Tag: ಕೆ.ಆರ್.ಪೇಟೆ

  • ಒಂಟಿ ಮಹಿಳೆಯನ್ನ ಭೀಕರವಾಗಿ ಹತ್ಯೆಗೈದು ಪರಾರಿಯಾದ ಪಾಪಿಗಳು

    ಒಂಟಿ ಮಹಿಳೆಯನ್ನ ಭೀಕರವಾಗಿ ಹತ್ಯೆಗೈದು ಪರಾರಿಯಾದ ಪಾಪಿಗಳು

    ಮಂಡ್ಯ: ಒಂಟಿ ಮಹಿಳೆಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ನಿವಾಸಿ ಒಂಟಿ ಮಹಿಳೆ ಪುಷ್ಪಲತಾ (45) ಮನೆಗೆ ಅಪರಿಚಿತರು ನುಗ್ಗಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಪುಷ್ಪಲತಾ ಅವರ ಪತಿ ಕಳೆದ 10 ವರ್ಷದ ಹಿಂದೆ ಮೃತಪಟ್ಟಿದ್ದರು. ಅದಕ್ಕೆ ಒಂಟಿಯಾಗಿಯೇ ಪುಷ್ಪಲತಾ ತನ್ನ ಮಗನನ್ನು ನೋಡಿಕೊಂಡು ಜೀವನ ನಡೆಸುತ್ತಿದ್ದರು. ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿಕೊಡಿ ಅಂತಾ ಮತಪೆಟ್ಟಿಗೆಗೆ ಪತ್ರ ಹಾಕಿರುವ ಯುವಕ!

    ನಡೆದಿದ್ದೇನು?
    ಪುಷ್ಪಲತಾ ಜೀವನ ಸಾಗಿಸಲು ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು. ಬುಧವಾರ ಮಧ್ಯಾಹ್ನ ಊಟಕ್ಕೆಂದು ಮನೆಗೆ ತೆರಳಿದಾಗ ಪುಷ್ಪಲತಾ ಕೊಲೆ ನಡೆದಿದೆ. ತಾಯಿ ಎಷ್ಟು ಸಮಯವಾದರೂ ಮೆಡಿಕಲ್ ಸ್ಟೋರ್‌ಗೆ ಬಾರದ ಹಿನ್ನೆಲೆ ಪುಷ್ಪಲತಾ ಪುತ್ರ ಮನೆಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ಹಂತಕರು ಪುಷ್ಪಲತಾ ತಲೆ ಹಾಗೂ ಕತ್ತಿನ ಭಾಗಕ್ಕೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಅಲ್ಲದೇ ಪುಷ್ಪಲತಾ ಮೃತದೇಹ ಅರ್ಧಂಬರ್ಧ ಬಟ್ಟೆಯಲ್ಲಿ ಪತ್ತೆಯಾಗಿರುವುದರಿಂದ ಆಕೆಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ದೇಶದಲ್ಲಿ 2023ರ ಮಾರ್ಚ್ ವೇಳೆಗೆ ಪೂರ್ಣ ಪ್ರಮಾಣದ 5G ಸೇವೆ: ಕೇಂದ್ರ ಸಚಿವ

    ಪುಷ್ಪಲತಾ ಅವರ ಕೊಲೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಶೋಧಕಾರ್ಯವನ್ನು ಪ್ರಾರಂಭಿಸಿದ್ದಾರೆ.

    Live Tv

  • ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಬರ್ಬರ ಹತ್ಯೆ!

    ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಬರ್ಬರ ಹತ್ಯೆ!

    ಮಂಡ್ಯ: ಆಟೋ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ. ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ.

    MURDER

    ನಾಸಿರ್ ಅಹಮದ್ (30) ಕೊಲೆಯಾದ ಆಟೋ ಚಾಲಕ. ಆಲಂಬಾಡಿಕಾವಲು ದರ್ಗಾ ಸಮೀಪದ ನಿರ್ಜನ ಪ್ರದೇಶದಲ್ಲಿ ಈ ಕೃತ್ಯ ನಡೆದಿದೆ. ಇದನ್ನೂ ಓದಿ: ಪತ್ನಿ ಜೊತೆಗಿನ ಜೀವನ ನರಕವಾಗಿದೆ, ನಾನು ಜೈಲಲ್ಲೇ ಇರ್ತೀನಿ- ಪೊಲೀಸರಿಗೆ ವ್ಯಕ್ತಿ ಮನವಿ

    K.R.PET MURDER

    ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ಹಂತಕರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು- ಸಿದ್ದುಗೆ ಸಿ.ಟಿ.ರವಿ ಪ್ರಶ್ನೆ

  • ದಾಯಾದಿ ಕಲಹ – ವ್ಯಕ್ತಿಗೆ ಬೆಂಕಿ, ಆಸ್ಪತ್ರೆಯಲ್ಲಿ ಸಾವು

    ದಾಯಾದಿ ಕಲಹ – ವ್ಯಕ್ತಿಗೆ ಬೆಂಕಿ, ಆಸ್ಪತ್ರೆಯಲ್ಲಿ ಸಾವು

    ಮಂಡ್ಯ: ದಾಯಾದಿ ಕಲಹದಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್‍ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದಲ್ಲಿ ಜರುಗಿದೆ.

    ಮೂಡನಹಳ್ಳಿ ಗ್ರಾಮದ ರಘು(29) ಸಾವಿಗೀಡಾದ ದುರ್ದೈವಿ. ಒಂದೂವರೆ ತಿಂಗಳ ಹಿಂದೆಯಷ್ಟೇ ರಘು ಮದುವೆಯಾಗಿದ್ದು, ಇದೇ ಸೆ.25 ರ ರಾತ್ರಿ ಈ ಘಟನೆ ಜರುಗಿದೆ. ಅಂದು ಸುಟ್ಟಗಾಯಗಳಿಂದ ಬಳಲುತ್ತಿದ್ದ ರಘು ಅವರನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ರಘು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:  ಆರ್ಥಿಕ ಸಂಕಷ್ಟದಿಂದ ಮನನೊಂದು KSRTC ನೌಕರ ವಿಷ ಸೇವಿಸಿ ಆತ್ಮಹತ್ಯೆ

    ರಘು ತನ್ನದೇ ಸ್ವಂತ ಕಾರು ಹೊಂದಿದ್ದು, ಬೆಂಗಳೂರಿನಲ್ಲಿ ಚಾಲಕನಾಗಿ ಕೆಲಸ ಮಾಡ್ತಿದ್ದರು. ಲಾಕ್‍ಡೌನ್ ಹಿನ್ನೆಲೆ ಕಳೆದ ಕೆಲ ತಿಂಗಳಿನಿಂದ ಮೂಡನಹಳ್ಳಿಯಲ್ಲೇ ಇದ್ದರು. ಸೆ.25 ರ ರಾತ್ರಿ ಕಾರನ್ನು ಸ್ವಚ್ಛಗೊಳಿಸಿ ಮಾರನೆ ದಿನ ಬೆಂಗಳೂರು ಹೋಗಲು ಸಿದ್ಧತೆ ಆರಂಭಿಸಿದ್ದರು. ಕಾರಿನ ಒಳಗೆ ಕುಳಿತು ಗ್ಲಾಸ್ ಮೇಲೆತ್ತುವ ವೇಳೆ ರಘುಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

    ಈ ಕೃತ್ಯ ಮಾಡಿದ್ದು, ರಘು ದಾಯಾದಿ ಶಿವು ಎಂದು ಹೇಳಲಾಗುತ್ತಿದೆ. ಘಟನೆ ನಂತರ ಶಿವು ಇದೀಗ ತಲೆ ಮರೆಸಿಕೊಂಡಿದ್ದಾನೆ. ಇದನ್ನೂ ಓದಿ:  ಅಸ್ಸಾಂನಿಂದ ಬರುತ್ತಿದ್ದಾರೆ ನೂರಾರು ಕೂಲಿ ಕಾರ್ಮಿಕರು – ಸ್ಥಳೀಯರ ಆತಂಕ

    ಈ ಪ್ರಕರಣ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ.

  • ಪವರ್ ಇದ್ದಾಗಲೇ ನಮ್ಮ ಕ್ಷೇತ್ರದ ಅಭಿವೃದ್ಧಿ ಸಾಧ್ಯ: ನಾರಾಯಣಗೌಡ

    ಪವರ್ ಇದ್ದಾಗಲೇ ನಮ್ಮ ಕ್ಷೇತ್ರದ ಅಭಿವೃದ್ಧಿ ಸಾಧ್ಯ: ನಾರಾಯಣಗೌಡ

    ಮಂಡ್ಯ: ನಮ್ಮ ಪವರ್ ಇದ್ದಾಗಲೇ ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಳ್ಳಬೇಕು ಇಲ್ಲ ಎಂದರೆ ಕಷ್ಟ ಆಗುತ್ತದೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.

    ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಮೇಲುಕೋಟೆ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಟ್ಟರಾಜು ಅವರು ಮಂತ್ರಿಯಾಗಿದ್ದಾಗ ಅವರ ಕ್ಷೇತ್ರಕ್ಕೆ 1,600 ಕೋಟಿ ಅಭಿವೃದ್ಧಿ ಕೆಲಸವನ್ನು ತೆಗೆದುಕೊಂಡರು. ಆಗ ನಾನು ಕೇಳಿಕೊಂಡೆ ನಮಗೂ ಸ್ವಲ್ಪ ಕೊಡಿ ಎಂದು. ಆಗ ಅವರು ನಮ್ಮನ್ನು ಕೈ ಬಿಟ್ಟು ಬಿಟ್ಟರು. ಅವರು ಏಕೆ ಮಾಡಿದರು ಅಂತಾ ನನಗೆ ಈಗ ಗೊತ್ತಾಗುತ್ತಿದೆ ಎಂದರು.

    ನಮ್ಮ ಪವರ್ ಇದ್ದಾಗಲೇ ನಮ್ಮ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಗೊತ್ತಾಗಿದೆ. ನಮಗೆ ಈಗ ಪವರ್ ಇರುವ ಕಾರಣ ಕೆ.ಆರ್.ಪೇಟೆ ಕ್ಷೇತ್ರಕ್ಕೆ 1,200 ಕೋಟಿ ಅಭಿವೃದ್ಧಿ ಕೆಲಸಗಳನ್ನು ತೆಗೆದುಕೊಂಡಿದ್ದೇನೆ. ಹಾಗಂತಾ ನಾನು ಬೇರೆ ಕ್ಷೇತ್ರಗಳಿಗೆ ಮೋಸ ಮಾಡಿಲ್ಲ. ಎಲ್ಲಾ ಕ್ಷೇತ್ರಗಳಿಗೂ ಅಭಿವೃದ್ಧಿ ಕೆಲಸಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.

