Tag: ಕೆಜಿಎಫ್

  • ಎರಡೂವರೆಗೆ ಟ್ರೇಲರ್, ಮೂರೂವರೆಗೆ ಮಗು ರಿಲೀಸ್: ಗುಡ್-ಬ್ಯಾಡ್ ವಿಚಾರ ಹಂಚಿಕೊಂಡ್ರು ವಿನಯ್

    ಎರಡೂವರೆಗೆ ಟ್ರೇಲರ್, ಮೂರೂವರೆಗೆ ಮಗು ರಿಲೀಸ್: ಗುಡ್-ಬ್ಯಾಡ್ ವಿಚಾರ ಹಂಚಿಕೊಂಡ್ರು ವಿನಯ್

    * ವಿಶೇಷ ವರದಿ
    ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ 5 ಭಾಷೆಗಳಲ್ಲಿ ತೆರೆಕಂಡು ಈಗಾಗಲೇ ರಾಜ್ಯ, ದೇಶ ಹಾಗೂ ಹೊರದೇಶಗಳಲ್ಲಿ ಧೂಳೆಬ್ಬಿಸುತ್ತಿದೆ. ಈ ಶುಭ ಸಂದರ್ಭದಲ್ಲಿಯೇ ಪಬ್ಲಿಕ್ ಟಿವಿ ಜೊತೆ ಖಳನಟರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು.

    ಕೆಜಿಎಫ್ “ಕೇಡೀಸ್” ಎಂಬ ಪಬ್ಲಿಕ್ ಟಿವಿ ಕಾರ್ಯಕ್ರಮದಲ್ಲಿ ಮಾತನಾಡಿದ ಖಳನಾಯಕ ವಿನಯ್, ಚಿತ್ರೀಕರಣದ ಸಂದರ್ಭದಲ್ಲಿ ನಡೆದ ದುಃಖ ಹಾಗೂ ಸಂತಸದ ವಿಚಾರವನ್ನು ಹಂಚಿಕೊಂಡರು. ಅಲ್ಲದೇ ಇದೇ ವೇಳೆ ಕೆಜಿಎಫ್ ಸಿನಿಮಾ ತಂಡ ಅನ್ನೋದಕ್ಕಿಂತ ಅದೊಂದು ನನ್ನ ಕುಟುಂಬ ಅನ್ನುವ ಮೂಲಕ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಧನ್ಯವಾದ ಅರ್ಪಿಸಿದ್ರು.

    ವಿನಯ್ ಹೇಳಿದ ಬ್ಯಾಡ್ ನ್ಯೂಸ್ ಏನು..?
    ಸಿನಿಮಾದಿಂದ ಹೊರಗಡೆ ಕುಟುಂಬ ಪಾಲನೆ ಮುಖ್ಯವಾಗುತ್ತದೆ. ಹೆರಿಗೆಯಾದ ಬಳಿಕ 20 ದಿನದಲ್ಲೇ ನಾವು ನಮ್ಮ ಮೊದಲ ಮಗುವನ್ನು ಕಳೆದುಕೊಂಡಿದ್ದೆವು. ಹೀಗಾಗಿ ನಾನು ಕುಟುಂಬ ಬಗ್ಗೆ ತುಂಬಾ ಕೇರ್ ತೆಗೆದುಕೊಳ್ಳುತ್ತಿದ್ದೆ. ಮಗು ಕಳೆದುಕೊಂಡಿರುವ ನೋವು ನಂಗೆ ಎಷ್ಟು ಇತ್ತೋ ಅಷ್ಟೇ ನೋವು ನಮ್ಮ ತಾಯಿ, ಪತ್ನಿ, ಅತ್ತೆ-ಮಾವ ಹಾಗೂ ನಮ್ಮ ಸಂಬಂಧಿಕರಿಗೂ ಇತ್ತು. ಪತ್ನಿಗೆ ಹೆರಿಗೆಯಾಗಿ ಮಗು 20 ದಿನ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿತ್ತು ಎಂದು ದುಃಖದ ಸುದ್ದಿಯೊಂದನ್ನು ಹಂಚಿಕೊಂಡರು. ಇದನ್ನೂ ಓದಿ: ಯಶ್ ಬಗ್ಗೆ ಕೆಜಿಎಫ್ ಕೇಡೀಸ್ ಖಡಕ್ ಮಾತು

    ಕೆಜಿಎಫ್ ನನಗೆ ಹೊಸ ತಂಡವಾಗಿದೆ. ರಾಮ್, ಲಕ್ಕಿ, ಅವಿನಾಶ್ ಸರ್ ಇವರೆಲ್ಲರೂ ನನಗೆ ನೈತಿಕವಾಗಿ ಬೆಂಬಲಿಸಿದ್ದಾರೆ. ಇವರೆಲ್ಲರೂ ಬೆಂಗಳೂರಿನಲ್ಲಿದ್ದರು. ನಾನು ಮಾತ್ರ ಮೈಸೂರಿನಲ್ಲಿದೆ. ಆದ್ರೆ ಎಲ್ಲರೂ ನನಗೆ ಬೆಂಬಲ ನೀಡುತ್ತಿದ್ದರು. ನಾನು ಮಾತನಾಡುವಾಗ ಸ್ವಲ್ಪ ಎಮೋಷನಲ್ ಆಗಿದ್ದೇನೆ ಅಂತ ಗೊತ್ತಾದ ತಕ್ಷಣ ಇವರೆಲ್ಲರೂ ಮರುದಿನವೇ ಆಸ್ಪತ್ರೆಗೆ ಬರುತ್ತಿದ್ದರು. ನನ್ನ ಜೊತೆ ಇದ್ದು, ನನಗೆ ಸಪೋರ್ಟ್ ಮಾಡುತ್ತಿದ್ದರು ಎಂದು ಹೇಳಿದ್ರು. ಇದನ್ನೂ ಓದಿ: ಕೆಜಿಎಫ್ ನಟರ ಗಡ್ಡದ ಹಿಂದಿದೆ ರೋಚಕ ಕಥೆ

    ನಂತರ ಪ್ರಶಾಂತ್ ಸರ್ ಯಾವಾಗ ಬೆಂಗಳೂರಿಗೆ ಬರುತ್ತಿದ್ದೀಯಾ ಅಂತ ಕೇಳಿದ್ರು. ಆವಾಗ ನಾನು ಸರ್, ನಾಳೆ, ನಾಡಿದ್ರಲ್ಲಿ ಬರುತ್ತೇನೆ ಅಂದಾಗ, ಹೇಗೆ ಬರ್ತಿಯಾ..? ಗಾಡಿ ಕಳುಹಿಸಲಾ..? ಕಾರ್ ಕಳುಹಿಸ್ತೇನೆ. ನನ್ನ ಪತ್ನಿ ಎಲ್ಲರೂ ಮೈಸೂರಿನಲ್ಲಿದ್ದರು. ಆದ್ರೆ ನೀನು ನಿನ್ನ ಮನೆಗೆ ಹೋಗಬೇಡ ಎಂದು ಹೇಳಿದ್ದರು. ಸಂಜೆ ವರ್ಕ್ ಶಾಪ್ ಗೆ ಬಂದೆ. ಅಲ್ಲಿ ಸರಿ ಸುಮಾರು 3-4 ದಿನ ಇದ್ದೆ. ಪ್ರಶಾಂತ್ ಅವರು ಅಷ್ಟೊಂದು ಬ್ಯುಸಿಯಾಗಿದ್ದರೂ ಕೂಡ 7 ಗಂಟೆಯಿಂದ ನನ್ನ ಜೊತೆ ಕುಳಿತು ಪ್ರೇರೆಪಣೆಯ ಮಾತುಗಳನ್ನಾಡುತ್ತಿದ್ದರು. ಈ ಮೂಲಕ ನನ್ನ ಯೋಚನೆಗಳನ್ನು ಬದಲಾಯಿಸುತ್ತಿದ್ದರು. ಶೂಟಿಂಗ್ ನಲ್ಲಿ ಯಾರು ಇರಲಿ ಬಿಡಲಿ, ನೀನು ಅಲ್ಲಿಗೆ ಬಂದುಬಿಡು ಎಂದು ಹೇಳುತ್ತಿದ್ದರು ಅಂದ್ರು. ಇದನ್ನೂ ಓದಿ: ರಣ ರಣ ಲುಕ್‍ನಲ್ಲಿ ಮಿಂಚಿರುವ ಕೆಜಿಎಫ್ ಕಿಲಾಡಿಗಳ ಸಿನಿಮಾ ಜರ್ನಿ ಆರಂಭದ ಕಥೆ

    ಯಶ್ ಅಣ್ಣನೂ ಕರೆ ಮಾಡುತ್ತಿದ್ದರು. ರಾಮ್ ಎಲ್ಲಾ ಸಮಯದಲ್ಲಿಯೂ ಜೊತೆಗಿದ್ದರು. ಟೈಮ್ ಸಿಕ್ಕಾಗ ಅವನನ್ನು ಕರೆದುಕೊಂಡು ಬಾ, ಶೂಟಿಂಗ್ ನಲ್ಲಿ ಅವನು ನಮ್ಮ ಜೊತೆ ಇರಲಿ ಎಂದು ರಾಮ್ ಜೊತೆ ಯಶ್ ಅಣ್ಣ ಹೇಳುತ್ತಿದ್ದರು. ಹೀಗಾಗಿ ಇದನ್ನು ಬರೀ ಸಿನಿಮಾ ಕೆಜಿಎಫ್ ಟೀಂ ಎಂದು ಹೇಳೋದಕ್ಕಿಂತ ನನ್ನ ಕುಟುಂಬ ಎಂದು ಹೇಳಿಕೊಳ್ಳಲು ಇಷ್ಟಪಡುತ್ತೇನೆ ಎಂದು ವಿನಯ್ ಹೇಳಿದ್ರು.

    ಗೆಳೆಯರು, ಸಂಬಂಧಿಕರು ಎಲ್ಲರೂ ಇದ್ದರು. ಅವರೆಲ್ಲರೂ ನನ್ನ ಬಾಲ್ಯದ ಗೆಳೆಯರು. ಅವರಿಗೆ ವಿನಯ್ ಯಾರು, ಹೇಗೆ ಅಂತ ಎಲ್ಲವೂ ಗೊತ್ತು. ಆದ್ರೆ ಕೆಜಿಎಫ್ ಟೀಂ ಗೆ ನನ್ನ ಪರಿಚಯವಾಗಿದ್ದು ಕೇವಲ 2 ಅಥವಾ ಎರಡೂವರೆ ವರ್ಷದಳಿಂದೀಚೆಗೆ ಅಷ್ಟೇ. ಲಕ್ಕಿ ಭಾಯ್, ರಾಮ್ ಬಿಟ್ರೆ ಉಳಿದವರಿಗೆಲ್ಲ ನಾನು ಹೊಸಬನಾಗಿದ್ದೆನು. ಆದ್ರೆ ಎಲ್ಲರೂ ನನ್ನನ್ನು ಚೆನ್ನಾಗಿ ನೋಡಿಕೊಂಡರು. ಹೀಗಾಗಿ ಒಂದು ಒಳ್ಳೆಯ ಕುಟುಂಬಕ್ಕೆ ನನ್ನನ್ನು ಪರಿಚಯಿಸಿದ್ದಕ್ಕೆ ಪ್ರಶಾಂತ್ ಸರ್ ಗೆ ಅಭಿನಂದನೆಗಳನ್ನು ವಿನಯ್ ಸಲ್ಲಿಸಿದ್ರು. ಇದನ್ನೂ ಓದಿ: ಕೆಜಿಎಫ್ ಅರೆಹುಚ್ಚ ಪಾತ್ರಧಾರಿ ಲಕ್ಷ್ಮೀಪತಿ ಇನ್ನಿಲ್ಲ!

    ಗುಡ್ ನ್ಯೂಸ್:
    ಮಗು ತೀರಿಕೊಂಡ ನಂತರ ಪತ್ನಿ ಎರಡನೇ ಬಾರಿ ಪ್ರೆಗ್ನೆಂಟ್ ಆದ್ರು. 9ನೇ ತಾರೀಕಿನಂದು ಒರಾಯನ್ ಮಾಲ್ ನಲ್ಲಿ ಟ್ರೇಲರ್ ರಿಲೀಸ್ ಕಾರ್ಯಕ್ರಮವಿತ್ತು. ಹೀಗಾಗಿ ನಾಳೆ ಟ್ರೇಲರ್ ರಿಲೀಸ್ ಎಂದು ರಾತ್ರಿಯೆಲ್ಲ ನಿದ್ದೇನೆ ಬರುತ್ತಿರಲಿಲ್ಲ. 9ರಂದು ಕಾರ್ಯಕ್ರಮಕ್ಕೆ ಹೊರಡಲು ರೆಡಿಯಾಗುತ್ತಿದ್ದೆ. ಈ ಸಮಯದಲ್ಲಿ ಪತ್ನಿಗೆ ಪ್ರಸವ ನೋವು ಬಂದಿದೆ. ಆದ್ರೆ ಕೆಜಿಎಫ್ ಮೂವಿ ಟ್ರೇಲರ್ ರಿಲೀಸ್ ಕಾರ್ಯಕ್ರಮವಿದೆ ಎಂದು ಆಕೆ ನನ್ನ ಬಳಿ ಹೇಳಿಕೊಂಡಿಲ್ಲ. ಹೀಗಾಗಿ ಅತ್ತೆ ಬಂದು ನನ್ನ ಬಳಿ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ ಹೇಳಿದ್ರು. ಆವಾಗ ನಾನು ಟ್ರೇಲರ್ ಆದ್ರೆ ಏನಂತೆ ಇನ್ನೊಂದು ದಿನ ನೋಡುವೆ ಎಂದು ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದೆ. ಅಚ್ಚರಿ ಹಾಗೂ ಖುಷಿಯ ವಿಚಾರವೆಂದರೆ 2.30 ಟ್ರೇಲರ್ ರಿಲೀಸ್, 3.30ಗೆ ನನಗೆ ಗಂಡು ಮಗುವಾಯಿತು. ಹೀಗಾಗಿ ಎಲ್ಲರೂ ಎರಡೂವರೆಗೆ ಟ್ರೇಲರ್, ಮೂರೂವರೆಗೆ ಮಗು ರಿಲೀಸ್ ಆಯ್ತು ಎಂದು ತಮಾಷೆ ಮಾಡಿರುವುದಾಗಿ ವಿನಯ್ ತನ್ನ ಸಂತಸ ಹಂಚಿಕೊಂಡರು.

    ಸಂಬಂಧಿಕರು, ಫ್ರೆಂಡ್ಸ್ ಇದ್ದರೂ ಕೆಜಿಎಫ್ ಕುಟುಂಬದ ಬೆಂಬಲ ಪ್ರತಿ ನಿಮಿಷಕ್ಕೂ ಇಲ್ಲದಿದ್ದರೆ ಇಷ್ಟು ಬೇಗ ನಾನು ಕಳೆದುಕೊಂಡ ಮಗುವಿನ ದುಃಖದಿಂದ ರಿಕವರಿ ಆಗುತ್ತಿರಲಿಲ್ಲ ಎಂದು ವಿನಯ್, ಕೆಜಿಎಫ್ ಟೀಂ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ರಾಮಾಚಾರಿಯ ಜೀವನವನ್ನು 5 ನಿಮಿಷದಲ್ಲಿ ಬಿಚ್ಚಿಟ್ಟ ನಟ ವಿಶಾಲ್

    ಒಟ್ಟಿನಲ್ಲಿ ನಾವು ಸಾಧಿಸಲು ಛಲ, ಹಠ ಜೊತೆಗೆ ಆ ವಾತಾವರಣನೂ ಬೇಕಾಗುತ್ತದೆ. ಆ ವಾತವಾರಣವನ್ನು ಕಟ್ಟಿಕೊಡೋರು ಬೇರಾರು ಅಲ್ಲ ಅದು ನಮ್ಮ ಹಿತೈಷಿಗಳು ಅಂತ ನಟ ವಶಿಷ್ಠ ಸಿಂಹ ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಐಟಿ ದಾಳಿ ಬಳಿಕ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲ ಪ್ರತಿಕ್ರಿಯೆ

    ಐಟಿ ದಾಳಿ ಬಳಿಕ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಮೊದಲ ಪ್ರತಿಕ್ರಿಯೆ

    ಬೆಂಗಳೂರು: ಕೆಜಿಎಫ್ ಸಿನಿಮಾ ದೊಡ್ಡ ಸಕ್ಸಸ್ ಆಗಿತ್ತು. ಚಿತ್ರ ಬಿಡುಗಡೆಯಾದ ಎರಡನೇ ವಾರವೇ ಐಟಿ ಅಧಿಕಾರಿಗಳು ನನ್ನ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದರು. ಸಿನಿಮಾ ಮತ್ತು ನನ್ನ ವೈಯಕ್ತಿಕ ಆದಾಯಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲನೆ ನಡೆಸಿ, ನಮ್ಮಿಂದ ಕೆಲ ಮಾಹಿತಿಗಳನ್ನು ಪಡೆದುಕೊಂಡರು. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇವೆ. ಕೆಜಿಎಫ್ ದೊಡ್ಡ ಹಿಟ್ ಪಡೆದಿದ್ದರಿಂದ ನನ್ನ ಮೇಲೆ ಐಟಿ ದಾಳಿಯಾಗಿರುವ ಸಾಧ್ಯತೆಗಳಿವೆ. ಬೇರೆ ನಟ ಮತ್ತು ನಿರ್ಮಾಪಕರ ಮೇಲೆ ಯಾವ ಕಾರಣಕ್ಕೆ ದಾಳಿ ಆಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದಾರೆ.

    ಐಟಿ ದಾಳಿ ಅಂತ್ಯವಾಗಿದ್ದು, ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಸೂಚಿಸಿದ್ದಾರೆ. ಸಿನಿಮಾ ಬಿಡುಗಡೆಯಾದ ಎರಡನೇ ವಾರ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಚಿತ್ರದ ಪ್ರಮೋಷನ್ ಗೆ ಹೊಡೆತ ಬಿದ್ದಿದೆ. ಮೂರನೇ ವಾರದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ತೆರಳಿ ಸಿನಿಮಾದ ಪ್ರಚಾರ ಮಾಡಬೇಕೆಂದು ಯಶ್ ಸೇರಿದಂತೆ ಎಲ್ಲರು ಪ್ಲಾನ್ ಮಾಡಿದ್ದೀವಿ. ಅಧಿಕಾರಿಗಳು ತಮಗೆ ಬಂದಿರುವ ಮಾಹಿತಿ ಸತ್ಯನೋ ಅಥವಾ ಸುಳ್ಳೋ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಬರುತ್ತಾರೆ. ಆದಾಯ ಅಧಿಕಾರಿಗಳು ತಮ್ಮ ಮೇಲಾಧಿಕಾರಿಗಳ ಆದೇಶದ ಮೇರೆಗೆ ಮನೆಗೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು.

    ನಾನು ಯಾವುದೇ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿಲ್ಲ. ಕನ್ಸ್ಟ್ರಕ್ಷನ್ ಬ್ಯುಸಿನೆಸ್ ಜೊತೆ ಸಿನಿಮಾಗಳಿಗೆ ನಿರ್ಮಾಪಕನಾಗಿ ಕೆಲಸ ಮಾಡಿಕೊಂಡಿದ್ದೇನೆ. ಅಧಿಕಾರಿಗಳು ಮನೆಗೆ ಬಂದ ಮೊದಲ ದಿನವೇ ಎಲ್ಲ ಪರಿಶೀಲನೆ ಮುಗಿದಿತ್ತು. ಏಕಕಾಲದಲ್ಲಿ ಎಲ್ಲರ ಮನೆ ಮೇಲೆ ಐಟಿ ದಾಳಿ ನಡೆದಿದ್ದರಿಂದ ಬೇರೆಯವರ ವಿಚಾರಣೆ ಮುಗಿಯುವವರೆಗೂ ಸಹಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಎರಡು ದಿನ ಹೊರಗೆ ಬರಲಿಲ್ಲ ಅಂತಾ ಹೇಳಿದರು.

    ಇದು ಆದಾಯಕ್ಕೆ ಸಂಬಂಧಿಸಿದಂತಹ ವಿಷಯ. ಯಾವುದೇ ರಾಜಕೀಯ ವಿಚಾರಕ್ಕೆ ಸಂಬಂಧಿಸಿಲ್ಲ. ಅಧಿಕಾರಿಗಳು ಕೇಳಿದ ದಾಖಲಾತಿಗಳನ್ನು ನಾವು ನೀಡಿದ್ದೇವೆ. ತನಿಖೆಗೂ ಸಹಕಾರ ನೀಡಿದ್ದೇವೆ. ಯಾವುದೇ ಗೊಂದಲ ಬೇಡ ಎಂದು ಅಭಿಮಾನಿಗಳಲ್ಲಿ ವಿಜಯ್ ಮನವಿ ಮಾಡಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಶ್ ಬಗ್ಗೆ ಕೆಜಿಎಫ್ ಕೇಡೀಸ್ ಖಡಕ್ ಮಾತು

    ಯಶ್ ಬಗ್ಗೆ ಕೆಜಿಎಫ್ ಕೇಡೀಸ್ ಖಡಕ್ ಮಾತು

    ವಿಶೇಷ ವರದಿ

    ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾ ಭಾರತದಾದ್ಯಂತ ಚಂದನವನದ ಬಗ್ಗೆ ಮಾತನಾಡುವಂತೆ ಮಾಡಿದೆ. ಅಷ್ಟರ ಮಟ್ಟಿಗೆ ಕನ್ನಡ ಸಿನಿಮಾವನ್ನು ಒಂದು ಹಂತಕ್ಕೆ ಕೆಜಿಎಫ್ ಸಿನಿಮಾ ತೆಗೆದುಕೊಂಡು ಹೋಗಿದೆ. ಕೆಜಿಎಫ್ ಸಿನಿಮಾದಲ್ಲಿ ನಟರಾಗಿ ಮಿಂಚಿದ್ದ ಯಶ್ ಬಗ್ಗೆ ಅದೇ ಸಿನಿಮಾ ಖಳನಾಯಕರಾದ ವಶಿಷ್ಠ ಸಿಂಹ, ವಿನಯ್, ರಾಮ್, ಲಕ್ಕಿ ಮತ್ತು ಅವಿನಾಶ್ ಮಾತನಾಡಿದ್ದಾರೆ.

    ಯಶ್ ಬಗ್ಗೆ ವಶಿಷ್ಠ ಅವರ ಮಾತು:
    ರಾಜಾಹುಲಿ ಸಿನಿಮಾ ರಿಲೀಸ್ ಆದ ಮೇಲೆ ನನಗೆ ಸಿನಿಮಾ ಇಂಡಸ್ಟ್ರೀ ಬಗ್ಗೆ ಏನು ಗೊತ್ತಿರಲಿಲ್ಲ. ಅಂದು ರಾಜಾಹುಲಿ ಸಿನಿಮಾ ತುಂಬಾ ಹಿಟ್, ಅದ್ಭುತವಾಗಿತ್ತು. ಬಳಿಕ ನನಗೆ ಚಿಕ್ಕಣ್ಣ ಕರೆ ಮಾಡಿ ಯಶ್ ಮಾತನಾಡುತ್ತಾರೆ ಎಂದು ಅವರ ಕೈಯಲ್ಲಿ ಫೋನ್ ಕೊಟ್ಟರು. ನಾನು ಯಶ್ ಹೇಳಿ ಎಂದೆ, ಆಗ ಅವರು ವಶಿಷ್ಠ ತಾಳ್ಮೆಯಿಂದ ಇರು. ನಿನಗೆ ಸಾಕಷ್ಟು ಫೋನ್‍ಗಳು ಮತ್ತು ಸಿನಿಮಾ ಆಫರ್ ಗಳು ಬರುತ್ತವೆ. ಆದರೆ ನೀನು ದುಡುಕಬೇಡ. ಟ್ಯಾಲೆಂಟ್ ಇರುವವರು ಮತ್ತು ಈ ರೀತಿ ಕಾಣಿಸಿಕೊಂಡು ಮುಖ ಪರಿಯಚವಾದರು ಸಿಗಲಿ ಎಂದು ಸಾಕಷ್ಟು ಜನರು ಕಾಯುತ್ತಿರುತ್ತಾರೆ. ಆದರೆ ನೀನು ಜೀವನದಲ್ಲಿ ಏನು ಮಾಡಬೇಕು ಅಂದುಕೊಂಡಿದ್ದೀಯಾ ಅದನ್ನು ನಿರ್ಧಿಷ್ಟವಾಗಿ ಪ್ಲಾನ್ ಮಾಡಿಕೊಂಡು ಕಾದು ನೋಡಿ ಅದರ ಫಲ ತಾನಾಗಿ ನಿನಗೆ ಸಿಗುತ್ತದೆ ಎಂದು ಹೇಳಿದ್ದರು.

    ಯಶ್ ಅವರು ಸಿಕ್ಕಿದ್ರೆ ಕೆರಿಯರ್, ಮುಂದೆ ಏನು ಮಾಡಬೇಕು, ಏನು ನಿರ್ಧಾರ ಮಾಡಬೇಕು, ಮುಂದಿನ ಪ್ಲಾನ್ ಏನು ಮಾಡಿಕೊಂಡಿದ್ದೀಯಾ ಇದರ ಬಗ್ಗೆಯೇ ಮಾತನಾಡುತ್ತಿದ್ದರು. ಕನ್ನಡದಲ್ಲಿ ಖಳನಟರೇ ಇಲ್ಲ ಎಂದಿದ್ದರು. ಅಂದು ರಾಜಾಹುಲಿಯಲ್ಲಿ ಮಾಡಿದ್ದ ಸಣ್ಣ ಪಾತ್ರಗಳು ತುಂಬಾ ಚೆನ್ನಾಗಿತ್ತು. ಆಗಲೂ ಯಶ್ ಹೊಸ ಹುಡುಗರು ಬರಲಿ ಎಂದು ಹೇಳುತ್ತಿದ್ದರು. ಅದರಂತೆಯೇ ಕೆಜಿಎಫ್ ನಲ್ಲೂ ಹೊಸಬರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದ್ರು.

    ಯಶ್ ಅವರಿಗೆ, ನಾವು ಎನು ಮಾಡುತ್ತಿದ್ದೇವೆ ಎಂಬ ನಿರ್ಧಿಷ್ಟವಾದ ಕ್ಲ್ಯಾರಿಟಿ ಇರುತ್ತದೆ. ಅವರು ಯಾವಾಗಲೂ ನಮ್ಮ ಇಂಡಸ್ಟ್ರೀಗೆ ಕಲಾವಿದರ ಬರಬೇಕು ಎಂದು ಹೇಳುತ್ತಿರುತ್ತಾರೆ. ನನಗೆ ಇಷ್ಟವಾದ ವಿಷಯವೆಂದರೆ ಯಶ್ ಅವರನ್ನು ಅವತ್ತು ನೋಡಿದ ಕಲ್ಪನೆ ಇನ್ನೂ ಬದಲಾಗಿಲ್ಲ. ಈಗಲೂ ಅದೇ ರೀತಿ ಇದ್ದಾರೆ. ಈಗ ಇನ್ನೂ ಒಳ್ಳೆಯ ಕೆಲಸ ಮಾಡೋಣ ಎಂದು ಅವರ ಆಸೆ, ಬಯಕೆ ಹೆಚ್ಚಾಗಿದೆ ಅಂದುಕೊಳ್ಳಬಹುದು ಅಂತ ವಶಿಷ್ಠ ಅವರು ಹೇಳಿದ್ದಾರೆ.

    ಇವೆಲ್ಲ ನಮ್ಮ ಜೀವನದ ನೆನಪಿನಲ್ಲಿ ಚಿರಕಾಲ ಉಳಿಯುತ್ತವೆ. ಯಾಕೆಂದರೆ ಯಾವತ್ತೂ ಯಾರೆಯಾಗಲಿ ನಮ್ಮನ್ನು ಗುರುತಿಸಬೇಕು ಅನ್ನುತ್ತೀವಿ, ನಮ್ಮನ್ನು ಗುರುತಿಸಿದರೆ ಕೆಲಸ ಸಿಗುತ್ತದೆ ಎಂದು ಯೋಚನೆ ಮಾಡುತ್ತೇವೆ. ಆದರೆ ಗುರುತಿಸಿಕೊಳ್ಳೋದು, ಗುರುತಿಸುವದನ್ನು ಮೀರಿ ಈ ಸಿನಿಮಾ ನಮ್ಮೆಲ್ಲರಿಗೂ ಇಂದು ಒಂದು ಸ್ಥಾನ-ಮಾನವನ್ನು ದೊರಕಿಸಿಕೊಟ್ಟಿದೆ. ಜೊತೆಗೆ ನಿಮ್ಮಂತ ಅದ್ಭುತ ಕಲಾವಿದರನ್ನು ಕೊಟ್ಟಿದೆ ಎಂದು ಉಳಿದ ಕಲಾವಿದರಿಗೆ ಹೇಳಿದ್ದಾರೆ.

    ರಾಮ್
    ಕಲಾವಿದರ ಬಳಿ ಯಾವ ಟ್ಯಾಲೆಂಟ್ ಇರುತ್ತವೆ ಎಂದು ಯಶ್ ಅವರು ಯೋಚನೆ ಮಾಡುತ್ತಾರೆ. ಒಂದು ವೇಳೆ ಅವರ ಟ್ಯಾಲೆಂಟ್ ನೋಡಿದರೆ ಮಾತ್ರ ಬಿಡುವುದಿಲ್ಲ. ಅವರಿಗೆ ತುಂಬಾ ಬೆಂಬಲ ಕೊಡುತ್ತಾರೆ. ಅಂದು ನಮ್ಮ ಬಾಸ್‍ನ್ನು ಹೇಗೆ ನೋಡಿದ್ದೇನೆ ಇಂದು ಹಾಗೆ ನೋಡುತ್ತಿದ್ದೇನೆ. ಇಂದು ಕನ್ನಡವನ್ನು ಈ ಹಂತಕ್ಕೆ ತೆಗೆದುಕೊಂಡು ಹೋಗಬಹುದೆಂದು ಯಾರು ಕೂಡ ಊಹೆ ಮಾಡಿರಲಿಲ್ಲ. ಇದು ಖುಷಿಯ ವಿಚಾರವಾಗಿದೆ. ಹಿಂದಿಯಲ್ಲಿ ಯಾರೋ ಕನ್ನಡ್ ಕನ್ನಡ್ ಅನ್ನುತ್ತಿದ್ದರು. ಅವರಿಗೆ ಕನ್ನಡ ಎಂದು ಯಶ್ ಹೇಳಿಕೊಟ್ಟಿದ್ದರು ಎಂದು ಹೇಳಿದ್ದಾರೆ.

    ಲಕ್ಕಿ
    ”This Is The Just Beginning, ನೋಡುತ್ತೀರಿ ಕನ್ನಡ ಸಿನಿಮಾ ಯಾವ ಹಂತಕ್ಕೆ ಹೋಗುತ್ತದೆ’ ಎಂದು ಯಶ್ ಬಾಸ್ ಸೈಮಾದಲ್ಲಿ ಅವಾರ್ಡ್ ತೆಗೆದುಕೊಳ್ಳುವಾಗ ಈ ಡೈಲಾಗ್ ಹೇಳಿದ್ದರು. ಅಂದೆ ಯಶ್ ಅವರಿಗೆ ಕನ್ನಡ ಸಿನಿಮಾವನ್ನು ಇಡೀ ಭಾರತ, ಇಂಟರ್ ನ್ಯಾಷನಲ್ ವರೆಗೂ ತೆಗೆದುಕೊಂಡು ಹೋಗಬೇಕು ಎಂದುಕೊಂಡಿದ್ದರು. ಅದರಂತೆಯೇ ಅವರ ಹಾರ್ಡ್ ವರ್ಕ್ ಮೂಲಕ ಇಂದು ಕೆಜಿಎಫ್ ಸಿನಿಮಾ ಮೂಲಕ ತೆಗೆದುಕೊಂಡು ಹೋಗಿದ್ದಾರೆ, ಹ್ಯಾಟ್ಸ್ ಅಪ್ ಅವರಿಗೆ ಎಂದ್ರು.

    ವಿನಯ್
    ಯಶ್ ಅವರು ಫಸ್ಟ್ ದಿನದಿಂದಲೂ ಇಂದಿನ ದಿನವರೆಗೂ ಚೂರು ಬದಲಾಗಿಲ್ಲ ಒಂದೇ ರೀತಿ ಇದ್ದಾರೆ. ಈ ಹಿಂದೆ ನಾನು ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿಯಲ್ಲಿ ಫರ್ಹಾನ್ ಎಂಬ ಚಿಕ್ಕ ಪಾತ್ರವನ್ನು ಮಾಡಿದ್ದೆ. ಲಕ್ಕಿ ಸಿನಿಮಾದಿಂದ ಮತ್ತೆ ಯಶ್ ಜೊತೆಗಿನ ನನ್ನ ಒಡನಾಟ ಹೆಚ್ಚಾಯ್ತು. ಒಂದು ದಿನ ನಿರ್ದೇಶಕ ಸೂರಿ ಸರ್ ಕೆಜಿಎಫ್ ಸಿನಿಮಾ ಆಡಿಷನ್ ನಡೆಯುತ್ತಿರೋದರ ಮಾಹಿತಿ ನೀಡಿದರು. ಅಲ್ಲಿಗೆ ಹೋಗಿ ಆಡಿಷನ್ ನೀಡಿ ಕೆಜಿಎಫ್ ಸಿನಿಮಾಗೆ ಸೆಲೆಕ್ಟ್ ಆದೆ ಎಂದು ವಿನಯ್ ಹೇಳ್ತಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಜಿಎಫ್ ನಟರ ಗಡ್ಡದ ಹಿಂದಿದೆ ರೋಚಕ ಕಥೆ

    ಕೆಜಿಎಫ್ ನಟರ ಗಡ್ಡದ ಹಿಂದಿದೆ ರೋಚಕ ಕಥೆ

    ವಿಶೇಷ ವರದಿ:

    ಕೆಜಿಎಫ್ ಸಿನಿಮಾ ನೋಡಿದವರಿಗೆ ಪ್ರತಿಯೊಂದು ದೃಶ್ಯದಲ್ಲಿ ಆರು ಅಡಿ ಎತ್ತರದ ಗಡ್ಡಧಾರಿಗಳು ಕಾಣಿಸುತ್ತಾರೆ. ಸಿನಿಮಾಗಾಗಿ ಗಡ್ಡ ಬಿಟ್ಟಿದ್ದ ಕಲಾವಿದರು ಕುಟುಂಬಸ್ಥರಿಂದ ಬೈಯಿಸಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ಎಲ್ಲ ನಟರು ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ಆಡಿಷನ್ ಬಂದಾಗ ನಿರ್ದೇಶಕ ಪ್ರಶಾಂತ್ ನೀಲ್ ಯಾರು ಶೇವಿಂಗ್ ಮಾಡಕೂಡದು ಎಂಬ ಕಂಡೀಷನ್ ಹಾಕಿದ್ದಾರಂತೆ. ಸಿನಿಮಾ ಮುಗಿಯುವವರೆಗೂ ಕೇವಲ ಟ್ರಿಮ್ ಮಾಡಿಕೊಳ್ಳಬೇಕು ಅಂತಾ ಸೂಚಿಸಿದ್ದರಂತೆ.

    ಗರುಡ/ರಾಮ್: ಆಡಿಷನ್ ನೀಡಿ ಆಯ್ಕೆಯಾದಾಗ ಪ್ರಶಾಂತ್ ನೀಲ್ ಗಡ್ಡ ಬಿಡಬೇಕೆಂದು ಹೇಳಿದರು. ನಾನು ನಿರ್ದೇಶಕರು ಹೇಳಿದಂತೆ ಗಡ್ಡ ಬಿಟ್ಟೆ. ನನ್ನ ಮಗನಿಗೆ ಎರಡೂವರೆ ವರ್ಷ ಆತ ನನ್ನನ್ನು ಗಡ್ಡದಲ್ಲಿಯೇ ನೋಡಿದ್ದಾನೆ. ನನ್ನ ಗಡ್ಡ ನೋಡಿದ ನೆರೆಹೊರೆಯಯವರು ಏನಾಯ್ತು ಇವನಿಗೆ ಎಂದು ಮಾತನಾಡಿಕೊಳ್ಳಲು ಆರಂಭಿಸಿದರು. ಮನೆಗೆ ಯಾರಾದರೂ ಗೆಸ್ಟ್ ಬಂದರೆ ಹೊರ ಹೋಗ್ತಿದ್ದೆ. ಎಲ್ಲರೂ ಹೋದ ಮೇಲೆ ಮನೆಯಿಂದ ಫೋನ್ ಮಾಡಿ ಹೇಳೋರು. ಎಲ್ಲರು ಹೋದ್ರು ಬನ್ನಿ ಅಂದಾಗ ಹೋಗ್ತಿದ್ದೆ ಅಂತಾ ರಾಮ್ ತಮ್ಮ ಅನುಭವಗಳನ್ನು ಹಂಚಿಕೊಂಡರು.

    ಸಿನಿಮಾಗೂ ಮುನ್ನ ತುಂಬಾ ನಗ್ತಾ ಇದ್ದೆ. ಶೂಟಿಂಗ್ ಆರಂಭಕ್ಕೂ ಮುನ್ನ ಪ್ರಶಾಂತ್ ಸರ್ ಆರು ತಿಂಗಳು ನಗಬೇಡ ಅಂತಾ ಹೇಳಿದರು. ಅವರ ಮಾತಿನಂತೆ ನನ್ನ ಮಾತುಗಳನ್ನು ಕಡಿಮೆ ಮಾಡಿಕೊಂಡೆ. ಪ್ರತಿಯೊಂದು ಹಂತದಲ್ಲಿಯೂ ಪ್ರಶಾಂತ್ ಸರ್ ನಮ್ಮನ್ನು ತಿದ್ದಿ ತೀಡಿದ್ದಾರೆ. ಆರು ತಿಂಗಳ ನಂತರ ಸಿನಿಮಾಗೆ ಮಾಸ್ ಲುಕ್ ಬಂತು ಅಂತಾ ಅಂದ್ರು.

    ವಿನಯ್:
    ನಾನು ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದೆ. ಕಾರ್ಪೋರೇಟರ್ ಲುಕ್ ನಲ್ಲಿ ಕ್ಲೀನ್ ಶೇವಿಂಗ್ ಇರುತ್ತಿತ್ತು. ವರ್ಕ್ ಶಾಪ್‍ಗೆ ಬಂದಾಗ ಡೈಲಾಗ್ ಕೊಟ್ಟರು ಹೇಳಿದೆ. ಮೊದಲ ದಿನವೇ ಪ್ರಶಾಂತ್ ಸರ್ 20 ನಿಮಿಷ ಕ್ಲಾಸ್ ತೆಗೆದುಕೊಂಡರು. ನಾನು ಕೆಲಸ ಮಾಡತಕ್ಕಂತಹ ಸ್ಥಳದಲ್ಲಿ ನಾನೇ ಯಾಕೆ ಶೇವ್ ಮಾಡಿಲ್ಲ ಅಂತ ಪ್ರಶ್ನೆ ಮಾಡಬೇಕಿತ್ತು. ಆದ್ರೆ ನನ್ನ ಗಡ್ಡ ನೋಡಿಕೊಂಡು ಸುಮ್ಮನಾಗುತ್ತಿದ್ದೆ. ಸಿನಿಮಾಗಾಗಿ ಗಡ್ಡ ಬಿಡ್ತಿದ್ದೇನೆ ಅಂತಾ ಚೇರ್‍ಮೆನ್ ಅವರಿಂದ ಪರ್ಮಿಷನ್ ತೆಗೆದುಕೊಂಡಿದ್ದರಿಂದ ಯಾರು ನನ್ನನ್ನು ಪ್ರಶ್ನೆ ಮಾಡುತ್ತಿರಲಿಲ್ಲ.

    ಲಕ್ಕಿ:
    ನಾನು ಐಟಿ ಸೆಕ್ಟರ್ ನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುವಂತಹ ವ್ಯಕ್ತಿ. ಯಾವತ್ತೂ ಗಡ್ಡ ಮೀಸೆ ಬಿಟ್ಟವನು ನಾನಲ್ಲ. ಪ್ರಶಾಂತ್ ಸರ್ ಫೋನ್ ಮಾಡಿ ನನ್ನ ಆಸೆ ಹೇಳಿದಾಗ, ಸಂಜಯ ನಗರ ಆಫೀಸಿಗೆ ಹೋಗಿ ಅಲ್ಲಿ ನಿಮಗೆ ನನ್ನ ಸಹಾಯಕರು ತರಬೇತಿ ಕೊಡ್ತಾರೆ. ಆದ್ರೆ ಎರಡು ಕಂಡೀಷನ್ ಹಾಕಿದರು. ಒಂದು ಗಡ್ಡ ಮತ್ತು ಮೀಸೆ ಬಿಡಬೇಕು, ಇನ್ನೊಂದು ತರಬೇತಿಯಲ್ಲಿ ನಮ್ಮ ಚಿತ್ರಕ್ಕೆ ನೀವು ಸೂಟ್ ಆಗಲಿಲ್ಲ ಅಂದ್ರೆ ಚಾನ್ಸ್ ನೀಡೊದಕ್ಕೆ ಸಾಧ್ಯವಿಲ್ಲ. ಸಿನಿಮಾಗೆ ಚಾನ್ಸ್ ಕೊಟ್ಟಿಲ್ಲ ದೋಸ್ತಿ ಬಿಡುವಂತಿಲ್ಲ ಅಂತಾ ಹೇಳಿದ್ದರು. 2016ರಲ್ಲಿಯೇ ನಾನು ಗಡ್ಡ ಮತ್ತು ಮೀಸೆಗೆ ಸಂಪೂರ್ಣ ಕತ್ತರಿ ಹಾಕದೇ ಕೇವಲ ಟ್ರಿಮ್ ಮಾಡಿಕೊಂಡು ಬಂದಿದ್ದೇನೆ.

    ಅವಿನಾಶ್:
    ನನಗೆ ಗಡ್ಡ ಬಿಡೋದಕ್ಕೆ ಯಾವುದೇ ತೊಂದರೆ ಆಗಲಿಲ್ಲ. ಕಾರಣ ನಾನು ಸ್ವಂತ ಬಾರ್ ಆ್ಯಂಡ್ ರೆಸ್ಟೋರೆಂಟ್ ನಡೆಸುತ್ತಿದ್ದೇನೆ. ಬಾಸ್ ನಾನೇ ಆಗಿದ್ದರಿಂದ ಯಾರು ಪ್ರಶ್ನೆ ಮಾಡಲಿಲ್ಲ. 2015 ಅಕ್ಟೋಬರ್ ನಿಂದಲೇ ತರಬೇತಿ ತೆಗೆದುಕೊಳ್ಳಲು ಆರಂಭಿಸಿದಾಗ, ನಾವೇನು ಮಾಡುತ್ತಿದ್ದೇವೆ, ಯಾವುದಕ್ಕೆ ಈ ಎಲ್ಲ ತರಬೇತಿ ಅಂತಾ ಗೊತ್ತಾಗುತ್ತಿರಲಿಲ್ಲ. ನಿರ್ದೇಶಕ ಪ್ರಶಾಂತ್ ನೀಲ್ ನಮ್ಮ ನಿಜ ಜೀವನದಲ್ಲಿ ಆ ಪಾತ್ರವನ್ನು ತರಿಸಿದ್ದರು. ಇದನ್ನೂ ಓದಿ: ರಣ ರಣ ಲುಕ್‍ನಲ್ಲಿ ಮಿಂಚಿರುವ ಕೆಜಿಎಫ್ ಕಿಲಾಡಿಗಳ ಸಿನಿಮಾ ಜರ್ನಿ ಆರಂಭದ ಕಥೆ

    ಶೂಟಿಂಗ್ ಆರಂಭಕ್ಕೂ ಮುನ್ನವೇ ಕಥೆಗೆ ಬೇಕಾದ ಪಾತ್ರಗಳನ್ನು ಪ್ರಶಾಂತ್ ನೀಲ್ ಸೃಷ್ಟಿಸಿಕೊಂಡಿದ್ದರು ಎಂಬುದು ಕಲಾವಿದರ ಮಾತುಗಳಲ್ಲಿ ಗೊತ್ತಾಗುತ್ತದೆ. ಚಿತ್ರದ ಮತ್ತೋರ್ವ ನಟ ವಶಿಷ್ಟ ಹೇಳುವಂತೆ ನಿರ್ದೇಶಕರು ಫೇಮಸ್ ಆಗಿರುವ ಕಲಾವಿದರನ್ನು ಚಿತ್ರಕ್ಕಾಗಿ ಕರೆತರಲಿಲ್ಲ. ಕಥೆಗೆ ಬೇಕಾದ ಪಾತ್ರಗಳಿಗಾಗಿ ಹುಡುಕಾಟ ನಡೆಸಿ, ತರಬೇತಿ ಕೊಟ್ಟು ಚಿತ್ರಕ್ಕಾಗಿ ಎರಡ್ಮೂರು ವರ್ಷ ಕೆಲಸ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಿಂದಿಯಲ್ಲಿ ಕೆಜಿಎಫ್ ಭರ್ಜರಿ ಕಲೆಕ್ಷನ್ – ಮತ್ತಷ್ಟು ಹೆಚ್ಚಾಯ್ತು ಸ್ಕ್ರೀನ್ ಸಂಖ್ಯೆ

    ಹಿಂದಿಯಲ್ಲಿ ಕೆಜಿಎಫ್ ಭರ್ಜರಿ ಕಲೆಕ್ಷನ್ – ಮತ್ತಷ್ಟು ಹೆಚ್ಚಾಯ್ತು ಸ್ಕ್ರೀನ್ ಸಂಖ್ಯೆ

    ಬೆಂಗಳೂರು: ಐದು ಭಾಷೆಗಳಲ್ಲಿ ಬಿಡುಗಡೆಯೊಂದಿಗೆ ದಾಖಲೆ ಬರೆದಿದ್ದ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ, ಗಲ್ಲ ಪೆಟ್ಟಿಗೆಯಲ್ಲಿ ತನ್ನ ಗಳಿಕೆಯನ್ನು ಮುಂದುವರಿಸಿದೆ.

    ಪ್ರಮುಖವಾಗಿ ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿರುವ ಕೆಜಿಎಫ್ ಮುಂಬೈನಲ್ಲಿ ಅತ್ಯುತ್ತಮವಾಗಿ ಪ್ರದರ್ಶನವಾಗುತ್ತಿದ್ದು, ಡಿ. 31 ಮತ್ತು ಜನವರಿ 1 ರಂದು ಭರ್ಜರಿ ಕಲೆಕ್ಷನ್ ಮಾಡಿದೆ ಎಂದು ಸಿನಿ ಮಾರುಕಟ್ಟೆ ವಿಶ್ಲೇಷಕ ತರಣ್ ಅದರ್ಶ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

    ಹಿಂದಿ ಕಲೆಕ್ಷನ್ ಎಷ್ಟು?
    ಡಿ. 28ರ ಶುಕ್ರವಾರ 1.25 ಕೋಟಿ ರೂ., ಶನಿವಾರ 1.75 ಕೋಟಿ ರೂ., ಭಾನುವಾರ 2.25 ಕೋಟಿ ರೂ., ಸೋಮವಾರ 1.50 ಕೋಟಿ ರೂ., ಮಂಗಳವಾರ 2.25 ಕೋಟಿ ರೂ. ಬುಧವಾರ 1.30 ಕೋಟಿ ರೂ. ಹಾಗೂ ಗುರುವಾರ 1.20 ಕೋಟಿ ರೂ. ಆದಾಯಗಳಿಸಿದೆ.

    ಸಿನಿಮಾ ಬಿಡುಗಡೆಯಾದ ಮೊದಲ ವಾರದಲ್ಲಿ 21.45 ಕೋಟಿ ರೂ. 2ನೇ ವಾರದಲ್ಲಿ 11.50 ಕೋಟಿ ರೂ. ಗಳಿಕೆಯೊಂದಿಗೆ ಒಟ್ಟು 39.95 ಕೋಟಿ ರೂ. ಗಳಿಸಿದೆ. ಅಲ್ಲದೇ 2ನೇ ವಾರದಲ್ಲಿ 780 ಪರದೆಗಳಲ್ಲಿ ಪ್ರದರ್ಶನವಾಗುತ್ತಿದ್ದ ಕೆಜಿಎಫ್ 3ನೇ ವಾರಕ್ಕೆ ಈ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದ್ದು ಒಟ್ಟಾರೆ 951 ಪರದೆಗಳಲ್ಲಿ ಪ್ರದರ್ಶನ ವಾಗುತ್ತಿದೆ.

    ಹಿಂದಿ ಸಿನಿಮಾದ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಮುಂಬೈಗೆ ಯಶ್ ತೆರಳಿದ್ದರು. ಐಟಿ ದಾಳಿ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನ ರದ್ದುಪಡಿಸಿ ಗುರುವಾರ ಬೆಂಗಳೂರಿಗೆ ಮರಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಧಿಕಾ ಕೆಜಿಎಫ್ ನೋಡಿಲ್ಲ – ರಾಕಿ ಭಾಯ್ ಸ್ಪಷ್ಟನೆ

    ರಾಧಿಕಾ ಕೆಜಿಎಫ್ ನೋಡಿಲ್ಲ – ರಾಕಿ ಭಾಯ್ ಸ್ಪಷ್ಟನೆ

    ಬೆಂಗಳೂರು: ಭಾರತದಾದ್ಯಂತ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾವನ್ನು ನೋಡಿ ಜನರು ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಆದರೆ ಯಶ್ ಪತ್ನಿ ರಾಧಿಕಾ ಪಂಡಿತ್ ಇನ್ನೂ ಕೆಜೆಎಫ್ ಸಿನಿಮಾವನ್ನು ನೋಡಿಲ್ಲ.

    ಹೌದು.. ನಟಿ ರಾಧಿಕಾ ಪಂಡಿತ್ ಇನ್ನೂ ಕೆಜಿಎಫ್ ಸಿನಿಮಾವನ್ನು ನೋಡಿಲ್ಲ. ಈ ಬಗ್ಗೆ ಯಶ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಕೆಜಿಎಫ್ ಸಿನಿಮಾವನ್ನು ಹೊಸ ಸೌಂಡ್‍ನಲ್ಲಿ ನೋಡುವುದಕ್ಕೆ ಓರಾಯನ್ ಮಾಲ್‍ ಗೆ ಹೋಗಿದ್ದರು. ಈ ವೇಳೆ ಅಭಿಮಾನಿಗಳ ಜೊತೆ ಸಿನಿಮಾ ನೋಡಿದ ಯಶ್, ರಾಧಿಕಾ ಪಂಡಿತ್ ಇನ್ನೂ ಸಿನಿಮಾ ನೋಡಿಲ್ಲಾ ಎಂದು ಹೇಳಿದ್ದಾರೆ. ಇದನ್ನೂ ಓದಿ: 150 ಕೋಟಿಯ ಕ್ಲಬ್ ಸೇರಿ ದಾಖಲೆ ಬರೆದ ಕೆಜಿಎಫ್!

    ರಾಧಿಕಾ ಅವರಿಗೂ ಸಿನಿಮಾ ನೋಡಬೇಕೆಂಬ ಆಸೆ ಇದೆ. ಆದರೆ ನೋಡಲು ಸಾಧ್ಯವಾಗಿಲ್ಲ. ಎಲ್ಲರೂ ಇಷ್ಟೊಂದು ಇಷ್ಟ ಪಡುತ್ತಿದ್ದಾರೆ. ನಾನು ಸಿನಿಮಾ ನೋಡಲೇಬೇಕು ಎಂದು ಪ್ರತಿದಿನ ಕೇಳುತ್ತಿದ್ದಾರೆ. ಆದರೆ ರಾಧಿಕಾ ಇನ್ನೂ ಸ್ವಲ್ಪ ದಿನ ಕಾಯಬೇಕಾಗುತ್ತದೆ. ಯಾಕೆಂದರೆ ವೈದ್ಯರು ಮನೆಯಲ್ಲಿ ವಿಶ್ರಾಂತಿ ಪಡೆಯಬೇಕು ಎಂದು ಹೇಳಿದ್ದಾರೆ. ಹಾಗಾಗಿ ಸದ್ಯಕ್ಕೆ ರಾಧಿಕಾ ಸಿನಿಮಾ ನೋಡಲು ಆಗುವುದಿಲ್ಲ ಎಂದು ಯಶ್ ಅಭಿಮಾನಿಗಳ ಬಳಿ ಹೇಳಿದ್ದಾರೆ.

    ರಾಧಿಕಾ ಅವರು ಡಿಸೆಂಬರ್ 2 ಭಾನುವಾರದಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯಕ್ಕೆ ರಾಧಿಕಾ ಅವರು ಮಗಳ ಲಾಲನೆ-ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಮಗಳ ಜೊತೆ ಹೊಸ ಜಗತ್ತಿನಲ್ಲಿ ಹೊಸ ಅನುಭವಗಳನ್ನ ಪಡೆಯುತ್ತಿದ್ದಾರೆ.

    ರಾಧಿಕಾಗೆ ಡಾಕ್ಟರ್ ರೆಸ್ಟ್ ಮಾಡಲು ಸೂಚಿಸಿದ್ದಾರೆ. ಆದರೂ ನಾನು ಸಿನಿಮಾ ನೋಡಬೇಕು ಎಂದು ಯಶ್ ಬಳಿ ತುಂಬಾ ಸಾರಿ ಹೇಳಿದ್ದಾರಂತೆ. ಆದರೆ ಡಾಕ್ಟರ್ ಸದ್ಯಕ್ಕೆ ಹೊರಗಡೆ ಹೋಗೋದು ಬೇಡ ಅಂತ ಕೆಜಿಎಫ್ ವೀಕ್ಷಣೆಗೆ ಬ್ರೇಕ್ ಹಾಕಿದ್ದಾರೆ. ಸದ್ಯದಲ್ಲೇ ತಾಯಿ, ಮಗು ಇಬ್ಬರು ಕೆಜಿಎಫ್ ಸಿನಿಮಾವನ್ನು ವೀಕ್ಷಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 150 ಕೋಟಿಯ ಕ್ಲಬ್ ಸೇರಿ ದಾಖಲೆ ಬರೆದ ಕೆಜಿಎಫ್!

    150 ಕೋಟಿಯ ಕ್ಲಬ್ ಸೇರಿ ದಾಖಲೆ ಬರೆದ ಕೆಜಿಎಫ್!

    ಬೆಂಗಳೂರು: ಪಂಚಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿ ದಾಖಲೆ ನಿರ್ಮಿಸಿದ ಕೆಜಿಎಫ್ ಈಗ ವಿಶ್ವಾದ್ಯಂತ 150 ಕೋಟಿ ರೂ. ಕಲೆಕ್ಷನ್‍ಗೈದ ಕನ್ನಡದ ಮೊದಲ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಬಿಡುಗಡೆಯಾದ 5ನೇ ದಿನಕ್ಕೆ 100 ಕೋಟಿ ರೂ. ಕ್ಲಬ್ ಸೇರಿದ್ದ ಯಶ್ ಅಭಿನಯದ ಕೆಜಿಎಫ್ ಈಗ ಎರಡನೇ ವಾರಾಂತ್ಯದಲ್ಲಿ 150 ಕೋಟಿ ರೂ. ಕಲೆಕ್ಷನ್ ಮಾಡಿದೆ. ಈಗ ವಿದೇಶದಲ್ಲೂ ಕೆಜಿಎಫ್ ಸ್ಕ್ರೀನ್ ಹೆಚ್ಚಳವಾಗುತ್ತಿದ್ದು ಮತ್ತಷ್ಟು ಕಲೆಕ್ಷನ್ ಜಾಸ್ತಿಯಾಗಲಿದೆ. ಇದನ್ನೂ ಓದಿ: ಲುಂಗಿ, ಹವಾಯಿ ಚಪ್ಪಲಿ, ಮಂಕಿಕ್ಯಾಪ್ ಹಾಕ್ಕೊಂಡು ‘ಕೆಜಿಎಫ್’ ನೋಡಿದ ಸ್ಯಾಂಡಲ್‍ವುಡ್ ಟಾಪ್ ನಟ

    ಕನ್ನಡದಲ್ಲಿ ಒಟ್ಟು 87 ಕೋಟಿ ರೂ. ಕಲೆಕ್ಷನ್ ಮಾಡಿದ್ದು ಇದು ದಾಖಲೆಯಾಗಿದೆ. ಈ ಹಿಂದೆ ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ 75 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಹಿಂದಿ ಆವೃತ್ತಿಯಲ್ಲಿ ಕೆಜಿಎಫ್ ಚಿತ್ರ ಒಟ್ಟಾರೆ 26.70 ಕೋಟಿ ರೂ. ಗಳಿಸಿ ದಾಖಲೆ ನಿರ್ಮಿಸಿದೆ. ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಹಲವು ಜನ ಊರು ಮತ್ತು ಪ್ರವಾಸಕ್ಕೆ ತೆರಳಿದ್ದರು. ಹೀಗಾಗಿ ಸಿನಿಮಾ ವೀಕ್ಷಿಸದವರು ಈಗ ಚಿತ್ರ ಮಂದಿರದತ್ತ ಬರುತ್ತಿದ್ದಾರೆ. ಇದನ್ನೂ ಓದಿ:ತಮಿಳುನಾಡಲ್ಲೂ ಕೆಜಿಎಫ್ ಹವಾ – ತಮಿಳು ಚಿತ್ರಗಳನ್ನು ಹಿಂದಿಕ್ಕಿ ಸ್ಕ್ರೀನ್ ಹೆಚ್ಚಿಸಿಕೊಳ್ಳುತ್ತಿದ್ದಾನೆ ರಾಕಿ ಭಾಯ್

    ಬಿಡುಗಡೆಯಾದ 4 ದಿನಕ್ಕೆ 77 ಕೋಟಿಗೂ ಹೆಚ್ಚು ಕಲೆಕ್ಷನ್ ಆಗಿತ್ತು. ಈಗ ಸ್ಕ್ರೀನ್ ಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುವ ಜೊತೆಗೆ ಕ್ರಿಸ್‍ಮಸ್ ರಜೆ  ಇದ್ದ ಕಾರಣ ಭರ್ಜರಿ ಕಲೆಕ್ಷನ್ ಮಾಡಿದೆ. ಒಟ್ಟಿನಲ್ಲಿ ಕನ್ನಡ ಚಿತ್ರವೊಂದು ಬಾಲಿವುಡ್ ಅಂಗಳದಲ್ಲಿಯೂ ಸದ್ದು ಮಾಡುವ ಮೂಲಕ ತನ್ನ ಹಿರಿಮೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದೆ.

    `ಕೆಜಿಎಫ್’ ಚಿತ್ರದ ಮೊದಲ ದಿನದ ಕಲೆಕ್ಷನ್ ಸುಮಾರು 23 ಕೋಟಿ ರೂ. ಆಗಿದ್ದರೆ, ಎರಡನೇ 40 ಕೋಟಿ ರೂ. ಗಳಿಸಿತ್ತು. ಮೂರನೇ ದಿನ 58 ಕೋಟಿ ರೂ., ನಾಲ್ಕನೇಯ ದಿನ 77 ಕೋಟಿ ರೂ. ಆಗಿದ್ದರೆ, ಐದನೇ ದಿನ ಕೆಜಿಎಫ್ ನೂರು ಕೋಟಿ ರೂ. ಗಡಿ ದಾಟಿತ್ತು. ಇದನ್ನೂ ಓದಿ:ಸಲಾಂ ರಾಕಿ ಭಾಯ್ ಅಂತಾ ಹೇಳ್ತಿರೋದು ಕೆಜಿಎಫ್ ಸಿನಿಮಾಗೆ ಅಲ್ಲ

    ಕೆಜಿಎಫ್ ಬಿಡುಗಡೆಯಾದ ದಿನವೇ ರಿಲೀಸ್ ಆಗಿದ್ದ ಶಾರೂಖ್ ಖಾನ್ ಅಭಿನಯದ ಝೀರೋ ಎರಡನೇ ವಾರಾಂತ್ಯದ ವೇಳೆಗೆ ಒಟ್ಟು 80 ಕೋಟಿ ರೂ. ಕಲೆಕ್ಷನ್ ಮಾಡಿದೆ. ಒಟ್ಟು 10 ದಿನದಲ್ಲಿ 80 ಕೋಟಿ ಗಳಿಸಿದ್ದು, ಎರಡನೇ ವಾರಾಂತ್ಯದಲ್ಲಿ ಕೇವಲ 3.10 ಕೋಟಿ ರೂ. ಗಳಿಕೆ ಮಾಡಿದೆ. ಬಾಕ್ಸ್ ಆಫೀಸಿನಲ್ಲಿ ಶಾರೂಖ್ ಅಭಿನಯದ ಅತಿ ಕಡಿಮೆ ಗಳಿಕೆ ಮಾಡಿದ ಚಿತ್ರ ಝೀರೋ ಆಗಿದೆ ಎಂದು ಸಿನಿ ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ. ಇದನ್ನೂ ಓದಿ:ಹಳ್ಳಿ ಹೈದ ಬರೆದ ‘ಕೆಜಿಎಫ್’ ಹಾಡಿಗೆ ಜನ್ರು ಫುಲ್ ಫಿದಾ

    ಕೆಜಿಎಫ್ ಚಿತ್ರವನ್ನು ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಕೆಜಿಎಫ್ ಮೊದಲ ಭಾಗದಲ್ಲಿ ನಟಿ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಹಾಗೂ ವಸಿಷ್ಠ ಸಿಂಹ ನಟಿಸಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲೆಯಾಳಂ, ಹಿಂದಿ ಭಾಷೆಯಲ್ಲಿ ಕೆಜಿಎಫ್ ಚಿತ್ರ ಡಿಸೆಂಬರ್ 21 ರಂದು ಬಿಡುಗಡೆಯಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಣ ರಣ ಲುಕ್‍ನಲ್ಲಿ ಮಿಂಚಿರುವ ಕೆಜಿಎಫ್ ಕಿಲಾಡಿಗಳ ಸಿನಿಮಾ ಜರ್ನಿ ಆರಂಭದ ಕಥೆ

    ರಣ ರಣ ಲುಕ್‍ನಲ್ಲಿ ಮಿಂಚಿರುವ ಕೆಜಿಎಫ್ ಕಿಲಾಡಿಗಳ ಸಿನಿಮಾ ಜರ್ನಿ ಆರಂಭದ ಕಥೆ

    -ಕೆಜಿಎಫ್ ಚಿತ್ರದಲ್ಲಿ ಅವಕಾಶ ಸಿಕ್ಕಿದ್ದನ್ನು ಬಿಚ್ಚಿಟ್ಟ ವಿಲನ್‍ಗಳು

    ವಿಶೇಷ ವರದಿ
    ಕೆಜಿಎಫ್ ಚಿತ್ರತಂಡದ ಕಲಾವಿದರೇ ಸಿನಿಮಾದ ಪ್ಲಸ್ ಪಾಯಿಂಟ್. ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಹೊಸ ಮುಖಗಳನ್ನು ಚಂದನವನಕ್ಕೆ ಪರಿಚಯಿಸಿದ್ದಾರೆ. ಚಿತ್ರದುದ್ದಕ್ಕೂ ನಿಮಗೆ ಆರು ಅಡಿ ಎತ್ತರದ ಗಡ್ಡದಾರಿಗಳು ಕಾಣ ಸಿಗುತ್ತಾರೆ. ಕೆಜಿಎಫ್ ಕಲಾವಿದರಿಗಾಗಿ ಸಿನಿಮಾವನ್ನು ಮಾಡಿಲ್ಲ. ಕಥೆಗಾಗಿಯೇ ಹೊಸ ಕಲಾವಿದರಿಗೆ ಕೆಜಿಎಫ್ ಜನ್ಮ ನೀಡಿದೆ ಅಂತಾ ಹೇಳಿದ್ರೆ ತಪ್ಪಾಗಲಾರದು. ಸಿನಿಮಾದ ಚಿಕ್ಕ ಪಾತ್ರದಲ್ಲಿಯೂ ಕಾಣಿಸಿಕೊಳ್ಳುವ ಪ್ರತಿಯೊಬ್ಬ ಕಲಾವಿದ ನೋಡುಗರಿಗೆ ಇಷ್ಟವಾಗುತ್ತಾನೆ. ಇನ್ನು ವಿಲನ್ ಪಾತ್ರಗಳಲ್ಲಿ ಮಿಂಚಿರುವ ರಾಮ್, ವಿನಯ್, ಲಕ್ಕಿ, ಅವಿನಾಶ್ ಮತ್ತು ವಶಿಷ್ಠ ಎಲ್ಲರು ಕೆಜಿಎಫ್ ಚಿತ್ರ ಯಶಸ್ಸಿನ ಮತ್ತೊಂದು ಕಾರಣ. ನಟ ವಷಿಷ್ಠ ತಮ್ಮ ಕಂಚಿನ ಕಂಠದ ಮೂಲಕವೇ ಗುರುತಿಸಿಕೊಂಡ ಕಲಾವಿದ. ಇನ್ನುಳಿದ ನಾಲ್ವರಿಗೂ ಕೆಜಿಎಫ್ ಮೊದಲ ಚಿತ್ರವಾಗಿದ್ದರೂ, ಯಾವ ಅನುಭವಿ ನಟರಿಗೂ ಕಡಿಮೆ ಇಲ್ಲ ಎಂಬಂತೆ ನಟಿಸಿದ್ದಾರೆ. ಹಾಗಾದ್ರೆ ಎಲ್ಲ ಕಿಲಾಡಿಗಳಿಗೆ ಸಿನಿಮಾ ಸಿಕ್ಕಿದ್ದು ಹೇಗೆ ಎಂಬುದರ ಕಥೆ ಇಲ್ಲಿದೆ.

    1. ರಾಮ್:
    ನಾನು ಈ ರೀತಿ ಮೈಲಿಗಲ್ಲು ಸಿಕ್ಕಿದೆ ಎಂಬುವುದೇ ಖುಷಿ. ನಾನು ಯಶ್ ಜೊತೆ 12 ವರ್ಷಗಳ ಒಡನಾಟ. ನನ್ನ ಕೆಲಸ ಸಾರ್ವಜನಿಕ ಸ್ಥಳಗಳಲ್ಲಿ ಯಶ್ ಅವರಿಗೆ ರಕ್ಷಣೆ ಮಾಡುವುದು. ಯಶ್ ಅಂದ ಕೂಡಲೇ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ನಾನು ಎಲ್ಲರ ಪಕ್ಕಕ್ಕೆ ತಂದು ನಿಲ್ಲಿಸುತ್ತಿದ್ದೆ. ಕೆಲವೊಂದು ಸಾರಿ ನಾನು ಅಭಿಮಾನಿಗಳ ಮೇಲೆ ಕೋಪಗೊಂಡಾಗ, ಯಶ್ ಅವರಿಂದಲೇ ನಾನು ಇಲ್ಲಿದ್ದೇನೆ ಎಂದು ಗದರಬೇಡಿ ಅಂತಾ ಹೇಳುತ್ತಿದ್ದರು. ಯಶ್ ಅವರ ಈ ಸರಳತೆಗೆ ನಾನು ಸಂಪೂರ್ಣ ಮಾರುಹೋಗಿದ್ದೆ.

    ಒಂದು ದಿನ ಯಶ್ ಜೊತೆಗಿದ್ದಾಗ ಪ್ರಶಾಂತ್ ನೀಲ್ ಸಿಕ್ಕರು. ನನ್ನನ್ನು ನೋಡಿದ ಪ್ರಶಾಂತ್ ನೀಲ್ ಸಿನಿಮಾ ಆಫರ್ ನೀಡಿದರು. ಯಶ್ ಅವರ ಜೊತೆಗಿದ್ದಕ್ಕೆ ಪ್ರಶಾಂತ್ ನೀಲ್ ಸಿಕ್ಕರು. ಯಶ್ ಅವರು ಇಲ್ಲ ಅಂದಿದ್ರೆ ನನಗೆ ಈ ಪಾತ್ರವೇ ಸಿಗುತ್ತಿರಲಿಲ್ಲ ಅಂತಾ ರಾಕಿಂಗ್ ಸ್ಟಾರ್ ಸಹಾಯವನ್ನು ರಾಮ್ ನೆನಪಿಸಿಕೊಳ್ತಾರೆ.

    ರಾಮ್

    2. ವಿನಯ್:
    ಯಶ್ ಅವರಿಗೆ ನಾನು ಮೊಗ್ಗಿನ ಮನಸು ಚಿತ್ರದಿಂದ ಪರಿಚಯ. ಹೀಗೆ ಅವರ ಜೊತೆ ಒಡನಾಡ ಇತ್ತು. ಮಿ. ಆ್ಯಂಡ್ ಮಿಸೆಸ್ ರಾಮಾಚಾರಿ ಚಿತ್ರದಲ್ಲಿ ಫರಾನ್ ಎಂಬ ಸಣ್ಣ ಪಾತ್ರ ಮಾಡಿದೆ. ಅಲ್ಲಿಂದ ನನ್ನ ಸಿನಿಮಾ ಪಯಣ ಆರಂಭ ಆಯ್ತು. ಒಂದು ದಿನ ಕೆಜಿಎಫ್ ಸಿನಿಮಾದ ಆಡಿಷನ್ ಆರಂಭವಾಗಿದೆ ಎಂದು ಸೂರಿ ಸರ್ ಹೇಳಿದಾಗ ಹೋಗಿ ಟ್ರೈ ಮಾಡಿದೆ. ಒಂದೆರೆಡು ಬಾರಿ ಬ್ರೇಕ್ ತೆಗೆದುಕೊಂಡು ಆಡಿಷನ್ ಕೊಟ್ಟಾಗ ನಾನು ಕೆಜಿಎಫ್ ಚಿತ್ರಕ್ಕೆ ಆಯ್ಕೆಯಾದೆ ಎಂದು ವಿನಯ್ ಹೇಳ್ತಾರೆ.

    ವಿನಯ್

    3. ಲಕ್ಕಿ:
    ಜನರು ತುಂಬಾ ಕಷ್ಟಪಟ್ಟು ಚಿತ್ರರಂಗದಲ್ಲಿ ಮೇಲೆ ಬರ್ತಾರೆ. ನಮಗೆ ಮೊದಲ ಚಿತ್ರವೇ ಎಲ್ಲವನ್ನು ನೀಡಿದೆ. ನಾನೋರ್ವ ಸಾಫ್ಟ್ ವೇರ್ ಇಂಜಿನೀಯರ್ ಆಗಿದ್ದು, ಇಂದಿಗೂ ನಾನು ಟೆಕ್ಕಿಯಾಗಿ ಕೆಲಸ ಮಾಡಿಕೊಂಡಿದ್ದೇನೆ. ನನಗೆ 20 ವರ್ಷವಿದ್ದಾಗ ಕೆಲವು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೆ. ಮೊದಲಿನಿಂದಲೂ ಹಿರಿ ಪರದೆ ಮೇಲೆ ಕಾಣಿಸಿಕೊಳ್ಳಬೇಕೆಂಬ ಆಸೆ ಇತ್ತು. 2018ರಲ್ಲಿ ಕೆಜಿಎಫ್ ಸಿನಿಮಾ ಸಿಕ್ತು.

    ಲಕ್ಕಿ

    4. ಅವಿನಾಶ್:
    ನಾನೋರ್ವ ಬಿಸಿನೆಸ್ ಮ್ಯಾನ್ ಆಗಿದ್ದು, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ನಡೆಸಿಕೊಂಡು ಹೋಗುತ್ತಿದ್ದೇನೆ. ತುಂಬಾ ವರ್ಷಗಳಿಂದ ಸಿನಿಮಾದಲ್ಲಿ ಕಾಣಿಸಿಕೊಳ್ಳಬೇಕೆಂಬ ಆಸೆ ಇತ್ತು. ಆದ್ರೆ ಈ ವಯಸ್ಸಲ್ಲಿ ಅವಕಾಶ ನೀಡಿ ಎಂದು ಹೇಳಲು ಧೈರ್ಯ ಇರಲಿಲ್ಲ. ಒಂದು ದಿನ ನಿರ್ದೇಶಕ ಪಣಗಾಭರಣ ಅವರು ಛಾಯಾಗ್ರಾಹಕ ಭುವನ್ ಗೌಡ ಅವರನ್ನು ಪರಿಚಯಿಸಿದರು. ಸಿನಿಮಾದಲ್ಲಿ ನಟಿಸಬೇಕೆಂಬ ಆಸೆ ಇದೆ. ನನ್ನ ಫೋಟೊ ಶೂಟ್ ಮಾಡ್ತೀರಾ ಅಂತಾ ಕೇಳಿದಾಗ ಓಕೆ ಅಂದ್ರು.

    ಫೋಟೋ ಬಂದ ಮೇಲೆ ಭುವನ್ ಗೌಡ, ನಾನು ಕೆಜಿಎಫ್ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಒಂದು ಸಾರಿ ನಿಮ್ಮ ಫೋಟೋಗಳನ್ನು ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ತೋರಿಸ್ತಿನಿ. ಒಂದು ವೇಳೆ ಪ್ರಶಾಂತ್ ನೀಲ್ ಒಪ್ಪಿದ್ರೆ ನಿಮ್ಮ ಇಷ್ಟ ಅಂತಾ ಹೇಳಿದರು. ಪ್ರಶಾಂತ್ ಸರ್ ಫೋಟೋಗಳನ್ನು ನೋಡಿ ಒಪ್ಪಿಕೊಂಡು ಸಿನಿಮಾದಲ್ಲಿ ನಟಿಸಲು ಅವಕಾಶ ಕೊಟ್ಟರು.

    ಅವಿನಾಶ್

    ಈ ಸಿನಿಮಾದಲ್ಲಿ ನಟಿಸಿದ ಪ್ರತಿ ಕಲಾವಿದರಿಗೂ ಕೆಜಿಎಫ್ ಒಂದು ಮೈಲಿಗಲ್ಲು. ಈ ಹಿಂದೆ ಹಲವು ಸಿನಿಮಾಗಳಲ್ಲಿ ನಟಿಸಿದ್ರೂ, ಮುಂದೆ ಅವರನ್ನು ಕೆಜಿಎಫ್ ಪಾತ್ರದ ಹೆಸರಿನಿಂದಲೇ ಗುರುತಿಸುವಷ್ಟು ಸಿನಿಮಾ ಹೆಮ್ಮರವಾಗಿ ಬೆಳೆದಿದೆ. ಬಾಕ್ಸ್ ಆಫೀಸ್ ನಲ್ಲಿ ಹಲವು ದಾಖಲೆ ಬರೆದು ಚಿತ್ರ ಜೇಬು ತುಂಬಿಸಿಕೊಳ್ಳುವುದರ ಜೊತೆಗೆ ನವ ಕಲಾವಿದರಿಗೆ ಹೊಸ ಜೀವನವನ್ನು ನೀಡಿರೋದು ಸತ್ಯ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇವ್ರು ಯಶ್ ಅಭಿಮಾನಿ-ಒಮ್ಮೆ ಈ ಅಜ್ಜಿಯ ಮಾತುಗಳನ್ನು ಕೇಳಿ

    ಇವ್ರು ಯಶ್ ಅಭಿಮಾನಿ-ಒಮ್ಮೆ ಈ ಅಜ್ಜಿಯ ಮಾತುಗಳನ್ನು ಕೇಳಿ

    – ಕೆಜಿಎಫ್ ನೋಡಲು ಹೋದ ಅಜ್ಜಿಗೆ ಹೀಗೆ ಹೇಳೋದಾ?

    ಬೆಂಗಳೂರು: ಕನ್ನಡದ ಕಿರೀಟ ಅಂತಾನೇ ಪಾತ್ರವಾಗಿರುವ ಕೆಜಿಎಫ್ ಸಿನಿಮಾ ಎಲ್ಲ ವರ್ಗದವರನ್ನು ತಲುಪವಲ್ಲಿ ಯಶಸ್ವಿಯಾಗಿದೆ. ಸಿನಿಮಾ ಬಿಡುಗಡೆಯಾಗಿ ವಾರಗಳೇ ಕಳೆದ್ರೆ ಕೆಜಿಎಫ್ ಫೀವರ್ ಮಾತ್ರ ಕಡಿಮೆಯಾಗುತ್ತಿಲ್ಲ. ಹೊಸ ವರ್ಷದ ಸಂಭ್ರಮದಲ್ಲಿರುವ ಜನರು ಇನ್ನೊಂದು ಸಾರಿ ಕೆಜಿಎಫ್ ನೋಡೋಣ ಎಂದು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿದ್ದಾರೆ. ಎರಡೆರಡು ಬಾರಿ ಚಿತ್ರ ನೋಡುವಂತೆ ಕೆಜಿಎಫ್ ಮೋಡಿ ಮಾಡಿದೆ.

    ಹಿರಿಯರು ಸಹ ಚಿತ್ರಮಂದಿರಗಳತ್ತ ತೆರಳಿ ಕೆಜಿಎಫ್ ನೋಡುತ್ತಿದ್ದಾರೆ. ಇದೀಗ ಕೆಜಿಎಫ್ ಸಿನಿಮಾ ನೋಡಿ ಅಜ್ಜಿಯ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಜ್ಜಿಯ ಮುದ್ದು ಮಾತುಗಳಿಗೆ ಮನಸೋಲುವ ನೆಟ್ಟಿಗರು ತಮ್ಮ ಖಾತೆಗಳಲ್ಲಿ ವಿಡಿಯೋ ಶೇರ್ ಮಾಡಿಕೊಳ್ಳುತ್ತಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಯಶು, ನನ್ನ ಹೆಸರು ಸಾವಿತ್ರಮ್ಮ, ನನಗೆ 77 ವರ್ಷ ಆಗಿದೆಯಪ್ಪ. ನಿನ್ನ ನೋಡಬೇಕು ಅಂತಾ ತುಂಬಾ ಇಷ್ಟ ಆಯ್ತು. ಸೆಕೆಂಡ್ ಶೋಗೆ ಹೋಗಿ ಕೆಜಿಎಫ್ ಸಿನಿಮಾ ನೋಡಿಕೊಂಡು ಬಂದೆ. ಆದ್ರೆ ಎಲ್ಲರು ನನ್ನನ್ನು ನಕ್ಕು, ಈ ವಯಸ್ಸಾಗಿರೋ ಅಜ್ಜಿಗೆ ಯಾಕೆ ಬೇಕು ಸಿನಿಮಾ ಅಂತಾ ಮಾತಾಡಿಕೊಂಡರು. ಏನೋ ಗೊತ್ತಿಲ್ಲ ನೀನೆಂದ್ರೆ ನನಗಿಷ್ಟ. ನಿನ್ನ ಫೋಟೋ ನೋಡಿ ಕಣ್ತುಂಬಿಕೊಳ್ಳುತ್ತೇನೆ. ನಾನು ಸಾಯೋದರಲ್ಲಿ ನಿನ್ನ ಮುಖ ನೋಡಬೇಕೆಂಬ ಅಸೆ ಇದೆ. ನಿನ್ನ ಧರ್ಮಪತ್ನಿ ರಾಧಿಕಾ ಪಂಡಿತ್ ಪುಣ್ಯ ಮಾಡಿದ್ದಾಳೆ. ನಿನ್ನ ಮಗಳು ಸಹ ಅದೃಷ್ಟವಂತೆ. ದೇವರು ನಿನಗೆ ಒಳ್ಳೆಯದನ್ನು ಮಾಡಲಿ ಅಂತಾ ಪ್ರಾರ್ಥಿಸಿಕೊಳ್ಳುತ್ತೇನೆ ಅಂತಾ ಅಜ್ಜಿ ನಗುಮೊಗದಿಂದ ಹೇಳಿದ್ದಾರೆ.

    ಅಜ್ಜಿ ವಿಡಿಯೋದಲ್ಲಿ ತಮ್ಮ ಹೆಸರು ಹೇಳಿಕೊಂಡಿದ್ದು, ತಾವು ಎಲ್ಲಿಯವರು ಎಂಬುದನ್ನು ಹೇಳಿಕೊಂಡಿಲ್ಲ. ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

    ಹಿರಿಯರನ್ನು ಆಕರ್ಷಿಸಿದ್ದು ಹೇಗೆ ಕೆಜಿಎಫ್?:
    ಈಗ ತೆರೆಕಾಣುತ್ತಿರುವ ಸಿನಿಮಾಗಳು ಸದ್ಯದ ಟ್ರೆಂಡ್‍ನಂತೆ ಮೂಡಿಬರುತ್ತಿವೆ. ಇದು ಹಿರಿಯ ನಾಗರಿಕರಿಗೆ ನೋಡಲು ಮುಜುಗರ ಅನ್ನಿಸುತ್ತಿತ್ತು. ಇನ್ನು ಕೆಲವೊಂದು ಸಿನಿಮಾಗಳು ರಕ್ತಮಯವಾಗಿ, ಹೊಡಿ ಬಡಿ ದೃಶ್ಯಗಳನ್ನೇ ಒಳಗೊಂಡಿರುತ್ತವೆ. ಆದ್ರೆ ಕೆಜಿಎಫ್ ಒಂದು ಭೂಗತ ಲೋಕ, ಗೋಲ್ಡ್ ಮೈನಿಂಗ್ ಜೊತೆಗೆ ಮಾಸ್ ಫಿಲಂ ಆಗಿದ್ದರೂ ಎಲ್ಲಿಯೂ ಕ್ರೌರ್ಯವನ್ನು ಅಥವಾ ರಕ್ತವನ್ನು ಹೆಚ್ಚು ತೋರಿಸಿಲ್ಲ. ನಿರ್ದೇಶಕ ಪ್ರಶಾಂತ್ ನೀಲ್ ಎಲ್ಲವನ್ನು ಹದವಾಗಿ ಬೆರಸಿ ಹಿತವಾದ ಆಹಾರವನ್ನು ನೋಡುಗರಿಗೆ ನೀಡಿದ್ದಾರೆ. 1970-80ರ ಕಾಲಘಟ್ಟವನ್ನು ಮರುಸೃಷ್ಟಿಸಲು ಕಲಾ ನಿರ್ದೇಶಕ ಶಿವುಕುಮಾರ್ ಸಕ್ಸಸ್ ಆಗಿದ್ದು, ನಿರ್ದೇಶಕರ ಕಲ್ಪನೆಯನ್ನು ಛಾಯಾಗ್ರಾಹಕ ಭುವನ್ ಗೌಡ ತೆರೆಯ ಮೇಲೆ ಅಚ್ಚುಕಟ್ಟಾಗಿ ತೋರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೌಂಡಪ್ 2018 – ಭಾರತದಲ್ಲಿ ಸ್ಯಾಂಡಲ್‍ವುಡ್ ಲೋಕದ ಸದ್ದು ಈ ಬಾರಿ ಹೇಗಿತ್ತು? ಬಾಲಿವುಡ್‍ನಲ್ಲಿ ಏನಾಯ್ತು?

    ರೌಂಡಪ್ 2018 – ಭಾರತದಲ್ಲಿ ಸ್ಯಾಂಡಲ್‍ವುಡ್ ಲೋಕದ ಸದ್ದು ಈ ಬಾರಿ ಹೇಗಿತ್ತು? ಬಾಲಿವುಡ್‍ನಲ್ಲಿ ಏನಾಯ್ತು?

    2018ಕ್ಕೆ ಬೈ ಹೇಳಿ ಎಲ್ಲರೂ 2019ರತ್ತ ಹೆಜ್ಜೆ ಹಾಕುತ್ತಿದ್ದೇವೆ. ಕಲರ್ ಫುಲ್ ದುನಿಯಾ ಅಂದ್ರೆ ಸಿನಿ ಲೋಕ. ಈ ಬಣ್ಣದ ಲೋಕ 2018ರಲ್ಲಿ ಹಲವು ವಿಷಯಗಳನ್ನು ಹೊರಹಾಕಿತು. ಕೆಲವು ಸಿನಿಮಾಗಳು ವಿವಾದದಲ್ಲಿಯೇ ಸದ್ದು ಮಾಡಿದ್ರೆ, ಮತ್ತೆ ಕೆಲವು ತಮ್ಮ ಕಥೆಯಿಂದಲೇ ಇಡೀ ದೇಶವನ್ನೇ ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿತು. ಕೆಲ ಕಲಾವಿದರು ತಮ್ಮ ಖಾಸಗಿ ಜೀವನದಿಂದಲೇ ಮಾಧ್ಯಮಗಳಲ್ಲಿ ಕಾಣಿಸಿಕೊಂಡರು.

    ಇತ್ತ ಕಿರಿಕ್ ಪಾರ್ಟಿ ಮೂಲಕವೇ ಮನೆ ಮಾತಾಗಿದ್ದ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಬ್ರೇಕಪ್ ಸುದ್ದಿ ಸ್ಯಾಂಡಲ್‍ವುಡ್ ಮತ್ತು ಟಾಲಿವುಡ್ ಅಂಗಳದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ಇನ್ನು ಮೀಟೂ ವೇದಿಕೆಯಲ್ಲಿ ಕನ್ನಡದ ನಟಿಯರು ತಮಗಾದ ಕಿರುಕುಳವನ್ನು ಹಂಚಿಕೊಂಡಿದ್ದುಂಟು. ನಟಿ ಶೃತಿ ಹರಿಹರನ್ ದಕ್ಷಿಣ ಭಾರತದ ಸ್ಪುರದ್ರೂಪಿ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದರು. ದುನಿಯಾ ವಿಜಯ್ ಜಿಮ್ ಟ್ರೈನರ್ ಮೇಲೆ ಹಲ್ಲೆ ನಡೆಸಿ ಜೈಲು ಸೇರಿದರು. ದುನಿಯಾ ವಿಜಯ್ ಜೈಲು ಸೇರಿದಂತೆ ವಿಜಿ ಪತ್ನಿಯರಿಬ್ಬರ ಜಗಳ ಹೊರ ಬಂದಿತ್ತು. ಹೀಗೆ ದರ್ಶನ್ ಕಾರ್ ಅಪಘಾತ, ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆ ಪ್ರಕರಣ, ದಿ ವಿಲನ್, ರಾಜರಥ ಸಿನಿಮಾ ವಿವಾದ ಎಲ್ಲವು 2018ರ ಪುಟದಲ್ಲಿ ಸೇರಿಕೊಂಡಿವೆ. 2018ರ ಸಿನಿ ಅಂಗಳದ ಟಾಪ್ ಸ್ಟೋರಿಗಳು ಈ ಕೆಳಗಿನಂತಿವೆ. ಇದನ್ನೂ ಓದಿ: 2018ರಲ್ಲಿ ಸಿನಿ ಕುಟುಂಬಕ್ಕೆ ಪಾದಾರ್ಪಣೆ ಮಾಡಿದ ಮುದ್ದು ಕಂದಮ್ಮಗಳು

    1. ಪದ್ಮಾವತ್:
    ದೀಪಿಕಾ ಪಡುಕೋಣೆ ನಟಿಸಿರುವ ಐತಿಹಾಸಿಕ ಕಥೆಯನ್ನು ಹೊಂದಿರುವ `ಪದ್ಮಾವತ್’ ಸಿನಿಮಾ ಜನವರಿ 25ರಂದು ತೆರೆಕಂಡಿತ್ತು. ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿಯಾಗಿ ರಣ್‍ವೀರ್ ಸಿಂಗ್ ಮತ್ತು ರಾಣಾ ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ನಟಿಸಿದ್ದು, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿ ಬಂದಿತ್ತು. ಪದ್ಮಾವತ್ ಸಿನಿಮಾ ಸಾಕಷ್ಟು ವಿವಾದಗಳಿಂದಲೇ ಸುದ್ದಿ ಮಾಡಿದತ್ತು. ಎಂಟು ದಿನಗಳಲ್ಲಿ 200 ಕೋಟಿಗೂ ಅಧಿಕ ಹಣವನ್ನು ಗಳಿಸಿ ಯಶಸ್ಸಿನತ್ತ ಮುನ್ನುಗ್ಗಿತ್ತು.

    2. ರಾಜರಥ ಸಿನಿಮಾ:
    ತೆಲುಗು ಭಾಷೆಯ ಬಾಹುಬಲಿ ಸಿನಿಮಾಗೆ ಠಕ್ಕರ್ ನೀಡಿದ ಸಿನಿಮಾ ರಂಗಿತರಂಗ. ರಾಜ್ಯದಲ್ಲಿ ಬಾಹುಬಲಿ ಸದ್ದು ಮಾಡುತ್ತಿದ್ದಾಗಲೇ ತೆರೆಕಂಡಿದ್ದ ರಂಗಿತರಂಗ ಹೊಸ ಕಥೆಯೊಂದಿಗೆ ಪ್ರೇಕ್ಷಕರ ಮುಂದೆ ಗೆಲುವು ಸಾಧಿಸಿತ್ತು. ಅನೂಪ್ ಭಂಡಾರಿ ಮತ್ತು ನಿರೂಪ್ ಭಂಡಾರಿ ಸೋದರರ ಸಾರಥ್ಯದಲ್ಲಿ ಮೂಡಿಬಂದಿದ್ದ ರಂಗಿತರಂಗ ಚಿತ್ರವನ್ನು ಕರುನಾಡಿನ ಜನ ಮೆಚ್ಚಿಕೊಂಡಿದ್ದರು. ಇದನ್ನೂ ಓದಿ: 2018ರಲ್ಲಿ ಸಿನಿಮಾರಂಗ ಕಳೆದುಕೊಂಡ ಕಲಾವಿದರು

    ಇದೇ ಜೋಡಿಯ ಮತ್ತೊಂದು ಚಿತ್ರ ರಾಜರಥ 2018 ಏಪ್ರಿಲ್ ನಲ್ಲಿ ಬಿಡುಗಡೆಗೆ ಸಿದ್ಧಗೊಂಡಿತ್ತು. ಸಿನಿಮಾ ಪ್ರಮೋಷನ್ ಗಾಗಿ ಆರ್.ಜೆ. ರ್ಯಾಪಿಡ್ ರಶ್ಮಿ ನಡೆಸಿಕೊಡುವ ಯೂಟ್ಯೂಬ್ ಕಾರ್ಯಕ್ರಮದಲ್ಲಿ ಚಿತ್ರ ತಂಡ ಭಾಗಿಯಾಗಿತ್ತು. ಕಾರ್ಯಕ್ರಮದಲ್ಲಿ ಡ್ಯಾಷಿಂಗ್ ಸುತ್ತಿನಲ್ಲಿ ರಶ್ಮಿ, ರಾಜರಥ ಸಿನಿಮಾ ನೋಡದವ್ರು ಡ್ಯಾಶ್ ಎಂದು ಬಿಟ್ಟ ಸ್ಥಳ ತುಂಬುವಂತೆ ಹೇಳಿದರು. ಈ ವೇಳೆ ನಟ ನಿರೂಪ್ ಭಂಡಾರಿ, ಕಚಡಾ, ಲೋಫರ್ ನನ್ನ್ಮಕ್ಕಳು ಅಂತಾ ಹೇಳಿದ್ದು ದೊಡ್ಡ ವಿವಾದವಾಗಿತ್ತು. ಕೊನೆಗೆ ರಶ್ಮಿ, ನಟ ನಿರೂಪ್ ಭಂಡಾರಿ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಚಲನಚಿತ್ರ ಮಂಡಳಿಯಲ್ಲಿ ಸುದ್ದಿಗೋಷ್ಠಿ ಕರೆದು ಕ್ಷಮೆ ಕೇಳಿದರು.

    3. ಸಲ್ಮಾನ್ ಖಾನ್:
    ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ದೋಷಿ ಎಂದು ಜೋಧಪುರ ಸಿಜೆಎಂ ಕೋರ್ಟ್ ತೀರ್ಪು ನೀಡಿತ್ತು. 5 ವರ್ಷ ಶಿಕ್ಷೆಗೆ ಒಳಗಾಗಿದ್ದ ಸಲ್ಮಾನ್‍ಗೆ ನ್ಯಾಯಾಧೀಶ ರವೀಂಧರ್ ಜೋಶಿ ಅವರು ಷರತ್ತು ಬದ್ಧ ಜಾಮೀನು ನೀಡಿದ್ದರು. 50 ಸಾವಿರ ರೂ. ಎರಡು ಬಾಂಡ್ ಗಳನ್ನು ಸಲ್ಲಿಸಬೇಕು. ಪ್ರಕರಣದ ಇತರೆ ಆರೋಪಿಗಳಾದ ಸೈಫ್ ಆಲಿ ಖಾನ್, ಟಬು, ನೀಲಂ, ಸೋನಾಲಿ ಬೇಂದ್ರೆ ಸೇರಿದಂತೆ 6 ಜನರನ್ನು ಕೋರ್ಟ್ ಖುಲಾಸೆಗೊಳಿಸಿತ್ತು.

    4. ರಕ್ಷಿತ್-ರಶ್ಮಿಕಾ ಬ್ರೇಕಪ್
    2016 ಡಿಸೆಂಬರ್ ನಲ್ಲಿ ಬಿಡುಗಡೆಗೊಂಡ ಚಿತ್ರ ಕಿರಿಕ್ ಪಾರ್ಟಿ. ಈ ಚಿತ್ರದ ಮೂಲಕ ಹೊರಬಂದ ಮುದ್ದಾದ ಜೋಡಿಯೇ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ. ಅಭೂತಪೂರ್ವ ಯಶಸ್ಸು ಕಂಡ ಈ ಸಿನಿಮಾದಲ್ಲಿ ಕರ್ಣ ಮತ್ತು ಸಾನ್ವಿ ಪಾತ್ರಧಾರಿಗಳು ಕರುನಾಡಿದ ಜನಮನದಲ್ಲಿ ಅಚ್ಚು ಉಳಿದಿದ್ದಾರೆ. ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ನಡುವೆ ಪ್ರೇಮ ಚಿಗುರಿ ನಿಶ್ಚಿತಾರ್ಥದ ಉಂಗುರವನ್ನ ಪರಸ್ಪರ ಬದಲಿಸಿಕೊಳ್ಳುವ ಮುಂದೆ ಮದುವೆ ಆಗಲಿದ್ದೇವೆ ಅಂತಾ ಜೋಡಿ ಹೇಳಿಕೊಂಡಿತ್ತು. ಮೊದಲ ಸಿನಿಮಾದಲ್ಲಿ ನಿರ್ದೇಶಕರು ಮತ್ತು ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದ್ದ ರಶ್ಮಿಕಾರಿಗೆ ಸಾಲು ಸಾಲು ಸಿನಿಮಾಗಳು ಅರಸಿ ಬಂದವು. ಪುನೀತ್ ರಾಜ್‍ಕುಮಾರ್, ಗಣೇಶ್, ತೆಲುಗಿನ ವಿಜಯದೇವರಕೊಂಡ ಜೊತೆಯಲ್ಲಿ ನಟಿಸಿ ಸೈ ಅನ್ನಿಸಿಕೊಂಡರು. ಇದನ್ನೂ ಓದಿ: 2018ರ ಸಿನಿ ಲೋಕದ ಸುಂದರ ಪ್ರೇಮ ಕಹಾನಿಗಳು

    ಅದೇಕೋ ಏನೋ ಗೊತ್ತಿಲ್ಲ ಅಕ್ಟೋಬರ್ ತಿಂಗಳಲ್ಲಿ ರಶ್ಮಿಕಾ ಮತ್ತು ರಕ್ಷಿತ್ ದೂರವಾಗ್ತಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಗಲ್ಲಿಗಳಲ್ಲಿ ಹರಿದಾಡಿತು. ಕೊನೆಗೆ ರಶ್ಮಿಕಾರ ತಾಯಿ ಹೌದು, ಅವರಿಬ್ಬರು ಬೇರೆ ಆಗ್ತಿದ್ದಾರೆ ಎಂಬ ಸ್ಪಷ್ಟನೆಯನ್ನು ನೀಡಿದರು. ಈ ಬಗ್ಗೆ ಇಬ್ಬರು ಕಲಾವಿದರು ಕಾರಣಾಂತರಗಳಿಂದ ದೂರವಾಗಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದರು.

    5. ದರ್ಶನ್ ಕಾರ್ ಅಪಘಾತ:
    ಮೈಸೂರಿನ ಹೊರವಲಯದ ಹಿನಕಲ್ ಬಳಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತ ನಡೆದಿದ್ದು, ದರ್ಶನ್ ಅವರ ಬಲಗೈ ಮೂಳೆ ಮುರಿದಿತ್ತು. ಬಳಿಕ ಅವರು ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಹಿರಿಯ ನಟ ದೇವರಾಜ್, ಅವರ ಮಗ ಪ್ರಜ್ವಲ್ ದೇವರಾಜ್ ಅವರು ಕೂಡ ಅಪಘಾತದಲ್ಲಿ ಗಾಯಗೊಂಡಿದ್ದರು.

    6. ವೀರ ಮದಕರಿ ವಿವಾದ:
    ಸುದೀಪ್ ಮತ್ತು ದರ್ಶನ್ ಒಂದೇ ಕತೆಯ ಸಿನಿಮಾದಲ್ಲಿ ನಟನೆಗೆ ಒಪ್ಪಿಕೊಂಡಿದ್ದಾರೆ. ಎರಡು ಸಿನಿಮಾಗಳ ರೂಪದಲ್ಲಿ ಚಿತ್ರದುರ್ಗದ ಪಾಳೆಗಾರ ವೀರ ಮದಕರಿ ನಾಯಕ ಪಾತ್ರದಲ್ಲಿ ದರ್ಶನ್ ಮತ್ತು ಸುದೀಪ್ ನಟಿಸುತ್ತಿದ್ದಾರೆ. ಸುದೀಪ್ ಟ್ವಿಟ್ಟರ್ ಪತ್ನಿ ಪ್ರಿಯಾರ ನಿರ್ಮಾಣದಲ್ಲಿ ವೀರ ಮದಕರಿ ಆಗಲಿದ್ದೇನೆ ಎಂದು ತಿಳಿಸಿದ್ದರು. ಇತ್ತ ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ರಾಜೇಂದ್ರ ಸಿಂಗ್‍ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾದಲ್ಲಿ ದರ್ಶನ್ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಹೊರ ಬಂತು. ಈ ವೇಳೆ ನಾಯಕ ನಟರ ಅಭಿಮಾನಿಗಳಲ್ಲಿ ಗೊಂದಲ ಉಂಟಾಯಿತು.

    ರಾಕ್‍ಲೈನ್ ವೆಂಕಟೇಶ್ ಅವರು `ಗಂಡುಗಲಿ ಮದಕರಿ ನಾಯಕ’ ಸಿನಿಮಾ ನಿರ್ಮಾಣದಲ್ಲಿ ತೊಡಗಿದ್ದಾರೆ. ದರ್ಶನ್ ಚಿತ್ರದ ನಾಯಕನಾಗಿ ನಟಿಸಲಿದ್ದಾರೆ. ರಾಜೇಂದ್ರಸಿಂಗ್ ಬಾಬು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಸುದೀಪ್ ಅಭಿನಯದ ಈ ಚಿತ್ರಕ್ಕೆ `ದುರ್ಗದ ಹುಲಿ’ ಅಥವಾ `ನಾಯಕ’ ಹೆಸರನ್ನು ಇಡಲು ಚರ್ಚೆ ನಡೆದಿದ್ದು, `ದುರ್ಗದ ಹುಲಿ’ ಟೈಟಲ್ ಅಂತಿಮಗೊಳ್ಳುವ ಸಾಧ್ಯತೆಯಿದೆ. ಕೆಲ ದಿನಗಳಿಂದ ಈ ಚಿತ್ರದ ಕೆಲಸ ಆರಂಭಗೊಂಡಿದ್ದು, ವಿಶೇಷವಾಗಿ ಸುದೀಪ್ ಅವರೇ ಚಿತ್ರದ ನಿರ್ದೇಶನ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ

    7. ಚಂದನವನದಲ್ಲಿ ಮೀಟೂ ಸಂಚಲನ:
    ಈ ವರ್ಷ ಚಂದನವನವನ್ನೇ ಅಲುಗಾಡಿಸಿದ್ದು, ಮೀಟೂ ಆರೋಪ. ನಟಿ ಶೃತಿ ಹರಿಹರನ್ ದಕ್ಷಿಣ ಭಾರತದ ಹಿರಿಯ ನಟ ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳದ ಆರೋಪ ದೊಡ್ಡ ಸದ್ದು ಮಾಡಿತ್ತು. ವಿಸ್ಮಯ ಸಿನಿಮಾ ಚಿತ್ರೀಕರಣ ವೇಳೆ ಅರ್ಜುನ್ ಸರ್ಜಾ ನನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದರು. ಡಿನ್ನರ್ ಗೆ ಅಂತಾ ಕರೆದಿದ್ದರು ಎಂದು ಪತ್ರಿಕೆ ನೀಡಿದ ಸಂದರ್ಶನದಲ್ಲಿ ಹೊರಹಾಕಿದ್ದರು. ಈ ಸಂಬಂಧ ದಿವಂಗತ ಅಂಬರೀಶ್ ಅವರ ನೇತೃತ್ವದಲ್ಲಿ ಸಂಧಾನ ಸಭೆಯನ್ನ ಮಾಡಲಾಗಿತ್ತು. ಆದ್ರೆ ಅರ್ಜುನ್ ಸರ್ಜಾ ಮತ್ತು ಶೃತಿ ಹರಿಹರನ್ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದರಿಂದ ಸಂಧಾನ ಸಭೆ ವಿಫಲವಾಗಿತ್ತು. ನಂತರ ಪ್ರಕರಣ ಹಲವು ಏರಳಿತ ಕಂಡು ತನಿಖೆ ಹಾದಿಯಲ್ಲಿದೆ.

    ಮೀಟೂ ವೇದಿಕೆಯಲ್ಲಿ ನಟಿ ಸಂಗೀತಾ ಭಟ್ ಮತ್ತು ಸಂಜನಾ ಗಲ್ರಾನಿ ತಮಗಾದ ಲೈಂಗಿಕ ಕಿರುಕುಳವನ್ನು ಹಂಚಿಕೊಂಡಿದ್ದರು. ಸಿನಿಮಾದಿಂದ ದೂರ ಉಳಿದುಕೊಂಡಿರುವ ಸಂಗೀತಾ ಭಟ್, ಎಲ್ಲಿಯೂ ಕಿರುಕುಳ ನೀಡಿದ ನಿರ್ಮಾಪಕ ಅಥವಾ ವ್ಯಕ್ತಿಯ ಹೆಸರನ್ನು ಬಹಿರಂಗಗೊಳಿಸಿರಲಿಲ್ಲ. ಇತ್ತ ಸಂಜನಾ ಗಲ್ರಾನಿ ತಮಗೆ ಗಂಡ-ಹೆಂಡತಿ ಸಿನಿಮಾದಲ್ಲಿ ಅನಾವಶ್ಯಕವಾಗಿ ಕಿಸ್ ಸೀನ್ ಮಾಡಿಸಲಾಗಿತ್ತು ಎಂದು ನಿರ್ದೇಶಕ ರವಿ ಶ್ರೀವಾತ್ಸ ವಿರುದ್ಧ ಆರೋಪ ಮಾಡಿದ್ದರು. ಈ ಸಂಬಂಧ ರವಿ ಶ್ರೀವಾತ್ಸ್ ಪಿಲ್ಮ್ ಚೇಂಬರ್ ನಲ್ಲಿ ದೂರು ದಾಖಲಿಸಿದ್ದರು. ಫಿಲ್ಮ್ ಚೆಂಬರ್ ನಡೆದ ಸಭೆ ನಡೆದಿತ್ತು. ಕೊನೆಗೆ ಹಿರಿಯರ ಸಲಹೆಯಂತೆ ಸಂಜನಾ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದರು. ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ಶೃತಿ ಹರಿಹರನ್ ಗೆ ಬೆಂಬಲ ವ್ಯಕ್ತಪಡಿಸಿದ್ದ ನಟ ಚೇತನ್ ವಿರುದ್ಧ ಐಶ್ವರ್ಯಾ ಸರ್ಜಾ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

    8. ದುನಿಯಾ ವಿಜಯ್:
    ಸೆಪ್ಟೆಂಬರ್ 22ರ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಕಾಂಪಿಟೇಷನ್ ನೋಡಲು ದುನಿಯಾ ವಿಜಿ ಮತ್ತು ತಂಡ ಬಂದಿತ್ತು. ಈ ವೇಳೆ ಜಿಮ್ ಟ್ರೈನರ್ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿದ್ದರು. ದುನಿಯಾ ವಿಜಿ, ಮಣಿ ಮತ್ತು ಪ್ರಸಾದ್ ಸಹಚರರಿಂದ ಈ ಕೃತ್ಯ ನಡೆದಿತ್ತು.

    ಸೆಪ್ಟೆಂಬರ್ 23ರಂದು ಬಂಧನಕ್ಕೊಳಗಾಗಿದ್ದ ದುನಿಯಾ ವಿಜಿಗೆ ಅಕ್ಟೋಬರ್ 1ರಂದು 70ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು. ದುನಿಯಾ ವಿಜಯ್ ಮೇಲೆ ಕಿಡ್ನಾಪ್, ಹಲ್ಲೆ, ಕೊಲೆ ಜೀವ ಬೆದರಿಕೆ, ಐಪಿಸಿ ಸೆಕ್ಷನ್ 365 (ಕಿಡ್ನಾಪ್), 342 (ಅಕ್ರಮ ಬಂಧನ), 325 (ಹಲ್ಲೆ), 506 (ಕೊಲೆ ಬೆದರಿಕೆ) ಪ್ರಕರಣ ದಾಖಲಾಗಿದೆ.

    ಜಿಮ್ ಟ್ರೈನರ್ ಮೇಲೆ ಹಲ್ಲೆ ಮಾಡಿ ಜೈಲಿನಿಂದ ಹೊರ ಬಂದ ನಟ ದುನಿಯಾ ವಿಜಯ್ ಪತ್ನಿಯರಿಬ್ಬರ ಜಗಳವೇ ದೊಡ್ಡ ತಲೆನೋವಾಗಿತ್ತು. ವಿಜಯ್ ಜೈಲು ಸೇರಿದಾಗ ಮನೆಗೆ ಬಂದ ಮೊದಲ ಪತ್ನಿ ನಾಗರತ್ನ ಸವತಿ ಕೀರ್ತಿ ಗೌಡರ ಮೇಲೆ ಹಲ್ಲೆ ನಡೆಸಿದ್ದರು. ವಿಜಯ್ ಮೊದಲ ಪುತ್ರಿ ಚಿಕ್ಕಮ್ಮಳಿಂದ ಹಲ್ಲೆಗೆ ಒಳಗಾಗಿದ್ದೇನೆ ಎಂಬ ದೂರನ್ನು ಸಲ್ಲಿಸಿದರು. ಇದೇ ರೀತಿ ಒಬ್ಬರ ಮೇಲೊಬ್ಬರು ದೂರು ನೀಡುತ್ತಾ ಸುದ್ದಿಯಾದ್ರು.

    9. ವಿಷ್ಣು ಸ್ಮಾರಕ ವಿವಾದ:
    ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಕೂಗು ಕೇಳಿ ಬಂತು. ಸರ್ಕಾರವು ಸಹ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಗೆಯನ್ನು ಸೂಚಿಸಿತು. ಈ ಎಲ್ಲ ಬೆಳವಣಿಗೆಯ ನಂತರ ದಿ.ವಿಷ್ಣುವರ್ದನ್ ಅಳಿಯ ಅನಿರುದ್ಧ, ಅಪ್ಪಾಜಿ ಸ್ಮಾರಕ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು. ಈ ಹೇಳಿಕೆಯ ಬೆನ್ನಲ್ಲೇ ವಿಷ್ಣು ಸ್ಮಾರಕ ವಿಷಯ ಜೀವವನ್ನು ಪಡೆದುಕೊಂಡಿತು.

    ಹಲವು ಬೆಳವಣಿಗೆಯನ್ನು ಕಂಡ ಈ ವಿವಾದವನ್ನು ಸಿಎಂ ಕುಮಾರಸ್ವಾಮಿ ಆದಷ್ಟು ಬೇಗ ಪರಿಹರಿಸಲಾಗುವುದು ಅಂತ ಭರವಸೆ ನೀಡಿದ್ದಾರೆ. ಇತ್ತ ವಿಷ್ಣು ಕುಟುಂಬ ಡಿಸೆಂಬರ್ ವರೆಗೂ ಸಮಯವನ್ನು ಸರ್ಕಾರಕ್ಕೆ ನೀಡಿದೆ.

    10. ದಿ ವಿಲನ್ ಮತ್ತು ಕೆಜಿಎಫ್: ಈ ವರ್ಷದ ಚಂದನವನದಲ್ಲಿ ಅತಿ ಹೆಚ್ಚು ಸದ್ದು ಮಾಡಿದ್ದ ಚಿತ್ರಗಳು ದಿ ವಿಲನ್ ಮತ್ತು ಕೆಜಿಎಫ್. ನವೆಂಬರ್ ನಲ್ಲಿ ಬಿಡುಗಡೆಯಾದ ದಿ ವಿಲನ್ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಳ್ತು. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಚಿತ್ರದಲ್ಲಿ ಸುದೀಪ್, ಶಿವರಾಜ್ ಕುಮಾರ್, ಆ್ಯಮಿ ಜಾಕ್ಸನ್ ಸೇರಿದಂತೆ ಬಹುತಾರಾಗಣವನ್ನ ಹೊಂದಿತ್ತು. ಇಂದಿಗೂ ದಿ ವಿಲನ್ ಹಾಡುಗಳು ಬಹುಪಾಲರ ಮೆಚ್ಚುಗೆಯನ್ನು ಪಡೆದುಕೊಂಡಿವೆ.

    ರಾಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್ ಇಡೀ ಭಾರತವೇ ಸ್ಯಾಂಡಲ್‍ವುಡ್ ನತ್ತ ತಿರುಗಿ ನೋಡುವಂತೆ ಮಾಡಿತು. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದ ಕೆಜಿಎಫ್ 100 ಕೋಟಿ ಗಳಿಸಿದ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv