Tag: ಕೆವಿನ್ ಪೀಟರ್ಸನ್

  • ಪ್ಯಾನ್ ಕಾರ್ಡ್ ಕಳೆದುಕೊಂಡ ಪೀಟರ್ಸನ್‌ಗೆ ಸಹಾಯ ಮಾಡಿದ ಭಾರತೀಯ ತೆರಿಗೆ ಇಲಾಖೆ

    ಪ್ಯಾನ್ ಕಾರ್ಡ್ ಕಳೆದುಕೊಂಡ ಪೀಟರ್ಸನ್‌ಗೆ ಸಹಾಯ ಮಾಡಿದ ಭಾರತೀಯ ತೆರಿಗೆ ಇಲಾಖೆ

    ನವದೆಹಲಿ: ಇಂಗ್ಲೆಂಡ್‌ನ ಮಾಜಿ ನಾಯಕ ಕೆವಿನ್ ಪೀಟರ್ಸನ್ ಅವರು ಭಾರತಕ್ಕೆ ಭೇಟಿ ನೀಡಲು ಬೇಕಾದ ಪ್ಯಾನ್ ಕಾರ್ಡ್‌ನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಯಾರದರೂ ಸಹಾಯ ಮಾಡುವ ಬಗ್ಗೆ ಟ್ವೀಟ್ ಮಾಡಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದರು. ಇದಕ್ಕೆ ಈಗ ಭಾರತೀಯ ಆದಾಯ ತೆರಿಗೆ ಇಲಾಖೆ ಸಹಾಯ ಮಾಡಿದೆ.

    ಪೀಟರ್ಸನ್ ಅವರು ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಪಡೆದ ನಂತರ ಐಪಿಎಲ್ ಪಂದ್ಯಕ್ಕಾಗಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ಯಾನ್ ಕಾರ್ಡ್‌ನ್ನು ಕಳೆದುಕೊಂಡಿರುವ ಬಗ್ಗೆ ದುಃಖವನ್ನು ಹಂಚಿಕೊಂಡಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?: ಭಾರತ ದಯವಿಟ್ಟು ಸಹಾಯ ಮಾಡಿ, ನಾನು ನನ್ನ ಪ್ಯಾನ್ ಕಾರ್ಡ್ ಅನ್ನು ಕಳೆದುಕೊಂಡಿದ್ದೇನೆ ಮತ್ತು ಸೋಮವಾರ ಭಾರತಕ್ಕೆ ಪ್ರಯಾಣಿಸುತ್ತಿದ್ದೇನೆ. ಆದರೆ ಕೆಲಸಕ್ಕಾಗಿ ನನಗೆ ಪ್ಯಾನ್ ಕಾರ್ಡ್ ಅಗತ್ಯವಿದೆ. ದಯವಿಟ್ಟು ನನಗೆ ಸಹಾಯ ಮಾಡಲು ನಾನು ಆದಷ್ಟು ಬೇಗ ಸಂಪರ್ಕಿಸಬಹುದಾದ ಯಾರಿಗಾದರೂ ದಯವಿಟ್ಟು ನನ್ನನ್ನು ನಿರ್ದೇಶಿಸಬಹುದೇ? ಎಂದು ತಿಳಿಸಿದ್ದಾರೆ. ಪೀಟರ್ಸನ್ ನಂತರ ತಮ್ಮ ಟ್ವೀಟ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಯತ್ನ: ಸಂಜಯ್ ರಾವತ್

    ಈ ಬಗ್ಗೆ ಭಾರತೀಯ ಆದಾಯ ತೆರಿಗೆ ಇಲಾಖೆಯೆ ಅಧಿಕೃತ ಖಾತೆ ಪ್ರತಿಕ್ರಿಯಿಸಿದ್ದು ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ನಿಮ್ಮ ಪ್ಯಾನ್ ವಿವರಗಳಿದ್ದರೆ, ಪ್ಯಾನ್ ಕಾರ್ಡ್‌ನ್ನು ನಕಲು ಇದ್ದರೆ ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ದಯವಿಟ್ಟು ಈ ಲಿಂಕ್‌ಗಳಿಗೆ ಭೇಟಿ ನೀಡಿ ಎಂದು ತಿಳಿಸಿದೆ. ಇದಕ್ಕೆ ಧನ್ಯವಾದ ತಿಳಿಸಿರುವ ಪೀಟರ್ಸನ್ ಅವರು ಮಾಹಿತಿಗಳನ್ನು ಇಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ. ದನ್ನೂ ಓದಿ: ಬಿಜೆಪಿ ಬೆಂಗಾವಲು ಪಡೆ ಮೇಲೆ ಎಸ್‍ಪಿ ಗೂಂಡಾಗಳಿಂದ ದಾಳಿ: ಕೇಶವ್ ಪ್ರಸಾದ್ ಮೌರ್ಯ