    ರಾಜಕೀಯ ಎಂಬುದು ನೀರಿನ ಮೇಲೆ ಇರುವ ಗುಳ್ಳೆ ಇದ್ದ ಹಾಗೆ, ಯಾವಾಗಲೂ ನಾವು ಪವರ್ ನಲ್ಲಿ ಇರುತ್ತೇವೆ ಅಂತಾ ಹೇಳುವುದಕ್ಕೆ ಆಗುವುದಿಲ್ಲ. ಪವರ್‍ನಲ್ಲಿ ಇರುವ ತನಕ ಕ್ಷೇತ್ರ ಹಾಗೂ ಜಿಲ್ಲೆಯನ್ನು ಅಭಿವೃದ್ಧಿಗೊಳಿಸಬೇಕು. ನಮ್ಮ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷಗಳ ಕಾಲ ಯಡಿಯೂರಪ್ಪನವರೇ ಇರುತ್ತಾರೆ. ಹೀಗಾಗಿ ಮಂಡ್ಯ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಬಹುದು.

    ಮುಂದುವರೆದು ಮಾತನಾಡಿದ ನಾರಾಯಣಗೌಡರು, ನಾನು ಮಂಡ್ಯ ಜಿಲ್ಲೆಯಲ್ಲಿ ಕೊಡುವುದು ತೆಗೆದುಕೊಳ್ಳುವುದು ಮಾಡಿದ್ದೇನೆ. ಬೇರೆ ಯಾರ ಬಳಿಯೂ ನಾನು ಯಾವ ವ್ಯವಹಾರವನ್ನು ಮಾಡಿಲ್ಲ. ನಾನು ಯಾರ ಬಳಿಯೂ ಡೀಲ್ ಮಾಡಿಲ್ಲ. ನಾನು ಸ್ವಚ್ಛವಾಗಿ ಇದ್ದೀನಿ. ಪುಟ್ಟರಾಜು ಅವರ ಬಳಿ ಆತ್ಮೀಯನಾಗಿ ಇದ್ದೀನಿ ಎಂದರು.

  • ಪೊಲೀಸರಿಗೆ ಕಗ್ಗಂಟಾದ ಯುವತಿ ಅಂಗಾಂಗ ಕತ್ತರಿಸಿ ನದಿಗೆಸೆದಿದ್ದ ಪ್ರಕರಣ

    ಪೊಲೀಸರಿಗೆ ಕಗ್ಗಂಟಾದ ಯುವತಿ ಅಂಗಾಂಗ ಕತ್ತರಿಸಿ ನದಿಗೆಸೆದಿದ್ದ ಪ್ರಕರಣ

    – 15 ದಿನವಾದ್ರೂ ಪತ್ತೆಯಾಗದ ಮೃತ ಯುವತಿ ಗುರುತು
    – ಉಸಿರುಗಟ್ಟಿಸಿ ಕೊಂದು, ಅಂಗಾಂಗ ಕತ್ತರಿಸಿದ್ದ ಸೈಕೋ ಕಿಲ್ಲರ್

    ಮಂಡ್ಯ: ಸಕ್ಕರೆ ನಾಡು ಮಂಡ್ಯ ಜನರನ್ನ ಬೆಚ್ಚಿ ಬೀಳಿಸಿದ್ದ ಅಪರಿಚಿತ ಯುವತಿಯ ಅಂಗಾಂಗ ಕತ್ತರಿಸಿ ನದಿಗೆಸೆದಿದ್ದ ಪ್ರಕರಣ ಪೊಲೀಸ್ ಇಲಾಖೆಗೆ ಕಗ್ಗಂಟಾಗಿದೆ. ಶವ ಪತ್ತೆಯಾಗಿ 15 ದಿನವಾದ್ರೂ ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ. ಇದರಿಂದ ಕೊಲೆ ಪ್ರಕರಣ ಬೇಧಿಸಲು ಸಾಧ್ಯವಾಗಿಲ್ಲ. ಇನ್ನೊಂದೆಡೆ ಶೀಘ್ರ ಹಂತಕರನ್ನು ಪತ್ತೆ ಹಚ್ಚುವಂತೆ ಜನರ ಒತ್ತಾಯಿಸ್ತಿದ್ದಾರೆ.

    ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬಂಡಿಹೊಳೆ ಬಳಿಯ ಹೇಮಾವತಿ ನದಿಯಲ್ಲಿ ಅಪರಿಚಿತ ಯುವತಿಯ ಅಂಗಾಂಗ ಬೇರ್ಪಡಿಸಿದ್ದ ಮೃತ ದೇಹ ಪತ್ತೆಯಾಗಿ 15 ದಿನ ಕಳೆದಿದೆ. ಹಂತಕರ ಹೆಡೆಮುರಿ ಕಟ್ಟಲು ತನಿಖೆ ತೀವ್ರಗೊಳಿಸಿರುವ ಪೊಲೀಸರಿಗೆ ಯುವತಿಯ ಗುರುತು ಪತ್ತೆಯಾಗದಿರುವುದೇ ಕಗ್ಗಂಟಾಗಿ ಪರಿವರ್ತನೆಯಾಗಿದೆ.

    ಏನಿದು ಪ್ರಕರಣ?:
    ನವೆಂಬರ್ 17ರಂದು ಬಂಡಿಹೊಳೆ ಬಳಿಯ ತ್ರಿಶೂಲ್ ವಿದ್ಯುತ್ ಸ್ಥಾವರದ ಕಾಲುವೆಯಲ್ಲಿ ಕೈ-ಕಾಲು, ತಲೆ ಇಲ್ಲದ ಯುವತಿಯ ದೇಹ ಪತ್ತೆಯಾಗಿತ್ತು. ಕಾಲುವೆ ಗೇಟ್ ನಲ್ಲಿ ಸಿಕ್ಕ ಕಸ ತೆಗೆಯುವಾಗ ರುಂಡ ನೋಡಿದ ಸಿಬ್ಬಂದಿ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಶೋಧ ಕಾರ್ಯ ನಡೆಸಿದಾಗ ದೇಹ ಸಿಕ್ಕಿದ್ದ ಗೇಟ್ ಬಳಿಯೇ ತೊಡೆ ಭಾಗ ಸಿಕ್ಕಿದ್ರೆ, ಕಾಲುವೆಯ ಸ್ವಲ್ಪ ದೂರದಲ್ಲಿ ಕೈಕಾಲುಗಳು ಹಾಗೂ ಹೇಮಾವತಿ ನದಿಯಲ್ಲಿ ತಲೆಬುರುಡೆ ಪತ್ತೆಯಾಗಿತ್ತು.

    ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಪಂಚನಾಮೆಗಾಗಿ ಆಸ್ಪತ್ರೆಗೆ ರವಾನಿಸಿ, ಇನ್ನೊಂದೆಡೆ ಯುವತಿಯ ಗುರುತು ಪತ್ತೆಗೆ ಮುಂದಾಗಿದ್ದರು. ಪೊಲೀಸರು ಎಷ್ಟೇ ಹುಡುಕಿದ್ರೂ ಮೃತ ಯುವತಿ ಯಾರೆಂದು ಪತ್ತೆಯಾಗಿಲ್ಲ. ಇನ್ನು ಮೃತದೇಹದ ಪೋಸ್ಟ್ ಮಾರ್ಟಮ್ ರಿಪೋರ್ಟ್ ಪೊಲೀಸರ ಕೈ ಸೇರಿದೆ. ದುಷ್ಕರ್ಮಿಗಳು ಮೊದಲು ಯುವತಿಯನ್ನು ಉಸಿರುಗಟ್ಟಿಸಿ ಕೊಲೆಗೈದು ಬಳಿಕ ಅಂಗಾಂಗ ಕತ್ತರಿಸಿದ್ದಾರೆ ಎಂಬುದು ರಿಪೋರ್ಟ್ ನಲ್ಲಿ ಬಯಲಾಗಿದೆ.

    ಪ್ರಕರಣವನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿರೊ ಪೊಲೀಸರು, ಎಲ್ಲಾ ಠಾಣೆಗಳಿಗೂ 25-30 ವರ್ಷದ ಯುವತಿ ನಾಪತ್ತೆ ಪ್ರಕರಣ ವರದಿಯಾಗಿದ್ರೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಇನ್ನೊಂದೆಡೆ ಯುವತಿಯ ಕೈ ಮೇಲಿದ್ದ ಮೀನಿನ ಅಚ್ಚೆ ಗುರುತು ಆಧರಿಸಿ ಮೀನುಗಾರಿಕೆ ಕುಟುಂಬಗಳು ವಾಸಿಸುವ ಸ್ಥಳಗಳಿಗೂ ತೆರಳಿ ವಿಚಾರಿಸಿದ್ದಾರೆ. ಆದರೆ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಯುವತಿಯ ಗುರುತು ಪತ್ತೆಯಾಗದಿರೋದ್ರಿಂದ ಪ್ರಕರಣ ಭೇದಿಸಲು ಸಾಧ್ಯವಾಗುತ್ತಿಲ್ಲ.

    ಇನ್ನೊಂದೆಡೆ ಪ್ರಕರಣದಿಂದ ಭೀತಿಗೊಂಡಿದ್ದ ಕೆ.ಆರ್.ಪೇಟೆ ತಾಲೂಕಿನ ಜನರಲ್ಲಿ ಇನ್ನೂ ಭಯ ಕಡಿಮೆಯಾಗಿಲ್ಲ. ಪೊಲೀಸರು ತನಿಖೆ ಚುರುಕುಗೊಳಿಸಿ ಪ್ರಕರಣ ಬೇಧಿಸಬೇಕು. ಆ ಮೂಲಕ ಜನರಲ್ಲಿ ಆವರಿಸಿರುವ ಭಯ ದೂರ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ.

    ವಿಕೃತ ಮನಸ್ಸಿನ ಹಂತಕರ ಕೃತ್ಯ ಪೊಲೀಸರಿಗೆ ತಲೆನೋವು ತರಿಸಿದೆ. ಯುವತಿಯ ಗುರುತು ಪತ್ತೆಯಾಗದಿರುವುದು ತನಿಖೆಗೆ ಹಿನ್ನಡೆಯಾಗಿದೆ.

  • ಹೇಮಾವತಿ ನದಿಯಲ್ಲಿ ಯುವತಿಯ ಅಂಗಾಂಗಗಳು ಪತ್ತೆ

    ಹೇಮಾವತಿ ನದಿಯಲ್ಲಿ ಯುವತಿಯ ಅಂಗಾಂಗಗಳು ಪತ್ತೆ

    ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಬಳಿಯ ಹೇಮಾವತಿ ನದಿಯಲ್ಲಿ ಯುವತಿಯ ಅಂಗಾಂಗಗಳು ಪತ್ತೆಯಾಗಿವೆ.

    ಯುವತಿಯನ್ನು ವಿಕೃತವಾಗಿ ಕೊಲೆಗೈದಿರುವ ದುಷ್ಕರ್ಮಿಗಳು ಮೃತದೇಹವನ್ನ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದಿದ್ದಾರೆ. ಬಂಡಿಹೊಳೆ ಗ್ರಾಮದ ಹೇಮಾವತಿ ದಡದಲ್ಲಿರುವ ವಿದ್ಯುತ್ ಸ್ಥಾವರ ಘಟಕದ ಸಮೀಪ ಯುವತಿ ರುಂಡ ಮತ್ತು ದೇಹದ ಅಂಗಾಂಗಗಳು ಪತ್ತೆಯಾಗಿವೆ. ಎರಡು ದಿನಗಳ ಹಿಂದೆ ಕೃತ್ಯ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ: 18 ವರ್ಷದ ಯುವತಿಯ ಕತ್ತು ಕೊಯ್ದು ಕೊಲೆ- ಅತ್ಯಾಚಾರದ ಶಂಕೆ

    ಸ್ಥಳೀಯರಿಗೆ ಮೃತದೇಹ ಒಂದು ಭಾಗ ಮಾತ್ರ ಕಾಣಿಸಿತ್ತು. ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧಿಸಿದಾಗ ಉಳಿದ ಅಂಗಾಂಗಗಳು ಸಿಕ್ಕಿವೆ. ಘಟನೆಯಿಂದಾಗಿ ಬಂಡಿಹೊಳೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಮಾಡಿ, ನಾಲಿಗೆ ಕತ್ತರಿಸಿ ಚಿತ್ರಹಿಂಸೆ – ಚಿಕಿತ್ಸೆ ಫಲಿಸದೆ 20ರ ಯುವತಿ ಸಾವು

  • ಕೆ.ಆರ್.ಪೇಟೆ ಪೇದೆಗೆ ಕೊರೊನಾ- 2 ಠಾಣೆ ಸೀಲ್‍ಡೌನ್

    ಕೆ.ಆರ್.ಪೇಟೆ ಪೇದೆಗೆ ಕೊರೊನಾ- 2 ಠಾಣೆ ಸೀಲ್‍ಡೌನ್

    ಮಂಡ್ಯ: ಮಳವಳ್ಳಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಯೊಬ್ಬರಿಗೆ ಕೊರೊನಾ ತಗುಲಿದ ಬೆನ್ನಲ್ಲೇ ಕೆ.ಆರ್.ಪೇಟೆ ಪಟ್ಟಣ ಠಾಣೆಯ ಮುಖ್ಯ ಪೇದೆಯೊಬ್ಬರಿಗೆ ಕೋವಿಡ್-19 ದೃಢಪಟ್ಟಿದೆ.

    ಕ್ರೈಂ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯ ಪೇದೆಯು ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ಕೊಟ್ಟಿದ್ದ ವೇಳೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ಪೇಗೆ ಸೋಂಕು ದೃಢಪಡುತ್ತಿದ್ದಂತೆ ಅವರು ಭೇಟಿ ನೀಡಿದ್ದ ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳನ್ನು ನಾಲ್ಕು ದಿನಗಳ ಕಾಲ ಸೀಲ್‍ಡೌನ್ ಮಾಡಲಾಗಿದೆ. ಇದನ್ನೂ ಓದಿ:  ಮಂಡ್ಯ, ಉಡುಪಿಯಲ್ಲಿ ಕೊರೊನಾ ಸ್ಫೋಟ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆ

    ಮುಖ್ಯ ಪೇದೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಎರಡೂ ಠಾಣೆಗಳ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಸಂಬಂಧ ಮಾಹಿತಿ ಪಡೆದ ಮಂಡ್ಯ ಎಸ್‍ಪಿ ಪರಶುರಾಮ್ ಅವರು ಕೆ.ಆರ್.ಪೇಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಸ್‍ಪಿ ಪರಶುರಾಮ್ ಅವರು, ಕೆ.ಆರ್.ಪೇಟೆ ಪಟ್ಟಣ ಠಾಣೆಯಲ್ಲಿನ ಮುಖ್ಯ ಪೇದೆಯೊಬ್ಬರಿಗೆ ಕೊರೊನಾ ರಿಪೋರ್ಟ್ ನಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಕೆ.ಆರ್ ಪೇಟೆ ಪಟ್ಟಣ ಹಾಗೂ ಗ್ರಾಮಾಂತರ ಠಾಣೆಗಳನ್ನ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದೆ. ಇಲ್ಲಿನ ಪ್ರಕರಣಗಳನ್ನ ಕಿಕ್ಕೇರಿ ಠಾಣೆಯಲ್ಲಿ ದಾಖಲಿಸಲು ಅವಕಾಶ ನೀಡಿದ್ದೇವೆ ಎಂದರು.

    ಕ್ವಾರಂಟೈನ್ ಕೇಂದ್ರಗಳಲ್ಲಿ ಭದ್ರತೆಗೆ ಬೇರೆ ತಾಲೂಕಿನ 31 ಜನ ಪೇದೆಗಳು ಕೆಲಸ ನಿರ್ವಹಿಸಲಿದ್ದಾರೆ. ಇಬ್ಬರು ಇನ್ಸ್‍ಪೆಕ್ಟರ್, ಇಬ್ಬರು ಸಬ್ ಇನ್ಸ್‍ಪೆಕ್ಟರ್, ಒಂದು ಕೆಎಸ್‍ಆರ್‍ಪಿ ಹಾಗೂ ಡಿಎಆರ್ ಪಡೆಯನ್ನು ನಿಯೋಜಿಸಲಾಗಿದೆ. ತಾಲೂಕಿನಲ್ಲಿ ಕೋವಿಡ್-19 ಕರ್ತವ್ಯಕ್ಕೆ ಧಕ್ಕೆಯಾಗದಂತೆ ಕೆಲಸ ನಿರ್ವಹಿಸಲು ಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದರು.

  • ಕೆ.ಆರ್.ಪೇಟೆಯಲ್ಲಿ ಬಿಜೆಪಿ ಗೆಲುವಿಗೆ ಹರಕೆ ಕಾರಣವಂತೆ- ಮುಡಿಕೊಟ್ಟ ಬಿಜೆಪಿ ಯುವ ನಾಯಕ

    ಕೆ.ಆರ್.ಪೇಟೆಯಲ್ಲಿ ಬಿಜೆಪಿ ಗೆಲುವಿಗೆ ಹರಕೆ ಕಾರಣವಂತೆ- ಮುಡಿಕೊಟ್ಟ ಬಿಜೆಪಿ ಯುವ ನಾಯಕ

    ಮಂಡ್ಯ: ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಅಚ್ಚರಿ ಮೂಡಿಸಿತ್ತು. ಈ ಅಚ್ಚರಿಯ ಫಲಿತಾಂಶಕ್ಕೆ ದೇವರಿಗೆ ಹೊತ್ತುಕೊಂಡಿದ್ದ ಒಂದು ಹರಕೆಯೆ ಪ್ರಮುಖ ಕಾರಣನಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ಮಂಡ್ಯ ಜಿಲ್ಲೆ ಜೆಡಿಎಸ್‍ನ ಭದ್ರ ಕೋಟೆ ಎನ್ನುವಷ್ಟರ ಮಟ್ಟಿಗೆ ರಾಜ್ಯದಲ್ಲಿ ಗುರುತಿಸಿಕೊಂಡಿತ್ತು. ಆದರೆ ಕಳೆದ ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿ ನಾರಾಯಣಗೌಡ ಅವರನ್ನು ಗೆಲ್ಲಿಸಿಕೊಳ್ಳುವ ಮೂಲಕ ಜೆಡಿಎಸ್ ಭದ್ರ ಕೋಟೆಯನ್ನು ಭೇದಿಸಿತ್ತು. ಈ ಕ್ಷೇತ್ರದ ಬಿಜೆಪಿಗೆ ಗೆಲುವಿಗೆ ಸಿಎಂ ಪುತ್ರ ವಿಜಯೇಂದ್ರ, ಸಚಿವ ಅಶ್ವತ್ಥನಾರಾಯಣ, ಹಾಸನ ಶಾಸಕ ಪ್ರೀತಮ್‍ಗೌಡ ಅವರ ಪಾತ್ರ ಮುಖ್ಯವಾಗಿತ್ತು ಎಂದು ಹಲವರು ಹೇಳುತ್ತಾರೆ. ಆದರೆ ಇದೀಗ ಗೆಲುವಿನ ಹಿಂದೆ ಮತ್ತೊಬ್ಬರ ಶ್ರಮವಿದೆ ಎಂದು ಸ್ವತಃ ವಿಜಯೇಂದ್ರ ಅವರೇ ಹೇಳಿಕೊಂಡಿದ್ದಾರೆ.

    ಈ ಕ್ಷೇತ್ರದಲ್ಲಿ ಚುನಾವಣೆ ಮಾಡಬೇಕು ಬನ್ನಿ ಅಣ್ಣ. ಇಲ್ಲಿ ನಾವು ಒಂದು ಬಾರಿ ನಮ್ಮ ಶ್ರಮ ಹಾಕೋಣ ಅಂತ ಕೊಪ್ಪಳ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶರಣು ನನಗೆ ಹೇಳಿದ್ದರು. ಉಪಚುನಾವಣೆಯಲ್ಲಿ ಕೆಲಸ ಮಾಡಲು ಶಕ್ತಿ ತುಂಬಿದ್ದೆ ಶರಣು ಹಾಗಾಗಿ ನಾವು ಉತ್ಸಾಹದಿಂದ ಚುನಾವಣೆ ಎದುರಿಸಿ ಗೆಲವು ಪಡೆದುಕೊಂಡೆವು ಎಂದು ವಿಜಯೇಂದ್ರ ತಿಳಿಸಿದ್ದಾರೆ.

    ಸಿಎಂ ಯಡಿಯೂರಪ್ಪ ಅವರ ತವರು ಊರು ಕೆಆರ್.ಪೇಟೆ ಕ್ಷೇತ್ರದಲ್ಲಿ ನಾವು ಗೆಲ್ಲ ಬೇಕು ಎಂದು ಅಂದುಕೊಂಡಿದ್ದೆವು. ಆಗ ನಾನು ವಿಜಯೇಂದ್ರ ಅವರಿಗೆ ಹೇಳಿದಾಗ ಅಲ್ಲಿ ತುಂಬಾ ಕಷ್ಟ ಅಂತ ಹೇಳಿದ್ದರು. ನಮ್ಮಲ್ಲೂ ಆತಂಕ ಇತ್ತು. ಒಂದು ವೇಳೆ ವ್ಯತ್ಯಾಸ ಆದರೆ ವಿಜಯೇಂದ್ರ ಅವರ ರಾಜಕೀಯ ಸ್ವಲ್ಪ ಕುಗ್ಗತ್ತದೆ ಎಂಬ ಮಾತುಗಗಳು ಕೇಳಿ ಬಂದಿದ್ದವು. ಕೆಆರ್.ಪೇಟೆ ಚುನಾವಣೆಯ ಉಸ್ತುವಾರಿ ಎಂದು ವಿಜಯೇಂದ್ರ ಅವರ ಹೆಸರನ್ನು ಘೋಷಣೆ ಮಾಡಲಾಗಿತ್ತು. ಆಗ ನಾನು ಕೆಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿ ಸಾಸಲು ಗ್ರಾಮದಲ್ಲಿದ್ದೆ. ಇಲ್ಲಿನ ಸೋಮೇಶ್ವರ ಹಾಗೂ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ಗೆದ್ದರೆ ಮುಡಿಕೊಟ್ಟು ವಿಜಯೇಂದ್ರ ಅಣ್ಣನ ಜೊತೆ ಪೂಜೆ ಮಾಡಿಸುತ್ತೇವೆ ಎಂದು ಹರಕೆ ಹೊತ್ತಕೊಂಡಿದ್ದೆ. ಅಂತೆಯೇ ನಾವು ಈಗ ವಿಜಯ ಪಡೆದು ವಿಜಯೇಂದ್ರ ಅಣ್ಣನ ಜೊತೆ ಬಂದು ಹರಕೆ ತೀರಿಸಿದ್ದೇವೆ ಎಂದು ಕೊಪ್ಪಳ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶರಣು ಅವರು ಹೇಳಿದ್ದಾರೆ.

    ಶರಣು ಅವರು ಹರಕೆ ಹೊತ್ತ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಸ್ಥಾನದಲ್ಲೇ ಸಂಸದೆ ಸುಮಲತಾ ಅಂಬರೀಶ್ ಅವರು ಕೂಡ ಚುನಾವಣೆಗೂ ಮುನ್ನ ಪೂಜೆ ಸಲ್ಲಿಸಿದ್ದರು. ಈ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಜಯಭೇರಿ ಬಾರಿಸಿದ್ದರು.

    ಒಟ್ಟಾರೆ ಕೆಆರ್.ಪೇಟೆಯ ಜೆಡಿಎಸ್ ಭದ್ರ ಕೋಟೆಯನ್ನು ಭೇದಿಸಲು ಕೇವಲ ಪ್ರಥಮ ದರ್ಜೆಯ ಮಾಸ್ ಲೀಡರ್ ಗಳು ಕಾರ್ಯತಂತ್ರದ ಜೊತೆಗೆ ಬೇರೆ ಜಿಲ್ಲೆಯ ಮುಖಂಡರು ಕಾರಣವಾಗಿದ್ದಾರೆ ಎಂದು ಈಗ ತಿಳಿದುಬಂದಿದೆ. ಇದರ ಜೊತೆಗೆ ಆ ಮುಖಂಡ ಹೊತ್ತ ಹರಕೆಯೂ ಗೆಲವು ತಂದುಕೊಡಲು ಪ್ರಮುಖ ಕಾರಣ ಎನ್ನಲಾಗುತ್ತಿದೆ.

  • ಫೆಬ್ರವರಿ 1ರಿಂದ ಕೆ.ಆರ್ ಪೇಟೆಯಲ್ಲಿ ಹೆಲ್ಮೆಟ್ ಕಡ್ಡಾಯ

    ಫೆಬ್ರವರಿ 1ರಿಂದ ಕೆ.ಆರ್ ಪೇಟೆಯಲ್ಲಿ ಹೆಲ್ಮೆಟ್ ಕಡ್ಡಾಯ

    ಮಂಡ್ಯ: ಫೆಬ್ರವರಿ 1ರಿಂದ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ ಎಂದು ನಿಯಮ ಜಾರಿಗೆ ತರಲಾಗುತ್ತಿದೆ. ಆದ್ದರಿಂದ ಪೊಲೀಸರಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೆ.ಆರ್ ಪೇಟೆ ಪಟ್ಟಣ ಪೋಲಿಸ್ ಠಾಣೆಯ ಎಸ್‍ಐ ಬಿ.ಪಿ ಬ್ಯಾಟರಾಯಗೌಡ ಮನವಿ ಮಾಡಿಕೊಂಡರು.

    ಪಟ್ಟಣ ಪೊಲೀಸ್ ಠಾಣೆಯಲ್ಲಿ ನಡೆದ ನಾಗರೀಕರ ಸಮಿತಿ ಸಭೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ನಿಯಮಗಳ ಪಾಲನೆಯ ಬಗ್ಗೆ ಎಸ್‍ಐ ಮಾತನಾಡಿದರು. ಕೃಷ್ಣರಾಜಪೇಟೆ ಪಟ್ಟಣವು ಜಿಲ್ಲೆಯಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಟ್ಟಣವಾಗಿದೆ. ಜನಸಾಮಾನ್ಯರಿಗೆ ಕಾನೂನು ಸುವ್ಯವಸ್ಥೆ ಹಾಗೂ ಸುಗಮ ಸಂಚಾರವನ್ನು ಒದಗಿಸಿಕೊಡಲು ಪೊಲೀಸ್ ಇಲಾಖೆಯು ಬದ್ಧವಾಗಿದ್ದು, ಫೆಬ್ರವರಿ 1ನೇ ತಾರೀಖಿನಿಂದ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ. ಆದ್ದರಿಂದ ಪೊಲೀಸರೊಂದಿಗೆ ಸಾರ್ವಜನಿಕರು ಪೂರಕವಾದ ಸಹಕರಿಸಿ ಎಂದರು.

    ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಲು ಸಾರ್ವಜನಿಕರು ಪೊಲೀಸರಿಗೆ ಸಹಕಾರ ಮಾಡಬೇಕು. ದ್ವಿಚಕ್ರ ವಾಹನಗಳ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡೇ ತಮ್ಮ ಮೋಟಾರ್ ಬೈಕುಗಳನ್ನು ಚಾಲನೆ ಮಾಡಬೇಕು. ವಾಹನಗಳ ದಾಖಲಾತಿಗಳ ಜೆರಾಕ್ಸ್ ಪ್ರತಿಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿರಬೇಕು. ಡಿಎಲ್, ವಾಹನದ ವಿಮಾ ಪ್ರತಿ ಚಾಲ್ತಿಯಲ್ಲಿರಬೇಕು ಎಂದು ತಿಳಿಸಿದರು.

    ಜೊತೆಗೆ ಹೆಲ್ಮೆಟ್ ಧರಿಸದ ಸವಾರರಿಗೆ 500 ರೂಪಾಯಿ ದಂಡವನ್ನು ವಿಧಿಸಲಾಗುವುದು. ಈ ದಿಕ್ಕಿನಲ್ಲಿ ದ್ವಿಚಕ್ರ ವಾಹನಗಳ ಸವಾರರು ಮಾನಸಿಕವಾಗಿ ಸಿದ್ಧರಾಗಿ, ತಮ್ಮ ವಾಹನಗಳ ಎಲ್ಲಾ ದಾಖಲಾತಿಗಳನ್ನು ಚಾಲ್ತಿಯಲ್ಲಿರುವಂತೆ ಸಿದ್ಧಪಡಿಸಿ ಇಟ್ಟುಕೊಳ್ಳಬೇಕು ಎಂದು ಎಸ್‍ಐ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎಎಸ್‍ಐ ಶಿವಣ್ಣ, ಕ್ರೈಂ ವಿಭಾಗದ ನಾಗರಾಜು ಮತ್ತು ಸಾರ್ವಜನಿಕರು, ಸಂಘಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

  • ಸಣ್ಣ ನೀರಾವರಿ ಖಾತೆ ಮೇಲೆ ಕಣ್ಣಿಟ್ಟ ನಾರಾಯಣಗೌಡ

    ಸಣ್ಣ ನೀರಾವರಿ ಖಾತೆ ಮೇಲೆ ಕಣ್ಣಿಟ್ಟ ನಾರಾಯಣಗೌಡ

    ಮಂಡ್ಯ: ಕೆ.ಆರ್ ಪೇಟೆಯಲ್ಲಿ ಗೆಲುವು ಸಾಧಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಅಕೌಂಟ್ ಓಪನ್ ಮಾಡಿರುವ ಶಾಸಕ ನಾರಾಯಣಗೌಡ ಅವರಿಗೆ ಸಣ್ಣ ನೀರಾವರಿ ಸಚಿವ ಸ್ಥಾನದ ಮೇಲೆ ಕಣ್ಣು ಬಿದ್ದಿದೆ.

    ಈ ಹಿಂದೆ ಸಮ್ಮಿಶ್ರ ಸರ್ಕಾರದಲ್ಲಿ ಮೇಲುಕೋಟೆ ಶಾಸಕ ಪುಟ್ಟರಾಜು ಅವರು ಸಣ್ಣ ನೀರಾವರಿ ಸಚಿವರಾಗಿದ್ದರು. ಹೀಗಾಗಿ ಪುಟ್ಟರಾಜು ಅವರಿಗೆ ಸೆಡ್ಡು ಹೊಡೆಯಲು ಸಣ್ಣ ನೀರಾವರಿ ಖಾತೆ ಅಪೇಕ್ಷೆಯಲ್ಲಿ ನಾರಾಯಣಗೌಡರು ಇದ್ದಾರೆ. ಜೆಡಿಎಸ್ ಶಾಸಕನಾಗಿದ್ದ ವೇಳೆ ಮಾಜಿ ಸಚಿವ ಪುಟ್ಟರಾಜು ಅನುದಾನದ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದರು ಎಂದು ನಾರಾಯಣಗೌಡರು ಹಲವು ಬಾರಿ ಆರೋಪಗಳನ್ನು ಮಾಡಿದ್ದರು. ಈ ನಿಟ್ಟಿನಲ್ಲಿ ಈಗ ಪುಟ್ಟರಾಜು ಅವರು ನಿರ್ವಹಿದ ಖಾತೆಯನ್ನೇ ನೀಡುವಂತೆ ಸಿಎಂ ಯಡಿಯೂರಪ್ಪ ಅವರ ಮುಂದೆ ನಾರಾಯಣಗೌಡ ದುಂಬಾಲು ಬಿದ್ದಿದ್ದಾರೆ ಎನ್ನಲಾಗುತ್ತಿದೆ.

    ಇದಲ್ಲದೆ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ಹರಿದರು ಕೂಡ ಕೆ.ಆರ್ ಪೇಟೆ ಭಾಗದಲ್ಲಿ ಮಾತ್ರ ಕೃಷಿಗೆ ನೀರಿನ ಸಮಸ್ಯೆ ಇದೆ. ಹೀಗಾಗಿ ಕೆ.ಆರ್ ಪೇಟೆ ಕ್ಷೇತ್ರದಲ್ಲಿ ಇರುವ ಒಣ ಭೂಮಿಗೆ ನೀರು ಹರಿಸಿ ನೀರಾವರಿ ಪ್ರದೇಶವನ್ನಾಗಿ ಮಾಡಬೇಕು ಎನ್ನುವುದು ನಾರಾಯಣಗೌಡರ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಣ್ಣ ನೀರಾವರಿ ಖಾತೆ ಸಿಕ್ಕಿದರೆ ಸಾಕಷ್ಟು ಅನುದಾನವನ್ನು ಬಳಕೆ ಮಾಡಿಕೊಂಡು ಅಭಿವೃದ್ಧಿ ಮಾಡಬಹುದು ಎನ್ನಲಾಗುತ್ತಿದೆ. ಈ ಮೂಲಕ ನಾರಾಯಣಗೌಡ ಅವರು ಪುಟ್ಟರಾಜು ಅವರ ಮೇಲಿನ ಸೇಡಿನ ಜೊತೆಗೆ ಕ್ಷೇತ್ರವನ್ನು ಅಭಿವೃದ್ಧಿಯನ್ನೂ ಸಹ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ.