Tag: ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣ

  • ದೇವರ ದರ್ಶನಕ್ಕೆಂದು ಹೊರಟಿದ್ದ ನಿವೃತ್ತ ಪೊಲೀಸ್ ಶವವಾಗಿ ಪತ್ತೆ – ಮೃತರ ಬಳಿಯಿದ್ದ ಚಿನ್ನಾಭರಣ, ಹಣ ನಾಪತ್ತೆ

    ದೇವರ ದರ್ಶನಕ್ಕೆಂದು ಹೊರಟಿದ್ದ ನಿವೃತ್ತ ಪೊಲೀಸ್ ಶವವಾಗಿ ಪತ್ತೆ – ಮೃತರ ಬಳಿಯಿದ್ದ ಚಿನ್ನಾಭರಣ, ಹಣ ನಾಪತ್ತೆ

    ಬೆಂಗಳೂರು: ದೇವರ ದರ್ಶನಕ್ಕೆ ತೆರಳುವುದಾಗಿ ಹೊರಟ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಮೆಜೆಸ್ಟಿಕ್‌ನ (Majestic) ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

    ದೊಡ್ಡಬಳ್ಳಾಪುರದ (Doddaballapura) ಮದುರನ ಹೊಸಹಳ್ಳಿ ನಿವಾಸಿ, ನಿವೃತ್ತ ಪೊಲೀಸ್ (Retired police) ಸಿಬ್ಬಂದಿ ಮುನಿ ಆಂಜನೇಯ ಮೃತ ವ್ಯಕ್ತಿ. ಗೆಳೆಯರ ಜೊತೆ ಧರ್ಮಸ್ಥಳಕ್ಕೆ (Dharmasthala) ತೆರಳುವುದಾಗಿ ಮುನಿ ಆಂಜನೇಯ ಸೋಮವಾರ 2 ಗಂಟೆಗೆ ಮನೆಯಿಂದ ಹೊರಟಿದ್ದರು. ಬಳಿಕ ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ (KSRTC bus stand) ಗೆಳೆಯರಿಗಾಗಿ ಕಾದು ಕುಳಿತಿದ್ದಾಗ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಶವ ಪತ್ತೆಯಾಗಿದೆ. ಇದನ್ನೂ ಓದಿ: ಹೋಳಿ ಬಣ್ಣ ತಾಗಬಾರದೆಂದು ಇಡೀ ಮಸೀದಿಯನ್ನೇ ಟಾರ್ಪಲ್‌ನಿಂದ ಮುಚ್ಚಿದ್ರು

    ಮೃತರ ಬಳಿ ಇದ್ದ ಚಿನ್ನಾಭರಣ ಹಾಗೂ ಕ್ಯಾಶ್ ನಾಪತ್ತೆಯಾಗಿದ್ದು, ಸಾವಿನ ಹಿಂದೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಇವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಾಜಿ ಪ್ರಿಯಕರನಿಂದ ನಟಿ ಮೇಲೆ ಮಾರಣಾಂತಿಕ ಹಲ್ಲೆ: ಫೋಟೋ ಶೇರ್ ಮಾಡಿದ ಅನಿಕಾ

  • ಕುಕ್ಕರ್ ಬಾಂಬ್ ಆತಂಕದ ನಡುವೆ ಮಂಗ್ಳೂರಿನ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

    ಕುಕ್ಕರ್ ಬಾಂಬ್ ಆತಂಕದ ನಡುವೆ ಮಂಗ್ಳೂರಿನ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ

    ಮಂಗಳೂರು: ಕಳೆದೆರಡು ದಿನಗಳ ಹಿಂದೆ ನಗರದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಇಂದು ಬಿಜೈನಲ್ಲಿರುವ ಕೆಎಸ್‍ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ (Bus Stand) ಅನುಮಾನಾಸ್ಪದ ಬ್ಯಾಗ್‍ವೊಂದು (Bag) ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

    ಬಿಜೈನಲ್ಲಿರುವ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದ ಬಳಿ ವಾರಸುದಾರರಿಲ್ಲದ ಬ್ಯಾಗ್ ಒಂದು ಇರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿತು. ಈ ವೇಳೆ ಬ್ಯಾಗ್‍ನಲ್ಲಿ ಯಾವುದೇ ಸ್ಫೋಟಕ ವಸ್ತುಗಳ ಪತ್ತೆಯಾಗಲಿಲ್ಲ. ಬಳಿಕ ಬ್ಯಾಗ್‍ನ ವಾರಸುದಾರರು ಪತ್ತೆಯಾಗಿದ್ದು, ಬಸ್ ಪ್ರಯಾಣಿಕರೊಬ್ಬರು ನಿಲ್ದಾಣದಲ್ಲಿ ಇಟ್ಟು ಹೋಗಿದ್ದರು ಎಂದು ತಿಳಿದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಬಸ್ ನಿಲ್ದಾಣದಲ್ಲಿದ್ದವರು ನಿರಾಳರಾದರು. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ಅಲೋಕ್‌ಕುಮಾರ್

    ನ.19 ರಂದು ಸಂಜೆ ಮಂಗಳೂರಿನ ಪಂಪ್‍ವೆಲ್‍ನಿಂದ ನಾಗುರಿ ಕಡೆ ಚಲಿಸುತ್ತಿದ್ದ ಆಟೋ ಒಂದರ ಒಳಗಿಂದ ಇದ್ದಕ್ಕಿದ್ದ ಹಾಗೇ ನಿಗೂಢ ಸ್ಫೋಟವಾಗಿತ್ತು. ಆ ಬಳಿಕ ಪರಿಶೀಲನೆ ನಡೆಸಿದ ವೇಳೆ ಅದು ಕುಕ್ಕರ್ ಬಾಂಬ್ ಸ್ಫೋಟವಾಗಿರುವುದು ಪತ್ತೆಯಾಗಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತೀರ್ಥಹಳ್ಳಿಯ ಶಾರೀಕ್ ಎಂಬಾತ ಪೊಲೀಸ್ ವಶದಲ್ಲಿದ್ದಾನೆ. ಇದನ್ನೂ ಓದಿ: ಗ್ರಾಮ ದೈವಗಳೇ ನಮ್ಮ ಊರನ್ನು ಕಾಪಾಡಿವೆ- ಕುಕ್ಕರ್ ಬ್ಲಾಸ್ಟ್ ಆದ ಆಟೋ ಚಾಲಕನ ಸಹೋದರನ ಮಾತು

    ಇದೀಗ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬಳಿಕ ಉಗ್ರರ ಕರಿಛಾಯೆ ಆವರಿಸಿದೆ. ಈಗಾಗಲೇ ಜಿಲ್ಲೆಯಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]