Tag: ಕೆಫೆ ಮಾಲೀಕ

  • ಡಿವೋರ್ಸ್‌ ವಿಚಾರ, ವ್ಯವಹಾರದಲ್ಲಿ ಕಲಹ – ಆತ್ಮಹತ್ಯೆಗೆ ಶರಣಾದ ದೆಹಲಿ ಉದ್ಯಮಿ

    ಡಿವೋರ್ಸ್‌ ವಿಚಾರ, ವ್ಯವಹಾರದಲ್ಲಿ ಕಲಹ – ಆತ್ಮಹತ್ಯೆಗೆ ಶರಣಾದ ದೆಹಲಿ ಉದ್ಯಮಿ

    ನವದೆಹಲಿ: ಇಲ್ಲಿನ ಉದ್ಯಮಿಯೊಬ್ಬರು (Business) ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ.

    ದೆಹಲಿಯ ವುಡ್‌ ಬಾಕ್ಸ್‌ ಕೆಫೆಯ (Woodbox Cafe) ಸಹ-ಸಂಸ್ಥಾಪಕ ಪುನೀತ್ ಖುರಾನಾ ಅವರು ಇಲ್ಲಿನ ಮಾಡೆಲ್‌ ಟೌನ್‌ನ ಕಲ್ಯಾಣ್‌ ವಿಹಾರ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಹೊಸವರ್ಷಕ್ಕೂ ಮುನ್ನಾದಿನವೇ ತಾಯಿ, ನಾಲ್ವರು ಸಹೋದರಿಯರ ಹತ್ಯೆಗೈದ ಯುವಕ

    ಖುರಾನಾ ಮತ್ತು ಅವರ ಪತ್ನಿ ಮಾಣಿಕಾ ಜಗದೀಶ್ ಪಹ್ವಾ ಜೊತೆಗಿನ ವಿಚ್ಛೇದನ ಹಾಗೂ ಕೆಫೆ ವ್ಯವಹಾರಕ್ಕೆ ಸಂಬಂಧಿಸಿದ ಗಲಾಟೆ ನಡುವೆಯೇ ಈ ಘಟನೆ ನಡೆದಿದೆ. ರಾಷ್ಟ್ರ ರಾಜಧಾನಿಯಲ್ಲಿ ವುಡ್‌ಬಾಕ್ಸ್ ಕೆಫೆ ಹೊಂದಿದ್ದ ದಂಪತಿ ಜಂಟಿಯಾಗಿ ವ್ಯವಹಾರ ನಡೆಸುತ್ತಿದ್ದರು. ಇಬ್ಬರ ನಡುವೆ ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಮನಸ್ತಾಪ ಏರ್ಪಟ್ಟಿತ್ತು. ಅಲ್ಲದೇ ಇಬ್ಬರ ನಡುವೆ ಮೊದಲಿನಿಂದಲೂ ದಾಂಪತ್ಯ ಕಲಹವಿತ್ತು. ಇದೇ ಕಾರಣಕ್ಕೆ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇವರಿಬ್ಬರು 2016ರಲ್ಲಿ ಮದುವೆಯಾಗಿದ್ದರು, ಪತ್ನಿ ಮೇಲೆ ಖುರಾನಾಗೆ ಅಸಮಾಧಾನ ಇತ್ತು ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಈ ಮಧ್ಯೆ ಇಬ್ಬರ ನಡುವಿನ 16 ನಿಮಿಷಗಳ ಸಂಭಾಷಣೆಯ ಆಡಿಯೋವೊಂದು ಲಭ್ಯವಾಗಿದೆ. ಅದರಲ್ಲಿ ಇಬ್ಬರು ಕೆಫೆ ವ್ಯವಹಾರದ ವಿಚಾರವಾಗಿ ಜಗಳವಾಡುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಚುನಾವಣೆಯಲ್ಲಿ ʻಕೈʼ ಶಾಸಕ ನರೇಂದ್ರಸ್ವಾಮಿಗೆ ಐಶ್ವರ್ಯಗೌಡ ಹಣ ನೀಡಿದ್ದಾರೆ: ಅನ್ನದಾನಿ ಬಾಂಬ್‌

