ವಿಶ್ವದಾದ್ಯಂತ ಯಶ್ ನಟನೆಯ ಕೆಜಿಎಫ್ 2 ಸಿನಿಮಾ ರಿಲೀಸ್ ಆಗಿದೆ. ಬಹುತೇಕ ಕಡೆ ಮಧ್ಯೆರಾತ್ರಿಯಿಂದಲೇ ಸಿನಿಮಾ ಪ್ರದರ್ಶನವಾಗಿದೆ. ಯಶ್ ಅಭಿಮಾನಿಗಳೇನೋ ಮಧ್ಯೆರಾತ್ರಿಯಿಂದಲೇ ಸಿನಿಮಾ ವೀಕ್ಷಿಸುತ್ತಿದ್ದಾರೆ. ಅವರ ಜತೆ ಕನ್ನಡದ ಅನೇಕ ಸೆಲೆಬ್ರಿಟಿಗಳು ಚಿತ್ರ ವೀಕ್ಷಣೆಗೆ ಬಂದಿರುವುದು ವಿಶೇಷ.
ಡಾ.ರಾಜ್ ಮೊಮ್ಮಕ್ಕಳಾದ ಯುವ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ನಿರ್ದೇಶಕರಾದ ಸುನಿ, ಪವನ್ ಒಡೆಯರ್, ನಟಿ ಆಶಾ ಭಟ್, ಕೆಜಿಎಫ್ ಚಿತ್ರದಲ್ಲಿ ನಟಿಸಿರುವ ಶ್ರೀನಿಧಿ ಶೆಟ್ಟಿ, ಹರೀಶ್ ರೈ, ಅರ್ಚನಾ, ಅಯ್ಯಪ್ಪ, ಅವಿನಾಶ್, ಗರುಡ ಹೀಗೆ ಸಾಕಷ್ಟು ಕಲಾವಿದರು ಊರ್ವಶಿ ಚಿತ್ರಮಂದಿರಕ್ಕೆ ಬಂದು ಮೊದಲ ಶೋ ವೀಕ್ಷಿಸಿದ್ದಾರೆ.
ಅಲ್ಲದೇ ಕೆಜಿಎಫ್ ಚಿತ್ರದಲ್ಲಿ ನಟಿಸಿದ್ದ 72 ವರ್ಷದ ಕೃಷ್ಣಾಜಿರಾವ್ ಕೂಡ ತಮ್ಮ ಕುಟುಂಬ ಸಮೇತ ಸಿನಿಮಾ ವೀಕ್ಷಿಸಲು ತ್ರಿವೇಣಿ ಚಿತ್ರಮಂದಿರಕ್ಕೆ ಆಗಮಿಸಿದ್ದರು. ಮೊದಲ ಭಾಗದಲ್ಲಿ ಇವರು ರಾಕಿ ರಕ್ಷಣೆಯಲ್ಲಿ ಗರುಡನ ಆಳುಗಳಿಂದ ಬಚಾವ್ ಆಗಿ ಬರುವ ಪಾತ್ರದಲ್ಲಿ ಅಭಿನಯಿಸಿದ್ದರು. ಅದು ಗಣಿಯಲ್ಲಿ ಕೆಲಸ ಮಾಡುವ ವೃದ್ಧನ ಪಾತ್ರವಾಗಿತ್ತು.
ಈಗಾಗಲೇ ಎಲ್ಲ ಕಡೆಗಳಲ್ಲೂ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಹತ್ತು ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ ಗಳಲ್ಲಿ ಚಿತ್ರ ಬಿಡುಗಡೆ ಆಗಿದೆ. 70 ರಾಷ್ಟ್ರಗಳಲ್ಲಿ ಏಕಕಾಲಕ್ಕೆ ಸಿನಿಮಾ ಬಿಡುಗಡೆ ಆಗಿ ದಾಖಲೆ ಬರೆದಿದೆ. ಯಶ್ ನಟನೆಯನ್ನು ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ. ಇಂಥದ್ದೊಂದು ಕನ್ನಡ ಸಿನಿಮಾ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದಕ್ಕೆ ಕನ್ನಡ ಸಿನಿಮಾ ರಂಗದ ಬಗ್ಗೆ ಮತ್ತಷ್ಟು ಅಭಿಮಾನ ಮೂಡಿದೆ.
