನ್’ ಚಿತ್ರವನ್ನು ಅವರು ನಿರ್ದೇಶಿಸುತ್ತಿದ್ದು, ಈ ಚಿತ್ರ ಮುಂದಿನ ವರ್ಷ ಬಿಡುಗಡೆಯಾಗುತ್ತಿದೆ.

    ತಮ್ಮ ಬಹುವರ್ಷಗಳ ಗೆಳತಿ ಕೃಷ್ಣ ಪ್ರಿಯಾ ಅವರನ್ನು 2014ರಲ್ಲಿ ಮದುವೆಯಾದ ಅಟ್ಲಿ, ಅವರೊಂದಿಗೆ ನೆಮ್ಮದಿಯ ವೈವಾಹಿಕ ಜೀವನ ನಡೆಸುತ್ತಿದ್ದಾರೆ. ಈ ದಂಪತಿಯು ಎ ಫಾರ್ ಆಪಲ್ ಪ್ರೊಡಕ್ಷನ್ ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿ, ಅದರಡಿ ಎರಡು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದೆ. ಮದುವೆಯಾಗಿ ಎಂಟು ವರ್ಷಗಳ ನಂತರ, ಇದೀಗ ಅಟ್ಲಿ ಮತ್ತು ಪ್ರಿಯಾ ಹೊಸ ಅನುಭವಕ್ಕೆ ತಯಾರಾಗುತ್ತಿದ್ದಾರೆ. ಪುಟ್ಟ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: IMDB 2022ರ ಜನಪ್ರಿಯ ಭಾರತೀಯ ಸಿನಿಮಾ ಪಟ್ಟಿಯಲ್ಲಿ ಕನ್ನಡದ ಟಾಪ್‌ 3 ಚಿತ್ರಗಳು

    ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿರುವ ಅವರು, ‘ಇಷ್ಟು ವರ್ಷಗಳ ಕಾಲ ನಮ್ಮ ಮೇಲೆ ಜನ ತೋರಿದ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾವು ಕೃತಜ್ಞರಾಗಿರುತ್ತೇವೆ, ನಿಮ್ಮ ಹಾರೈಕೆ ಮತ್ತು ಪ್ರೀತಿ ನಮ್ಮ ಪುಟ್ಟ ಮಗುವಿನ ಮೇಲೆಯೂ ಇರಬೇಕು ಎಂದು ನಾವು ಬಯಸುತ್ತೇವೆ. ನಿಮ್ಮೆಲ್ಲರ ಆಶೀರ್ವಾದದಿಂದ ನಮ್ಮ ಪುಟ್ಟ ಮಗುವಿನ ಆಗಮನಕ್ಕಾಗಿ ಕಾತುರದಿಂದ ಕಾಯುತ್ತಿದ್ದೇವೆ’ ಎಂದು ಅಟ್ಲಿ ಮತ್ತು ಪ್ರಿಯಾ ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 8 ದಿನಕ್ಕೆ ಪಂಚಾಯತ್‌ ಕೆಲಸಕ್ಕೆ ಸೇರಿದ ಎಂಜಿನಿಯರಿಂಗ್‌ ಪದವೀಧರೆ ಸಹೋದ್ಯೋಗಿಯ ಆಸೆಗೆ ಪ್ರಾಣ ಬಿಟ್ಟಳು

    8 ದಿನಕ್ಕೆ ಪಂಚಾಯತ್‌ ಕೆಲಸಕ್ಕೆ ಸೇರಿದ ಎಂಜಿನಿಯರಿಂಗ್‌ ಪದವೀಧರೆ ಸಹೋದ್ಯೋಗಿಯ ಆಸೆಗೆ ಪ್ರಾಣ ಬಿಟ್ಟಳು

    ತಿರುವನಂತಪುರಂ: ಸರ್ಕಾರಿ ಕೆಲಸಕ್ಕೆ ಸೇರಿದ ಯುವತಿ 8 ದಿನಕ್ಕೆ, ಸಹೋದ್ಯೋಗಿಯಿಂದಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಕೇರಳದ ಕೋಯ್ಕೋಡ್‍ನಲ್ಲಿ ನಡೆದಿದೆ.

    ಕೃಷ್ಣಪ್ರಿಯಾ(22) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಥಿಕ್ಕೋಡಿ ನಿವಾಸಿ ನಂದನ್‍ಕುಮಾರ್(26) ಪಂಚಾಯತ್ ದಿನಗೂಲಿ ನೌರಕನಾಗಿದ್ದ ನಂದನ್‍ಕುಮಾರ್ ಕೃಷ್ಣಪ್ರಿಯಾಗೆ ಬೆಂಕಿಯಿಟ್ಟು ತಾನೂ ಪ್ರಾಣ ಬಿಟ್ಟಿದ್ದಾನೆ.

    ಸ್ನಾತಕೋತ್ತರ ಪದವಿಯಲ್ಲಿ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದ ಕೃಷ್ಣಪ್ರಿಯಾ ಪಂಚಾಯತ್ ಕಚೇರಿಯಲ್ಲಿ ಯೋಜನಾ ಸಹಾಯಕಿ ಹುದ್ದೆಗೆ(project assistant in the Panchayat) ಕೇವಲ 8 ದಿನಗಳ ಹಿಂದಷ್ಟೇ ಸೇರಿದ್ದಳು. ನಂದನ್‍ಕುಮಾರ್ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಪಂಚಾಯಾತ್ ಕಚೇರಿಯ ಮುಂದೆಯೇ ಕೃಷ್ಣಪ್ರಿಯಾಗೆ ಬೆಂಕಿ ಹಚ್ಚಿದ್ದಾನೆ. ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಪಂಚಾಯತ್ ಕಚೇರಿಯ ಸಿಬ್ಬಂದಿ ಸ್ಥಳೀಯರ ಸಹಾಯ ಪಡೆದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಚಿಕಿತ್ಸೆ ಫಲಕಲಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆ ಶೌಚಾಲಯ ಸ್ವಚ್ಛಗೊಳಿಸಿದ ಮಧ್ಯಪ್ರದೇಶದ ಸಚಿವ

    ಮದುವೆ ಪ್ರಸ್ತಾಪವನ್ನು ಕೃಷ್ಣಪ್ರಿಯಾ ತಿರಸ್ಕರಿಸಿದ್ದಳು. ಈ ವಿಚಾರವಾಗಿ ನೊಂದಿದ್ದ ನಂದನ್‍ಕುಮಾರ್ ಈ ಕೃತ್ಯವನ್ನು ಮಾಡಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಇಬ್ಬರ ಸಾವಿಗೆ ಕಾರಣವೇನು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ. ಇದನ್ನೂ ಓದಿ:  7 ಎಕರೆ ಆಸ್ತಿಗಾಗಿ ಕಿಡ್ನಾಪ್ ಆಗಿದ್ದ 98ರ ಅಜ್ಜಿ ಓಣಿಯಲ್ಲಿ ಪತ್ತೆ