    ಆಡಿಯೋದಲ್ಲಿ ನಾವಿಬ್ಬರೂ ಡಿವೋರ್ಸ್‌ ಪಡೆದುಕೊಳ್ಳೋಣ. ಆದ್ರೆ ವಿಚ್ಛೇದನದ ನಂತರವೂ ವ್ಯವಹಾರದಲ್ಲಿ ಪಾಲುದಾರಳಾಗಿರುತ್ತೇನೆ. ನೀವು ನನ್ನ ಬಾಕಿ ಸಾಲವನ್ನ ತೀರಿಸಬೇಕು ಎಂದು ಖುರಾನಾ ಪತ್ನಿ ಮನಿಕಾ ಹೇಳಿದ್ದಾರೆ. ಘಟನೆಯ ಬಳಿಕ ಪೊಲೀಸರು ಖುರಾನಾ ಪತ್ನಿಯ ಫೋನನ್ನು ವಶಕ್ಕೆ ಪಡೆದಿದ್ದು, ಆಕೆಯನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನೂ ಓದಿ:  ಬಿಜೆಪಿಯ ಮತ ಖರೀದಿ ಯತ್ನವನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ – ಭಾಗವತ್‌ಗೆ ಕೇಜ್ರಿವಾಲ್ ಪ್ರಶ್ನೆ

    ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಟೆಕ್ಕಿಯಾಗಿದ್ದ ಅತುಲ್ ಸುಭಾಷ್ ಪತ್ನಿಯ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿದ್ದರು. ಸಾವಿಗೂ ಮೊದಲು ಅತುಲ್ ಸುಭಾಷ್ ಅವರು 24 ಪುಟಗಳ ಡೆತ್‌ನೋಟ್‌ ಬರೆದಿದ್ದು, ಅದನ್ನು ತಮ್ಮ ಕುಟುಂಬಸ್ಥರಿಗೆ ಕಳುಹಿಸಿದ್ದರು. ಅತುಲ್‌ ಸಾವು ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದಲ್ಲದೇ ಅನೇಕರು ಏಕಪಕ್ಷೀಯವಾಗಿರುವ ಕೌಟುಂಬಿಕ ವಿವಾಹ ಕಾಯ್ದೆಯ ಬಗ್ಗೆ ಚರ್ಚೆ ನಡೆಸುವಂತೆ ಮಾಡಿತ್ತು. ಅತುಲ್ ಸುಭಾಷ್ ಸಾವಿನ ನಂತರ ಅವರ ಪತ್ನಿ ನಿಖಿತಾ ಸಿಂಘಾನಿಯಾ ಆಕೆಯ ತಾಯಿ ಹಾಗೂ ಸೋದರನನ್ನು ಪೊಲೀಸರು ಬಂಧಿಸಿ 14 ದಿನಗಳ ನ್ಯಾಯಾಂಗ ಕಸ್ಟಡಿಯಲ್ಲಿರಿಸಿದ್ದು, ತನಿಖೆ ಮುಂದುವರಿದಿದೆ.

  • ಕೆಫೆ ಮಾಲೀಕನ ಕಿಡ್ನಾಪ್ – 26 ಲಕ್ಷ, ಆಡಿ ಕಾರು, ಚಿನ್ನ ಸುಲಿಗೆಗೈದ ಆರೋಪಿಗಳು ಅಂದರ್

    ಕೆಫೆ ಮಾಲೀಕನ ಕಿಡ್ನಾಪ್ – 26 ಲಕ್ಷ, ಆಡಿ ಕಾರು, ಚಿನ್ನ ಸುಲಿಗೆಗೈದ ಆರೋಪಿಗಳು ಅಂದರ್

                ಶರತ್ ಕುಮಾರ್                                                     ರಾಜ್ ಕಿರಣ್

    ಬೆಂಗಳೂರು: ಕೆಫೆ ಮಾಲೀಕನನ್ನ ಕಿಡ್ನಾಪ್ ಮಾಡಿ 26 ಲಕ್ಷ ಹಣ ಮತ್ತು ಆಡಿ ಕಾರು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಂತೆ ಹೈಗ್ರೌಂಡ್ಸ್ ಪೊಲೀಸರು 9 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: 88 ಲಕ್ಷದ ಐಷಾರಾಮಿ ಬೆಂಜ್ ಕಾರು ಇದೀಗ ಕೆಲಸಕ್ಕೆ ಬಾರದ ವಸ್ತು!

    ಕೆಫೆ ಮಾಲೀಕ ಅಭಿನವ್ ಸಿಂಘಾಲ್ ಅವರನ್ನು ಆರೋಪಿಗಳು ಅಪಹರಿಸಿದ್ದರು. 9 ಜನ ದುಷ್ಕರ್ಮಿಗಳು ಮೇ 13 ರಂದು ನ್ಯೂ ಬಿಇಎಲ್ ರಸ್ತೆಯಲ್ಲಿ ಅಭಿನವ್ ಸಿಂಗಾಲ್ ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಮಾಡಿ ಅವರನ್ನು ಬನ್ನೇರುಘಟ್ಟ ರಸ್ತೆಯ ಗೋದಾಮಿನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಬಳಿಕ ಆಡಿ ಕಾರು, ಚಿನ್ನಾಭರಣ, 26 ಲಕ್ಷ ಹಣವನ್ನು ಕಿತ್ತುಕೊಂಡಿದ್ದರು. ಅಲ್ಲದೇ ಬೆದರಿಕೆವೊಡ್ಡಿ ಕಳುಹಿಸಿದ್ದರು.

    ಅಭಿನವ್ ಸಿಂಘಾಲ್

    ಮೊದಲು ಈ ಘಟನೆ ಸಂಬಂಧ ಸದಾಶಿವನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಆದರೆ ಈ ಪ್ರಕರಣವನ್ನು ಸದಾಶಿವನಗರ ಠಾಣೆಯಿಂದ ಹೈಗ್ರೌಂಡ್ಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಪೊಲೀಸರು ಆರೋಪಿಗಳನ್ನು ಕರೆತಂದು ಬಿಟ್ಟು ಕಳುಹಿಸಿದ್ದಾರೆ ಎಂದು ಅಭಿನವ್ ಸಿಂಘಾಲ್ ಆರೋಪಿಸಿ ಸದಾಶಿವನಗರ ಪೊಲೀಸರ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರು.

    ಸದಾಶಿವನಗರ ಪೊಲೀಸ್ ಸಿಬ್ಬಂದಿ ವಿರುದ್ಧ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಠೋರ್ ಹೈಗ್ರೌಂಡ್ಸ್ ಠಾಣೆಗೆ ಪ್ರಕರಣವನ್ನು ವರ್ಗಾವಣೆ ಮಾಡಿ ವರದಿ ನೀಡುವಂತೆ ಆದೇಶ ನೀಡಿದ್ದರು. ಇದೀಗ ಪ್ರಕರಣ ಸಂಬಂಧ ಹೈಗ್ರೌಂಡ್ಸ್ ಪೊಲೀಸರು 9 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಶರತ್ ಕುಮಾರ್, ರಾಜ್ ಕಿರಣ್, ಹೇಮಂತ್, ವಾಸೀಂ, ಲೋಕೇಶ್, ಅರುಣ್ ಕುಮಾರ್, ಥಾಮಸ್, ಡ್ಯಾನಿಯಲ್ ಎಂದು ಗುರುತಿಸಲಾಗಿದೆ.

    ಅರುಣ್ ಕುಮಾರ್

    ದೂರಿನಲ್ಲಿ ಏನಿತ್ತು?
    ಆರೋಪಿ ಶರತ್‍ಕುಮಾರ್ ಕೆಫೆ ರೆಸ್ಟೋರೆಂಟ್‍ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ. ಈತನೇ ಆರೋಪಿಗಳನ್ನು ತನ್ನ ಸ್ನೇಹಿತರೆಂದು ನನಗೆ ಪರಿಯಚ ಮಾಡಿಸಿದ್ದನು. ಇವರೇ ಒಂದು ದಿನ ಹೇಮಂತ್ ಮತ್ತು ಡ್ಯಾನಿಯಲ್ ಇದ್ದ ಕಾರಿಗೆ ಆಡಿ ಕಾರ್ ಮೂಲಕ ಅಪಘಾತ ಮಾಡಿಸಿದರು. ನಂತರ ಕಾರನ್ನು ವಿಲ್ಸನ್ ಗಾರ್ಡನ್‍ನಲ್ಲಿದ್ದ ಥಾಮಸ್‍ನ ಜೋಸೆಫ್ ಆಟೋ ಗ್ಯಾರೇಜ್‍ಗೆ ರಿಪೇರಿಗೆ ತೆಗೆದುಕೊಂಡು ಹೋದರು. 13 ರಂದು ರಾಜ್ ಕಿರಣ್ ಮತ್ತು ಆತನ ಇಬ್ಬರು ಸ್ನೇಹಿತರು ನನ್ನನ್ನ ಗ್ಯಾರೇಜಿಗೆ ಕರೆದುಕೊಡು ಹೋಗುತ್ತೇನೆ ಎಂದು ಹೇಳಿ ಬನ್ನೇರುಘಟ್ಟ ಕಾಡಿನ ಮಧ್ಯೆ ಇರುವ ಗೋಡಾನ್‍ಗೆ ಕರೆದುಕೊಂಡು ಹೋದರು. ಅಲ್ಲಿ ನನ್ನ ಮೇಲೆ ಹಲ್ಲೆ ಮಾಡಿ, ನಂತರ ನನ್ನ ಬ್ಯಾಗಿನಲ್ಲಿದ್ದ ಚೆಕ್ ಬುಕ್, ರೆಸ್ಟೋರೆಂಟ್, ಕಾರಿಗೆ ಸಂಬಂಧಿಸಿದ ದಾಖಲಾತಿಗಳಿಗೆ ಸಹಿ ಮಾಡಿಸಿಕೊಂಡರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

    ಚಾಕು, ಕತ್ತಿ ತೋರಿಸಿ ನಾವು ಹೇಳಿದಂತೆ ಕೇಳಬೇಕು ಎಂದು ಬೆದರಿಸಿ ಜಯನಗರದ ಬ್ಯಾಂಕ್‍ಗೆ ಕಾರಿನಲ್ಲಿ ಕರೆದುಕೊಂಡು ಹೋದರು. ನಂತರ 2 ಚೆಕ್‍ಗಳ ಮೂಲಕ 9 ಲಕ್ಷ ಹಣವನ್ನು ಡ್ರಾ ಮಾಡಿಕೊಂಡರು. ನಂತರ ಬೆಂಗಳೂರಿನ ವಿವಿಧ ಜಾಗಗಳಲ್ಲಿ ನನ್ನ ಕೂಡಿ ಹಾಕಿದರು. ಅಲ್ಲದೇ ಚಿನ್ನದ ಸರ, ಉಂಗುರ, ಕಿತ್ತುಕೊಂಡರು. ಬಳಿಕ ಎಟಿಎಂ ಮೂಲಕ 55 ಸಾವಿರ ಮತ್ತು ಪರ್ಸ್ ನಲ್ಲಿದ್ದ 37 ಸಾವಿರ ಹಣವನ್ನು ಕಿತ್ತುಕೊಂಡರು. ಮತ್ತೆ 16 ಲಕ್ಷ ರೂಪಾಯಿಯನ್ನು ಬೇರೆ ಬೇರೆ ಖಾತೆಗೆ ವರ್ಗಾವಣೆ ಮಾಡಿಕೊಂಡರು. ಕೊನೆಯಲ್ಲಿ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನಿಮ್ಮ ಕುಟುಂಬದವರನ್ನು ಕೊಲೆ ಮಾಡುವುದಾಗಿ ಬೆದರಿಸಿ ಹೆಬ್ಬಾಳದ ಬಳಿ ಬಿಟ್ಟು ಪರಾರಿಯಾದರು ಎಂದು ಅಭಿನವ್ ಸಿಂಘಾಲ್ ದೂರು ನೀಡಿದ್ದರು.