Tag: ಕೆಂಪೇಗೌಡ

  • ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ: ಸಿದ್ದರಾಮಯ್ಯ

    ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ: ಸಿದ್ದರಾಮಯ್ಯ

    ಹಾಸನ: ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್‍ಕಾಯಿನ್‍ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಹಾಸನ (Hassan) ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಎಂದರು. ಇದನ್ನೂ ಓದಿ: ಅಕ್ಕಪಕ್ಕ ಕೂರಿಸಿಕೊಂಡು ಡಿಕೆಶಿ-ಅಶ್ವಥ್‍ಗೆ ನಿರ್ಮಲಾನಂದ ಶ್ರೀಗಳು ಕಿವಿಮಾತು

    ಗ್ಯಾರಂಟಿ ಯೋಜನೆ (Guarantee Scheme) ಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ (Gruhajyoti) ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮಿ (Gruhalaxmi Scheme) ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದು ಹೇಳಿದರು.

    ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆ: ಕೆಂಪೇಗೌಡರು (Kempegowda) ಜನಪರ ಹಾಗೂ ಜಾತ್ಯಾತೀತ ದೊರೆಯಾಗಿದ್ದರು. ಇವರ ಕಾಲದಲ್ಲಿ ಎಲ್ಲರೂ ಸೌಹಾರ್ದತೆಯಿಂದಿದ್ದರು. ಇಂತಹ ಮಾದರಿ ನಾಡಪ್ರಭುವನ್ನು ಸ್ಮರಿಸುವ ಸಲುವಾಗಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದ ವತಿಯಿಂದಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಆದೇಶ ನೀಡಲಾಗಿತ್ತು. ಕೆಂಪೇಗೌಡರ ಪ್ರತಿಮೆಯನ್ನೂ ನಮ್ಮ ಅವಧಿಯಲ್ಲಿಯೇ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕೆಂಪೇಗೌಡರು ಒಬ್ಬ ಪ್ರಗತಿಪರವಾದ, ಜಾತ್ಯಾತೀತವಾದ ದೊರೆಯನ್ನು ಸ್ಮರಿಸುವ ದಿನವಾಗಿದೆ ಎಂದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಡಿಕೆಶಿ, ಅಶ್ವಥ್ ನಾರಾಯಣ್ ಮುಖಾಮುಖಿ; ಪರಸ್ಪರ ಟಾಂಗ್

    ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಡಿಕೆಶಿ, ಅಶ್ವಥ್ ನಾರಾಯಣ್ ಮುಖಾಮುಖಿ; ಪರಸ್ಪರ ಟಾಂಗ್

    – ಅಶ್ವಥ್ ನಾರಾಯಣ್ ಇತಿಹಾಸ ತಿಳಿದುಕೊಳ್ಳಲಿ ಎಂದ ಡಿಕೆಶಿ
    – ಡಿಕೆಶಿ ಉತ್ತಮ ಕೆಲಸ ಮಾಡುವಂತೆ ಹಾರೈಸುತ್ತೇನೆ ಅಂತ ಅಶ್ವಥ್ ನಾರಾಯಣ್ ತಿರುಗೇಟು

    ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು (Kempegowda Utsav) ಇಂದು ರಾಜ್ಯಾದ್ಯಂತ ಆಚರಣೆ ಮಾಡಲಾಯಿತು. ರಾಜ್ಯ ರಾಜಧಾನಿ ಸದಾಶಿವನಗರದ ರಮಣಮಹರ್ಷಿ ಉದ್ಯಾನದಲ್ಲೂ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಂದೇ ವೇದಿಕೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹಾಗೂ ಮಾಜಿ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಮುಖಾಮುಖಿಯಾಗಿದ್ದರು. ಅಷ್ಟೇ ಅಲ್ಲದೇ ಪರಸ್ಪರರ ಮೇಲೆ ಮಾತಿನ ಪ್ರಹಾರ ನಡೆಸಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕೆಂಪೇಗೌಡರು ಇಡೀ ಬೆಂಗಳೂರನ್ನು ಅಭಿವೃದ್ಧಿ ಮಾಡಿ ಪೇಟೆಗಳನ್ನು ಕಟ್ಟಿದವರು. ಅವರೇನಾದರೂ ಜಾತಿ ನೋಡಿ ಪೇಟೆ ನಿರ್ಮಾಣ ಮಾಡಿದ್ದಾರಾ? ನಾನು ಬೆಂಗಳೂರಿನಲ್ಲಿ 6ನೇ ತರಗತಿ ತನಕ ಓದಿದವನು. ನನಗೂ ಬೆಂಗಳೂರಿಗೂ ವಿಶೇಷ ಸಂಬಂಧವಿದೆ. ಅಶ್ವಥ್ ನಾರಾಯಣ್ ರಾಜಕೀಯ ಮಾತನಾಡುತ್ತಾರೆ. ಆದರೆ ಅವರಿಗೆ ಇತಿಹಾಸ ಗೊತ್ತಿಲ್ಲ. ಇತಿಹಾಸ ಗೊತ್ತಿಲ್ಲದಿದ್ದರೆ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ನೀವು ಇತಿಹಾಸ ತಿಳಿದುಕೊಳ್ಳಿ ಎಂದು ವೇದಿಕೆಯಲ್ಲೇ ಇದ್ದ ಮಾಜಿ ಸಚಿವರಿಗೆ ಟಾಂಗ್ ಕೊಟ್ಟಿದ್ದಾರೆ.

    ಇದಕ್ಕೆ ಪ್ರತಿಯಾಗಿ ಮಾತನಾಡಿದ ಡಾ.ಸಿ.ಎನ್.ಅಶ್ವಥ್ ನಾರಾಯಣ್ (Ashwath Narayan), ಪ್ರಶ್ನೆ ಮಾಡಲು ನನಗೂ ರಾಮನಗರಕ್ಕೂ ಏನು ಸಂಬಂಧ ಎಂದು ಡಿಕೆಶಿಗೆ ಪ್ರಶ್ನೆ ಮಾಡಿದ್ದಾರೆ. ಯಾವ ಸರ್ಕಾರ ಕೂಡ ಕೊಡದಷ್ಟು ಯೋಜನೆಗಳನ್ನ ನಾವು ರಾಮನಗರಕ್ಕೆ ಕೊಟ್ಟಿದ್ದೇವೆ. ರಾಮನಗರವನ್ನು ಅಭಿವೃದ್ಧಿ ಮಾಡಿದ್ದೇವೆ. ಕೆಂಪಾಂಬುದಿಯಲ್ಲಿ ಯೋಜನೆಗಳು ಮಾತ್ರ ಘೋಷಣೆಯಾಗಿದ್ದವು. ಆದರೆ ನಾವು ಅಭಿವೃದ್ಧಿ ಮಾಡಿದ್ದೇವೆ. ರಾಮನಗರ ನನ್ನ ಪೂರ್ವಿಕರ ಕರ್ಮಭೂಮಿಯಾಗಿದೆ. ನನ್ನ ಹುಟ್ಟು ಹೆಸರು ಕೆಂಪೇಗೌಡ. ಮುಂದಿನ ದಿನಗಳಲ್ಲಿ ಎಲ್ಲಾ ಇತಿಹಾಸ ತಿಳಿಯಲಿದೆ. ನನ್ನ ಕೊಡುಗೆ ಏನು ಎಂದು ಕೆಲಸವೇ ಮಾತನಾಡುತ್ತದೆ ಎಂದಿದ್ದಾರೆ.

    ವಲಸಿಗರ ವಿಚಾರದಲ್ಲಿ ಈಶ್ವರಪ್ಪ ಅವರ ಹೇಳಿಕೆಯನ್ನು ಖಂಡಿಸುತ್ತೇನೆ. ಕಳೆದ ಅವಧಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ಪೂರ್ಣ ಬಹುಮತವಿರಲಿಲ್ಲ. ಕಾಂಗ್ರೆಸ್‍ನಿಂದ ಶಾಸಕರು ಬಂದಿದ್ದರಿಂದ ಸರ್ಕಾರ ರಚನೆ ಸಾಧ್ಯವಾಯಿತು. ಅವರನ್ನು ವಲಸಿಗರು ಎಂದು ಕರೆಯುವುದು ತಪ್ಪು. ಅವರು ನಮ್ಮ ಪಕ್ಷದ ಆಸ್ತಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

    ರಾಜಕೀಯದಲ್ಲಿ ಎಲ್ಲಾ ಗುರುಹಿರಿಯರು ಸಲಹೆ ನೀಡುತ್ತಾರೆ. ರಾಜಕೀಯವಾಗಿ ದ್ವೇಷ ವೈಮನಸ್ಸು ಬೆಳೆಸಿಕೊಳ್ಳಬೇಡಿ. ಪ್ರೀತಿ ವಿಶ್ವಾಸದಿಂದ ಕೆಲಸ ಮಾಡಿ ಎಂದು ಆಶೀರ್ವಾದ ಮಾಡಿದ್ದಾರೆ. ಅದರಂತೆ ಡಿ.ಕೆ ಶಿವಕುಮಾರ್ ಅವರಿಗೆ ಉತ್ತಮ ಕೆಲಸ ಮಾಡುವಂತೆ ಹಾರೈಸುತ್ತೇನೆ ಚಾಟಿ ಬೀಸಿದ್ದಾರೆ.

    ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಾಲಾನಂದ ಶ್ರೀಗಳು ಕೂಡ ಭಾಗಿಯಾಗಿದ್ದರು. ಈ ವೇಳೆ ಡಿಕೆಶಿ ಮತ್ತು ಅಶ್ವಥ್ ನಾರಾಯಣ್ ಇಬ್ಬರಿಗೂ ಕಿವಿಮಾತು ಹೇಳಿದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ನಾಡಪ್ರಭು ಕೆಂಪೇಗೌಡರ ಸಿನಿಮಾಗೆ ಸಿದ್ಧತೆ: ಡಾ.ರಾಜ್ ಆಸೆಯನ್ನ ಮೊಮ್ಮಗ ಯುವ ಈಡೇರಿಸ್ತಾನಾ?

    ನಾಡಪ್ರಭು ಕೆಂಪೇಗೌಡರ ಸಿನಿಮಾಗೆ ಸಿದ್ಧತೆ: ಡಾ.ರಾಜ್ ಆಸೆಯನ್ನ ಮೊಮ್ಮಗ ಯುವ ಈಡೇರಿಸ್ತಾನಾ?

    ಸ್ಯಾಂಡಲ್ ವುಡ್ ನಲ್ಲಿ ಅಚ್ಚರಿಯ ಘಟನೆಗಳು ನಡೆಯುತ್ತಿವೆ. ಅದರಲ್ಲೂ ಸದ್ದಿಲ್ಲದೇ ನಡೆಯುವ ಕೆಲಸಗಳೇ ಸಖತ್ ಸದ್ದು ಮಾಡುತ್ತವೆ. ಈಗ ಸದ್ದು ಮಾಡುವಂತಹ ಸುದ್ದಿಯೊಂದು ಗಾಂಧಿನಗರದಲ್ಲಿ ಹರಿದಾಡುತ್ತಿದ್ದು, ಅದು ನಿಜವಾದರೆ ತೆರೆಗೆ ಬರಲಿದ್ದಾನೆ ಬೆಂಗಳೂರು ನಿರ್ಮಾತೃ ಕೆಂಪೇಗೌಡ.

    ಹೌದು, ನಾಡಪ್ರಭು ಕೆಂಪೇಗೌಡ (Kempegowda) ಅವರ ಜೀವನದ ಕುರಿತಾಗಿ ಸಿನಿಮಾವೊಂದು ತಯಾರಾಗಲಿದ್ದು, ಅದರ ನೇತೃತ್ವವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಟಿ.ಎಸ್ ನಾಗಾಭರಣ (TS Nagabharana) ವಹಿಸಿದ್ದಾರೆ. ಈಗಾಗಲೇ ನಾಗಾಭರಣ ಕಥೆಯನ್ನೂ ಸಿದ್ಧಪಡಿಸಿದ್ದು, ನಾಯಕನಿಗಾಗಿ ಅವರು ಕಾಯುತ್ತಿದ್ದಾರಂತೆ.

    ಅಂದುಕೊಂಡಂತೆ ಆಗಿದ್ದರೆ ನಾಡಪ್ರಭು ಕೆಂಪೇಗೌಡರ ಬಗ್ಗೆ ಬಹಳ ವರ್ಷಗಳ ಹಿಂದೆಯೇ ಸಿನಿಮಾ ಬರಬೇಕಿತ್ತು. ಕೆಂಪೇಗೌಡರ ಪಾತ್ರವನ್ನು ಮಾಡುವಂತೆ ವರನಟ ಡಾ.ರಾಜ್ ಕುಮಾರ್ ಅವರನ್ನು ಕೇಳಲಾಗಿತ್ತು. ಆ ಪಾತ್ರವನ್ನು ಮಾಡುವ ಆಸೆ ಡಾ.ರಾಜ್ ಕುಮಾರ್ ಅವರಿಗೆ ಇದ್ದರೂ, ಕೆಂಪೇಗೌಡರಿಗೆ ಅಪಚಾರವಾಗದಂತಹ ಸ್ಕ್ರಿಪ್ಟ್‌ಗಾಗಿ ಡಾ.ರಾಜ್ ಕಾದರು. ಆದರೆ, ಕೊನೆಗೂ ಅವರಿಗೆ ಅದು ಸಿಗಲಿಲ್ಲ.

    ಇದೀಗ ಕೆಂಪೇಗೌಡರ ಕುರಿತಾದ ಸಿನಿಮಾ ಮಾಡುವ ಅವಕಾಶ ಮತ್ತೆ ದೊಡ್ಮನೆ ಕುಟುಂಬಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ. ಕೆಂಪೇಗೌಡ ಅವರ ಪಾತ್ರವನ್ನು ಯುವರಾಜ್ ಕುಮಾರ್ (Yuvraj Kumar) ಮಾಡಬೇಕು ಎನ್ನುವುದು ನಿರ್ದೇಶಕರ ಆಸೆ. ಯುವರಾಜ್ ಕುಮಾರ್ ಅವರನ್ನೇ ಮನಸ್ಸಲ್ಲಿಟ್ಟುಕೊಂಡು ಚಿತ್ರಕಥೆ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂದೆ ಏನಾಯಿತು ಎನ್ನುವ ವಿವರ ಲಭ್ಯವಿಲ್ಲ.

    ಸದ್ಯ ಯುವ ರಾಜ್ ಕುಮಾರ್ ‘ಯುವ’ ಸಿನಿಮಾದ ಶೂಟಿಂಗ್‌ನಲ್ಲಿದ್ದಾರೆ. ಮಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿದೆ. ಈ ಸಿನಿಮಾದ ನಂತರ ಅವರು ಮತ್ತೊಂದು ಕಥೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕೆಂಪೇಗೌಡ ಸಿನಿಮಾ ಒಪ್ಪುತ್ತಾರಾ, ತಾತನ ಆಸೆಯನ್ನು ಯುವ ಈಡೇರಿಸುತ್ತಾರಾ ಎನ್ನುವುದು ಕುತೂಹಲದ ಪ್ರಶ್ನೆ.

  • ಬಾತ್‌ಟಬ್‌ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ

    ಬಾತ್‌ಟಬ್‌ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟ ತುಪ್ಪದ ಬೆಡಗಿ ರಾಗಿಣಿ

    ಸ್ಯಾಂಡಲ್‌ವುಡ್ (Sandalwood) ನಟಿ ರಾಗಿಣಿ (Ragini Dwivedi) ಇದೀಗ ಸಾಲು ಸಾಲು ಸಿನಿಮಾಗಳ ಮೂಲಕ ಬ್ಯುಸಿಯಾಗಿದ್ದಾರೆ. ಈ ನಡುವೆ ರಾಗಿಣಿ ಹಾಟ್ ಆಗಿ ಫೋಟೋಶೂಟ್‌ವೊಂದು ಮಾಡಿಸಿದ್ದಾರೆ. ಈಗ ನಟಿಯ ಹೊಸ ಲುಕ್ ಪಡ್ಡೆಹುಡುಗರ ನಿದ್ದೆಗೆಡಿಸಿದೆ. ಇದನ್ನೂ ಓದಿ:ವಿಜಯ್ ನಟನೆಯ ‘ದಳಪತಿ 67’ ಸಿನಿಮಾಗೆ ಚಾಲನೆ

    `ವೀರಮದಕರಿ’ (Veeramadakari) ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಲಗ್ಗೆಯಿಟ್ಟ ನಟಿ ರಾಗಿಣಿ ದ್ವಿವೇದಿ, ಸಾಕಷ್ಟು ಸಂಕಷ್ಟಗಳ ನಂತರ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಕೈತುಂಬಾ ಸಿನಿಮಾಗಳಲ್ಲಿ ನಟಿ ಬ್ಯುಸಿಯಿದ್ದಾರೆ. ಜೊತೆಗೆ ಬಾಲಿವುಡ್‌ಗೂ (Bollywood) ನಟಿ ಎಂಟ್ರಿ ಕೊಟ್ಟಿದ್ದಾರೆ.

    ನಟಿ ರಾಗಿಣಿ ದ್ವಿವೇದಿ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾತ್‌ಟಬ್‌ನಲ್ಲಿ ಕುಳಿತು ಶಾರ್ಟ್ ಡ್ರೆಸ್ ಧರಿಸಿ ಕ್ಯಾಮರಾಗೆ ಪೋಸ್ ನೀಡಿದ್ದಾರೆ. ನಟಿಯ ಹಸಿ ಬಿಸಿ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಬಳಕುವ ಬಳ್ಳಿ ತರ ಕಾಣುವ `ರಾ’ಗಿಣಿ ಲುಕ್‌ಗೆ ಫ್ಯಾನ್ಸ್ ಬೋಲ್ಡ್ ಆಗಿದ್ದಾರೆ. ನಟಿಯ ಫೋಟೋ ಈಗ ಎಲ್ಲೆಡೆ ಸದ್ದು ಮಾಡ್ತಿದೆ.

    ಹಿಂದಿ ಸೇರಿ ಒಟ್ಟು 7 ಸಿನಿಮಾಗಳಲ್ಲಿ ರಾಗಿಣಿ ಕಾಣಿಸಿಕೊಂಡಿದ್ದಾರೆ. ಈ ವರ್ಷ ಒಂದೊಂದೇ ಸಿನಿಮಾಗಳು ತೆರೆಗೆ ಅಬ್ಬರಿಸಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಧಾನಸೌಧ ಮುಂಭಾಗ ಬಸವಣ್ಣ, ಕೆಂಪೇಗೌಡ ಪ್ರತಿಮೆಗಳಿಗೆ ಗುದ್ದಲಿ ಪೂಜೆ – 2 ತಿಂಗಳಲ್ಲಿ ಪ್ರತಿಷ್ಠಾಪನೆ: ಬೊಮ್ಮಾಯಿ

    ವಿಧಾನಸೌಧ ಮುಂಭಾಗ ಬಸವಣ್ಣ, ಕೆಂಪೇಗೌಡ ಪ್ರತಿಮೆಗಳಿಗೆ ಗುದ್ದಲಿ ಪೂಜೆ – 2 ತಿಂಗಳಲ್ಲಿ ಪ್ರತಿಷ್ಠಾಪನೆ: ಬೊಮ್ಮಾಯಿ

    ಬೆಂಗಳೂರು: ವಿಧಾನಸೌಧದ (Vidhana Soudha) ಮುಂಭಾಗದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ (Statue) ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯ ಶುಕ್ರವಾರ ನೆರವೇರಿದೆ. ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ (Basavaraj Bommai),  ಜಗಜ್ಯೋತಿ ಬಸವಣ್ಣ (Basavanna) ಹಾಗೂ ನಾಡಪ್ರಭು ಕೆಂಪೇಗೌಡರ (Kempegowda) ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ನುಡಿದಿದ್ದಾರೆ.

    ಈ ಇಬ್ಬರೂ ಮಹಾನ್ ಪುರುಷರ ಆಡಳಿತ ಮತ್ತು ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಈ ಶಕ್ತಿ ಸೌಧದಿಂದ ಅದು ಹರಿಯಬೇಕು. ಆ ವಿಚಾರಗಳು ಹರಿದು ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಿರುವ, ಸಾಮರಸ್ಯವಿರುವ, ಭಾರತದಲ್ಲಿಯೇ ಅತ್ಯಂತ ಶ್ರೇಷ್ಠ ರಾಜ್ಯವಾಗಬೇಕು. ಈ ಇಬ್ಬರೂ ಮಹಾತ್ಮರ ಪ್ರೇರಣೆ ವಿಧಾನಸೌಧದಲ್ಲಿ ನಿಲ್ಲಬೇಕು ಎಂಬ ಕಾರಣಕ್ಕೆ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

    ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ:
    ಬರುವ ದಿನಗಳಲ್ಲಿ ನಾಡಿನ ಜನತೆಗೆ ಒಳ್ಳೆಯದಾಗಿ ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಲಾಗಿದೆ. ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಎಲ್ಲರೂ ಸೇರಿ ಉದ್ಘಾಟನೆ ಮಾಡೋಣ. ಕನ್ನಡ ನಾಡಿಗೆ ಇದೊಂದು ಶುಭದಿನ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

    ನಾಡು ಕಟ್ಟಿರುವ ಅಪ್ರತಿಮ ನಾಯಕರು:
    ಇವರು ಕನ್ನಡನಾಡಿನಲ್ಲಿ ಹುಟ್ಟಿ, ಕ್ರಾಂತಿಯನ್ನು ಮಾಡಿದ ಇಬ್ಬರು ಮಹಾನ್ ಪುರುಷರು. ಒಂದು ವಿಶ್ವಬಂಧು, ಸಾಮಾಜಿಕ, ಆರ್ಥಿಕ ಹಾಗೂ ವೈಚಾರಿಕ ಕ್ರಾಂತಿಯನ್ನು ಕರ್ನಾಟಕದಲ್ಲಿ 12 ನೇ ಶತಮಾನದಲ್ಲಿ ಮಾಡಿ ಜಗತ್ತಿಗೆ ದರ್ಶನವನ್ನು ನೀಡಿರುವವರ ಪುತ್ಥಳಿ. ಮತ್ತೊಂದು ನಾಡು ಕಟ್ಟಿರುವ ಅಪ್ರತಿಮ ನಾಯಕರು, ಜನಹಿತಕ್ಕಾಗಿ ಕೆರೆಕಟ್ಟೆಗಳು, ಊರು ಕೇರಿಗಳನ್ನು, ಮಾರುಕಟ್ಟೆಗಳನ್ನು ಕಟ್ಟಿ ಮಾದರಿ ಆಡಳಿತ ಮಾಡಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಎಂದು ಹೇಳಿದರು. ಇದನ್ನೂ ಓದಿ: ಜ.31 ರಿಂದ 66 ದಿನ ಸಂಸತ್ ಬಜೆಟ್ ಅಧಿವೇಶನ – ಪ್ರಹ್ಲಾದ್ ಜೋಶಿ

    ಇವುಗಳನ್ನು ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಎಲ್ಲಾ ನಾಯಕರ ಅನುಮತಿ ಪಡೆದಿದ್ದರು. ಸಚಿವ ಆರ್. ಅಶೋಕ್ ಅವರಿಗೆ ಇದರ ಜವಾಬ್ದಾರಿ ನೀಡಲಾಗಿತ್ತು. ಅಶೋಕ್ ಅವರು ಅತ್ಯಂತ ಅಚ್ಚುಕಟ್ಟಾಗಿ ಇದರ ಜವಾಬ್ದಾರಿಯನ್ನು ನಿರ್ವಹಿಸಿ, ಕೇವಲ 2 ತಿಂಗಳೊಳಗೆ ಕಾರ್ಯನಿರ್ವಹಿಸಿ ಕ್ರಮ ಕೈಗೊಂಡಿದ್ದಾರೆ. ನಾಡಿನ ಎಲ್ಲಾ ಪರಮಪೂಜ್ಯರ ಸಾನಿಧ್ಯದಲ್ಲಿ ಅವರ ಆಶೀರ್ವಾದದೊಂದಿಗೆ ಒಂದು ಶಂಕುಸ್ಥಾಪನೆ ನೆರವೇರಿದೆ ಎಂದು ನುಡಿದರು. ಇದನ್ನೂ ಓದಿ: 15 ಸಿಮ್‌ ಕಾರ್ಡ್‌ ಬದಲಾಯಿಸಿ, ತಲೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿರ್ಮಲಾನಂದ ಸ್ವಾಮೀಜಿ ಹೆಗಲ ಮೇಲೆ ಕೈಹಾಕಿ ಅಶೋಕ್ ಅಪಮಾನ : ಸಿಎಂ ಇಬ್ರಾಹಿಂ ಕಿಡಿ

    ನಿರ್ಮಲಾನಂದ ಸ್ವಾಮೀಜಿ ಹೆಗಲ ಮೇಲೆ ಕೈಹಾಕಿ ಅಶೋಕ್ ಅಪಮಾನ : ಸಿಎಂ ಇಬ್ರಾಹಿಂ ಕಿಡಿ

    -ದೇಶದಲ್ಲಿ ಅಷ್ಟಲಕ್ಷ್ಮೀಯರು ಹೋಗಿ ಇದೀಗ ದರಿದ್ರ ಲಕ್ಷ್ಮಿ ಉಳಿದಿದ್ದಾಳೆ
    -ಕಾಂಗ್ರೆಸ್/ಬಿಜೆಪಿ ಇಬ್ಬರು ಒಂದೇ ಬೀದಿಯಲ್ಲಿರುವ ಪತಿವ್ರತೆಯರು

    ಕಲಬುರಗಿ: ನಿರ್ಮಲಾನಂದ ಸ್ವಾಮೀಜಿಗೆ (Nirmalananda Swamiji)ಗೌರವ ಕೊಡದೇ ಇರುವುದು ಅಕ್ಷಮ್ಯ ಅಪರಾಧ. ನಿರ್ಮಲಾನಂದ ಸ್ವಾಮೀಜಿ ಹೆಗಲ ಮೇಲೆ ಕೈಹಾಕಿ ಅಶೋಕ್ ಘೋರ ಅಪಮಾನ ಮಾಡಿದ್ದಾರೆ ಎಂದು ಜೆಡಿಎಸ್‌ (JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಕಿಡಿಕಾರಿದ್ದಾರೆ.

    ಕಲಬುರಗಿಯಲ್ಲಿ (Kalburgi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ನಿರ್ಮಲಾನಂದ ಸ್ವಾಮೀಜಿಗೆ ಅಪಮಾನ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರಿಗೆ (BJP) ಅಧಿಕಾರದ ಮದ ನೆತ್ತಿಗೆ ಹತ್ತಿದೆ. ಈ ಹಿಂದೆ ಅಮಿತ್ ಶಾ (Amit Shah) ಸ್ವಾಮೀಜಿ ಮುಂದೆ ಕಾಲು ಮೇಲೆ ಕಾಲು ಹಾಕಿ ಕುಳಿತ್ತಿದ್ದರು. ನಿರ್ಮಲಾನಂದ ಸ್ವಾಮೀಜಿಗೆ ಗೌರವ ಕೊಡದೇ ಇರುವುದು ಅಕ್ಷಮ್ಯ ಅಪರಾಧ. ನಿರ್ಮಲಾನಂದ ಸ್ವಾಮೀಜಿ ಹೆಗಲ ಮೇಲೆ ಕೈಹಾಕಿ ಅಶೋಕ್ ಘೋರ ಅಪಮಾನ ಮಾಡಿದ್ದಾರೆ. ಯಾರಿಗೆ ಯಾವ ರೀತಿ ಗೌರವ ಕೊಡಬೇಕು ಎನ್ನುವುದನ್ನು ಬಿಜೆಪಿಯವರು ಮರೆತ್ತಿದ್ದಾರೆ. ಬಿಜೆಪಿಯಲ್ಲಿ ಬುದ್ದಿವಾದ ಹೇಳುವ ಹಿರಿಯರು ಯಾರು ಇಲ್ಲ. ಬೊಮ್ಮಾಯಿ (Basavaraj Bommai) ಬಸವಕೃಪ ಮರೆತು, ಕೇಶವ ಕೃಪಾಕ್ಕೆ ಶರಣಾಗಿದ್ದಾರೆ ಎಂದಿದ್ದಾರೆ.

    ಇದೇ ವೇಳೆ ಕೆಂಪೇಗೌಡ ಪ್ರತಿಮೆ (Kempegowda Statue) ಉದ್ಘಾಟನೆ ಸಮಾರಂಭಕ್ಕೆ ದೇವೇಗೌಡರನ್ನು (H.D.Devegowda) ಆಹ್ವಾನಿಸದೇ ಇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇವೆಗೌಡರು ಪ್ರಧಾನಿಯಾದ ಮೊದಲ ಕನ್ನಡಿಗ. ದೇವೇಗೌಡರಿಗೆ ಕರೆಯದೆ ಇರೋದು ಕನ್ನಡಿಗರಿಗೆ ಮಾಡಿದ ಅವಮಾನ. ಸಿದ್ದರಾಮಯ್ಯರನ್ನು (Siddaramaiah) ಸಹ ಕಾರ್ಯಕ್ರಮಕ್ಕೆ ಕರೆಯಬೇಕಿತ್ತು. ಪ್ರಧಾನಿ ನಾಡು ಕಟ್ಟಲು ರಾಜ್ಯಕ್ಕೆ ಬಂದಿಲ್ಲ, ಬಿಜೆಪಿ ಕಟ್ಟಲು ಬಂದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಿಎಂ ಪತ್ರ ಬರೆದಿದ್ದು ಯಾವಾಗ? ದೇವೇಗೌಡರ ನಿವಾಸಕ್ಕೆ ತಲುಪಿಸಿದ್ದು ಯಾವಾಗ? – ಬಿಜೆಪಿಗೆ ಜೆಡಿಎಸ್ ಪ್ರಶ್ನೆ

    ನಂತರ, ಮೋದಿ ರಾಜ್ಯಕ್ಕೆ ಬಂದಿದ್ದು, ಜೆಡಿಎಸ್‍ಗೆ ಲಾಭವಾಗಿದೆ. ಇದೇ ರೀತಿ ಇನ್ನೂ ಎರಡು ಸಲ ರಾಜ್ಯಕ್ಕೆ ಬಂದು ಹೋದರೆ ಜೆಡಿಎಸ್‍ಗೆ ಒಳ್ಳೆಯದು. ಪೆಟ್ರೋಲ್ ಲೀಟರ್‌ಗೆ ನೂರು ರೂಪಾಯಿ ಆಗಿದೆ. ದೇಶದಲ್ಲಿ ಅಷ್ಟಲಕ್ಷ್ಮೀಯರು ಹೋಗಿ ಇದೀಗ ದರಿದ್ರ ಲಕ್ಷ್ಮಿ ಉಳಿದಿದ್ದಾಳೆ. ಕೆಂಪೆಗೌಡರ ಮೂರ್ತಿ ಅನಾವರ ಸಂತೋಷ. ಆದರೆ ಅದು ಬಿಜೆಪಿ ಮಯವಾಗಿದ್ದು ಸರಿಯಲ್ಲ. ಜನಕ್ಕೆ ಮೂರ್ತಿಕ್ಕಿಂತ ರಾಜ್ಯಕ್ಕೆ ಮೋದಿ ಆರ್ಥಿಕ ಶಕ್ತಿ ಏನು ಕೊಟ್ಟಿದ್ದಾರೆ? ರಾಜ್ಯದ ಜಿಎಸ್‍ಟಿ ಸೇರಿದಂತೆ ಯಾವ ವಿಚಾರಗಳನ್ನು ಪ್ರಸ್ತಾಪಿಸಿದರು ಎಂದು ಪ್ರಶ್ನಿಸಿದ್ದಾರೆ.

    ನಂತರ ಕಾಂಗ್ರೆಸ್/ಬಿಜೆಪಿ  (Congress/BJP) ಇಬ್ಬರು ಒಂದೇ ಬೀದಿಯಲ್ಲಿರುವ ಪತಿವ್ರತೆಯರು, ಅವರು 40%, ಇವರು 20%. ಎರಡು ಪಕ್ಷಗಳು ಸಾಕಷ್ಟು ಭ್ರಷ್ಟಾಚಾರ ಮಾಡಿವೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮೋದಿ ಎಲೆಕ್ಷನ್ ಗೇಮ್- ಪ್ರಬಲ ಸಮುದಾಯದ ಮೇಲೂ ಹೈಕಮಾಂಡ್ ಕಣ್ಣು

    Live Tv
    [brid partner=56869869 player=32851 video=960834 autoplay=true]

  • ನಾಡಪ್ರಭು ಕೆಂಪೇಗೌಡರ 108 ಅಡಿ  ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

    ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ(Bengaluru) ನಾಡಪ್ರಭು ಕೆಂಪೇಗೌಡರ (Statue of Kempegowda) 108 ಅಡಿಯ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಿದ್ದಾರೆ.

    ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ(Kempegowda International Airport) ಸಮೀಪ ಅನಾವರಣಗೊಂಡಿರುವ 108 ಅಡಿ ಎತ್ತರದ ಪ್ರತಿಮೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿದ್ದು ಇದಕ್ಕೆ ಪ್ರಗತಿಯ ಪ್ರತಿಮೆ(Statue of Prosperity) ಎಂದು ಕರ್ನಾಟಕ ಸರ್ಕಾರ ನಾಮಕರಣ ಮಾಡಿದೆ. ಇದನ್ನೂ ಓದಿ: ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಉದ್ಘಾಟನೆ –ವಿಶೇಷತೆ ಏನು?

     

    ನಾಡಪ್ರಭು ಕೆಂಪೇಗೌಡರ ಪ್ರತಿಮೆ ನಗರ ನಿರ್ಮಾತೃ ಒಬ್ಬರ ವಿಶ್ವದ ಅತಿ ಎತ್ತರದ ಪ್ರತಿಮೆ ಇದು ಎಂಬ ಹೆಗ್ಗಳಿಕೆಗೆ ಪಡೆದಿರುವುದು ವಿಶೇಷ. ಗುಜರಾತ್‌ನಲ್ಲಿ ಏಕತಾ ಪ್ರತಿಮೆ ನಿರ್ಮಾಣ ಮಾಡಿದ ರಾಮ್ ಸುತಾರ್(Ram V Sutar) ಕ್ರಿಯೇಷನ್ಸ್ ಅವರೇ ಈ ಕೆಂಪೇಗೌಡ ಪ್ರತಿಮೆಯ ವಿನ್ಯಾಸ ಹಾಗೂ ನಿರ್ಮಾಣ ಮಾಡಿದ್ದಾರೆ.

    ಈ ಪ್ರತಿಮೆ ನಿರ್ಮಾಣಕ್ಕೆ 84 ಕೋಟಿ ರೂ. ಖರ್ಚು ಮಾಡಲಾಗಿದ್ದು, ಪ್ರತಿಮೆಯ ಖಡ್ಗವೇ 4 ಸಾವಿರ ಕೆಜಿ ತೂಕ ಹೊಂದಿದೆ. 120 ಟನ್ ಉಕ್ಕನ್ನು ಪ್ರತಿಮೆ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ. 98 ಟನ್‌ ಕಂಚನ್ನು ಬಳಕೆ ಮಾಡಲಾಗಿದೆ.

    ಈ ಪ್ರತಿಮೆ ಬೆಂಗಳೂರು ನಗರದಲ್ಲಿಯೇ ಅತಿ ಎತ್ತರದ ಪ್ರತಿಮೆಯಾಗಿದ್ದು, ಪ್ರತಿಮೆ ಜಾಗದಲ್ಲಿಯೇ 23 ಎಕರೆ ಪ್ರದೇಶದಲ್ಲಿ ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದ ಕೂಡಲೇ ಒಕ್ಕಲಿಗರು ಬಿಜೆಪಿ ಹಿಂದೆ ಹೋಗೋದಿಲ್ಲ: ಕುಮಾರಸ್ವಾಮಿ

    ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದ ಕೂಡಲೇ ಒಕ್ಕಲಿಗರು ಬಿಜೆಪಿ ಹಿಂದೆ ಹೋಗೋದಿಲ್ಲ: ಕುಮಾರಸ್ವಾಮಿ

    ಬೆಂಗಳೂರು: ಕೆಂಪೇಗೌಡರ ಪ್ರತಿಮೆ (KempegowdaStatue) ಸ್ಥಾಪನೆ ಮಾಡಿದ ಕೂಡಲೇ ಒಕ್ಕಲಿಗರ (Okkaligas) ಮತ ಬಿಜೆಪಿಗೆ (BJP) ಹೋಗುವುದಿಲ್ಲ. ಅಂತಹ ಭ್ರಮೆಯಿಂದ ಬಿಜೆಪಿ ಹೊರಗೆ ಬರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕೆಂಪೇಗೌಡರ ಪ್ರತಿಮೆ, ಪ್ರಧಾನಿ ನರೇಂದ್ರ ಮೋದಿ (Narendra Modi) ಕಾರ್ಯಕ್ರಮದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿ ಬರುತ್ತಾರೆ ಹೋಗುತ್ತಾರೆ ಅಷ್ಟೆ. ಕೆಂಪೇಗೌಡ ಪ್ರತಿಮೆ ಅನಾವರಣ ಒಂದು ಭಾಗ. ಈಗಾಗಲೇ ರಾಜ್ಯದ ಹಲವಾರು ಭಾಗದಲ್ಲಿ ಕೆಂಪೇಗೌಡ ಪ್ರತಿಮೆಗಳು ನಿತ್ಯ ಒಂದಲ್ಲ ಒಂದು ಭಾಗದಲ್ಲಿ ಅನಾವರಣ ಆಗುತ್ತಿವೆ. ಇದು ಬಿಜೆಪಿಯ ನಿಯೋಜಿತ ಕಾರ್ಯಕ್ರಮ ಅಷ್ಟೆ. ಅದಕ್ಕೆ ನಾನು ಹೆಚ್ಚಿನ ಮಹತ್ವ ಕೊಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ದೆಹಲಿಯ ರಹಸ್ಯ ಸ್ಥಳದಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್

    ಕೆಂಪೇಗೌಡರ ಕನಸು ನನಸಾದಾಗ ನಾವು ಕೆಂಪೇಗೌಡರಿಗೆ ಗೌರವ ಕೊಟ್ಟ ಹಾಗೆ. ಬೆಂಗಳೂರು ನಗರ ಇಷ್ಟು ದೊಡ್ಡದಾಗಿ ಬೆಳೆದಿದೆ. ಬೆಂಗಳೂರಿನಲ್ಲಿ ನಿರುದ್ಯೋಗ ಹೆಚ್ಚಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಬೆಂಗಳೂರಿನಲ್ಲಿ ದೊಡ್ಡ ಅನಾಹುತ ಮಾಡಿವೆ. ಅದನ್ನು ಸರಿಪಡಿಸುವ ಕೆಲಸ ಮಾಡಿ ಕೆಂಪೇಗೌಡರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 5,000 ಕೋಟಿ ವೆಚ್ಚದ ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಫೋಟೋ ಬಿಡುಗಡೆ

    ಕೆಂಪೇಗೌಡ ಪ್ರತಿಮೆಯಿಂದ ಬಿಜೆಪಿಗೆ ಒಕ್ಕಲಿಗರ ಮತ ಹೋಗುತ್ತದೆ ಎಂಬ ಭ್ರಮೆ ಬೇಡ. ಕೆಂಪೇಗೌಡ ಪ್ರತಿಮೆ ಮಾಡಿ, ಮೋದಿ ಕೈಯಲ್ಲಿ ಉದ್ಘಾಟನೆ ಮಾಡಿಸಿದರೆ ಒಕ್ಕಲಿಗರು ಮತ್ತು ಕನ್ನಡಿಗರು ಬಿಜೆಪಿ ಹಿಂದೆ ಹೋಗುವುದಿಲ್ಲ. ಅಂತಹ ಭ್ರಮೆಯಲ್ಲಿ ಬಿಜೆಪಿ ಅವರು ಇದ್ದರೆ, ಆ ಭ್ರಮೆಯಿಂದ ಜನರೇ ಅವರನ್ನು ಹೊರಗೆ ತರುತ್ತಾರೆ ಎಂದು ಟಾಂಗ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ – ದೆಹಲಿಯಿಂದ ಬೆಂಗ್ಳೂರಿಗೆ ಬಂದ 4,000 ಕೆ.ಜಿ ತೂಕದ ಖಡ್ಗ

    ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ – ದೆಹಲಿಯಿಂದ ಬೆಂಗ್ಳೂರಿಗೆ ಬಂದ 4,000 ಕೆ.ಜಿ ತೂಕದ ಖಡ್ಗ

    ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4,000 ಕೆ.ಜಿ. ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರನ್ನು ತಲುಪಿದೆ.

    ವಿಶೇಷ ಟ್ರಕ್ ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಸೋಮವಾರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಪುರೋಹಿತರು, ಸಚಿವರ ನೇತೃತ್ವದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆಯನ್ನು ನೆರವೇರಿಸಿದರು. ಜೊತೆಗೆ ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಎಲ್ಲ ಕಾರ್ಮಿಕ ಸಿಬ್ಬಂದಿಗೂ ಅಭಿನಂದನೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೆಐಎನಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಅವರು ಈ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ: ಡಿಕೆಶಿ ಪ್ರಶ್ನೆ

    ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಬಂದಿಳಿಯುವವರಿಗೆ ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟವೇ ಒಂದು ದಿವ್ಯ ಅನುಭೂತಿಯನ್ನು ಮಾಡುವಂತಿರಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ ಎಂದು ಅವರು ಬಣ್ಣಿಸಿದರು.

    ಈ ಸಂದರ್ಭದಲ್ಲಿ ಅಮೆರಿಕದ ‘ಅಕ್ಕ’ ಕನ್ನಡ ಕೂಟಗಳ ಮುಖ್ಯಸ್ಥ ಡಾ.ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು. ಸೋಮವಾರದಂದು ಬೆಂಗಳೂರನ್ನು ತಲುಪಿದ ಕೆಂಪೇಗೌಡರ ಪ್ರತಿಮೆಯ ಖಡ್ಗಕ್ಕೆ (ಕತ್ತಿ) ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಸಾಂಪ್ರದಾಯಿಕವಾಗಿ ಶಕ್ತಿಪೂಜೆಯನ್ನು ನೆರವೇರಿಸಿದರು.

  • ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತುಪ್ಪದ ಬೆಡಗಿ ರಾಗಿಣಿ ಬ್ಯುಸಿ

    ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ತುಪ್ಪದ ಬೆಡಗಿ ರಾಗಿಣಿ ಬ್ಯುಸಿ

    ಸ್ಯಾಂಡಲ್‌ವುಡ್‌ಗೆ `ಕೆಂಪೇಗೌಡ’, `ವೀರಮದಕರಿ’ ಚಿತ್ರಗಳ ಮೂಲಕ ಸಂಚಲನ ಮೂಡಿಸಿದ ನಟಿ ರಾಗಿಣಿ ದ್ವಿವೇದಿ.ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬ್ಯೂಟಿ ಜೊತೆ ಪ್ರತಿಭೆಯಿರೋ ರಾಗಿಣಿಗೆ ಕನ್ನಡ ಚಿತ್ರಗಳು ಮಾತ್ರವಲ್ಲದೇ ಪರಭಾಷಾ ಸಿನಿಮಾಗಳಿಂದಲೂ ಬುಲಾವ್ ಬರುತ್ತಿದೆ.

    `ಜುಮ್ ಜುಮ್ ಮಾಯಾ’ ಎಂಬ ಹಾಡಿನ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಲೆ ಸೃಷ್ಠಿಸಿದ ತುಪ್ಪದ ಬೆಡಗಿ ರಾಗಿಣಿ ಸಾಕಷ್ಟು ಚಿತ್ರಗಳ ಮೂಲಕ ಕಮಾಲ್ ಮಾಡಿದ್ರು. ಭಿನ್ನ ಪಾತ್ರಗಳ ಮೂಲಕ ಮನರಂಜಿಸಿರೋ ರಾಗಿಣಿ ಕಡೆಯದಾಗಿ ಕಾಣಿಸಿಕೊಂಡಿದ್ದ ಚಿತ್ರ ನಟ ಶರಣ್ ಜೊತೆಗಿನ `ಅಧ್ಯಕ್ಷ ಇನ್ ಅಮೆರಿಕಾ’ ಚಿತ್ರದಲ್ಲಿ, ಇದೀಗ ಮತ್ತೆ ರಾಗಿಣಿ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ.

    ರಾಗಿಣಿ ಈ ಬಾರಿ ಪವರ್‌ಫುಲ್ ಪಾತ್ರಗಳ ಮೂಲಕ ಕಂಬ್ಯಾಕ್ ಆಗಿದ್ದಾರೆ. ವಿಶಾಲ್ ಶೇಖರ್ ನಿರ್ದೇಶನದ `ಕರ್ವ 3′ ನಲ್ಲಿ ಡಿಫರೆಂಟ್ ಪಾತ್ರಕ್ಕೆ ಜೀವ ತುಂಬ್ತಿದ್ದಾರೆ. ವೇದಿಕ್ ನಿರ್ದೇಶನದ `ಜಾನಿವಾಕರ್’  ಚಿತ್ರದಲ್ಲಿ ತನಿಖಾ ಅಧಿಕಾರಿಯ ಪಾತ್ರದಲ್ಲಿ ಕಾಣಸಿಕೊಳ್ತಿದ್ದಾರೆ. ಇನ್ನೊಂದು ಭಿನ್ನ ಕಥೆ `ಗಾಂಧಿಗಿರಿ’ ಚಿತ್ರದಲ್ಲೂ ನಟಿಸ್ತಿದ್ದಾರೆ. ಇದನ್ನು ಓದಿ:`ಕೆಜಿಎಫ್ 2′ ಟೀಮ್‌ನಿಂದ ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್

    ಬ್ರಹ್ಮ ನಿರ್ದೇಶನದ `ಸಾರಿ ಕರ್ಮ ರಿಟನ್ಸ್’ ಚಿತ್ರ ಕನ್ನಡ, ಹಿಂದಿ ಮತ್ತು ಮಲಯಾಳಂನಲ್ಲಿ ರಿಲೀಸ್ ಆಗುತ್ತಿದೆ. ಕ್ರಿಸ್ ಇಂಟರ್‌ನ್ಯಾಷನಲ್ ಬ್ಯಾನರ್ ಅಡಿ ಸಿದ್ದವಾಗ್ತಿರೋ ಈ ಚಿತ್ರದಲ್ಲಿ ರಾಗಿಣಿ ಎರಡು ಭಿನ್ನ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಕಾಲಿವುಡ್‌ನ `ಒನ್ ಟು ಒನ್’ ಚಿತ್ರಕ್ಕೆ ರಾಗಿಣಿ ಸಹಿ ಹಾಕಿದ್ದಾರೆ. ಫ್ಯಾಮಿಲಿ ಡ್ರಾಮ ಜೊತೆ ಸಸ್ಪೆನ್ಸೆ ಕಥೆಯಲ್ಲಿ ರಾಗಿಣಿ ಹೋಮ್ಲಿ ಲುಕ್‌ನಲ್ಲಿ ಮಿಂಚಲಿದ್ದಾರೆ. ಸಿನಿಮಾ, ಫೋಟೋಶೂಟ್ ಮಾಡಿಸೋದ ಜೊತೆಗೆ ಸಮಾಜ ಮುಖಿ ಕಾರ್ಯಗಳಿಂದಲೂ ಸೈ ಎನಿಸಿಕೊಂಡಿದ್ದಾರೆ.