Tag: ಕೆಇಎ ಪರೀಕ್ಷಾ ಅಕ್ರಮ

  • ಕೆಇಎ ಪ್ರಶ್ನೆಪತ್ರಿಕೆ ಲೀಕ್ ಮಾಡಲು 40 ಲಕ್ಷ ನೀಡಿದ ಆರೋಪ – ಸರ್ಕಾರಿ ಕೆಲಸಕ್ಕೆ ಸೇರಿ ತಿಂಗಳಲ್ಲೇ ಹಾಸ್ಟೆಲ್ ವಾರ್ಡನ್ ಜೈಲುಪಾಲು

    ಕೆಇಎ ಪ್ರಶ್ನೆಪತ್ರಿಕೆ ಲೀಕ್ ಮಾಡಲು 40 ಲಕ್ಷ ನೀಡಿದ ಆರೋಪ – ಸರ್ಕಾರಿ ಕೆಲಸಕ್ಕೆ ಸೇರಿ ತಿಂಗಳಲ್ಲೇ ಹಾಸ್ಟೆಲ್ ವಾರ್ಡನ್ ಜೈಲುಪಾಲು

    ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ (KEA Exam Paper Leak Case) ಬಗೆದಷ್ಟು ಬಯಲಾಗುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಹಾಗೂ ಪರೀಕ್ಷಾ ಮೇಲ್ವಿಚಾರಕರಿಗೆ ಹಣ ನೀಡಿದ ಆರೋಪದಡಿ ಹಾಸ್ಟೆಲ್ ವಾರ್ಡನ್ ಒಬ್ಬ ಕೆಲಸಕ್ಕೆ ಸೇರಿ ಒಂದೇ ತಿಂಗಳಲ್ಲಿ ಜೈಲುಪಾಲಾಗಿದ್ದಾನೆ.

    ಸಮಾಜ ಕಲ್ಯಾಣ ಇಲಾಖೆಯ ಚಿಕ್ಕಬಳ್ಳಾಪುರದ (Chikkaballapur) ವೃತ್ತಿಪರ ಹಾಸ್ಟೆಲ್ ವಾರ್ಡನ್ ಬಸವರಾಜ್ ಯಾಳವಾರ್ ಬಂಧಿತ ಆರೋಪಿಯಾಗಿದ್ದಾನೆ. ಈತ ಪ್ರಶ್ನೆ ಪತ್ರಿಕೆ ಲೀಕ್ ಮಾಡಲು ಪ್ರಿನ್ಸಿಪಾಲ್‍ಗೆ 40 ಲಕ್ಷ ರೂ. ಹಣ ನೀಡಿದ್ದ ಎಂದು ಸಿಐಡಿ (CID) ತನಿಖೆ ವೇಳೆ ತಿಳಿದು ಬಂದಿದೆ. ಈತನ ವಿರುದ್ಧ ಕಲಬುರಗಿಯ (Kalaburugi) ಅಶೋಕ್ ನಗರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಈತ ತಲೆ ಮರೆಸಿಕೊಂಡಿದ್ದ. ಇದೀಗ ಸಿಐಡಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಟಿವಿ ನಿರೂಪಕನನ್ನು ಅಪಹರಿಸಿ ಪೊಲೀಸರ ಅತಿಥಿಯಾದ ಮಹಿಳಾ ಉದ್ಯಮಿ

    ಆರೋಪಿ ಬಸವರಾಜ್ ಬಂಧನಕ್ಕೆ ಆತ ಓದಿದ ಪ್ರದೇಶಗಳಲ್ಲಿ, ಕಲಬುರಗಿ ವಿವಿ, ಸಿಂದಗಿ ಹಾಗೂ ಬೆಂಗಳೂರಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು. ಕೊನೆಗೆ ಚಿಕ್ಕಬಳ್ಳಾಪುರದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ವಾರ್ಡನ್ ಆಗಿದ್ದಾನೆ ಎಂಬ ಸುಳಿವಿನ ಮೇಲೆ ಬಂಧಿಸಲಾಗಿದೆ. ಪ್ರಕರಣದಲ್ಲಿ ಬಸವರಾಜ್ 15ನೇ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

    ಇಂಗ್ಲಿಷ್‍ನಲ್ಲಿ ಎಂ.ಎ, ಬಿ.ಇಡಿ ಪದವೀಧರನಾಗಿರುವ ಬಸವರಾಜ್ ಯಾಳವಾರ್ ಜನವರಿ 19ರಂದು ವಾರ್ಡನ್ ಆಗಿ ಕೆಲಸಕ್ಕೆ ಸೇರಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಜೋಕಾಲಿ ಆಡುವಾಗ ಹಗ್ಗಕ್ಕೆ ಕುತ್ತಿಗೆ ಸಿಲುಕಿ ಬಾಲಕ ದರ್ಮರಣ

  • KEA ಅಕ್ರಮ; ಕಿಂಗ್‌ಪಿನ್ ಆರ್.ಡಿ.ಪಾಟೀಲ್‌ಗೆ ಫ್ಲ್ಯಾಟ್‌ ಬಾಡಿಗೆಗೆ ನೀಡಿದ್ದ ಮಾಲೀಕ ಸೇರಿ ಮೂವರು ಅರೆಸ್ಟ್

    KEA ಅಕ್ರಮ; ಕಿಂಗ್‌ಪಿನ್ ಆರ್.ಡಿ.ಪಾಟೀಲ್‌ಗೆ ಫ್ಲ್ಯಾಟ್‌ ಬಾಡಿಗೆಗೆ ನೀಡಿದ್ದ ಮಾಲೀಕ ಸೇರಿ ಮೂವರು ಅರೆಸ್ಟ್

    ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ್ದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲ್‌ಗೆ (R.D.Patil) ಬಾಡಿಗೆ ನೀಡಿದ್ದ ಅಪಾರ್ಟ್ಮೆಂಟ್ ಮಾಲೀಕ, ಮ್ಯಾನೇಜರ್ ಹಾಗೂ ಪಾಟೀಲ್ ಸಹಚರನನ್ನು ಅರೆಸ್ಟ್ ಮಾಡಲಾಗಿದೆ. ನಗರದ ವರ್ಧಾ ಲೇಔಟ್‌ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟ್ಮೆಂಟ್ ಮಾಲೀಕ ಶಂಕರಗೌಡ ಪಾಟೀಲ್, ಮ್ಯಾನೇಜರ್ ದಿಲೀಪ್ ಕುಮಾರ್ ಹಾಗೂ ನೆಲೋಗಿ ಗ್ರಾಮದ ಶಿವಕುಮಾರ್ ಬಂಧಿತರು. ಇದನ್ನೂ ಓದಿ: ಇಲ್ಲೇ ಇದ್ದು ಉತ್ತರ ಪ್ರದೇಶದ ಮೊಬೈಲ್ ಲೊಕೇಶನ್ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಆರ್.ಡಿ ಪಾಟೀಲ್

    ಆರ್.ಡಿ.ಪಾಟೀಲ್ ಬಗ್ಗೆ ಮಾಧ್ಯಮಗಳಲ್ಲಿ ಇಷ್ಟೊಂದು ಚರ್ಚೆ ನಡೆಯುತ್ತಿದ್ದರೂ ಮನೆ ನೀಡಿದ ಆರೋಪ ಮತ್ತು ಪೊಲೀಸರಿಗೆ ಮಾಹಿತಿ ನೀಡದೇ ಕಿಂಗ್‌ಪಿನ್ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಮಾಲೀಕ ಮತ್ತು ಮ್ಯಾನೇಜರ್‌ನನ್ನು ಬಂಧಿಸಲಾಗಿದೆ.

    ಆರ್.ಡಿ.ಪಾಟೀಲ್‌ನಿಂದ 10 ಸಾವಿರ ರೂ. ಅಡ್ವಾನ್ಸ್ ಪಡೆದು ಅಪಾರ್ಟ್ಮೆಂಟ್ ಬಾಡಿಗೆಗೆ ನೀಡಲಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಪೊಲೀಸರ ಆಗಮನ ಮಾಹಿತಿ ತಿಳಿದು ಆರ್.ಡಿ.ಪಾಟೀಲ್ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಕೆಇಎ ಪರೀಕ್ಷೆ ಅಕ್ರಮ ಪ್ರಕರಣ – ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್

    ಸಹಚರ ಶಿವಕುಮಾರ್‌ನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಆರ್.ಡಿ.ಪಾಟೀಲ್ ಎಸ್ಕೇಪ್ ಆದ ಬಳಿಕ ಆತನ ಜೊತೆ ಶಿವಕುಮಾರ್ ಸಂಪರ್ಕದಲ್ಲಿದ್ದ. ಆರೋಪಿಯ ಕಾಲ್ ಹಿಸ್ಟರಿಯಲ್ಲಿ ಶಿವಕುಮಾರ್ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

  • 2023ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆರ್‌ಡಿ ಪಾಟೀಲ್ – ಪ್ರಚಾರಕ್ಕೆ ಬಂದಿದ್ರು ಅಖಿಲೇಶ್ ಯಾದವ್

    2023ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆರ್‌ಡಿ ಪಾಟೀಲ್ – ಪ್ರಚಾರಕ್ಕೆ ಬಂದಿದ್ರು ಅಖಿಲೇಶ್ ಯಾದವ್

    ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮದ (KEA Exam Scam) ಕಿಂಗ್‌ಪಿನ್ ಆರ್‌ಡಿ ಪಾಟೀಲ್ (RD Patil) ಅಫಜಲಪುರ ಕ್ಷೇತ್ರದ ಶಾಸಕನಾಗಲು ಮುಂದಾಗಿದ್ದ ಎಂಬುದು ಬೆಳಕಿಗೆ ಬಂದಿದೆ.

    2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆರ್‌ಡಿ ಪಾಟೀಲ್ ಸ್ಪರ್ಧಿಸಿದ್ದ. ಇಂಡಿಯಾ ಒಕ್ಕೂಟದ ಸಮಾಜವಾದಿ ಪಕ್ಷದಿಂದ ಆರ್‌ಡಿ ಪಾಟೀಲ್ ಸ್ಪರ್ಧಿಸಿದ್ದು, ಈತನ ಪರ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ (Akhilesh Yadav) ಆಗಮಿಸಿದ್ದರು.

    ಈಗಾಗಲೇ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಆರ್‌ಡಿ ಪಾಟೀಲ್ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನಿಗಾಗಿ ಭಾರೀ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದಾಗಿ ಆರ್‌ಡಿ ಪಾಟೀಲ್ ಯಾದಗಿರಿಯ ಜಿಲ್ಲಾ ಕೋರ್ಟ್‌ಗೆ ಜಾಮೀನಿಗಾಗಿ ವಕೀಲರ ಮೂಲಕ ಮೊರೆ ಹೋಗಿದ್ದಾನೆ. ಯಾದಗಿರಿ ನಗರ ಠಾಣೆಯಲ್ಲಿ ದಾಖಲಾಗಿರುವ 5 ಪ್ರಕರಣಗಳ ಪೈಕಿ 4 ಪ್ರಕರಣಗಳಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಇದನ್ನೂ ಓದಿ: ಟಿಕೆಟ್ ಕೊಡಲ್ಲ ಅಂತ ಹೈಕಮಾಂಡ್ ಹೇಳಿತ್ತು: ಸದಾನಂದಗೌಡ ನಿವೃತ್ತಿ ಘೋಷಣೆಗೆ ಬಿಎಸ್‌ವೈ ಪ್ರತಿಕ್ರಿಯೆ

    ಈ ನಡುವೆ ಆರ್‌ಡಿ ಪಾಟೀಲ್ ಸೆರೆಗೆ ಇಬ್ಬರು ಎಸಿಪಿಗಳು ಫೀಲ್ಡ್‌ಗೆ ಇಳಿದಿದ್ದಾರೆ. ಎಸಿಪಿ ಭೂತೆಗೌಡ ಹಾಗೂ ಎಸಿಪಿ ರಾಜಣ್ಣ ನೇತೃತ್ವದ ತಂಡ ಮಹಾರಾಷ್ಟ್ರಕ್ಕೆ ತೆರಳಿದೆ. ಹಿರಿಯ ಅಧಿಕಾರಿಗಳಿಗೆ ಬಂದ ಮಾಹಿತಿ ಮೇಲೆ ಆರ್‌ಡಿ ಪಾಟೀಲ್ ಬಂಧನಕ್ಕಾಗಿ ಎಸಿಪಿಗಳು ಮಹಾರಾಷ್ಟ್ರಕ್ಕೆ ತೆರಳಿದ್ದು, ಆಪರೇಷನ್ ಮಿಡ್ ನೈಟ್ ಕಾರ್ಯಾಚರಣೆ ನಡೆಸಲು ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ: ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ – ಅಧಿಕಾರಿ ಅರೆಸ್ಟ್

  • ಕೆಇಎ ಪರೀಕ್ಷೆ ಅಕ್ರಮ ಪ್ರಕರಣ – ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್

    ಕೆಇಎ ಪರೀಕ್ಷೆ ಅಕ್ರಮ ಪ್ರಕರಣ – ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್

    ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ (KEA Exam Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ಪಿನ್ ಆರ್‌ಡಿ ಪಾಟೀಲ್ (RD Patil) ಹಾಗೂ ಪೊಲೀಸರ ಕಳ್ಳಾಟ ಬಯಲಾಗಿದೆ. ಆರ್‌ಡಿ ಪಾಟೀಲ್‌ನನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್ ಆಗುವ ದೃಶ್ಯ ಪಬ್ಲಿಕ್ ಟಿವಿಗೆ ಎಕ್ಸ್‌ಕ್ಲೂಸಿವ್ ಆಗಿ ದೊರೆತಿದೆ.

    ಸಚಿವ ಪ್ರಿಯಾಂಕ್ ಖರ್ಗೆ ತವರು ಕಲಬುರಗಿಯಲ್ಲೇ (Kalaburagi) ಕಿಂಗ್‌ಪಿನ್ ಆರ್‌ಡಿ ಪಾಟೀಲ್ ರಾಜಾತಿಥ್ಯದ ಜೀವನ ನಡೆಸಿದ್ದಾನೆ. ಕಲಬುರಗಿಯ ಅಪಾರ್ಟ್‌ಮೆಂಟ್‌ನಲ್ಲಿಯೇ ಕಿಂಗ್‌ಪಿನ್ ವಾಸವಿದ್ದರೂ ಪೊಲೀಸರು ಬಂಧಿಸಲು ಹಿಂದೇಟು ಹಾಕಿದ್ದಾರೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ.

    ಆರ್‌ಡಿ ಪಾಟೀಲ್ ಬಗ್ಗೆ ಒಬ್ಬರು ಖಚಿತ ಮಾಹಿತಿ ನೀಡಿದರೂ ಖಾಕಿ ಪಡೆ ಬಂಧಿಸಿಲ್ಲ. ಬೆಳಗ್ಗೆ 10:30ಕ್ಕೆ ಕಲಬುರಗಿಯ ಓರ್ವ ಐಪಿಎಸ್ ಅಧಿಕಾರಿಗೆ ಆತನ ಬಗ್ಗೆ ಮಾಹಿತಿ ನೀಡಲಾಗಿದೆ. ಖಚಿತ ಮಾಹಿತಿ ಸಿಕ್ಕರು ಆತ ನೆಲೆಸಿದ ಅಪಾರ್ಟ್ಮೆಂಟ್‌ಗೆ ತೆರಳಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ; ರಸ್ತೆಗಳು ಜಲಾವೃತ – ಧರೆಗುರುಳಿದ ಮರಗಳು

    ಬೆಳಗ್ಗೆ 10:30ಕ್ಕೆ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಿದರೂ ಮಧ್ಯಾಹ್ನ 1:30ರ ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಇನ್ನು ಪೊಲೀಸರ ಬರುವಿಕೆಯ ಮಾಹಿತಿ ಪಡೆದ ಪಾಟೀಲ್, ಪೊಲೀಸರು ಬರುವ ಮುನ್ನವೇ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಡಿ.ಬಿ.ಚಂದ್ರೇಗೌಡ ನಿಧನ