Tag: ಕೆಜಿಎಫ್

  • ಯಶ್ ಜೊತೆ ಡ್ಯಾನ್ಸ್ ಮಾಡಿ ರಾಕಿಂಗ್ ಸ್ಟಾರ್ ಬಗ್ಗೆ ತಮನ್ನಾ ಟ್ವೀಟ್!

    ಯಶ್ ಜೊತೆ ಡ್ಯಾನ್ಸ್ ಮಾಡಿ ರಾಕಿಂಗ್ ಸ್ಟಾರ್ ಬಗ್ಗೆ ತಮನ್ನಾ ಟ್ವೀಟ್!

    ಬೆಂಗಳೂರು: ಕೆಜಿಎಫ್ ಚಿತ್ರದಲ್ಲಿ ಯಶ್ ಜೊತೆ ಡ್ಯಾನ್ಸ್ ಮಾಡಿದ ಬಹುಭಾಷಾ ನಟಿ ತಮನ್ನಾ ಭಾಟಿಯಾ ರಾಕಿಂಗ್ ಸ್ಟಾರ್ ಬಗ್ಗೆ ಟ್ವೀಟ್ ಮಾಡಿದ್ದಾರೆ.

    ಯಶ್ ಜೊತೆ ತಮನ್ನಾ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಈ ಹಾಡಿನ ಚಿತ್ರೀಕರಣ ಪೂರ್ಣಗೊಂಡಿದೆ. ಸದ್ಯ ತಮನ್ನಾ ಯಶ್ ಜೊತೆ ಡ್ಯಾನ್ಸ್ ಮಾಡಿದ ಫಸ್ಟ್ ಲುಕ್ ಅನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

    “ಯಶ್ ಜೊತೆ ಜೋಕೆ ಹಾಡಿಗೆ ಚಿತ್ರೀಕರಣ ಮಾಡುವಾಗ ಒಳ್ಳೆಯ ಸಮಯ ಕಳೆದಿದ್ದೇನೆ. ಇಡೀ ಚಿತ್ರತಂಡ ನನಗೆ ಮನೆಯ ಅನುಭವವನ್ನು ನೀಡಿತು. ಎಲ್ಲರಿಗೂ ಧನ್ಯವಾದ. ಸದ್ಯ ಎಲ್ಲರೂ ಕೆಜಿಎಫ್ ಚಿತ್ರವನ್ನು ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ನೋಡಲು ನಿಮ್ಮ ಹತ್ತಿರದ ಚಿತ್ರಮಂದಿರಕ್ಕೆ ಭೇಟಿ ನೀಡಿ” ಎಂದು ಟ್ವೀಟ್ ಮಾಡಿದ್ದಾರೆ.

    ಕೆಜಿಎಫ್ ಸಿನಿಮಾದಲ್ಲಿ ಹಳೆಯ ಹಾಡು `ಜೋಕೆ ನಾನು ಬಳ್ಳಿಯ ಮಿಂಚು’ ಹಾಡಿಗೆ ತಮನ್ನಾ ಸೊಂಟ ಬಳುಕಿಸಿದ್ದಾರೆ. 1970ರಲ್ಲಿ ಬಿಡುಗಡೆಯಾದ `ಪರೋಪಕಾರಿ’ ಸಿನಿಮಾದಲ್ಲಿ ಈ ಹಾಡು ಇದೆ. ಈ ಹಾಡು ಇಂದಿಗೂ ಟ್ರೆಂಡ್ ಆಗಿದ್ದು, ಕೆಜಿಎಫ್ ಸಿನಿಮಾದಲ್ಲಿ ರೀ-ಕ್ರಿಯೇಟ್ ಮಾಡಲಾಗುತ್ತಿದೆ. ಈ ಹಾಡಿಗೆ ಯಶ್ ಮತ್ತು ತಮನ್ನಾ ಜೊತೆಯಾಗಿ ಡ್ಯಾನ್ಸ್ ಮಾಡಿದ್ದಾರೆ.

    ಅನೇಕ ದಿನಗಳಿಂದ ಐಟಂ ಹಾಡಿಗೆ ನೃತ್ಯ ಮಾಡಲು ನಟಿಯರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಈ ಹಿಂದೆ ಕಾಜಲ್ ಅಗರ್ವಾಲ್, ಲಕ್ಷ್ಮಿ ರೈ, ತಮನ್ನಾ ಹಾಗೂ ನೊರಾ ಫತೇಹಿ ನಟಿಯರಲ್ಲಿ ಒಬ್ಬರು ಯಶ್ ಜೊತೆ ಕಾಣಿಸಿಕೊಳ್ಳಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ಈಗ ಇವರಲ್ಲಿ ತಮನ್ನಾ ಅವರನ್ನು ಚಿತ್ರತಂಡ ಆಯ್ಕೆ ಮಾಡಿದೆ ಎಂದು ಕೆಜಿಎಫ್ ಚಿತ್ರದ ನಿರ್ದೇಶನ ಟ್ವೀಟ್ ಮಾಡಿದ್ರು.

    ತಮನ್ನಾ ಈ ಹಿಂದೆ ನಟ ನಿಖಿಲ್ ಕುಮಾರ್ ಅಭಿನಯದ `ಜಾಗ್ವಾರ್’ ಸಿನಿಮಾದ ಹಾಡಿನಲ್ಲಿ ಅಭಿನಯಿಸಿದ್ದರು. ಈಗ ಯಶ್ ಜೊತೆ ನಟಿಸುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಎರಡನೇ ಬಾರಿಗೆ ಅಭಿನಯಿಸುತ್ತಿದ್ದಾರೆ. ಕೆಜಿಎಫ್ ಸಿನಿಮಾವನ್ನು `ಉಗ್ರಂ’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದು, ಹೊಂಬಾಳೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿದೆ.

  • ಕೋಲಾರ ಚಿನ್ನದ ಗಣಿಗೆ ಇಳಿದಿದ್ರು ಕರುಣಾನಿಧಿ

    ಕೋಲಾರ ಚಿನ್ನದ ಗಣಿಗೆ ಇಳಿದಿದ್ರು ಕರುಣಾನಿಧಿ

    ಕೋಲಾರ: ಕರ್ನಾಟಕದಲ್ಲಿಯೂ ಡಿಎಂಕೆ ಪಕ್ಷದ ಅಸ್ತಿತ್ವ ಸಾಧಿಸುವ ಉದ್ದೇಶವನ್ನು ಕರುಣಾನಿಧಿ ಹೊಂದಿದ್ದರು. ಹೀಗಾಗಿ ಜಿಲ್ಲೆಯ ಕೆಜಿಎಫ್‍ಗೆ ಮೂರು ಬಾರಿ ಭೇಟಿ ನೀಡಿದ್ದರಂತೆ.

    ಜಿಲ್ಲೆಯಲ್ಲಿ ಡಿಎಂಕೆ ಬೆಳವಣಿಗೆ ಉದ್ದೇಶದಿಂದ ಕೆಜಿಎಫ್‍ನ ಪಕ್ಷ ಮುಖಂಡರು ಕರುಣಾನಿಧಿ ಅವರಿಗೆ ಆಮಂತ್ರಣ ನೀಡುತ್ತಿದ್ದರಂತೆ. ಹೀಗಾಗಿ ಅವರು 1954 ಜುಲೈ 6ರಂದು ಕಾರ್ಯಕರ್ತರ ಸಭೆ ಹಾಗೂ 1972ರ ಅಕ್ಟೋಬರ್ 4ರಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಪಕ್ಷಕ್ಕೆ ಬೆಂಬಲ ನೀಡುವಂತೆ ಜಿಲ್ಲೆಯ ತಮಿಳು ಭಾಷಿಗರ ಮನವೊಲಿಸಿದ್ದರು.

    1972ರಲ್ಲಿ ಹೆನ್ರೀಸ್ ಬಳಿಯ ಚಿನ್ನದ ಗಣಿಗೆ ಭೇಟಿ ನೀಡಿ, ಕೆಳಗೆ ಇಳಿದಿದ್ದರು. ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಜೊತೆಗೆ ಮಾತನಾಡಿ, ಕಾರ್ಮಿಕರೊಬ್ಬರ ಟೋಪಿ ಕೇಳಿ ಪಡೆದು, ಹಾಕಿಕೊಂಡು ಫೋಟೋ ತೆಗೆಸಿಕೊಂಡಿದ್ದರು. ಜೊತೆಗೆ ಅಂದು ರಾಬರ್ಟ್ ಸನ್ ಪೇಟೆಯ ಕೃಷ್ಣ ಭವನ್ ವಸತಿ ಗೃಹದಲ್ಲಿ ತಂಗಿದ್ದರೆಂಬ ಮಾಹಿತಿಯಿದೆ.

    1984ರಲ್ಲಿ ರಾಬರ್ಟ್ ಸನ್ ಪೇಟೆಯಲ್ಲಿ ನಡೆದ ಡಿಎಂಕೆ ಸಮಾವೇಶದಲ್ಲಿ ಮತ್ತೊಮ್ಮೆ ಭಾಗವಹಿಸಿದ್ದರು. ಅಂದು ಅಭಿಮಾನಿಗಳು ಬೈಕ್ ಜಾಥಾದ ಮೂಲಕ ಬೇತಮಂಗಲದಿಂದ ಕಾರ್ಯಕ್ರಮ ವೇದಿಕೆಗೆ ಕರೆ ತಂದಿದ್ದರು. ಸಮಾವೇಶದಲ್ಲಿ ಮಾತನಾಡಿದ ಕರುಣಾನಿಧಿ ಅವರು, ನಿಮ್ಮನ್ನು ನೀವು ಈ ಮಣ್ಣಿಗೆ ತಕ್ಕಂತೆ ಬದಲಾಯಿಸಿಕೊಳ್ಳಿ. ಮಾತೃ ಭಾಷೆ ತಮಿಳು ಆಗಿದ್ದರೂ ಅದು ನಿಮ್ಮ ಮನದಲ್ಲಿ ಇರಲಿ ಎಂದು ಹೇಳಿ ತಮಿಳು ಭಾಷಿಕರ ಮನ ಗೆದ್ದಿದ್ದರು ಎಂದು ವರದಿಯಾಗಿದೆ.

    ತಮಿಳುನಾಡಿಗೆ ಸಮೀಪವಿರುವ ಕೆಜಿಎಫ್‍ನಲ್ಲಿ ಈಗಲೂ ಎಂ.ಜಿ.ರಾಮಚಂದ್ರನ್ ಹಾಗೂ ಕರುಣಾನಿಧಿ ಅಪಾರ ಬೆಂಬಲಿಗರು ಇದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • `ಕೆಜಿಎಫ್’ ಯಶ್ ಜೊತೆ `ಜೋಕೆ’ ಹಾಡಿಗೆ ಸೊಂಟ ಬಳುಕಿಸಲು ನಟಿ ಆಯ್ಕೆ

    `ಕೆಜಿಎಫ್’ ಯಶ್ ಜೊತೆ `ಜೋಕೆ’ ಹಾಡಿಗೆ ಸೊಂಟ ಬಳುಕಿಸಲು ನಟಿ ಆಯ್ಕೆ

    ಬೆಂಗಳೂರು: ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ಅಭಿನಯದ `ಕೆಜಿಎಫ್’ ಸಿನಿಮಾದ ಐಟಂ ಹಾಡೊಂದಕ್ಕೆ ಯಶ್ ಜೊತೆ ಹೆಜ್ಜೆ ಹಾಕಲು ನಟಿಯ ಹುಡುಕಾಟ ನಡೆಯುತ್ತಿತ್ತು. ಈಗ ಕೊನೆಗೂ ನಟಿ ಆಯ್ಕೆಯಾಗಿದ್ದಾರೆ.

    ಕೆಜಿಎಫ್ ನಲ್ಲಿ ಯಶ್ ಜೊತೆ ಡ್ಯಾನ್ಸ್ ಮಾಡಲು ಬಾಲಿವುಡ್ ಬೆಡಗಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸ್ವತಃ ಕೆಜಿಎಫ್ ನಿರ್ದೇಶಕರೆ ಟ್ವೀಟ್ ಮಾಡಿ ಸ್ಪಷ್ಟ ಪಡಿಸಿದ್ದಾರೆ. ಅನೇಕ ದಿನಗಳಿಂದ ಐಟಂ ಹಾಡಿಗೆ ನೃತ್ಯ ಮಾಡಲು ನಟಿಯರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಈ ಹಿಂದೆ ಕಾಜಲ್ ಅಗರ್ವಾಲ್, ಲಕ್ಷ್ಮಿ ರೈ, ತಮನ್ನಾ ಹಾಗೂ ನೊರಾ ಫತೇಹಿ ನಟಿಯರಲ್ಲಿ ಒಬ್ಬರು ಯಶ್ ಜೊತೆ ಕಾಣಿಸಿಕೊಳ್ಳಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿತ್ತು. ಈಗ ಇವರಲ್ಲಿ ತಮನ್ನಾ ಅವರನ್ನು ಚಿತ್ರತಂಡ ಆಯ್ಕೆ ಮಾಡಿದೆ.

    ಕೆಜಿಎಫ್ ಸಿನಿಮಾದಲ್ಲಿ ಹಳೆಯ ಹಾಡು `ಜೋಕೆ ನಾನು ಬಳ್ಳಿಯ ಮಿಂಚು’ ಸಾಂಗಿಗೆ ತಮನ್ನಾ ಸೊಂಟ ಬಳುಕಿಸಲಿದ್ದಾರೆ. 1970 ರಲ್ಲಿ ಬಿಡುಗಡೆಯಾದ `ಪರೋಪಕಾರಿ’ ಸಿನಿಮಾದಲ್ಲಿ ಈ ಹಾಡು ಇದೆ. ಈ ಹಾಡು ಇಂದಿಗೂ ಟ್ರೆಂಡ್ ಆಗಿದೆ. ಈ ಹಾಡನ್ನು ಕೆಜಿಎಫ್ ಸಿನಿಮಾದಲ್ಲಿ ರೀ ಕ್ರಿಯೇಟ್ ಮಾಡಲಾಗುತ್ತಿದೆ. ಈ ಹಾಡಿಗೆ ಯಶ್ ಮತ್ತು ತಮನ್ನಾ ಜೊತೆಯಾಗಿ ಡ್ಯಾನ್ಸ್ ಮಾಡಲಿದ್ದಾರೆ.

    ತಮನ್ನಾ ಈ ಹಿಂದೆ ನಟ ನಿಖಿಲ್‍ ಕುಮಾರ್ ಅಭಿನಯದ `ಜಾಗ್ವಾರ್’ ಸಿನಿಮಾದಲ್ಲಿ ಹಾಡಿನಲ್ಲಿ ಅಭಿನಯಿಸಿದ್ದರು. ಈಗ ಯಶ್ ಜೊತೆ ನಟಿಸುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಎರಡನೇ ಬಾರಿಗೆ ಅಭಿನಯಿಸುತ್ತಿದ್ದಾರೆ. ಕೆಜಿಎಫ್ ಸಿನಿಮಾವನ್ನು `ಉಗ್ರಂ’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದು, ಹೊಂಬಾಳೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ರಾಕಿಂಗ್ ಸ್ಟಾರ್ ಡೆಡಿಕೇಶನ್ ಬಗ್ಗೆ ರಿಯಲ್ ಸ್ಟಾರ್ ಟ್ವೀಟ್!

    ರಾಕಿಂಗ್ ಸ್ಟಾರ್ ಡೆಡಿಕೇಶನ್ ಬಗ್ಗೆ ರಿಯಲ್ ಸ್ಟಾರ್ ಟ್ವೀಟ್!

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ 2 ವರ್ಷದಿಂದ ‘ಕೆಜಿಎಫ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಕ್ಕಾಗಿ ಯಶ್ ತೋರಿಸುತ್ತಿರುವ ಡೆಡಿಕೇಶನ್ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಟ್ವೀಟ್ ಮಾಡಿದ್ದಾರೆ.

    “ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟ ಯಶ್. ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಎರಡು ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಒಂದೇ ಸಿನಿಮಾಗೆ ಅವರು ಇಷ್ಟರ ಮಟ್ಟಿಗೆ ಡೆಡಿಕೇಶನ್ ಇಟ್ಟಿರುವುದು ನಂಬಲು ಸಾಧ್ಯವಿಲ್ಲ. ನಿಮ್ಮ ಡೆಡಿಕೇಶನ್ ಅದ್ಭುತ ಯಶ್. ನಿಮ್ಮಿಂದ ಸಾಕಷ್ಟು ವಿಷಯ ಕಲಿಯುತ್ತಿದ್ದೇನೆ” ಎಂದು ರಿಯಲ್ ಸ್ಟಾರ್ ಉಪೇಂದ್ರ ಟ್ವೀಟ್ ಮಾಡಿ ಹೊಗಳಿದ್ದಾರೆ.

    ಈ ಹಿಂದೆ ಖಾಸಗಿ ಕಾರ್ಯಕ್ರಮದಲ್ಲಿ ಯಶ್ ತಾವು ಚಿತ್ರರಂಗಕ್ಕೆ ಬರಲು ಉಪೇಂದ್ರ ಅವರೇ ಸ್ಫೂರ್ತಿ. ಚಿತ್ರರಂಗಕ್ಕೆ ಬರಲು ಅವರ ಸಿನಿಮಾಗಳು ನನಗೆ ಪ್ರಾಭಾವ ಬೀರಿದೆ. ಅಲ್ಲದೇ ನಾನು ಅವರ ಅಭಿಮಾನಿ ಎಂದು ಹೇಳಿಕೊಂಡಿದ್ದರು.

    ಈಗ ಯಶ್ ತಮ್ಮ ಕೆಜಿಎಫ್ ಚಿತ್ರಕ್ಕಾಗಿ ತೋರಿಸುತ್ತಿರುವ ಡೆಡಿಕೇಶನ್ ಅನ್ನು ರಿಯಲ್ ಸ್ಟಾರ್ ಉಪೇಂದ್ರ ಮೆಚ್ಚಿ ಯಶ್ ಬಗ್ಗೆ ತಮ್ಮ ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

    ಸ್ಯಾಂಡಲ್‍ವುಡ್‍ನ ಬಹು ನಿರೀಕ್ಷಿತ ಕೆಜಿಎಫ್ ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗ ಈ ವರ್ಷ ತೆರೆ ಕಾಣಲಿದೆ ಎಂದು ಹೇಳಲಾಗಿದೆ. ಈ ಚಿತ್ರವನ್ನು ‘ಉಗ್ರಂ’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿದ್ದು, ಹೊಂಬಾಳೆ ಪ್ರೊಡಕ್ಷನ್ ನಲ್ಲಿ ನಿರ್ಮಾಣವಾಗುತ್ತಿದೆ.

  • ಕೆಜಿಎಫ್ ನಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾರೆ ಯಶ್ ವಿಲನ್‍ಗಳು!

    ಕೆಜಿಎಫ್ ನಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾರೆ ಯಶ್ ವಿಲನ್‍ಗಳು!

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯಿಸುತ್ತಿರುವ ಕೆಜಿಎಫ್ ಚಿತ್ರದ ಸೆಟ್‍ನಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಚಿತ್ರದಲ್ಲಿ ಯಶ್ ವಿಲನ್‍ಗಳ ದೊಡ್ಡ ಗುಂಪಿನ ಜೊತೆ ಸೆಣಸಾಡಿದೆ.

    ಸಿನಿಮಾಗಳಲ್ಲಿ ನಾಯಕ ನಟರ ಜೊತೆ ಮೂರ್ನಾಲ್ಕು ಜನ ವಿಲನ್‍ಗಳು ಹೊಡೆದಾಡ್ತಾರೆ. ಆದರೆ ಕೆಜಿಎಫ್ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆ ವಿಲನ್‍ಗಳ ದೊಡ್ಡ ಗುಂಪುವೊಂದು ಹೊಡೆದಾಡಿದೆ ಎಂಬ ಸುದ್ದಿ ಹರಿದಾಡುತ್ತಿದೆ.

    ಕೆಜಿಎಫ್ ಸಿನಿಮಾ ಲಾರ್ಜ್ ಸ್ಕೇಲ್‍ನಲ್ಲಿ ಪಿರಿಯಾಡಿಕ್ ಕಾನ್ಸೆಪ್ಟ್ ನಲ್ಲಿ ತಯಾರಾಗುತ್ತಿದೆ. 70-80ರ ದಶಕದ ಚಿತ್ರದ ಹೀರೋ ಆಗಿ ಯಶ್ ಕಾಣಿಸಿಕೊಳ್ಳುತ್ತಿದ್ದಾರೆ. ಯಶ್ ಪವರ್ ಖದರ್ ಗೆ ಸರಿಹೊಂದುವ ಕಟ್ಟುಮಸ್ತಾದ ದೇಹ ಒಂದೇ ನೋಟಕ್ಕೆ ಸಿನಿಪ್ರಿಯರು ಥ್ರಿಲ್ಲಾಗುವಂತಹ ಖಳನಟರನ್ನು ನಿರ್ದೇಶಕ ಪ್ರಶಾಂತ್ ನೀಲ್ ಹುಡುಕಿ ತಂದಿದ್ದಾರೆ.

    ದೈತ್ಯದೇಹ, ಎಣ್ಣೆಗೆಂಪು ಬಣ್ಣದ ನೂರಾರು ಜನ ವಿಲನ್‍ಗಳು ಕೆಜಿಎಫ್‍ನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಜಬರ್ದಸ್ತ್ ಆಗಿರುವ ಕೆಜಿಎಫ್ ವಿಲನ್‍ಗಳ ಫೋಟೋ ಸಖತ್ ವೈರಲ್ ಆಗುತ್ತಿದೆ. ವಿಶೇಷವೆನೆಂದರೆ ಯಶ್ ಜೊತೆ ಹೊಡೆದಾಡಿರುವ ಎಲ್ಲ ವಿಲನ್‍ಗಳು ಹೊಸ ಪ್ರತಿಭೆಗಳು ಎಂದು ಹೇಳಲಾಗಿದೆ.

    ಹಳೆಯ ಕಲಾವಿದರ ಜೊತೆ ನೂರಾರು ಹೊಸ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಒಟ್ಟಿನಲ್ಲಿ ವಿಲನ್ ಗಳ ಸಂಖ್ಯೆ ಕೆಜಿಎಫ್ ಸಿನಿಮಾದಲ್ಲಿ ದೊಡ್ಡದಿದ್ದು, ರಾಖಿ ಭರ್ಜರಿಯಾಗಿಯೇ ಶತ್ರುಗಳ ಜೊತೆ ಹೊಡೆದಿದ್ದಾರೆ. ಭರಪೂರ ಮನರಂಜನೆ ಜೊತೆಗೆ ಕಿಕ್ ಕೊಡುವ ಸಾಹಸ ದೃಶ್ಯಗಳು ಈ ಸಿನಿಮಾದಲ್ಲಿದೆ ಎಂಬುದು ತಿಳಿದುಬಂದಿದೆ.

  • ಮಕ್ಕಳಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ವೃದ್ಧ ದಂಪತಿ

    ಮಕ್ಕಳಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ವೃದ್ಧ ದಂಪತಿ

    ಕೋಲಾರ: ಜೀವನದಲ್ಲಿ ಜಿಗುಪ್ಸೆಗೊಂಡ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆ ಕೆಜಿಎಫ್ ನಗರದ ಅಬುಬಜಾರ್ ಕಾಲೊನಿಯಲ್ಲಿ ನಡೆದಿದೆ.

    ಭಾರತ್ ಗೋಲ್ಡ್ ಮೈನಿಂಗ್ ಲಿಮಿಟೆಡ್ (ಬಿಜಿಎಂಎಲ್)ನ ನಿವೃತ್ತ ನೌಕರರಾಗಿದ್ದ ಧನರಾಜ್ (62) ಹಾಗೂ ಅವರ ಪತ್ನಿ ಪರಿಮಳದೇವಿ (60) ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ.

    ತಮಗೆ ಮಕ್ಕಳಿಲ್ಲ ಎನ್ನುವ ಕಾರಣಕ್ಕಾಗಿ ಜೀವನದಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಾರಿಕುಪ್ಪಂ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.

  • ಕೋಲಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ದಿಢೀರ್ ಪ್ರತ್ಯಕ್ಷ

    ಕೋಲಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ದಿಢೀರ್ ಪ್ರತ್ಯಕ್ಷ

    ಕೋಲಾರ: ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್ ಬಿಡುಗಡೆಗೂ ಮುನ್ನವೇ ರಾಕಿಂಗ್ ಸ್ಟಾರ್ ಯಶ್ ಕೋಲಾರದಲ್ಲಿ ಪ್ರತ್ಯಕ್ಷರಾಗಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹುದುಕುಳ ಬಳಿ ಇರುವ ಜೋಯನ್ ಗಾಲ್ಫ್‍ಗೆ ನಟ ಯಶ್ ಬುಧವಾರ ಭೇಟಿ ನೀಡಿದ್ದಾರೆ. ಈ ವೇಳೆ ಗಾಲ್ಫ್ ಅಧ್ಯಕ್ಷ ರೈ ಹಾಗೂ ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿಯನ್ನು ಯಶ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

    ಯಶ್ ಭೇಟಿ ನೀಡಿರುವ ಫೋಟೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ರಾಕಿಂಗ್ ಸ್ಟಾರ್ ಜೊತೆ ಪೀಪಲ್ ಸ್ಟಾರ್ ಎಂಎಲ್‍ಎ ಎಂದು ಹಣೆ ಪಟ್ಟಿ ಬರೆದು ಹಂಚಿಕೊಂಡಿದ್ದಾರೆ. ಭೇಟಿ ವೇಳೆ ನಟ ಯಶ್ ವಿಧಾನಸಭಾ ಚುನಾವಣೆಯಲ್ಲಿ ಜಯ ಗಳಿಸಿ ನೂತನ ಶಾಸಕರಾಗಿ ಆಯ್ಕೆ ಆಗಿರುವ ಶಾಸಕ ಎಸ್‍ಎನ್ ನಾರಾಯಣಸ್ವಾಮಿ ಅವರಿಗೆ ಶುಭಾಶಯ ಕೋರಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸಕ್ರೀಯರಾಗಿದ್ದ ನಟ ಯಶ್ ತಮ್ಮ ಆಪ್ತ ವಲಯದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು.

    ಸದ್ಯ ಸ್ಯಾಂಡಲ್‍ವುಡ್ ಸಿನಿಮಾ ಅಭಿಮಾನಿಗಳು ಯಶ್ ಅವರ ಕೆಜಿಎಫ್ ಚಿತ್ರದ ಬಿಡುಗಡೆಯ ನಿರೀಕ್ಷೆಯಲ್ಲಿದ್ದು, ಚಿತ್ರ ತಂಡ ಆರಂಭದಿಂದಲೇ ಚಿತ್ರ ಕಥೆಯ ಕುರಿತ ರೋಚಕತೆಯನ್ನು ಉಳಿಸಿಕೊಂಡು ಬರುತ್ತಿದೆ. ಚಿತ್ರದಲ್ಲಿ ಯಶ್ ಅವರ ಲುಕ್ ಸಹ ಅಭಿಮಾನಿಗಳಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಕೆಲ ದಿನಗಳ ಹಿಂದೆ ಯಶ್ ರ ಹೊಸ ಲುಕ್ ನ ಫೋಟೋವನ್ನು ಅಭಿಮಾನಿಗಳೇ ಸಿದ್ಧಗೊಳಿಸಿ ಬಿಡುಗಡೆಗೊಳಿಸಿದ್ದರು. ಸದ್ಯಕ್ಕೆ ಕೆಜಿಎಫ್ ಚಿತ್ರೀಕರಣ ನಡೆಯುತ್ತಿದ್ದು, ಒಂದು ಹಾಡಿನ ಶೂಟಿಂಗ್ ಮಾತ್ರ ಬಾಕಿಯಿದೆ.

  • ‘ಕೆಜಿಎಫ್’ ಚಿತ್ರದ ಮತ್ತೊಂದು ಫೋಟೋ ವೈರಲ್!

    ‘ಕೆಜಿಎಫ್’ ಚಿತ್ರದ ಮತ್ತೊಂದು ಫೋಟೋ ವೈರಲ್!

    ಬೆಂಗಳೂರು: ಕೆಜಿಎಫ್ ಚಿತ್ರ ಸ್ಯಾಂಡಲ್‍ವುಡ್‍ನಲ್ಲಿ ಮೈಲೇಜ್ ಪಡೆದುಕೊಂಡ ಚಿತ್ರ. ಚಿತ್ರದ ಹೊಸ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈಗ ಈ ಫೋಟೋ ಸಾಕಷ್ಟು ವೈರಲ್ ಆಗಿದೆ.

    ಕೆಜಿಎಫ್ ಚಿತ್ರ ಸುಮಾರು ಎರಡು ವರ್ಷಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಸೆಟ್ ಏರಿದಾಗಿನಿಂದ ಶೂಟಿಂಗ್ ಮುಗಿಯುವರೆಗೂ ಯಶ್ ಚಿತ್ರದಲ್ಲಿ ಒಂದೇ ಲುಕ್‍ನಲ್ಲಿ ಕಾಣಿಸಿಕೊಂಡಿದ್ದರು. ಅದು ಬಿಟ್ಟರೆ ಯಶ್ ಬೇರೆ ಲುಕ್‍ನಲ್ಲಿ ಕಾಣಿಸಿಕೊಳ್ಳಲಿಲ್ಲ. ಯಶ್ ಡಿಫರೆಂಟ್ ಲುಕ್‍ಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗುತ್ತಿತ್ತು. ಆದರೆ ಈಗ ಸಾಮಾಜಿಕ ಜಾಲತಾಣದಲ್ಲಿ ಹೊಸ ಫೋಟೋವೊಂದು ಭಾರೀ ಸದ್ದು ಮಾಡುತ್ತಿದೆ.

    ಇತ್ತೀಚೆಗಷ್ಟೇ ಕೆಜಿಎಫ್‍ನ ಕೆಲವು ದೃಶ್ಯಗಳ ತುಣುಕನ್ನು ಚಿತ್ರೀಕರಿಸಲಾಗಿದ್ದು, ಯಶ್ ರೆಟ್ರೊ ಸ್ಟೈಲ್‍ನಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಯಶ್ ಕೆಂಪು ಬಣ್ಣದ ಬೆಲ್ ಬಾಟಮ್ ಪ್ಯಾಂಟು, ಬಿಳಿ ಟೀ ಶರ್ಟ್ ಧರಿಸಿರುವ ಶೈಲಿ ಎರಡು ದಶಕದ ಹಿಂದಿನ ಸ್ಟೈಲ್‍ನ್ನು ತೋರಿಸುತ್ತೆ. ಇನ್ನು ಯಶ್ ಪಕ್ಕದಲ್ಲಿ ಓಡಾಡುತ್ತಿರುವ ಜೂನಿಯರ್ ಆರ್ಟಿಸ್ಟ್ ಗಳ ಎರಡು ದಶಕದ ಹಿಂದಿನ ಉಡುಪನ್ನು ಧರಿಸಿರುವುದು ವಿಶೇಷ.

    ಕೆಜಿಎಫ್ ಚಿತ್ರ ಹಲವು ಕಾರಣಗಳಿಂದ ತಡವಾಗುತ್ತಿದೆ ಎಂದು ಸ್ವತಃ ಯಶ್ ಹೇಳಿದ್ದರು. ಈ ಚಿತ್ರದಲ್ಲಿ ಹಿರಿಯ ನಟ ಅನಂತ್ ನಾಗ್ ಹಾಗೂ ಮಾಳವಿಕಾ ಅಭಿನಯಿಸುತ್ತಿದ್ದಾರೆ. ಮಾಳವಿಕಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾಗ ಅನಂತ್ ನಾಗ್ ಅವರ ಜೊತೆ ಫೋಟೋ ತೆಗೆಸಿಕೊಂಡಿದ್ದರು. ನಂತರ ಆ ಫೋಟೋವನ್ನು ತಮ್ಮ ಟ್ವಿಟ್ಟರಿನಲ್ಲಿ ಅಪ್ಲೋಡ್ ಮಾಡಿ, ಅನಂತ್ ನಾಗ್ ಅವರ ಜೊತೆ ನಟಿಸಿದ್ದು ಖುಷಿ ಕೊಟ್ಟಿದೆ ಎಂದು ಹೇಳಿದ್ದರು. ಮತ್ತೊಂದು ಫೋಟೋದಲ್ಲಿ ನಟ ಹಾಗೂ ನಿರ್ದೇಶಕ ನಾಗಾಭರಣ ಅವರ ಜೊತೆ ಮಾಳವಿಕಾ ಕಾಣಿಸಿಕೊಂಡಿದ್ದಾರೆ.

    ಸದ್ಯ ಕೆಜಿಎಫ್ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಚಿತ್ರೀಕರಣವನ್ನು ನಾಜೂಕಾಗಿ ಮುಗಿಸಿದಂತೆಯೇ ಮುಂದಿನ ಕೆಲಸವನ್ನೂ ಅಚ್ಚುಕಟ್ಟಾಗಿ ಮಾಡುವ ಯೋಜನೆ ಚಿತ್ರತಂಡ ಹಾಕಿಕೊಂಡಿದೆ. ಹೀಗಾಗಿ ಕೆಜಿಎಫ್ ದಸರಾ ಸಂದರ್ಭದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಸದ್ಯ ಕೆಜಿಎಫ್ ಚಿತ್ರೀಕರಣ ಮುಕ್ತಾಯವಾಗಿದ್ದು, ಅದರ ಜೊತೆಯೇ ಯಶ್ ಇನ್ನೊಂದು ಲುಕ್ ನೋಡಿರೋ ಪ್ರೇಕ್ಷಕರು ಚಿತ್ರ ನೋಡೋಕೆ ಇನ್ನಷ್ಟು ಉತ್ಸುಕರಾಗಿದ್ದಾರೆ.

  • ಕೋಲಾರ ಜಿಲ್ಲೆಯ ವಿಶೇಷತೆ ಏನು? ಅಖಾಡದಲ್ಲಿ ಯಾರಿದ್ದಾರೆ?

    ಕೋಲಾರ ಜಿಲ್ಲೆಯ ವಿಶೇಷತೆ ಏನು? ಅಖಾಡದಲ್ಲಿ ಯಾರಿದ್ದಾರೆ?

    ಕೋಲಾರ: ಹೆಸರು ಕೇಳಿದ ತಕ್ಷಣ ನೆನಪಾಗುವುದು ಚಿನ್ನದ ಗಣಿಗಳು. ಈ ಚಿನ್ನದ ಗಣಿಗಾರಿಕೆಗೆ ಕೋಲಾರ ಜಿಲ್ಲೆ ಪ್ರಸಿದ್ಧವಾಗಿದ್ದು, ಈ ಹಿಂದೆ ಕೋಲಾರವನ್ನು ಕುವಲಾಲಪುರ ಎಂದು ಕರೆಯುತ್ತಿದ್ದರು.

    ಪ್ರಮುಖ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಕೋಲಾರ ಗಂಗರ ಆಳ್ವಿಕೆಯಲ್ಲಿ ರಾಜಧಾನಿಯಾಗಿತ್ತು. ನಂತರ ಚೋಳರ ಆಳ್ವಿಕೆಗೆ ಒಳಪಟ್ಟಿತ್ತು. 4 ರಿಂದ 19ನೇ ಶತಮಾನದವರೆಗೆ ಕದಂಬ, ಗಂಗ, ಪಲ್ಲವ, ಚೋಳ, ಚಾಲುಕ್ಯ, ಹೊಯ್ಸಳ, ರಾಷ್ಟ್ರಕೂಟ ಅರಸರು, ಮೈಸೂರಿನ ಅರಸರು, ಪಾಳೇಗಾರರು, ಹೈದರಾಲಿ ಹಾಗೂ ಟಿಪ್ಪು ಸುಲ್ತಾನರ ಆಳ್ವಿಕೆಗೆ ಒಳಪಟ್ಟಿತ್ತು. ಗಂಗರ ಕಾಲದಲ್ಲಿ ನಿರ್ಮಾಣವಾದ ಹಲವು ದೇವಾಲಯಗಳು ಇಂದಿಗೂ ಪ್ರಸಿದ್ಧಿ ಪಡೆದಿದೆ. ಮುಖ್ಯವಾಗಿ ಕೋಲಾರ ನಗರದ ಹೃದಯ ಭಾಗದಲ್ಲಿರುವ ಕೋಲಾರಮ್ಮ ದೇವಾಲಯ ಹಾಗೂ ಸೋಮನಾಥ ದೇವಾಲಯ ಪ್ರಮುಖವಾದದ್ದು. ಉಳಿದಂತೆ ಅಂತರಗಂಗೆ ಬೆಟ್ಟ, ಕೋಟಿ ಲಿಂಗ, ಮುಳಬಾಗಿಲು ಅಂಜನೇಯಸ್ವಾಮಿ ದೇವಾಲಯ, ಚಿಕ್ಕ ತಿರುಪತಿ, ಬಂಗಾರ ತಿರುಪತಿ ಸ್ಥಳಗಳು ಪ್ರಮುಖ ಧಾರ್ಮಿಕ ಕ್ಷೇತ್ರಗಳಾಗಿದೆ.

    ರಾಜಕೀಯವಾಗಿ ರಾಜ್ಯಕ್ಕೆ ಮೊದಲ ಸಿಎಂ ಕೆ ಚಂಗಲರಾಯರೆಡ್ಡಿ ಕೋಲಾರದವರು ಎಂಬ ಹೆಗ್ಗಳಿಯೂ ಪಡೆದಿದೆ. ಇನ್ನು 2008ರಲ್ಲಿ ಕೋಲಾರದಿಂದ ಚಿಕ್ಕಬಳ್ಳಾಪುರವನ್ನು ವಿಭಜನೆ ಮಾಡಿ ಸ್ವತಂತ್ರ್ಯ ಜಿಲ್ಲೆಯಾಗಿ ಘೋಷಿಸಲಾಯಿತು. 2011 ರ ಜನಗಣತಿ ಪ್ರಕಾರ ಕೋಲಾರ ಜಿಲ್ಲೆ 1,536,401 ಜನಸಂಖ್ಯೆ ಹೊಂದಿದೆ.

    ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್, ಮುಳಬಾಗಿಲು, ಶ್ರೀನಿವಾಸಪುರ, ಮಾಲೂರು, ಕೋಲಾರ ತಾಲೂಕು ಕೇಂದ್ರಗಳಾಗಿವೆ. ಜಿಲ್ಲೆಯಲ್ಲಿ ಕುರುಬ, ಒಕ್ಕಲಿಗ, ಪರಿಶಿಷ್ಟ ಜಾತಿ ಸೇರಿದಂತೆ ಮುಸ್ಲಿಂ ಮತಗಳು ಇಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಡಿಕೆ ರವಿ ಆತ್ಮಹತ್ಯೆ ಪ್ರಕರಣ ಹಾಗೂ ಶಾಶ್ವತ ನೀರಾವರಿ ಯೋಜನೆ ಜಾರಿ ಪ್ರಮುಖ ಚರ್ಚೆಯ ವಿಷಯಗಳಾಗಿದೆ.

    ಕೋಲಾರ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಪ್ರಮುಖ ಕೇಂದ್ರವಾಗಿದ್ದು, ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ವರ್ತೂರ್ ಪ್ರಕಾಶ್ ಜಯಗಳಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದರು. ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳಲ್ಲಿ ವರ್ತೂರ್ ಪ್ರಕಾಶ್ ಸ್ವತಃ `ನಮ್ಮ ಕಾಂಗ್ರೆಸ್’ ಪಕ್ಷ ಸ್ಥಾಪಿಸಿ ಕಣಕ್ಕೆ ಇಳಿದಿದ್ದಾರೆ.

    ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ನಿಂದ ನಿವೃತ್ತ ಐಎಎಸ್ ಅಧಿಕಾರಿ ಸೈಯದ್ ಜಮೀರ್ ಪಾಷ ಕಣಕ್ಕೆ ಇಳಿದಿದ್ದಾರೆ. ಆದರೆ ಅಭ್ಯರ್ಥಿ ಆಯ್ಕೆಗೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಸುದರ್ಶನ್ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ಜೆಡಿಎಸ್ ನಿಂದ ಕೆ ಶ್ರೀನಿವಾಸ್ ಗೌಡ ಅವರು ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಬಿಜೆಪಿ ಯಿಂದ ಓಂ ಶಕ್ತಿ ಚಲಪತಿ ಕಣ್ಣಕ್ಕೆ ಇಳಿದಿದ್ದಾರೆ. 2013 ಚುನಾವಣೆಯಲ್ಲಿ ವರ್ತೂರ್ ಪ್ರಕಾಶ್ 62,957 ಮತ ಹಾಗೂ ಜೆಡಿಎಸ್ ನ ಕೆ ಶ್ರೀನಿವಾಸ ಗೌಡ 50,366 ಮತ ಪಡೆದಿದ್ದರು.

    ಕ್ಷೇತ್ರದಲ್ಲಿ ಈ ಬಾರಿ ಕೋಲಾರ ಜಿಲ್ಲೆಯಲ್ಲಿ ಡಿಸಿ ಆಗಿ ಕಾರ್ಯನಿರ್ವಹಿಸಿದ್ದ ಡಿಕೆ ರವಿ ಅವರ ತಾಯಿ ಗೌರಮ್ಮ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಸದ್ಯ ಕ್ಷೇತ್ರದ ಹಾಲಿ ಶಾಸಕರಾಗಿರುವ ವರ್ತೂರ್ಪ್ರಕಾಶ್ ಅವರಿಗೆ ಜೆಡಿಎಸ್ ನ ಶ್ರೀನಿವಾಸಗೌಡ ಪ್ರಬಲ ಪೈಪೋಟಿ ಜೊತೆಗೆ ಟಾಂಗ್ ನೀಡಲು ಮುಂದಾಗಿದ್ದಾರೆ. ಡಿ.ಕೆ.ರವಿ ತಾಯಿ ಗೌರಮ್ಮ ಅವರು ಪರೀಕ್ಷೆ ಗಿಳಿದಿದ್ದಾರೆ.

    ಬಂಗಾರಪೇಟೆ ಕ್ಷೇತ್ರವು ಬೆಂಗಳೂರು ನಗರ ಸೇರಿದಂತೆ ಇತರೇ ಪ್ರದೇಶಗಳಿಗೆ ಹೊಂದಿರುವ ರೈಲ್ವೇ ಸಂಪರ್ಕದ ಹಿನ್ನೆಲೆ ಹೆಚ್ಚು ಹೆಸರು ಪಡೆದಿದೆ. ಆದರೆ ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದ್ದ ಬಂಗಾರಪೇಟೆ ಡಿ.ಕೆ.ರವಿ ಅವರ ಸಾವಿನ ಬಳಿಕ ಹೆಚ್ಚು ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಕ್ಷೇತ್ರದ ಅಭಿವೃದ್ಧಿಯೂ ಪ್ರಮುಖ ಚುನಾವಣಾ ವಿಷಯವಾಗಿದೆ. ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಜಯ ಪಡೆದಿದ್ದ ಎಸ್‍.ಎನ್ ನಾರಾಯಣಸ್ವಾಮಿ 71,570 ಮತ ಪಡೆದಿದ್ದರು. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಇಎಂ ನಾರಾಯಣಸ್ವಾಮಿ 43,193 ಮತ ಪಡೆದಿದ್ದರು. 2011 ರಲ್ಲಿ ನಡೆದ ಉಪಚುನಾವಣೆಯಲ್ಲಿ ಇಎಂ ನಾರಾಯಣಸ್ವಾಮಿ ಜಯ ಗಳಿಸಿದ್ದರು. ಸದ್ಯ ಈ ಬಾರಿ ಎಂ. ನಾರಾಯಣಸ್ವಾಮಿಗೆ ಟಿಕೇಟ್ ಸಿಗದ ಹಿನ್ನೆಲೆ ಬಿಜೆಪಿ ತೊರೆದು ಜೆಡಿಎಸ್ ಬೆಂಬಲ ಸೂಚಿಸಿದ್ದಾರೆ. ಸಧ್ಯ ಜೆಡಿಎಸ್ ನ ಮಲ್ಲೇಶ್ ಬಾಬು ಹಾಗೂ ಬಿಜೆಪಿ ಬಿ.ಪಿ.ವೆಂಕಟಮುನಿಯಪ್ಪ ನಡುವೆ ಎರಡನೇ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದೆ.

    ಪಕ್ಷಕ್ಕಿಂತ ವ್ಯಕ್ತಿ ಪ್ರತಿಷ್ಠೆಯ ಕಣವಾಗಿರುವ ಶ್ರೀನಿವಾಸಪುರ ಕ್ಷೇತ್ರ ಪ್ರತಿ ಬಾರಿ ಚುನಾವಣೆಯಲ್ಲಿ ಹಾಲಿ ಶಾಸಕರನ್ನು ಸೋಲಿಸಿ ಎದುರಾಳಿ ಅಭ್ಯರ್ಥಿಗೆ ಜಯ ನೀಡುತ್ತ ಬಂದಿದೆ. ಸದ್ಯ ಹಾಲಿ ಶಾಸಕರಾಗಿರುವ ಹಾಗೂ ಆರೋಗ್ಯ ಸಚಿವರಾದ ರಮೇಶ್ ಕುಮಾರ್ ಅವರಿಗೆ ಜೆಡಿಎಸ್ ನ ಜಿ.ಕೆ.ವೆಂಕಟಶಿವಾ ರೆಡ್ಡಿ ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಕ್ಷೇತ್ರದಲ್ಲಿ ಒಬ್ಬರು ರಮೇಶ್ ಕುಮಾರ್ ಅವರು ಸ್ವಾಮಿ ಎಂದು ಹೆಸರು ಪಡೆದಿದ್ದರೆ, ವೆಂಕಟಶಿವಾ ರೆಡ್ಡಿ ಅವರು ರೆಡ್ಡಿ ಎಂದೇ ಪರಿಚಿತರು.

    ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಅಭಿವೃದ್ಧಿ ಪ್ರಮುಖ ಚರ್ಚೆಯ ವಿಷಯವಾಗಿ ಕಾಣುತ್ತಿದೆ. ಕೋಲಾರ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರುವ ಬದಲಾಗಿ ಕೆಸಿ ವ್ಯಾಲಿ ನೀರು ನೀಡುವ ನಿರ್ಧಾರವು ಪ್ರಮುಖ ವಿಷಯವಾಗಿದೆ. ಕ್ಷೇತ್ರದಲ್ಲಿ ರೆಡ್ಡಿ ಹಾಗೂ ಒಕ್ಕಲಿಗ ಮತಗಳ ಹೆಚ್ಚು ನಿರ್ಣಾಯವಾಗಿದೆ. ಕಳೆದ ಬಾರಿ ರಮೇಶ್ ಕುಮಾರ್ 83,426 ಮತ ಪಡೆದಿದ್ದರೆ, ವೆಂಕಟಶಿವಾ ರೆಡ್ಡಿ 79,533 ಮತ ಪಡೆದಿದ್ದರು. ಇಬ್ಬರೆ ವ್ಯಕ್ತಿಗಳಾದ್ರು ಇಬ್ಬರ ಜಯಕ್ಕೆ ಕೆಲವೆ ಕೆಲ ಮತಗಳ ಅಂತರವಷ್ಟೆ ಕಾಯ್ದುಕೊಂಡೆ ಬಂದಿರುವುದು 40 ವರ್ಷಗಳ ತಾಜಕಾರಣಕ್ಕೆ ಸಾಕ್ಷಿ.

    ಬೆಂಗಳೂರಿಗೆ ಹೊಂದಿಕೊಂಡಿರುವ ಮಾಲೂರು ಕ್ಷೇತ್ರದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಉತ್ತಮ ಬೆಳವಣಿಗೆ ಪಡೆಯುತ್ತಿದೆ. ಸದ್ಯ ಕ್ಷೇತ್ರದಲ್ಲಿ ಜೆಡಿಎಸ್ ನ ಮಂಜುನಾಥ ಗೌಡರು ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿರುವ ಕೃಷ್ಣಯ್ಯ ಶೆಟ್ಟಿ ಅವರು ಉಚಿತ ಧಾನ, ಧರ್ಮಗಳ ಹಾಗೂ ಧಾರ್ಮಿಕ ಕಾರ್ಯಗಳ ಮೂಲಕ ಹೆಚ್ಚು ಪ್ರಸಿದ್ಧಿ ಪಡೆದಿದ್ದಾರೆ. ಕಳೆದ ಬಾರಿ ಮಂಜುನಾಥ್ ಅವರು 57,645 ಮತ ಪಡೆದಿದ್ದಾರೆ, ಕೃಷ್ಣಯ್ಯ ಶೆಟ್ಟಿ ಪಕ್ಷೇತರ ರಾಗಿ ಸ್ಪರ್ಧೆ ಮಾಡಿ 38,876 ಮತ ಪಡೆದು ಸೋಲುಂಡಿದ್ದರು. ಈ ಬಾರಿಯೂ ಇಬ್ಬರ ನಡುವೆ ನಾನೇನೂ ಕಡಿಮೆ ಇಲ್ಲವೆಂಬಂತೆ ಪೈಪೋಟಿ ಕಾಂಗ್ರೇಸ್ ನ ಅಭ್ಯರ್ಥಿ ಕೆ.ವೈ.ನಂಜೇಗೌಡ ಕಣದಲ್ಲಿದ್ದು, ಮೂವರ ನಡುವೆ ತೀವ್ರ ಪೈಪೋಟಿ ಮುಂದುವರಿದಿದೆ.

    ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಬೀಗಿ ಹಿಡಿತ ಹೊಂದಿರುವ ಏಕೈಕ ಕ್ಷೇತ್ರ ಕೆಜಿಎಫ್ ಎಂದರೆ ತಪ್ಪಾಗಲಾರದು. ಸಂಪಂಗಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೆ ಅವರ ತಾಯಿ ರಾಮಕ್ಕ ಗೆಲ್ಲಿಸಿಕೊಂಡ ಬಿಜೆಪಿ ಸಂಪಂಗಿ ಅವರಿಗೆ ಹೆಚ್ಚು ಪ್ರಭಾವ ಹೊಂದಿದ್ದು, ಕಳೆದ ಬಾರಿ ಅವರ ತಾಯಿ ರಾಮಕ್ಕ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಪಡೆದಿದ್ದರು. ಆದರೆ ಈ ಬಾರಿಯೂ ಟಿಕೇಟ್ ಕೈತಪ್ಪಿದ ಬೆನ್ನಲ್ಲೆ ಸಂಪಂಗಿ ಮಗಳು ಆಶ್ವಿನಿ ಎನ್ ಬಿಜೆಪಿ ಯಿಂದ ಸ್ಪರ್ಧೆ ಮಾಡುತ್ತಿದ್ದಾರೆ.

    ಬೆಂಗಳೂರಿಗೆ ಉತ್ತಮ ರೈಲ್ವೇ ಸಂಪರ್ಕ ಹೊಂದಿರುವುದರಿಂದ, ಚಿನ್ನದ ಗಣಿ ಮುಚ್ಚಿದ ನಂತರ ಕ್ಷೇತ್ರ 25 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗಕ್ಕಾಗಿ ರಾಜಧಾನಿಯನ್ನೇ ಮೆಚ್ಚಿಕೊಂಡಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಕೆಜಿಎಫ್ ಗಣಿಗಳ ಪುನರ್ ಆರಂಭವೂ ಚರ್ಚೆಯ ವಿಷಯವಾಗಿದೆ. ಕ್ಷೇತ್ರದ ತಮಿಳು ಭಾಷೆ ಮಾತನಾಡುವ ಮತದಾರರು ಮುಖ್ಯ ಪಾತ್ರವಹಿಸುತ್ತಾರೆ. ಕ್ಷೇತ್ರದಲ್ಲಿ ಹೆಚ್ಚು ಪೈಪೋಟಿ ನೀಡುತ್ತಿರುವ ಜೆಡಿಎಸ್ ಅಭ್ಯರ್ಥಿ ಭಕ್ತವತ್ಸಲಂ ಈ ಬಾರಿಯೂ ಕಣದಲ್ಲಿ ಮುಂದುವರೆದಿದ್ದಾರೆ. ಉಳಿದಂತೆ ಕಾಂಗ್ರೆಸ್ ನಿಂದ ಸಂಸದ ಮುನಿಯಪ್ಪ ಪುತ್ರಿ ರೂಪಕಲಾ ಬಿಜೆಪಿ ಗೆ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ, ಆರ್ ಪಿ ಐ ನಿಂದ ಮಾಜಿ ಶಾಸಕ ರಾಜೇಂದ್ರನ್, ಸಿಪಿಎಂ ನಿಂದ ತಂಗರಾಜ್ ಕಣದಲ್ಲಿದ್ದಾರೆ. ಕಳೆದ ಬಾರಿ ಹಾಲಿ ಶಾಸಕಿ ರಾಮಕ್ಕ 55,014 ಮತ ಹಾಗೂ ಜೆಡಿಎಸ್ ನಿಂದ ಭಕ್ತವತ್ಸಲಂ 28,992 ಮತ ಪಡೆದಿದ್ದರು.

    ಚುನಾವಣೆಗೂ ಮುನ್ನವೆ ಕಾಂಗ್ರೇಸ್ ಅಭ್ಯರ್ಥಿ ನಾಮಪತ್ರ ತಿರಸ್ಕಾರ ಆಗುವ ಮೂಲಕ ಕಾಂಗ್ರೇಸ್ ಗೆ ಮರ್ಮಾಗತ ಉಂಟಾಗಿತ್ತು, ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆಯೇ ರಾಜ್ಯ ಗಮನ ಸೆಳೆದಿದ್ದ ಮುಳಬಾಗಿಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಇಲ್ಲ. ಮೀಸಲು ಕ್ಷೇತ್ರವಾಗಿರುವುದರಿಂದ ಕಳೆದ ಬಾರಿ ಜಯಗಳಿಸಿದ್ದ ಕೊತ್ತೂರು ಮಂಜುನಾಥ್ ನಕಲಿ ಜಾತಿ ಪ್ರಮಾಣ ಪತ್ರ ನೀಡಿರುವ ಆರೋಪದಲ್ಲಿ ಈ ಬಾರಿ ಸ್ಪರ್ಧೆ ಮಾಡುವ ಹಕ್ಕನ್ನೇ ಕಳೆದುಕೊಂಡಿದ್ದಾರೆ.

    ಆರ್ಥಿಕವಾಗಿ ಬಹಳ ಹಿಂದುಳಿದಿರುವ ಈ ಕ್ಷೇತ್ರವೂ ಅಭಿವೃದ್ಧಿಯ ವಿಚಾರದಲ್ಲಿಯೂ ಹಿಂದುಳಿದಿದೆ. ಕ್ಷೇತ್ರದಲ್ಲಿ ರೆಡ್ಡಿ, ಒಕ್ಕಲಿಗ ಮತದಾರರು ಜೊತೆ ಮುಸ್ಲಿಂ ಮತಗಳು ಹೆಚ್ಚು ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಬಾರಿ ಬಿಜೆಪಿಯಿಂದ ಅಮರೇಶ್ ಸ್ಪರ್ಧೆ ನಡೆಸಿದ್ದರೆ, ಜೆಡಿಎಸ್ ನಿಂದ ಸಮೃದ್ದಿ ಮಂಜುನಾಥ್ ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಕೋಲಾರ ಎಂಪಿ ಕೆ.ಎಚ್ ಮುನಿಯಪ್ಪ ಅವರ ದ್ವಿತೀಯ ಪುತ್ರಿ ಕೊನೆ ಗಳಿಗೆಯಲ್ಲಿ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಯಾಗಲು ರಾಜಕೀಯ ಕುತಂತ್ರವೆ ನಡೆದಿತ್ತು. ಬಳಿಕ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಹಿಂಪಡೆದಿದ್ದರು. 2013 ರ ಚುನಾವಣೆಯಲ್ಲಿ ಮಂಜುನಾಥ್ 73,146 ಮತ ಹಾಗೂ ಜೆಡಿಎಸ್ ಮುನಿ ಆಂಜನಪ್ಪ ಅವರು 39,412 ಮತ ಪಡೆದಿದ್ದರು. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲದ ಕಾರಣ ಸ್ವತಂತ್ರವಾಗಿ ನಾಮಪತ್ರ ಸಲ್ಲಿಸಿರುವ ಪವರ್ ಮಿನಿಸ್ಟರ್ ಡಿಕೆಶಿ ಹಾಗೂ ಪರಮೇಶ್ವರ ಅವರ ಆಪ್ತ ಎಚ್.ವೆಂಕಟೇಶ್ ಗೆ ಕಾಂಗ್ರೆಸ್ ಬೆಂಬಲ ನೀಡಲು ನಿರ್ಧರಿಸಿದೆ.

    ಒಟ್ಟಿನಲ್ಲಿ ಜಿಲ್ಲೆಯ 6 ವಿಧಾನಸಭೆ ಕ್ಷೇತ್ರಗಳ ಪೈಕಿ ಜೆಡಿಎಸ್ ಮೊದಲ ಸ್ಥಾನ 3 ಅಥವಾ 4 ಸ್ಥಾನ, ಕಾಂಗ್ರೇಸ್ ಎರಡನೆ ಸ್ಥಾನ 2 ಅಥವಾ 3 ಹಾಗೂ ಬಿಜೆಪಿ ಮೂರನೆ ಸ್ಥಾನಕ್ಕೆ ಅಂದರೆ 1 ಸ್ಥಾನಕ್ಕೆ ತೃಪ್ತಿ ಪಡಬೇಕಿದೆ. ಈ ಮಧ್ಯೆ ಒಂದು ಪಕ್ಷೇತರ ಅಥವಾ ನಮ್ಮ ಕಾಂಗ್ರೇಸ್ ಗೆದ್ದರೆ ಅಚ್ಚರಿ ಏನಿಲ್ಲ.

  • ಆ ಒಂದು ಕೆಲಸ ಮಾಡಲು ನನಗೆ ಕಷ್ಟ ಎಂದ ಯಶ್

    ಆ ಒಂದು ಕೆಲಸ ಮಾಡಲು ನನಗೆ ಕಷ್ಟ ಎಂದ ಯಶ್

    ಬೆಂಗಳೂರು: ನುಗ್ಗೋ ಬುಲೆಟ್ ಎದ್ರುಗಡೆ ಯಾವನಿದ್ರೇನು ನುಗ್ತಾ ಇರೋದೇ ಎದೆ ಸೀಳ್ತಾ ಇರೋದೇ ಎಂದು ಹೇಳುವ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಆ್ಯಂಕರಿಂಗ್ ಮಾಡೋದು ಸ್ವಲ್ಪ ಕಷ್ಟ ಎಂದು ತಿಳಿಸಿದ್ದಾರೆ.

    ಆರ್.ಜೆ ರೋಹಿತ್ ಅವರನ್ನು ರಾಕಿಂಗ್ ಸ್ಟಾರ್ ಇಂಟರ್ ವ್ಯೂ ಮಾಡಿದ್ದಾರೆ. ರೋಹಿತ್ ಅಭಿನಯದ ‘ಬಕಾಸುರ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ರಾಕಿಂಗ್ ಸ್ಟಾರ್ ರಾಕ್‍ಸ್ಟಾರ್ ಗೆ ಪ್ರಶ್ನೆಗಳನ್ನ ಹಾಕಿದ್ದರು. ಇಂಟ್ರೆಸ್ಟಿಂಗ್ ಎಂದರೆ ಫಸ್ಟ್ ಟೈಮ್ ನಿರೂಪಣೆ ಮಾಡಿದರಿಂದ ಯಶ್ ಕೊಂಚ ಎಗ್ಸೈಟ್ ಆಗಿದ್ದರು.

    ಆ್ಯಂಕರಿಂಗ್ ತುಂಬಾ ಕಷ್ಟದ ಕೆಲಸ. ಏನು ಪ್ರಶ್ನೆ ಕೇಳಬೇಕು ಎಂದು ತಿಳಿಯುವುದಿಲ್ಲ. ಮಾತನಾಡುವುದು ಸುಲಭ ಆದರೆ ಅದಕ್ಕೆ ಒಂದು ನಿರ್ದಿಷ್ಟ ಪ್ರಶ್ನೆಯಿರುತ್ತದೆ. ಆ ಪ್ರಶ್ನೆಗೆ ನನ್ನ ಅಭಿಪ್ರಾಯ ಏನು ಎಂದು ಸುಲಭವಾಗಿ ಹೇಳಬಹುದು. ಆದರೆ ಒಂದು ಪ್ರಶ್ನೆಯನ್ನು ಹುಡುಕಿ ಅದನ್ನು ಕೇಳಬೇಕು ಎಂದರೆ ಕಷ್ಟದ ಕೆಲಸ. ಈಗ ಆ್ಯಂಕರಿಂಗ್ ಮಾಡುವವರ ಕಷ್ಟ ನನಗೆ ಗೊತ್ತಾಯಿತು ಎಂದು ಯಶ್ ತಿಳಿಸಿದ್ದಾರೆ.

    ಆ್ಯಂಕರಿಂಗ್ ಮಾಡುವಾಗ ಮನೋರಂಜನೆ ಹಾಗೂ ಸಿನಿಮಾಗೆ ಸಂಬಂಧಪಟ್ಟ ಪ್ರಶ್ನೆಗಳನ್ನೇ ಕೇಳಬೇಕು. ಅವರ ಮನಸಿನಲ್ಲಿ ಇರುವ ಯೋಚನೆಗಳು ಹೊರಬರುವಂತೆ ಪ್ರಶ್ನೆಗಳನ್ನು ಕೇಳಬೇಕು. ಹಾಗಾಗಿ ಇದು ಕಷ್ಟದ ಕೆಲಸ. ಆದರೆ ಸಿನಿಮಾಗಾಗಿ ಹಾಗೂ ಅವರ ಮೇಲೆ ಇರುವ ಪ್ರೀತಿಗಾಗಿ ನಾನು ಈ ಕೆಲಸವನ್ನು ಮಾಡಿದೆ ಎಂದು ಯಶ್ ಹೇಳಿದ್ದಾರೆ.

    ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವವರು ಹೇಗಿರಬೇಕು? ತಾನು ಯಾವುದಾದರೂ ಪಕ್ಷದ ಪ್ರಚಾರ ಮಾಡಬೇಕು ಎಂದರೆ ರಾಜಕೀಯ ನಾಯಕರು ಏನೆಲ್ಲಾ ಕೆಲಸಗಳನ್ನು ಮಾಡಬೇಕಾಗುತ್ತದೆ ಎನ್ನುವುದು ಯಶ್ ಸಾಕಷ್ಟು ಬಾರಿ ಹೇಳಿಕೊಂಡಿದ್ದರು.

    ಇದೀಗ ಮತದಾರರಿಗೆ ನೀವು ಆಯ್ಕೆ ಮಾಡುವ ಪ್ರತಿನಿಧಿ ಹೇಗಿರಬೇಕು ಎನ್ನುವುದನ್ನು ಹೇಳಿದ್ದಾರೆ. ನಾಟಕದ ಮಾತುಗಳಿಗೆ ನಂಬಬೇಡಿ, ನಿಮ್ಮ ಊರು, ನಿಮ್ಮ ಏರಿಯಾದ ಸಮಸ್ಯೆಯನ್ನು ಅರಿತು ಕೆಲಸ ಮಾಡುವ ಪ್ರತಿನಿಧಿಯನ್ನು ಆಯ್ಕೆ ಮಾಡಿ. ಭಂಡ ನ್ಯಾಯದಲ್ಲಿ ಗೆಲ್ಲುತ್ತೀನಿ ಎನ್ನುವರಿಗೆ ನೀವು ಬೆಂಬಲ ಕೊಡಬೇಡಿ ಎಂದು ಯಶ್ ತಿಳಿಸಿದ್ದಾರೆ.

    ಸದ್ಯ ಯಶ್ ಕೆಜಿಎಫ್ ಸಿನಿಮಾದಲ್ಲಿ ಬ್ಯೂಸಿಯಾಗಿದ್ದು, ಸ್ಟಾರ್ ಡೈರೆಕ್ಟರ್ ಅವರ ಕಾಲ್‍ಶೀಟ್‍ಗಾಗಿ ಕಾಯುತ್ತಿದ್ದಾರೆ.