    ಮಾಜಿ ಇಂಗ್ಲೆಂಡ್ ನಾಯಕ ಪೀಟರ್ಸನ್‌ಗೆ ಟ್ವಿಟರ್‌ನಲ್ಲಿ ಸುಮಾರು 3.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಕಳೆದ ತಿಂಗಳ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಕೊನೆಯ ಬಾರಿಗೆ ಪೀಟರ್ಸನ್ ಕಾಣಿಸಿಕೊಂಡಿದ್ದರು. ಇವರು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಕ್ಕನ್ ಚಾರ್ಜರ್ಸ್, ಸನ್‌ರೈಸರ್ಸ್ ಹೈದರಾಬಾದ್, ರೈಸಿಂಗ್ ಪುಣೆ ಸೂಪರ್‌ಜೈಂಟ್, ಡೆಲ್ಲಿ ಕ್ಯಾಪಿಟಲ್ಸ್ ಪರ ಆಟವಾಡಿದ್ದಾರೆ.

  • ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

    ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

    ಮುಂಬೈ: ವಿಶ್ವಾದ್ಯಂತ ಹಾಗೂ ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿ ತೊಂದರೆಗೆ ಸಿಲುಕಿದೆ. ಆದರೆ ಏನೇ ಆದರೂ ಈ ಬಾರಿಯ ಟೂರ್ನಿ ನಡೆಯಲೇ ಬೇಕು ಅಂತ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಟೂರ್ನಿ ನಡೆಸುವ ಬಗ್ಗೆ ಸಲಹೆ ಕೂಡ ನೀಡಿದ್ದಾರೆ.

    ಖಾಲಿ ಮೈದಾನ, ಕ್ರಿಕೆಟ್ ಅಭಿಮಾನಿಗಳಿಲ್ಲದ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿಯೇ ಟೂರ್ನಿ ನಡೆಸಬೇಕು. ಇದರಿಂದ ಪ್ರೇಕ್ಷಕರ ಜೀವಕ್ಕೆ ಯಾವುದೇ ಅಪಾಯವಿಲ್ಲ ಇರುವುದಿಲ್ಲ ಎಂದು ಪಿಟರ್ಸನ್ ಸಲಹೆ ನೀಡಿದ್ದಾರೆ.

    ಐಪಿಎಲ್ ಟೂರ್ನಿ ಮೂರು ಅಥವಾ ನಾಲ್ಕು ವಾರಗಳಲ್ಲಿ ಕೊನೆಗೊಳ್ಳಬೇಕು. ಹೀಗಾಗಿ ಈ ಬಾರಿ ಐಪಿಎಲ್‍ನ ಸ್ವರೂಪವೂ ಚಿಕ್ಕದಾಗಿರಬೇಕು ಎಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

    ಕೊರೊನಾ ವೈರಸ್ ಹಾಗೂ ವಿದೇಶಿ ಆಟಗಾರರಿಗೆ ವೀಸಾ ನಿರ್ಬಂಧದಿಂದಾಗಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮಾರ್ಚ್ 29ರಿಂದ ಏಪ್ರಿಲ್ 15ರವರೆಗೆ ಮುಂದೂಡಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಬೇಕಿತ್ತು.

    “ಜುಲೈ-ಆಗಸ್ಟ್‍ನಲ್ಲಿ ಕ್ರೀಡಾ ಚಟುವಟಿಕೆ ಆರಂಭವಾಗಬೇಕು. ಐಪಿಎಲ್‍ನ 13ನೇ ಆವೃತ್ತಿಯನ್ನು ಸಹ ನಡೆಸಬೇಕು ಎಂದು ಬಯಸುತ್ತೇನೆ. ವಿಶ್ವದ ಪ್ರತಿಯೊಬ್ಬ ಆಟಗಾರನೂ ಇದನ್ನೇ ಬಯಸುತ್ತಿದ್ದಾರೆ. ಅವರು ಸಹ ಟೂರ್ನಿಯಲ್ಲಿ ಆಡಲೇಬೇಕು ಎನ್ನುವ ಇಚ್ಛೆಯನ್ನು ಹೊಂದಿದ್ದಾರೆ. ಆಟಗಾರರು ಮತ್ತು ಫ್ರಾಂಚೈಸಿಗಳ ಜೊತೆಗೆ ತೆರೆಮರೆಯಲ್ಲಿ ಕೆಲಸ ಮಾಡುವವರಿಗೆ ಐಪಿಎಲ್ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಫ್ರ್ಯಾಂಚೈಸಿ ಸ್ವಲ್ಪ ಹಣವನ್ನು ಉಳಿಸುವ ಮಾರ್ಗವನ್ನು ಸಹ ಕಂಡುಕೊಳ್ಳಬೇಕು. ಉದಾಹರಣೆಗೆ ಎಲ್ಲಾ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತದೆ. ಹೀಗಾಗಿ ಟೂರ್ನಿಯನ್ನು ಮೂರು ಅಥವಾ ನಾಲ್ಕು ವಾರಗಳಿಗೆ ಕಡಿತಗೊಳಿಸಬಹುದು” ಎಂದು ಸಲಹೆ ನೀಡಿದ್ದಾರೆ.

