Tag: ಕೆಲಸ

  • ಪಾತ್ರೆ ತೊಳ್ದಿಲ್ಲಾ ಅಂದ್ರೆ ಊಟ ಇಲ್ವಂತೆ- ಕಷ್ಟ ಹೇಳ್ಕೊಂಡ ಶ್ರೀಮುರಳಿ

    ಪಾತ್ರೆ ತೊಳ್ದಿಲ್ಲಾ ಅಂದ್ರೆ ಊಟ ಇಲ್ವಂತೆ- ಕಷ್ಟ ಹೇಳ್ಕೊಂಡ ಶ್ರೀಮುರಳಿ

    ಬೆಂಗಳೂರು: ಉಗ್ರಂ ಖ್ಯಾತಿಯ ಶ್ರೀಮುರಳಿ ಮನೆಯಲ್ಲಿ ಪಡಬಾರದ ಕಷ್ಟ ಪಡುತ್ತಿದ್ದಾರೆ. ಹೋಮ್ ರೂಲ್ಸ್ ಕಟ್ಟುನಿಟ್ಟಾಗಿ ಪಾಲಿಸಲೇಬೇಕಂತೆ ಇಲ್ಲವಾದಲ್ಲಿ ಅವರ ಪತ್ನಿ ಗುರ್ ಅಂತಾರಂತೆ.

    ಲಾಕ್‍ಡೌನ್ ದಿನಗಳು ಹಲವು ನಟ, ನಟಿಯರಿಗೆ ಸಂತಸ ನೀಡಿದ್ದು, ಕುಟುಂಬದೊಂದಿಗೆ ಕಾಲ ಕಳೆಯಲು ಅವಕಾಶ ಸಿಕ್ಕಿದೆ. ಇದನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಬಾಲಿವುಡ್, ಸ್ಯಾಂಡಲ್‍ವುಡ್ ಸೇರಿದಂತೆ ಬಹುತೇಕ ನಟರು ತಮ್ಮ ಪ್ರೀತಿ ಪಾತ್ರರೊಂದಿಗೆ ಸಂತಸದಿಂದ ಕಾಲ ಕಳೆಯುತ್ತಿದ್ದಾರೆ. ಹತ್ತು ಹಲವು, ಚಟುವಟಿಕೆಗಳು ತಮ್ಮ ಹವ್ಯಾಸಗಳು ಸೇರಿದಂತೆ ಮನೆಗೆಲಸಗಳನ್ನೂ ಅಷ್ಟೇ ಇಷ್ಟಪಟ್ಟು ಮಾಡುತ್ತಿದ್ದಾರೆ.

    ಅದೇ ರೀತಿ ಇದೀಗ ಶ್ರೀಮುರಳಿಯವರಿಗೆ ಈ ಸಂಕಷ್ಟ ಎದುರಾಗಿದ್ದು, ಹೋಮ್ ರೂಲ್ಸ್ ಫಾಲೋ ಮಾಡಲೇಬೇಕಾಗಿದೆ. ಸಿನಿಮಾ ಕೆಲಸಗಳಲ್ಲಿ ಸದಾ ಬ್ಯುಸಿಯಾಗಿರುತ್ತಿದ್ದ ಶ್ರೀಮುರಳಿಯವರಿಗೆ ಇದೀಗ ಪತ್ನಿ, ಮಕ್ಕಳು, ಕುಟುಂಬದೊಂದಿಗೆ ಕಾಲ ಕಳೆಯುವ ಅವಕಾಶ ಸಿಕ್ಕಿದ್ದು, ಇದನ್ನು ಅಷ್ಟೇ ಎಂಜಾಯ್ ಮಾಡುತ್ತಿದ್ದಾರೆ. ಇದರೊಂದಿಗೆ ಕಷ್ಟವನ್ನು ಪಡುತ್ತಿದ್ದಾರೆ.

    ತಾವು ಕಷ್ಟ ಪಡುತ್ತಿರುವುದರ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, ಸದ್ಯಕ್ಕೆ ಹೋಮ್ ರೂಲ್ಸ್, ಊಟ ಬೇಕು ಅಂದ್ರೆ ಪಾತ್ರೆ ತೊಳೆಯಲೇಬೇಕು. ಇಲ್ಲಾ ಅಂದ್ರೆ ನನ್ನ ಹೆಂಡತಿ ವಿದ್ಯಾ ಗುರ್ ಅಂತಾರೆ. ಆದರೆ ಈ ಕೆಲಸದಿಂದ ಬೆವರು ಕಿತ್ಗೊಂಡು ಬರುತ್ತೆ ಎಂದು ಪಾತ್ರೆ ತೊಳೆಯುವ ಫೋಟೋ ಹಾಕಿದ್ದಾರೆ. ಈ ಮೂಲಕ ಮನೆಗೆಲಸವನ್ನು ಮಾಡುತ್ತಿರುವುದಾಗಿ ಹೇಳಿದ್ದಾರೆ.

    ಶ್ರೀ ಮುರಳಿ ಪೋಸ್ಟ್ ಗೆ ಅವರ ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದು, ಲವ್ಡ್ ಇಟ್, ಎಂಜಾಯ್ ಬ್ರದರ್. ಅತ್ತಿಗೆ ರಾಕ್, ಬ್ರದರ್ ಶಾಕ್ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಅಭಿಮಾನಿ ಕ್ಯೂಟ್ ಕಪಲ್, ಬೆಸ್ಟ್ ಟುಗೆದರ್ ಎಂದು ಕಮೆಂಟ್ ಮಾಡಿದ್ದಾರೆ. ಹೀಗೆ ಅವರ ಅಭಿಮಾನಿಗಳು ಮನೆಗೆಲಸ ಮಾಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ನಟ ಶ್ರೀ ಮುರಳಿ ಅಭಿನಯದ ಮದಗಜ ಸಿನಿಮಾದ ಚಿತ್ರೀಕರಣ ಇತ್ತೀಚೆಗಷ್ಟೇ ಪ್ರಾರಂಭವಾಗಿದ್ದು, ಶ್ರೀ ಮುರುಳಿ ಶೂಟಿಂಗ್‍ನಲ್ಲಿ ಬ್ಯುಸಿಯಾಗಿದ್ದರು. ಚಿತ್ರ ತಂಡ ಉತ್ತರ ಪ್ರದೇಶದಲ್ಲಿ ಅಘೋರಿಗಳ ಮಧ್ಯೆ ಶೂಟಿಂಗ್‍ಗೂ ತೆರಳಿತ್ತು. ನಂತರ ಈ ಚಿತ್ರಕ್ಕೆ ನಾಯಕಿ ಆಯ್ಕೆ ಬಗ್ಗೆ ಸಹ ಕುತೂಹಲ ಮೂಡಿತ್ತು. ಆಶಿಕಾ ರಂಗನಾಥ್ ಆಯ್ಕೆಯಾಗುವ ಮೂಲಕ ಕುತೂಹಲಕ್ಕೆ ತೆರೆಬಿತ್ತು. ಚಿತ್ರೀಕರಣ ಭರದಿಂದ ಸಾಗಿರುವಾಗಲೇ ಕೊರೊನಾ ವಕ್ಕರಿಸಿ, ಲಾಕ್‍ಡೌನ್ ಜಾರಿಯಾಯಿತು. ಹೀಗಾಗಿ ಮನೆಯಲ್ಲೇ ಕಾಲ ಕಳೆಯುವ ಸ್ಥಿತಿ ಬಂದೊದಗಿದೆ. ಈ ಸಮಯವನ್ನೂ ಎಂಜಾಯ್ ಮಾಡುತ್ತಿರುವ ಶ್ರೀಮುರಳಿ, ಮನೆ ಕೆಲಸದಲ್ಲಿ ಪತ್ನಿಗೆ ಸಹಾಯ ಮಾಡುತ್ತಿದ್ದಾರೆ. ಮಕ್ಕಳೊಂದಿಗೆ ಕಾಲ ಕಳೆಯುತ್ತಿದ್ದಾರೆ.

  • ಲಾಕ್‍ಡೌನ್ ಹೊತ್ತಲ್ಲಿ ‘ಕನ್ನಡತಿ’ಗೆ ಕೆಲಸ ಬೇಕಂತೆ

    ಲಾಕ್‍ಡೌನ್ ಹೊತ್ತಲ್ಲಿ ‘ಕನ್ನಡತಿ’ಗೆ ಕೆಲಸ ಬೇಕಂತೆ

    ಬೆಂಗಳೂರು: ಪುಟ್ಟಗೌರಿ ಮದುವೆ ನಂತರ ‘ಕನ್ನಡತಿ’ ಧಾರಾವಾಹಿ ಮೂಲಕ ಮನೆ ಮಾತಾಗಿರುವ ರಂಜನಿ ರಾಘವನ್ ಏನ್ ಮಾಡ್ತಿದ್ದಾರೆ ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ಧಾರಾವಾಹಿಗಳ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿದ್ದು, ಎಲ್ಲ ವಾಹಿನಿಗಳು ಸಂಚಿಕೆಗಳನ್ನು ಮರು ಪ್ರಸಾರ ಮಾಡುತ್ತಿವೆ. ಹೀಗಿರುವಾಗ ರಂಜನಿ ಅವರ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. ಅದೇನಪ್ಪಾ ಅಂದ್ರೆ ಪುಟ್ಟಗೌರಿಗೆ ಕೆಲಸ ಬೇಕಂತೆ.

    ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿರುತ್ತಿದ್ದ ನಟಿ ರಂಜನಿ ರಾಘವನ್ ಇದೀಗ ಮೆನಯಲ್ಲೇ ಕಾಲ ಕಳೆಯುತ್ತಿದ್ದಾರೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದು, ಆಗಾಗ ಪೋಸ್ಟ್ ಹಾಕುತ್ತಿರುತ್ತಾರೆ. ಇದೀಗ ಅವರು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿರುವ ಪೋಸ್ಟ್ ಭಾರೀ ಸದ್ದು ಮಾಡುತ್ತಿದೆ. ಹೌದು ಇದ್ದಕ್ಕಿದ್ದಂತೆ ಕೆಲಸ ಕೇಳಿಕೊಂಡು ಪೋಸ್ಟ್ ಮಾಡಿದ್ದಾರೆ.

    ಈ ಹಿಂದೆ ಪದವಿ ಮುಗಿಯುತ್ತಿದ್ದಂತೆ ರಂಜನಿ ರಾಘವನ್ ಅವರು ತಮ್ಮ ಪದವಿ ಪ್ರಮಾಣ ಪತ್ರವನ್ನು ಫೇಸ್ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದರಂತೆ. ಇದೀಗ ಅದನ್ನು ಎಫ್‍ಬಿ ನೆನಪಿಸಿದೆ. ಮೂರು ವರ್ಷಗಳ ಹಿಂದಿನ ಪೋಸ್ಟ್ ನ್ನು ಎಫ್‍ಬಿ ನೆನಪಿಸಿತು. ನಾನು ಕಾನ್ವಕೇಶನ್ ಪಡೆದು ಮೂರು ವರ್ಷಗಳಾಯಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಕನ್ನಡದಲ್ಲಿ ‘ಯಾವ್ದಾದ್ರೂ ಕೆಲಸ ಖಾಲಿ ಇದ್ಯಾ?’ ಎಂದು ಕೇಳಿದ್ದಾರೆ.

    ಪುಟ್ಟಗೌರಿ ಮದುವೆ ಧಾರಾವಾಹಿ ಮೂಲಕ ನಟನೆಯಲ್ಲಿ ಗುರುತಿಸಿಕೊಂಡ ರಂಜನಿ ರಾಘವನ್ ಅವರಿಗೆ ಸಿನಿಮಾಗಳಲ್ಲಿಯೂ ಅವಕಾಶಗಳು ಬರಲಾರಂಭಿಸಿದವು. ಈಗಾಗಲೇ ರಾಜಹಂಸ ಸಿನಿಮಾದಲ್ಲಿ ನಟಿಸಿದ್ದು, ಇದೀಗ ಟಕ್ಕರ್ ಕೊಡಲು ಸಿದ್ಧವಾಗ್ತಿದ್ದಾರೆ. ಈಗಾಗಲೇ ಕನ್ನಡತಿ ಧಾರಾವಾಹಿಯಲ್ಲಿ ಬ್ಯುಸಿಯಾಗಿರುವ ಭುವನೇಶ್ವರಿ, ಮತ್ತೊಂದೆಡೆ ಸಿನಿಮಾಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಕನ್ನಡತಿ ಧಾರಾವಾಹಿ ತುಂಬಾ ವಿಭಿನ್ನವಾಗಿ ಮೂಡಿಬಂದಿದ್ದು, ಇದರಲ್ಲಿ ಕನ್ನಡ ಶಿಕ್ಷಕಿಯಾಗಿ ಕಾಣಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ಈ ಧಾರಾವಾಹಿ ಸಖತ್ ಸದ್ದು ಮಾಡುತ್ತಿದೆ.

    ಧಾರವಾಗಿಗಳೊಟ್ಟಿಗೆ ಸಿನಿಮಾಗಳತ್ತಲೂ ರಂಜನಿ ಚಿತ್ತ ಹರಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಳಿಯ ಮನೋಜ್ ಕುಮಾರ್ ಅಭಿನಯದ ಟಕ್ಕರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿನಿಮಾ, ಧಾರಾವಾಹಿ ಎರಡರಲ್ಲೂ ಬ್ಯುಸಿಯಾಗಿರುವಾಗಲೇ ಕೊರೊನಾ ವೈರಸ್‍ನಿಂದಾಗಿ ಲಾಕ್‍ಡೌನ್ ಜಾರಿಯಾಯಿತು. ಹೀಗಾಗಿ ಎರಡರ ಚಿತ್ರೀಕರಣ ಸ್ಥಗಿತಗೊಂಡಿದೆ. ಸದ್ಯ ಮನೆಯಲ್ಲಿ ಕುಟುಂಬಸ್ಥರ ಜೊತೆ ಕಾಲ ಕಳೆಯುತ್ತಿದ್ದಾರೆ.

  • ಫೋನ್ ಮಾರಾಟ ಮಾಡಿ ಮನೆಗೆ ದಿನಸಿ ತಂದು ಕೊಟ್ಟು ವ್ಯಕ್ತಿ ಆತ್ಮಹತ್ಯೆ

    ಫೋನ್ ಮಾರಾಟ ಮಾಡಿ ಮನೆಗೆ ದಿನಸಿ ತಂದು ಕೊಟ್ಟು ವ್ಯಕ್ತಿ ಆತ್ಮಹತ್ಯೆ

    – ಬೇಸಿಗೆಯಲ್ಲಿ ಮಕ್ಕಳು ಆರಾಮಾಗಿರಲು ಫ್ಯಾನ್ ಖರೀದಿ
    – ಉಳಿದ ಹಣವನ್ನ ಪತ್ನಿಗೆ ಕೊಟ್ಟು ನೇಣಿಗೆ ಶರಣು

    ಚಂಡೀಗಢ: ಲಾಕ್‍ಡೌನ್‍ನಿಂದ ಅನೇಕ ಬಡ ಕುಟುಂಬಗಳು ಆಹಾರವಿಲ್ಲದೆ ಪರದಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಊಟ ಕೊಡಿಸಲು ಸಾಧ್ಯವಾಗದೆ ನೊಂದ 30 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ.

    ಸರಸ್ವತಿ ಕುಂಜ್ ಪ್ರದೇಶದ ಕೊಳೆಗೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮುಖೇಶ್ ಆತ್ಮಹತ್ಯೆ ಮಾಡಿಕೊಂಡು ವ್ಯಕ್ತಿ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಮೊಬೈಲ್ ಫೋನ್ ಅನ್ನು 2,500 ರೂ.ಗೆ ಮಾರಾಟ ಮಾಡಿದ್ದಾನೆ. ಅದರಲ್ಲಿ ಅಕ್ಕಿ, ಹಿಟ್ಟು ಮತ್ತು ಸಕ್ಕರೆ ಮತ್ತು ಟೇಬಲ್ ಫ್ಯಾನ್ ಖರೀದಿಸಿ ಪತ್ನಿಗೆ ಕೊಟ್ಟಿದ್ದಾನೆ. ಬೇಸಿಗೆಯಲ್ಲಿ ತನ್ನ ಮಕ್ಕಳು ಆರಾಮಾಗಿರಲಿ ಎಂದು ಫ್ಯಾನ್ ಖರೀದಿಸಿದ್ದಾನೆ.

    ಈತನಿಗೆ ಮದ್ವೆಯಾಗಿ ನಾಲ್ವರು ಮಕ್ಕಳಿದ್ದು, ತನ್ನ ಪತ್ನಿ ಪೂನಂ ಜೊತೆ ಗುಡಿಸಲಲ್ಲಿ ವಾಸಿಸುತ್ತಿದ್ದನು. ಫೋನ್ ಮಾರಾಟ ಮಾಡಿ ಉಳಿದ ಹಣವನ್ನು ಪತ್ನಿಗೆ ನೀಡಿದ್ದಾನೆ. ನಂತರ ತಾನು ವಾಸ ಮಾಡುತ್ತಿದ್ದ ಗುಡಿಸಲಿಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಸ್ವಲ್ಪ ಸಮಯದ ನಂತರ ಪತ್ನಿ ಪೂನಂ ಗುಡಿಸಿಲಿನೊಳಗೆ ಹೋಗಿ ನೋಡಿದ್ದಾಳೆ. ಅಷ್ಟರಲ್ಲಿ ಮುಖೇಶ್ ನೇಣು ಬಿಗಿದುಕೊಂಡು ಮೃತಪಟ್ಟಿದ್ದನು. ಮೊಬೈಲ್ ಫೋನ್ ಮಾರಾಟ ಮಾಡಿ ಮುಖೇಶ್ ನೀಡಿದ್ದ ಹಣವನ್ನು ಹೊರತುಪಡಿಸಿ ಕುಟುಂಬಕ್ಕೆ ಯಾವುದೇ ಆದಾಯ ಇಲ್ಲ. ಹೀಗಾಗಿ ನೆರೆಹೊರೆಯವರು ಹಣ ಸಂಗ್ರಹ ಮಾಡಿ ಅಂತಿಮ ವಿಧಿಗಳನ್ನು ಮುಗಿಸಿದ್ದಾರೆ.

    ಮೃತ ಮಾವ ಉಮೇಶ್ ಮುಖಿಯಾ ಮಾತನಾಡಿ, ಮುಖೇಶ್ ಪೇಂಟಿಂಗ್ ಕೆಲಸ ಮಾಡುತ್ತಿದ್ದನು. ಆದರೆ ಕಳೆದ ಎರಡು ತಿಂಗಳಿಂದ ಯಾವುದೇ ಪೇಂಟಿಂಗ್ ಕೆಲಸವಿರಲಿಲ್ಲ. ಹೀಗಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿದ್ದನು. ಕೊನೆಗೆ ಕೂಲಿ ಮಾಡುತ್ತಿದ್ದನು. ಆದರೆ ಲಾಕ್‍ಡೌನ್‍ನಿಂದ ಕೂಲಿ ಕೆಲಸವು ಸಿಗಲಿಲ್ಲ. ಆಗ ಸಾಲ ಕೂಡ ಮಾಡಿಕೊಂಡಿದ್ದ. ಇದರಿಂದ ಮುಖೇಶ್ ಖಿನ್ನತೆಗೆ ಒಳಗಾಗಿದ್ದನು ಎಂದು ಹೇಳಿದರು.

    ಆತನ ಕುಟುಂಬ ಭಿಕ್ಷೆ ಬೇಡುತ್ತಿತ್ತು. ಅವರು ಯಾವುದೇ ಆದಾಯದ ಮೂಲವನ್ನು ಹೊಂದಿಲ್ಲ. ಅಲ್ಲದೇ ಆತ ಖಿನ್ನತೆಗೆ ಒಳಗಾಗಿದ್ದನು ಎಂದು ಮುಖೇಶ್ ಸಂಬಂಧಿಕರೊಬ್ಬರು ತಿಳಿಸಿರುವುದಾಗಿ ಪೊಲೀಸ್ ಕಮಿಷನರ್ ಮೊಹಮ್ಮದ್ ಅಕಿಲ್ ಹೇಳಿದ್ದಾರೆ.

  • ಅಧಿಕಾರಿ ವರ್ಗದ ಶ್ರಮಕ್ಕೆ ಯಾದಗಿರಿ ಜನತೆಯ ಮೆಚ್ಚುಗೆ

    ಅಧಿಕಾರಿ ವರ್ಗದ ಶ್ರಮಕ್ಕೆ ಯಾದಗಿರಿ ಜನತೆಯ ಮೆಚ್ಚುಗೆ

    ಯಾದಗಿರಿ: ಇಡೀ ದೇಶದಲ್ಲಿಯೆ ಪಾಪಿ ಕೊರೊನಾ ತನ್ನ ರೌದ್ರ ನರ್ತನ ಮಾಡುತ್ತಿದ್ದೆ. ಆದರೆ ಯಾದಗಿರಿಯಲ್ಲಿ ಮಾತ್ರ ಕೊರೊನಾ ಇನ್ನೂ ಎಂಟ್ರಿಯಾಗಿಲ್ಲ. ಇದಕ್ಕೆ ಕಾರಣ ಅಧಿಕಾರಿಗಳ ಪರಿಶ್ರಮ, ಹೌದು ಕೊರೊನಾ ವೈರಸ್ ಹರಡದಂತೆ ಅಧಿಕಾರಿಗಳ ವರ್ಗ ಜಿಲ್ಲೆಯಲ್ಲಿ ಹಗಲಿರುಳು ಕೆಲಸ ಮಾಡುತ್ತಿದೆ.

    ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪುತ್ ಅವರು ಹೆಂಡತಿ ಕಳೆದ 6 ತಿಂಗಳ ಹಿಂದೆ ಹೆರಿಗೆ ಸಮಯದಲ್ಲಿ ಮಗುವಿಗೆ ಜನ್ಮ ನೀಡಿ ಪ್ರಾಣ ಬಿಟ್ಟಿದ್ದರು. ಪ್ರಕಾಶ್ ಗೆ ತಮ್ಮ ಹೆಂಡತಿ ಕಳೆದುಕೊಂಡ ದುಃಖ ಒಂದು ಕಡೆಯಾದರೆ, ಹಸುಗೂಸನ್ನು ನೋಡಿಕೊಳ್ಳುವ ಜವಾಬ್ದಾರಿ ಹೆಗಲಿಗಿಲಿದೆ. ಹೀಗಿದ್ದರೂ ಪ್ರಕಾಶ್ ಜಿಲ್ಲೆಯ ಜನರ ಹಿತಕ್ಕಾಗಿ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ.

    ಸದ್ಯ ಪ್ರಕಾಶ್ ಅವರಿಗೆ ಮೂವರು ಮಕ್ಕಳಿದ್ದಾರೆ. ಕೊರೊನಾ ಮುಂಜಾಗ್ರತೆಯ ಕ್ರಮವಾಗಿ ಮಕ್ಕಳಿಂದ ದೂರ ಇರುವ ಅವರು ಮನೆಯಲ್ಲಿ ಪ್ರತ್ಯೇಕವಾದ ಕೊಣೆಯಲ್ಲಿ ವಾಸವಾಗಿದ್ದಾರೆ. ಮನೆಯಲ್ಲಿ ಮಕ್ಕಳಿದ್ದರು ಮಕ್ಕಳೊಂದಿಗೆ ಖುಷಿಪಡಲು ಆಗುತ್ತಿಲ್ಲ. ಮನೆಯಲ್ಲಿ ಹಾಗೂ ಕಚೇರಿಯಲ್ಲಿ ಕೂಡ ಸಾಮಾಜಿಕ ಅಂತರ ಕಾಪಾಡಿಕೊಂಡು ಜನರ ಒಳಿತಿಗಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.

    ಯಾದಗಿರಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಅವರು ಕೂಡ ಕೊರೊನಾ ವಿರುದ್ಧ ಹಗಲಿರುಳು ಹೋರಾಟ ಮಾಡುತ್ತಿದ್ದಾರೆ. ಶಂಕರಗೌಡ ಅವರ ಪ್ರೀತಿಯ ಅಜ್ಜ ಮೃತಪಟ್ಟಿದ್ದರು ಅಜ್ಜನ ಅಂತ್ಯಕ್ರಿಯೆಯಲ್ಲಿ ಭಾಗವಹಿಸದೆ ಯಾದಗಿರಿಯಲ್ಲಿದ್ದುಕೊಂಡು ಕೊರೊನಾ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಅಜ್ಜನ ಸಾವಿನ ನೋವಿಗಿಂತ ಜನರ ನೋವು ನನಗೆ ಮುಖ್ಯ ಎನ್ನುವ ಶಂಕರಗೌಡ ಅವರು, ತಮಗೆ ವೈಯಕ್ತಿಕವಾಗಿ ಆರೋಗ್ಯ ಸಮಸ್ಯೆಯಿದ್ದರೂ ಅದನ್ನು ಲೆಕ್ಕಿಸದೇ ಕೂಲಿ ಕಾರ್ಮಿಕರು, ರೈತರು, ಜನಸಾಮಾನ್ಯರ ಬಳಿಗೆ ತೆರಳಿ ಅವರ ಸಮಸ್ಯೆ ಆಲಿಸುತ್ತಿದ್ದಾರೆ. ಈ ಇಬ್ಬರ ಕರ್ತವ್ಯ ನಿಷ್ಠೆಗೆ ಜಿಲ್ಲೆಯ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಮನೆ ಕೆಲ್ಸದ ಜೊತೆ ಬಿಡುವಿನ ವೇಳೆ ಮಾಸ್ಕ್ ತಯಾರಿಸಿ ಬಡವರಿಗೆ ವಿತರಣೆ

    ಮನೆ ಕೆಲ್ಸದ ಜೊತೆ ಬಿಡುವಿನ ವೇಳೆ ಮಾಸ್ಕ್ ತಯಾರಿಸಿ ಬಡವರಿಗೆ ವಿತರಣೆ

    ಮಡಿಕೇರಿ: ಕೊರೊನಾ ಬಗ್ಗೆ ಸರ್ಕಾರ ಎಷ್ಟೇ ಅರಿವು ಮೂಡಿಸುತ್ತಿದ್ದರೂ ಜನತೆ ಎಚ್ಚೆತ್ತುಕೊಳ್ಳತ್ತಿಲ್ಲ. ಹೊರಗೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಬಳಸುವಂತೆ ಮನವಿ ಮಾಡುತ್ತಿದ್ದರೂ ಅದರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

    ಇದೇ ಸಂದರ್ಭವನ್ನು ಬಂಡವಾಳ ಮಾಡಿಕೊಂಡ ಹಲವರು ತುರ್ತು ಅಗತ್ಯವಿರುವ ಮಾಸ್ಕ್ ಗಳನ್ನು ದುಬಾರಿ ಬೆಲೆಗೆ ಮಾರಿ ಜನರ ಜೇಬಿಗೆ ಕತ್ತರಿ ಹಾಕಲು ಹೊರಟಿದ್ದಾರೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಮಡಿಕೇರಿ ನಗರದ ಮುಳಿಯ ಲೇಔಟ್‍ನ ನಿವಾಸಿ ಗೌರಿಯವರು ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ತಾವೇ ಮಾಸ್ಕ್ ಹೊಲೆದು ಬಡವರಿಗೆ ಹಂಚುತ್ತಿದ್ದಾರೆ.

    ಜೀವನ ನಡೆಸಲು ನಾಲ್ಕೈದು ಮನೆಗಳಲ್ಲಿ ಕೆಲಸ ಮಾಡಿಕೊಂಡು ಬಿಡುವಿನ ಸಮಯದಲ್ಲಿ ತಾವು ಇರುವ ಬಾಡಿಗೆ ಮನೆಯಲ್ಲೆ ಮಷಿನ್ ಮೂಲಕ ಗೌರಿ ಅವರೇ ಮಾಸ್ಕ್ ಹೊಲೆದು ಬಡವರಿಗೆ ಹಂಚುತ್ತಿದ್ದಾರೆ. ಜೊತೆಗೆ ಮನೆ ಕೆಲಸಕ್ಕೆ ಹೋಗುವ ಬಿಡುವಿನ ವೇಳೆಯಲ್ಲಿ ಮನೆ, ಮನೆಗಳಿಗೆ ತೆರಳಿ ಮಾಸ್ಕ್ ಹಂಚಿ ಬರುತ್ತಾರೆ. ಈ ವೇಳೆ ಜನರಿಗೆ ಕೊರೊನಾದಿಂದ ಪಾರಾಗುವಂತೆ ಮನವರಿಕೆ ಮಾಡಿ ಸಮಾಜ ಸೇವೆ ಕೂಡ ಮಾಡುತ್ತಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಗೌರಿಯವರು, ಔಷಧಿ ಅಂಗಡಿಯಲ್ಲಿ ಮಾಸ್ಕ್ ಹೆಚ್ಚಾಗಿ ಸಿಗುತ್ತಿಲ್ಲ ಬಡವರು ಹೋಗಿ ಕೇಳಿದರೆ ಸುಮಾರು 100, 50, 30 ಹೀಗೆಲ್ಲಾ ಹಣವನ್ನು ತೆಗೆದುಕೊಳ್ಳುತ್ತಾರೆ. ಮೊದಲೇ ಜನ ಸಮಾನ್ಯರು ಹಣವಿಲ್ಲದೆ ತುಂಬ ಕಷ್ಟದಲ್ಲಿ ಇದ್ದಾರೆ. ಹಾಗಾಗಿ ಈ ರೀತಿಯಲ್ಲಿ ಸೇವೆ ಮಾಡುತ್ತಿರುವುದು ಒಂದು ರೀತಿಯಲ್ಲಿ ಖುಷಿ ಹಾಗೂ ತೃಪ್ತಿ ತಂದಿದೆ ಎಂದು ತಾವು ಮಾಡುವ ಕೆಲಸದ ಬಗ್ಗೆ ಗೌರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಮದ್ವೆಯಾದ 8 ದಿನಕ್ಕೆ ನವ ವಿವಾಹಿತೆ ಆತ್ಮಹತ್ಯೆ

    ಮದ್ವೆಯಾದ 8 ದಿನಕ್ಕೆ ನವ ವಿವಾಹಿತೆ ಆತ್ಮಹತ್ಯೆ

    – ಪತಿ, ಆತನ ಕುಟುಂಬದಿಂದ ಮೋಸ
    – ಹಬ್ಬಕ್ಕೆ ಕರ್ಕೊಂಡು ಬರಲು ಹೋದಾಗ ರಹಸ್ಯ ಬಯಲು

    ಹೈದರಾಬಾದ್: ಮದುವೆಯಾದ ಕೇವಲ ಎಂಟು ದಿನಕ್ಕೆ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ನಡೆದಿದೆ.

    ಮೌನಿಕಾ ರೆಡ್ಡಿ (25) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಯ ತಂದೆ ಸೋಮ ಇಂದ್ರ ರೆಡ್ಡಿ ಸರ್ಕಾರಿ ಶಿಕ್ಷಕರಾಗಿದ್ದು, ಜಿಲ್ಲೆಯ ವಿನಾಯಕನಗರದಲ್ಲಿ ವಾಸಿಸುತ್ತಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಮೌನಿಕಾ ರೆಡ್ಡಿ ಹಿರಿಯ ಮಗಳಾಗಿದ್ದಳು.

    ಇದೇ ತಿಂಗಳ 15 ರಂದು ಅಂದರೆ ಭಾನುವಾರ ಮೌನಿಕಾ ರೆಡ್ಡಿಗೆ ಮದುವೆಯಾಗಿತ್ತು. ಹೈದರಾಬಾದ್‍ನ ನಿವಾಸಿ ಸಾಯಿ ಕಿರಣ್ ರೆಡ್ಡಿಯ ಜೊತೆ ವಿವಾಹವಾಗಿತ್ತು. ಮದುವೆ ಸಂದರ್ಭದಲ್ಲಿ ವರದಕ್ಷಿಣೆಯಾಗಿ 10 ಲಕ್ಷ ರೂ. ನಗದು, 35 ಗ್ರಾಂ ಚಿನ್ನ ಮತ್ತು 4 ಕೆಜಿ ಬೆಳ್ಳಿಯನ್ನು ನೀಡಲಾಗಿತ್ತು. ವಿವಾಹ ಮುಗಿದ ನಂತರ ಮೌನಿಕಾ ಪತಿಯ ಮನೆಗೆ ಹೋಗಿದ್ದಳು.

    ಬುಧವಾರ ಯುಗಾದಿ ಹಬ್ಬವಿದೆ. ಹೀಗಾಗಿ ಪೋಷಕರು ಮಗಳು ಮತ್ತು ಅಳಿಯನನ್ನು ಹಬ್ಬಕ್ಕೆ ಕರೆದುಕೊಂಡು ಬರಲು ಶನಿವಾರ ಹೈದರಾಬಾದ್‍ಗೆ ಹೋಗಿದ್ದರು. ಈ ವೇಳೆ ಕಿರಣ್ ರೆಡ್ಡಿಯ ಕುಟುಂಬಕ್ಕೆ ಯಾವುದೇ ಆಸ್ತಿ ಇಲ್ಲ. ಅಲ್ಲದೇ ಆತ ಯಾವುದೇ ಕೆಲಸವಿಲ್ಲದೆ ಮನೆಯಲ್ಲಿದ್ದಾನೆ ಎಂದು ತಿಳಿದಿದೆ.

    ಇದರಿಂದ ಕೋಪಗೊಂಡ ಮೌನಿಕಾ ಪೋಷಕರು ಗಲಾಟೆ ಮಾಡಿದ್ದಾರೆ. ಕೊನೆಗೆ ಜಗಳ ಮಾಡಿಕೊಂಡು ತಮ್ಮ ಮನೆಗೆ ಮಗಳನ್ನು ಕರೆದುಕೊಂಡು ಬಂದಿದ್ದಾರೆ. ಭಾನುವಾರ ರಾತ್ರಿ ಊಟ ಮಾಡುವಾಗ ನನಗೆ ಮೋಸ ಆಗಿದೆ ಎಂದು ಮೌನಿಕಾ ಕಣ್ಣೀರು ಹಾಕಿದ್ದಾಳೆ. ಆಗ ಫೋಷಕರು ನಾವು ಹಿರಿಯರ ಜೊತೆ ಮಾತನಾಡಿ ರಾಜಿ-ಪಂಚಾಯಿತಿ ಮಾಡುತ್ತೇವೆ ಎಂದು ಸಮಾಧಾನ ಮಾಡಿದ್ದಾರೆ.

    ಭಾನುವಾರ ಬೆಳಿಗ್ಗೆ ತುಂಬಾ ಹೊತ್ತಾದರೂ ಮೌನಿಕಾ ರೂಮಿನಿಂದ ಹೊರಗೆ ಬಂದಿರಲಿಲ್ಲ. ನಂತರ ಪೋಷಕರು ಹೋಗಿ ಬಾಗಿಲು ಬಡಿದಿದ್ದಾರೆ. ಆದರೆ ಒಳಗಿನಿಂದ ಮೋನಿಕಾ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ನೆರೆಹೊರೆಯವರ ಸಹಾಯದಿಂದ ಬಾಗಿಲು ಮುರಿದು ಒಳಗೆ ಹೋಗಿದ್ದಾರೆ. ಆದರೆ ಅಷ್ಟರಲ್ಲಿ ಮೌನಿಕಾ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

    ನಮ್ಮ ಮಗಳ ಪತಿಗೆ ಯಾವುದೇ ಕೆಲಸವಿಲ್ಲ. ಆತ ಜಮೀನು ಇದೆ ಎಂದು ಸುಳ್ಳು ಮದುವೆ ಸಂದರ್ಭದಲ್ಲಿ ಹೇಳಿದ್ದನು. ಇದರಿಂದ ನೊಂದ ಮಗಳ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ನೀಡಿದ್ದಾರೆ. ಸೂರ್ಯಪೇಟೆ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

  • ಅಪ್ರಾಪ್ತನ ಜೊತೆ ದಿನಕ್ಕೆ 8-10 ಬಾರಿ ಆಂಟಿಯ ಸೆಕ್ಸ್ – ಮತ್ತೆ ಬೇಕು ಎಂದಿದ್ದಕ್ಕೆ ಕೊಲೆ

    ಅಪ್ರಾಪ್ತನ ಜೊತೆ ದಿನಕ್ಕೆ 8-10 ಬಾರಿ ಆಂಟಿಯ ಸೆಕ್ಸ್ – ಮತ್ತೆ ಬೇಕು ಎಂದಿದ್ದಕ್ಕೆ ಕೊಲೆ

    – ನಗ್ನವಾಗಿ ಬಾಲಕನ ಪಕ್ಕ ಮಲಗುತ್ತಿದ್ದ 3 ಮಕ್ಕಳ ತಾಯಿ
    – ಬೆಡ್‍ರೂಮಿನಲ್ಲಿ ರೆಡ್‍ ಹ್ಯಾಂಡಾಗಿ ಪತಿಗೆ ಸಿಕ್ಕಿಬಿದ್ಳು

    ಚೆನ್ನೈ: ಮದುವೆಯಾಗಿ ಮೂರು ಮಕ್ಕಳಿದ್ದರೂ 14ರ ಬಾಲಕನನ್ನು ಸೆಕ್ಸ್ ಮಾಡುವಂತೆ ಪದೇ ಪದೇ ಪೀಡಿಸುತ್ತಿದ್ದಳು. ಆಕೆಯ ಕಿರುಕುಳವನ್ನು ಸಹಿಸಲಾಗಿದೆ ಬಾಲಕನೇ ಆಕೆಯನ್ನು ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಶೀಲಾದೇವಿ (35) ಕೊಲೆಯಾದ ಮಹಿಳೆ. ಅಕ್ರಮ ಸಂಬಂಧ ಹೊಂದಿದ್ದ 14ರ ಬಾಲಕನೇ ಕತ್ತು ಸೀಳಿ ಪರಾರಿಯಾಗಿದ್ದನು. ಇದೀಗ ಪೊಲೀಸರು ಆತನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

    ಏನಿದು ಪ್ರಕರಣ?
    ಶೀಲಾ ದೇವಿ ಕೆಲವು ವರ್ಷಗಳ ಹಿಂದೆ ಬಿಹಾರದ ಮಿಥುನ್ (35) ಜೊತೆ ಮದುವೆಯಾಗಿದ್ದಳು. ಈ ದಂಪತಿಗೆ ಮೂವರು ಮಕ್ಕಳಿದ್ದರು. ಕೆಲಸಕ್ಕಾಗಿ ಮಿಥುನ್ ಪತ್ನಿ ಮತ್ತು ಮಕ್ಕಳೊಂದಿಗೆ ತಮಿಳುನಾಡಿನ ತಿರುವರೂರಿಗೆ ಬಂದಿದ್ದರು. ಇಲ್ಲಿ ಖಾಸಗಿ ಕಂಪನಿಯಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿಕೊಂಡಿದ್ದು, ಕೊಂಗುನೂರ್ ಮುಖ್ಯ ರಸ್ತೆಯಲ್ಲಿ ಮನೆ ಮಾಡಿಕೊಂಡಿದ್ದರು. ಬಿಹಾರ ಮೂಲದ 14 ವರ್ಷದ ಬಾಲಕ ಅದೇ ಪ್ರದೇಶದಲ್ಲಿ ಸ್ನೇಹಿತರೊಂದಿಗೆ ಬನಿಯಾನ್ ತಯಾರಿಸುವ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದನು.

    ಈ ಹಂತದಲ್ಲಿ ಶೀಲಾದೇವಿ ಮತ್ತು ಬಾಲಕನೊಂದಿಗೆ ಪರಿಚಯವಾಗಿದ್ದು, ಆತ ಕೂಡ ಅಂಕಲ್, ಆಂಟಿ ಎಂದು ಹೆಚ್ಚಿನ ಸಮಯ ಅವರೊಂದಿಗೆ ಕಳೆಯಲು ಆರಂಭಿಸಿದ್ದ. ಇತ್ತ ಮಿಥುನ್ ಹೆಚ್ಚಾಗಿ ನೈಟ್ ಡ್ಯೂಟಿ ಮಾಡುತ್ತಿದ್ದ ಕಾರಣ ಹಲವು ಬಾರಿ ಬಾಲಕ ಅವರ ಮನೆಯಲ್ಲೇ ಉಳಿದುಕೊಂಡಿದ್ದ. ಈ ವೇಳೆ ಶೀಲಾದೇವಿ ಹುಡುಗನೊಂದಿಗೆ ಹೆಚ್ಚು ಸಲುಗೆ ಬೆಳೆಸಿಕೊಂಡಿದ್ದಳು. ಇಬ್ಬರ ನಡುವಿನ ಈ ಸಲುಗೆ ಕೆಲ ದಿನಗಳ ಬಳಿಕ ಅಕ್ರಮ ಸಂಬಂಧಕ್ಕೆ ದಾರಿ ಮಾಡಿಕೊಟ್ಟಿತ್ತು.

    ಪತಿ ರಾತ್ರಿ ಕೆಲಸಕ್ಕೆ ಹೋದ ನಂತರ ಶೀಲಾದೇವಿ ಮಕ್ಕಳನ್ನು ಬೇರೊಂದು ರೂಮ್‍ನಲ್ಲಿ ಮಲಗಿಸುತ್ತಿದ್ದಳು. ನಂತರ ಬಾಲಕನಿಗೆ ಆಮಿಷವೊಡ್ಡಿ ಸೆಕ್ಸ್ ಮಾಡುತ್ತಿದ್ದಳು. ಈ ನಡುವೆ ಒಮ್ಮೆ ಮನೆಗೆ ಆಗಮಿಸಿದ್ದ ಮಿಥುನ್‍ಗೆ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದಿತ್ತು. ರೂಮಿನಲ್ಲಿ ಮಕ್ಕಳು ಮಲಗಿದ್ದರು. ಆದರೆ ಪತ್ನಿ ಮಾತ್ರ ಹುಡುಗನೊಂದಿಗೆ ಅರೆನಗ್ನವಾಗಿ ರೆಡ್‍ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಳು. ಇದರಿಂದ ಮಿಥುನ್ ಕೋಪಗೊಂಡು ಬಾಲಕನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಪತ್ನಿಗೆ ಬುದ್ಧಿವಾದ ಹೇಳಿ ಮತ್ತೆ ಇದನ್ನು ಮುಂದುವರಿಸದಂತೆ ಎಚ್ಚರಿಕೆ ನೀಡಿದ್ದ. ಆದರೆ ಪತಿಯ ಮಾತಿಗೆ ಬೆಲೆ ನೀಡಿದ ಶೀಲಾದೇವಿ ಅಕ್ರಮ ಸಂಬಂಧವನ್ನು ಮುಂದುವರಿಸಿದ್ದಳು.

    ಈ ಕಾರಣದಿಂದ ದಂಪತಿಯ ಮಧ್ಯೆ ಜಗಳ ನಡೆಯುತ್ತಿತ್ತು. ಇದರಿಂದ ಮುಕ್ತಿ ಪಡೆಯಲು ಬಯಸಿದ್ದ ಪತಿ ಮಿಥುನ್ ಪತ್ನಿಯನ್ನು ಮತ್ತೆ ಬಿಹಾರ್ ಗೆ ಹೋಗೋಣ ಎಂದು ಹೇಳಿದ್ದ. ಆದರೆ ಪತ್ನಿ ಶೀಲಾದೇವಿ ಬಿಹಾರ್ ಹೋಗಲು ತಿರಸ್ಕರಿಸಿ ರಂಪಾಟ ಮಾಡಿದ್ದಳು. ಇತ್ತ ಪತ್ನಿಯ ಅವತಾರ ನೋಡಿ ಬೇಸರಗೊಂಡಿದ್ದ ಮಿಥುನ್ ತನ್ನ ಮೂವರು ಮಕ್ಕಳನ್ನು ಕರೆದುಕೊಂಡು ತನ್ನ ಸ್ವತಃ ಊರಿಗೆ ತೆರಳಿದ್ದ.

    ಇತ್ತ ಪತಿ ಹಾಗೂ ಮಕ್ಕಳು ಮನೆಯಿಂದ ಹೊರ ನಡೆದ ಪರಿಣಾಮ ಮತ್ತಷ್ಟು ಸಂತಸ ಪಟ್ಟ ಶೀಲಾದೇವಿ ಬಾಲಕನನ್ನು ಮನೆಗೆ ಕರೆಯಿಸಿಕೊಂಡು ಅಲ್ಲೇ ಸಂಸಾರ ಮಾಡಲು ಮುಂದುವರಿಸಿದ್ದಳು. ಅಲ್ಲದೇ ಬಾಲಕನನ್ನು ಕೆಲಸಕ್ಕೂ ಹೋಗಲು ಬಿಡಿದೆ ಪ್ರತಿದಿನ 8 ರಿಂದ 10 ಬಾರಿ ಆತನೊಂದಿಗೆ ಸೆಕ್ಸ್ ಮಾಡುತ್ತಿದ್ದಳು.

    ಕೊಲೆ:
    ಕಳೆದ ಶುಕ್ರವಾರ ಶೀಲಾದೇವಿ ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ್ದಳು. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದರು. ಆಗ ಆಕೆಯನ್ನು ಕತ್ತು ಕೊಯ್ದು ಕೊಲೆ ಮಾಡಿರುವುದು ಸ್ಪಷ್ಟವಾಗಿತ್ತು. ಘಟನೆ ಕುರಿತು ಸ್ಥಳೀಯರೊಂದಿಗೆ ಹೆಚ್ಚಿನ ವಿಚಾರಣೆ ನಡೆಸಿದ ವೇಳೆ, ಬಾಲಕ ಆಕೆಯೊಂದಿಗೆ ವಾಸಿಸುತ್ತಿದ್ದ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಆ ಬಳಿಕ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಕೊಲೆ ಹಿಂದಿನ ರಹಸ್ಯ ಬೆಳಕಿಗೆ ಬಂದಿತ್ತು.

    ಅಂದು ಶೀಲಾದೇವಿ ಹುಡುಗನೊಂದಿಗೆ ಪಿಕ್‍ನಿಕ್‍ಗೆ ತೆರಳಿ ಮರಳಿ ಮನೆಗೆ ಆಗಮಿಸಿದ್ದಳು. ಮನೆಗೆ ಆಗಮಿಸಿದ ಕೂಡಲೇ ಹುಡುಗನ್ನು ಸೆಕ್ಸ್ ನಲ್ಲಿ ತೊಡಗುವಂತೆ ಕೋರಿದ್ದಳು. ಆದರೆ ಆತ ತನಗೆ ಧಣಿವಾಗಿದೆ ಸಾಧ್ಯವಿಲ್ಲ ಎಂದು ಆಕೆಯನ್ನು ತಿರಸ್ಕರಿಸಿದ್ದ. ಆತನ ಮಾತನ್ನು ಕೇಳದೆ ಶೀಲಾದೇವಿ ಬಟ್ಟೆಯನ್ನು ಬಿಚ್ಚಿ ಆತನ ಪಕ್ಕ ಮಲಗುವ ಮೂಲಕ ಮತ್ತೆ ಹುಡುಗನಿಗೆ ಪ್ರಚೋದನೆ ನೀಡಲು ಆರಂಭಿಸಿದ್ದಳು. ಆದರೆ ಶೀಲಾಳನ್ನು ಹುಡುಗ ತಳ್ಳಿಹಾಕಿದ್ದ. ಆದರೂ ಆಕೆ ಪದೇ ಪದೇ ಒತ್ತಾಯ ಮಾಡುತ್ತಿದ್ದಳು. ಇದರಿಂದ ಕೋಪಗೊಂಡ ಹುಡುಗ ಪಕ್ಕದಲ್ಲೇ ಇದ್ದ ಚಾಕುವಿನಿಂದ ಶೀಲಾದೇವಿಯ ಗಂಟಲು ಸೀಳಿ ಸ್ಥಳದಿಂದ ಪರಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

  • ಪ್ರೇಯಸಿಯ ಬದಲಿಗೆ ತಾಯಿಗೆ ಶೂಟ್ ಮಾಡಿ ಸೈನಿಕ ಆತ್ಮಹತ್ಯೆ

    ಪ್ರೇಯಸಿಯ ಬದಲಿಗೆ ತಾಯಿಗೆ ಶೂಟ್ ಮಾಡಿ ಸೈನಿಕ ಆತ್ಮಹತ್ಯೆ

    – ಮದ್ವೆಯಾಗೋದಾಗಿ ನಂಬಿಸಿ ದೈಹಿಕ ಸಂಬಂಧ
    – ಸೇನೆಯಿಂದ ವಜಾ ಗೊಳಿಸಿದ್ದೇ ತಪ್ಪಾಯ್ತು

    ಹೈದರಾಬಾದ್: ಸೇನೆಯಿಂದ ವಜಾಗೊಳಿಸಿದ್ದಕ್ಕೆ ಪ್ರಿಯತಮೆಗೆ ಗುಂಡು ಹಾರಿಸುವ ಬದಲು ಆಕೆಯ ತಾಯಿಗೆ ಮಾಜಿ ಸೇನಾ ಸರ್ವಿಸ್‌ಮೆನ್ ಗುಂಡು ಹಾರಿಸಿದ್ದಾನೆ. ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.

    ಬಾಲಾಜಿ ಆತ್ಮಹತ್ಯೆ ಮಾಡಿಕೊಂಡ ಸೈನಿಕ. ತಡೆಪಲ್ಲಿ ಮಂಡಲ್ ಬಳಿಯ ಕೋಲನುಕೊಂಡ ಬಳಿ ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬಾಲಾಜಿ ಪ್ರಿಯತಮೆಯ ಮನೆಗೆ ಹೋಗಿ ಆಕೆಯ ತಾಯಿಗೆ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾನೆ.

    ಏನಿದು ಪ್ರಕರಣ?
    ಆರೋಪಿ ಬಾಲಾಜಿ ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದನು. ನಂತರ ಯುವತಿ ಬಾಲಾಜಿಯನ್ನು ಮದುವೆಯಾಗೋಣ ಎಂದು ಕೇಳಲು ಶುರು ಮಾಡಿದ್ದಳು. ಆಗ ಆರೋಪಿ ಬಾಲಾಜಿ ಯುವತಿಯನ್ನು ದೂರ ಮಾಡಲು ಶುರು ಮಾಡಿದ್ದಾನೆ. ಹೀಗಾಗಿ ಯುವತಿ ಮತ್ತು ಆಕೆಯ ತಾಯಿ 2019ರ ಡಿಸೆಂಬರ್‍ನಲ್ಲಿ ಬಾಪಟ್ಲಾ ಟೌನ್ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ನೀಡಿದ್ದರು. ಆಗ ಆತನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಬಾಲಾಜಿ ಸೇನೆಯ ಕೆಲಸ ಕಳೆದುಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    ಇದರಿಂದ ಕೋಪಗೊಂಡ ಬಾಲಾಜಿ ಪ್ರಿಯತಮೆಯ ಮನೆಗೆ ಹೋಗಿ ಆಕೆಗೆ ಗುಂಡು ಹಾರಿಸಲು ಪ್ಲಾನ್ ಮಾಡಿಕೊಂಡಿದ್ದನು. ಆದರೆ ಮನೆಯ ಬಾಗಿಲನ್ನು ಪ್ರಿಯತಮೆಯ ತಾಯಿ ರಮಾದೇವಿ ಓಪನ್ ಮಾಡಿದ್ದಾರೆ. ತಕ್ಷಣ ರಿವಾಲ್ವರ್ ನೋಡಿ ಓಡಿ ಹೋಗಿದ್ದಾರೆ. ಆದರೂ ಬಾಲಾಜಿ ಗುಂಡು ಹಾರಿಸಿದ್ದು, ಅದು ರಮಾದೇವಿಯ ಬಲ ಕಿವಿಯ ಮೂಲಕ ಹೋಗಿದೆ. ಇದರಿಂದ ರಮಾದೇವಿಗೆ ಯಾವುದೇ ಅಪಾಯವಾಗಿಲ್ಲ.

    ರಮಾದೇವಿಯ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿ ಬಾಲಾಜಿಯನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಬಾಲಾಜಿ ಬ್ಯಾಗ್ ಮತ್ತು ರಿವಾಲ್ವರ್ ಎಸೆದು ಅವನು ಬಂದಿದ್ದ ಸ್ನೇಹಿತನ ಆಟೋದಲ್ಲಿ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಲಾಜಿಯನ್ನು ಹುಡುಕಾಡುತ್ತಿದ್ದರು. ಆದರೆ ರೈಲ್ವೆ ಹಳಿಯಲ್ಲಿ ಬಾಲಾಜಿಯ ಮೃತದೇಹ ಪತ್ತೆಯಾಗಿದೆ. ಹೀಗಾಗಿ ಬಂಧನದ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

    ಪೊಲೀಸರು ಬಾಲಾಜಿಯ ಪೋಷಕರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಿಳಿಸಿದ್ದರು. ವಿಚಾರ ತಿಳಿದು ಪೋಷಕರು ಬಂದು ತಮ್ಮ ಮಗನದೇಹ ಎಂದು ದೃಢಪಡಿಸಿದ್ದರು. ಇದೀಗ ಬಾಲಾಜಿಗೆ ಸಹಾಯ ಮಾಡಿದ್ದ ಆಟೋರಿಕ್ಷಾ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

     

  • ಮಗ ಮನೆ ಬಿಟ್ಟು ಹೊರಗಡೆ ಮಜಾ ಮಾಡುತ್ತಾನೆಂದು ಕೋರ್ಟ್ ಮೆಟ್ಟಿಲೇರಿ ಗೆದ್ದ ತಂದೆ

    ಮಗ ಮನೆ ಬಿಟ್ಟು ಹೊರಗಡೆ ಮಜಾ ಮಾಡುತ್ತಾನೆಂದು ಕೋರ್ಟ್ ಮೆಟ್ಟಿಲೇರಿ ಗೆದ್ದ ತಂದೆ

    – ನ್ಯಾಯಮಂಡಳಿ ಖಡಕ್ ಆದೇಶಕ್ಕೆ ತಲೆ ಬಾಗಿದ ಮಗ

    ರಾಯಚೂರು: ದಿನಗೂಲಿ ಕೆಲಸ ಮಾಡಿ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದರೂ ಹಿರಿಯ ಮಗ ಪೋಷಕರ ಜೀವನಕ್ಕೆ ಆಧಾರವಾಗದೆ ಮನೆ ಬಿಟ್ಟು ಬೇರೆಡೆ ಐಶಾರಾಮಿ ಜೀವನ ನಡೆಸುತ್ತಿದ್ದಕ್ಕೆ ತಂದೆ ಮಗನ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಹತ್ತಿ ಗೆದ್ದಿದ್ದಾನೆ.

    ನಗರದ ನಿವಾಸಿ ಬೂದೆಪ್ಪ (ಹೆಸರು ಬದಲಾಯಿಸಲಾಗಿದೆ) ಪ್ರತಿ ದಿನ ಕೂಲಿ ಕೆಲಸ ಮಾಡಿ ಐದು ಜನ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿದ್ದಾರೆ. ನಾಲ್ಕು ಜನ ಮಕ್ಕಳು ಇನ್ನೂ ಓದುತ್ತಿದ್ದಾರೆ. ಹಿರಿಯ ಮಗ ವರಪ್ರಸಾದ್ (ಹೆಸರು ಬದಲಾಯಿಸಲಾಗಿದೆ) ಓದು ಮುಗಿಸಿ ಮೊಬೈಲ್ ಕಂಪೆನಿಯೊಂದರಲ್ಲಿ ನೆಟ್‍ವರ್ಕ್ ಪ್ಲಾನಿಂಗ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾನೆ. ತಿಂಗಳಿಗೆ 43 ಸಾವಿರ ರೂ. ಸಂಬಳ ಬರುತ್ತಿದ್ದು ಮನೆಗೆ ನಯಾಪೈಸೆ ಕೊಡುತ್ತಿರಲಿಲ್ಲ.

    ಕೆಲಸಕ್ಕೆ ಸೇರಿ ಸಂಬಳ ಎಣಿಸಲು ಆರಂಭವಾದ ಮೇಲೆ ಹಿರಿಯ ಮಗ ಮನೆಗೆ ಸರಿಯಾಗಿ ಬಾರದೇ ಹೋಟೆಲ್‍ನಲ್ಲಿಯೇ ಊಟ ಮಾಡಿಕೊಂಡು ಊರು ಊರು ಅಲೆಯುತ್ತಾ ಮನೆಗೆ ಬರುವುದನ್ನೆ ಕಡಿಮೆ ಮಾಡಿದ್ದಾನೆ. ಇದರಿಂದ ಮನೆಯ ಪರಿಸ್ಥಿತಿ ಕಷ್ಟಕರವಾಗಿದ್ದು ತಂದೆ-ತಾಯಿಗೆ ಮನೆ ನಡೆಸುವುದು ಕಷ್ಟವಾಗಿದೆ. ಇದರಿಂದ ಬೇಸತ್ತ ತಂದೆ ಪಾಲಕರ ಪೋಷಣೆ, ಸಂರಕ್ಷಣೆ, ಹಿರಿಯ ನಾಗರೀಕರ ರಕ್ಷಣಾ ನ್ಯಾಯ ಮಂಡಳಿ ಮೆಟ್ಟಿಲೇರಿ ದೂರು ನೀಡಿದ್ದಾರೆ.

    ವಾದ-ವಿವಾದ ಪರಿಶೀಲಿಸಿದ ಪಾಲಕರ ಪೋಷಣೆ, ಸಂರಕ್ಷಣೆ, ಹಿರಿಯ ನಾಗರೀಕರ ರಕ್ಷಣಾ ನ್ಯಾಯ ಮಂಡಳಿ ಹಾಗೂ ರಾಯಚೂರು ಉಪವಿಭಾಗದ ಉಪವಿಭಾಗಾಧಿಕಾರಿ ಸಂತೋಷ್ ಎಸ್ ಕಾಮಗೌಡ ಪೋಷಕರಿಗೆ ಜೀವನಾಂಶ ನೀಡುವಂತೆ ಆದೇಶ ಮಾಡಿದ್ದಾರೆ.

    ಆದೇಶದಲ್ಲೇನಿದೆ?
    ಪ್ರತಿ ತಿಂಗಳು 10ರೊಳಗೆ ಆರ್‌ಟಿಜಿಎಸ್‌ ಮೂಲಕ 20 ಸಾವಿರ ರೂ. ತಂದೆಯ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು. ತಿಂಗಳಿಗೊಮ್ಮೆ ತಂದೆ-ತಾಯಿಯನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಬೇಕು. ಭಾನುವಾರ ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯ ವಿಚಾರಿಸಬೇಕು ಎಂದು ಆದೇಶ ನೀಡಲಾಗಿದೆ. ಸ್ವಯಂ ಪ್ರೇರಣೆಯಿಂದ ತಂದೆ ಹಾಗೂ ಮಗ ಒಪ್ಪಿದ್ದರಿಂದ ಈ ಆದೇಶವನ್ನು ಹೊರಡಿಸಲಾಗಿದೆ.

  • ನಾನು ಲವ್ವಲ್ಲಿ ಇದ್ದೇನೆ: ವಿಜಯ್ ದೇವರಕೊಂಡ

    ನಾನು ಲವ್ವಲ್ಲಿ ಇದ್ದೇನೆ: ವಿಜಯ್ ದೇವರಕೊಂಡ

    ಬೆಂಗಳೂರು: ಮದುವೆ ಬಗ್ಗೆ ಕೇಳಿದಾಗ ನಟ ವಿಜಯ್ ದೇವರಕೊಂಡ ನಾನು ಲವ್ವಲ್ಲಿ ಇದ್ದೇನೆ ಎಂದು ಹೇಳಿದ್ದಾರೆ.

    ಹೌದು ಇತ್ತೀಚೆಗೆ ತೆಲುಗು ಚಿತ್ರರಂಗದ ಸ್ಟಾರ್ ನಟ ವಿಜಯ್ ದೇವರಕೊಂಡ ಅವರನ್ನು ಮದುವೆ ಬಗ್ಗೆ ಕೇಳಿದಾಗ, ನನಗೆ ಮದುವೆ ಬಗ್ಗೆ ಗೌರವವಿದೆ. ಆದರೆ ಈಗ ಸದ್ಯಕ್ಕೆ ನಾನು ನನ್ನ ವೃತ್ತಿಯ ಜೊತೆ ಲವ್ವಿನಲ್ಲಿ ಇದ್ದೇನೆ ಎಂದು ಉತ್ತರ ನೀಡಿದ್ದಾರೆ.

    ಸದಾ ತನ್ನ ಮದುವೆ ಮತ್ತು ಲವ್ ವಿಚಾರದಲ್ಲಿ ಸುದ್ದಿಯಲ್ಲಿರುವ ವಿಜಯ್ ದೇವರಕೊಂಡ ಅಭಿನಯದ ಚಿತ್ರ ‘ವರ್ಲ್ಡ್ ಫೇಮಸ್ ಲವರ್’ ಇದೇ ಫೆಬ್ರವರಿ 14 ರಂದು ಬಿಡುಗಡೆಯಾಗುತ್ತಿದೆ. ಪ್ರೇಮಿಗಳ ದಿನದಂದು ಬಿಡುಗಡೆಗೊಳ್ಳುತ್ತಿರುವ ಸಿನಿಮಾವನ್ನು ಕ್ರಾಂತಿ ಮಾಧವ್ ಅವರು ನಿರ್ದೇಶನ ಮಾಡಿದ್ದಾರೆ. ಕೆ.ಎ ವಲ್ಲಭ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಮತ್ತು ರಾಶಿ ಖನ್ನಾ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ.

    ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ವಿಜಯ್ ದೇವರಕೊಂಡರನ್ನು ಅವರ ಮದುವೆಯ ವಿಚಾರವಾಗಿ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಉತ್ತರಿಸಿದ ವಿಜಯ್, ನನಗೆ ಮದುವೆಯ ಬಗ್ಗೆ ಗೌರವವಿದೆ. ಆದರೆ ಸದ್ಯಕ್ಕೆ ನಾನು ನನ್ನ ಕೆಲಸದ ಜೊತೆ ಲವ್ವಿನಲ್ಲಿ ಇದ್ದೇನೆ. ಇನ್ನು ಇದರಲ್ಲಿ ಸಾಧಿಸಬೇಕಾಗಿದ್ದು ತುಂಬಾ ಇದೆ. ಹಾಗಾಗಿ ಈಗ ಮದುವೆ ಬಗ್ಗೆ ಯೋಚನೆ ಮಾಡಿಲ್ಲ ಎಂದು ವಿಜಯ್ ಹೇಳಿದ್ದಾರೆ.

    ಸೌತ್ ಸಿನಿಚಿತ್ರರಂಗದ ಮೋಸ್ಟ್ ಎಲಿಜಬಲ್ ಬ್ಯಾಚುರಲ್ ಆಗಿರುವ ವಿಜಯ್ ದೇವರಕೊಂಡಗೆ ಮಹಿಳಾ ಅಭಿಮಾನಿಗಳು ಜಾಸ್ತಿ. ಹಾಗೆಯೇ ಹಲವಾರು ಹುಡುಗಿಯರ ಜೊತೆ ವಿಜಯ್ ಅವರ ಹೆಸರು ಈ ಹಿಂದೆ ಕೇಳಿಬಂದಿತ್ತು. 2018 ರ ಸಮಯದಲ್ಲಿ ವಿಜಯ್ ಅವರು ವಿದೇಶಿ ಯುವತಿ ಜೊತೆ ಇರುವ ಫೋಟೋಗಳು ಸಖತ್ ವೈರಲ್ ಆಗಿದ್ದವು. ಇದಾದ ನಂತರ ಗೀತಾ ಗೋವಿಂದಂ ಚಿತ್ರದ ಸಮಯದಲ್ಲಿ ರಶ್ಮಿಕಾ ಮಂದಣ್ಣ ಅವರ ಜೊತೆ ವಿಜಯ್ ಹೆಸರು ಕೇಳಿಬಂದಿತ್ತು.

    ತೆಲುಗಿನ ಸೀರಿಯಲ್ ನಿರ್ದೇಶಕ ದೇವರಕೊಂಡ ಗೋವರ್ಧನ್ ರಾವ್ ಅವರ ಮಗನಾದ ವಿಜಯ್ ದೇವರಕೊಂಡ, 2011 ರಲ್ಲಿ ತೆರೆಕಂಡ ನುವ್ವಿಲಾ ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದಾದ ನಂತರ 2015ರಲ್ಲಿ ತೆರೆಕಂಡ ಅರ್ಜುನ್ ರೆಡ್ಡಿ ಸಿನಿಮಾ ಬ್ಲಾಕ್ ಬಾಸ್ಟರ್ ಹಿಟ್ ಆಗಿ ವಿಜಯ್ ಅವರಿಗೆ ಹೊಸ ಇಮೇಜ್ ತಂದು ಕೊಟ್ಟಿತ್ತು.