Tag: ಕೆ.ಎಸ್.ಭಗವಾನ್

  • ಹಿಂದೂ ಅನ್ನೋದು ಅವಮಾನಕರ ಶಬ್ದ – ಚಿಂತಕ ಕೆ.ಎಸ್ ಭಗವಾನ್ ಮತ್ತೆ ವಿವಾದಾತ್ಮಕ ಹೇಳಿಕೆ

    ಹಿಂದೂ ಅನ್ನೋದು ಅವಮಾನಕರ ಶಬ್ದ – ಚಿಂತಕ ಕೆ.ಎಸ್ ಭಗವಾನ್ ಮತ್ತೆ ವಿವಾದಾತ್ಮಕ ಹೇಳಿಕೆ

    – ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ ಎಂದು ಆಕ್ರೋಶ

    ರಾಯಚೂರು: ಹಿಂದೂ (Hindu) ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಚಿಂತಕ ಕೆ.ಎಸ್ ಭಗವಾನ್ (KS Bhagavan) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ರಾಯಚೂರಿನ (Raichur) ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಆ್ಯಪಲ್ ಸಹ ಸಂಸ್ಥಾಪಕ ಸ್ವೀವ್‌ ಜಾಬ್ಸ್‌ ಪತ್ನಿ ಲಾರೆನ್ ಇನ್ಮುಂದೆ ʻಕಮಲಾʼ – ಹಿಂದೂ ಹೆಸರು ನಾಮಕರಣ

    ಕೆ.ಎಸ್ ಭಗವಾನ್ ಹಿಂದೂ ಪದದ ಬಗ್ಗೆ ಮಾತನಾಡಿದ್ದಾರೆ. ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ‌ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನ ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದರು.

    ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಅಂತ ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ. ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನ ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ‌ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನ ವಾಪಸ್ ತರಬಾರದು. ಮನುಸ್ಮೃತಿಯನ್ನ ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನ ಪರ ಹೋರಾಡಬೇಕು ಮನುಸ್ಮೃತಿಯನ್ನ ತಿರಸ್ಕರಿಸಬೇಕು ಅಂತ ಭಗವಾನ್ ಹೇಳಿದ್ದಾರೆ.

    ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ, ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಅನ್ನೋ ಭಾವನೆಗೆ ಅಡ್ಡಿ ಬರುತ್ತಿದೆ. ಜನ ಇದನ್ನ ದಾಟಿ ಬರಬೇಕು. ದೇಶದಲ್ಲಿ ಬೌದ್ಧ ಧರ್ಮ 1,500 ವರ್ಷಕಾಲ ಹರಡಿತ್ತು. ಬುದ್ಧ ಈ ಮಣ್ಣಿನ ಮಗ ಒಬ್ಬ ರೈತನ ಮಗ, ಬೌದ್ಧ ಸ್ತೂಪಗಳು, ದೇವಾಲಯಗಳು ಎಲ್ಲವನ್ನೂ ಒಡೆದು ಹಾಕಿದ್ದಾರೆ. ಯಾರು ಮಾಡಿದ್ದು ಅದನ್ನ ಪತ್ತೆ ಹಚ್ಚಿ ಮೂಲ ವ್ಯಕ್ತಿಗಳಿಗೆ ವಾಪಸ್ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ | ಕೋಡಿಬಿದ್ದ ವಾಣಿವಿಲಾಸ ಸಾಗರ ಜಲಾಶಯ – ಜ.18ಕ್ಕೆ ಸಿಎಂ ಬಾಗಿನ

  • ವಿರೋಧದ ನಡ್ವೆ ಮೈಸೂರಲ್ಲಿ ಮಹಿಷ ದಸರಾ ಆಚರಣೆ – ಜಿಲ್ಲಾಡಳಿತ, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

    ವಿರೋಧದ ನಡ್ವೆ ಮೈಸೂರಲ್ಲಿ ಮಹಿಷ ದಸರಾ ಆಚರಣೆ – ಜಿಲ್ಲಾಡಳಿತ, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

    ಮೈಸೂರು: ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ `ಮಹಿಷ ಮಂಡಲೋತ್ಸವ’ ಹೆಸರಿನಲ್ಲಿ ಮಹಿಷ ದಸರಾ (Mahisha Dasara) ಆಚರಣೆ ನಡೆದಿದೆ. ಮೈಸೂರಿನ ಟೌನ್‌ಹಾಲ್ (Mysuru TownHall) ಬಳಿ ಮಹಿಷ ಮಂಡಲೋತ್ಸವ ಹೆಸರಲ್ಲಿ ಕಾರ್ಯಕ್ರಮ ನಡೆಯಿತು. ಕೇವಲ ವೇದಿಕೆ ಕಾರ್ಯಕ್ರಮಕ್ಕಷ್ಟೇ ಅನುಮತಿ ನೀಡಿ ನಿಷೇಧಾಜ್ಞೆ ವಿಧಿಸಲಾಗಿತ್ತು.

    ಮಹಿಷಾ ದಸರಾ ಮಂಡಲೋತ್ಸವದ ವೇಳೆ ಗಲಾಟೆ-ಗದ್ದಲ ನಡೆಯಿತು. ಮಹಿಷ ಮೂರ್ತಿಗೆ ಮಾಲಾರ್ಪಣೆ ಮಾಡ್ಬೇಕು ಅಂತಾ ಸಮಿತಿಯವರು ಪಟ್ಟು ಹಿಡಿದಿದ್ರು. ಆದ್ರೆ, ಪ್ರತಿಭಟನಾಕಾರರನ್ನ ಮನವೊಲಿಸಿದ ಪೊಲೀಸರು (Mysuru Police) ಐವರಿಗೆ ಪುಪ್ಪಾರ್ಚನೆ ಮಾಡಲು ಅವಕಾಶ ನೀಡಿದ್ರು. ಇದೇ ವೇಳೆ ಸಾಹಿತಿ ಪ್ರೊ.ಕೆ.ಎಸ್ ಭಗವಾನ್ ಹಿಂದೂಗಳ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆ ಪ್ರಕರಣ – ಹತ್ಯೆ ಬಳಿಕ ಪಶ್ಚಾತ್ತಾಪ ಪಟ್ಟಿದ್ದ ಹಂತಕ

    ಮಹಿಷಾ ಮಂಡಲೋತ್ಸವ ಹೆಸರಿನಲ್ಲಿ ಮೈಸೂರಿನ ಪುರಭವನ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪೊಲೀಸರು ಟೌನ್‌ಹಾಲ್ ಹೊರತುಪಡಿಸಿ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ರು. ಕೇವಲ ವೇದಿಕೆ ಕಾರ್ಯಕ್ರಮಕ್ಕಷ್ಟೆ ಅನುಮತಿ ನೀಡಲಾಗಿತ್ತು. ಮೆರವಣಿಗೆ, ಬೈಕ್ ರ‍್ಯಾಲಿಗೆ ಅವಕಾಶ ನೀಡಿರಲಿಲ್ಲ. ಇದನ್ನೂ ಓದಿ: Kolara | ತಾಂತ್ರಿಕ ದೋಷ – ಸೇನಾ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ; ತಪ್ಪಿದ ದುರಂತ

    ಮಹಿಷಾ ದಸರಾ ಆಚರಣೆ ಸ್ಥಳದಲ್ಲಿ ಹೈಡ್ರಾಮವೇ ನಡೆದು ಹೋಯಿತು. ಪೊಲೀಸರು ಹಾಗೂ ಜಿಲ್ಲಾಡಳಿತ ಮಹಿಷ ಮೂರ್ತಿ ಮಾಲಾರ್ಪಣೆ ಮಾಡಲು ಅವಕಾಶ ನೀಡ್ಲಿಲ್ಲ. ಇದ್ರಿಂದ ರೊಚ್ಚಿಗೆದ್ದ ಮಹಿಷಾ ದಸರಾ ಸಮಿತಿ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ಬಳಿಕ ಎಚ್ಚೆತ್ತ ಪೊಲೀಸರು ಕೇವಲ ಐವರು ಮಾತ್ರ ಬೆಟ್ಟಕ್ಕೆ ತೆರಳಿ ಪುಪ್ಪಾರ್ಚನೆ ಮಾಡಲು ಅವಕಾಶ ಮಾಡಿಕೊಟ್ಟರು. ಪುಷ್ಪಾರ್ಚನೆ ಮಾಡಲು ಐವರನ್ನ ಪೊಲೀಸರು ತಮ್ಮ ಜೀಪ್‌ನಲ್ಲೇ ಕರೆದೊಯ್ದರು. ಈ ಮೂಲಕ ಪೊಲೀಸರೇ ನಿಷೇಧಾಜ್ಞೆಯನ್ನ ಉಲ್ಲಂಘನೆ ಮಾಡಿದ್ರು.

    ಈ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಮಹಿಷ ದಸರಾ ಆಚರಣೆ ಸಮಿತಿ ನಡುವೆ ಮಾತಿನ ಜಟಾಪಟಿ ನಡೆಯಿತು. ಇದನ್ನೂ ಓದಿ: Mysuru | ಅನುಮತಿ ಪಡೆಯದೇ ಪಾರ್ಟಿ – 8 ಯುವತಿಯರು ಸೇರಿ 64 ಮಂದಿ ವಿರುದ್ಧ ಕೇಸ್‌ 

  • ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್

    ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು: ಪ್ರೊ.ಕೆ.ಎಸ್.ಭಗವಾನ್

    – ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ ಎಂದ ಚಿಂತಕ

    ಮೈಸೂರು: ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದು ಸಾಹಿತಿ, ಚಿಂತಕ ಪ್ರೊ.ಕೆ.ಎಸ್.ಭಗವಾನ್ (K.S.Bhagavan) ಹೇಳಿಕೆ ನೀಡಿದ್ದಾರೆ.

    ಮಹಿಷ ದಸರಾದಲ್ಲಿ ಮಾತನಾಡಿದ ಅವರು, ಜ್ಞಾನದ ಹಸಿವು ಇಲ್ಲದ ಕಾರಣ ಹಲವರು ಗುಲಾಮರಾಗಿದ್ದಾರೆ. ಹಿಂದೂ ಧರ್ಮ ಅಂದ್ರೆ ಅದು ಹಿಂದೂಗಳ ಧರ್ಮ ಅಲ್ಲ. ಹಿಂದೂ ಧರ್ಮ ಅಂದರೆ ಅದು ಬ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಹಿಂದೂಗಳು ಮುಂದಕ್ಕೆ ಬಾರದ ಜನ ಹಾಗೂ ಬೇರೆಯವರನ್ನು ಮುಂದಕ್ಕೆ ಬಿಡುವುದಿಲ್ಲ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ. ಹೆಂಗಸರನ್ನಾ ಬ್ರಾಹ್ಮಣರು ಎನ್ನಲ್ಲಾ, ಅವರನ್ನು ಶೂದ್ರರು ಅಂತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ನಂಬಿಕೆಗೆ ಧಕ್ಕೆಯಾಗದಂತೆ ಮಹಿಷ ದಸರಾ ಆಚರಿಸಿದ್ರೆ ನಮಗೂ ಸಂತೋಷ: ಯದುವೀರ್

    ದೇವಸ್ಥಾನ ಕಟ್ಟೋದು ಶೂದ್ರರು. ದೇವಸ್ಥಾನದ ಒಳಗೆ ಇರೋರು ಬ್ರಾಹ್ಮಣರು. ದೇವಸ್ಥಾನ ಕಟ್ಟಿದ ಶೂದ್ರರನ್ನೇ ಬಿಟ್ಟುಕೊಳ್ಳಲ್ಲ. ನಾವು ಶೂದ್ರರಲ್ಲಾ ಎಂದು ಹೇಳಬೇಕು. ಶೂದ್ರರು ದೇವಸ್ಥಾನಗಳಿಗೆ ಹೋಗೋದನ್ನು ನಿಲ್ಲಸಬೇಕು. ನಾನು 50 ವರ್ಷ ಆಯ್ತು ದೇವಸ್ಥಾನಕ್ಕೆ ಹೋಗಿ. ದೇವಸ್ಥಾಕ್ಕೆ ಹೋದ್ರೆ ಏನು ಆಗಲ್ಲ. ತಟ್ಟೆಗೆ ದುಡ್ಡು ಹಾಕ್ತೀರಾ, ಅರ್ಧ ಕಾಯಿ ಇಟ್ಟುಕೊಂಡು ಅರ್ಧ ಕೊಡ್ತಾರೆ ಅಷ್ಟೇ. ಶೂದ್ರರಿಗೆ ಮಾನ ಮರ್ಯಾದೆ ಇದ್ದರೆ ದೇವಸ್ಥಾನಕ್ಕೆ ಹೋಗಬಾರದು. ನಾವು ಶೂದ್ರರು ಎಂದು ಒಪ್ಪಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.

    ಹಿಂದೂ ಧರ್ಮ ನಮ್ಮದಲ್ಲ. ನಮಗೆ ಹಿಂದೂ ಧರ್ಮ ಬೇಕಿಲ್ಲ. ಎಲ್ಲರೂ ಬುದ್ಧ ಗುರುಗಳನ್ನು ನಂಬಿ. ನಾನು ಹೇಳಿದ್ದು ನಂಬಿ ಅಂತಾ ಬುದ್ಧ ಹೇಳಲ್ಲ. ನಾನು ಹೇಳಿದ್ದು ಕೇಳಬೇಕು ಅಂತಾ ಏಸು ಹೇಳ್ತಾರೆ. ನಾನು ಹೇಳದ್ದು ಕೇಳದಿದ್ರೆ ನರಕ್ಕೆ ಹೋಗ್ತೀರಾ ಅಂತಾ ಕೃಷ್ಣ ಹೇಳ್ತಾನೆ. ನಾವು ಬುದ್ಧ ಧರ್ಮಕ್ಕೆ ಹೋಗಬೇಕು. ಶೂದ್ರರು ಎಂಬ ಗುಲಾಮರನ್ನು ಎಚ್ಚರಿಸಬೇಕು. ಯಾರು ಹೀನನಾಗಿದ್ದಾನೆ ಅವನು ಹಿಂದೂ. ಹಿಂದೂ ಎಂದರೆ ಹೀನಾ ಎಂದು ಅರ್ಥ. ಯಾರು ಹಿಂದೂ ಆಗಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರಿನಲ್ಲಿ ರೇವ್ ಪಾರ್ಟಿ? – ಪೊಲೀಸರು ದಾಳಿ ನಡೆಸಿ 50ಕ್ಕೂ ಹೆಚ್ಚು ಯುವಕರು ವಶಕ್ಕೆ

  • ಭಗವಾನ್ ಅವರದ್ದು ತೆವಲಿನ ಹೋರಾಟ: ನಟ ಜಗ್ಗೇಶ್ ಆಕ್ರೋಶ

    ಭಗವಾನ್ ಅವರದ್ದು ತೆವಲಿನ ಹೋರಾಟ: ನಟ ಜಗ್ಗೇಶ್ ಆಕ್ರೋಶ

    ಒಂದು ಸಮುದಾಯಕ್ಕೆ ಅಪಮಾನ ಮಾಡುವಂತಹ ಹೇಳಿಕೆ ನೀಡಿದ್ದಾರೆ ಎನ್ನುವ ಕಾರಣಕ್ಕಾಗಿ ಕೆ.ಎಸ್ ಭಗವಾನ್ (KS Bhagwan) ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಯುತ್ತಿದೆ. ಈ ಕುರಿತಂತೆ ನಟ ಜಗ್ಗೇಶ್ (Jaggesh) ಕೂಡ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ಸರಣಿಯಾಗಿ ಎಕ್ಸ್ ನಲ್ಲಿ ಬರೆದುಕೊಂಡಿರುವ ಜಗ್ಗೇಶ್ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಸನ್ಮಾನ್ಯ ಭಗವಾನರೆ, ಸಾಧ್ಯವಾದರೆ ಬಡತನ ನಿರ್ಮೂಲನೆ ಹೋರಾಡಿ. ಜಾತಿಯತೆ ದೂರಮಾಡಿ.ಸಾಮರಸ್ಯಕ್ಕೆ ಹೋರಾಡಿ. ದೇಶ ಮೊದಲು ಜಾತಿ ನಂತರ ಎಂದು ಹೋರಾಡಿ. ಎಲ್ಲ ಮಕ್ಕಳಿಗೂ ಸಮಾನ ವಿದ್ಯೆ ಸಿಗಲಿ ಎಂದು ಹೋರಾಡಿ. ಬಡವ ಶ್ರೀಮಂತರ ರೇಖೆ ಅಳಿಸಿ ಬದುಕುವ ಕಲೆ ಕಲಿಸಲು ಹೋರಾಡಿ. ಯಾವುದು ಇದು ಪ್ರಚಾರ ತೆವಲಿನ ಹೋರಾಟ. ಧಿಕ್ಕಾರವಿರಲಿ ನಿಮ್ಮ ಗುಣಕ್ಕೆ ಎಂದು ಬರೆದುಕೊಂಡಿದ್ದಾರೆ.

    JAGGESH

    ಸನ್ಮಾನ್ಯ ಭಗವಾನ ಅವರೆ, ನೀವು ವಿದ್ಯಾವಂತರ? ನೀವು ಜ್ಞಾನಿಗಳ? ನೀವು ಹಿರಿಯರಾ? ನೀವು ಸಮಾಜ ಸುಧಾಕರ? ಒಕ್ಕಲುತನ ಸಮುದಾಯ ಅಣಕಮಾರಿ, ಯಾಕೆ ಕುವೆಂಪು ಅವರ ಮೇಲೆ ಹಾಕಿ ತೆವಲು ತೀರಿಸಿಕೊಂಡು ಪಲಾಯನ ಮಾಡಿದಿರಿ. ಕರ್ನಾಟಕ ಆರಕ್ಷಕ ಇಲಾಖೆ ಯಾಕಿ ಮೌನ?. ಸಮಾಜ ಸ್ವಾಸ್ಥ ಕೆಡಿರುವವರ ಮೇಲೆ ಕ್ರಮ ಜರುಗಿಸಿ ಆರಕ್ಷಕ ಮಹಿನೀಯರೆ ಎಂದು ಮತ್ತೊಂದು ಬರಹ ಪೋಸ್ಟ್ ಮಾಡಿದ್ದಾರೆ.

    ಭಗವಾನ್ ಮನೆಗೆ ಮುತ್ತಿಗೆ

    ನಗರದಲ್ಲಿ ಶುಕ್ರವಾರ (ಅ.13) ನಡೆದ ಮಹಿಷ ಉತ್ಸವದ ವೇಳೆ ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್ ಭಗವಾನ್ (KS Bhagawan) ಒಕ್ಕಲಿಗ ಸಮುದಾಯದ (Okkaliga Community) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿಂದು ಪ್ರೊ.ಭಗವಾನ್ ನಿವಾಸಕ್ಕೆ ಮೈಸೂರು ಚಾಮರಾಜ ಕ್ಷೇತ್ರದ ಒಕ್ಕಲಿಗರ ಸಂಘದಿಂದ ಮುತ್ತಿಗೆಗೆ ಯತ್ನಿಸಲಾಯಿತು.

    ಅವಹೇಳನಕಾರಿ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ಪ್ರತಿಭಟನಾಕಾರರು ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು. ಬ್ಯಾರಿಕೇಡ್ ಕಿತ್ತು ಭಗವಾನ್ ಮನೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು (Mysuru City Police) ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ಹಾಗೂ ತಳ್ಳಾಟ ನೂಕಾಟವೂ ನಡೆದಿದ್ದು, ಕೆಲವರು ಕೈ ಮತ್ತು ಹಣೆಯ ಭಾಗಕ್ಕೆ ಗಾಯವನ್ನೂ ಮಾಡಿಕೊಂಡರು.

    ಶುಕ್ರವಾರ ಮಹಿಷ ಉತ್ಸವ ಕಾರ್ಯಕ್ರಮದಲ್ಲಿ ಪ್ರೊ.ಭಗವಾನ್ ಒಕ್ಕಲಿಗರು ಸಂಸ್ಕೃತಿ ಹೀನರೆಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರಿಂದ ರೊಚ್ಚಿಗೆದ್ದ ಒಕ್ಕಲಿಗ ಸಮುದಾಯದ ಮುಖಂಡರು ಭಗವಾನ್ ಮನೆಗೆ ಮುತ್ತಿಗೆಹಾಕಲು ಯತ್ನಿಸಿದರು.

     

    ಒಕ್ಕಲಿಗ ಜನಾಂಗಕ್ಕೆ ಸಂಸ್ಕೃತಿ ಕಲಿಸಿ, ಭಗವಾನ್ ತಾವೂ ಒಕ್ಕಲಿಗ ಸಮುದಾಯದವರು ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಸಮುದಾಯವನ್ನೇ ನಿಂದಿಸುತ್ತಾರೆ. ಅವರು ಒಕ್ಕಲಿಗ ಸಮುದಾಯದವರು ಎಂಬುದೇ ಅನುಮಾನವಿದೆ. ಅವರನ್ನು ಈಗಲೆ ಕರೆಸಿ, ಇಲ್ಲವೇ ದೂರು ನೀಡುತ್ತೇವೆ. ಕೂಡಲೇ ಎಫ್‌ಐಆರ್ ಮಾಡಿಸಿ ಎಂದು ಪಟ್ಟು ಹಿಡಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇವಸ್ಥಾನ, ಮಸೀದಿ ಸುತ್ತಿದ್ರೆ ಬುದ್ಧಿವಂತರಾಗಲ್ಲ: ಕೆ.ಎಸ್.ಭಗವಾನ್

    ದೇವಸ್ಥಾನ, ಮಸೀದಿ ಸುತ್ತಿದ್ರೆ ಬುದ್ಧಿವಂತರಾಗಲ್ಲ: ಕೆ.ಎಸ್.ಭಗವಾನ್

    – ಓದಿದರೆ ಮಾತ್ರ ಬುದ್ಧಿ ಬರೋದು

    ದಾವಣಗೆರೆ: ಅಂತರ್ಜಾತಿ ವಿವಾಹವಾಗುವವರಿಗೆ ಮಾತ್ರ ಸರ್ಕಾರಿ ಕೆಲಸ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತಹ ಕಾನೂನು ರಚನೆಯಾಗಬೇಕು. ಆಗ ಮಾತ್ರ ಸಮಾನತೆ ತರಲು ಸಾಧ್ಯ ಎಂದು ಚಿಂತಕ ಪ್ರೊ.ಕೆ.ಎಸ್.ಭಗವಾನ್ ಅಭಿಪ್ರಾಯಪಟ್ಟಿದ್ದಾರೆ.

    ಜಿಲ್ಲೆಯ ಹರಿಹರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದು 73 ವರ್ಷಗಳಾದರೂ ಮೇಲು ಕೀಳು ಹೋಗಿಲ್ಲ. ಸಂವಿಧಾನದಲ್ಲಿ ಎಲ್ಲರೂ ಸಮಾನರು ಎಂದು ಹೇಳಲಾಗುತ್ತದೆ. ಆದರೆ ಯಾರೂ ಪಾಲನೆ ಮಾಡುತ್ತಿಲ್ಲ. ಹೀಗಾಗಿ ಯಾರು ಅಂತರ್ಜಾತಿ ವಿವಾಹ ಆಗುತ್ತಾರೋ ಅವರಿಗೆ ಮಾತ್ರ ಸರ್ಕಾರಿ ನೌಕರಿ ಸಿಗುವಂತಾಗಬೇಕು. ಅಲ್ಲದೆ, ಅಂತಹವರಿಗೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಬೇಕು. ಆ ರೀತಿಯ ಕಾನೂನನ್ನು ಜಾರಿಗೆ ತರಬೇಕು ಎಂದು ತಿಳಿಸಿದರು. ಇದನ್ನು ಓದಿ: ಎಂಎಂ ಕಲ್ಬುರ್ಗಿ ಹತ್ಯೆ ಕೇಸ್- 1,600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಎಸ್‍ಐಟಿ

    ಪ್ರಸ್ತುತ ಭಾರತದಲ್ಲಿ ಜಾತಿಯೇ ಮುಖ್ಯ ಹೊರತು ಜ್ಞಾನಕ್ಕೆ ಬೆಲೆ ಇಲ್ಲ. ಎಲ್ಲರೂ ಮೊದಲು ಒಂದೇ ಜಾತಿಯವರು, ಕಾಲದ ನಂತರ ಜಾತಿಗಳಾಗಿವೆ. ಪುಸ್ತಕಗಳನ್ನು ಓದುವುದರಿಂದ ತಿಳುವಳಿಕೆ ಬರುತ್ತದೆ. ಅದನ್ನು ಬಿಟ್ಟು ದೇವಸ್ಥಾನ, ಮಸೀದಿಗಳಿಗೆ ಹೋಗುವುದರಿಂದ ಬುದ್ಧಿವಂತರಾಗುವುದಿಲ್ಲ. ಓದಿ ಬುದ್ಧಿಶಕ್ತಿ ಬೆಳಸಿಕೊಂಡಾಗ ಮಾತ್ರ ಬುದ್ಧಿವಂತರಾಗುತ್ತಾರೆ ಎಂದು ತಿಳಿಸಿದರು.

    ಕಲಬುರ್ಗಿ ಹತ್ಯೆ ಕುರಿತು ಪ್ರತಿಕ್ರಿಯಿಸಲ್ಲ
    ಈಗಾಗಲೇ ಎರಡು, ಮೂರು ಕೇಸ್ ಆಗಿದೆ. ನಾನೇನಾದರೂ ಮಾತನಾಡಿದರೆ ಮತ್ತೊಂದು ಕೇಸ್ ಬಿದ್ದು ಓಡಾಡುವ ಕೆಲಸವಾಗುತ್ತದೆ. ಈ ಕುರಿತು ಮೈಸೂರಿನಲ್ಲಿ ಮಾತನಾಡುತ್ತೇನೆ ಎಂದು ಪ್ರೊ.ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಚಾರ್ಜ್ ಶೀಟ್ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯಿಸಲು ಭಗವಾನ್ ನಿರಾಕರಿಸಿದರು.

    370ನೇ ವಿಧಿ ರದ್ದು ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ, ಅದು ಮೋದಿಯವರ ಒಳ್ಳೆಯ ಕೆಲಸ. ಇಡೀ ಭಾರತದಲ್ಲಿ ಎಲ್ಲಾ ರಾಜ್ಯಗಳು ಸಮಾನ ಎಂದು ಸಾರಿದೆ. ತತ್ವ ಸಿದ್ಧಾಂತಗಳು ಏನೇ ಇದ್ದರು ಒಳ್ಳೆಯದನ್ನು ಮಾಡಿದಾಗ ಮೆಚ್ಚಬೇಕು, ಸ್ವಾಗತಿಸಬೇಕು. ಈ ಹಿಂದೆಯು ಮೋದಿಯವರು ಸಂವಿಧಾನ ರಾಷ್ಟ್ರ ಧರ್ಮ ಗ್ರಂಥ ಎಂದು ಹೇಳಿದ್ದರು ಅದನ್ನು ಮೆಚ್ಚಿ ಲೇಖನ ಬರೆದಿದ್ದೇನೆ. ವಿರೋಧ ಮಾಡುತ್ತೇವೆಂದು ಎಲ್ಲದನ್ನೂ ವಿರೋಧಿಸಬಾರದು ಎಂದು ಭಗವಾನ್ ಸ್ಪಷ್ಟಪಡಿಸಿದರು.

  • ಕಪ್ಪು ಹಣಕ್ಕಿಂತ ಕಪ್ಪು ಮನಸ್ಸುಗಳ ವಿರುದ್ಧ ಮೋದಿ ಹೋರಾಟ: ಬಾಬಾ ರಾಮದೇವ್

    ಕಪ್ಪು ಹಣಕ್ಕಿಂತ ಕಪ್ಪು ಮನಸ್ಸುಗಳ ವಿರುದ್ಧ ಮೋದಿ ಹೋರಾಟ: ಬಾಬಾ ರಾಮದೇವ್

    – ಕೆ.ಎಸ್.ಭಗವಾನ್ ವಿರುದ್ಧ ಕಿಡಿಕಾರಿದ ಬಾಬಾ ರಾಮದೇವ್

    ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣಕ್ಕಿಂತ ಕಪ್ಪು ಮನಸ್ಸುಗಳ ವಿರುದ್ಧ ಹೋರಾಟ ನಡೆಸಿದ್ದಾರೆ ಎಂದು ಬಾಬಾ ರಾಮದೇವ್ ಹೇಳಿದರು.

    ನಗರದ ಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಾಬಾ ರಾಮದೇವ್, ವಿದೇಶದಲ್ಲಿರುವ ಕಪ್ಪು ಹಣವನ್ನು ಭಾರತಕ್ಕೆ ತರುವ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇವೆ ಎಂದ ಅವರು ದೇಶದಲ್ಲಿ ಬಡತನ, ಆಹಾರ ಪದಾರ್ಥಗಳ ಬೆಲೆಯು ಏರಿಕೆಯಾಗುತ್ತಿದೆ ಎಂದರು.

    ಪ್ರೊ. ಕೆ.ಎಸ್.ಭಗವಾನ್ ವಿರುದ್ಧ ಕಿಡಿಕಾರಿದ ಬಾಬಾ ರಾಮದೇವ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಒಂದು ಧರ್ಮದ ಬಗ್ಗೆ ಮಾತನಾಡುವುದು ಸರಿಯಲ್ಲ. ಹೀಗೆ ಮಾತನಾಡುವವರು ಇಸ್ಲಾಂ ಧರ್ಮ, ಮೊಹಮ್ಮದ್ ಪೈಗಂಬರ್, ಖುರಾನ್, ಬೈಬಲ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾರಾ? ಒಂದು ವೇಳೆ ದಲಿತ ಚಿಂತಕನೇ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ವಿರುದ್ಧ ಮಾತನಾಡಿದರೆ ಆತನ ಪರಿಸ್ಥಿತಿ ಹೇಗಿರುತ್ತದೆ ಎಂದು ಪ್ರಶ್ನಿಸಿದರು.

    ಶ್ರೀರಾಮ ದಲಿತ, ಆದಿವಾಸಿ, ವನವಾಸಿ, ಬ್ರಾಹ್ಮಣ ಇದ್ಯಾವುದೂ ನಮಗೆ ಮುಖ್ಯವಲ್ಲ. ಆತ ನಮ್ಮ ಪೂರ್ವಜ ಎನ್ನುವುದಷ್ಟೇ ಮುಖ್ಯ. ನಾವು ರಾಮನನ್ನು ಪೂಜಿಸುತ್ತೇವೆ, ಗೌರವಿಸುತ್ತೇವೆ ಎಂದ ಅವರು, ವಾಲ್ಮೀಕಿ ಬರೆದ ರಾಮಾಯಣದಲ್ಲಿ ರಾಮನ ಬಗ್ಗೆ ಎಲ್ಲಿಯೂ ಕೆಟ್ಟದಾಗಿ ಪ್ರಸ್ತಾಪ ಮಾಡಿಲ್ಲ. ನಾನು ಕೂಡ ರಾಮಾಯಣ ಓದಿದ್ದೇನೆ. ವಾಲ್ಮೀಕಿ ರಾಮನಾಯಣವನ್ನು ಆಧಾರವಾಗಿ ಇಟ್ಟುಕೊಂಡು ಸುಳ್ಳು ಆರೋಪ ಮಾಡುವುದು ಸರಿಯಲ್ಲ ಎಂದು ಭಗವಾನ್ ವಿರುದ್ಧ ಗುಡುಗಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶೂದ್ರ ಅಂದ್ರೆ ಸೂಳೆಮಕ್ಕಳು ಎಂದರ್ಥ ಅಂತ ಮನುಸ್ಮೃತಿಯಲ್ಲಿದೆ – ಕೆ. ಎಸ್ ಭಗವಾನ್

    ಶೂದ್ರ ಅಂದ್ರೆ ಸೂಳೆಮಕ್ಕಳು ಎಂದರ್ಥ ಅಂತ ಮನುಸ್ಮೃತಿಯಲ್ಲಿದೆ – ಕೆ. ಎಸ್ ಭಗವಾನ್

    ಮಂಡ್ಯ: ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ ಕೆ.ಎಸ್ ಭಗವಾನ್ ಮನುಸ್ಮೃತಿ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿ ರಾಮ ಹಾಗೂ ರಾಮ ಮಂದಿರ ನಿರ್ಮಾಣದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಆದಿಚುಂಚನಗಿರಿ ಮಠಕ್ಕೆ ಆಗಮಿಸಿದ್ದ ಕೆ.ಎಸ್ ಭಗವಾನ್, ಹಿಂದೂ ಧರ್ಮ ಉಳಿಬೇಕು ಅಂದ್ರೆ ಮೊದಲು ಶೂದ್ರ ಎಂಬ ಪದವನ್ನು ಮನುಸ್ಮೃತಿಯಿಂದ ತೆಗೆದು ಹಾಕಬೇಕು. ಶೂದ್ರ ಅಂದ್ರೆ ಬರೀ ಗುಲಾಮ ಅಂತಷ್ಟೇ ಅರ್ಥವಲ್ಲ. ಮನುಸ್ಮೃತಿಯಲ್ಲಿ ಶೂದ್ರ ಎಂದರೆ ಸೂಳೆಮಕ್ಕಳು ಎಂದರ್ಥ. ಅಂತಹ ಅಸಭ್ಯ ಪದ ನಮಗೆ ಬೇಕಾ? ಅದು ನಮಗೆ ಗೌರವ ತರುತ್ತಿದೆಯಾ? ಅಂತಹ ಮನುಸ್ಮೃತಿಯನ್ನು ಬಿಜೆಪಿಯವರು ತರುತ್ತೇನೆ ಅಂತಾರೆ, ಅದನ್ನು ಒಪ್ಪಿಕೊಳ್ತೀರಾ ಎಂದು ಪ್ರಶ್ನಿಸಿದ್ದಾರೆ.

    ಕಳೆದ ಎರಡು ವರ್ಷಗಳಿಂದ ನಾನು ವಾಲ್ಮೀಕಿ ರಾಮಾಯಣ ಅಧ್ಯಯನ ಮಾಡಿ `ರಾಮ ಮಂದಿರ ಏಕೆ ಬೇಡ’ ಎಂಬ ಪುಸ್ತಕವನ್ನು ಬರೆದಿದ್ದೇನೆ. ಅದನ್ನು ಓದಿದರೇ, ರಾಮ ಜನಸಾಮಾನ್ಯರಿಗೆ ವಿರುದ್ಧವಾಗಿದ್ದ ಎಂಬುದು ನಮಗೆ ಗೊತ್ತಾಗುತ್ತೆ. ರಾಮ ಚತುರ್ವರ್ಣದ ಪ್ರತಿನಿಧಿಯಾಗಿ ಅದನ್ನು ಉದ್ಧಾರ ಮಾಡಲು ರಾಮಾಯಣದಲ್ಲಿ ಗುರುತಿಸಿಕೊಂಡ. ಅವನು ನಿಜವಾದ ಮನುಷ್ಯನಲ್ಲ, ದೇವರಂತೂ ಅಲ್ಲವೇ ಅಲ್ಲ. ರಾಮನನ್ನು ದೇವರು ಎಂದು ವಾಲ್ಮೀಕಿ ರಾಮಾಯಣದಲ್ಲಿ ಎಲ್ಲೂ ಉಲ್ಲೇಖಿಸಿಲ್ಲ. ದೇವರು ಅಂತಾ ಯಾರಿಗೆ ಅನುಕೂಲವಾಯ್ತೋ, ಅಂತ ಪುರೋಹಿತರು ರಾಮ, ಕೃಷ್ಣನನ್ನು ದೇವರೆಂದು ಮಾಡಿಕೊಂಡಿದ್ದಾರೆ ಎಂದು ರಾಮನ ವಿರುದ್ಧ ಕಿಡಿಕಾರಿದರು.

    ಈ ದೇಶದಲ್ಲಿ ಶೇ.95 ರಷ್ಟು ಶೂದ್ರರಿದ್ದಾರೆ. ಅವರನ್ನೆಲ್ಲಾ ನೀವು ಗುಲಾಮರು, ಸೂಳೆಮಕ್ಕಳು ಎಂದರೆ ಒಪ್ಪುತ್ತೀರಾ? ಮನುಸ್ಮೃತಿಯ 8ನೇ ಅಧ್ಯಾಯ 415ನೇ ಶ್ಲೋಕದಲ್ಲಿ ಈ ವಿಚಾರವಿದೆ. ಜನರು ಇದನ್ನೆಲ್ಲ ತಿಳಿಯಬೇಕು ಎಂದು ಹೇಳುತ್ತಿದ್ದೇನೆ. ನನಗೆ ಗುಂಡಿಕ್ಕಿದರೂ ಇದನ್ನೆಲ್ಲ ತಿಳಿಸಿಯೇ ತಿಳಿಸುತ್ತೇನೆ. ನಾನು ಹೇಳುವುದು ವಿವಾದವಾದರು ಪರವಾಗಿಲ್ಲ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಿತೂರಿ ಮಾಡಿ ಸ್ವಾಮಿ ವಿವೇಕಾನಂದ, ಬಸವಣ್ಣರ ಕೊಲೆ : ಕೆ.ಎಸ್ ಭಗವಾನ್

    ಪಿತೂರಿ ಮಾಡಿ ಸ್ವಾಮಿ ವಿವೇಕಾನಂದ, ಬಸವಣ್ಣರ ಕೊಲೆ : ಕೆ.ಎಸ್ ಭಗವಾನ್

    ಮೈಸೂರು: ಪಿತೂರಿ ಮಾಡಿ ಸ್ವಾಮಿ ವಿವೇಕಾನಂದ ಮತ್ತು ಬಸವಣ್ಣರನ್ನು ಕೊಲೆ ಮಾಡಲಾಗಿದೆ ಎಂದು ಎಂದು ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    ಬಸವಣ್ಣವರು ಸಾಯುವ ಹಿಂದಿನ ದಿನ ತುಂಬಾ ಆರೋಗ್ಯಕರವಾಗಿದ್ದರು. ಹಾಗಾಗಿ ಬಸವಣ್ಣವರ ಕೊಲೆ ಮಾಡಲಾಗಿದೆ ಎಂಬುವುದು ನನ್ನ ಅಭಿಪ್ರಾಯ. ಬಸವಣ್ಣವರು ಹಿಂದೂ ಧರ್ಮಗಳನ್ನು ಬಲು ಕಟುವಾಗಿ ಟೀಕಿಸಿದ್ದಾರೆ. ಬಸವಣ್ಣವರು ಬೌದ್ಧ ಧರ್ಮದ ಬಗ್ಗೆ ಹಲವು ಮೆಚ್ಚುಗೆ ಸೂಚಿಸಿದ್ದಾರೆ ಎಂದು ಕೆಲವು ವಚನಗಳನ್ನು ಉದಾಹರಣೆಯಾಗಿ ನೀಡಿದರು. ಬಸವಣ್ಣವರ ಚಳುವಳಿಯನ್ನು ಸಹಿಸದವರೇ ಅವರ ಕೊಲೆ ಮಾಡಿದ್ದು, ಐಕ್ಯರಾಗಿದ್ದಾರೆ ಎಂಬುವುದು ಶುದ್ಧ ಸುಳ್ಳು ಎಂದು ವಾದಿಸಿದ್ದಾರೆ.

    ಸ್ವಾಮಿ ವಿವೇಕಾನಂದರನ್ನು ಪಿತೂರಿ ಮಾಡಿ ಕೊಲೆ ಮಾಡಲಾಗಿದೆ. ಸ್ವಾಮಿ ವಿವೇಕಾನಂದರು ನಿಜವಾದ ಸನ್ಯಾಸಿಗಳು. ಎಲ್ಲವನ್ನು ಅರಿತಿರೋ ವಿವೇಕಾನಂದರು ಎರಡನೇ ಗೌತಮ ಬುದ್ಧ. ರಾತ್ರಿ ಎಲ್ಲ ಚೆನ್ನಾಗಿದ್ದ ವಿವೇಕಾನಂದರು ಬೆಳಗ್ಗೆ ನೋಡುವಾಗ ಕುಳಿತಲ್ಲೇ ಪ್ರಾಣ ಬಿಟ್ಟರು ಅಂದ್ರೆ ನಂಬೋದಕ್ಕೆ ಆಗಲ್ಲ. ದೇಶದಲ್ಲಿ ಬಡವರಿಗಾಗಿ ಕೆಲಸ ಮಾಡಬೇಕು ಎಂದು ಚಿಂತಿಸುತ್ತಿದ್ದ ವಿವೇಕಾನಂದರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಕೆ.ಎಸ್.ಭಗವಾನ್ ಸಂಶಯ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಬಸವ ಪೀಠಾಧ್ಯಕ್ಷೆ ಮಾತೆ ಮಹಾದೇವಿ, ಬಸವಣ್ಣವರ ಕೊಲೆ ಆಗಿದೆ ಎಂಬುವುದನ್ನು ನಾವು ಒಪ್ಪೊದಿಲ್ಲ. ಬಸವಣ್ಣವರು ಯೋಗಪಟುವಾಗಿದ್ದರು ಅಲ್ಲದೇ ಐಕ್ಯ ಹೊಂದುವ ಇಚ್ಛಾಶಕ್ತಿಯನ್ನು ಹೊಂದಿದ್ದರು. ಬಸವಣ್ಣವರ ಕೊಲೆ ಆಗಿದೆ ಎಂಬುದರ ಬಗ್ಗೆ ಎಲ್ಲಿಯೂ ಉಲ್ಲೇಖವಾಗಿಲ್ಲ. ಇತಿಹಾಸವನ್ನು ಸರಿಯಾಗಿ ಓದಬೇಕು. ಹಾಗಾಗಿ ಈ ರೀತಿಯ ಹೇಳಿಕೆಗಳನ್ನ ನೀಡುವುದು ತಪ್ಪಾಗುತ್ತದೆ. ಇತಿಹಾಸ ವಸ್ತುನಿಷ್ಟವಾಗಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳಿವೆ. ಬಸವಣ್ಣವರು ಹಿಂದೂ ಧರ್ಮದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದ್ದು ನಿಜ, ಆದ್ರೆ ಕೊಲೆಯಾಗಿದೆ ಎಂಬುವುದು ಸುಳ್ಳು ಎಂದು ಹೇಳಿದರು.

    ಮಾತೆ ಮಹಾದೇವಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕೆ.ಎಸ್.ಭಗವಾನ್. ಅದು ಅವರ ವೈಯಕ್ತಿಯ ಅಭಿಪ್ರಾಯ. ಹಾಗಾಗಿ ಮಾತೆ ಮಹಾದೇವಿಯವರ ಮಾತುಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ರು.

  • ಕೋರ್ಟ್ ಗೆ 750 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ-ವಿಚಾರವಾದಿ ಭಗವಾನ್‍ಗೆ ಗುಂಡು ಹಾರಿಸಲು ಮುಂದಾಗಿದ್ದು ಯಾರು..?

    ಕೋರ್ಟ್ ಗೆ 750 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ-ವಿಚಾರವಾದಿ ಭಗವಾನ್‍ಗೆ ಗುಂಡು ಹಾರಿಸಲು ಮುಂದಾಗಿದ್ದು ಯಾರು..?

    – ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ 750 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ

    ಉಡುಪಿ: ವಿಚಾರವಾದಿ, ಸಾಹಿತಿ ಪ್ರೋ. ಕೆ.ಎಸ್.ಭಗವಾನ್ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ 750 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ.

    ಗುಂಡುಗಳನ್ನು ನೀಡಿದ್ದು ಯಾರು?:
    ಭಗವಾನ್ ಹತ್ಯೆಗೆ ಸಂಬಂಧಿಸಿದಂತೆ ಬಂಧಿತನಾಗಿರುವ ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ, ಎರಡು ಜೀವಂತ ಗುಂಡುಗಳನ್ನು ನೀಡಿದ್ದನು. ನವೀನ್ ಬಳಿಯ ಎರಡು ಗುಂಡುಗಳನ್ನು ಪ್ರವೀಣ್ ಅಲಿಯಾಸ್ ಸುಜಿತ್ ಪಡೆದುಕೊಂಡಿದ್ದನು. ಪ್ರವೀಣ್ ಇದೇ ಗುಂಡುಗಳನ್ನು ನಿಹಾಲ್ ದಾದಾನಿಗೆ ತೋರಿಸಿದಾಗ, ಮುಂದೊಂದು ದಿನ ಧರ್ಮ ವಿರೋಧಿಗಳ ಸಮಾಪ್ತಿಗೆ ಗುಂಡುಗಳ ಉಪಯೋಗ ಆಗಲಿದೆ ಎಂದು ನಿಹಾಲ್ ದಾದಾ ಹೇಳಿದ್ದನು. ಗುಂಡುಗಳನ್ನು ಭದ್ರವಾಗಿ ಪ್ರವೀಣ್ ತನ್ನ ದಾವಣಗೆರೆಯ ಅಜ್ಜಿ ಮನೆಯಲ್ಲಿ ಅಕ್ರಮವಾಗಿ ಇರಿಸಿದ್ದನು.

    ಬೆಳಗಾವಿಯಲ್ಲಿ ಸ್ಕೆಚ್:
    ಭಗವಾನ್ ಹತ್ಯೆಗೆ ಬೆಳಗಾವಿ ಸುಖಸಾಗರ್ ಹೋಟೆಲ್‍ನಲ್ಲಿ ಸ್ಕೆಚ್ ರೂಪಿಸಲಾಗಿತ್ತು. ಹೋಟೆಲ್‍ನಲ್ಲಿ ಪ್ರವೀಣ್ ಅಲಿಯಾಸ್ ಸುಜಿತ್, ಅಮೋಲ್ ಕಾಳೆ, ಅಮಿತ್ ದಗ್ವೇಕರ್ ನಿಹಾಲ್ ದಾದಾ, ಮನೋಹರ್ ಯಡವೆ ಎಲ್ಲರೂ ಸೇರಿ ಹತ್ಯೆಗೆ ಸಂಚು ರೂಪಿಸಿದ್ದರು. ಕೆ.ಎಸ್.ಭಗವಾನ್ ಧರ್ಮಕ್ಕೆ ಅಪಮಾನ ಮಾಡುತ್ತಿರುವುದರಿಂದ ಅವರನ್ನ ಕೊಲೆ ಮಾಡಬೇಕೆಂದು ಎಲ್ಲರು ನಿರ್ಧರಿಸಿದ್ದರು.

    ಭಗವಾನ್ ಹತ್ಯೆ ಮಾಡಲು ಗುಂಡುಗಳು ಸಿದ್ಧವಾಗಿದ್ದವು ಆದ್ರೆ ಗನ್ ಸಿಕ್ಕಿರಲಿಲ್ಲ. ಅನಿಲ್ ಎಂಬಾತನಿಂದ ಏರ್ ಪಿಸ್ತೂಲ್ ಮತ್ತು ಏರ್‍ಗನ್ ಖರೀದಿ ಮಾಡಿದ್ದರು. ಏರ್ ಗನ್ ಖರೀದಿ ಮಾಡಲು ಆರೋಪಿ ಕೆ.ಟಿ.ನವೀನ್ ಧನ ಸಹಾಯ ಮಾಡಿದ್ದನು. ಬೆಳಗಾವಿಯಲ್ಲಿಯೇ ಏರ್‍ಗನ್ ಚಲಾಯಿಸುವ ತರಬೇತಿಯನ್ನು ಸಹ ಆರೋಪಿಗಳು ಪಡೆದುಕೊಂಡಿದ್ದರು.

    ಭಗವಾನ್ ಟಾರ್ಗೆಟ್ ಯಾಕೆ?:
    ಮೈಸೂರಿನ ಮೈಲಾರಿ ಹೋಟೆಲ್ ಬಳಿ ಆರೋಪಿಗಳೆಲ್ಲರೂ ಮತ್ತೊಮ್ಮೆ ನನ್ನ ಹತ್ಯೆಗೆ ಸ್ಕೆಚ್ ರೂಪಿಸಿದ್ದರು. ಇನ್ನು ಆರೋಪಿ ಕೆ.ಟಿ. ನವೀನ್ ಕುಮಾರ್‍ನನ್ನು ಎಲ್ಲೋ ನೋಡಿದ ಹಾಗಿದೆ. ಹಾಗಾಗಿ ನನ್ನ ಕೊಲೆಗೆ ಇವರೆಲ್ಲಾ ಸಂಚು ರೂಪಿಸಿರುವ ಸಾಧ್ಯತೆಗಳಿವೆ. ಹಿಂದೂ ಧರ್ಮದ ಶೋಷಣೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸನಾತನ ಸಂಸ್ಥೆ ಮತ್ತು ಶ್ರೀರಾಮ ಸೇನೆಯ ವಿಚಾರಣೆ ನಡೆಸಿ ಸತ್ಯಾಸತ್ಯೆತಯನ್ನು ಪತ್ತೆ ಹಚ್ಚಬೇಕೆಂದು ಕೆ.ಎಸ್.ಭಗವಾನ್ ಉಪ್ಪಾರ ಪೇಟೆ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

    ಹಿಂದೂ ಸಂಘಟನೆಯ ಕಾರ್ಯಕರ್ತನಾಗಿದ್ದ ಪ್ರವೀಣ್ ಬೇರೆ ಬೇರೆ ಹೆಸರುಗಳಿಂದ ಗುರುತಿಸಿಕೊಂಡಿದ್ದನು. ಯಾವ ಸಂಘಟನೆಯಲ್ಲಿ ಯಾರು ಮೂಲ ಹೆಸರುಗಳನ್ನು ಹೇಳುವಂತಿಲ್ಲ ಮತ್ತು ಕರೆಯುವಂತಿಲ್ಲ ಎಂದು ಎಲ್ಲ ಆರೋಪಿಗಳು ನಿರ್ಧರಿಸಿದ್ದರು. ಒಂದು ವೇಳೆ ಪೊಲೀಸರಿಗೆ ಯಾರಾದರೂ ಸಿಕ್ಕರೆ ನಮ್ಮ ಹೆಸರುಗಳು ಬಹಿರಂಗವಾಗಬಾರದು ಎಂಬ ಹಿನ್ನೆಲೆಯಲ್ಲಿ ಸಂಚು ರೂಪಿಸಿದ್ದರು. ನವೀನ್ ಬಂಧನದ ಬಳಿಕ ಬೆದರಿದ ಎಲ್ಲ ಆರೋಪಿಗಳಿಗೂ ತಪ್ಪಿಸಿಕೊಳ್ಳುವಂತೆ ಅಮಿತ್ ಸೂಚಿಸಿದ್ದನು.

    ಅಮಿತ್ ಸೂಚನೆಯಂತೆ ಎಲ್ಲರೂ ತಲೆ, ಮೀಸೆ ಬೋಳಿಸಿಕೊಂಡು ಗುರುತು ಸಿಗದಂತೆ ಮಹಾರಾಷ್ಟ್ರದಲ್ಲಿ ಅವಿತುಕೊಂಡಿದ್ದರು. ಬಹು ದಿನಗಳ ನಂತರ ದಾವಣಗೆರೆಗೆ ಆಗಮಿಸಿದ್ದ ಅಮೋಲ್ ಕಾಳೆ , ಬಸ್ ನಿಲ್ದಾಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದನು.

    ಯಾರು ಅಮಿತ್ ದೆಗ್ವೇಕರ್?:
    ಸನಾತನ್ ಪ್ರಭಾತ್‍ನಲ್ಲಿ ಪ್ರೂಫ್ ರೀಡರ್ ಆಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೇ ಅಮಿತ್ ದೆಗ್ವೇಕರ್. ಹಿಂದೂ ಧರ್ಮದ ಬಗ್ಗೆ ಕಾಳಜಿಯುಳ್ಳ ಅಮಿತ್ ಮಠ, ಮಂದಿರ ಆಶ್ರಮಗಳಿಗೆ ಭೇಟಿ ಕೊಡುತ್ತಿದ್ದನು. ಅಮಿತ್ ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಧರ್ಮದ ಕಾರ್ಯಗಳಲ್ಲಿ ತೊಡಗಿದ್ದನು. ಕರ್ನಾಟಕಕ್ಕೆ ಬಂದಾಗ ಪ್ರವೀಣ್ ಮತ್ತು ದಾದಾನ ಪರಿಚಯವಾಗಿತ್ತು. ಮುಂದೆ ಇದೇ ಪ್ರವೀಣ್ ಮೂಲಕ ನವೀನ್‍ಕುಮಾರನ ಸ್ನೇಹ ಸಂಪಾದಿಸಿದ್ದನು. ನವೀನ್ ಮೂಲಕವೇ ಧರ್ಮದ ರಕ್ಷಣೆಗೆ ಶಸ್ತ್ರ ಸಜ್ಜಿತ ಹೋರಾಟಕ್ಕೆ ಅಮಿತ್ ಇಳಿದಿದ್ದನು.

    ಮತ್ತೋರ್ವ ಆರೋಪಿ ಮನೋಹರ್ ಯಡವೆ ಸಹ ಧರ್ಮ ರಕ್ಷಣೆಯ ಹೋರಾಟಕ್ಕಾಗಿ ನವೀನ್‍ಗ್ಯಾಂಗ್ ಸೇರಿಕೊಂಡಿದ್ದನು. ಗ್ಯಾಂಗ್ ಸೇರುವ ಮುನ್ನ ಭಾರತೀಯ ಸೇನೆ, ವೀರ ಹೋರಾಟಗಾರ ಹೆಸರಿನಲ್ಲಿ ಧರ್ಮ ರಕ್ಷಣೆಗೆ ಕೆಲಸ ಮಾಡುತ್ತಿದ್ದನು.

  • ಎಲ್ಲಾ ದೇವಾಲಯ, ಮಸೀದಿ, ಚರ್ಚ್ ಒಡೆದು ಹಾಕಿ ಎಂದು ಕೆ.ಎಸ್ ಭಗವಾನ್ ವಿವಾದ ಸೃಷ್ಟಿ

    ಎಲ್ಲಾ ದೇವಾಲಯ, ಮಸೀದಿ, ಚರ್ಚ್ ಒಡೆದು ಹಾಕಿ ಎಂದು ಕೆ.ಎಸ್ ಭಗವಾನ್ ವಿವಾದ ಸೃಷ್ಟಿ

    – ಭಗವಾನ್ ಹೇಳಿಕೆಗೆ ನಟ ಮಾಸ್ಟರ್ ಕಿಶನ್ ವಿರೋಧ

    ರಾಯಚೂರು: ದೇಶದ ಎಲ್ಲಾ ದೇವಾಲಯ, ಚರ್ಚ್, ಮಸೀದಿಗಳನ್ನು ಒಡೆದು ಹಾಕಿ. ಇವು ಜನರನ್ನು ಸೇರಿಸಲ್ಲ ದೂರ ಮಾಡುತ್ತವೆ. ಎಲ್ಲಾ ಮತಗಳು ದ್ವೇಷವನ್ನು ಹರಡುತ್ತಿವೆ ಎಂದು ಚಿಂತಕರಾದ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಇಂದು ರಾಯಚೂರಿನಲ್ಲಿ ನಡೆದ ಪುಸ್ತಕ ಬಿಡುಗಡೆ ಹಾಗೂ ನಾಟಕ ಪ್ರದರ್ಶನ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಅನಗತ್ಯ. ಮಂದಿರ ಬದಲಾಗಿ ಉತ್ತಮ ಜಲಾಶಯ, ಅತ್ಯುತ್ತಮ ವಿಶ್ವವಿದ್ಯಾಲಯ, ಗ್ರಾಮಗಳಲ್ಲಿ ಉತ್ತಮ ಶಾಲೆ ನಿರ್ಮಾಣವಾಗಬೇಕು. 26 ಬಾರಿ ಹೊರಗಿನವರು ದೇಶದ ಮೇಲೆ ದಾಳಿ ಮಾಡಿದಾಗ ದೇವರು ಎಲ್ಲಿ ಹೋಗಿದ್ದರು? ನಿಮ್ಮ ರಾಮ, ಶಿವ, ಕೃಷ್ಣ, ಕಾಳಿ ಏನ್ ಮಾಡುತ್ತಿದ್ದರು? ಕೆಲಸಕ್ಕೆ ಬಾರದ ದೇವರುಗಳಿಗೆ ದೇವಾಲಯ ಯಾಕೆ ಕಟ್ಟಬೇಕು? ಯಾವ ದೇವಸ್ಥಾನ ಕಟ್ಟುವುದು ಪ್ರಯೋಜನವಿಲ್ಲ ಎಂದು ಹೇಳಿದರು.

    ಶಿವನ ದೇವಾಲಯ ಯಾಕೆ ಕಟ್ಟುವುದಿಲ್ಲ? ಶಿವ ಪುರಾತನ ದೇವರು. ಗುಲಾಮಗಿರಿ ಎತ್ತಿಹಿಡಿಯುವ ದೇವರಲ್ಲ. ಆದ್ರೆ ಗುಲಾಮಗಿರಿಯನ್ನು ಎತ್ತಿ ಹಿಡಿಯುವ ರಾಮ, ಕೃಷ್ಣರ ದೇವಾಲಯಗಳನ್ನೇ ಯಾಕೆ ಕಟ್ಟುತ್ತಿದ್ದಾರೆ. ವಾಲ್ಮೀಕಿ ರಾಮಾಯಣದಲ್ಲಿ ರಾಮ ದೇವರು ಅಂತ ಹೇಳಿಲ್ಲ ಎಂದು ಭಗವಾನ್ ಹೇಳಿದ್ರು.

    ಇದೇ ವೇದಿಕೆಯಲ್ಲಿದ್ದ ಮಾಸ್ಟರ್ ಕಿಶನ್ ಇದಕ್ಕೆ ವಿರೋಧ ವ್ಯಕ್ತಪಡಿಸಿ, ಭಗವಾನ್ ಅವರ ಮಾತನ್ನ ನಾನು ಒಪ್ಪಲ್ಲ. ಮಂತ್ರಾಲಯಕ್ಕೆ ಹೋಗಬೇಕು ಅಂತ ಆಸೆ ಇತ್ತು. ಇವತ್ತು ಬೆಳಗ್ಗೆ ದೇವಸ್ಥಾನಕ್ಕೆ ಹೋಗಿದ್ದೆ. ಉಪವಾಸ ವ್ರತ ಆಚರಿಸಿ ನಾನು ದೇವಸ್ಥಾನಕ್ಕೆ ಹೋಗಿ ಬಂದೆ. ಒಬ್ಬ ಯುವಕನಾಗಿ ಜಾತಿ ವ್ಯವಸ್ಥೆ ಬಗ್ಗೆ ನಂಬಿಕೆಯಿಲ್ಲ. ಶಾಂತಿಗಾಗಿ ದೇವಾಲಯಕ್ಕೆ ಹೋಗುತ್ತೇವೆ ಎಂದು ಹೇಳಿದ್ರು.