Tag: ಕೆವೈಸಿ

  • ಲಿಂಕ್ ಕ್ಲಿಕ್ ಮಾಡಿ ಹಣ ಕಳೆದುಕೊಂಡ ನಟಿ ನಗ್ಮಾ

    ಲಿಂಕ್ ಕ್ಲಿಕ್ ಮಾಡಿ ಹಣ ಕಳೆದುಕೊಂಡ ನಟಿ ನಗ್ಮಾ

    ಸೈಬರ್ (Cyber) ಖದೀಮರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಾನಾ ರೂಪದಲ್ಲಿ ಅವರೆಲ್ಲ ವಂಚನೆ (Fraud) ಮಾಡುತ್ತಿದ್ದು, ನಟಿ ನಗ್ಮಾ (Nagma) ಸೈಬರ್ ವಂಚಕರು ಬೀಸಿದ್ದ ಬಲೆಗೆ ಬಿದ್ದಿದ್ದಾರೆ. ಕೇವಲ ಐದೇ ನಿಮಿಷದಲ್ಲಿ  ಸಾಕಷ್ಟು ಹಣವನ್ನೂ ಅವರು ಕಳೆದುಕೊಂಡಿದ್ದಾರೆ. ಬ್ಯಾಂಕ್ ಹೆಸರಿನಲ್ಲಿ ನಗ್ಮಾಗೆ ಕರೆ ಮಾಡಿದ್ದ ವಂಚಕರು, ಕ್ಷಣಾರ್ಧದಲ್ಲೇ ಅವರ ಖಾತೆಯನ್ನು ಹಣವನ್ನು ದೋಚಿಸಿದ್ದಾರೆ.

    ಫೆಬ್ರವರಿ 28 ರಂದು ನಗ್ಮಾ ಅವರ ಮೊಬೈಲ್ ಸಂಖ್ಯೆಗೆ ಮಸೇಜ್ ಬಂದಿದೆ. ಬ್ಯಾಂಕ್ ಖಾತೆಗಾಗಿ ಕೆವೈಸಿ ಭರ್ತಿ ಮಾಡಿ ಎಂದು ಮಸೇಜ್ ನಲ್ಲಿ ಉಲ್ಲೇಖಿಸಲಾಗಿದೆ. ಮಸೇಜ್ ಬಂದ ಹಿಂದೆಯೇ ಖದೀಮರು ಕಾಲ್ ಕೂಡ ಮಾಡಿದ್ದಾರೆ. ಮಸೇಜ್ ಹೇಳಿದಂತೆ ಭರ್ತಿ ಮಾಡಲು ತಿಳಿಸಿದ್ದಾರೆ. ಅದು ಬ್ಯಾಂಕ್ ನಿಂದ ಬಂದಿರುವ ಕರೆ ಎಂದು ನಂಬಿರುವ ನಗ್ಮಾ ಕೆವೈಸಿ ಭರ್ತಿ ಮಾಡಿದ್ದಾರೆ. ಕ್ಷಣಾರ್ಧಲ್ಲೆ ಅವರ ಬ್ಯಾಂಕ್ ಖಾತೆಯಿಂದ ಒಂದು ಲಕ್ಷ ರೂಪಾಯಿ ಡ್ರಾ ಆಗಿದೆ. ಇದನ್ನೂ ಓದಿ: ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ

    ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಸೈಬರ್ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಿದ್ದಾರೆ. ಸೈಬರ್ ವಂಚನೆಯ ಕುರಿತು ಸಾಕಷ್ಟು ಜಾಗ್ರತೆ ಮೂಡಿಸುತ್ತಿದ್ದರೂ, ಬುದ್ಧಿವಂತರೇ ಹೆಚ್ಚು ಮೋಸ ಹೋಗುತ್ತಿರುವುದು ನಿಜಕ್ಕೂ ಬೇಸರದ ಸಂಗತಿ ಎಂದಿದ್ದಾರೆ ಸೈಬರ್ ಪೊಲೀಸ್ ಅಧಿಕಾರಿಗಳು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕರಿಗೆ ಬಲೆ ಬೀಸಿದ್ದಾರೆ.

