Tag: ಕೆಂಪುಕೋಟೆ

  • ಪಾಕ್ ಹೆಸರನ್ನು ಪ್ರಸ್ತಾಪಿಸದೆ ಭಾರತದ ಅಭಿವೃದ್ಧಿ ಜಪಿಸಿದ ಮೋದಿ

    ಪಾಕ್ ಹೆಸರನ್ನು ಪ್ರಸ್ತಾಪಿಸದೆ ಭಾರತದ ಅಭಿವೃದ್ಧಿ ಜಪಿಸಿದ ಮೋದಿ

    – ನೀರಿನ ವಿಚಾರವಾಗಿ 24 ಬಾರಿ ಪ್ರಸ್ತಾಪ
    – 11 ಬಾರಿ ಭಾರತದ ಹೆಸರನ್ನು ಪ್ರಸ್ತಾಪಿಸಿದ್ದ ಇಮ್ರಾನ್

    ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ದೆಹಲಿಯ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು 92 ನಿಮಿಷಗಳ ಕಾಲ ಸುದೀರ್ಘ ಭಾಷಣ ಮಾಡಿದರು. ತಮ್ಮ ಭಾಷಣದಲ್ಲಿ ಒಂದೇ ಒಂದು ಬಾರಿಯೂ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪಿಸಲಿಲ್ಲ.

    ಹೌದು. ಬುಧವಾರ ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ವಿಧಾನ ಸಭೆಯಲ್ಲಿ ಮಾತನಾಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಡಾಯಿ ಕೊಚ್ಚಿದ್ದರು. ಹೀಗಾಗಿ ಮೋದಿ ಇಂದು ಈ ಭಾಷಣಕ್ಕೆ ತಿರುಗೇಟು ಎನ್ನುವಂತೆ ನೇರವಾಗಿ ಪಾಕಿಸ್ತಾನದ ಹೆಸರನ್ನು ಪ್ರಸ್ತಾಪ ಮಾಡಬಹುದು ಎನ್ನುವ ವಿಶ್ಲೇಷಣೆ ಕೇಳಿ ಬಂದಿತ್ತು. ಆದರೆ ಮೋದಿ ತಮ್ಮ ಭಾಷಣದಲ್ಲಿ ಎಲ್ಲಿಯೂ ಪಾಕಿಸ್ತಾನದ ಹೆಸರನ್ನು ಹೇಳದೇ ಪರೋಕ್ಷವಾಗಿ ಉಗ್ರರಿಗೆ ಸಹಕಾರ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಇದುವರಗೂ ಕೆಂಪುಕೋಟೆ ಮೇಲೆ 6 ಬಾರಿ ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಿದ್ದಾರೆ. ಈ ಪೈಕಿ ಇಂದು ಮಾಡಿದ ಭಾಷಣವು ಎರಡನೇ ಸುದೀರ್ಘ ಭಾಷಣವಾಗಿದೆ. 2016ರಲ್ಲಿ ಮೋದಿ ಅವರು 96 ನಿಮಿಷ ಭಾಷಣ ಮಾಡಿದ್ದರು. ಇದು ಅತ್ಯಂತ ಸುದೀರ್ಘ ಭಾಷಣವಾಗಿದೆ. 2014ರಲ್ಲಿ 65 ನಿಮಿಷ, 2015ರಲ್ಲಿ 86 ನಿಮಿಷ, 2017ರಲ್ಲಿ 57 ನಿಮಿಷ, 2018ರಲ್ಲಿ 82 ನಿಮಿಷಗಳ ಕಾಲ ಭಾಷಣ ಮಾಡಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರು ಸ್ವತಂತ್ರ ಭಾರತದ ಮೊದಲ ಭಾಷಣವನ್ನು 72 ನಿಮಿಷ ಮಾಡಿದ್ದರು. 2015ರ ವರೆಗೂ ಯಾವುದೇ ಪ್ರಧಾನಿಗಳು ಕೂಡ 72 ನಿಮಿಷಕ್ಕಿಂತ ಹೆಚ್ಚು ಕಾಲ ಭಾಷಣ ಮಾಡಿರಲಿಲ್ಲ.

    ನೀರು:
    ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮಾಡಿದ ಭಾಷಣದಲ್ಲಿ ಒಟ್ಟು 24 ಬಾರಿ ನೀರಿನ ಬಗ್ಗೆ ಪ್ರಸ್ತಾಪಿಸಿದ್ದಾರೆ. ಜಲ ಜೀವನ್ ಮಿಷನ್ ಯೋಜನೆಯಿಂದಾಗಿ ದೇಶದ ಪ್ರತಿ ಮನೆ ಮನೆಗೂ ನಲ್ಲಿಯ ಮೂಲಕ ನೀರು ಪೂರೈಕೆ ಆಗಲಿದೆ. 100 ಲಕ್ಷ ಕೋಟಿ ರೂ.ವನ್ನು ಮೂಲ ಸೌಕರ್ಯಕ್ಕೆ ಹಾಗೂ ಜಲ ಜೀವನ್ ಮೀಷನ್ ಯೋಜನೆಗೆ 3.5 ಲಕ್ಷ ಕೋಟಿ ರೂ. ಮೀಸಲು ಇಡಲಾಗಿದೆ. ಜಲ ಸಮಸ್ಯೆ ನಿವಾರಣೆಗಾಗಿ ಜಲಶಕ್ತಿ ಮಂತ್ರಾಲಯ ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಬಡ ಜನರು:
    ದೇಶದಲ್ಲಿರುವ ಬಡತನವನ್ನು ಹಾಗೂ ಬಡವರ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 2022ರ ವೇಳೆಗೆ ಪ್ರತಿ ಬಡವರಿಗೂ ಶಾಶ್ವತ ಮನೆ ನೀಡಲಾಗುತ್ತದೆ. 100 ಲಕ್ಷ ಕೋಟಿ ರೂ.ವನ್ನು ಮೂಲ ಸೌಕರ್ಯಕ್ಕೆ ಹಾಗೂ ಜಲ ಜೀವನ್ ಮೀಷನ್ ಯೋಜನೆಗೆ 3.5 ಲಕ್ಷ ಕೋಟಿ ರೂ. ಮೀಸಲು ಇಡಲಾಗಿದೆ. ಪ್ರತಿಯೊಂದು ಗ್ರಾಮಕ್ಕೂ 24 ಗಂಟೆಗಳ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ನನಗೆ ಏನನ್ನು ಮಾಡಿಕೊಳ್ಳಲು ಅಧಿಕಾರಕ್ಕೆ ಬಂದಿಲ್ಲ. ನಾವು ಸಮಸ್ಯೆಗಳನ್ನು ಸಾಕುವುದೂ ಇಲ್ಲ, ದೂರ ತಳ್ಳುವುದಿಲ್ಲ. ಬದಲಾಗಿ ಅವುಗಳನ್ನು ಬಗೆಹರಿಸುತ್ತೇವೆ ಎಂದು ಮೋದಿ ಅವರು ಹೇಳುವ ಮೂಲಕ ಭಾಷಣದಲ್ಲಿ 17 ಬಾರಿ ಬಡ ಜನರ ಬಗ್ಗೆ ಮಾತನಾಡಿದ್ದಾರೆ.

    ಭಯೋತ್ಪಾದನೆ:
    ನರೇಂದ್ರ ಮೋದಿ ಅವರು ತಮ್ಮ ಸುದೀರ್ಘ ಭಾಷಣದಲ್ಲಿ ಭಯೋತ್ಪಾದನೆ ವಿಚಾರವನ್ನು 13 ಬಾರಿ ಪ್ರಸ್ತಾಪಿಸಿದರು. ಭಯೋತ್ಪಾದನೆಯು ಗೆದ್ದಲಿನಂತೆ ವರ್ತಿಸುತ್ತಿದ್ದು, ದೇಶವನ್ನು ಒಳಗಿನಿಂದಲೇ ಹಾಳು ಮಾಡುತ್ತಿದೆ. ಭಯೋತ್ಪಾದನೆ ಹೊಡೆದು ಹಾಕಲು ಎನ್‍ಡಿಎ ಸರ್ಕಾರರ ಶ್ರಮಿಸುತ್ತಿದೆ ಎಂದು ಹೇಳಿದರು. ಆದರೆ ಎಲ್ಲಿಯೂ ಪಾಕಿಸ್ತಾನ ಬಗ್ಗೆ ಮಾತನಾಡಲಿಲ್ಲ.

    ಪ್ರವಾಸೋದ್ಯಮ:
    ತಮ್ಮ ಸುದೀರ್ಘ ಭಾಷಣದಲ್ಲಿ ಪ್ರಧಾನಿ ಮೋದಿ ಅವರು, ಪ್ರವಾಸೋದ್ಯಮದ ಕುರಿತು 13 ಬಾರಿ ಮಾತನಾಡಿದ್ದಾರೆ. ಪ್ರವಾಸೋದ್ಯಮದಿಂದ ಸರ್ಕಾರಕ್ಕೆ ಹೆಚ್ಚಿನ ಹಣ ಹರಿದು ಬರುತ್ತಿದೆ. ಆದರೆ ದೇಶದ ಜನರು ರಜಾ ದಿನಗಳಲ್ಲಿ ಹೆಚ್ಚಾಗಿ ವಿದೇಶಿ ಪ್ರವಾಸ ಕೈಗೊಳ್ಳುತ್ತಾರೆ. ನಮ್ಮ ದೇಶದ ಪ್ರವಾಸಿ ತಾಣಗಳಿಗೆ ಭೇಟಿ ಕೊಡುವುದು ತುಂಬಾ ಅಪರೂಪ ಎಂಬಂತಾಗಿದೆ. ದೇಶದ ಜನರು 2022ರ ಒಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡುವ ಸಂಕಲ್ಪ ಮಾಡಬೇಕಿದೆ. ಎಲ್ಲಿ ನೀವು ಪ್ರವಾಸಕ್ಕೆ ಹೋಗುತ್ತಿರೋ ಅಲ್ಲಿ ಹೊಸ ಜಗತ್ತು ನಿರ್ಮಿಸಬಹುದು. ಭಾರತೀಯರು ಹೋಗುವ ಸ್ಥಳಗಳಿಗೆ ವಿದೇಶಿಯರು ಕೂಡ ಬರುತ್ತಾರೆ. ಈ ಮೂಲಕ ನಮ್ಮ ದೇಶದ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆ ಎಂದು ಮನವಿ ಮಾಡಿಕೊಂಡರು.

    ಇಮ್ರಾನ್ ಖಾನ್ ತಮ್ಮ ಭಾಷಣದಲ್ಲಿ ಪಾಕಿಸ್ತಾನಕ್ಕಿಂತಲೂ ಕಾಶ್ಮೀರ ಪದವನ್ನೇ ಹೆಚ್ಚು ಬಳಸಿದ್ದರು. ಪಾಕಿಸ್ತಾನ 12 ಬಾರಿ ಬಳಸಿದ್ದರೆ ಕಾಶ್ಮೀರ ಪದವನ್ನು 20 ಬಾರಿ ಬಳಸಿದ್ದರು. ಉಳಿದಂತೆ ಮೋದಿ 7, ಭಾರತ 11, ಆರ್‌ಎಸ್ಎಸ್‌ 10, ಯುದ್ಧ 6, ಮುಸ್ಲಿಂ 14, ವಿಶ್ವ 12, ನಾಜಿ ಪದವನ್ನು 6 ಬಾರಿ ಬಳಕೆ ಮಾಡಿದ್ದರು.

  • 2022ರೊಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡಿ: ಮೋದಿ ಮನವಿ

    2022ರೊಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡಿ: ಮೋದಿ ಮನವಿ

    ನವದೆಹಲಿ: 2022 ರೊಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡುವ ಸಂಕಲ್ಪ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ.

    73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರವಾಸೋದ್ಯಮದಿಂದ ಸರ್ಕಾರಕ್ಕೆ ಹೆಚ್ಚಿನ ಹಣ ಹರಿದು ಬರುತ್ತಿದೆ. ಆದರೆ ದೇಶದ ಜನರು ರಜಾ ದಿನಗಳಲ್ಲಿ ಹೆಚ್ಚಾಗಿ ವಿದೇಶಿ ಪ್ರವಾಸ ಕೈಗೊಳ್ಳುತ್ತಾರೆ. ನಮ್ಮ ದೇಶದ ಪ್ರವಾಸಿ ತಾಣಗಳಿಗೆ ಭೇಟಿ ಕೊಡುವುದು ತುಂಬಾ ಅಪರೂಪ ಎಂಬಂತಾಗಿದೆ ಎಂದು ಹೇಳಿದರು.

    ದೇಶದ ಜನರು 2022ರ ಒಳಗೆ ಭಾರತದ 15 ಪ್ರವಾಸಿ ಸ್ಥಳಗಳಿಗೆ ಭೇಟಿ ಕೊಡುವ ಸಂಕಲ್ಪ ಮಾಡಬೇಕಿದೆ. ಎಲ್ಲಿ ನೀವು ಪ್ರವಾಸಕ್ಕೆ ಹೋಗುತ್ತಿರೋ ಅಲ್ಲಿ ಹೊಸ ಜಗತ್ತು ನಿರ್ಮಿಸಬಹುದು. ಭಾರತೀಯರು ಹೋಗುವ ಸ್ಥಳಗಳಿಗೆ ವಿದೇಶಿಯರು ಕೂಡ ಬರುತ್ತಾರೆ. ಈ ಮೂಲಕ ನಮ್ಮ ದೇಶದ ಪ್ರವಾಸೋದ್ಯಮ ಅಭಿವೃದ್ಧಿಯಾಗುತ್ತದೆ ಎಂದು ಮನವಿ ಮಾಡಿಕೊಂಡರು.

    ರೈತರಲ್ಲಿ ನನ್ನದೊಂದು ಮನವಿ ಇಡುತ್ತೇನೆ. ನಾವು ಈ ದೇಶವನ್ನು ತಾಯಿ ಎಂದುಕೊಳ್ಳುವವರು. ಆದರೆ ಭೂತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಹೊರತಾಗಿ ಹಾಳು ಮಾಡುತ್ತಿದ್ದೇವೆ. ಭಾರೀ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರಗಳನ್ನು ಭೂಮಿಗೆ ಸುರಿಯುತ್ತಿದ್ದೇವೆ. ಹಂತ ಹಂತವಾಗಿ ರಾಸಾಯನಿಕಗಳಿಂದ ಮುಕ್ತಿ ಹೊಂದುವ ನಿಟ್ಟಿನಲ್ಲಿ ಸಾಗಬೇಕಿದೆ ಎಂದು ಕೇಳಿಕೊಂಡರು.

