Tag: ಕೆನಡಾ ಪ್ರಧಾನಿ

  • ಭಾರತ ವಿರೋಧಿ ಸ್ನೇಹಿತರು ಟ್ರುಡೊರನ್ನು ರಕ್ಷಿಸಬಹುದು: ಇದು ಕರ್ಮ ಎಂದ ಸಿಂಘ್ವಿ

    ಭಾರತ ವಿರೋಧಿ ಸ್ನೇಹಿತರು ಟ್ರುಡೊರನ್ನು ರಕ್ಷಿಸಬಹುದು: ಇದು ಕರ್ಮ ಎಂದ ಸಿಂಘ್ವಿ

    ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರನ್ನು ‘ಭಾರತ ವಿರೋಧಿ ಸ್ನೇಹಿತರು’ ರಕ್ಷಿಸಬಹುದು ಎಂದು ನಾನು ಭಾವಿಸಿದ್ದೇನೆ. ಕೆನಡಾ ಪ್ರಧಾನಿ ಈಗ ತಮ್ಮ ದೇಶದಲ್ಲೇ ರಕ್ಷಣೆಗಾಗಿ ರಹಸ್ಯ ಸ್ಥಳಕ್ಕೆ ಸ್ಥಳಾಂತರವಾಗಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್ ಮನು ಸಿಂಘ್ವಿ (Abhishek Manu Singhvi) ಟ್ವೀಟ್ ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

    ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರಿಗೆ ಕಾಂಗ್ರೆಸ್ ಜೊತೆಗೆ ಕೆನಡಾ ಪ್ರಧಾನಿ ಕೂಡ ಬೆಂಬಲ ಸೂಚಿಸಿದ್ದರು. ಆ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ಮಾತನಾಡಿದ್ದರು. ಆದರೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರೇ ಈಗ ಕೆನಡಾ ಪ್ರಧಾನಿ ಹೇಳಿಕೆ ಉಲ್ಲೇಖಿಸಿ ಟೀಕಿಸಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಹಾಗಾದರೆ ಸಿಂಘ್ವಿ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಪ್ರಶ್ನೆ ವ್ಯಕ್ತವಾಗಿದೆ. ಇದನ್ನೂ ಓದಿ: ಫೆಬ್ರವರಿಯಲ್ಲಿ 12 ದಿನ ಬ್ಯಾಂಕುಗಳಿಗೆ ರಜೆ

    ಕೆನಡಾದಲ್ಲಿ ಕೋವಿಡ್ ವ್ಯಾಕ್ಸಿನ್ ವಿರೋಧಿ ಪ್ರತಿಭಟನೆಯು ತೀವ್ರಗೊಂಡಿದ್ದು, ರಕ್ಷಣೆಗಾಗಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ರಹಸ್ಯ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದಾರೆ. ಇದನ್ನು ಭಾರತದ ರೈತರ ಪ್ರತಿಭಟನೆಗೆ ತಳಕು ಹಾಕಿ ನೋಡಿರುವ ಕಾಂಗ್ರೆಸ್‌ನ ಅಭಿಷೇಕ್ ಸಿಂಘ್ವಿ, ‘ಭಾರತ ವಿರೋಧಿ ಸ್ನೇಹಿತರು’ ಟ್ರುಡೊರನ್ನು ರಕ್ಷಿಸಬಹುದು ಎಂದು ನಾನು ಭಾವಿಸಿದ್ದೇನೆ. ಭಾರತದ ಆಂತರಿಕ ವಿಷಯಗಳಿಗೆ ಮೂಗು ತೂರಿಸುವ ಮೊದಲು ತಮ್ಮ ದೇಶದಲ್ಲಿನ ಕಠಿಣ ಪರಿಸ್ಥಿತಿಗಳ ಬಗ್ಗೆ ಅರಿಯಬೇಕು ಎಂದು ಟ್ವೀಟ್ ಮಾಡಿ ಕುಟುಕಿದ್ದಾರೆ.

    ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ೨೦೨೦ರಿಂದ ಸತತ ಒಂದು ವರ್ಷಗಳ ಕಾಲ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಕಾಂಗ್ರೆಸ್ ಸೇರಿದಂತೆ ವಿಶ್ವದ ಅನೇಕ ರಾಜಕೀಯ ಪಕ್ಷಗಳು ಹಾಗೂ ನಾಯಕರು ಬೆಂಬಲ ಸೂಚಿಸಿದ್ದರು. ಈ ವೇಳೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಭಾರತದ ರೈತರ ಪರವಾಗಿ ಮಾತನಾಡಿದ್ದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಲಾಬಿ ಆರಂಭಿಸಿದ ವಲಸಿಗ ಶಾಸಕರು

    ಕಾಂಗ್ರೆಸ್‌ನಲ್ಲಿ ಸೂಕ್ತ ಗೌರವ ಸಿಗದ ಕಾರಣ ಅಭಿಷೇಕ್ ಮನು ಸಿಂಘ್ವಿ ಅವರು ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿಗಳು ಇತ್ತೀಚೆಗೆ ಹರಿದಾಡಿದ್ದವು. ನಾನು ಪಕ್ಷ ತೊರೆಯುವ ಮಾತು ಸುಳ್ಳು ಎಂದು ಸಿಂಘ್ವಿ ಅಲ್ಲಗಳೆದಿದ್ದರು.

  • ಲಸಿಕೆ ಕಡ್ಡಾಯ ನಿಯಮ ವಿರೋಧಿಸಿ ತೀವ್ರ ಪ್ರತಿಭಟನೆ – ರಹಸ್ಯ ಸ್ಥಳಕ್ಕೆ ಕೆನಡಾ ಪಿಎಂ ಸ್ಥಳಾಂತರ

    ಲಸಿಕೆ ಕಡ್ಡಾಯ ನಿಯಮ ವಿರೋಧಿಸಿ ತೀವ್ರ ಪ್ರತಿಭಟನೆ – ರಹಸ್ಯ ಸ್ಥಳಕ್ಕೆ ಕೆನಡಾ ಪಿಎಂ ಸ್ಥಳಾಂತರ

    ಒಟ್ಟಾವಾ: ಕೋವಿಡ್‌-19 ಲಸಿಕೆಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಮತ್ತು ಅವರ ಕುಟುಂಬ ರಾಜಧಾನಿಯಲ್ಲಿನ ತಮ್ಮ ಮನೆ ತೊರೆದು ರಹಸ್ಯ ಸ್ಥಳಕ್ಕೆ ಸ್ಥಳಾಂತರಗೊಂಡಿದ್ದಾರೆ.

    ಗಡಿಯಂಚಿನ ಟ್ರಕ್‌ ಚಾಲಕರಿಗೆ ಕೋವಿಡ್‌ ಲಸಿಕೆ ಕಡ್ಡಾಯ ಎಂಬ ನಿಯಮವನ್ನು ಕೆನಡಾ ಸರ್ಕಾರ ಹೊರಡಿಸಿದ್ದು, ಇದರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಕಡ್ಡಾಯ ನಿಯಮವನ್ನು ಹಿಂತೆಗೆದುಕೊಳ್ಳಬೇಕು ಎಂದು ರಾಜಧಾನಿಯಲ್ಲಿ ಅಪಾರ ಸಂಖ್ಯೆಯಲ್ಲಿ ಟ್ರಕ್‌ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಟ್ರಕ್‌ಗಳನ್ನು ಪ್ರತಿಭಟನಾ ಸ್ಥಳದಲ್ಲಿ ನಿಲ್ಲಿಸಿದ್ದಾರೆ. ಇದನ್ನೂ ಓದಿ: ಆಹಾರಕ್ಕಾಗಿ ಅಪ್ಘಾನ್‌ ಜನರಿಂದ ಮಕ್ಕಳು, ದೇಹದ ಅಂಗಾಂಗಗಳ ಮಾರಾಟ

    ಕೋವಿಡ್‌ ಲಸಿಕೆ ಆದೇಶ ಮತ್ತು ಇತರ ಸಾರ್ವಜನಿಕ ಆರೋಗ್ಯ ನಿರ್ಬಂಧಗಳನ್ನು ತೆಗೆದುಹಾಕಲು ಕ್ರಮವಹಿಸುವಂತೆ ಶನಿವಾರ ರಾಜಧಾನಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಟ್ರಕ್‌ ಚಾಲಕರು, ಇತರೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಮಕ್ಕಳು, ವೃದ್ಧರು, ಅಂಗವಿಕಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕೆಲವರು ಪ್ರತಿಭಟನಾಕಾರರು ಪ್ರಮುಖ ಯುದ್ಧ ಸ್ಮಾರಕದ ಮೇಲೆ ನೃತ್ಯ ಮಾಡಿರುವ ದೃಶ್ಯ ಸೆರೆಯಾಗಿದೆ.

    ತೀವ್ರ ಶೀತದ ಎಚ್ಚರಿಕೆಯ ಹೊರತಾಗಿಯೂ ನೂರಾರು ಪ್ರತಿಭಟನಾಕಾರರು ಸಂಸತ್ತಿನ ಆಚರಣಕ್ಕೆ ನುಗ್ಗಿದ್ದಾರೆ. ಹೆಚ್ಚಿನ ಅನಾಹುತ ತಪ್ಪಿಸಲು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಪ್ರತಿಭಟನೆ ತೀವ್ರತೆ ಅರಿತ ಕೆನಡಾ ಪ್ರಧಾನಿ ಅವರನ್ನು ರಹಸ್ಯ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಪತ್ನಿಯ ಹುಟ್ಟುಹಬ್ಬಕ್ಕೆ ಬುರ್ಜ್ ಖಲಿಫಾದಲ್ಲಿ ಫೋಟೋ ಹಾಕಿ ಶುಭ ಕೋರಿದ ರೊನಾಲ್ಡೊ