Tag: ಕೆಎಎಸ್ ಅಧಿಕಾರಿ

  • ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಉತ್ತರಾಧಿಕಾರಿಯಾಗಿ ಸನ್ಯಾಸತ್ವ ಸ್ವೀಕರಿಸಿದ ಕೆಎಎಸ್ ಅಧಿಕಾರಿ

    ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಉತ್ತರಾಧಿಕಾರಿಯಾಗಿ ಸನ್ಯಾಸತ್ವ ಸ್ವೀಕರಿಸಿದ ಕೆಎಎಸ್ ಅಧಿಕಾರಿ

    ಬೆಂಗಳೂರು: ಕೆಂಗೇರಿಯ (Kengeri) ವಿಶ್ವ ಒಕ್ಕಲಿಗ ಮಠ ಮಹಾಸಂಸ್ಥಾನದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್ ಎಲ್ ನಾಗರಾಜು (HL Nagaraju)  ಸನ್ಯಾಸತ್ವ ಸ್ವೀಕರಿಸಿದ್ದಾರೆ.

    ಶ್ರೀ ಕುಮಾರ ಚಂದ್ರಶೇಖರ್ ಸ್ವಾಮೀಜಿ ನಂತರ ಸಂಸ್ಥಾನ ಮಠಕ್ಕೆ ಪೀಠಾಧಿಪತಿಯಾಗಿ ನಾಗರಾಜು ಆಯ್ಕೆಯಾಗಿದ್ದು, ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮದಲ್ಲಿ ಸನ್ಯಾಸತ್ವ (Monasticism) ಸ್ವೀಕರಿಸಿದ್ದಾರೆ. ನೂರಾರು ಶ್ರೀಗಳ ಸಮ್ಮುಖದಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನೆರವೇರಿದೆ. ಇದನ್ನೂ ಓದಿ: Waqf: 150 ಕೋಟಿ ಆಫರ್| ವಿಜಯೇಂದ್ರ ಮೇಲಿನ ಸಿದ್ದರಾಮಯ್ಯ ಆರೋಪ ಸುಳ್ಳು: ಅನ್ವರ್ ಮಾಣಿಪ್ಪಾಡಿ

    ಈ ಕುರಿತು ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಶ್ರೀಗಳು ಮಾತನಾಡಿ, ಎರಡು ಮಠಗಳ ನಡುವೆ ಏನೋ ಒಂದು ಸಮಸ್ಯೆ ಇದೆ ಎಂದು ನಿಡುಮಾವಡಿ ಶ್ರೀಗಳು ಹೇಳಿದಾಗ ಎಲ್ಲರಿಗೂ ಅನ್ನಿಸುತ್ತೆ. ಆದರೆ ಮಠಗಳ ನಡುವೆ ಯಾವುದೇ ಸಮಸ್ಯೆ ಇಲ್ಲ. ಒಂದೇ ಗುರು, ಒಂದೇ ಸಮುದಾಯ, ಒಂದೇ ತಾಯಿ ಎಂದು ಪೂಜ್ಯರು ಹೇಳಿದ್ದಾರೆ. ಮುಂದೆಯೂ ಕೂಡ ಯಾವುದೇ ರೀತಿ ಸಮಸ್ಯೆಗಳು ಬರದಂತೆ ನಡೆಸಿಕೊಂಡು ಹೋಗಬೇಕು. ನಾಗರಾಜ್‌ರವರು ನಿಶ್ಚಲಾನಂದನಾಥರಾಗಿ ಬದಲಾಗುವ ಸಂದರ್ಭದಲ್ಲಿ ಇಷ್ಟು ಜನ ಸೇರಿರುವುದು ಖುಷಿಯ ವಿಚಾರ. ನಾವೆಲ್ಲಾ ಒಂದೇ ಗುರು ಪರಂಪರೆಯವರು. ಕಾಲದ ಸಂದರ್ಭ ಇಂದು ನಿಶ್ಚಲಾನಂದನಾಥ ಸ್ವಾಮಿಗಳು ಕಂಕಣ ತೊಟ್ಟು ಸಮಾಜದ ಅಭಿವೃದ್ಧಿಗೆ ಪಣ ತೊಟ್ಟಿದ್ದಾರೆ ಎಂದರು. ಇದನ್ನೂ ಓದಿ: Ramanagara| ಕಾಡಾನೆ ದಾಳಿಗೆ ರೈತ ಬಲಿ

    ಚಂದ್ರಶೇಖರನಾಥ ಸ್ವಾಮೀಜಿಯವರದ್ದು ನಾಲ್ಕು ದಶಕಗಳ ಪರಿಶ್ರಮ. ಒಕ್ಕಲಿಗರ ಮಹಾ ಸಂಸ್ಥಾನ ನಿನ್ನೆ ಮೊನ್ನೆ ಹುಟ್ಟಿದ್ದಲ್ಲ. 40 ವರ್ಷಗಳ ಹಿಂದೆ ಹುಟ್ಟಿದ್ದು. ಚಂದ್ರಶೇಖರ ಶ್ರೀಗಳು ಸಮಾಜದಲ್ಲಿ ಸಾಕಷ್ಟು ಬದಲಾವಣೆ ತಂದು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಇನ್ನಷ್ಟು ಎತ್ತರಕ್ಕೆ ಈ ಸಮಾಜವನ್ನು ಕೊಂಡೊಯ್ಯಲು ನಾಗರಾಜ್ ಅವರು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಹಾಲು ಜೇನಿನ ರೀತಿಯಲ್ಲಿ ಬೆರೆತು ಸಂಸ್ಥಾನಗಳನ್ನು ನಡೆಸಿಕೊಂಡು ಹೋಗೋಣ ಎಂದು ತಿಳಿಸಿದರು. ಇದನ್ನೂ ಓದಿ: ರಾಯಚೂರು | ಮತ್ತೋರ್ವ ಬಾಣಂತಿ ಸಾವು – ಮೃತರ ಸಂಖ್ಯೆ 10ಕ್ಕೆ ಏರಿಕೆ

  • Mandya | ಸರ್ಕಾರಿ ನೌಕರಿ ಬಿಟ್ಟು ಸನ್ಯಾಸತ್ವ ದೀಕ್ಷೆ ಪಡೆಯಲು ಸಜ್ಜಾದ ಕೆಎಎಸ್‌ ಅಧಿಕಾರಿ

    Mandya | ಸರ್ಕಾರಿ ನೌಕರಿ ಬಿಟ್ಟು ಸನ್ಯಾಸತ್ವ ದೀಕ್ಷೆ ಪಡೆಯಲು ಸಜ್ಜಾದ ಕೆಎಎಸ್‌ ಅಧಿಕಾರಿ

    ಮಂಡ್ಯ: ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಸರ್ಕಾರಿ ನೌಕರಿ ಬಿಟ್ಟು ಸನ್ಯಾಸತ್ವ ದೀಕ್ಷೆ ಪಡೆಯಲು ಕೆಎಎಸ್ ಅಧಿಕಾರಿಯೊಬ್ಬರು (KAS Officer) ಮುಂದಾಗಿದ್ದಾರೆ.

    ಮಂಡ್ಯ ಜಿಲ್ಲೆಯ ಎಡಿಸಿಯಾಗಿ (Mandya ADC) ಕಾರ್ಯನಿರ್ವಹಿಸುತ್ತಿರುವ ಎಚ್.ಎಲ್.ನಾಗರಾಜು ಅವರು ಇದೀಗ ನಾಗರೀಕ ಸೇವೆ ತೊರೆದು ಸನ್ಯಾಸತ್ವ ಸ್ವೀಕಾರಕ್ಕೆ ನಿರ್ಧಾರ ಮಾಡಿದ್ದಾರೆ. ಸ್ವಯಂ ನಿವೃತ್ತಿ ಪಡೆದು ದೀಕ್ಷೆ ಸ್ವೀಕರಿಸಲಿರುವ ಮಂಡ್ಯ ಅಪರ ಜಿಲ್ಲಾಧಿಕಾರಿ ನಾಗರಾಜು ಅವರ ನಿರ್ಧಾರ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಬಡವರ ಖಾತೆಗೆ 5 ಸಾವಿರ – ವದಂತಿ ನಂಬಿ ಪೋಸ್ಟ್ ಆಫೀಸ್ ಮುಂದೆ ಕ್ಯೂ ನಿಂತ ಜನ

    ಕೆಲವೇ ದಿನಗಳಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಲಿರುವ ನಾಗರಾಜು ಅವರು ಬಳಿಕ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಿ ಶ್ರೀ ಚಂದ್ರಶೇಖರ ಸ್ವಾಮೀಜಿ ಶಿಷ್ಯರಾಗಿ ಮುಂದುವರೆಯಲಿದ್ದಾರೆ ಎಂದು ನಾಗರಾಜು ಅವರ ಆಪ್ತ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇದನ್ನೂ ಓದಿ: Bangladesh | ಭಾರತಕ್ಕೆ ತೆರಳದಂತೆ 50ಕ್ಕೂ ಹೆಚ್ಚು ಇಸ್ಕಾನ್‌ ಸದಸ್ಯರಿಗೆ ಗಡಿಯಲ್ಲಿ ತಡೆ

    ಈ ಹಿಂದೆಯೂ ಸಹ ನಾಗರಾಜು ಅವರು ಸನ್ಯಾಸತ್ವ ಸ್ವೀಕರಿಸಿದ್ದರು. 2011ರಲ್ಲಿ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಹಶಿಲ್ದಾರ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜು ಅವರು ತಹಶಿಲ್ದಾರ್ ಹುದ್ದೆ ತೊರೆದು ಆದಿಚುಂಚನಗಿರಿ ಮಠದಲ್ಲಿ ಶ್ರೀಬಾಲಗಂಗಾಧರನಾಥ ಶ್ರೀಗಳಿಂದ ಸ್ವಾಮೀಜಿಯಾಗಿ ದೀಕ್ಷೆ ಪಡೆದಿದ್ದರು.

    ಆಗ ನಿರ್ಮಲಾನಂದನಾಥ ಸ್ವಾಮೀಜಿ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರು. ಆ ವೇಳೆ ನಾಗರಾಜು ಅವರು ಮತ್ತೆ ತಹಶಿಲ್ದಾರ್ ಹುದ್ದೆಗೆ ಬರಲೇಬೇಕೆಂದು ಸಾರ್ವಜನಿಕರು ಪ್ರತಿಭಟನೆ ಮಾಡಿದ್ದರು. ಬಳಿಕ ಹಿತೈಷಿಗಳು ಹಾಗೂ ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಸನ್ಯಾಸತ್ವ ತ್ಯಜಿಸಿ ಪುನಃ ತಹಶಿಲ್ದಾರ್ ಹುದ್ದೆಗೆ ನಾಗರಾಜು ಅವರು ಮರಳಿದ್ದರು. ಇದನ್ನೂ ಓದಿ: ಗೋಧ್ರಾ ದುರಂತ ಆಧರಿತ ಸಿನಿಮಾ ‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಮೋದಿ

    ಇದೀಗ ಮಂಡ್ಯ ಎಡಿಸಿಯಾಗಿರುವ ನಾಗರಾಜು ಅವರು ತಮ್ಮ ಹುದ್ದೆ ತೊರೆದು ಮತ್ತೆ ಕಾವಿ ಧರಿಸಲು ತೀರ್ಮಾನಿಸಿದ್ದಾರೆ.

  • ವಕೀಲೆ ಚೈತ್ರಾ ಗೌಡ ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ – ಪೊಲೀಸ್‌ ವರದಿಯಲ್ಲೇನಿದೆ?

    ವಕೀಲೆ ಚೈತ್ರಾ ಗೌಡ ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ – ಪೊಲೀಸ್‌ ವರದಿಯಲ್ಲೇನಿದೆ?

    ಬೆಂಗಳೂರು: ಇತ್ತೀಚೆಗಷ್ಟೇ ಅನುಮಾನಾಸ್ಪದ ಸಾವಿಗೀಡಾಗಿದ್ದ ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್ ವಕೀಲರಾದ (High Court Lawyer) ಚೈತ್ರಾ ಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಪುಷ್ಠಿಕೊಡುವಂತೆ ಡೆತ್ ನೋಟ್ ಸಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು (Sanjay Nagar Police ) ಮೂಲಗಳು ತಿಳಿಸಿವೆ.

    ಇದೇ ತಿಂಗಳ ಮೇ 11ರಂದು ವಕೀಲೆ ಚೈತ್ರಾ ಗೌಡ ಸಂಜಯನಗರದ (SanjayNagar) ಅಣ್ಣಯ್ಯಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆದ್ರೆ ಚೈತ್ರಾ ಕುಟುಂಬಸ್ಥರು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಕೆಎಎಸ್ ಅಧಿಕಾರಿ (KAS, Officer) ಶಿವಕುಮಾರ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದರು.

    ವಿಚಾರಣೆ ವೇಳೆ ಶಿವಕುಮಾರ್, ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಹಣಕಾಸಿನ ತೊಂದರೆಯೂ ಇರಲಿಲ್ಲ. ಆದ್ರೆ ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರು ಅಂತ ಹೇಳಿದ್ದರು. ಇದನ್ನೂ ಓದಿ: 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಂಬಿದ್ದೇನೆ: ಮೋದಿ

    ಈ ನಡುವೆ ಕುಟುಂಬಸ್ಥರೊಂದಿಗೆ ಚೈತ್ರಾ ಮಾತನಾಡುವಾಗ ಮೂರು ತಿಂಗಳ ಹಿಂದೆಯೇ ಸಾಯೋ ಮಾತುಗಳನ್ನಾಡಿದ್ದರು, ಆಗ ಕುಟುಂಬಸ್ಥರೇ ಧೈರ್ಯತುಂಬಿದ್ದರು. ಆನಂತರವೇ ಚೈತ್ರಾ ಹಿಂದೆಯೇ ಡೆತ್ ನೋಟ್ ಬರೆದಿಟ್ಟಿದ್ದರು ಅನ್ನೋ ಮಾಹಿತಿಯೂ ತಿಳಿದುಬಂದಿದೆ.

    ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸಂಜಯ್ ನಗರದ ಪೊಲೀಸರಿಗೆ, ಮನೆಯಲ್ಲಿ ಸಿಕ್ಕ ಡೆತ್ ನೋಟ್‌ ಚೈತ್ರಾ ಅವರೇ ಬರೆದಿದ್ದಾರೆ ಅನ್ನೋದು ಕನ್ಫರ್ಮ್‌ ಆಗಿದೆ. ಮರಣೋತ್ತರ ಪರೀಕ್ಷೆಯಲ್ಲೂ ಆಕೆ ಆತ್ಮಹತ್ಯೆ ಮಾಡಿಕೊಂಡಿರೋದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಂಜಯ್‌ನಗರ ಪೊಲೀಸರು ತನಿಖೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ಇದನ್ನೂ ಓದಿ: ಮತಗಟ್ಟೆವಾರು ದತ್ತಾಂಶ ನೀಡಿದ್ರೆ ದುರ್ಬಳಕೆ ಆಗಬಹುದು: ಚುನಾವಣಾ ಆಯೋಗ ಆತಂಕ 

  • ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ – ಕಾರಣ ನಿಗೂಢ!

    ಕೆಎಎಸ್ ಅಧಿಕಾರಿಯ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ – ಕಾರಣ ನಿಗೂಢ!

    ಬೆಂಗಳೂರು: ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್‌ ವಕೀಲರಾದ (High Court Lawyer)  ಚೈತ್ರಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ಪತಿ ಶಿವಕುಮಾರ್ ಕೆಎಎಸ್ ಅಧಿಕಾರಿಯಾಗಿದ್ದು, ಚೈತ್ರಾ ಹೈಕೋರ್ಟ್ ವಕೀಲೆಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಸಂಜಯ್ ನಗರ ಪೊಲೀಸ್ ಠಾಣಾ (Sanjay Nagar Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಜೈಲಿನಿಂದ ಹೊರ ಬರುತ್ತಿದ್ದಂತೆ ಟೆಂಪಲ್ ರನ್ – ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಕೇಜ್ರಿವಾಲ್!

    ಈ ಸಂಬಂಧ ಮೃತ ಚೈತ್ರಾ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್‌! 

  • ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು KAS ಅಧಿಕಾರಿ ಪತಿ ಆತ್ಮಹತ್ಯೆ

    ಬೆಳಗಾವಿಯಲ್ಲಿ ನೇಣು ಬಿಗಿದುಕೊಂಡು KAS ಅಧಿಕಾರಿ ಪತಿ ಆತ್ಮಹತ್ಯೆ

    ಬೆಳಗಾವಿ: ಕೆಎಎಸ್ (KAS) ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿಯೊಬ್ಬರು‌ (Husband) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಜಂ ನಗರದಲ್ಲಿ ನಡೆದಿದೆ.

    ಜಾಫರ್ ಫೀರ್ಜಾದೆ (39) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇಂದು (ಸೋಮವಾರ) ಮಧ್ಯಾಹ್ನ ಅಜಂ ನಗರದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೀಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಾಫರ್ ಫೀರ್ಜಾದೆ ಮೃತದೇಹ ಸ್ಥಳಾಂತರ ಮಾಡಲಾಗಿದೆ. ಇದನ್ನೂ ಓದಿ: ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಸಮಯ ವಿಸ್ತರಣೆ

    crime

    ಡಿಟಿಐ‌ನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ಕಾರ್ಯ ನಿಮಿತ್ತ ಬೆಂಗಳೂರಿಗೆ (Bengaluru) ತೆರಳಿದ್ದ ಪತ್ನಿ ರೇಷ್ಮಾ ತಾಳಿಕೋಟಿ ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಿಜೆಪಿ ಗೆಲ್ಲಿಸುವ ಸುಪಾರಿ ಸಿದ್ದರಾಮಯ್ಯ ಪಡೆದಿದ್ರು: ಹೆಚ್‌ಡಿಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದಸರಾ ಪೆಂಡಾಲ್ ಸೌಂಡ್ ಸಿಸ್ಟಮ್ ವಯರ್ ಕಿತ್ತು ದರ್ಪ ಮೆರೆದ KAS ಅಧಿಕಾರಿ

    ದಸರಾ ಪೆಂಡಾಲ್ ಸೌಂಡ್ ಸಿಸ್ಟಮ್ ವಯರ್ ಕಿತ್ತು ದರ್ಪ ಮೆರೆದ KAS ಅಧಿಕಾರಿ

    ಧಾರವಾಡ: ಕೆಎಎಸ್ ಅಧಿಕಾರಿಯೊಬ್ಬರು (KAS Officer) ಪೆಂಡಾಲ್‌ನಲ್ಲಿ ಸೌಂಡ್ ಸಿಸ್ಟಮ್ (Sound System) ವಯರ್ ಕಿತ್ತು ಹಾಕಿದ ಘಟನೆ ಧಾರವಾಡದಲ್ಲಿ (Dharwad) ನಡೆದಿದೆ.

    ನಗರದ ರಾಜ್ ನಗರದಲ್ಲಿ ದುರ್ಗಾ ದೇವಿ ಉತ್ಸವದ ಹಿನ್ನೆಲೆ ಪೆಂಡಾಲ್ ಹಾಕಲಾಗಿತ್ತು. ಈ ವೇಳೆ ಸೌಂಡ್ ಸಿಸ್ಟಂ ಹಚ್ಚಿದ್ದಕ್ಕೆ ಅಬಕಾರಿ ಇಲಾಖೆಯ ಪ್ರೊಬೆಷನರಿ ಡಿಸಿಯಾದ ಶಾರದಾ ಕೊಳಕರ್ ಅವರು ಅಡ್ಡಿಪಡಿಸಿದ್ದಾರೆ.

    ಶಾರದಾ ಕೊಳಕರ್ ಕೂಡಾ ರಾಜನಗರದಲ್ಲೇ ವಾಸವಾಗಿದ್ದು, ಬಡಾವಣೆಯಲ್ಲಿ ಹಾಕಲಾಗಿದ್ದ ಪೆಂಡಾಲ್‌ನಲ್ಲಿ ಸೌಂಡ್ ಸಿಸ್ಟಮ್ ಹಚ್ಚಿದ್ದ ವಯರ್ ಕಿತ್ತು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ದಸರಾಕ್ಕೆಂದು ಊರಿಗೆ ಬರುತ್ತಿದ್ದಾಗ ಬೈಕ್ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

    ವಯರ್ ಕಿತ್ತು ಹಾಕುವ ಸಮಯದಲ್ಲಿ ಅಲ್ಲೇ ಇದ್ದ ಕೆಲವರು ವೀಡಿಯೋ ಕೂಡಾ ಮಾಡಿದ್ದಾರೆ. ಕೇಬಲ್ ಕಿತ್ತು ಹಾಕಿದ ಶಾರದಾ ಮೇಲೆ ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಗಳು ಕೇಳಿ ಬರುತ್ತಿದೆ. ಇದನ್ನೂ ಓದಿ: ಚುನಾವಣೆ ವೇಳೆ ಉಚಿತ ಕೊಡುಗೆ ಆಫರ್ – ಪಕ್ಷಗಳಿಗೆ ಶಾಕ್, ಆಯೋಗದ ನಿರ್ಧಾರಕ್ಕೆ ವಿಪಕ್ಷಗಳು ಕಿಡಿ

    ಧಾರವಾಡ ಉಪನಗರ ಠಾಣೆಗೆ ಆಗಮಿಸಿದ ಸ್ಥಳೀಯರು, ಹಬ್ಬಕ್ಕೆ ಶಾರದಾ ಅವರು ಅಡ್ಡಿ ಪಡಿಸಿದ್ದಾರೆ. ಪದೇ ಪದೇ ಈ ರೀತಿ ಮಾಡಿರುವ ಅವರು, ಸರ್ಕಾರಿ ಅಧಿಕಾರಿ ಎಂದು ನಮ್ಮ ಮೇಲೆ ದರ್ಪ ತೊರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೆಎಎಸ್ ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಡಾ. ರವಿ ಎಂ. ತಿರ್ಲಾಪೂರ ಆಯ್ಕೆ

    ಕೆಎಎಸ್ ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಡಾ. ರವಿ ಎಂ. ತಿರ್ಲಾಪೂರ ಆಯ್ಕೆ

    ಬೆಂಗಳೂರು: ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಡಾ. ರವಿ ಎಂ. ತಿರ್ಲಾಪೂರ ಆಯ್ಕೆಯಾಗಿದ್ದಾರೆ.

    ಇಂದು ನಡೆದ ಕೆಎಎಸ್ ಅಧಿಕಾರಿಗಳ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಸಂಘದ ಉಪಾಧ್ಯಕ್ಷರಾಗಿ ಎಂ.ಕೆ ಜಗದೀಶ್, ಕಾರ್ಯದರ್ಶಿಯಾಗಿ ಡಾ. ಬಿ. ಆರ್ ಹರೀಶ್ ನಾಯ್ಕ್, ಜಂಟಿ ಕಾರ್ಯದರ್ಶಿಯಾಗಿ ಡಾ. ನಾಗೇಂದ್ರ ಎಫ್ ಹಿನ್ನಳ್ಳಿ, ಖಜಾಂಚಿಯಾಗಿ ಡಾ. ಸಂತೋಷ್ ಬಿರಾದಾರ ಇವರನ್ನು ಸೂಚಿಸಲಾಗಿದೆ. ಇದನ್ನೂ ಓದಿ: ಯುಪಿಯಲ್ಲಿ ಬೀದರ್ ಪ್ರವಾಸಿಗರಿಗೆ ಅಪಘಾತ – ಸಂತ್ರಸ್ತರ ನೆರವಿಗೆ ಯೋಗಿ ಜೊತೆ ಬೊಮ್ಮಾಯಿ ಮಾತುಕತೆ

    ಕಾರ್ಯಕಾರಿ ಸಮಿತಿ ಸದ್ಯರಾಗಿ ಎನ್ ಮಹೇಶ್ ಬಾಬು, ಬಿ. ಎನ್ ವರಪ್ರಸಾದ್ ರೆಡ್ಡಿ, ಹೆಚ್. ಆರ್ ಶಿವಕುಮಾರ್, ಎಸ್.ಎಂ ಆಶಾ ಪರ್ವಿನ್, ಶ್ರೀಪಾದ್ ಎಸ್.ಬಿ, ಎಲಿಷ ಆಂಡ್ರೂಸ್, ಎಂ.ಎಸ್ ಎನ್ ಬಾಬು, ಸಿ.ಎನ್ ಮಂಜುನಾಥ್, ಬಸವರಾಜ್ ಆರ್ ಸೋಮಣ್ಣನವರ್, ಶೈಲಜಾ ಪ್ರಿಯದರ್ಶಿನಿ, ಬಿ.ಸಿ ಶಿವಾನಂದ ಮೂರ್ತಿ, ಸಿ.ಎಲ್ ಶಿವಕುಮಾರ್, ವಿ. ಸೋಮಶೇಖರ್, ಡಾ. ಮಧು ಎನ್.ಎನ್, ನಾಗ ಪ್ರಶಾಂತ್, ಕುನಾಲ್ ಕೆ, ಸ್ವಾಮಿ ಬಿ.ಎನ್ ಹಾಗೂ ಲೋಕೇಶ್ ಕೆ.ಎನ್ ಆಯ್ಕೆಯಾಗಿದ್ದಾರೆ.

  • ಕೆಎಎಸ್ ಅಧಿಕಾರಿ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ನಗದು!

    ಕೆಎಎಸ್ ಅಧಿಕಾರಿ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ನಗದು!

    – ಖಜಾನೆ ನೋಡಿ ಅಧಿಕಾರಿಗಳು ಶಾಕ್
    – ಸರ್ಕಾರಿ ಅಧಿಕಾರಿಯ ಹೈಫೈ ಲೈಫ್

    ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಖಜಾನೆ ನೋಡಿ ಅಧಿಕಾರಿಗಳೇ ದಂಗಾಗಿದ್ದಾರೆ.

    ಕೊಡಿಗೇಹಳ್ಳಿಯ ಭವ್ಯ ಬಂಗಲೆಯಲ್ಲಿ ವಾಸವಾಗಿರುವ ಸುಧಾ ಬಳಿ ಕೆಜಿ ಗಟ್ಟಲೆ ಚಿನ್ನಾಭರಣ ಹಾಗೂ ಸುಮಾರು 10 ಲಕ್ಷ ನಗದು ಸಿಕ್ಕಿದೆ. ಚಿನ್ನದ ಡಾಬಾ, ಕಾಸಿನ ಸರ, ಉಂಗುರಗಳನ್ನು ಜಪ್ತಿ ಮಾಡಲಾಗಿದೆ. ಚಿನ್ನದ ಸರಗಳ ರಾಶಿ ಹಾಗೂ ಕಿವಿಯೋಲೆಗಳು ಪತ್ತೆಯಾಗಿವೆ.

    ಸತತ 5 ಗಂಟೆಯಿಂದ ಸುಧಾ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿ ದಾಳಿ ಮಾಡಿದಾಗ ಅಧಿಕಾರಿ ಸುಮಾರು ಅರ್ಧ ಗಂಟೆಗಳ ಕಾಲ ಡೋರ್ ಓಪನ್ ಮಾಡದೇ ಇದ್ದರು.

    ಸುಧಾ ಅವರ ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ. ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರದ ಕುರಿತಾಗಿ ದೂರು ದಾಖಲಾಗಿತ್ತು. ಸುಧಾ ಪ್ರಸ್ತುತ ಜೈವಿಕ ತಂತ್ರಜ್ಞಾನ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ಅಲ್ಲದೆ ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು.

  • ಕೋವಿಡ್-19 ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿ ಗಂಗಾಧರಯ್ಯ ಹೃದಯಾಘಾತದಿಂದ ಸಾವು

    ಕೋವಿಡ್-19 ಕರ್ತವ್ಯದಲ್ಲಿದ್ದ ಕೆಎಎಸ್ ಅಧಿಕಾರಿ ಗಂಗಾಧರಯ್ಯ ಹೃದಯಾಘಾತದಿಂದ ಸಾವು

    ಬೆಂಗಳೂರು: ಕೆಎಎಸ್ ಅಧಿಕಾರಿ ಎಚ್.ಗಂಗಾಧರಯ್ಯ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

    ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ(ಕೆಎಎಸ್) ಕೋವಿಡ್-19 ಕರ್ತವ್ಯದಲ್ಲಿದ್ದ ಎಚ್.ಗಂಗಾಧರಯ್ಯ ಅವರು ಹೃದಯಾಘಾತದಿಂದ ಮರಣ ಹೊಂದಿದ್ದು, ಸಪ್ತಗಿರಿ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿದೆ. ಕರ್ತವ್ಯದ ವೇಳೆ ಕುಸಿದು ಬಿದ್ದು ಗಂಗಾಧರಯ್ಯ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ.ಗಳ ಪರಿಹಾರ, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಸೇರಿದಂತೆ ಪೋಲೀಸ್ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

    ದಕ್ಷ ಅಧಿಕಾರಿಯಾಗಿದ್ದ ಗಂಗಾಧರಯ್ಯ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

  • ಭೀಮಾನಾಯ್ಕ್ ಕಾರ್ ಚಾಲಕ ರಮೇಶ್ ಆತ್ಮಹತ್ಯೆ ಕೇಸ್‍ಗೆ ಟ್ವಿಸ್ಟ್

    ಭೀಮಾನಾಯ್ಕ್ ಕಾರ್ ಚಾಲಕ ರಮೇಶ್ ಆತ್ಮಹತ್ಯೆ ಕೇಸ್‍ಗೆ ಟ್ವಿಸ್ಟ್

    – ಚೀಟಿ ಬರೆದಿರೋ ನನ್ಮಗ ಉಳಿದಿಲ್ಲ, ನಾನು ನಾಗರಹಾವು ಎಂದ ಭೀಮಾನಾಯ್ಕ್

    ಬಳ್ಳಾರಿ: ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಅವರ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಮಂಡ್ಯ ಮೂಲದ ಕಾರ್‍ಡ್ರೈವರ್ ರಮೇಶ್ ಆತ್ಮಹತ್ಯೆ ಪ್ರಕರಣಕ್ಕೆ ದೊಡ್ಡ ಟಿಸ್ಟ್ ದೊರೆತಿದೆ.

    ಬೆಂಗಳೂರು ವಿಶೇಷ ಭೂಸ್ವಾಧಿನಾಧಿಕಾರಿ ಭೀಮಾನಾಯ್ಕ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡುವ ಮುನ್ನವೇ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಬಚ್ಚಿಟ್ಟಿದ್ದು ಇದೀಗ ಬೆಳಕಿಗೆ ಬಂದಿದೆ. ಅಷ್ಟೆ ಅಲ್ಲ ಸಂಬಂಧಿಕರ ಮನೆಯಲ್ಲಿ ಭೀಮಾನಾಯ್ಕ್ ಬಚ್ಚಿಟ್ಟಿದ್ದ ಬಂಗಾರದ ಒಡವೆಗಳು ಹಾಗೂ ವಜ್ರದ ಉಂಗುರುಗಳು ಕಳ್ಳತನವಾಗಿರುವ ಬಗ್ಗೆ ದೂರು ಸಹ ದಾಖಲಾಗಿದೆ. ಜೊತೆಗೆ ದೂರಿನ ಬಳಿಕ ಕಳ್ಳತನದ ಆರೋಪ ಹೊತ್ತಿರುವವರಿಗೆ ಭೀಮಾನಾಯ್ಕ್ ಆಭರಣಗಳನ್ನು ಕೊಡುವಂತೆ ಧಮ್ಕಿ ಹಾಕಿದ್ದಾರೆ. ತನ್ನ ಬಗ್ಗೆ ಚೀಟಿ ಬರೆದವರನ್ನೇ ಬಿಟ್ಟಿಲ್ಲ ನಿಮ್ಮನ್ನ ಬಿಡುತ್ತೇನಾ ಎಂದಿದ್ದು, ಕಾರು ಚಾಲಕ ರಮೇಶ್ ಸಾವು ಆತ್ಮಹತ್ಯೆ ಅಲ್ಲ, ಹತ್ಯೆ ಎಂಬ ಅನುಮಾನ ಮೂಡಿಸಿದೆ.

    ಪಬ್ಲಿಕ್ ಟಿವಿಗೆ ಸಿಕ್ಕಿರುವ ಆಡಿಯೋದಿಂದ ಈ ಅನುಮಾನ ಮೂಡುವಂತಾಗಿದೆ. ಅಲ್ಲದೆ ಡಿಸೆಂಬರ್‍ನಲ್ಲಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬರೆದಿಟ್ಟ ಡೆತನೋಟ್‍ ನಲ್ಲಿ ಉಲ್ಲೇಖಿಸಿದ್ದ ವಜ್ರದ ಒಡವೆಗಳ ಮಾಹಿತಿ ಇದೀಗ ಬಹಿರಂಗವಾಗಿದೆ. ಚಾಲಕನ ಆತ್ಮಹತ್ಯೆ ನಂತರ ಎಸಿಬಿ ಅಧಿಕಾರಿಗಳು ಭೀಮಾನಾಯ್ಕ್ ಮನೆ ಮೇಲೆ ದಾಳಿ ಮಾಡುವ ಮನ್ಸೂಚನೆ ಸಿಕ್ಕಿ, ಕೋಟಿ ರೂಪಾಯಿ ಮೌಲ್ಯದ ಬಂಗಾರದ ಒಡವೆಗಳು ವಜ್ರದ ಉಂಗುರುಗಳನ್ನ ತನ್ನ ಸಂಬಂಧಕರ ಮನೆಯಲ್ಲಿ ಬಚ್ಚಿಟ್ಟಿದ್ದರು. ಆದ್ರೆ ಬಚ್ಚಿಟ್ಟ ಆಭರಣ ಕಳುವಾಗಿ ಈಗ ಆಭರಣ ಬಚ್ಚಿಟ್ಟವರಿಗೆ ಧಮ್ಕಿ ಹಾಕಿ ಭೀಮಾನಾಯ್ಕ್ ಸಿಕ್ಕಿಬಿದ್ದಿದ್ದಾರೆ.

    ಆಡಿಯೋದಲ್ಲೇನಿದೆ?: ಹೋಗ್ತಿರೋ ಹಾವನ್ನ ಬಿಟ್ಟು ಬಿಡು. ಮುಂದೆ ಅಡ್ಡ ಹಾಕಬೇಡ, ಕಚ್ಚೋ ಹಾಗೆ ಮಾಡಬೇಡ. ನಾಗರಹಾವು ಹಿಂದೆ ತಿರುಗಿದ್ರೆ ಆಮೇಲೆ ತೋರಿಸ್ತೀನಿ ಭೀಮಾ ಏನ್ ಅಂತಾ. ನೀನ್ ವಾಪಸ್ ಕೊಡದೆ ಇದ್ದರೂ ಸರ್ವನಾಶ ಆಗಿ ಹೋಗ್ತೀರಾ. ಬರೀ ನನ್ನ ಮೇಲೆ ಚೀಟಿ ಬರೆದಿರೋ ನನ್ಮಗ ಉಳಿದಿಲ್ಲ. (ಡ್ರೈವರ್ ರಮೇಶ್ ಬಗ್ಗೆ?) ಅದರ ಮೇಲೆ ತಿಳಕೋ ಭೀಮಾನಾಯ್ಕ್ ತಾಕತ್ತು ಏನು ಅಂತಾ ಎಂದೆಲ್ಲಾ ಖುದ್ದು ಭೀಮಾನಾಯ್ಕ್ ತನ್ನ ಮಾವ ಸೇವಾನಾಯ್ಕ್ ಜೊತೆ ಮರಾಠಿ ಭಾಷೆಯಲ್ಲಿ ಫೋನಲ್ಲಿ ಹೇಳಿದ್ದಾರೆ. ಧಮ್ಕಿ ಹಾಕೋ ಭರದಲ್ಲಿ ರಮೇಶ್ ಸಾವು ಆತ್ಮಹತ್ಯೆಯಲ್ಲ ಕೊಲೆ ಎಂಬ ಶಂಕೆ ಮೂಡುವಂತೆ ಭೀಮಾನಾಯ್ಕ್ ಮಾತನಾಡಿದ್ದಾರೆ.

    ಏನಿದು ಪ್ರಕರಣ?: ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಕಾರು ಚಾಲಕ ಮಂಡ್ಯ ಮೂಲದ ರಮೇಶ್ ಡಿ.4ರಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಬೆಂಗಳೂರಿನ ವಿಶೇಷ ಭೂ ಸ್ವಾಧೀನಾಧಿಕಾರಿ ಭೀಮಾ ನಾಯ್ಕ್ ಮತ್ತು ಅವರ ಕಾರು ಚಾಲಕ ಮಹಮ್ಮದ್ ಅವರಿಂದ ಜೀವಬೆದರಿಕೆ ಇದೆ ಎಂದು ಡೆತ್‍ನೋಟ್‍ನಲ್ಲಿ ಆರೋಪಿಸಿದ್ದರು. ಅಲ್ಲದೆ ಗಾಲಿ ಜನಾರ್ದನ ರೆಡ್ಡಿ ಮಗಳ ಮದುವೆಗಾಗಿ ಭೀಮಾ ನಾಯ್ಕ್ ಸುಮಾರು 100 ಕೋಟಿ ರೂ. ಹಳೆ ನೋಟುಗಳನ್ನು ಹೊಸ ನೋಟುಗಳಾಗಿ ಪರಿವರ್ತಿಸಿ ಕೊಟ್ಟಿದ್ದಾರೆ ಎಂದು ಆರೋಪ ಮಾಡಿದ್ದರು. ಡಿಸೆಂಬರ್ 6 ರಿಂದ ನಾಪತ್ತೆಯಾಗಿದ್ದ ಭೀಮಾನಾಯಕ್‍ರನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದರು.ನಂತರ ಭೀಮಾನಾಯ್ಕ್ ಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.

    https://www.youtube.com/watch?v=p4mpbMsTGbo

    ಭೀಮಾನಾಯ್ಕ್ : ಇದೇನಂತ ಒಂದೇ ಮಾತಲ್ಲಿ ಹೇಳ್ತೀನಿ… ಒಂದು ಒಂದ್ ಮಾತಲ್ಲಿ ಹೇಳಿ ಹೋಗೇನಿ.. ಏನೋ ಇದೆ ಅಂತಾ.. ಯಾರದೂ ಏನ್ ಏನೋ ಆಗಿದೆ ಅಂತಾ. ಕುಡಿಕೆಯಲ್ಲಿ ಇರೋ ಕಲ್ಲು ಕುಡಿಕೆಯಲ್ಲಿ ಇರೋ ಹಾಗೆ ಸರಿ ಮಾಡಿ ಹೊರಗೆ ಬಂದ್ರೆ ಒಳ್ಳೆಯದು. ಹೋಗ್ತಿರೋ ಹಾವಿಗೆ ಬಿಟ್ಟು ಬಿಡು, ಮುಂದೆ ಅಡ್ಡ ಹಾಕಬೇಡ, ಕಚ್ಚೋ ಹಾಗೆ ಮಾಡಬೇಡ.
    ಸೇವಾನಾಯ್ಕ್ : ನಾನು ಏನ್ ಅಡ್ಡ ಹಾಕ್ತಿಲ್ಲ.
    ಭೀಮಾನಾಯ್ಕ್ : ಅಷ್ಟೇ.. ಇಲ್ಲಿ ಕೇಳು, ನಾಗರಹಾವು ಹಿಂದೆ ತಿರುಗಿದ್ರೆ ಆಮೇಲೆ ತೋರಿಸ್ತೀನಿ… ಭೀಮಾ ಏನ್ ಅಂತಾ..
    ಸೇವಾನಾಯ್ಕ್ : ಈಗ
    ಭೀಮಾನಾಯ್ಕ್ : ಈಗ ಸಾಕು.. ಆಮೇಲೆ ಮಾತನಾಡ್ತೇನೆ..
    ಸೇವಾನಾಯ್ಕ್ : ನೀವ್ ಏನ್ ಮಾಡಿದ್ರೂ.. ನಾನ್ ಏನ್ ಮಾಡೋ ಹಾಗಿದನಪ್ಪಾ
    ಭೀಮಾನಾಯ್ಕ್ : ನಾನು ಏನ್ ಮಾಡ್ತಿಲ್ಲ.. ನಾನು ಹೇಳ್ತಿರೋದು ನಿಜಾ. ತಗೊಂಡು ಹೋಗಿರೋದು ನಿಜಾ.. ಇಟ್ಟಿರೋದು ನಿಜಾ.. ಅವೆಲ್ಲಾ ಆಗಿದೆ. ಇದರ ಮೇಲೆ ನಿನ್ನ ಇಚ್ಛೆ, ದೇವರ ಇಚ್ಛೆ,
    ಆ ಸಾಮಾನುಗಳನ್ನು ತಮಿಳುನಾಡು, ಕೇರಳದಲ್ಲಿ ಭವಾನಿ ಮುಂದೆ ಇಟ್ಟು ಪ್ರತಿಷ್ಠಾಪನೆ ಮಾಡಿರುವಂತ ಸಾಮಾನುಗಳು ಅವು.
    ಸೇವಾನಾಯ್ಕ್ : ಹ್ಞಾ..
    ಭೀಮಾನಾಯ್ಕ್ : ನೀನ್ ವಾಪಸ ಕೊಡದೆ ಇದ್ದರೂ ಸರ್ವನಾಶ ಆಗಿ ಹೋಗ್ತೀರಾ. ಬರೀ ನನ್ನ ಮೇಲೆ ಚೀಟಿ ಬರೆದಿರೋ ನನ್ಮಗ ಉಳಿದಿಲ್ಲ (ಡ್ರೈವರ್ ರಮೇಶ್ ಬಗ್ಗೆ..?) ಅದರ ಮೇಲೆ ತಿಳಕೋ ಭೀಮಾನಾಯ್ಕ್ ತಾಕತ್ತು ಏನೂ ಅಂತಾ
    ಸೇವಾನಾಯ್ಕ್: ಹ್ಞಾ..
    ಭೀಮಾನಾಯ್ಕ್ : ಆದ್ರೆ ಅದೂ ಸಿದ್ದಿ ಆಗಿರುವಂತಹ ಸಾಮಾನು.. ಸಿದ್ಧಿ ಆಗಿರೋ ಸಾಮಾನು ದೇವರ ಹೊತ್ತಿರೋ ಮನುಷ್ಯ ನೀನು.. ಅದರ ಮೇಲೆ ತಾಯಿ ನೆರಳಿದೆ.. ತಾಯಿ ಕೊರಳಲ್ಲಿ ಹಾಕಿ ಹೋಮ ಹವನ ಮಾಡಿಸಿ ನನ್ನ ಕೊರಳಲ್ಲಿ ಹಾಕಿರುವಂತಹದ್ದೂ ಆ ಸಾಮಾನು. ಆ ಸಾಮಾನ್ ಎಲ್ಲೂ ವಾಪಸ ಹೋಗಲ್ಲ. ಅದೂ ಬಹಳ ಸಿದ್ದಿ ಆಗಿರುವಂಥದ್ದು. ಆ ಸಾಮಾನು ತಗೊಂಡಿರೋರಿಗೆ.. ಇಟ್ಟಿರೋರಿಗೆ ಆ ತಾಯಿ ಬಿಡಲ್ಲ.. ನಾನು ಬಿಡ್ತೀನಿ.. ಆದ್ರೆ, ಆ ತಾಯಿ ಬಿಡಲ್ಲ..
    ಸೇವಾನಾಯ್ಕ್ : ನಾನು ಹೇಳ್ತಿದ್ದೀನಲ್ಲ.. ನಿಂದೂ ಇರೋದಿದ್ರೆ ಸಿಗೋದಾದ್ರೆ ನಿನಗೆ ಸಿಗುತ್ತೆ ಅದು..
    ಭೀಮಾನಾಯ್ಕ್ : ಅದೂ ನನ್ನ ಗ್ರಹಗತಿ ಇಟ್ಟುಕೊಂಡು ಸಿದ್ದಿ ಮಾಡಿಸಿದ ಉಂಗುರಗಳು, ನನ್ನ ಕೊರಳಲ್ಲಿ ತಾಯಿ ಮೂರ್ತಿಯಿದೆ. ಚೈನ್ ಇದೆ, ಅದನ್ನೂ ನಾನು ಸಿದ್ದಿ ಮಾಡಿಸಿದೇನಿ, ಅದನ್ನ ಮುಟಿದ್ರೆ ಅದೂ ಕರೆಂಟ್ ಶಾಕ್ ಹೊಡದಂಗೆ ಆಗುತ್ತೆ. ಅದು ಆ ತಾಯಿನಾ ನಿಲ್ಲಿಸೋ ತಾಕತ್ತ ಇದೇನಾ.