    ದೇಶವು ಬಾಹ್ಯಾಕಾಶದಲ್ಲಿ ಹೊಸ ಮೈಲುಗಲ್ಲು ಇಟ್ಟಿದೆ. ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಯಾಗಿದ್ದು, ಶೀಘ್ರದಲ್ಲೇ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದೆ. ಇದು ನಮಗೆ ಹೆಮ್ಮೆ ತರುವ ವಿಚಾರವಾಗಿದೆ ಎಂದು ತಿಳಿಸಿದರು.

    https://www.youtube.com/watch?v=XWI-1Nqwnxc

  • ಪ್ಲಾಸ್ಟಿಕ್ ಎಂಬ ರಾಕ್ಷಸನಿಂದ ಬಚಾವಾಗಲು ಅಭಿಯಾನ: ಮೋದಿ

    ಪ್ಲಾಸ್ಟಿಕ್ ಎಂಬ ರಾಕ್ಷಸನಿಂದ ಬಚಾವಾಗಲು ಅಭಿಯಾನ: ಮೋದಿ

    – ಚೀಫ್ ಆಫ್ ಡಿಫೆನ್ಸ್ ನೇಮಕ: ಐತಿಹಾಸಿಕ ಘೋಷಣೆ
    – ಸೇನೆ ಬಗ್ಗೆ ಪ್ರಧಾನಿ ಮೆಚ್ಚುಗೆ

    ನವದೆಹಲಿ: ಪ್ಲಾಸ್ಟಿಕ್ ಎಂಬ ರಾಕ್ಷಸನಿಂದ ಬಚಾವ್ ಆಗಲು ಅಭಿಯಾನ ಆರಂಭವಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ಲಾಸ್ಟಿಕ್ ಚೀಲವನ್ನು ನಮ್ಮಿಂದ ನಿರೀಕ್ಷಿಸಬೇಡಿ ಎಂಬ ಬೋರ್ಡ್ ಪ್ರತಿ ಅಂಗಡಿಯಲ್ಲೂ ಇರಲಿ. ಪ್ಲಾಸ್ಟಿಕ್ ಬ್ಯಾಗ್ ಬದಲು ಬಟ್ಟೆಯಿಂದ ತಯಾರಿಸಿದ ಬ್ಯಾಗ್‍ಗಳನ್ನು ಬಳಕೆ ಮಾಡಬೇಕಿದೆ ಎಂದು ಜಾಗೃತಿ ಮೂಡಿಸಿದರು. ಇದನ್ನೂ ಓದಿ: ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ

    ಸ್ವದೇಶಿಯ ಉತ್ಪನ್ನಗಳನ್ನೇ ಹೆಚ್ಚಾಗಿ ಬಳಕೆ ಮಾಡಿ. ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಅಭಿವೃದ್ಧಿ ಸಾಧಿಸೋಣ. ದೇಶದಲ್ಲಿರುವ ಬಲಿಷ್ಠ ಸರ್ಕಾರವನ್ನು ಪ್ರಪಂಚವೇ ಗುರುತಿಸಿದೆ. ವಿದೇಶದಕ್ಕೆ ಪ್ರತಿ ಜಿಲ್ಲೆಯಿಂದಲೂ ಒಂದಲ್ಲ ಒಂದು ರೀತಿಯ ಉತ್ಪನ್ನಗಳು ರಫ್ತು ಮಾಡಬೇಕು ಎಂದು ತಿಳಿಸಿದರು.

    ದೇಶದ ಅಭಿವೃದ್ಧಿಗೆ ಶಾಂತಿ ಹಾಗೂ ಸುರಕ್ಷತೆ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಶ್ರಮಿಸಿದ ಸೈನಿಕರಿಗೆ, ಭದ್ರತಾ ಪಡೆಗೆ ನಾನು ನಮಿಸುತ್ತೇನೆ. ನಮ್ಮ ನೆರೆಯ ದೇಶಗಳು ಭಯೋತ್ಪಾದನೆಗೆ ತತ್ತರಿಸಿ ಹೋಗಿವೆ. ಭಾರತೀಯ ರಕ್ಷಣಾ ಪಡೆಯು ದೇಶದ ಸಂರಕ್ಷಣೆಗಾಗಿ ಪ್ರಶಂಸನೀಯ ಕೆಲಸ ಮಾಡಿವೆ ಎಂದರು.

    ಭೂ, ವಾಯು ಹಾಗೂ ನೌಕಾ ಪಡೆಗಳ ಮಧ್ಯೆ ಸಮನ್ವಯತೆ ತರುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚೀಫ್ ಆಫ್ ಡಿಫೆನ್ಸ್ ನೇಮಕ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಅವರು ಐತಿಹಾಸಿದ ಘೋಷಣೆ ಮಾಡಿದ್ದಾರೆ.

    ದೇಶವು ಬಾಹ್ಯಾಕಾಶದಲ್ಲಿ ಹೊಸ ಮೈಲುಗಲ್ಲು ಇಟ್ಟಿದೆ. ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಯಾಗಿದ್ದು, ಕೆಲವೇ ದಿನಗಳಲ್ಲಿ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

    https://www.youtube.com/watch?v=XWI-1Nqwnxc

  • ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ

    ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರು ಪೂರೈಕೆ: ಪ್ರಧಾನಿ ಮೋದಿ

    – ಮಗು ಹುಟ್ಟಿಸುವ ಮುನ್ನ ಯೋಚನೆ ಮಾಡಿ
    – ನನಗಾಗಿ ಏನನ್ನೂ ಮಾಡಿಕೊಳ್ಳಲು ಅಧಿಕಾರಕ್ಕೆ ಬಂದಿಲ್ಲ
    – ಮೂಲ ಸೌಕರ್ಯಕ್ಕೆ 100 ಲಕ್ಷ ಕೋಟಿ ರೂ. ಮೀಸಲು

    ನವದೆಹಲಿ: ಜಲ ಜೀವನ್ ಮಿಷನ್ ಯೋಜನೆಯಿಂದಾಗಿ ದೇಶದ ಪ್ರತಿ ಮನೆ ಮನೆಗೂ ನಲ್ಲಿಯ ಮೂಲಕ ನೀರು ಪೂರೈಕೆ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಇಂದು 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶದಲ್ಲಿರುವ ಬಡತನವನ್ನು ಹಾಗೂ ಬಡವರ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವತಿಯಿಂದ 2022ರ ವೇಳೆಗೆ ಪ್ರತಿ ಬಡವರಿಗೂ ಶಾಶ್ವತ ಮನೆ ನೀಡಲಾಗುತ್ತದೆ. 100 ಲಕ್ಷ ಕೋಟಿ ರೂ.ವನ್ನು ಮೂಲ ಸೌಕರ್ಯಕ್ಕೆ ಹಾಗೂ ಜಲ ಜೀವನ್ ಮೀಷನ್ ಯೋಜನೆಗೆ 3.5 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ ಎಂದರು.

    ನನಗಾಗಿ ಏನನ್ನೂ ಮಾಡಿಕೊಳ್ಳಲು ಅಧಿಕಾರಕ್ಕೆ ಬಂದಿಲ್ಲ. ನಾವು ಸಮಸ್ಯೆಗಳನ್ನು ಸಾಕಲ್ಲ, ದೂರ ತಳ್ಳುವುದೂ ಇಲ್ಲ. ಬದಲಾಗಿ ಅವುಗಳನ್ನು ಬಗೆಹರಿಸುತ್ತೇವೆ. ನಮ್ಮ ದೇಶವು ಬದಲಾವಣೆ ಕಾಣುತ್ತಿದೆ ಹಾಗೂ ಅಭಿವೃದ್ಧಿಯಾಗುತ್ತಿದೆ ಎಂದು ದೇಶದ ಸಾಮಾನ್ಯ ವ್ಯಕ್ತಿಯೂ ಹೇಳುತ್ತಿದ್ದಾರೆ. 130 ಕೋಟಿ ಜನರ ಮುಖದ ಮೇಲಿನ ಉತ್ಸಾಹ ನನಗೆ ಹೊಸ ಶಕ್ತಿ ತುಂಬಿದೆ ಎಂದು ಹೇಳಿದರು.

    ಸ್ವಾತಂತ್ರ್ಯ ಸಂದರ್ಭದ ನಡುವೆ ದೇಶದ ಹಲವು ಭಾಗಗಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಮಳೆ ಹಾಗೂ ಪ್ರವಾಹದಿಂದ ಭಾರೀ  ನಷ್ಟ ಉಂಟಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೇರಿ ಸಂತ್ರಸ್ತರ ಅಭಿವೃದ್ಧಿಗೆ ಶ್ರಮಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ನೀಡಿದ್ದ 370ನೇ ಹಾಗೂ 35 (ಎ) ವಿಧಿಗಳನ್ನು ರದ್ದು ಮಾಡಿದ್ದೇವೆ. ಮುಸ್ಲಿಂ ಸಹೋದರಿಯರು ಹಾಗೂ ತಾಯಂದಿರಿಗಾಗಿ ತ್ರಿವಳಿ ತಲಾಖ್ ರದ್ದು ಮಾಡಲಾಗಿದೆ. ರೈತರಿಗಾಗಿ ಪ್ರಧಾನಿ ಮಂತ್ರಿ ಕಿಸಾನ್ ಯೋಜನೆ, ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಜಾರಿಗೆ ತಂದಿದ್ದೇವೆ. ವೈದ್ಯಕೀಯ ಶಿಕ್ಷಣವನ್ನು ಪಾರದರ್ಶಕತೆ ಮಾಡಲಾಗಿದೆ. ಜಲ ಸಮಸ್ಯೆ ನಿವಾರಣೆಗಾಗಿ ಜಲಶಕ್ತಿ ಮಂತ್ರಾಲಯ ಆರಂಭಿಸಿದ್ದೇವೆ. ಈ ಮೂಲಕ ದೇಶದ ಅಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಎನ್‍ಡಿಎ ನೇತೃತ್ವದ ಸರ್ಕಾರವು ಜಾರಿಗೆ ತಂದಿದೆ ಎಂದರು.

    ಅತ್ಯಾಚಾರಿಗಳಿಗೆ ಕಠಿಣ ನೀಡುವ ಕಾನೂನು ಜಾರಿಗೆ ತಂದಿದ್ದೇವೆ. ದೇಶದ ಪ್ರತಿಯೊಬ್ಬರ ಏಳಿಗಾಗಿ ಶ್ರಮಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಸೇವೆ ಮಾಡಲು ಅವಕಾಶ ನೀಡಿದ್ದೀರಿ. ಹಂತ ಹಂತವಾಗಿ ಭಾರತವು ಅಭಿವೃದ್ಧಿ ಹೊಂದುತ್ತಿದೆ ಎಂದು ದೇಶದ ಜನರಿಗೆ ತಿಳಿಸಿದರು.

    ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕರು ತಮ್ಮ ಜೀವನನ್ನೇ ತ್ಯಾಗ ಮಾಡಿದ್ದಾರೆ. ಅವರಿಗೆ ನನ್ನ ನಮನಗಳು. ಕೆಲ ನಾಯಕರು ತಮ್ಮ ಯೌವನವನ್ನು ಜೈಲಿನಲ್ಲಿ ಕಳೆದರು. ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನನ್ನ ನಮನಗಳು ಎಂದರು.

    ನಮ್ಮ ಮುಸ್ಲಿಂ ಹೆಣ್ಣು ಮಕ್ಕಳ ತಲೆಯ ಮೇಲೆ ತ್ರಿವಳಿ ತಲಾಖ್ ತೂಗುಗತ್ತಿ ಇತ್ತು. ಹೀಗಾಗಿ ಅವರು ಭಯದಲ್ಲಿಯೇ ಜೀವನ ನಡೆಸುತ್ತಿದ್ದರು. ಈ ನಿಟ್ಟಿನಲ್ಲಿ ತ್ರಿವಳಿ ತಲಾಖ್, ಬಾಲ್ಯವಿವಾಹ, ಅತ್ಯಾಚಾರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಕಠಿಣ ಕಾನೂನು ಅವಶ್ಯಕವಾಗಿತ್ತು. ಅದನ್ನು ನಮ್ಮ ಸರ್ಕಾರ ಈಡೇರಿಸಿದೆ ಎಂದರು.

    ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಜನರ ಆಸೆ ಹಾಗೂ ಆಕಾಂಕ್ಷೆಯನ್ನು ಪೂರ್ಣಗೊಳಿಸುವುದು ನಮ್ಮ ಜವಾಬ್ದಾರಿ. ಸಂವಿಧಾನದ ವಿಧಿ 370 ರದ್ದು ಮಾಡಿದ್ದನ್ನು ರಾಜಕೀಯವಾಗಿ ಬಳಕೆ ಮಾಡುವುದು ಸರಿಯಲ್ಲ. ಒಂದು ವೇಳೆ 370ನೇ ವಿಧಿ ಅಷ್ಟು ಮುಖ್ಯ ಎನ್ನುವುದೇ ಆಗಿದ್ದರೆ ಅದನ್ನು ತಾತ್ಕಾಲಿಕವಾಗಿ ಏಕೆ ಇಟ್ಟಿರಿ? ನಿಮಗೆ ಅಷ್ಟೊಂದು ಬಹುಮತ ಇದ್ದಾಗಲೂ 370ನೇ ವಿಧಿಯನ್ನು ಶಾಶ್ವತವಾಗಿ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಜನಸಂಖ್ಯಾ ನಿಯಂತ್ರಣಕ್ಕೆ ಮನವಿ:
    ಜನಸಂಖ್ಯಾ ಸ್ಫೋಟ ಮಿತಿ ಮೀರಿ ಹೋಗುತ್ತಿದೆ. ಮುಂದಿನ ಪೀಳಿಗೆಗೆ ಇದು ದೊಡ್ಡ ಸವಾಲು ಒಡ್ಡಲಿದೆ. ಮಗುವಿಗೆ ಜನ್ಮ ನೀಡುವ ಮುನ್ನ ಯೋಚಿಸಿ, ಮುಗುವಿನ ಎಲ್ಲ ಅವಶ್ಯಕತೆ ಪೂರೈಸಬಹುದೇ ಎಂಬುದನ್ನು ಯೋಚಿಸಿ ನಿರ್ಣಯ ಕೈಗೊಳ್ಳಿ ಎಂದು ಇದೇ ವೇಳೆ ಪ್ರಧಾನಿಯವರು ದೇಶದ ಜನರಲ್ಲಿ ಮನವಿ ಮಾಡಿಕೊಂಡರು.

  • ಬೆಣ್ಣೆಯಿಂದ ಶಿಲ್ಪ ತಯಾರಿಸಲ್ಲ, ಶಿಲೆಯಿಂದ ಶಿಲ್ಪ ಮಾಡೋರು ನಾವು-ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ

    ಬೆಣ್ಣೆಯಿಂದ ಶಿಲ್ಪ ತಯಾರಿಸಲ್ಲ, ಶಿಲೆಯಿಂದ ಶಿಲ್ಪ ಮಾಡೋರು ನಾವು-ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ

    -ಪ್ರಧಾನಮಂತ್ರಿ ಜನ್ ಆರೋಗ್ಯ ಅಭಿಯಾನ ಆರಂಭ

    ನವದೆಹಲಿ: 72ನೇ ಸ್ವತಂತ್ರ್ಯದಿನಾಚರಣೆ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನರನ್ನು ಕುರಿತು ಮಾತನಾಡಿದ್ರು.

    ಮೊದಲಿಗೆ ಎಲ್ಲ ಭಾರತೀಯರಿಗೂ ಸ್ವತಂತ್ರ್ಯ ದಿನಾಚರಣೆಯ ಶುಭಾಶಯ ತಿಳಿಸಿದ ಪ್ರಧಾನಿ, ದೇಶ ಆತ್ಮ ವಿಶ್ವಾಸದಲ್ಲಿದ್ದು, ಹೊಸ ಕನಸು, ಉತ್ಸಾಹದೊಂದಿಗೆ ಮುನ್ನಡೆಯುತ್ತಿದೆ. ತೆಲಂಗಾಣ ಆಂಧ್ರದ ಹೆಣ್ಣು ಮಕ್ಕಳು ಸಪ್ತ ಸಮುದ್ರ ದಾಟಿ ಬಂದಿದ್ದಾರೆ. ಈ ವರ್ಷ ಕಲಾಪಗಳು ಸುಗಮವಾಗಿ ನಡೆದು ಬಂದಿದ್ದು, ವಿಶ್ವದ 6 ಅತಿ ದೊಡ್ಡ ಆರ್ಥಿಕ ವ್ಯವಸ್ಥೆ ರಾಷ್ಟ್ರಗಳಲ್ಲಿ ಭಾರತ ಸಹ ಒಂದಾಗಿದೆ. ಹಿಂದುಳಿದ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡಲಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ನಿರಂತರವಾಗಿ ಉತ್ತಮ ಮಳೆಯಾಗ್ತಿದ್ದು, ಪ್ರವಾಹ ಪೀಡಿತ ರಾಜ್ಯಗಳೊಂದಿಗೆ ಇಡೀ ದೇಶವೇ ಇದೆ ಎಂದು ಹೇಳಿದ್ರು.

    ಆಯುಷ್ಮಾನ್ ಯೋಜನೆ ಅಡಿಯಲ್ಲಿ ಪ್ರಧಾನಮಂತ್ರಿ ಜನ್ ಆರೋಗ್ಯ ಅಭಿಯಾನ ಆರಂಭಿಸಲಾಗುವುದು. ಈ ಯೋಜನೆಯಿಂದ 10 ಕೋಟಿ ಕುಟುಂಬಗಳಿಗೆ 50 ಕೋಟಿ ಜನರಿಗೆ ಪ್ರಯೋಜನವಾಗಲಿದೆ. ಗಂಭೀರ ರೋಗಗಳಿಗೆ ದೊಡ್ಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದೊರೆಯಲಿದ್ದು, ಟ್ರೀಟಮೆಂಟ್ ಗಾಗಿ ಹಣ ಹೊಂದಿಸಲು ಕಷ್ಟಪಡೋದು ತಪ್ಪಲಿದೆ. 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ. ಸೆಪ್ಟೆಂಬರ್ 25ರಿಂದ ದೇಶದ 70ರಿಂದ 75 ಜಿಲ್ಲೆಗಳಲ್ಲಿಶ ಆಯುಷ್ಮಾನ್ ಯೋಜನೆ ಆರಂಭವಾಗಲಿದೆ ಎಂದು ತಿಳಿಸಿದ್ರು.

    ಜಲಿಯನ್ ವಾಲಾಬಾಗ್ ಹತ್ಯಾಕಾಂಡ ನಡೆದು 100 ವರ್ಷಗಳು ಕಳೆದಿವೆ. ನಮ್ಮ ವೀರರ ಬಲಿದಾನವನ್ನು ನಾವೆಲ್ಲರು ಸ್ಮರಿಸಬೇಕಿದೆ. 2014ರಲ್ಲಿ ಜನರು ಕೇವಲ ಸರ್ಕಾರ ರಚಿಸಿ ಸುಮ್ಮನೆ ಕುಳಿತಿರಲಿಲ್ಲ. ದೇಶದ ರಚನೆಗಾಗಿ ಸರ್ಕಾರದ ಜೊತೆ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲಿ ಇದು ಹೇಗೆ ಮುಂದುವರೆಯುತ್ತದೆ. ಇದು ನಮ್ಮ ದೇಶದ ಸುಂದರತೆ. ಕಳೆದ 4 ವರ್ಷಗಳಲ್ಲಿ ನಡೆದಿರುವ ಪ್ರಗತಿ ಕೆಲಸಗಳನ್ನು ನೋಡಿದ್ರೆ ದೇಶದ ಅಭಿವೃದ್ಧಿ ಹೇಗೆ ನಡೆಯುತ್ತಿದೆ ಎಂಬುವುದ ನಿಮಗೆ ತಿಳಿಯಲಿದೆ.

    2013ರಲ್ಲಿದ್ದು ಸರ್ಕಾರದ ರೀತಿಯ ವೇಗದಲ್ಲಿ ನಾವು ಕೆಲಸಗಳನ್ನು ಮಾಡಿದ್ರೆ ಇಂದು ಆಗಿರುವ ಸಾಧನೆಗೆ ದಶಕಗಳೇ ಬೇಕಾಗಿತ್ತು. 2013ರಲ್ಲಿ ಇದ್ದ ದೇಶದ ಸ್ಥಿತಿ ಇಂದಿಲ್ಲ. ದೇಶದ ನಗರಗಳಲ್ಲಿ ಸ್ಟಾರ್ಟ್ ಅಪ್ ಆರಂಭವಾಗಿದೆ. ದೇಶದ ಆಧುನಿಕತೆ ವಿಜ್ಞಾನದತ್ತ ಸಾಗುತ್ತಿದ್ದು, ಗ್ರಾಮ ಗ್ರಾಮಗಳು ಡಿಜಿಟಲೀಕರಣಕ್ಕೆ ಒಳಪಡುತ್ತೀವೆ. ಏಕ ಶ್ರೇಣಿ, ಏಕ ವೇತನ ಮೂಲದ ನಿವೃತ್ತ ಯೋಧರ ಬೇಡಿಕೆಗಳನ್ನು ಈಡೇರಿಸಿದ್ದೇವೆ. ಜಿಎಸ್‍ಟಿ ಜಾರಿ ಮೂಲಕ ಏಕರೂಪದ ತೆರಿಗೆಯನ್ನು ಜಾರಿಗೆ ತರಲಾಗಿದೆ. ಬೇನಾಮಿ ಆಸ್ತಿಗಾಗಿ ಹೊಸ ಹೊಸ ತಂತ್ರಗಳನ್ನು ರಚಿಸಿದೆ. ಈ ಮೊದಲು ಪತ್ರಿಕೆಗಳಲ್ಲಿ ಭಾರತ ಆರ್ಥಿಕ ಸಂಕಷ್ಟದಲ್ಲಿದೆ ಎಂದು ವರದಿಯಾಗುತ್ತಿದೆ.

    ಭಾರತ ಮಲ್ಟಿ ಬಿಲಿಯನ್ ಡಾಲರ್ ಹೂಡಿಕೆ ಸ್ಥಳವಾಗಿದೆ. ಮಲಗಿದ್ದ ಆನೆ ಇಂದು ಎಚ್ಚರಗೊಂಡು ಓಡುತ್ತಿದೆ ಎಂದು ವಿಶ್ವದ ಆರ್ಥಿಕ ತಜ್ಞರು ಹೇಳುತ್ತಿದೆ. ವಿಶ್ವದ ಉನ್ನತ ಸಂಸ್ಥೆಗಳು ಭಾರತದ ಬಗ್ಗೆ ಧನಾತ್ಮಕವಾಗಿ ಮಾತನಾಡುವಂತೆ ದೇಶದ ಆರ್ಥಿಕ ವ್ಯವಸ್ಥೆ ಬದಲಾಗಿದೆ. ಜಾಗತಿಕವಾಗಿ ಭಾರತವನ್ನು ನೋಡುವ ದೃಷ್ಟಿಕೋನ ಬದಲಾಗಿದೆ. 2022ರಲ್ಲಿ ಸ್ವತಂತ್ರದ 75ನೇ ವರ್ಷಾಚರಣೆಯಲ್ಲಿ ದೇಶದ ಮಹಿಳೆ, ಮಕ್ಕಳು ಎಲ್ಲರು ಭಾರತದ ಧ್ವಜ ಹಿಡಿದು ಅಂತರಿಕ್ಷೆಗೆ ಹೋಗುವಂತೆ ಮಾಡಲಾಗುವುದು. 2022ರಲ್ಲಿ ದೇಶದ ರೈತರ ಆದಾಯವನ್ನು ದ್ವಿಗುಣ ಆಗುವಂತೆ ಕೆಲಸ ಮಾಡಲಾಗುವುದು ಎಂದು ಹೇಳಿದರು.

    ಬಲತ್ಕಾರ ಮಾಡುವ ರಾಕ್ಷಸ ಮನೋವೃತ್ತಿಗೆ ಅಂತ್ಯ ಹಾಡಬೇಕಿದೆ. ಅತ್ಯಾಚಾರ ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಗೆ ಒಳಾಗದವರ ಬಗ್ಗೆ ಪ್ರಚಾರಗೊಳಿಸಬೇಕಿದೆ. ರಾಕ್ಷಸ ಮನೋವೃತ್ತಿಯ ಅಂತ್ಯಗೊಳಿಸಲು ನಾವೆಲ್ಲರೂ ಪಣ ತೊಡಬೇಕಿದೆ. ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ವಿಶೇಷ ಕಾನೂನು ತಂದು ತರಲು ಸತತ ಪ್ರಯತ್ನ ಮಾಡುತ್ತಿದ್ದೇನೆ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ನಾನು ಸತತವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv