Tag: ಕೆಮ್ಮಿನ ಸಿರಫ್

  • ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್ – ಸ್ರೇಸನ್ ಲೈಸೆನ್ಸ್ ರದ್ದು, ಕಂಪನಿ ಬಂದ್

    ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್ – ಸ್ರೇಸನ್ ಲೈಸೆನ್ಸ್ ರದ್ದು, ಕಂಪನಿ ಬಂದ್

    ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ (Cough Syrup) ತಯಾರಕ ಕಂಪನಿ ಸ್ರೇಸನ್ ಫಾರ್ಮಾಸ್ಯುಟಿಕಲ್‌ನ (Sresan Pharmaceutical) ಉತ್ಪಾದನಾ ಪರವಾನಗಿಯನ್ನು ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ಸೋಮವಾರ ರದ್ದುಗೊಳಿಸಿದೆ.

    ಅಲ್ಲದೇ ಕಂಪನಿಯನ್ನು ಮುಚ್ಚುವಂತೆ ಆದೇಶ ನೀಡಿದೆ. ಈ ಔಷಧದಲ್ಲಿ ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್ (DEG) 48.6% ಇರುವುದು ಪತ್ತೆಯಾಗಿದೆ. ಈ ಔಷಧವು ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್ – ಚೆನ್ನೈನ 7 ಸ್ಥಳಗಳ ಮೇಲೆ ಇಡಿ ದಾಳಿ

    ವಿಷಕಾರಿ ದ್ರಾವಣವಾದ ಡೈಎಥಿಲೀನ್ ಗ್ಲೈಕೋಲ್‌ವಿರುವ ಸ್ರೇಸನ್ ಕಂಪನಿಯನ್ನು ಅಧಿಕೃತವಾಗಿ ಮುಚ್ಚಲಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ತಿಳಿಸಿದೆ. ಅಲ್ಲದೇ ತಮಿಳುನಾಡಿನ ಎಲ್ಲಾ ಔಷಧ ಉತ್ಪಾದನಾ ಘಟಕಗಳಲ್ಲಿ ಸಮಗ್ರ ತಪಾಸಣೆಗೆ ಇಲಾಖೆ ಆದೇಶಿಸಿದೆ.

    ಏನಿದು ಪ್ರಕರಣ?
    ಮಧ್ಯಪ್ರದೇಶ, ರಾಜಸ್ಥಾನದಲ್ಲಿ ವಿಷಕಾರಿ ದ್ರಾವಣವಾದ ಡೈಎಥಿಲಿನ್ ಗ್ಲೈಕಾಲ್ ಮತ್ತು ಎಥಿಲಿನ್ ಗ್ಲೈಕಾಲ್ ಇರುವ ಸಿರಪ್ ಸೇವಿಸಿದ 20 ಮಕ್ಕಳು ಮೂತ್ರಪಿಂಡ ಸೋಂಕಿನಿಂದ ಮೃತಪಟ್ಟಿದ್ದರು. ಕೆಲ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗಿದ್ದರು.

    ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುವ ಸ್ರೇಸನ್ ಫಾರ್ಮಾ ಮಾಲೀಕ ರಂಗನಾಥನ್‌ನನ್ನು ಮಧ್ಯಪ್ರದೇಶ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದರು. ಅಲ್ಲದೇ ಈ ಪ್ರಕರಣವನ್ನು ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಅಲ್ಲದೇ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಚೆನ್ನೈನಲ್ಲಿ ಸ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7 ಸ್ಥಳಗಳ ಮೇಲೆ ದಾಳಿ ಮಾಡಿತ್ತು.

  • 6 ತಿಂಗಳ ಮಗುವಿಗೆ ಕೆಮ್ಮಿದ್ದರೆ ಎದೆಹಾಲುಣಿಸಿ, ಸಿರಪ್ ನೀಡಬೇಡಿ: ವೈದ್ಯಕೀಯ ಇಲಾಖೆ ಗೈಡ್‌ಲೈನ್ಸ್ ಏನು?

    6 ತಿಂಗಳ ಮಗುವಿಗೆ ಕೆಮ್ಮಿದ್ದರೆ ಎದೆಹಾಲುಣಿಸಿ, ಸಿರಪ್ ನೀಡಬೇಡಿ: ವೈದ್ಯಕೀಯ ಇಲಾಖೆ ಗೈಡ್‌ಲೈನ್ಸ್ ಏನು?

    – ಕಿಲ್ಲರ್ ಕೆಮ್ಮಿನ ಸಿರಪ್ ಕೇಸ್; ಪ್ರತಿಷ್ಟಿತ ಹೆರಿಗೆ ಆಸ್ಪತ್ರೆ, ಮಕ್ಕಳ ಆಸ್ಪತ್ರೆಗೆ ವಿಶೇಷ ಸೂಚನೆ

    ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ (Cough Syrup) ಸೇವಿಸಿ 6 ಮಕ್ಕಳು ಸಾವನ್ನಪ್ಪಿದ ಬಳಿಕ, ಸಿರಪ್ ಬಳಕೆಗೆ ಆರೋಗ್ಯ ಇಲಾಖೆ ಗೈಡ್‌ಲೈನ್ಸ್ ಬಿಡುಗಡೆ ಮಾಡಿತ್ತು. ಈಗ ವೈದ್ಯಕೀಯ ಶಿಕ್ಷಣ ಇಲಾಖೆ (Medical Education Department) ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹೆರಿಗೆ ಆಸ್ಪತ್ರೆಗಳಲ್ಲಿ ವೈದ್ಯರು, ಗರ್ಭಿಣಿಯರು ಹಾಗೂ ಬಾಣಂತಿಯರ ಬಗ್ಗೆ ಎಚ್ಚರಿಕೆ ವಹಿಸುತ್ತಾ ಇದ್ದಾರೆ.

    ಹೊರ ರಾಜ್ಯಗಳಲ್ಲಿ ಸಿರಪ್‌ನಿಂದ ಮಕ್ಕಳು ಸಾವನ್ನಪ್ಪಿದ ಪ್ರಕರಣದ ಬಳಿಕ ಎಲ್ಲಾ ರಾಜ್ಯಗಳಲ್ಲೂ ಮಾರ್ಗಸೂಚಿ ಬಿಡುಗಡೆ ಆಗಿದೆ. ಕರ್ನಾಟಕದ ಆರೋಗ್ಯ ಇಲಾಖೆಯಿಂದ ಕೂಡ ಮಾರ್ಗಸೂಚಿ ಬಿಡುಗಡೆ ಆಗಿತ್ತು. ಈಗ ವೈದ್ಯಕೀಯ ಶಿಕ್ಷಣ ಇಲಾಖೆಯೂ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳು ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದೆ.

    ಅದರಲ್ಲೂ ಹೆರಿಗೆ ಆಸ್ಪತ್ರೆಗಳು ಗರ್ಭಿಣಿಯರ ಮೇಲೆ ಹೆಚ್ಚು ನಿಗಾವಹಿಸಬೇಕು ಎಂದು ಸೂಚಿಸಿದ್ದು, ವಾಣಿ ವಿಲಾಸ ಆಸ್ಪತ್ರೆಗೆ ಬರುವ ಬಾಣಂತಿಯರು ಮತ್ತು ಪೋಷಕರಿಗೆ ಸಿರಪ್ ಬಳಕೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುತ್ತಿದ್ದಾರೆ.

    ಸಿರಪ್ ಬಳಕೆಗೆ ಮುಂಜಾಗ್ರತಾ ಕ್ರಮವೇನು?
    * ಆರು ತಿಂಗಳ ಮಗುವಿಗೆ ಕೆಮ್ಮಿದ್ದರೆ ಎದೆ ಹಾಲುಣಿಸಬೇಕು. ಸಿರಪ್ ನೀಡಬಾರದು.
    * ಮಗುವಿಗೆ ನ್ಯುಮೋನಿಯಾದಂತಹ ಲಕ್ಷಣ ಕಂಡುಬಂದಾಗ ಸಿರಪ್ ಬಳಕೆ ಮಾಡಬಾರದು. ವೈದ್ಯರ ಸಲಹೆ ಪಡೆಯಬೇಕು.
    * ಮಗು ಅನಾರೋಗ್ಯ ತಪ್ಪಿದಾಗ ವೈದ್ಯರನ್ನ ಭೇಟಿ ಮಾಡಬೇಕು.
    * ಮಗುವಿಗೆ ಕೆಮ್ಮು ಜಾಸ್ತಿ ಆದಾಗ ವೈದ್ಯರ ಸಲಹೆ ಮೇರೆಗೆ ಔಷಧಿ ಕೊಡಬೇಕು.
    * ಯಾವುದೇ ಸಿರಪನ್ನು ದೀರ್ಘಕಾಲದವರೆಗೂ ಬಳಸಬಾರದು.

    ಒಟ್ಟಾರೆ ಸಿರಪ್ ಬಗ್ಗೆ ಎಚ್ಚರಿಕೆಯ ಅಗತ್ಯವಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ವೈದ್ಯರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಿಯಮಗಳನ್ನ ಪಾಲಿಸಬೇಕಾಗಿದೆ.

  • ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

    ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

    ನವದೆಹಲಿ: ಮಧ್ಯಪ್ರದೇಶದಲ್ಲಿ (Madhya Pradesh) ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

    ಪಿಐಎಲ್‌ನಲ್ಲಿ, ಕಲುಷಿತ ಕೆಮ್ಮಿನ ಸಿರಪ್ (Cough Syrup) ತಯಾರಿಕೆ, ಪರೀಕ್ಷೆ ಮತ್ತು ವಿತರಣೆಯ ಬಗ್ಗೆ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ: 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ – ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    ಈಗಾಗಲೇ ಕೆಮ್ಮಿನ ಸಿರಪ್ ಸೇವಿಸಿ 16 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಡಾ. ಪ್ರವೀಣ್ ಸೋನಿ ಅವರನ್ನು ಬಂಧಿಸಿ ಅಮಾನತುಗೊಳಿಸಲಾಗಿದೆ. ಕೆಮ್ಮಿನ ಸಿರಪ್ ತಯಾರಿಸಿದ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಕೂಡ ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಂಡಿದ್ದಾರೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ ಮತ್ತು ಔಷಧ ನಿಯಂತ್ರಕರನ್ನು ವರ್ಗಾಯಿಸಿದ್ದಾರೆ. ತನಿಖೆಗಾಗಿ ಪೊಲೀಸರು 12 ಸದಸ್ಯರ ವಿಶೇಷ ತನಿಖಾ ತಂಡವನ್ನು ಸಹ ರಚಿಸಿದೆ.

    ಔಷಧ ನಿರೀಕ್ಷಕ ಚಿಂದ್ವಾರ ಗೌರವ್ ಶರ್ಮಾ, ಔಷಧ ನಿರೀಕ್ಷಕ ಜಬಲ್ಪುರ ಶರದ್ ಕುಮಾರ್ ಜೈನ್ ಮತ್ತು ರಾಜ್ಯದ ಆಹಾರ ಮತ್ತು ಔಷಧ ಆಡಳಿತದ ಉಪನಿರ್ದೇಶಕ ಶೋಭಿತ್ ಕೋಸ್ಟಾ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಐಎಎಸ್ ಅಧಿಕಾರಿ ಔಷಧ ನಿಯಂತ್ರಕ ದಿನೇಶ್ ಮೌರ್ಯ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ.ಇದನ್ನೂ ಓದಿ: ಪತ್ನಿಗೆ ಮೆಸೇಜ್‌ ಮಾಡಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ – ಜಾರ್ಖಂಡ್‌ಗೆ ಹೊರಟಿದ್ದ ಆರೋಪಿ ಅರೆಸ್ಟ್‌