ಹಲವು ವರ್ಷಗಳ ನಂತರ ಕನ್ನಡ ಸಿನಿಮಾ ರಂಗಕ್ಕೆ ಬಾಲಿವುಡ್ ತಾರೆ ರವೀನಾ ಟಂಡನ್ ಅವರನ್ನು ಕರೆತಂದಿದ್ದರು ನಿರ್ದೇಶಕ ಪ್ರಶಾಂತ್ ನೀಲ್. ಕೆಜಿಎಫ್ 2 ಸಿನಿಮಾದಲ್ಲಿ ರವೀನಾ ಅವರದ್ದು ಪ್ರಮುಖ ಪಾತ್ರ ಎಂದು ಹೇಳಲಾಗಿತ್ತು. ಆದರೆ, ಆ ಪಾತ್ರ ಯಾವುದು ಎಂದು ಈವರೆಗೂ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಈಗ ಸಿನಿಮಾ ರಿಲೀಸ್ ಆಗಿದೆ. ರವೀನಾ ಪಾತ್ರದ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿವೆ. ಇದನ್ನೂ ಓದಿ : ಕೆಜಿಎಫ್ 2 ಜೊತೆ ನೋಡಬಹುದು ಹೊಂಬಾಳೆ ಫಿಲ್ಮ್ಸ್ ನ ಮತ್ತೆರಡು ಸಿನಿಮಾ ಟೀಸರ್
ಕೆಜಿಎಫ್ 2 ಸಿನಿಮಾದಲ್ಲಿ ರವೀನಾ ಟಂಡನ್ ಅವರು ರೀಮಾ ಸೇನಾ ಹೆಸರಿನ ಪಾತ್ರ ಮಾಡಿದ್ದಾರೆ. ಸಿನಿಮಾದ ಟೀಸರ್ ಬಿಟ್ಟಾಗ ಆ ಪಾತ್ರದ ಬಗ್ಗೆ ಹಲವು ರೀತಿಯಲ್ಲಿ ಕುತೂಹಲ ಮೂಡಿತ್ತು. ಅವಳು ಶಾಸಕಿಯಾ? ಮಂತ್ರಿಯಾ? ಮುಖ್ಯಮಂತ್ರಿಯಾ? ಪ್ರಧಾನಿಯಾ? ಯಾವ ವ್ಯಕ್ತಿಯನ್ನು ಆ ಪಾತ್ರ ಹೋಲುತ್ತದೆ ಹೀಗೆ ಇತ್ಯಾದಿ ಪ್ರಶ್ನೆಗಳು ಎದ್ದಿದ್ದವು. ಇದೀಗ ಎಲ್ಲ ಪ್ರಶ್ನೆಗೂ ಸಿನಿಮಾ ಉತ್ತರ ನೀಡಿದೆ. ಇದನ್ನೂ ಓದಿ : ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ
ರವೀನಾ ಟಂಡನ್ ಈ ಸಿನಿಮಾದಲ್ಲಿ ಪ್ರಧಾನ ಮಂತ್ರಿಯಾಗಿ ನಟಿಸಿದ್ದಾರೆ. ಥೇಟ್ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯನ್ನು ಹೋಲುವಂತೆಯೇ ಅವರು ಪಾತ್ರವನ್ನು ಪೋಷಿಸಿದ್ದಾರೆ. ರವೀನಾ ಆಡುವ ಮಾತಿನ ಶೈಲಿ, ಅವರ ಉಡುಗೆ ತೊಡುಗೆ, ಅವರ ಹಾವ ಭಾವ ಹೀಗೆ ಎಲ್ಲವೂ ಇಂದಿರಾ ಗಾಂಧಿಯಂತೆಯೇ ಹೋಲುತ್ತದೆ. ಹಾಗಾಗಿ ಅದು ಇಂದಿರಾ ಗಾಂಧಿ ಅವರನ್ನು ಪ್ರತಿನಿಧಿಸುವ ಪಾತ್ರ ಎಂದು ಹೇಳಲಾಗುತ್ತದೆ. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2
ಹಾಗಂತ ಸಿನಿಮಾ ತಂಡವಾಗಲಿ ಅಥವಾ ಸ್ವತಃ ರವೀನಾ ಟಂಡನ್ ಆಗಲಿ ಈ ಕುರಿತು ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ, ಸಿನಿಮಾ ನೋಡಿದವರು ಮತ್ತು ಇಂದಿರಾ ಗಾಂಧಿ ಅವರ ಬಗ್ಗೆ ಅರಿತವರು ಈ ಪಾತ್ರವನ್ನು ಹೋಲಿಕೆ ಮಾಡುತ್ತಿದ್ದಾರೆ. ಸಿನಿಮಾ ರಿಲೀಸ್ ಆಗಿದೆ. ರವೀನಾ ಪಾತ್ರವನ್ನು ಅಭಿಮಾನಿಗಳು ಮೆಚ್ಚಿಕೊಂಡೂ ಆಗಿದೆ.
ಇಂದು ವಿಶ್ವದಾದ್ಯಂತ ‘ಕೆಜಿಎಫ್ ಚಾಪ್ಟರ್ 2’ ರಿಲೀಸ್ ಆಗಿದೆ. ಮಧ್ಯರಾತ್ರಿ 12 ಗಂಟೆಯಿಂದಲೇ ಅಭಿಮಾನಿಗಳು ಸಿನಿಮಾ ವೀಕ್ಷಿಸುತ್ತಿದ್ದಾರೆ. ಆದರೆ, ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವೀರೇಶ್ ಥಿಯೇಟರ್ ನಲ್ಲಿ ಅಚಾತುರ್ಯವೊಂದು ನಡೆದು ಹೋಗಿದೆ. ಅದಕ್ಕಾಗಿ ಅಭಿಮಾನಿಗಳು ಕೂಡ ಆಕ್ರೋಶಗೊಂಡಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ಜೊತೆ ನೋಡಬಹುದು ಹೊಂಬಾಳೆ ಫಿಲ್ಮ್ಸ್ ನ ಮತ್ತೆರಡು ಸಿನಿಮಾ ಟೀಸರ್
ವೀರೇಶ್ ಚಿತ್ರಮಂದಿರದಲ್ಲಿ ಬೆಳಗಿನ ಜಾವ 5 ಗಂಟೆಗೆ ಎರಡು ಸ್ಕ್ರೀನ್ ಗಳಲ್ಲಿ ಕೆಜಿಎಫ್ 2 ಸಿನಿಮಾ ಪ್ರದರ್ಶನವಾಗಬೇಕಿತ್ತು. ಈ ಚಿತ್ರಮಂದಿರದಲ್ಲಿ ಎರಡು ಸ್ಕ್ರೀನ್ ಗಳದ್ದು, ಅಭಿಮಾನಿಗಳು ಒತ್ತಾಯದ ಮೇರೆಗೆ ಮತ್ತು ಒಂದು ಸ್ಕ್ರೀನ್ ನಲ್ಲಿ ಟಿಕೆಟ್ ಸೋಲ್ಡೌಟ್ ಆಗಿದ್ದರಿಂದ ಮತ್ತೊಂದು ಸ್ಕ್ರೀನ್ ನಲ್ಲೂ ಪ್ರದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಹೀಗಾಗಿ ಎರಡೂ ಸ್ಕ್ರೀನ್ ನಲ್ಲೂ ಕೆಜಿಎಫ್ ಚಾಪ್ಟರ್ 2 ರಿಲೀಸ್ ಆಗಬೇಕಿತ್ತು. ಇದನ್ನೂ ಓದಿ : ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ
ಬೆಳಗ್ಗೆ ಅಭಿಮಾನಿಗಳು 5 ಗಂಟೆಗೆ ಎರಡೂ ಸ್ಕ್ರೀನ್ ಮುಂದೆ ಜಮಾಯಿಸಿದ್ದರು. ತಮ್ಮ ತಮ್ಮ ಸೀಟ್ ನಲ್ಲಿ ಕುಳಿತುಕೊಂಡು ಕೆಜಿಎಫ್ ಚಾಪ್ಟರ್ 2 ಕಣ್ತುಂಬಿಕೊಳ್ಳಬೇಕು ಎನ್ನುವಷ್ಟರಲ್ಲಿ ಕೆಜಿಎಫ್ 1 ಸಿನಿಮಾ ತೆರೆಯ ಮೇಲಿತ್ತು. ಬರೋಬ್ಬರಿ ಇಪ್ಪತ್ತು ನಿಮಿಷಗಳ ಕಾಲ ಕೆಜಿಎಫ್ 1 ಪ್ರದರ್ಶನವಾಗಿದೆ. ಮೊದ ಮೊದಲು ಪ್ರೇಕ್ಷಕರು ಹೀಗೆಕೆ ಆಗುತ್ತಿದೆ ಎಂದು ಗೊಂದಲಕ್ಕೊಳಗಾದರು. ಸ್ವಲ್ಪ ಹೊತ್ತು ಮೊದಲ ಭಾಗ ತೋರಿಸಿ, ಆನಂತರ ಎರಡನೇ ಭಾಗಕ್ಕೆ ಶಿಫ್ಟ್ ಆಗುತ್ತಾರೆ ಎಂದುಕೊಂಡವರು ಅದೇ ಸಿನಿಮಾ ಮುಂದುವರೆದಿದ್ದರಿಂದ ಅಭಿಮಾನಿಗಳು ಆಕ್ರೋಶಗೊಂಡರು. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2
ಈ ಸುದ್ದಿ ಥಿಯೇಟರ್ ಮುಖ್ಯಸ್ಥರಿಗೆ ತಿಳಿಯುತ್ತಿದ್ದಂತೆಯೇ ಇದೊಂದು ಅಚಾತುರ್ಯದಿಂದ ಆದ ಕೆಲಸ. ಸರಿ ಮಾಡಿಕೊಳ್ಳುತ್ತೇವೆ ಎಂದು ವಿನಂತಿಸಿಕೊಂಡು, ಚಾಪ್ಟರ್ 2 ರ ಪ್ರದರ್ಶನ ಮಾಡಿದರು. ಆನಂತರ ಅಭಿಮಾನಿಗಳು ಸಮಾಧಾನಗೊಂಡು ಚಿತ್ರ ವೀಕ್ಷಿಸಿದ್ದಾರೆ.
ಜಗತ್ತೇ ತಿರುಗಿನೋಡುವಂಥಹ ಸಿನಿಮಾ ಕೊಟ್ಟ ‘ಕೆಜಿಎಫ್’ ಮೇಲೆ ಇಡೀ ದೇಶದ ದೃಷ್ಟಿ ಇದೆ. ಕನ್ನಡ ಮೂಲದ ಚಿತ್ರವಾದ್ದರಿಂದ ಕನ್ನಡ ನೆಲದಲ್ಲೇ ಕೆಜಿಎಫ್ 2 ಟ್ರೈಲರ್ ಅನಾವರಣ ಮಾಡಲಾಗಿದೆ. ವಿಶೇಷ ಅಂದ್ರೆ ಈ ಅದ್ದೂರಿ ಕಾರ್ಯಕ್ರಮವನ್ನ ನಟ, ನಿರ್ದೇಶಕ, ನಿರೂಪಕ ಕರಣ್ ಜೋಹರ್ ನಿರೂಪಣೆ ಮಾಡಿದ್ದು. ಬೆಂಗಳೂರಿನ ಓರಾಯನ್ ಮಾಲ್ನಲ್ಲಿ ನಡೆದ ಅದ್ದೂರಿ ಟ್ರೈಲರ್ ರಿಲೀಸ್ ಸಮಾರಂಭದಲ್ಲಿ ಸಿನಿಮಾ ಮತ್ತು ಅತಿಥಿಗಳಾಗಿ ಶಿವರಾಜ್ ಕುಮಾರ್ ಹಾಗೂ ಸಚಿವ ಅಶ್ವತ್ಥ್ ನಾರಾಯಣ್ ಆಗಮಿಸಿದ್ದರು.