  • Unknown ನಂಬರ್ ಯಾರದು ಎಂದು ತಿಳಿಯಲು ಇನ್ಮುಂದೆ ಟ್ರೂ ಕಾಲರ್ ಬೇಡ

    Unknown ನಂಬರ್ ಯಾರದು ಎಂದು ತಿಳಿಯಲು ಇನ್ಮುಂದೆ ಟ್ರೂ ಕಾಲರ್ ಬೇಡ

    ನವದೆಹಲಿ: ದೂರಸಂಪರ್ಕ ಇಲಾಖೆ ಶೀಘ್ರವೇ ಹೊಸ ವ್ಯವಸ್ಥೆಯೊಂದನ್ನು ಹೊರತರಲಿದೆ. ಈ ವ್ಯವಸ್ಥೆಯಲ್ಲಿ ನಮಗೆ ಯಾರು ಕರೆ ಮಾಡುತ್ತಾರೋ ಅವರ KYC(ನೋ ಯುವರ್ ಕಸ್ಟಮರ್) ದಾಖಲೆ ನೀಡುವ ವೇಳೆ ಕೊಡುವ ಹೆಸರೇ ಫೋನ್ ಪರದೆ ಮೇಲೆ ಮೂಡುವಂತೆ ಮಾಡುತ್ತದೆ.

    ಟೆಲಿಕಾಂ ಆಪರೇಟರ್‌ಗಳಿಗೆ ಜನರು KYC ದಾಖಲೆಯನ್ನು ನೀಡುವಾಗ ಯಾವ ಹೆಸರು ಕೊಡುತ್ತಾರೋ ಅದೇ ಹೆಸರು ಫೋನ್ ಪರದೆ ಮೇಲೆ ಕಾಣಿಸಲಿದೆ ಎಂದು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ(ಟ್ರಾಯ್) ಅಧ್ಯಕ್ಷ ವಘೇಲಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಾರತದ ಮೊದಲ 5ಜಿ ಕರೆ ಯಶಸ್ವೀ ಪರೀಕ್ಷೆ

    ನಾವು KYC ದಾಖಲೆಯಲ್ಲಿ ನೀಡಿದ ಹೆಸರೇ ಕರೆಯ ಮಾಹಿತಿಯಲ್ಲಿ ಕಾಣಿಸುವಂತೆ ಮಾಡಲಿದ್ದು, ಈ ಸೇವೆ ಶೀಘ್ರವೇ ಆರಂಭವಾಗಲಿದೆ. ಇದರ ಪ್ರಕಾರ ಯಾರಾದರೂ ಕರೆ ಮಾಡಿದಾಗ ನಿಮ್ಮ ಮೊಬೈಲ್ ಸ್ಕ್ರೀನ್ ಮೇಲೆ KYC ದಾಖಲೆ ಪ್ರಕಾರವೇ ಅವರ ಹೆಸರು ಕಾಣಿಸಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

    ನಂಬರ್ ಸೇವ್ ಇಲ್ಲದಿದ್ದರೂ ಹೆಸರು ತಿಳಿಸಲಿದೆ:
    ನಿಮ್ಮ ಮೊಬೈಲ್‌ಗೆ ಅಪರಿಚಿತ ವ್ಯಕ್ತಿ ಕರೆ ಮಾಡಿದಾಗ ಅಥವಾ ಸೇವ್ ಇಲ್ಲದ ನಂಬರ್‌ನಿಂದ ಕರೆ ಬಂದಾಗ, KYC ಆಧಾರದ ಮೇಲೆ ಅವರ ಹೆಸರು ತಿಳಿಯಬಹುದು. ಇದನ್ನೂ ಓದಿ: 2030ರ ವೇಳೆಗೆ ಭಾರತಕ್ಕೆ 6ಜಿ ನೆಟ್‌ವರ್ಕ್ – ಪ್ರಧಾನಿ ಮೋದಿ

    ಸದ್ಯ ಬಳಕೆದಾರರು ಟ್ರೂಕಾಲರ್‌ನಂತಹ ಅಪ್ಲಿಕೇಶನ್‌ಗಳನ್ನು ಬಳಸಿ ಕರೆ ಮಾಡಿದವರ ಹೆಸರನ್ನು ತಿಳಿದುಕೊಳ್ಳುತ್ತಾರೆ. ಆದರೆ ಅದು ಶೇ.100 ರಷ್ಟು ಅಧಿಕೃತವಾಗಿರುವುದಿಲ್ಲ. ಆದರೆ ಈ ಹೊಸ ವ್ಯವಸ್ಥೆ KYC ಡೇಟಾದಿಂದ ಜನರ ಹೆಸರನ್ನು ತಿಳಿಸಲಿದೆ.

    ಈವರೆಗೆ ಟ್ರಾಯ್ ಸ್ಪ್ಯಾಮ್ ಅಥವಾ ಬೇಡದ ಕರೆಗಳನ್ನು ತಪ್ಪಿಸಲು ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಆದರೆ ಸ್ಪ್ಯಾಮ್ ಕರೆಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಇಲಾಖೆಗೆ ಸಾಧ್ಯವಾಗಿರಲಿಲ್ಲ. ಇದೀಗ ಬರಲಿರುವ ಹೊಸ ವಿಧಾನದಿಂದ ಸ್ಪ್ಯಾಮ್ ಕರೆಗಳನ್ನು ಜನರೇ ತಿಳಿದು ತಪ್ಪಿಸಲು ಸಾಧ್ಯವಾಗಲಿದೆ.

  • KYC ಅಪ್‍ಡೇಟ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ!

    KYC ಅಪ್‍ಡೇಟ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ!

    ಹುಬ್ಬಳ್ಳಿ: ನಗರದಲ್ಲಿ ಇಬ್ಬರು ಪ್ರತ್ಯೇಕ ವ್ಯಕ್ತಿಗಳಿಗೆ ಕೆವೈಸಿ ಅಪ್‍ಡೇಟ್ ಹೆಸರಲ್ಲಿ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸೈಬರ್ ಕ್ರೈಂ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಮೊದಲನೇ ಪ್ರಕರಣದಲ್ಲಿ ವಂಚಕರು ವೈದ್ಯರೊಬ್ಬರ ಮೊಬೈಲ್‍ಗೆ ಸಂದೇಶ ಕಳುಹಿಸಿ, ನಿಮ್ಮ ಸಿಮ್ ಕಾರ್ಡ್ ಕೆವೈಸಿ ಅಪ್‍ಡೇಟ್ ಮಾಡಬೇಕು. ಇಲ್ಲದಿದ್ದರೆ ಸಿಮ್ ಬಂದ್ ಆಗುತ್ತದೆ ಎಂದಿದ್ದಾರೆ. ಇದನ್ನು ನೋಡಿದ ವೈದ್ಯರು ಆ್ಯಪ್‍ವೊಂದನ್ನು ಡೌನ್‍ಲೋಡ್ ಮಾಡಿದ್ದಾರೆ. ಅದರ ಮೂಲಕ 44,499 ರೂ. ವರ್ಗಾಯಿಸಿಕೊಂಡು ವಂಚಿಸಿರುವ ಕುರಿತು ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ದೇಶಪಾಂಡೆ ನಗರದ ಡಾ. ನಾರಾಯಣಚಂದ ಹೆಬಸೂರ ವಂಚನೆಗೊಳಗಾದ ವೈದ್ಯ. ಅವರಿಗೆ ಡಿಸೆಂಬರ್ 28ರಂದು ಅಪರಿಚಿತರೊಬ್ಬರು ಎಸ್‍ಎಂಎಸ್ ಕಳುಹಿಸಿದ್ದರು. ಅದರಲ್ಲಿದ್ದ ನಂಬರ್‍ಗೆ ಕರೆ ಮಾಡಿದಾಗ, ವಿನಯ ಶರ್ಮಾ ಎಂಬಾತ ಮಾತನಾಡಿದ್ದ. ತಾನು ಎಸ್‍ಬಿಐ ಅಧಿಕಾರಿ ಎಂದು ನಂಬಿಸಿದ್ದ. ಬಳಿಕ ಟೀಮ್ ವೀವರ್ ಆ್ಯಪ್ ಮೂಲಕ ಡೌನ್‍ಲೋಡ್ ಮಾಡಿಸಿದ್ದ. ಅವರ ಗಮನಕ್ಕೆ ಬಾರದಂತೆ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದಾನೆಂದು ನಾರಾಯಣಚಂದ ತಿಳಿಸಿದ್ದಾರೆ.  ಇದನ್ನೂ ಓದಿ: ಮಹಿಳಾ ವಿಮಾ ಏಜೆಂಟ್ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಸ್ನೇಹಿತನಿಂದ ಹೊರಬಂತು ಸತ್ಯ

    ಇನ್ನೊಂದು ಪ್ರಕರಣದಲ್ಲಿ ವಿಶ್ವೇಶ್ವರ ನಗರದ ನಿವೃತ್ತ ಉದ್ಯೋಗಿ ಕೆ.ಎನ್. ಕರ್ನಲ್ ಅವರಿಗೆ ವಂಚಕರು ವಂಚಿಸಿದ್ದಾರೆ. ಎಸ್‍ಬಿಐ ಖಾತೆಯ ಇ-ಕೆವೈಸಿ ಅಪ್‍ಡೇಟ್ ಮಾಡಬೇಕೆಂದು ಕರ್ನಲ್‍ಗೆ ಸಂದೇಶ ಕಳುಹಿಸಿ, ಎನಿಡೆಸ್ಕ್ ಆ್ಯಪ್ ಒಂದನ್ನು ಡೌನ್‍ಲೋಡ್ ಮಾಡಿಸಿದ್ದಾರೆ. ಪ್ರಕರಣದಲ್ಲಿ ಕಸ್ಟಮರ್ ಕೇರ್ ಹಾಗೂ ಬ್ಯಾಂಕ್ ಅಧಿಕಾರಿ ಎಂದು ಹೇಳಿ ಇಬ್ಬರು ಮೋಸ ಮಾಡಿದ್ದಾರೆ. ಅದರ ಮೂಲಕ 1,87,000 ರೂಪಾಯಿ ವಂಚಿಸಿದ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಹಗಲು ಹೊತ್ತಿನಲ್ಲೇ ಬ್ಯಾಂಕ್ ದರೋಡೆ – ಸಿಬ್ಬಂದಿ ಹತ್ಯೆ

    POLICE JEEP

    ಅಪರಿಚಿತನೊಬ್ಬ ಡಿ. 27 ರಂದು ಕರ್ನಲ್ ಅವರ ಮೊಬೈಲ್‍ಗೆ ಸಂದೇಶ ಕಳುಹಿಸಿದ್ದ. ಅದರಲ್ಲಿದ್ದ ನಂಬರ್ ಗೆ ಕರೆ ಮಾಡಿದಾಗ ತಾನು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿದ್ದ ನಂತರ ಎನಿಡೆಸ್ಕ್ ಆ್ಯಪ್ ಡೌನ್‍ಲೋಡ್ ಮಾಡಿಸಿದ್ದ. ಲಾಗ್ ಇನ್ ಮಾಡಿಸಿ ಎಟಿಎಂ ಕಾರ್ಡ್ ವಿವರ ಪಡೆದಿದ್ದ. ಈ ಬಗ್ಗೆ ವಂಚಕ ಕಸ್ಟಮರ್ ಕೇರ್ ಗೆ ಕರೆ ಮಾಡುವಂತೆ ಸೂಚಿಸಿದ್ದರು. ಕಸ್ಟಮರ್ ಕೇರ್ ಗೆ ಕರೆ ಮಾಡಿದಾಗ ಪೇಟಿಎಂನಲ್ಲಿ ನಾನು ಹೇಳಿದಂತೆ ಮಾಡಿ ಎಂದು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.