    ಭಾರತದ ಮಾಜಿ ಬ್ಯಾಟ್ಸ್‌ಮನ್ ಸಂಜಯ್ ಮಂಜ್ರೇಕರ್ ಕೂಡ ಐಪಿಎಲ್‍ನ ಮಹತ್ವವನ್ನು ವ್ಯಕ್ತಪಡಿಸಿದ್ದಾರೆ. ಪೀಟರ್ಸನ್ ಅವರ ಸಲಹೆಗೆ ಸಹಮತ ನೀಡಿರುವ ಮಂಜ್ರೇಕರ್, ಸರ್ಕಾರ, ಮಂಡಳಿ ಮತ್ತು ಫ್ರಾಂಚೈಸಿಗಳು ಸೇರಿದಂತೆ ಇತರ ಎಲ್ಲಾ ಸಂಬಂಧಿತ ಸಂಸ್ಥೆಗಳಿಂದ ಒಪ್ಪಿಗೆ ಪಡೆದು ಐಪಿಎಲ್ ನಡೆಸಬೇಕು. ಇದು ವಿಶೇಷ ಆರ್ಥಿಕತೆಯನ್ನು ಸಹ ಪ್ರಾರಂಭಿಸುತ್ತದೆ. ಏಕೆಂದರೆ ಈ ಟೂರ್ನಿ ನಡೆಬೇಕಾಗಿರುವುದು ಮುಂಬೈ ಇಂಡಿಯನ್ಸ್, ಎಂ.ಎಸ್.ಧೋನಿ ಅಥವಾ ವಿರಾಟ್ ಕೊಹ್ಲಿ ಅವರಿಗಾಗಿ ಅಷ್ಟೇ ಅಲ್ಲ. ಐಪಿಎಲ್‍ನಿಂದ ಉದ್ಯೋಗ ಪಡೆಯುವವರಿಗೆ ಟೂರ್ನಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

    ಇದೇ ವಿಚಾರವಾಗಿ ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಜಸ್ಟಿನ್ ಲ್ಯಾಂಗರ್, ನೀವು ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ ನಿಮ್ಮ ಮುಂದೆ ಜನಸಂದಣಿ ಇರುತ್ತಿರಲಿಲ್ಲ. ಆಗಲೇ ಕ್ರಿಕೆಟ್ ಆಡಿದ್ದೀರಿ. ಏಕೆಂದರೆ ನೀವು ಆಟವನ್ನು ಇಷ್ಟಪಡುತ್ತೀರಿ. ನಿಮ್ಮ ತಂಡದ ಆಟಗಾರರೊಂದಿಗೆ ಆಡಲು ಇಷ್ಟಪಡುತ್ತೀರಿ. ಈ ಆಟದ ಪ್ರೀತಿಯಿಂದಾಗಿ ಇಂದು ಹೆಚ್ಚಿನ ಜನರು ಟಿವಿ ಮಾಧ್ಯಮ ಮತ್ತು ರೇಡಿಯೋ ಮೂಲಕ ಜನರನ್ನು ರಂಜಿಸಲು ಸಮರ್ಥರಾಗಿದ್ದೀರಿ. ಇದಕ್ಕಾಗಿಯೇ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯವನ್ನು ನಡೆಸುವುದು ಮುಖ್ಯವಾಗಿದೆ. ಇದು ಸ್ವಲ್ಪ ವಿಭಿನ್ನವಾಗಿರುತ್ತದೆ. ಆದರೆ ನಾವೆಲ್ಲರೂ ಎಷ್ಟು ಅದೃಷ್ಟವಂತರು ಎಂಬುದನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ಐಪಿಎಲ್ ಟೂರ್ನಿ ನಡೆಸುವ ಬಗ್ಗೆ ಸಲಹೆ ನೀಡಿದ್ದಾರೆ.