Tag: ಕೆರೆ ಪೂಜೆ

  • ರಮೇಶ್ ಕುಮಾರ್ ಲಾಕ್‍ಡೌನ್ ಉಲ್ಲಂಘನೆ- ನೂರಾರು ಜನ ಸೇರಿಸಿ ಕೆರೆ ಪೂಜೆ

    ರಮೇಶ್ ಕುಮಾರ್ ಲಾಕ್‍ಡೌನ್ ಉಲ್ಲಂಘನೆ- ನೂರಾರು ಜನ ಸೇರಿಸಿ ಕೆರೆ ಪೂಜೆ

    – ಮಾಜಿ ಸ್ಪೀಕರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನೆಟ್ಟಿಗರ ಆಕ್ರೋಶ

    ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೂರಾರು ಜನರನ್ನು ಸೇರಿಸಿ ಕರೆಯಲ್ಲಿ ಪೂಜೆ ಮಾಡುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿದ್ದಾರೆ.

    ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಆಲವಾಟ್ಟ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ ತಮ್ಮದೆ ಮುಖಂಡರು, ಸ್ಥಳೀಯರನ್ನು ಸೇರಿಸಿಕೊಂಡು ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಪೂಜೆ ವೇಳೆ ನೂರಾರು ಜನರ ಜಮಾವಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಮಾಜಿ ಸ್ಪೀಕರ್ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬಡವರಿಗೊಂದು, ಶ್ರೀಮಂತರಿಗೊಂದು ನ್ಯಾಯಾನಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಬಡವರ ಮದುವೆಗೆ 10 ಜನರಿಗೆ ಮಾತ್ರ ಅವಕಾಶ ನೀಡುವ ಸರ್ಕಾರ, ಜನಪ್ರತಿನಿಧಿಗಳಿಗೆ ಈ ರೀತಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಕೆರೆ ಪೂಜೆಗೆ ನೂರಾರು ಜನರನ್ನು ಸೇರಿಸಿಕೊಂಡ ರಮೇಶ್ ಕುಮಾರ್ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇನ್ನೂ ವಿಶೇಷವೆಂದರೆ ಇದನ್ನು ರಮೇಶ್ ಕುಮಾರ್ ಬೆಂಬಲಿಗರು ಫೇಸ್‍ಬುಕ್ ನಲ್ಲಿ ಲೈವ್ ಮಾಡಿದ್ದಾರೆ.

  • ಬಾಗಿನ ಅರ್ಪಿಸಲು ಕುದುರೆ ಏರಿ ಬಂದ ಬಿಜೆಪಿ ಶಾಸಕ

    ಬಾಗಿನ ಅರ್ಪಿಸಲು ಕುದುರೆ ಏರಿ ಬಂದ ಬಿಜೆಪಿ ಶಾಸಕ

    ತುಮಕೂರು: ತುಂಬಿದ ಕೆರೆಗೆ ಬಾಗಿನ ಅರ್ಪಿಸಲು ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಮ್ ಕುದುರೆ ಏರಿ ಬಂದು ಸುದ್ದಿಯಾಗಿದ್ದಾರೆ.

    ತಾಲೂಕಿನ ಸಿಎಸ್ ಪುರ ಹೋಬಳಿಯ ಚೆಂಗಾವಿ ಕೆರೆ ಈ ಬಾರಿ ಪೂರ್ಣಪ್ರಮಾಣದಲ್ಲಿ ತುಂಬಿ ಕೋಡಿ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಇಂದು ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಮಸಾಲೆ ಜಯರಾಮ್ ಅವರು ಕುದುರೆ ಏರಿ ಬಂದು ಕೆರೆಗೆ ಬಾಗಿನ ಅರ್ಪಿಸಿದ್ದು ವಿಶೇಷವಾಗಿತ್ತು. ಅಲ್ಲದೆ ಶಾಸಕರು ಕುದುರೆ ಏರಿ ಬಂದು ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಆಶ್ಚರ್ಯ ಮೂಡಿಸಿದ್ದಾರೆ.

    ಈ ಹೊಸಾ ಗೆಟಪ್ ನೋಡಿದ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಕುದುರೆ ಮೇಲಿದ್ದ ಶಾಸಕರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ಹಾಗೆಯೇ ಕುದುರೆ ಏರಿ ಬಂದು ಪೂಜೆ ಸಲ್ಲಿಸಿದ್ದು ಮಸಾಲೆ ಜಯಾರಾಮ್ ಅವರಿಗೂ ಖುಷಿಕೊಟ್ಟಿದೆ.

    ಈ ಹಿಂದೆ ತುರುವೆಕೆರೆ ತಾಲೂಕಿನ ದೊಡ್ಡಮಲ್ಲಿಗೇರೆಯಲ್ಲಿ ಅ. 6ರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಮಸಾಲೆ ಜಯರಾಮ್ ಸಖತ್ ಮನರಂಜನೆ ನೀಡುವ ಮೂಲಕ ದಸರಾ ವೈಭವನ್ನು ಇನ್ನಷ್ಟು ಹೆಚ್ಚಿಸಿದ್ದರು.

    ದಸರಾ ಕಾರ್ಯಕ್ರಮದಲ್ಲಿ ರಂಜಿಸಿದ ಶಾಸಕ ಮಸಾಲೆ ಜಯರಾಮ್ ಹಾಡಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮೂಲತಃ ನಾಟಕ ಕಲಾವಿದರಾಗಿರುವ ಶಾಸಕರು ದಸರಾ ಕಾರ್ಯಕ್ರಮದಲ್ಲಿ ಸಖತ್ ಮನರಂಜನೆ ನೀಡಿ ಎಲ್ಲರ ಗಮನ ಸೆಳೆದಿದ್ದರು. ದೊಡ್ಡಮಲ್ಲಿಗೇರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಡು ಹೇಳಿ ಶಾಸಕರು ಎಲ್ಲರ ಮನ ಗೆದ್ದಿದ್ದರು.

    ರಾಮನ ಅವತಾರ ರಘುಕುಲ ಸೋಮನ ಅವತಾರ ಸಂಪೂರ್ಣ ಹಾಡು ಹಾಡಿ ಮಿಂಚಿದ್ದರು. ಶಾಸಕರ ಹಾಡಿಗೆ ಕಾರ್ಯಕ್ರಮದಲ್ಲಿ ನೆರೆದ ಪ್ರೇಕ್ಷಕರು ತಲೆದೂಗಿ, ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಮೂಲಕ ಮೆಚ್ಚುಗೆ ಸೂಚಿಸಿದ್ದರು. ಕಾರ್ಯಕ್ರಮಕ್ಕೆ ಬಂದಿದ್ದ ಶಾಸಕರಿಗೆ ಕಾರ್ಯಕರ್ತರು ಒತ್ತಾಯ ಮಾಡಿದ್ದಕ್ಕೆ ಅವರು ಹಾಡು ಹೇಳಿದರು. ಹೀಗಾಗಿ ಶಾಸಕರ ಗಾಯನ ಕೇಳಿ ಕಾರ್ಯಕರ್ತರು ಸಿಕ್ಕಾಪಟ್ಟೆ ಖುಷಿಪಟ್ಟಿದ್ದರು. ಜೊತೆಗೆ ವೇದಿಕೆ ಮೇಲೆ ಮಸಾಲ ಜಯರಾಮ್ ಅವರು ಮೈಕ್ ಹಿಡಿದು ಹಾಡು ಹೇಳುತ್ತಾ ಎಲ್ಲರನ್ನು ರಂಜಿಸುತ್ತಿರುವುದನ್ನು ಸ್ಥಳೀಯರು ವಿಡಿಯೋ ಕೂಡ ಮಾಡಿಕೊಂಡಿದ್ದರು.