Tag: ಕೆಲಸದಿಂದ ವಜಾ

  • ಯುಎಸ್, ಭಾರತದ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ CEO

    ಯುಎಸ್, ಭಾರತದ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ CEO

    ಅಲ್ಬನಿ: Better.com ಸಿಇಒ ಜೂಮ್ ಮೀಟಿಂಗ್ ನಲ್ಲಿ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ ಆಘಾತಕಾರಿ ಘಟನೆ ಈಗ ಎಲ್ಲ ಕಡೆ ಸುದ್ದಿಯಾಗಿದೆ.

    ನ್ಯೂಯಾರ್ಕ್ ಮೂಲದ Better.com ನ ಸಿಇಒ ವಿಶಾಲ್ ಗಾರ್ಗ್ ಅವರು ತಮ್ಮ ಕಂಪನಿಯ ಸುಮಾರು 9% ಉದ್ಯೋಗಿಗಳನ್ನು ಜೂಮ್ ಮೀಟಿಂಗ್ ಕರೆದು ವಜಾಗೊಳಿಸಿದ್ದಾರೆ. ವರದಿಗಳ ಪ್ರಕಾರ, ಯುಎಸ್ ಮತ್ತು ಭಾರತದಲ್ಲಿನ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸಿಇಒ ಮೂರು ನಿಮಿಷಗಳ ಜೂಮ್ ಮೀಟಿಂಗ್ ಸಮಯದಲ್ಲಿ ಹಠಾತ್ತನೆ ವಜಾ ಮಾಡಿದ್ದಾರೆ. ಈ ಕುರಿತು ಯಾವ ಉದ್ಯೋಗಿಗಳಿಗೂ ಮಾಹಿತಿ ಎಲ್ಲದ ಕಾರಣ ಎಲ್ಲರೂ ಶಾಕ್ ಆಗಿದ್ದಾರೆ.

    ಹಠಾತ್ತನೆ ವಜಾ ಮಾಡಲು ಕಾರಣವೇನು? ಎಂದು ಕೇಳಿದಾಗ, ಮಾರುಕಟ್ಟೆಯ ದಕ್ಷತೆ, ಕಾರ್ಯಕ್ಷಮತೆ ಮತ್ತು ಉತ್ಪಾದಕತೆಯಲ್ಲಿ ಬದಲಾವಣೆಯಿಂದ ಅವರನ್ನು ವಜಾಗೊಳಿಸಲಾಗಿದೆ ಎಂದು ಭಾರತೀಯ-ಅಮೆರಿಕನ್ ಸಿಇಒ ಹೇಳಿದರು. ತಾವು ಎರಡನೇ ಬಾರಿ ಈ ರೀತಿ ಮಾಡುತ್ತಿರುವುದಾಗಿ ಅವರೇ ಹೇಳಿದರು. ಇದನ್ನೂ ಓದಿ: ಅಫ್ಘಾನ್ ಹುಡುಗಿಯರ ಪರ ನಿಂತ ಮಲಾಲಾ ಯೂಸುಫ್ ಝಾಯಿ

    ವಿಶಾಲ್ ಗಾರ್ಗ್ ಅವರು ಜೂಮ್ ಮೀಟಿಂಗ್ ನಲ್ಲಿ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದ್ದು, ನಾನು ಇಂದು ನಿಮಗೆ ಒಳ್ಳೆಯ ಸುದ್ದಿಯನ್ನು ಹೇಳಲು ಬಂದಿಲ್ಲ. ಮಾರುಕಟ್ಟೆ ಬದಲಾಗಿದೆ, ನಾವು ಬದುಕಲು ಮುಂದೆ ಸಾಗಬೇಕು. ಆಶಾದಾಯಕವಾಗಿ, ಧೈರ್ಯದಿಂದ ನಮ್ಮನ್ನು ನಾವು ಅಭಿವೃದ್ಧಿಪಡಿಸಲು ಮುಂದಾಗಬೇಕು. ಇದು ನೀವು ಕೇಳಲು ಬಯಸುವ ಸುದ್ದಿಯಲ್ಲ. ಆದರೆ ಕೊನೆಯದಾಗಿ ಇದು ನನ್ನ ನಿರ್ಧಾರವಾಗಿತ್ತು. ನೀವು ಅದನ್ನು ನನ್ನಿಂದಲ್ಲೇ ಕೇಳಬೇಕೆಂದು ನಾನು ಬಯಸುತ್ತೇನೆ. ಇದು ನಿಜವಾಗಿಯೂ ಸವಾಲಿನ ನಿರ್ಧಾರವಾಗಿದೆ. ನನ್ನ ವೃತ್ತಿಜೀವನದಲ್ಲಿ ಇದು ಎರಡನೇ ಬಾರಿಗೆ ಈ ರೀತಿಯ ನಿರ್ಧಾರವನ್ನು ಮಾಡುತ್ತಿದ್ದೇನೆ ಎಂದರು.

    ನಾನು ಇದನ್ನು ಮಾಡಲು ಬಯಸುವುದಿಲ್ಲ. ಹಿಂದೆ ಈ ರೀತಿ ನಾನು ಮಾಡಿದ್ದಕ್ಕೆ ನಾನು ಅತ್ತಿದ್ದೆ. ಈ ಬಾರಿ ನನಗೆ ಸ್ವಲ್ಪ ಧೈರ್ಯವಿದೆ ಎಂದು ನಾನು ಭಾವಿಸುತ್ತೇನೆ. ನಾವು ಕಂಪನಿಯ ಸುಮಾರು 15% ಉದ್ಯೋಗಿಗಳನ್ನು ವಜಾಗೊಳಿಸಿದ್ದೆವು. ಇಂದು ದುರದೃಷ್ಟಕರವಾಗಿ ನೀವು ಈ ಗುಂಪಿನ ಭಾಗವಾಗಿದ್ದೀರಿ. ಇಲ್ಲಿಗೆ ನಿಮ್ಮ ಉದ್ಯೋಗವನ್ನು ತಕ್ಷಣವೇ ಕೊನೆಗೊಳಿಸಲಾಗಿದೆ ಎಂದು ಶಾಕಿಂಗ್ ಹೇಳಿಕೆಯನ್ನು ನೀಡಿದರು.

    ಈ ವೀಡಿಯೋ ಕಾಲ್ ಅನ್ನು ಉದ್ಯೋಗಿಯೊಬ್ಬರು ರೆಕಾರ್ಡ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ಈ ವೀಡಿಯೋವನ್ನು ನೋಡಿದ ನೆಟ್ಟಿಗರು ಫುಲ್ ಶಾಕ್ ಆಗಿ, ಕಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಓಟಿಟಿಯಿಂದ ವಿಕ್ಕಿ-ಕತ್ರಿನಾ ವೆಡ್ಡಿಂಗ್ ಕ್ಲಿಪ್ಸ್ 100 ಕೋಟಿ ರೂ. ಆಫರ್

    ರಜೆಯ ಮೊದಲೇ ಉದ್ಯೋಗಿಗಳನ್ನು ವಜಾ ಮಾಡಿದ್ದಕ್ಕಾಗಿ ಸಿಇಒ ಅನ್ನು ಅನೇಕರು ಟೀಕಿಸಿದ್ದಾರೆ. ಇನ್ನೂ ಕೆಲವರು ಕಾರ್ಪೊರೇಟ್ ಸಂಸ್ಕøತಿಯನ್ನು ದೂಷಿಸಿದ್ದು, ವಜಾ ಮಾಡಿದ ಉದ್ಯೋಗಿಗಳಿಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.

  • ಆಸ್ಪತ್ರೆಗೆ ಕೊರೊನಾ ಶಂಕಿತ ಬಂದಿದ್ದ ಎಂದ ವೈದ್ಯೆಯ ಕೆಲಸ ಹೋಯ್ತು!

    ಆಸ್ಪತ್ರೆಗೆ ಕೊರೊನಾ ಶಂಕಿತ ಬಂದಿದ್ದ ಎಂದ ವೈದ್ಯೆಯ ಕೆಲಸ ಹೋಯ್ತು!

    ತ್ರಿಶೂರ್: ನಮ್ಮ ಆಸ್ಪತ್ರೆಗೆ ಕೊರೊನಾ ಶಂಕಿತನೊಬ್ಬ ಬಂದಿದ್ದ ಎಂದು ಹೇಳಿದ್ದ ವೈದ್ಯೆಯನ್ನು ಆಸ್ಪತ್ರೆಯ ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ. ತ್ರಿಶೂರ್ ಜಿಲ್ಲೆಯ ತಳಿಕುಳಂ ಎಂಬಲ್ಲಿ ಖಾಸಗಿ ಕ್ಲಿನಿಕ್‍ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆ ಶಿನು ಶ್ಯಾಮಲನ್ ಈ ವಿಚಾರವನ್ನು ತನ್ನ ಫೇಸ್‍ಬುಕ್ ಪೇಜ್‍ನಲ್ಲಿ ಬರೆದುಕೊಂಡಿದ್ದಾರೆ.

    ಕೊರೊನಾ ವೈರಸ್ ಇದೆ ಎಂದು ಶಂಕಿತ ವ್ಯಕ್ತಿಯೋರ್ವ ನಮ್ಮ ಆಸ್ಪತ್ರೆಗೆ ಬಂದಿದ್ದ. ಬಳಿಕ ಆ ವ್ಯಕ್ತಿ ಕತಾರ್ ಗೆ ಹೋಗಿದ್ದ ಎಂದು ಶಿನು ಶ್ಯಾಮಲನ್ ತಮ್ಮ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದರು. ಆದರೆ ವೈದ್ಯೆಯ ಈ ಕೆಲಸ ಕ್ಲಿನಿಕ್ ಮಾಲೀಕನಿಗೆ ಖುಷಿ ನೀಡಲಿಲ್ಲ. ಬದಲಿಗೆ, ನಮ್ಮ ಕ್ಲಿನಿಕ್‍ಗೆ ಕೊರೊನಾ ಶಂಕಿತ ಬಂದಿದ್ದ ಎಂದರೆ ಬೇರೆ ರೋಗಿಗಳು ನಮ್ಮಲ್ಲಿಗೆ ಬರುತ್ತಾರಾ ಎಂದು ಪ್ರಶ್ನಿಸಿದರು. ನಾಳೆಯಿಂದ ಕೆಲಸಕ್ಕೆ ಬರಬೇಡ ಎಂದು ಹೇಳಿದ್ದಾರಂತೆ. ಈ ಎಲ್ಲಾ ವಿಚಾರಗಳನ್ನೂ ಶಿನು ಶ್ಯಾಮಲನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ಡಾ.ಶಿನು ಶ್ಯಾಮಲನ್ ಫೇಸ್‍ಬುಕ್ ಪೇಜ್‍ನಲ್ಲಿ ಬರೆದಿದ್ದೇನು?:
    ಖಾಸಗಿ ಕ್ಲಿನಿಕ್‍ಗೆ ಬಂದ ರೋಗಿಯಲ್ಲಿ ಸೋಂಕು ಶಂಕೆ ಬಂದ ಹಿನ್ನೆಲೆಯಲ್ಲಿ ಈ ವಿಚಾರವನ್ನು ಆರೋಗ್ಯ ಇಲಾಖೆಗೆ, ಮರುದಿನ ಪೊಲೀಸರಿಗೆ ರಿಪೋರ್ಟ್ ಮಾಡಿದ್ದಕ್ಕೆ, ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದಕ್ಕೆ, ಟಿವಿ ಚಾನೆಲ್‍ಗಳ ಮುಂದೆ ಹೇಳಿದ್ದಕ್ಕೆ ನನ್ನನ್ನು ಕೆಲಸದಿಂದ ಕೈಬಿಟ್ಟಿದ್ದಾರೆ.

    ರೋಗಿಯ ಬಗ್ಗೆಯಾಗಲೀ, ಕ್ಲಿನಿಕ್ ಕುರಿತಾಗಲೀ ನಾನು ಯಾವುದೇ ಮಾಹಿತಿ ಬಹಿರಂಗಪಡಿಸಿರಲಿಲ್ಲ. ಮಾಲೀಕರು ಹೇಳುವಂತೆ ಏನೂ ಮಾತನಾಡದೇ ಸುಮ್ಮನಿರಲು ಇದರಲ್ಲಿ ಅಂತಹ ವಿಚಾರವೇನಿದೆ..? ಬಂದಿದ್ದ ವ್ಯಕ್ತಿಗೆ ಕೊರೊನಾ ಬಂದಿತ್ತು ಎಂದು ಗೊತ್ತಾದರೆ ನಮ್ಮ ಕ್ಲಿನಿಕ್‍ಗೆ ಯಾರು ಬರುತ್ತಾರೆ ಎಂಬಿತ್ಯಾದಿ ಸ್ವಾರ್ಥ ಪ್ರಶ್ನೆಗಳಿತ್ತು ಮಾಲೀಕರಿಗೆ. ನಿಮಗೆಲ್ಲಾ ಆರೋಗ್ಯ ಕ್ಷೇತ್ರ ಎನ್ನುವುದು ಬಿಸಿನೆಸ್. ಕ್ಷಮಿಸಿಬಿಡಿ, ತಪ್ಪು ಕಾಣಿಸಿದರೆ ಧೈರ್ಯದಿಂದ ಹೇಳುತ್ತೇನೆ, ಇನ್ನು ಮುಂದೆಯೂ ಅದನ್ನೇ ಮಾಡುತ್ತೇನೆ. ಹೇಳಬೇಕಾದವರಿಗೆ ಹೇಳಿದರೂ ರೋಗಿಯನ್ನು ಕತಾರ್ ಗೆ ಹೋಗಲು ಬಿಟ್ಟವರಿಗೆ ಯಾವ ಸಮಸ್ಯೆಯೂ ಇಲ್ಲ, ಯಾವ ಕ್ರಮವೂ ಇಲ್ಲ. ಆದರೆ ನನಗೆ ನನ್ನ ಕೆಲಸ ಹೋಯಿತು. ಎಂಥಾ ರಾಜ್ಯವಿದು.

    ನಾನು ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಇನ್ನು ಮುಂದೆಯೂ ಧ್ವನಿ ಎತ್ತುವೆ.