ಒದೊಂದೂ ಭಾಷೆಯಲ್ಲೂ ಆಯಾ ಸೂಪರ್ ಸ್ಟಾರ್ಗಳು ಡಿಜಿಟಲ್ ರಿಲೀಸ್ ಉಸ್ತುವಾರಿಯನ್ನ ವಹಿಸಿಕೊಂಡ್ರು. ಕನ್ನಡದಲ್ಲಿ ಶಿವಣ್ಣ, ತೆಲುಗಿನಲ್ಲಿ ರಾಮ್ಚರಣ್ ತೇಜ, ತಮಿಳಿನಲ್ಲಿ ಸೂರ್ಯ, ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್, ಹಿಂದಿಯಲ್ಲಿ ಫರಾನ್ ಅಖ್ತರ್ ಸೇರಿದಂತೆ ದೊಡ್ಡ ದೊಡ್ಡ ಸ್ಟಾರ್ ನಟರೇ ಟ್ರೈಲರ್ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು. ಇದನ್ನೂ ಓದಿ : ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ
ಏಪ್ರಿಲ್ 14ಕ್ಕೆ ರಿಲೀಸ್ ಆಗಲಿರುವ ಕೆಜಿಎಫ್ 2 ಚಿತ್ರದ ಟೀಸರ್ ಹಾಗೂ ಹಾಡೊಂದು ರಿಲೀಸ್ ಆಗಿದ್ದು ಬಿಟ್ಟರೆ ಪಾರ್ಟ್ 2 ಬಗೆಗಿನ ಚಿಕ್ಕ ಸುಳಿವೂ ಇದುವರೆಗೆ ಇರಲಿಲ್ಲ. ಆ ಕುತೂಹಲವನ್ನ ಹಾಗೇ ಕಾಯ್ದಿರಿಸಿಕೊಂಡಿದ್ದ ಚಿತ್ರತಂಡ ರಿಲೀಸ್ಗೆ ಕೆಲವೇ ದಿನಗಳ ಮುಂಚೆ ಈಗ ಆಫಿಷಿಯಲ್ ಟ್ರೈಲರ್ ಲಾಂಚ್ ಮಾಡುವ ಮೂಲಕ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ.
ಈ ಸಮಾರಂಭಕ್ಕೆ ರಾಕಿಂಗ್ ಸ್ಟಾರ್ ಯಶ್ ಪತ್ನಿ ರಾಧಿಕಾ ಪಂಡಿತ್ ಜೊತೆಗೆ ಆಗಮಿಸಿದರು. ಒಂದೇ ಕಾರ್ಯಕ್ರಮದಲ್ಲಿ ರಾಕಿಬಾಯ್ ಮತ್ತು ಮುನ್ನಬಾಯ್ ಒಂದಾಗಿದ್ದು, ಕಾರ್ಯಕ್ರಮಕ್ಕೆ ಹೆಚ್ಚು ಮೆರುಗು ಸೇರಿಕೊಂಡಿತು. ಈ ಅದ್ದೂರಿ ಕಾರ್ಯಕ್ರಮಕ್ಕೆ ಚಂದನವನದ ಅನೇಕ ಗಣ್ಯರು ಭಾಗಿಯಾಗಿದ್ದು, ಟಾಲಿವುಡ್ ಮತ್ತು ಬಾಲಿವುಡ್ ಸಿನಿತಾರೆಯರು ಭಾಗಿಯಾಗಿದ್ದರು. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು
ಯಶ್ ಬೇರೆ ಲೆವೆಲ್ಗೆ ಬೆಳೆದಿದ್ದಾರೆ.
ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಟ್ರೈಲರ್ನಲ್ಲಿದ್ದ ಯಶ್ ವೈಲನ್ಸ್… ವೈಲನ್ಸ್.. ಡೈಲಾಗ್ ಹೇಳಿ ಯಶ್, ಪ್ರಶಾಂತ್ ಸರ್, ಸಂಜಯ್ ದತ್ತ್ ಸರ್ ಸೂಪರ್ ಆಗಿ ಟ್ರೈಲರ್ ಬಂದಿದೆ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು. ನಂತರ ಮಾತನ್ನು ಮುಂದುವರಿಸಿದ ಅವರು, ನಿಜವಾಗಿ ಟ್ರೈಲರ್ ಸೂಪರ್ ಆಗಿತ್ತು. ಮೊದಲಿನಿಂದಲೂ ನನಗೆ ಯಶ್ ಕಂಡ್ರೆ ತುಂಬಾ ಇಷ್ಟ. ಅವರು ನೋಡಲು ತುಂಬಾ ಹ್ಯಾಂಡ್ಸಮ್ ಆಗಿ ಇದ್ದಾರೆ. ಯಶ್ ಸಿನಿಮಾ ನೋಡಲು ನಿಜಕ್ಕೂ ತುಂಬಾ ಖುಷಿಯಾಗುತ್ತೆ. ನಾವಿಬ್ಬರು ‘ತಮಸ್ಸು’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೆವು. ಅಲ್ಲಿಂದ ಕೆಜಿಎಫ್ ಮೂಲಕ ಬೇರೆ ಲೆವೆಲ್ಗೆ ಬೆಳೆದಿದ್ದಾರೆ. ಅದರಲ್ಲಿಯೂ ಯಶ್, ರಾಧಿಕಾ ಅವರನ್ನು ಮದುವೆಯಾದ ಮೇಲೆ ಅದೃಷ್ಟ ಹೆಚ್ಚಾಗಿದೆ ಎಂದು ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.
ಎಲ್ಲರಿಗೂ ಧನ್ಯವಾದ ಹೇಳಿದ ಯಶ್
ಟ್ರೈಲರ್ ಲಾಂಚ್ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೊದಲು ನಮ್ಮೂರಿಗೆ ಸ್ವಾಗತ. ನಾನು ನನ್ನ ಜೀವನದಲ್ಲಿ ಯಾವತ್ತು ನರ್ವಸ್ ಆಗಿಲ್ಲ. ಆದರೆ ಇವತ್ತು ಯಾವ ರೀತಿ ಫೀಲಿಂಗ್ ಆಗುತ್ತಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಈ ಭಾವನೆಯನ್ನು ಯಾವ ರೀತಿ ಹೇಳಿಕೊಳ್ಳಬೇಕು ಅಂತ ಗೊತ್ತಾಗುತ್ತಿಲ್ಲ. ವಿ ಮಿಸ್ ಯೂ ಅಪ್ಪು ಸರ್ ಎಂದು ತಮ್ಮ ಮಾತನ್ನು ಮುಂದುವರೆದಿಸಿದರು. ಪುನೀತ್ ರಾಜ್ಕುಮಾರ್ ಅವರ ‘ನಿನ್ನಿಂದಲೇ’ ಸಿನಿಮಾದಿಂದಲ್ಲೇ ಹೊಂಬಾಳೆ ಫಿಲ್ಮ್ ಜರ್ನಿ ಪ್ರಾರಂಭವಾಗಿತ್ತು. ಈ ದಿನ ಬರುತ್ತೆ ಎಂದು ನಾವು ತಿಳಿದುಕೊಂಡಿರಲಿಲ್ಲ. ಶಿವಣ್ಣ ನಮ್ಮ ಅಣ್ಣ. ಅವರನ್ನು ಎಲ್ಲರೂ ಅಳಿಸುವುದನ್ನು ನನ್ನ ಕೈಯಲ್ಲಿ ನೋಡೋಕೆ ಆಗುತ್ತಿಲ್ಲ. ಇಲ್ಲಿವರೆಗೂ ನಾನು ಅಪ್ಪು ಅವರ ಬಗ್ಗೆ ಮಾತನಾಡಿಲ್ಲ. ಆದರೆ ಇಂದು ನಾನು ಅವರ ಬಗ್ಗೆ ಮಾತನಾಡಲು ಇಷ್ಟ ಪಡುತ್ತೇನೆ. ಅವರು ನಮ್ಮೆಲ್ಲರ ಜೊತೆಯಲ್ಲೇ ಇರುತ್ತಾರೆ. ಅವರು ಎಲ್ಲರ ನಡುವೆ ಜೀವಂತವಾಗಿ ಇರುತ್ತಾರೆ ಎಂದು ನೆನೆದರು ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ
ನಾನು ನನ್ನ ಇಂಡಸ್ಟ್ರಿಯನ್ನು ತುಂಬಾ ಅಚ್ಚುಕೊಂಡಿದ್ದೇನೆ. ನಾನು ನಮ್ಮ ಸಿನಿಮಾ ಮತ್ತು ನಮ್ಮ ಇಂಡಸ್ಟ್ರಿಗೆ ಪ್ರಶಂಸೆ ಹೋಗಬೇಕು ಎಂದು ನಾನು ಇಷ್ಟ ಪಡುತ್ತೇನೆ. ನನಗೆ ಇವರಲ್ಲಿ ಕ್ರೆಡಿಟ್ ಬೇಡ. ಇದು ನಮ್ಮ ಕನ್ನಡ ಜನರ ಕನಸು ಆಗಿತ್ತು. ಆದರೆ ಒಂದೇ ಸಮಯದಲ್ಲಿ ಕನ್ನಡದ ಲೆಜೆಂಡ್ಗಳನ್ನು ನೋಡುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಬೇರೆ ಭಾಷೆ ತಾರೆಯರು ನಮ್ಮ ಇಂಡಸ್ಟ್ರಿ ಬಗ್ಗೆ ಹೆಚ್ಚು ಪ್ರೀತಿ ತೋರಿಸಿ ಇಲ್ಲಿಗೆ ಬಂದಿರುವುದು ತುಂಬಾ ಸಂತೋಷವಾಗುತ್ತಿದೆ. ಕೆಜಿಎಫ್ 1 ಮುಗಿನ ಮೇಲೆ ನಾವು ನಮ್ಮ ಇಂಡಸ್ಟ್ರಿಗೋಸ್ಕರ ಏನಾದರೂ ಮಾಡಿದ್ದೇವೆ ಎಂದು ಸಂತೋಷವಾಗುತ್ತಿದೆ ಎಂದರು.
ನಾನು ಈ ಬಗ್ಗೆ ಹೊಂಬಾಳೆ ವಿಜಯ್ ಕಿರಗಂದೂರು ಅವರ ಜೊತೆ ಕೆಜಿಎಫ್ ಬಗ್ಗೆ ಮಾತನಾಡುತ್ತಿರಬೇಕಾದರೆ ಎಲ್ಲರೂ ನಮ್ಮನ್ನು ಹುಚ್ಚ ಎಂದು ತಿಳಿದಿದ್ದರು. ಎಲ್ಲ ಹೀರೋಗಳಿಗೂ ಹೆಚ್ಚು ದೊಡ್ಡ ಸ್ಥಾನದಲ್ಲಿ ಇರಬೇಕು ಎಂದು ಇಷ್ಟವಿರುತ್ತೆ. ಅದೇ ರೀತಿ ನಾನು ಮಾತನಾಡುತ್ತಿದ್ದೆ ಎಂದು ಕೆಲವರು ತಿಳಿದುಕೊಂಡಿದ್ದರು. ಆದರೆ ವಿಜಿ ಅವರು ನನ್ನ ಉದ್ದೇಶವನ್ನು ಸರಿಯಾಗಿ ತಿಳಿದುಕೊಂಡು ನನಗೆ ಬೆಂಬಲವಾಗಿ ನಿಂತರು. ಯಾರು ಊಹಿಸಲು ಸಾಧ್ಯವಾಗದನ್ನು ಅವರು ಮಾಡಿದ್ದಾರೆ. ಇದೇ ರೀತಿ ಕೆಜಿಎಫ್ ಆಯ್ತು. ಇದಕ್ಕೆ ಮುಖ್ಯ ಕಾರಣ ಪ್ರಶಾಂತ್ ನೀಲ್ ಎಂದು ವಿವರಿಸಿದರು. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು
ಸಂಜಯ್ ದತ್ತ ಅಣ್ಣ
ಟ್ರೈಲರ್ ರಿಲೀಸ್ ಆದ ನಂತರ ಸಭೆಯನ್ನು ಉದ್ದೇಶಿ ಮಾತನಾಡಿದ ಅವರು, 45 ವರ್ಷಗಳ ನನ್ನ ಸಿನಿಜರ್ನಿಯಲ್ಲಿ ಕೆಜಿಎಫ್-2 ಒಂದು ಅದ್ಭುತವಾದ ಪಾಠವಾಗಿದೆ. ಸಿನಿಮಾ ಸೆಟ್ನಲ್ಲಿ ಇದ್ದ ಶಿಸ್ತು, ಸಿನಿಮಾ ಮಾಡಬೇಕು ಎಂದು ಈ ತಂಡಕ್ಕೆ ಇರುವ ಗುರಿ ನೋಡಿ ತುಂಬಾ ಖುಷಿಯಾಗುತ್ತೆ. ಈ ತಂಡದಿಂದ ನಾನು ತುಂಬಾ ಕಲಿತಿದ್ದೇನೆ. ಈ ಸಿನಿಮಾ ಕುಟುಂಬದ ರೀತಿ ಎಂದು ಸಂತೋಷವನ್ನು ವ್ಯಕ್ತಪಡಿಸಿದರು. ಇಲ್ಲಿರುವ ಪ್ರತಿಯೊಬ್ಬ ಜೂನಿಯರ್ ಆರ್ಟಿಸ್ಟ್ ಕೂಡ ತುಂಬಾ ಮುಖ್ಯವಾಗಿದ್ದರು. ಎಲ್ಲರನ್ನು ಗೌರವದಿಂದ ನೋಡಿಕೊಳ್ಳುತ್ತಿದ್ದರು. ನಾನು ಯಶ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಕೋ ಆರ್ಟಿಸ್ಟ್ ಆಗಿ ನೀವು ತುಂಬಾ ಚೆನ್ನಾಗಿ ಬೆಂಬಲ ಕೊಟ್ಟಿದ್ದಾರೆ. ನನ್ನನ್ನು ಅಣ್ಣ ಎಂದು ಪ್ರೀತಿಯಿಂದ ಕರೆದಿದ್ದಾರೆ.
ಪುನೀತ್ ನೆನೆದ ರಾಧಿಕಾ ಪಂಡಿತ್
ಟ್ರೈಲರ್ ರಿಲೀಸ್ ಆದ ನಂತರ ಸಭೆಯನ್ನು ಉದ್ದೇಶಿ ಮಾತನಾಡಿದ ಅವರು, 3 ವರ್ಷದ ನಂತರ ನಾನು ಎಲ್ಲರೊಂದಿಗೆ ಮಾತನಾಡುತ್ತಿದ್ದೇನೆ. ಈ ಸಿನಿಮಾಕ್ಕೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಕೆಜಿಎಫ್ ಚಿತ್ರವನ್ನು ನಾನು ವೀಕ್ಷಿಸಿದ್ದೇನೆ. ನನ್ನ ಪತಿಯ ಸಿನಿಮಾ ಎಂದು ನಾನು ಹೊಗಳುತ್ತಿಲ್ಲ. ಕೆಜಿಫ್ ಎನ್ನುವ ಕಾರಣಕ್ಕೆ ನನಗೆ ಸಿನಿಮಾದ ಮೇಲೆ ಪ್ರೀತಿ ಇದೆ. ಸಿನಿಮಾವನ್ನು ನಾನು ನಿಜಕ್ಕೂ ಇಷ್ಟಪಟ್ಟೆ ಎಂದು ಹೇಳಿದರು. ವಿಜಯ್, ಪ್ರಶಾಂತ್ ನಿಲಜ್, ರವಿ ಬಸೂರ್ ಯಶ್, ಶ್ರೀನಿಧಿ ಪ್ರತಿಯೊಬ್ಬರು ಈ ಸಿನಿಮಾದ ಕಂಬಂಗಳಿದ್ದಂತೆ. ಅದರಲ್ಲೂ ರವೀನಾ ಟಂಡನ್ ಅವರ ಅಭಿನಯ ನನಗೆ ತುಂಬಾ ಇಷ್ಟವಾಯಿತು. ಗುಸ್ಕೆ ಮಾರೆಂಗೆ ಡೈಲಾಗ್ ತುಂಬಾ ಇಷ್ಟವಾಯಿತು. ಸಂಜಯ್ ದತ್ ಅವರನ್ನು ಈ ರೀತಿ ನಾನು ಎಂದೂ ನೋಡಿರಲಿಲ್ಲ. ಆದರೆ ಇಡೀ ಸಿನಿಮಾದಲ್ಲಿ ನಿಮ್ಮ ಇರುವಿಕೆ ನನಗೆ ತುಂಬಾ ಇಷ್ಟವಾಯಿತು ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಶಿವರಾಜ್ ಕುಮಾರ್ ಅವರೇ ನೀವು ಇಲ್ಲಿ ಬಂದಿದ್ದಕ್ಕೆ ಸಂತೋಷವಾಗಿದೆ. ಅಪ್ಪು ಅವರು ನಮ್ಮನ್ನಗಲಿದ್ದಾರೆ. ಆದರೆ ಅವರನ್ನು ಶಿವಣ್ಣನ್ನಲ್ಲೆ ಕಾಣುತ್ತಿದ್ದೇವೆ ಎಂದು ಪುನೀತ್ ರಾಜ್ಕುಮಾರ್ ಅವರನ್ನು ನೆನೆದರು.
ಯಶ್ ನಟನೆಯ ‘ಕೆಜಿಎಫ್ ಚಾಪ್ಟರ್ 2’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಅದ್ಧೂರಿ ತಾರಾಗಣ, ಭರ್ಜರಿ ಮೇಕಿಂಗ್ ಮತ್ತು ಭಾರೀ ಬಜೆಟ್ ನಲ್ಲಿ ಮೂಡಿ ಬಂದಿರುವ ಸಿನಿಮಾದ ಸಾಕಷ್ಟು ಅಂಶಗಳನ್ನು ಈ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಯಶ್, ರವೀನಾ ಟಂಡನ್, ಸಂಜಯ್ ದತ್, ಪ್ರಕಾಶ್ ರೈ, ಮಾಳ್ವಿಕಾ ಅವಿನಾಶ್, ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ವಸಿಷ್ಠ ಸಿಂಹ, ರಾವ್ ರಮೇಶ್, ಈಶ್ವರಿ ರಾವ್, ಹರೀಶ್ ರೈ, ದಿನೇಶ್ ಮಂಗಳೂರು, ಅರ್ಚನಾ ಹೀಗೆ ಬಹುತೇಕ ಕಲಾವಿದರನ್ನು ಈ ಟ್ರೈಲರ್ ಒಳಗೊಂಡಿದೆ. ಹಾಗಾಗಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು
ಮಹಾಕ್ರೂರಿ, ಕೆಜಿಎಫ್ ಅಧಿಪತಿಯಾದ ಗರುಡನ ರುಂಡ ಚೆಂಡಾಡಿ, ಗರುಡ ಸತ್ತ ನಂತರ ನರಾಚಿ ಕೋಟೆಯ ಅಧಿಪತಿಯಾಗುತ್ತಾನೆ ರಾಕಿ. ನಂತರ ಈ ರಾಕಿ ಭಾಯ್ ಏನಾದ ಎನ್ನುವ ಕುತೂಹಲದೊಂದಿಗೆ ಚಾಪ್ಟರ್ 1 ಮುಗಿದಿತ್ತು. ಅಂದರೆ, ಗರುಡ ಸತ್ತ ನಂತರದ ಮತ್ತೊಂದು ಅಧ್ಯಾಯವನ್ನು ಚಾಪ್ಟರ್ 2 ಕಥೆ ಒಳಗೊಂಡಿದೆ. ಕಳೆದ ಬಾರಿ ಅನಂತ್ ನಾಗ್ ನಿರ್ವಹಿಸಿದ್ದ ಪಾತ್ರದಂತೆಯೇ ಕಾಣುವ ಅಥವಾ ಅದೇ ಪಾತ್ರದ ಮುಂದುವರಿಕೆ ಎನ್ನುವಂತೆ ಪ್ರಕಾಶ್ ರೈ ಕಾಣಿಸುತ್ತಾರೆ. ಪ್ರಕಾಶ್ ರೈ ಮಾಡಿರುವ ಪಾತ್ರವೇ ಹೇಳುವಂತೆ, ‘ರಕ್ತದಿಂದ ಬರೆದಿರೋ ಕಥೆಯಿದು. ಶಾಯಿಯಿಂದ ಮುಂದುವರೆಸೋಕೆ ಆಗಲ್ಲ. ಮತ್ತೆ ರಕ್ತನೇ ಕೇಳುತ್ತದೆ’ ಎಂಬ ಡೈಲಾಗ್, ಕೆಜಿಎಫ್ ಚಾಪ್ಟರ್ 2 ಕಥೆಯು ಒಂದು ರಕ್ತಸಿಕ್ತ ಅಧ್ಯಾಯ ಅನ್ನುವುದು ಪಕ್ಕಾ ಮಾಡುತ್ತದೆ. ಚಾಪ್ಟರ್ 1 ಗಿಂತಲೂ ಈ ಬಾರಿ ಘರ್ಷನೆ, ಹಿಂಸೆ ಮತ್ತು ಸಂಘರ್ಷ ಹೆಚ್ಚೇ ಇರಲಿದೆ. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು
ರಾಕಿಭಾಯ್ ಹೇಳುವ ಸಂಭಾಷಣೆ ‘ನನಗೆ ಹಿಂಸೆ ಇಷ್ಟವಿಲ್ಲ. ಆದರೆ, ನನ್ನನ್ನು ಹಿಂಸೆಯೇ ಇಷ್ಟಪಡುತ್ತಿದೆ. ಅದನ್ನು ನಿವಾರಿಸಲು ಆಗದು’ ಎಂದು ಇಂಗ್ಲಿಷ್ ನಲ್ಲಿ ಹೇಳುವುದು ಯಾವ ಮಟ್ಟಿಗೆ ವೈಲೆನ್ಸ್ ಸಿನಿಮಾದಲ್ಲಿ ಇರಲಿದೆ ಎನ್ನುವುದನ್ನು ನೀವೇ ಊಹಿಸಿಕೊಳ್ಳಿ. ಚಾಪ್ಟರ್ 1 ರಲ್ಲಿ ಗರುಡನ ಹವಾ ಇತ್ತು. ಈ ಬಾರಿ ಅಧೀರನ ಪಾತ್ರ ಪ್ರವೇಶವಾಗಿದೆ. ಈ ಪಾತ್ರವನ್ನು ಸಂಜಯ್ ದತ್ ನಿರ್ವಹಿಸಿದ್ದಾರೆ ಅಂದರೆ, ಅಧೀರ ಪಾತ್ರದ ತೂಕ ಎಷ್ಟಿರಲಿದೆ ಎಂದು ಅಂದಾಜಿಸುವುದು ಕಷ್ಟ. ವಿಚಿತ್ರ ಗೆಟಪ್ ನಲ್ಲಿ ಸಂಜಯ್ ದತ್ ಕಾಣಿಸಿಕೊಂಡಿದ್ದಾರೆ. ಹಾಗಾಗಿ ರಾಕಿಭಾಯ್ ಗೆ ಸರಿಯಾದ ಎದುರಾಳಿಯನ್ನೇ ನಿರ್ದೇಶಕ ಪ್ರಶಾಂತ್ ನೀಲ್ ತಂದಿದ್ದಾರೆ. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಜಿಎಫ್ 2 ಟ್ರೈಲರ್ – ರಿಲೀಸ್ ಆದ ಕೆಲವೇ ನಿಮಿಷದಲ್ಲಿ ಲಕ್ಷಾಂತರ ವ್ಯೂ
ಚಾಪ್ಟರ್ 1ರಲ್ಲಿ ಗ್ಯಾಂಗ್ ಸ್ಟರ್ ಆಗಿ ಕಾಣಿಸಿಕೊಂಡಿದ್ದ ರಾಕ್ ಭಾಯ್, ಈ ಬಾರಿ ಉದ್ಯಮಿಯಾಗಿಯೂ ಬದಲಾಗಿದ್ದಾರೆ. ಅಮ್ಮನಿಗೆ ಚಿನ್ನವನ್ನು ತಂದುಕೊಡುವ ಬಾಲ ರಾಕಿಭಾಯ್ ಕನಸು, ಈ ಸಿನಿಮಾದಲ್ಲಿ ಈಡೇರಿದಂತಿದೆ. ಟ್ರೈಲರ್ ನಲ್ಲಿ ಅಂಥದ್ದೊಂದು ಡೈಲಾಗ್ ಇಟ್ಟು, ನಾಳೆವರೆಗೂ ಕಾಯೋಣ ಅನಿಸುತ್ತದೆ. ‘ವೈಲೆನ್ಸ್.. ವೈಲೆನ್ಸ್.. ವೈಲೆನ್ಸ್…’ ಎನ್ನುತ್ತಾ ಎಂಟ್ರಿ ಕೊಡುವ ನಾಯಕನ ಮಾತೇ ಇಡೀ ಸಿನಿಮಾದ ಕಥಾ ಮತ್ತು ಕೇಂದ್ರ ವಸ್ತುವಾಗಿದೆ.