Tag: ಕೆಂಪುಕೋಟೆ

  • 75ನೇ ಅಮೃತ ಮಹೋತ್ಸವ – ದೆಹಲಿಯಲ್ಲಿ ಪ್ರಧಾನಿ ಮೋದಿ ಸುರಕ್ಷತೆಗೆ ಭಾರೀ ಭದ್ರತೆ

    75ನೇ ಅಮೃತ ಮಹೋತ್ಸವ – ದೆಹಲಿಯಲ್ಲಿ ಪ್ರಧಾನಿ ಮೋದಿ ಸುರಕ್ಷತೆಗೆ ಭಾರೀ ಭದ್ರತೆ

    ನವದೆಹಲಿ: ಸ್ವಾತಂತ್ರ‍್ಯ ದಿನಾಚರಣೆ ಸಮೀಪಿಸುತ್ತಿದ್ದು, ಈ ಬಾರಿ 75ನೇ ಅಮೃತ ಮಹೋತ್ಸವ ಅದ್ಧೂರಿಯಾಗಿ ಆಚರಿಸಲು ಭಾರತ ಸಜ್ಜಾಗಿದೆ. ಆದರೆ ಸ್ವಾತಂತ್ರ‍್ಯ ದಿನಾಚರಣೆಗೂ ಮುನ್ನವೇ ದಾಳಿ ನಡೆಸುವುದಾಗಿ ಉಗ್ರ ಸಂಘಟನೆಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭಾರೀ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

    ದೆಹಲಿಯ ಮಧ್ಯಭಾಗದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲು ನಿರ್ಧರಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಾದ್ಯಂತ ಅಣುಕು ಪ್ರದರ್ಶನ ಮಾಡಲಾಗಿದ್ದು, ಜನಸಂದಣಿ ಹಾಗೂ ಸೂಕ್ಷ್ಮವಲಯಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ದಯವಿಟ್ಟು ರಜೆ ಕೊಡಬೇಡಿ: ಜಿಲ್ಲಾಧಿಕಾರಿಗೆ ವಿದ್ಯಾರ್ಥಿನಿ ಮನವಿ

    ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅದಕ್ಕಾಗಿ ದೆಹಲಿಯ ಕೆಂಪುಕೋಟೆ ಸುತ್ತಲೂ 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

    ಈ ಬಾರಿ 75ನೇ ಅಮೃತ ಮಹೋತ್ಸವ ಆಗಿರುವುದರಿಂದ ಸುರಕ್ಷತೆಗೆ ವಿಶೇಷ ಒತ್ತು ನೀಡಲಾಗಿದೆ. ಕೇಂದ್ರದ ಏಜೆನ್ಸಿ ಹಾಗೂ ಗುಪ್ತಚರ ಇಲಾಖೆಗಳೊಂದಿಗೆ ಸಮನ್ವಯದಿಂದ ಕರ್ತವ್ಯ ನಿರ್ವಹಿಸಲಾಗುತ್ತದೆ. ಕೆಂಪುಕೋಟೆ ಹಾಗೂ ಸಮೀಪದ ಪ್ರದೇಶಗಳಲ್ಲಿ ನಿಗಾ ಇಡಲು 400 ಕಿಟ್ ಫ್ಲೈಯರ್ಸ್‌ (ಗಾಳಿಪಟ ಹಾರಾಟಗಾರರು)ಗಳನ್ನು ನಿಯೋಜಿಸಲಾಗಿದೆ. ಗಾಳಿಪಟ, ಡ್ರೋನ್ ಹಾಗೂ ಮೊದಲಾದ ಹಾರುವ ವಸ್ತುಗಳು ಕಾಣಿಸದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ 50 ಪೆಟ್ರೋಲ್‌ ಬಂಕ್‌ ತೆರೆಯಲಿದೆ ಐಒಸಿ

    ಸಾಂದರ್ಭಿಕ ಚಿತ್ರ

    1 ಸಾವಿರಕ್ಕೂ ಹೈ ಸ್ಪೆಸಿಫಿಕ್ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಈ ಕ್ಯಾಮೆರಾಗಳು ಕೆಂಪುಕೋಟೆಗೆ ಹೋಗುವ ವಿಐಪಿ ಮಾರ್ಗಗಳನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತವೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಆಜಾದಿ ಕಾ ಅಮೃತ ಮಹೋತ್ಸವಕ್ಕೆ ಉಗ್ರರ ಕರಿ ನೆರಳು – ಕೆಂಪುಕೋಟೆಯ ಸುತ್ತ 1,000 ಅಧಿಕ ಸಿಸಿಟಿವಿ ಕ್ಯಾಮೆರಾ

    ಆಜಾದಿ ಕಾ ಅಮೃತ ಮಹೋತ್ಸವಕ್ಕೆ ಉಗ್ರರ ಕರಿ ನೆರಳು – ಕೆಂಪುಕೋಟೆಯ ಸುತ್ತ 1,000 ಅಧಿಕ ಸಿಸಿಟಿವಿ ಕ್ಯಾಮೆರಾ

    ನವದೆಹಲಿ: ದೇಶದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ನಡೆಯುತ್ತಿದ್ದು, ಈ‌ ಸಂಭ್ರಮಾಚರಣೆ ಮೇಲೆ ಭಯೋತ್ಪಾದಕರ ಕರಿ ನೆರಳು ಬಿದ್ದಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ವೇಳೆ ಭಯೋತ್ಪಾದಕ ಚಟುವಟಿಕೆಗಳು ನಡೆಯುವ ಬೆದರಿಕೆಗಳು ಬಂದಿದೆ.

    ಲಷ್ಕರ್ ಎ ತೊಯ್ಬಾ, ಜೈಷ್ ಎ ಮೊಹಮ್ಮದ್ ಸಂಘಟನೆಗಳಿಂದ ಸಂಭವನೀಯ ದಾಳಿಗಳ ಬಗ್ಗೆ ಗುಪ್ತಚರ ಇಲಾಖೆಯಿಂದ ಎಚ್ಚರಿಕೆ ಬಂದಿದ್ದು ಕೆಂಪುಕೋಟೆಯ ಸುತ್ತ ಭದ್ರತೆ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಕೆಂಪುಕೋಟೆಯ ಸುತ್ತ ಭಾರಿ ಭದ್ರತೆ ನಿಯೋಜಿಸಲು ಸಿದ್ದತೆಗಳು ಆರಂಭಗೊಂಡಿದೆ. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನವೇ ಭಾರತದ ಮೇಲೆ ಉಗ್ರರ ದಾಳಿ ಭೀತಿ: ಗುಪ್ತಚರ ಇಲಾಖೆ ಎಚ್ಚರಿಕೆ

    ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೆಂಪುಕೋಟೆಗೆ ಸಿಸಿಟಿವಿ ಸರ್ಪಗಾವಲು ಹಾಕಲು ತಿರ್ಮಾನಿಸಿದ್ದು, 1,000 ಕ್ಕೂ ಇಂಟರ್ನೆಟ್ ಪ್ರೊಟೊಕಾಲ್ (IP) ಆಧಾರಿತ ಸಿಸಿಟಿವಿಗಳ ಅಳವಡಿಕೆಗೆ ನಿರ್ಧಾರ ಮಾಡಲಾಗಿದೆ. 2 ಮೆಗಾ ಪಿಕ್ಸೆಲ್‌ನ 80% IP ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಕೆಂಪುಕೋಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಸುಮಾರು 20%ನಷ್ಟು 4 ಮೆಗಾಫಿಕ್ಸೆಲ್‌ನ IP ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ಕೋಟೆಯ ಆವರಣದೊಳಗೆ ಅಳವಡಿಕೆಗೆ ಚಿಂತಿಸಿದೆ.

    ಇಂಟರ್ನೆಟ್ ಪ್ರೊಟೊಕಾಲ್ ಸಿಸಿಟಿವಿ ಕ್ಯಾಮೆರಾಗಳು ಹೆಚ್ಚು ಸ್ಪಷ್ಟತೆ ಹೊಂದಿದ್ದು, ದೃಶ್ಯಗಳಲ್ಲಿ ವಿಶೇಷ ಜೂಮ್ ವ್ಯವಸ್ಥೆ ಹೊಂದಿದೆ. ಅಲ್ಲದೇ ಇದರಲ್ಲಿ ಮುಖ, ಧ್ವನಿ ಪತ್ತೆ ಮಾಡುವ ಸಾಮರ್ಥ್ಯವೂ ಇದೆ. ಅನುಮಾನಾಸ್ಪದ ಜನರ ಚಲನೆಯನ್ನು ಸುಲಭವಾಗಿ ಈ ಕ್ಯಾಮೆರಾಗಳ ಮೂಲಕ ಪತ್ತೆ ಹಚ್ಚಬಹುದಾಗಿದೆ. ಇನ್ನು ಎಂದಿಗಿಂತ ಹೆಚ್ಚು ಪೊಲೀಸ್ ಭದ್ರತೆಯೂ ಇರಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ CJI ಆಗಿ ಯು.ಯು.ಲಲಿತ್‌ ಹೆಸರು ಶಿಫಾರಸು

    Live Tv
    [brid partner=56869869 player=32851 video=960834 autoplay=true]

  • ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗ ಪತ್ತೆ

    ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗ ಪತ್ತೆ

    ನವದೆಹಲಿ: ವಿಧಾನಸಭೆಯಿಂದ ಚಾಂದಿನಿ ಚೌಕದಲ್ಲಿರುವ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗವೊಂದು ದೆಹಲಿಯಲ್ಲಿ ಪತ್ತೆಯಾಗಿದೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಈ ಸುರಂಗವನ್ನು ಬಳಸುತ್ತಿದ್ದರು ಎಂದು ಮಾಹಿತಿ ಹಂಚಿಕೊಂಡರು.ಇದನ್ನೂ ಓದಿ: ಆರ್ಚರಿ ಕಂಚಿನ ಪದಕ ಗೆದ್ದ ಹರ್ವಿಂದರ್ ಸಿಂಗ್

    ನಾನು 1993ರಲ್ಲಿ ಶಾಸಕನಾದಾಗ ಕೆಂಪುಕೋಟೆಯವರೆಗೆ ಹೋಗುವ ಸುರಂಗ ಮಾರ್ಗದ ಬಗ್ಗೆ ಕೇಳಿದ್ದೆ. ಅದಲ್ಲದೆ ನಾನು ಅದರ ಇತಿಹಾಸವನ್ನು ಹುಡುಕಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ ಈ ಬಗ್ಗೆ ಇನ್ನು ಕೂಡ ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲವೆಂದು ಗೋಯೆಲ್ ತಿಳಿಸಿದ್ದಾರೆ.

    ಪ್ರಸ್ತುತ ಈ ಸುರಂಗ ಮಾರ್ಗವನ್ನು ನಾವು ಪತ್ತೆ ಹಚ್ಚಿದ್ದೇವೆ. ಮೆಟ್ರೋ ಯೋಜನೆಗಳು ಮತ್ತು ಒಳಚರಂಡಿ ಕಾಮಗಾರಿಯ ಸಂದರ್ಭ ಈ ಸುರಂಗದ ಮಾರ್ಗಗಳು ನಾಶವಾಗಿದೆ. ಹಾಗಾಗಿ ನಾವು ಅದನ್ನು ಮತ್ತಷ್ಟು ಅಗೆಯಲು ಮುಂದಾಗಿಲ್ಲ. ಶೀಘ್ರದಲ್ಲೇ ನಾವು ಅದನ್ನು ನವೀಕರಿಸಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುತ್ತೇವೆ. ಮುಂದಿನ ವರ್ಷ ಆಗಸ್ಟ್ 15 ರೊಳಗೆ ನವೀಕರಣ ಕಾರ್ಯ ಮುಗಿಯುವ ನಿರೀಕ್ಷೆಯಿದೆ ಎಂದರು. ಇದನ್ನೂ ಓದಿ: ವಾಹನ ಟೋಯಿಂಗ್ ಈ ನಿಯಮ ಪಾಲಿಸಲೇಬೇಕು – ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

    1912ರಲ್ಲಿ ಬ್ರಿಟಿಷರು ಕೋಲ್ಕತ್ತಾದಿಂದ ಕೇಂದ್ರ ಶಾಸಕಾಂಗ ಕಚೇರಿಯನ್ನು ದೆಹಲಿ ವಿಧಾನ ಸಭೆ ಕಟ್ಟಡಕ್ಕೆ ಸ್ಥಳಾಂತರಿಸಿದ್ದರು. ನಂತರ 1962ರಲ್ಲಿ ಈ ಕಟ್ಟಡವನ್ನು ಕೋರ್ಟ್ ಆಗಿ ಪರಿವರ್ತಿಸಲಾಗಿತ್ತು. ಅದಲ್ಲದೆ ಸ್ವಾತಂತ್ರ್ಯ ಹೋರಾಟಗಾರರನ್ನು ಕೋರ್ಟ್‍ಗೆ ಹಾಜರುಪಡಿಸಲು ಬ್ರಿಟಿಷರು ಈ ರಹಸ್ಯ ಸುರಂಗ ಮಾರ್ಗವನ್ನು ಬಳಸುತ್ತಿದ್ದರು ಎಂಬ ಬಗ್ಗೆ ಮಾಹಿತಿ ಇದೆ.

  • ಮೂರನೇ ದೀರ್ಘ ಭಾಷಣ ಮಾಡಿದ ಪ್ರಧಾನಿ ಮೋದಿ

    ಮೂರನೇ ದೀರ್ಘ ಭಾಷಣ ಮಾಡಿದ ಪ್ರಧಾನಿ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 88 ನಿಮಿಷಗಳ ಸುದೀರ್ಘ ಭಾಷಣ ಮಾಡಿದ್ದಾರೆ.

    ಇಲ್ಲಿಯವರೆಗಿನ ಸ್ವಾತಂತ್ರ್ಯ ದಿನದ ಭಾಷಣಗಳ ಪೈಕಿ ಇದು ಮೂರನೇ ದೀರ್ಘವಾದ ಭಾಷಣವಾಗಿದೆ. ಬೆಳಗ್ಗೆ 7:30ಕ್ಕೆ ಭಾಷಣ ಆರಂಭಿಸಿದ ಮೋದಿ 9 ಗಂಟೆಯ ಹೊತ್ತಿಗೆ ತಮ್ಮ ಮಾತನ್ನು ಮುಗಿಸಿದರು.  ಇದನ್ನೂ ಓದಿ: 54 ಕೋಟಿ ಜನರಿಗೆ ಲಸಿಕೆ, ಹಳ್ಳಿಗಳಲ್ಲೂ ಡಿಜಿಟಲ್ ಉದ್ಯಮಿಗಳು ತಯಾರಾಗುತ್ತಿದ್ದಾರೆ: ಮೋದಿ

    2019ರಲ್ಲಿ ಮೋದಿ 92 ನಿಮಿಷ ಮಾತನಾಡಿದ್ದರು. 2016ರ ಭಾಷಣ ದೀರ್ಘ ಭಾಷಣ ಎಂದು ದಾಖಲಾಗಿದ್ದು ಒಟ್ಟು 96 ನಿಮಿಷ ಮಾತನಾಡಿದ್ದರು. 2017ರ ಭಾಷಣ ಅತಿ ಕಡಿಮೆ ಅವಧಿಯ ಭಾಷಣ ಆಗಿದ್ದು 56 ನಿಮಿಷದಲ್ಲೇ ಮೋದಿ ಮಾತನ್ನು ಕೊನೆಗೊಳಿಸಿದ್ದರು.

    ಈ ಹಿಂದೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮೋದಿ ದೀರ್ಘ ಭಾಷಣದ ಬಗ್ಗೆ ಪ್ರಸ್ತಾಪಿಸಿ, ಜನರು ಭಾಷಣದ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಜಾರಿ ಮಾಡಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದರು.

  • ನಾವು ಸಂಯಮದಲ್ಲಿದ್ದರೂ ನಮ್ಮ ಮೇಲೆ ಕತ್ತಿ, ಲಾಠಿಯಿಂದ  ಥಳಿಸಿದ್ರು:  ಗಾಯಗೊಂಡ ಪೊಲೀಸ್‌

    ನಾವು ಸಂಯಮದಲ್ಲಿದ್ದರೂ ನಮ್ಮ ಮೇಲೆ ಕತ್ತಿ, ಲಾಠಿಯಿಂದ ಥಳಿಸಿದ್ರು: ಗಾಯಗೊಂಡ ಪೊಲೀಸ್‌

    ನವದೆಹಲಿ: ಕೆಂಪುಕೋಟೆ ಪ್ರವೇಶಿಸಿದ್ದ ರೈತರ ಜೊತೆ ಸಾಧ್ಯವಾದಷ್ಟು ನಾವು ಬಹಳ ಸಂಯಮದ ವರ್ತನೆ ತೋರಿದ್ದೆವು ಎಂದು ವಾಜಿರಾಬಾದ್‌ ಎಸ್‌ಎಚ್‌ಒ ಪಿಸಿ ಯಾದವ್‌ ಹೇಳಿದ್ದಾರೆ.

    ಕೆಂಪುಕೋಟೆ ದಾಂಧಲೆಯಲ್ಲಿ ರೈತರಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಅವರು ನಿನ್ನೆಯ ನಡೆದ ಘಟನೆಯ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

    ಬಹಳಷ್ಟು ಜನ ಪ್ರವೇಶಿಸಿದ ಸಂದರ್ಭದಲ್ಲಿ ಭದ್ರತೆಗಾಗಿ ನಮ್ಮನ್ನು ಕೆಂಪು ಕೋಟೆಯಲ್ಲಿ ನಿಯೋಜಿಸಲಾಗಿತ್ತು. ನಾವು ಅವರನ್ನು ತಡೆದು ಕೋಟೆಯಿಂದ ಹೊರ ಹಾಕಲು ಪ್ರಯತ್ನಪಟ್ಟೆವು. ಆದರೆ ಪ್ರತಿಭಟನಾಕಾರರು ಬಹಳ ಆಕ್ರಮಣಕಾರಿಯಾಗಿದ್ದರು. ನಾವು ರೈತರ ವಿರುದ್ಧ ಬಲವನ್ನು ಬಳಸಲಿಲ್ಲ. ನಾವು ಸಾಧ್ಯವಾದಷ್ಟು ಸಂಯಮವನ್ನು ಪ್ರದರ್ಶಿಸಿದ್ದೇವೆ ಎಂದು ಅವರು ನಿನ್ನೆ ಘಟನೆಯ ಬಗ್ಗೆ ಮಾತನಾಡಿದರು.

    ಕೆಂಪುಕೋಟೆ ಬಳಿ ಪೊಲೀಸರ ಮೇಲೆ ರೈತರು ನಡೆಸಿದ ದಾಳಿ ಬೆಚ್ಚಿಬೀಳಿಸುವಂತಿದೆ. ಪೊಲೀಸರ ಮೇಲೆಯೇ ದೊಣ್ಣೆ, ಕೋಲುಗಳಿಂದ ಪ್ರತಿಭಟನಾಕಾರರು ಬೀಸಿದ್ದಾರೆ. ಒಟ್ಟಿನಲ್ಲಿ ಉದ್ರಿಕ್ತರು ಪೊಲೀಸರನ್ನೇ ಅಟ್ಟಾಡಿಸಿ ಹೊಡೆದಿದ್ದಾರೆ. ಇಷ್ಟು ಮಾತ್ರವಲ್ಲದೆ ಪೊಲೀಸರು ಎಲ್ಲೂ ತಪ್ಪಿಸಿಕೊಳ್ಳದಂತೆ ಪ್ರತಿಭಟನಾಕಾರರು ಲಾಕ್ ಮಾಡಿದ್ದಾರೆ. ಹೀಗಾಗಿ ಉದ್ರಿಕ್ತರಿಂದ ತಪ್ಪಿಸಿಕೊಳ್ಳಲು ಪೊಲೀಸರು 8-10 ಅಡಿ ಎತ್ತರದ ಗೋಡೆಯಿಂದ ಜಿಗಿದಿರುವ ವಿಡಿಯೋ ವೈರಲ್‌ ಆಗಿದೆ.

    ದೆಹಲಿ ಪೊಲೀಸರು ನಿನ್ನೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 22 ಪ್ರಕರಣಗಳನ್ನು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 395 (ಡಕಾಯಿತಿ) 397( ಮಾರಣಾಂತಿಕ ಹಲ್ಲೆ) 120 ಬಿ (ಕ್ರಿಮಿನಲ್ ಪಿತೂರಿ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿ ಕೇಸ್‌ ದಾಖಲಾಗಿದೆ.

  • ಕೆಂಪುಕೋಟೆಯಲ್ಲಿ ದಾಂಧಲೆ – ದೀಪು ಸಿಧು ರೈತ ಹೋರಾಟಗಾರನೇ? ಬಿಜೆಪಿಯವನೇ? ಖಲಿಸ್ತಾನ್‌ ನಾಯಕನೇ?

    ಕೆಂಪುಕೋಟೆಯಲ್ಲಿ ದಾಂಧಲೆ – ದೀಪು ಸಿಧು ರೈತ ಹೋರಾಟಗಾರನೇ? ಬಿಜೆಪಿಯವನೇ? ಖಲಿಸ್ತಾನ್‌ ನಾಯಕನೇ?

    – ದಾಂಧಲೆ ಎಬ್ಬಿಸಿದ ಬಳಿಕ ಬಿಜೆಪಿ ಏಜೆಂಟ್‌ ಹೇಗೆ ಆಗ್ತಾನೆ?
    – ಸಾಮಾಜಿಕ ಜಾಲತಾಣದಲ್ಲಿ ಚರ್ಚೆ
    – ದೀಪು ಸಿಧುವಿನಿಂದ  ಅಂತರ ಕಾಯ್ದುಕೊಂಡ ರೈತ ಸಂಘಟನೆ

    ನವದೆಹಲಿ: ದೆಹಲಿ ಕೆಂಪುಕೋಟೆಗೆ ನುಗ್ಗಿ ದಾಂಧಲೆ ಎಬ್ಬಿಸಿದ ಪ್ರಕರಣದಲ್ಲಿ ಕೇಳಿ ಬರುತ್ತಿರುವ ಪಂಜಾಬ್‌ ನಟ ದೀಪು ಸಿಧು ಬಿಜೆಪಿ ಏಜೆಂಟಾ? ರೈತ ಹೋರಾಟಗಾರನಾ? ಅಥವಾ ಪ್ರತ್ಯೇಕ ಪಂಜಾಬ್‌ಗಾಗಿ ಆಗ್ರಹಿಸುತ್ತಿರುವ ಖಲಿಸ್ತಾನ್‌ ನಾಯಕನೇ ಎಂಬ ವಿಚಾರದ ಬಗ್ಗೆ ಈಗ ಚರ್ಚೆ ಜೋರಾಗಿ ನಡೆಯುತ್ತಿದೆ.

    ದೀಪು ಸಿಂಗ್‌  ಈ ಹಿಂದೆ ನೀಡಿದ ಹೇಳಿಕೆ ಮತ್ತು ರಾಜಕೀಯ ನಾಯಕರ ಒಡನಾಟದಿಂದ ಈ ಚರ್ಚೆ ಈಗ ಆರಂಭವಾಗಿದೆ. ನಿನ್ನೆ ಕೆಂಪುಕೋಟೆಗೆ ನುಗ್ಗಿದ್ದ ದೀಪು ಸಿಧು ಅಲ್ಲಿಂದಲೇ ಫೇಸ್‌ಬುಕ್‌ ಲೈವ್‌ ಮಾಡಿ ನಾವು ನಿಶಾನ್‌ ಧ್ವಜವನ್ನು ಹಾರಿಸಿದ್ದೇವೆ. ನಾವು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಿಲ್ಲ. ಕಿಸಾನ್‌ ಧ್ವಜ ಮತ್ತು ನಿಶಾನ್‌ ಸಾಹಿಬ್‌ ಧ್ವಜವನ್ನು ಹಾರಿಸಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಇದೆ. ಇಂದು ನಾವು ಈ ಹಕ್ಕನ್ನು ಚಲಾಯಿಸಿದ್ದೇವೆ ಎಂದು ಹೇಳಿದ್ದ.

    ರೈತರ ಪ್ರತಿಭಟನೆಯ ಪರವಾಗಿ ಹೋರಾಟ ನಡೆಸುತ್ತಿರುವ ವ್ಯಕ್ತಿಗಳು ಈತ ಬಿಜೆಪಿ ಏಜೆಂಟ್‌. ಈತ ಬಿಜೆಪಿ-ಆರ್‌ಎಸ್‌ಎಸ್‌ ಅಜೆಂಡಾದಡಿ ಹೋರಾಟ ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ. ಈ ಮಧ್ಯೆ ದೀಪು ಸಿಧು ಬಿಜೆಪಿ ನಾಯಕರ ಜೊತೆಗೆ ಇರುವ ಫೋಟೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ದೀಪು 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದ. ಗುರುದಾಸ್‍ಪುರ ಸಂಸದ ಸನ್ನಿ ಡಿಯೋಲ್ ಪರ ಪ್ರಚಾರದ ಉಸ್ತುವಾರಿ ವಹಿಸಿದ್ದ. ಮೋದಿ, ಶಾ, ಬಿಜೆಪಿ ಸಂಸದೆ ಹೇಮಮಾಲಿನಿ ಜೊತೆಗೆ ಇರುವ ಸಿಧು ಫೋಟೋ ವೈರಲ್ ಆಗಿದೆ.

    ಇತ್ತ ಬಿಜೆಪಿ ಪರ ಬೆಂಬಲಿಗರು ಈತ ಬಿಜೆಪಿಯ ಸದಸ್ಯನಲ್ಲ. ಈತ ರೈತ ನಾಯಕನಾಗಿದ್ದು ಈತನೇ ಮಾಧ್ಯಮಗಳ ಜೊತೆ ಮಾತನಾಡಿದ್ದಾನೆ ಎಂದು ಹೇಳಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

    ಈ ಹಿಂದೆ ನವೆಂಬರ್‌ 27 ರಂದು ಹಿಮಾಚಲ ಪ್ರದೇಶ ಕಾಂಗ್ರೆಸ್‌ ಸೇವಾದಳದ ಅಧಿಕೃತ ಖಾತೆ ದೀಪು ಸಿಂಗ್‌ ಮಾತನಾಡುತ್ತಿರುವ ವಿಡಿಯೋವನ್ನು ಹಾಕಿ ರೈತರ ಧ್ವನಿ ಎಂದು ಹೇಳಿತ್ತು. ಈಗ ಈ ವಿಡಿಯೋ ವೈರಲ್‌ ಆಗಿದ್ದು, ಬಿಜೆಪಿ ಅಭಿಮಾನಿಗಳು ಅಂದು ಪ್ರತಿಭಟನೆ ನಡೆಸುತ್ತಿದ್ದಾಗ ದೀಪು ಸಿಂಗ್‌ ರೈತ ನಾಯಕನಾಗಿದ್ದ. ಈತ ದಾಂಧಲೆ ಎಬ್ಬಿಸಿದ ಬಳಿಕ ಬಿಜೆಪಿ ಏಜೆಂಟ್‌ ಹೇಗೆ ಆಗುತ್ತಾನೆ ಎಂದು ಪ್ರಶ್ನಿಸಿ ಕಾಂಗ್ರೆಸ್‌ ಮತ್ತು ರೈತ ಸಂಘಟನೆಗಳನ್ನು ಪ್ರಶ್ನಿಸುತ್ತಿದ್ದಾರೆ.

    https://twitter.com/SevadalHP/status/1332325500761505793

    ವಿಶೇಷ ಏನೆಂದರೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಕಳೆದ ವಾರ ದೀಪು ಸಿಂಗ್‌ಗೆ ಸಮನ್ಸ್‌ ಜಾರಿ ಮಾಡಿತ್ತು. ಸಿಖ್‌ ಫಾರ್‌ ಜಸ್ಟಿಸ್‌ ಪ್ರಕರಣದಲ್ಲಿ ಈತ ಸೇರಿದಂತೆ 40 ಮಂದಿಗೆ ಸಮನ್ಸ್‌ ಜಾರಿ ಮಾಡಿ ವಿಚಾರಣೆ ಹಾಜರಾಗುಂತೆ ಸೂಚಿಸಿತ್ತು. ಎನ್‌ಐಎ ಸಮನ್ಸ್‌ ಜಾರಿ ಮಾಡಿದಾಗ ಈತನ ಪರವಾಗಿ ಹಲವು ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು.  ಸಮನ್ಸ್‌ ಜಾರಿಯಾದ ಸಂದರ್ಭದಲ್ಲಿ ಎನ್‌‌ಐಎ ಬಿಜೆಪಿಯಂತೆ ಕೆಲಸ ಮಾಡುತ್ತಿದೆ ಎಂದು  ದೀಪು ಸಿಂಗ್‌  ಆ‌ರೋಪಿಸಿ ಟೀಕಿಸಿದ್ದ.

    https://twitter.com/TheAngryLord/status/1354048619557449729

    ಪ್ರತ್ಯೇಕ ಖಲಿಸ್ತಾನಕ್ಕಾಗಿ ವಿದೇಶದಿಂದ ಹಣ ಪಡೆದು ಸಿಖ್‌ ಫಾರ್‌ ಜಸ್ಟಿಸ್‌ ಭಾರತದಲ್ಲಿ ದೇಶದ್ರೋಹಿ ಕೆಲಸ ಮಾಡುತ್ತಿದೆ ಎಂದು ಎಂಬ ಆರೋಪ ಹಿನ್ನೆಲೆಯಲ್ಲಿ ಎನ್‌ಐಎ ಪ್ರಕರಣ ದಾಖಲಿಸಿ ದೀಪು ಸಿಂಗ್‌ಗೆ ಸಮನ್ಸ್‌ ಜಾರಿ ಮಾಡಿತ್ತು.

    https://twitter.com/aimingforlight/status/1354307988245209089

    ಕೆಂಪುಕೋಟೆ ಪ್ರಕರಣದಿಂದ ರೈತ ಹೋರಾಟಕ್ಕೆ ಭಾರೀ ಹಿನ್ನಡೆಯಾಗಿದೆ. ಆದರೆ ಈಗ ರೈತ ಸಂಘಟನೆಗಳು ದೀಪು ಸಿಧುವಿನಿಂದ ಅಂತರ  ಕಾಯ್ದುಕೊಂಡು ನಮಗೂ ಈ ದಾಂಧಲೆ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿವೆ.

  • ರೈತರ ಪ್ರತಿಭಟನೆಯಲ್ಲಿ ದೇಶದ್ರೋಹಿ ಕೆಲಸ – ಗಣರಾಜ್ಯೋತ್ಸವ ದಿನ ದೇಶಕ್ಕೆ ಅಪಮಾನ

    ರೈತರ ಪ್ರತಿಭಟನೆಯಲ್ಲಿ ದೇಶದ್ರೋಹಿ ಕೆಲಸ – ಗಣರಾಜ್ಯೋತ್ಸವ ದಿನ ದೇಶಕ್ಕೆ ಅಪಮಾನ

    ನವದೆಹಲಿ: ಬಹುಶಃ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಇಂತಹ ಸನ್ನಿವೇಶ ಹಿಂದೆಂದೂ ಕಂಡು ಬಂದಿರಲಿಲ್ಲ. ಗಣರಾಜ್ಯೋತ್ಸವದ ದಿನವೇ ರಾಷ್ಟ್ರ ರಾಜಧಾನಿ ರಣಾಂಗಣವಾಗಿ ಮಾರ್ಪಟ್ಟಿದೆ. ಗಣ ರಾಜ್ಯೋತ್ಸವದ ದಿನವಾದ ಇಂದು ದೇಶಕ್ಕೆ ಅಪಮಾನವಾಗಿದೆ. ರೈತ ದಂಗೆಯ ನೆಪದಲ್ಲಿ ಕೆಲ ಸಮಾಜಘಾತಕ ಶಕ್ತಿಗಳು ಮಾಡಬಾರದ್ದನ್ನು ಮಾಡಿವೆ.

    ಕೆಂಪುಕೋಟೆಯಲ್ಲಿ ಕಂಡು ಬಂದ ದೃಶ್ಯಗಳು ಇತ್ತೀಚಿಗೆ ಅಮೆರಿಕಾದ ಸಂಸತ್ ಮೇಲೆ ನಡೆದ ದಾಳಿಯನ್ನು ನೆನಪಿಸುವಂತಿದ್ದವು. ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿಯಲ್ಲಿ ಸಿಖ್ ದಂಗೆ ನಡೆದಿತ್ತು. ಆದರೆ ಕೆಂಪುಕೋಟೆಗೆ ಲಗ್ಗೆ ಹಾಕುವ ಮಟ್ಟಕ್ಕೆ ಹೋಗಿರಲಿಲ್ಲ. ದೆಹಲಿ ದಂಗೆಯ ಒಂದೊಂದು ದೃಶ್ಯವೂ ಭಯಾನಕವಾಗಿವೆ.

    ರೈತರ ಹೋರಾಟದ ಹಿಂದೆ ಖಲಿಸ್ತಾನ್ ಪ್ರತ್ಯೇಕತಾವಾದಿಗಳ ಪಾತ್ರವಿದೆ ಎಂಬ ಆರೋಪ ಮೊದಲಿಂದಲೂ ಕೇಳಿಬರುತ್ತಿತ್ತು. ಈಗ ಈ ಆರೋಪ ನಿಜ ಎನ್ನುವುದು ಇಂದಿನ ಘಟನೆಗಳಿಂದ ಸಾಬೀತು ಆದಂತಿವೆ. ಕೆಂಪುಕೋಟೆ ಮೇಲೆ ಕೇವಲ ರಾಷ್ಟ್ರೀಯ ಧ್ವಜವನ್ನು ಹಾರಿಸಬೇಕೆಂಬ ನಿಯಮವಿದೆ. ಸ್ವಾತಂತ್ರ್ಯ ಬಂದ ದಿನದಿಂದಲೂ ಇದನ್ನು ಪಾಲಿಸಿಕೊಂಡು ಬರಲಾಗಿತ್ತು. ಆದರೆ ರೈತರ ವೇಷದಲ್ಲಿದ್ದ ಕೆಲ ಸಮಾಜಘಾತಕರು ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ, ಪೊಲೀಸ್ ಭದ್ರತೆ ಬೇಧಿಸಿ ಕೆಂಪುಕೋಟೆಗೆ ಲಗ್ಗೆ ಹಾಕಿ ದಾಂಧಲೆ ನಡೆಸಿದ್ದಾರೆ.

    ಪ್ರಧಾನಿ ಹಾರಿಸುವ ರಾಷ್ಟ್ರಧ್ವಜದ ಪಕ್ಕದಲ್ಲೇ ಇರುವ ಎಡಭಾಗದ ಖಾಲಿ ಸ್ಥಂಭದಲ್ಲಿ ರೈತ ಧ್ವಜದ ಜೊತೆಗೆ ಸಿಖ್(ನಿಶಾನ್ ಸಾಹೀಬ್) ಧ್ವಜವನ್ನು ಹಾರಿಸಲಾಗಿದೆ. ಅಲ್ಲದೇ, ಭಾರತದ ತ್ರಿವರ್ಣ ಧ್ವಜವನ್ನು ನೀಡಿದರೆ ಅದನ್ನು ದೇಶದ್ರೋಹಿಯೊಬ್ಬ ಕೆಳೆಗೆಸೆದು ಅಪಮಾನ ಕೂಡ ಮಾಡಿದ್ದಾನೆ.

    ಕೆಂಪುಕೋಟೆಯ ಗುಮ್ಮಟವನ್ನೂ ಏರಿದ ದೇಶದ್ರೋಹಿಗಳು ಧ್ವಜ ಹಾರಿಸಿ ವಿಕೃತಿ ಮೆರೆದಿದ್ದಾರೆ. ನಿಹಾಂಗ್ ಸಿಖ್ ಪಡೆಯ ಸದಸ್ಯರು ರಾಜಾರೋಷವಾಗಿ ಕೆಂಪುಕೋಟೆ ಮುಂದೆ ಕತ್ತಿ ಝಳಪಿಸಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿಯೂ ಇಂತಹ ಸನ್ನಿವೇಶ ಕಂಡು ಬಂದಿರಲಿಲ್ಲ.

    ಪ್ರತಿಭಟನಾಕಾರರ ಪೈಕಿ ಒಬ್ಬನ ಕೈಯಲ್ಲಿ ಖಲೀಸ್ತಾನ್ ಎಂದು ಬರೆದಿರುವ ಕಡಗ ಕೂಡ ಕಂಡು ಬಂದಿದೆ. ಈ ಕಾರಣಕ್ಕೆ ರೈತರ ಹೋರಾಟದ ಹಿಂದೆ ಖಲಿಸ್ತಾನ್ ಪ್ರತ್ಯೇಕತಾವಾದಿಗಳ ಪಾತ್ರವಿದೆ ಎನ್ನುವ ಅನುಮಾನ ನಿಜ ಎನ್ನುವವರ ಮಾತಿಗೆ ಮತ್ತಷ್ಟು ಬಲ ಬಂದಿದೆ.

    ಇಂದಿನ ಘಟನೆಯನ್ನು ಗಮನಿಸಿದ್ರೆ ರೈತ ಹೋರಾಟದ ಮೇಲೆ ಕಿಸಾನ್ ಯೂನಿಯನ್ ಹಿಡಿತ ಕಳೆದುಕೊಂಡಿದ್ಯಾ ಎಂಬ ಪ್ರಶ್ನೆ ಕೂಡ ಎದ್ದಿದೆ. ಕೇಂದ್ರ ಸರ್ಕಾರ ಇಂದಿನ ಘಟನಾವಳಿಗಳನ್ನು ಗಂಭೀರವಾಗಿ ಪರಿಗಣಿಸಿದೆ. ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ತುರ್ತು ಸಭೆ ಕೂಡ ನಡೆಸಲಾಗಿದೆ.

    ದೇಶಕ್ಕೆ ಅಪಮಾನ ಹೇಗೆ?
    – ಕೆಂಪು ಕೋಟೆ ಮೇಲೆ ಹಾರಿದ ಕಿಸಾನ್ ಧ್ವಜ, ಸಿಖ್ ಧ್ವಜ
    – ರಾಷ್ಟ್ರಧ್ವಜ ಎಸೆದು ಅಪಮಾನ ಮಾಡಿದ ದೇಶದ್ರೋಹಿ
    – ಪೊಲೀಸರಿಗೆ ಕತ್ತಿ ತೋರಿಸಿ ಬೆದರಿಸಿದ ನಿಹಾಂಗ್ ಸಿಖ್ ಪಡೆ
    – ರೈತ ಹೋರಾಟದಲ್ಲಿ ಖಲೀಸ್ತಾನಿಗಳ ಭಾಗಿ; ಕೈ ಕಡಗದಿಂದ ದೃಢ

  • ರೈತರನ್ನ ಭಯೋತ್ಪಾದಕರು ಅಂದಿದ್ದಕ್ಕೆ 6 ಬ್ರಾಂಡ್ ಕಾಂಟ್ರಕ್ಟ್ ಕಳೆದುಕೊಂಡೆ: ಕಂಗನಾ

    ರೈತರನ್ನ ಭಯೋತ್ಪಾದಕರು ಅಂದಿದ್ದಕ್ಕೆ 6 ಬ್ರಾಂಡ್ ಕಾಂಟ್ರಕ್ಟ್ ಕಳೆದುಕೊಂಡೆ: ಕಂಗನಾ

    ಮುಂಬೈ: ಸದಾ ಟ್ವೀಟ್ ಗಳ ಮೂಲಕ ಸದ್ದು ಮಾಡುವ ನಟಿ ಕಂಗನಾ ರಣಾವತ್, ತಮ್ಮ ಹಳೆಯ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಕೆಲ ತಿಂಗಳ ಹಿಂದೆ ಕಂಗನಾ ರಣಾವತ್ ಪ್ರತಿಭಟನಾ ನಿರತ ರೈತರನ್ನ ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿ ಅಳಸಿ ಹಾಕಿದ್ದರು. ಇಂದು ದೆಹಲಿಯಲ್ಲಿ ನಡೆದ ರೈತರ ದಂಗೆ ಬಗ್ಗೆ ಪ್ರತಿಕ್ರಿಯಿಸಿರುವ ಕಂಗನಾ ತಮ್ಮ ಮೊದಲಿನ ಮಾತುಗಳನ್ನ ಪುನರುಚ್ಛಿರಿಸಿದ್ದಾರೆ.

    ಇಂದಿನ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಕಂಗನಾ, ರೈತರನ್ನ ಭಯೋತ್ಪಾದಕರು ಅಂತ ಕರೆದಿದ್ದಕ್ಕೆ ಒಪ್ಪಂದವಾಗಿದ್ದ ಆರು ಬ್ರಾಂಡ್ ಒಪ್ಪಂದಗಳನ್ನು ಕಳೆದುಕೊಂಡೆ. ನಿಮ್ಮನ್ನ ಬ್ರಾಂಡ್ ಗಳಿಗೆ ರಾಯಭಾರಿಯನ್ನಾಗಿ ಮಾಡಲು ಸಾಧ್ಯವಿಲ್ಲ ಅಂತ ಹೇಳಿದರು. ಎಂದು ಟ್ವೀಟ್ ಮಾಡಿದ್ದಾರೆ.

    ಇಂತಹ ಪ್ರತಿಭಟನೆಗಳು ದೇಶದ ಅಭಿವೃದ್ಧಿಗೆ ಅಪಾಯಕಾರಿ. ರೈತರ ಹೆಸರಿನಲ್ಲಿರುವ ಭಯೋತ್ಪಾದಕರಿಗೆ ಬಾಹ್ಯ ಬೆಂಬಲವಿದೆ. ಇಂದು ಸಹ ಹಲವರು ಇವರಿಗೆ ಬೆಂಬಲ ನೀಡುತ್ತಿದ್ದಾರೆ. ಕೊರೊನಾದಿಂದ ಚೇತರಿಸಿಕೊಂಡು ನಮ್ಮದ ಲಸಿಕೆ ತಯಾರಿಸಿಕೊಳ್ಳುವ ಇಡೀ ವಿಶ್ವಕ್ಕೆ ಭಾರತ ಮಾದರಿಯಾಗಿದೆ. ಗಣರಾಜ್ಯೋತ್ಸವ ಸಂಭ್ರಮದಲ್ಲಿ ಈ ಘಟನೆ ನಡೆದಿದ್ದು ದುರಂತ. ಯಾವುದೇ ದೇಶದ ಪ್ರಧಾನಿ ಬಂದರೂ ಕೆಲವು ಅನಕ್ಷರಸ್ಥರಂತೆ ಅರೆ ನಗ್ನರಾಗಿ ರಸ್ತೆಯಲ್ಲಿ ಕುಳಿತುಕೊಳ್ಳುತ್ತಾರೆ. ಇದರಿಂದ ದೇಶಕ್ಕೆ ಯಾವುದೇ ಲಾಭವಿಲ್ಲ. ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಎಲ್ಲರನ್ನ ಜೈಲಿಗೆ ಹಾಕಿ ಎಂದು ಆಗ್ರಹಿಸಿದ್ದಾರೆ.

    https://twitter.com/KanganaTeam/status/1354001019722731520

    ಮಗದೊಂದು ಟ್ವೀಟ್ ನಲ್ಲಿ ಇಂದಿನ ದಂಗೆಗೆ ಬೆಂಬಲ ನೀಡುವ ಬೆಂಬಲ ನೀಡುವ ಭಾರತೀಯರು ಸಹ ಆತಂಕವಾದಿಗಳು ಎಂದು ಹೇಳುತ್ತೇನೆ. ಇದೊಂದು ರಾಷ್ಟ್ರ ದ್ರೋಹ ಕೆಲಸ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ಟ್ವೀಟ್ ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿದೆ.

  • ಕೆಂಪುಕೋಟೆಯಲ್ಲಿ ರೈತರಿಂದ ರಾಷ್ಟ್ರಧ್ವಜಕ್ಕೆ ಅವಮಾನ

    ಕೆಂಪುಕೋಟೆಯಲ್ಲಿ ರೈತರಿಂದ ರಾಷ್ಟ್ರಧ್ವಜಕ್ಕೆ ಅವಮಾನ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ.

    ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ರೈತರು ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದಾರೆ. ಮುತ್ತಿಗೆ ಹಾಕಿದ್ದು ಮಾತ್ರವಲ್ಲದೇ ರಾಷ್ಟ್ರಧ್ವಜ ಮಾತ್ರ ಹಾರಿಸಬೇಕಿದ್ದ  ಜಾಗದಲ್ಲಿ ಕಿಸಾನ್‌ ಯೂನಿಯನ್‌ ಧ್ವಜ ಮತ್ತು ಮೇಲ್ಭಾಗದಲ್ಲಿ ಸಿಖ್ ‌ಧ್ವಜವನ್ನು ಹಾರಿಸಲಾಗಿದೆ. ಧ್ವಜಕಂಬವನ್ನು ಹತ್ತಿದ್ದ ವ್ಯಕ್ತಿಗೆ ಆರಂಭದಲ್ಲಿ ರಾಷ್ಟ್ರಧ್ವಜವನ್ನು ನೀಡಲಾಗಿತ್ತು. ಆದರೆ ಆತ ರಾಷ್ಟ್ರ ಧ್ವಜವನ್ನು ಎಸೆದಿದ್ದಾನೆ.

    https://twitter.com/sharo_hit/status/1354017958708690945

    ಪ್ರತಿವರ್ಷ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನದಂದು ಪ್ರಧಾನಿ ರಾಷ್ಟ್ರಧ್ವಜವನ್ನು ಹಾರಿಸಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಪ್ರಧಾನಿ ರಾಷ್ಟ್ರಧ್ವಜವನ್ನು ಹಾರಿಸುತ್ತಿದ್ದ ಜಾಗದ ಪಕ್ಕದಲ್ಲೇ ಇದೇ ಮೊದಲ ಬಾರಿಗೆ ಪ್ರತಿಭಟನಾ ಧ್ವಜ ಹಾರಿದೆ.

    ಇತಿಹಾಸದಲ್ಲಿ ಮೊದಲ ಬಾರಿಗೆ ಕೆಂಪುಕೋಟೆಗೆ ಮುತ್ತಿಗೆ ಹಾಕಿದ ರೈತರು ರಾಷ್ಟ್ರಧ್ವಜ ಹಾರಿಸುವ ಜಾಗದ ಸಮೀಪದಲ್ಲೇ ತಮ್ಮ ಬಾವುಟವನ್ನು ಹಾರಿಸಿದ್ದಾರೆ. ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜ ಬಿಟ್ಟು ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ಇದು ವಿಶ್ವ ಪಾರಂಪರಿಕ ತಾಣವು ಆಗಿರುವುದರಿಂದ ಪ್ರತಿಭಟನೆಯ ಹೆಸರಿನಲ್ಲಿ ರೈತರು ತಮ್ಮ ಸಂಘಟನೆಯ ಧ್ವಜವನ್ನು ಇಲ್ಲಿ ಹಾರಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಎದ್ದಿದೆ.

  • 74ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗ್ತಿದೆ ಇಡೀ ದೇಶ

    74ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾಗ್ತಿದೆ ಇಡೀ ದೇಶ

    – ರಾಜ್ಯದಲ್ಲೂ ಸ್ವಾತಂತ್ರ್ಯ ದಿನಾಚರಣೆ ವಿಭಿನ್ನ

    ನವದೆಹಲಿ: ಆಗಸ್ಟ್ 15 ಅಂದರೆ ನಾಳಿನ 74ನೇ ಸ್ವಾತಂತ್ರೋತ್ಸವಕ್ಕೆ ಇಡೀ ದೇಶವೇ ಸಜ್ಜಾಗುತ್ತಿದೆ. ದೇಶಾದ್ಯಂತ ಭಾರೀ ಬಿಗಿ ಭದ್ರತೆ ಕೈಕೊಳ್ಳಲಾಗಿದೆ.

    ದೆಹಲಿಯ ಕೆಂಪು ಕೋಟೆ ಪ್ರದೇಶದಲ್ಲಿ 300 ಕ್ಯಾಮೆರಾಗಳು, 4 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದಕ್ಕಿಂತ ಮುಖ್ಯವಾಗಿ ಕೊರೊನಾ ಹೆಮ್ಮಾರಿ ಇರುವ ಕಾರಣ ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೆಂಪುಕೋಟೆಯಲ್ಲಿ ಪ್ರತಿಬಾರಿ ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿಲ್ಲ. ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿಯನ್ನು ಕ್ವಾರಂಟೈನ್‍ನಲ್ಲಿ ಇಡಲಾಗಿದೆ. ಗುರುವಾರವೂ ಕವಾಯತು ಪಡೆಗಳು ಮಾಸ್ಕ್ ಧರಿಸಿಯೇ ಪೂರ್ವ ತಾಲೀಮು ಮಾಡಿದವು.

    ಸೇನಾ ಪಡೆಗಳು ಗಾಳಿಯಲ್ಲಿ 21 ಸುತ್ತು ಗುಂಡು ಹಾರಿಸಿ, ಪ್ರಧಾನಿ ಮೋದಿ ಅವರಿಗೆ ಗಾರ್ಡ್ ಆಫ್ ಹಾನರ್ ಗೌರವ ಸಲ್ಲಿಸಲಿವೆ. ಬಳಿಕ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಲಿದ್ದು, ರಾಷ್ಟ್ರಗೀತೆ ಹಾಡಲಿದ್ದಾರೆ. ಬಳಿಕವಷ್ಟೇ ದೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಬಾರಿ ಕೊರೊನಾ ಇರೋ ಕಾರಣ ಕೊರೊನಾ, ಸ್ವಚ್ಛತೆ, ಸೇನಾಪಡೆಗಳ ಬಲವರ್ಧನೆ, ರಾಮಮಂದಿರ ಕುರಿತಂತೆಯೇ ಹೆಚ್ಚಿನ ಮಾತು ಇರಲಿದೆ ಎನ್ನಲಾಗುತ್ತಿದೆ.

    ರೆಡ್‍ ಫೋರ್ಟ್ ಆವರಣವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಯ್ದ ಕೆಲವರಿಗಷ್ಟೇ ಆಹ್ವಾನ ನೀಡಲಾಗಿದೆ. ಕೇವಲ ಕೊರೊನಾ ವಾರಿಯರ್ಸ್‌ಗಳಾದ ಡಾಕ್ಟರ್, ನರ್ಸ್ ಹಾಗೂ ಕೊರೊನಾ ಗೆದ್ದ ಕೆಲವರಿಗೆ ಆಹ್ವಾನ ನೀಡಲಾಗುತ್ತಿದೆ. ಇವರೆಲ್ಲರೂ ಪಿಪಿಇ ಕಿಟ್ ಧರಿಸಿರಲಿದ್ದಾರೆ. ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿದೆ. ರೆಡ್‍ ಫೋರ್ಟ್‌ನ 2 ಕಡೆಯ ಮೈದಾನಗಳು ಮುಚ್ಚಲ್ಪಟ್ಟಿರುತ್ತವೆ. ಕೇವಲ ಎನ್‍ಸಿಸಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಸಿಗಬಹುದು. ಇವರೆಲ್ಲರಿಗೂ ಮಾಸ್ಕ್ ಧರಿಸೋದು ಕಡ್ಡಾಯಗೊಳಿಸಲಾಗಿದೆ.

    ರಾಜ್ಯದಲ್ಲೂ ವಿಭಿನ್ನವಾಗಿರಲಿದೆ ಸ್ವಾತಂತ್ರ್ಯ ದಿನಾಚರಣೆ
    ರಾಜ್ಯದಲ್ಲೂ ಕೂಡ ಕೊರೊನಾ ಮಾರ್ಗಸೂಚಿ ಅನುಸಾರವೇ ಸ್ವಾತಂತ್ಯ ದಿನಾಚರಣೆ ನಡೆಯಲಿದೆ. ಕೇಂದ್ರ ಸರ್ಕಾರದ ಆದೇಶದಂತೆ ಹೆಚ್ಚು ಜನ ಒಂದೆಡೆ ಸೇರಲು ಅವಕಾವಿಲ್ಲ. ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಸಾರ್ವಜನಿಕ ಪ್ರವೇಶವಿರುವುದಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಡಿಸಿಪಿ ಸಿ.ಆರ್. ಗಿರೀಶ್ ಪರೇಡ್ ನೇತೃತ್ವ ವಹಿಸಲಿದ್ದಾರೆ. ಪರೇಡ್ ನಲ್ಲಿ ಟ್ರಾಫಿಕ್ ಪೊಲೀಸ್, ಕೆಎಸ್‌ಆರ್‌ಪಿ, ಬಿ.ಎಸ್.ಎಫ್, ಸಿಎಆರ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್ ಸೇರಿದಂತೆ 16 ತುಕಡಿಗಳಲ್ಲಿ 350 ಮಂದಿ ಭಾಗವಹಿಸುತ್ತಾರೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಹೇಳಿದ್ದಾರೆ.

    9 ಜನ ಡಿಸಿಪಿ ಸೇರಿದಂತೆ 680 ಜನ ಭದ್ರತಾ ಕೆಲಸದಲ್ಲಿ ಹಾಜರಿರುತ್ತಾರೆ. ಸ್ವಾತಂತ್ರ್ಯ ದಿನಾಚರಣೆ ವೀಕ್ಷಿಸಲು 500 ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿವಿಧ ಇಲಾಖೆಯ ಕೋವಿಡ್ ವಾರಿಯರ್ಸ್ 100 ಸಿಬ್ಬಂದಿ, ಕೋವಿಡ್ ನಿಂದ ಗುಣಮುಖರಾದ ಎಲ್ಲಾ ವಯೋಮಾನದ 25 ಜನರನ್ನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮ ನೇರ ಪ್ರಸಾರವನ್ನು ದೂರದರ್ಶನ ಮೂಲಕ ಪ್ರಸಾರ ಮಾಡಲಾಗುತ್ತಿದೆ.