Tag: ಕೆ.ಕಲ್ಯಾಣ್

  • ಶಿಲ್ಪಾ ಮುಡ್ಬಿ ದನಿಯಲ್ಲಿ ಮ್ಯಾಜಿಕ್ ಕ್ರಿಯೇಟ್ ಮಾಡಿದ ಪುಗ್ಸಟ್ಟೆ ಲೈಫು ಸಾಂಗ್ -‘ಖಾಲಿ ಖಾಲಿ’ ಹಾಡು ವೈರಲ್

    ಶಿಲ್ಪಾ ಮುಡ್ಬಿ ದನಿಯಲ್ಲಿ ಮ್ಯಾಜಿಕ್ ಕ್ರಿಯೇಟ್ ಮಾಡಿದ ಪುಗ್ಸಟ್ಟೆ ಲೈಫು ಸಾಂಗ್ -‘ಖಾಲಿ ಖಾಲಿ’ ಹಾಡು ವೈರಲ್

    ಬೆಂಗಳೂರು: ಬಿಡುಗಡೆಯ ಸನಿಹದಲ್ಲಿರುವ ಸಂಚಾರಿ ವಿಜಯ್ ಅಭಿನಯದ ಚಿತ್ರ ‘ಪುಗ್ಸಟ್ಟೆ ಲೈಫು’ ಒಂದೊಂದೇ ಸ್ಯಾಂಪಲ್ ಗಳ ಮೂಲಕ ದಿನದಿಂದ ದಿನಕ್ಕೆ ಪ್ರೇಕ್ಷಕರನ್ನು ಸೆಳೆಯುತ್ತಿದೆ ಚಿತ್ರತಂಡ. ಇಂಟ್ರಸ್ಟಿಂಗ್ ಟ್ರೇಲರ್ ಪ್ರೇಕ್ಷಕರ ಭರಪೂರ ಮೆಚ್ಚುಗೆಗೆ ಪಾತ್ರವಾದ ಬೆನ್ನಲ್ಲೆ ಚಿತ್ರದ ಒಂದೊಂದೇ ಹಾಡುಗಳು ಕೂಡ ಕೇಳುಗರ ಮನಸ್ಸಿಗೆ ಹತ್ತಿರವಾಗುತ್ತಿವೆ. ಇದರ ಬೆನ್ನಲ್ಲೇ ಚಿತ್ರದ ಮತ್ತೊಂದು ಮೀನಿಂಗ್ ಫುಲ್ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

    ಚಿತ್ರದ ‘ಖಾಲಿ ಖಾಲಿಯಾಗಿದೆ’ ಹಾಡಿನ ಲಿರಿಕಲ್ ವೀಡಿಯೋ ಸಾಂಗ್ ಇಂದು ಬಿಡುಗಡೆಯಾಗಿದೆ. ಕೆ.ಕಲ್ಯಾಣ್ ಅರ್ಥಗರ್ಭಿತ ಮನಮುಟ್ಟುವ ಸಾಹಿತ್ಯ ಈ ಹಾಡಿಗಿದೆ. ವಾಸು ದೀಕ್ಷಿತ್ ಸಂಗೀತ ಸಂಯೋಜನೆ ಕೂಡ ಅಷ್ಟೇ ಸೊಗಸಾಗಿದ್ದು, ಖ್ಯಾತ ಜನಪದ ಗಾಯಕಿ ಶಿಲ್ಪಾ ಮುಡ್ಬಿ ದನಿ ಮ್ಯಾಜಿಕ್ ಕ್ರಿಯೇಟ್ ಮಾಡಿದೆ. ಸದ್ಯಕ್ಕಂತು ಈ ಹಾಡನ್ನು ಎಲ್ಲರೂ ರಿಪೀಟ್ ಮೂಡ್ ನಲ್ಲಿ ಕೇಳೋಕೆ ಶುರುವಿಟ್ಟಿದ್ದಾರೆ. ಇದನ್ನೂ ಓದಿ: ಫೋರ್ ವಾಲ್ಸ್’ ಚಿತ್ರದ ಮೊದಲ ಹಾಡು ರಿಲೀಸ್ – ಪ್ರೀತಿ ನಿವೇದನೆಯಲ್ಲಿ ಬ್ಯುಸಿಯಾದ ಅಚ್ಯುತ್ ಕುಮಾರ್

    ಅರವಿಂದ್ ಕುಪ್ಳೀಕರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಡಾರ್ಕ್ ಹ್ಯೂಮರ್ ಕಥಾಹಂದರದ ಚಿತ್ರ ‘ಪುಗ್ಸಟ್ಟೆ ಲೈಫು’. ಚಿತ್ರದಲ್ಲಿ ಸಂಚಾರಿ ವಿಜಯ್ ಮತ್ತೊಮ್ಮೆ ಹೊಸ ಅವತಾರವೆತ್ತಿದ್ದು, ಮುಸ್ಲಿಂ ಯುವಕನಾಗಿ ಬೀಗ ರಿಪೇರಿ ಮಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೆಳ ಮಧ್ಯಮ ವರ್ಗದ ಯುವಕನೊಬ್ಬ ಹಣದ ಹಿಂದೆ ಬಿದ್ದರೆ ಎದುರಾಗಬಹುದುದಾದ ಸಮಸ್ಯೆಗಳು, ಅಧಿಕಾರದಲ್ಲಿರುವವರು ಅಮಾಯಕರನ್ನು ತಮ್ಮ ಕೆಲಸಕ್ಕಾಗಿ ಬಳಸಿಕೊಳ್ಳುವ ರೀತಿ ಇವೆಲ್ಲವನ್ನು ಸಿನಿಮ್ಯಾಟಿಕ್ ಆಗಿ ಒಂದೊಳ್ಳೆ ಸಂದೇಶವನ್ನಿಟ್ಟಿಕೊಂಡು ಸಿನಿಮಾ ಹೆಣೆದಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ಕೊನೆಗೂ ತನ್ನ ಆಸೆ ನೆರವೇರಿಸಿಕೊಂಡ ವಿಜಯ್ ದೇವರಕೊಂಡ

    ಚಿತ್ರದಲ್ಲಿ ಭರತ ನಾಟ್ಯ ಕಲಾವಿದೆ ಮಾತಂಗಿ ಪ್ರಸನಾ ನಾಯಕನಟಿಯಾಗಿ ಲಾಯರ್ ಪಾತ್ರದಲ್ಲಿ ನಟಿಸಿದ್ದು, ಅಚ್ಯುತ್ ಕುಮಾರ್, ರಂಗಾಯಣ ರಘು ತಾರಾಬಳಗದಲ್ಲಿದ್ದಾರೆ. ಬಹುತೇಕ ಎಲ್ಲಾ ಕಲಾವಿದರು ರಂಗಭೂಮಿ ಹಿನ್ನೆಲೆಯುಳ್ಳವರೇ ನಟಿಸಿರೋದು ಈ ಚಿತ್ರದ ವಿಶೇಷ ಸಂಗತಿ. ಸರ್ವಸ್ವ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ಅಧ್ವೈತ್ ಗುರುಮೂರ್ತಿ ಕ್ಯಾಮೆರಾ ನಿರ್ದೇಶನ, ಪೂರ್ಣಚಂದ್ರ ತೇಜಸ್ವಿ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

    ಚಿತ್ರದ ಟ್ರೇಲರ್, ಹಾಡುಗಳಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ದೊರಕ್ಕಿದ್ದು, ಚಿತ್ರರಂಗದ ಗಣ್ಯರು ಕೂಡ ಸಿನಿಮಾ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಈ ಚಿತ್ರ ಸೆಪ್ಟೆಂಬರ್ 24ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಇದನ್ನೂ ಓದಿ: ಪ್ರಭಾಸ್, ದೀಪಿಕಾ ಪಡುಕೋಣೆಯ ಪ್ರಾಜೆಕ್ಟ್ ಕೆ ಚಿತ್ರೀಕರಣ ಆರಂಭ ಯಾವಾಗ?

  • ನನ್ನ ಕರ್ಮಕ್ಕೆ ನನಗೆ ಶಿಕ್ಷೆ ಆಗಿದೆ – ಗಂಗಾ ಕುಲಕರ್ಣಿ ಡೆತ್‍ನೋಟ್

    ನನ್ನ ಕರ್ಮಕ್ಕೆ ನನಗೆ ಶಿಕ್ಷೆ ಆಗಿದೆ – ಗಂಗಾ ಕುಲಕರ್ಣಿ ಡೆತ್‍ನೋಟ್

    – ಜಡ್ಜ್, ವಕೀಲರಲ್ಲಿ ಮನವಿ

    ಕೊಪ್ಪಳ: ಚಿತ್ರ ಸಾಹಿತಿ ಕೆ ಕಲ್ಯಾಣ್ ದಾಂಪತ್ಯದಲ್ಲಿ ಬಿರುಗಾಳಿ ಎಬ್ಬಿಸಿ, ಇದೀಗ ಆತ್ಮಹತ್ಯೆ ಮಾಡಿಕೊಂಡ ಗಂಗಾ ಕುಲಕರ್ಣಿ ಡೆತ್ ನೋಟ್ ಪತ್ತೆಯಾಗಿದೆ.

    ಆತ್ಮಹತ್ಯೆಗೂ ಮುನ್ನ ಮರಾಠಿಯಲ್ಲಿ ಡೆತ್‍ನೋಟ್ ಬರೆದಿರುವ ಗಂಗಾ ಕುಲಕರ್ಣಿ, ನ್ಯಾಯಾಧೀಶರು ಹಾಗೂ ವಕೀಲರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ನನ್ನ ಕರ್ಮಕ್ಕೆ ನನಗೆ ಶಿಕ್ಷೆ ಆಗಿದೆ. ನನ್ನ ಮೇಲೆ ಕೇಸ್‍ಗಳಾಗಿವೆ. ನನಗೆ ಇಬ್ಬರು ಮಕ್ಕಳಿದ್ದಾರೆ. ನನ್ನ ಮಕ್ಕಳನ್ನು ನೀವೇ ನೋಡಿಕೊಳ್ಳಿ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸುವ ಮೂಲಕ ಜಡ್ಜ್, ವಕೀಲರಲ್ಲಿ ಗಂಗಾ ಮನವಿ ಮಾಡಿದ್ದಾರೆ.

    ಇಂದು ವಿಷಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕುಲಕರ್ಣಿ, ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮದಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸಂತೋಷ್ ಕುಲಕರ್ಣಿ ಎಂಬವರಿಂದ ಮೂರು ಲಕ್ಷ ದೋಚಿದ್ದರು. ಈ ಸಂಬಂಧ 2016 ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಗಂಗಾ ಕುಲಕರ್ಣಿ ವಿರುದ್ಧ ಕೇಸ್ ದಾಖಲಾಗಿತ್ತು.

    ಅಲ್ಲದೆ ಈ ಹಿಂದೆ ಕಲ್ಯಾಣ್ ಪತ್ನಿ ಅಶ್ವಿನಿಯನ್ನು ಅತ್ತೆ, ಮಾವನನ್ನು ಪುಸಲಾಯಿಸಿ ಅಪಹರಣ ಮಾಡಿದ್ದಾರೆ. ಪತ್ನಿ ಅಶ್ವಿನಿ ಅಕೌಂಟ್‍ನಿಂದ 19 ಲಕ್ಷ ರೂಪಾಯಿ ತನ್ನ ಅಕೌಂಟ್‍ಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಆರೋಪ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ಗ್ರಾಮದ ಶಿವಾನಂದ ವಾಲಿ, ಮನೆಕೆಲಸದಾಕೆಯಾಗಿದ್ದ ಗಂಗಾ ಕುಲಕರ್ಣಿ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ್ ಪತ್ನಿ ಅಶ್ವಿನಿ ಕರೆತಂದು ಪೊಲೀಸರು ಮಾಹಿತಿ ಪಡೆದಿದ್ದರು. ಸದ್ಯ ಪತಿ ವಿರುದ್ಧ ನೀಡಿರುವ ವಿಚ್ಛೇದನ ಹಿಂಪಡೆಯುವುದಾಗಿ ಅಶ್ವಿನಿ ತಿಳಿಸಿದ್ದು, ಪ್ರಕರಣ ಸುಖಾಂತ್ಯಗೊಂಡಿದೆ.

  • ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ

    ಕೆ. ಕಲ್ಯಾಣ್ ಬಾಳಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆ

    ಕೊಪ್ಪಳ: ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಇಂದು ವಿಷಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕುಲಕರ್ಣಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದ್ರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

    ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಗ್ರಾಮದಲ್ಲಿ ಕೆಲಸ ಕೊಡಿಸೋದಾಗಿ ಹೇಳಿ ಸಂತೋಷ್ ಕುಲಕರ್ಣಿ ಎಂಬವರಿಂದ ಮೂರು ಲಕ್ಷ ದೋಚಿದ್ರು. ಈ ಸಂಬಂಧ 2016 ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಗಂಗಾ ಕುಲಕರ್ಣಿ ವಿರುದ್ಧ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ಕೆ.ಕಲ್ಯಾಣ್ ಕುಟುಂಬಕ್ಕೆ ಮೋಸ- ಆರೋಪಿ ಪೊಲೀಸ್ ಕಸ್ಟಡಿಗೆ

    ಈ ಹಿಂದೆ ಕಲ್ಯಾಣ್ ಪತ್ನಿ ಅಶ್ವಿನಿಯನ್ನು ಅತ್ತೆ, ಮಾವನನ್ನು ಪುಸಲಾಯಿಸಿ ಅಪಹರಣ ಮಾಡಿದ್ದಾರೆ. ಪತ್ನಿ ಅಶ್ವಿನಿ ಅಕೌಂಟ್‍ನಿಂದ 19 ಲಕ್ಷ ರೂಪಾಯಿ ತನ್ನ ಅಕೌಂಟ್‍ಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂಬ ಆರೋಪಿಸಲಾಗಿತ್ತು. ಈ ಆರೋಪ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ಗ್ರಾಮದ ಶಿವಾನಂದ ವಾಲಿ, ಗಂಗಾ ಕುಲಕರ್ಣಿ ಎಂಬವರ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ್ ಪತ್ನಿ ಅಶ್ವಿನಿ ಕರೆತಂದು ಪೊಲೀಸರು ಮಾಹಿತಿ ಪಡೆದಿದ್ದರು. ಸದ್ಯ ಪತಿ ವಿರುದ್ಧ ನೀಡಿರುವ ವಿಚ್ಛೇದನ ಹಿಂಪಡೆಯುವುದಾಗಿ ಅಶ್ವಿನಿ ತಿಳಿಸಿದ್ದು, ಪ್ರಕರಣ ಸುಖಾಂತ್ಯಗೊಂಡಿದೆ.

  • ನಾನು ಚೆನ್ನಾಗಿದ್ದೇನೆ, ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ

    ನಾನು ಚೆನ್ನಾಗಿದ್ದೇನೆ, ವಿಚ್ಛೇದನ ಹಿಂಪಡೆಯುತ್ತಿದ್ದೇನೆ – ಕೆ.ಕಲ್ಯಾಣ್ ಪತ್ನಿ ಅಶ್ವಿನಿ

    ಬೆಳಗಾವಿ: ನಾನು ವಿಚ್ಛೇದನ ಪತ್ರವನ್ನು ಹಿಂಪಡೆಯುತ್ತಿದ್ದೇನೆ. ಅದಕ್ಕೆ ಬೇಕಾದ ಸಹಿ ಕೂಡ ಮಾಡಿದ್ದೀನಿ ಎಂದು ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಹೇಳಿದರು. ಇದನ್ನೂ ಓದಿ: ನಾನು ನನ್ನ ಹೆಂಡತಿಯನ್ನು ಮನವೊಲಿಸಬೇಕಾಗಿಲ್ಲ: ಕೆ.ಕಲ್ಯಾಣ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಶ್ವಿನಿ, ಶಿವಾನಂದ ವಾಲಿಯನ್ನು ತುಂಬಾ ನಂಬಿದ್ದೆವು. ಆದರೆ ನಮಗೆ ನಂಬಿಕೆ ದ್ರೋಹ ಮಾಡಿದ್ದಾನೆ. ನಾವು ಅವರ ಮಾತನ್ನ ಕೇಳಬೇಕು, ಹೇಳಿದ್ದನ್ನು ಮಾಡಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಯಾರನ್ನಾದರೂ ಮನೆಗೆ ಸೇರಿಸಿಕೊಳ್ಳಬೇಕಾದರೆ ಅವರ ಪೂರ್ವಪರ ಮಾಹಿತಿ ಪಡೆದು ಕೆಲಸಕ್ಕೆ ಸೇರಿಸಿಕೊಳ್ಳಿ. ಈ ಘಟನೆಯಿಂದ ಹೊರಗೆ ಬರಲು ನಾನು ಮತ್ತು ನಮ್ಮ ಪೋಷಕರು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

    ಇನ್ನೂ ನಾನು ವಿಚ್ಛೇದನ ಪತ್ರವನ್ನು ಹಿಂಪಡೆಯುತ್ತಿದ್ದೇನೆ. ಅದಕ್ಕೆ ಬೇಕಾದ ಸಹಿ ಕೂಡ ಮಾಡಿದ್ದೀನಿ. ನನ್ನ ಮೇಲೆ ಯಾರೋ ಪ್ರಭಾವ ಬೀರಿದ್ದರು. ಈಗ ನಾನು ಚೆನ್ನಾಗಿದ್ದೇನೆ. ಆರೋಪಿ ಶಿವಾನಂದ ನನಗೆ ಮೋಸ ಮಾಡಿದ ಎಂದು ಕೆ.ಕಲ್ಯಾಣ ಪತ್ನಿ ಅಶ್ವಿನಿ ಹೇಳಿದರು.

    ಆರೋಪಿ ಶಿವನಾಂದ ವಾಲಿ ತಾನು ಹೇಳಿದ್ದ ಮಾತನನ್ನ ಕೇಳುವ ರೀತಿ ನಮ್ಮ ಪರಿಸ್ಥಿತಿ ನಿರ್ಮಾಣ ಮಾಡಿದ್ದ. ಆದರೆ ಏನು ಮಾಡಿದ್ದ ಎಂಬುದು ನನಗೆ ಗೊತ್ತಿಲ್ಲ. ನಾನು ಮತ್ತು ನನ್ನ ಪತಿ ಇಬ್ಬರು ಪರಸ್ಪರ ಭೇಟಿಯಾಗಿ ಮಾತನಾಡಿಲ್ಲ. ಇಬ್ಬರೂ ಭೇಟಿಯಾಗಿ ವೈಯಕ್ತಿಕವಾಗಿ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ ಎಂದರು.

    ಇಂತಹ ಪರಿಸ್ಥಿತಿಯಲ್ಲಿ ನಮ್ಮ ಬೆಳಗಾವಿ ಪೊಲೀಸರು ನಮಗೆ ತುಂಬಾ ಸಹಕಾರ ಮಾಡಿದ್ದಾರೆ. ಕೆಟ್ಟ ಸಮಯದಿಂದ ಈ ರೀತಿ ಆಗಿದೆ. ನಮಗೂ ತುಂಬಾ ಒತ್ತಡ ಇತ್ತು. ಆದರೆ ಆ ದೇವರೇ ಪೊಲೀಸರ ರೂಪದಲ್ಲಿ ಬಂದು ಸಹಾಯ ಮಾಡಿದ್ದಾರೆ ಎಂದು ಬೆಳಗಾವಿ ಪೊಲೀಸರಿಗೆ ಅಶ್ವಿನಿ ಕೃತಜ್ಞತೆ ಸಲ್ಲಿಸಿದರು.

  • ಕೆ.ಕಲ್ಯಾಣ್ ಕುಟುಂಬಕ್ಕೆ ಮೋಸ- ಆರೋಪಿ ಪೊಲೀಸ್ ಕಸ್ಟಡಿಗೆ

    ಕೆ.ಕಲ್ಯಾಣ್ ಕುಟುಂಬಕ್ಕೆ ಮೋಸ- ಆರೋಪಿ ಪೊಲೀಸ್ ಕಸ್ಟಡಿಗೆ

    – ಶಿವಾನಂದ ವಾಲಿ ವಿಚಾರಣೆ ವೇಳೆ ಮಹತ್ವದ ಮಾಹಿತಿ ಲಭ್ಯ

    ಬೆಳಗಾವಿ: ಪ್ರೇಮಕವಿ ಕೆ.ಕಲ್ಯಾಣ್ ಹಾಗೂ ಅವರ ಕುಟುಂಬಸ್ಥರಿಗೆ ಮೋಸ ಮಾಡಿ ಆಸ್ತಿ ಮತ್ತು ಹಣ ಲಪಟಾಯಿಸಿದ್ದ ಆರೋಪದ ಮೇಲೆ ಬಂಧಿತನಾಗಿರುವ ಶಿವಾನಂದ ವಾಲಿಯನ್ನು ಅ.12ರ ವರೆಗೆ ಬೆಳಗಾವಿ ಜೆಎಂಎಫ್ ನ್ಯಾಯಾಲಯ ಪೊಲೀಸ್ ವಶಕ್ಕೆ ನೀಡಿದೆ.

    ಪ್ರಕರಣದಲ್ಲಿ ಆರೋಪಿ ಶಿವಾನಂದ ವಾಲಿಯನ್ನು ಹೆಚ್ಚಿನ ವಿತರಣೆ ನಡೆಸುವ ಅಗತ್ಯವಿರುವ ಹಿನ್ನೆಲೆಯಲ್ಲಿ ಮಾಳಮಾರುತಿ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ ಅ.12ರವರೆಗೂ ಪೊಲೀಸರ ವಶಕ್ಕೆ ನೀಡಿದೆ ಎಂಬ ಮಾಹಿತಿ ಲಭಿಸಿದೆ. ಇದನ್ನೂ ಓದಿ: ಸುಖಾಂತ್ಯದತ್ತ ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯ ಕಲಹ

    ಮಾಳಮಾರುತಿ ಪೊಲೀಸರು ಭಾನುವಾರ ತಡರಾತ್ರಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸದ್ಯ ಆರೋಪಿ ಶಿವಾನಂದ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿ ಲಭ್ಯವವಾಗಿದೆ ಎನ್ನಲಾಗಿದೆ. ಕೆ.ಕಲ್ಯಾಣ್ ಪತ್ನಿ ಅಶ್ವಿನಿ, ಅತ್ತೆ, ಮಾವ ಹೆಸರಿನಲ್ಲಿದ್ದ ಅಪಾರ ಆಸ್ತಿ ವರ್ಗಾವಣೆ ಮಾಡಿಕೊಂಡಿದ್ದ ಶಿವಾನಂದ ವಾಲಿ ವರ್ಗಾವಣೆ ಮಾಡಿಸಿಕೊಂಡಿದ್ದ. ಸುಮಾರು 4 ಕೋಟಿ ರೂ. ನಷ್ಟು ಆಸ್ತಿ ಹಾಗೂ ಕೆ.ಕಲ್ಯಾಣ್ ಪತ್ನಿ ಅಶ್ವಿನಿ, ಅತ್ತೆ, ಮಾವ ಅಕೌಂಟ್‍ನಿಂದ 45 ಲಕ್ಷ ಹಣ ತನ್ನ ಅಕೌಂಟ್‍ಗೆ ವರ್ಗಾವಣೆ ಮಾಡಿಕೊಂಡಿದ್ದ. ಅಷ್ಟೇ ಅಲ್ಲದೇ ವಿವಿಧೆಡೆ ಇದ್ದ 6 ಆಸ್ತಿ ಶಿವಾನಂದ ವಾಲಿ ತನ್ನ ಹೆಸರಿಗೆ ಬರೆಸಿಕೊಂಡಿದ್ದ ಎನ್ನಲಾಗಿದೆ.

    ಅಥಣಿ, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿಯಲ್ಲಿರುವ 6 ಆಸ್ತಿ ಹಾಗೂ ಅಥಣಿ ತಾಲೂಕಿನ ಶಿರಹಟ್ಟಿ ಬಳಿಯ ತೋಟ ತನ್ನ ಹೆಸರಿಗೆ ಬರೆಸಿಕೊಂಡಿದ್ದ ಆರೋಪಿ, ಅಶ್ವಿನಿ ಅವರಿಂದ ಅಪಾರ ಪ್ರಮಾಣದ ಚಿನ್ನಾಭರಣ ಸಹ ಪಡೆದಿದ್ದ ಎಂಬ ಮಾಹಿತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸರಸ, ವಿರಸ, ಸಾಮರಸ್ಯ ಇದ್ದರೆ ಸಂಸಾರ – ಘಟನೆಯ ಬಗ್ಗೆ ಕಲ್ಯಾಣ್ ಸ್ಪಷ್ಟನೆ

    ಯಾರು ಈ ಶಿವಾನಂದ ವಾಲಿ?
    ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ಗ್ರಾಮದ ನಿವಾಸಿಯಾಗಿರುವ ಶಿವಾನಂದ ವಾಲಿ, ಮಾಟಮಂತ್ರದ ಹೆಸರಿನಲ್ಲಿ ಹಲವರಿಗೆ ವಂಚಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಸೆ.30ರಂದು ಬೆಳಗಾವಿಯ ಮಾಳಮಾರುತಿ ಠಾಣೆಗೆ ಕೆ.ಕಲ್ಯಾಣ್ ಅವರು ದೂರು ನೀಡಿದ್ದರು. ದೂರಿನಲ್ಲಿ ಶಿವಾನಂದ ವಾಲಿ, ಗಂಗಾ ಕುಲಕರ್ಣಿ ವಿರುದ್ಧ ಆರೋಪಿಸಿ ತನ್ನ ಪತ್ನಿ ಅಶ್ವಿನಿ, ಅತ್ತೆ, ಮಾವ ಅಪಹರಣವಾಗಿದೆ ಎಂದು ತಿಳಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿ ಶಿವಾನಂದ ವಾಲಿ ಬಂಧಿಸಿ ಜೈಲಿಗಟ್ಟಿದ್ದರು. ಸದ್ಯ ಕೆ.ಕಲ್ಯಾಣ್ ದೂರಿನ ಮೇರೆಗೆ ಶಿವಾನಂದ ವಾಲಿ ಬಂಧಿಸಿದ್ದ ಪೊಲೀಸರು ಆರೋಪಿಯ ಕರಾಳ ಮುಖವನ್ನು ಬಯಲು ಮಾಡಿದ್ದಾರೆ.

  • ಸುಖಾಂತ್ಯದತ್ತ ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯ ಕಲಹ

    ಸುಖಾಂತ್ಯದತ್ತ ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯ ಕಲಹ

    ಬೆಳಗಾವಿ: ಗೀತ ರಚನೆಕಾರ ಕೆ.ಕಲ್ಯಾಣ್ ಅವರ ದಾಂಪತ್ಯ ಕಲಹ ಸುಖಾಂತ್ಯ ಕಾಣುವ ಸಾಧ್ಯತೆ ಇದ್ದು, ವಿಚ್ಛೇದನ ಅರ್ಜಿ ವಾಪಸ್ ಪಡೆಯಲು ಕೆ.ಕಲ್ಯಾಣ್ ಪತ್ನಿ ಅಶ್ವಿನಿ ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.

    ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ಅವರು ವಿಚ್ಛೇದನ ಅರ್ಜಿ ವಾಪಸ್ ಪಡೆಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದ್ದು, ಇಂದು ಬೆಳಗಾವಿ ಕೌಟುಂಬಿಕ ನ್ಯಾಯಾಲಯಕ್ಕೆ ತೆರಳಿ ಅರ್ಜಿ ವಾಪಸ್ ಪಡೆಯುವ ಸಾಧ್ಯತೆ ಇದೆ.

    ಜೂನ್ 16ರಂದು ಬೆಳಗಾವಿಯ ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನ ಅರ್ಜಿ ಸಲ್ಲಿಸಿದ್ದ ಅಶ್ವಿನಿ ಅವರು, ಪತಿಯಿಂದ ವಿಚ್ಛೇದನ ಕೋರಿದ್ದರು. ಆದರೆ ಪ್ರಕರಣದಲ್ಲಿ ಆರೋಪಿ ಶಿವಾನಂದ ವಾಲಿ ಕರಾಳ ಮುಖ ಬಯಲಾಗುತ್ತಿದ್ದಂತೆ ಅಶ್ವಿನಿ ಅವರು ತಮ್ಮವನ್ನು ನಿರ್ಧಾರ ಬದಲಿಸಿಕೊಂಡಿದ್ದಾರೆ.

    ಕೆ.ಕಲ್ಯಾಣ್ ದೂರಿನ ಮೇರೆಗೆ ಶಿವಾನಂದ ವಾಲಿ ಬಂಧಿಸಿದ್ದ ಪೊಲೀಸರು ಆರೋಪಿಯ ಕರಾಳ ಮುಖವನ್ನು ಬಯಲು ಮಾಡಿದ್ದಾರೆ. ಅಲ್ಲದೇ ಅಶ್ವಿನಿ ಅವರಿಗೆ ಕೌನ್ಸಲಿಂಗ್ ಸಹ ಮಾಡಿ ತಪ್ಪಿನ ಅರಿವು ಮಾಡಿಸಿದ್ದಾರೆ. ಉಳಿದಂತೆ ಸೆ.30ರಂದು ಬೆಳಗಾವಿಯ ಮಾಳಮಾರುತಿ ಠಾಣೆಗೆ ಕೆ.ಕಲ್ಯಾಣ್ ಅವರು ದೂರು ನೀಡಿದ್ದರು. ದೂರಿನಲ್ಲಿ ತನ್ನ ಪತ್ನಿ ಅಶ್ವಿನಿ, ಅತ್ತೆ, ಮಾವ ಅಪಹರಣವಾಗಿದೆ ಎಂದು ತಿಳಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ಪೊಲೀಸರು ಆರೋಪಿ ಶಿವಾನಂದ ವಾಲಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಶಿವಾನಂದ ವಾಲಿ ಬೆಳಗಾವಿಯ ಅನಂತಶಯನ ಗಲ್ಲಿಯಲ್ಲಿರುವ ಅಶ್ವಿನಿ ಅವರ ಕುಟುಂಬದವರ ಆಸ್ತಿ ತನ್ನ ಹೆಸರಿಗೆ ಮಾಡಿಕೊಂಡಿದ್ದ. ಅಲ್ಲದೇ ಕುಟುಂಬದವರಿಂದ ಹಣವನ್ನು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದ.

    ಪ್ರಕರಣ ಬೆಳಕಿಗೆ ಬಂದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಶ್ವಿನಿ ಅವರು, ಪ್ರಕರಣದ ಸಂಬಂಧ ನನಗೆ ಕೌನ್ಸಲಿಂಗ್ ನಡೆಯುತ್ತಿದೆ. ಇದಾದ ಬಳಿಕ ಪ್ರಕರಣ ಕುರಿತು ಎಲ್ಲಾ ಮಾಹಿತಿಯನ್ನು ನೀಡುತ್ತೇನೆ ಎಂದಿದ್ದರು. ಇತ್ತ ಇದೇ ವೇಳೆ ಪ್ರತಿಕ್ರಿಯೆ ನೀಡಿದ್ದ ಕೆ.ಕಲ್ಯಾಣ್ ಅವರು, ನನ್ನ ಪತ್ನಿ ನಡುವೆ ಕಮ್ಯುನಿಕೇಷನ್ ಗ್ಯಾಪ್ ಆಗಿದೆ ಅಷ್ಟೇ. ನಮ್ಮ ಖಾಸಗಿ ಜೀವನ ಈಗ ಸಾರ್ವಜನಿಕವಾಗಿರುವ ಕಾರಣ ಎಲ್ಲಾ ಮಾಹಿತಿಯನ್ನು ನೀಡುತ್ತಿದ್ದೇನೆ. ನಾನು ನನ್ನ ಪತ್ನಿಯನ್ನು ತುಂಬಾ ಪ್ರೀತಿಸುತ್ತೇನೆ. ಮುಂದೇ ನಮ್ಮ ಸರಿಯಾಗುತ್ತದೆ ಎಂದು ಸ್ಪಷ್ಟಪಡಿಸಿದ್ದರು.

  • ನಾನು ನನ್ನ ಹೆಂಡತಿಯನ್ನು ಮನವೊಲಿಸಬೇಕಾಗಿಲ್ಲ: ಕೆ.ಕಲ್ಯಾಣ್

    ನಾನು ನನ್ನ ಹೆಂಡತಿಯನ್ನು ಮನವೊಲಿಸಬೇಕಾಗಿಲ್ಲ: ಕೆ.ಕಲ್ಯಾಣ್

    – ಕವನ, ಸಾಹಿತ್ಯದಿಂದ ಪ್ರೀತಿ ಪಡೆಯಲು ಸಾಧ್ಯವಿಲ್ಲ
    – ನನ್ನ ಪತ್ನಿಯನ್ನ ತುಂಬಾ ಪ್ರೀತಿಸುವೆ

    ಬೆಳಗಾವಿ: ನಾನು ನನ್ನ ಪತ್ನಿಯನ್ನು ಮನವೊಲಿಸಲು ಅವಳನ್ನ ತಬ್ಬಿಕೊಂಡು, ಮುತ್ತುಕೊಟ್ಟು. ತಲೆ ನೇವರಿಸಿ, ಕಾಲಿಗೆ ಬಿದ್ದು ಮನವೊಲಿಸಬಹುದು. ಆದರೆ ಇದೂ ನಮ್ಮ ಖಾಸಗಿ ಬದುಕು. ಈಗ ಸಾರ್ವಜನಿಕ ಆಗಿರುವುದರಿಂದ ಉತ್ತರಿಸುತ್ತಿರುವೆ. ನಮ್ಮಿಬ್ಬರ ಮಧ್ಯೆ ಕಮ್ಯುನಿಕೇಷನ್ ಗ್ಯಾಪ್ ಆಗಿದೆ ಎಂದು ಕೆ.ಕಲ್ಯಾಣ್ ಹೇಳಿದರು. ಇದನ್ನೂ ಓದಿ: ಸರಸ, ವಿರಸ, ಸಾಮರಸ್ಯ ಇದ್ದರೆ ಸಂಸಾರ – ಘಟನೆಯ ಬಗ್ಗೆ ಕಲ್ಯಾಣ್ ಸ್ಪಷ್ಟನೆ

    ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಆರೋಪಿಸಿದ್ದರು. ಆದರೆ ಕೆ.ಕಲ್ಯಾಣ್ ಪತ್ನಿಯ ಆರೋಪಿಗಳನ್ನು ತಳ್ಳಿ ಹಾಕಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೇಮಕವಿ, ಬೆಳಗಾವಿಗೆ ಬಂದ ಮೇಲೆ ಒಂದು ದಿನವೂ ನನ್ನ ವಿರುದ್ಧ ಮಾತನಾಡವರು ಇಂದು ಏಕಾಎಕಿ ಪತ್ನಿ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನನ್ನ ಪತ್ನಿ ಅವರ ಕುಟುಂಬದವರ ಜೊತೆಗೂ ಸಂಪರ್ಕದಲ್ಲೂ ಇಲ್ಲ. ಪತ್ನಿಯ ಆಸ್ತಿಯ ಮೇಲೆ ನನಗೆ ಆ ಶಕ್ತಿ ಇದ್ದಿದ್ದರೆ 15 ವರ್ಷದಲ್ಲಿ ಬರೆಸಿಕೊಳ್ಳಬಹುದಿತ್ತು. ಆದರೆ ನಾನು ನನ್ನ ಪತ್ನಿಯನ್ನ ತುಂಬಾ ಪ್ರೀತಿಸುವೆ. ನಾನು ಮಾನಸಿಕವಾಗಿ ದೈಹಿಕವಾಗಿ ಹಿಂಸೆ ಮಾಡಿಲ್ಲ. ಈ ಆರೋಪವನ್ನ ನಾನು ಒಪ್ಪಲ್ಲ ಎಂದು ಸ್ಪಷ್ಟಪಡಿಸಿದರು.

    ನನ್ನ ಹೆಂಡತಿ ತುಂಬಾ ಒಳ್ಳೆಯಳು. ನಾನು ಹಿಂಸೆ ಕೊಟ್ಟಿದ್ದರೆ ಇಷ್ಟು ವರ್ಷ ಸುಮ್ಮನೆ ಯಾಕೆ ಇರಬೇಕಿತ್ತು ಎಂದು ಪ್ರಶ್ನೆ ಮಾಡಿದರು. ಮೊದಲಿಗೆ ನಾನು ಮಾಟ, ಮಂತ್ರ ನಂಬಲ್ಲ. ಹೀಗಾಗಿ ನಾನೇ ಮಾಟ, ಮಂತ್ರದ ಮೂಲಕ ಯಾಕೆ ಆಸ್ತಿ ಪಡೆಯಲು ಪ್ಲ್ಯಾನ್ ಮಾಡಲಿ. ಒಂದು ವೇಳೆ ನನಗೆ ಬ್ಲ್ಯಾಕ್ ಮ್ಯಾಜಿಕ್ ಬಂದಿದ್ದರೆ ನನ್ನ ಪತ್ನಿ ಬೆಳಗಾವಿಗೆ ಹೋಗುವದನ್ನು ತಪ್ಪಿಸುತ್ತಿದ್ದೆ. ನಾನು ಬೆಂಗಳೂರಲ್ಲಿ ಇದ್ದುಕೊಂಡು ಆಕೆಯನ್ನು ವಾಪಸ್ ಕರೆಸಿಕೊಳ್ಳುತ್ತಿದ್ದೆ ಎಂದರು.

    ಕಳೆದ ನವೆಂಬರ್ ತಿಂಗಳಿನಲ್ಲಿ ಶಿವಾನಂದ ವಾಲಿಯರ ಹೆಸರು ಗೊತ್ತಾಗಿದ್ದು. ಶಿವಾನಂದ ವಾಲಿಗೆ 20 ಲಕ್ಷ ರೂಪಾಯಿ ಹೋಗಿದೆ. ಅಲ್ಲದೇ ನಾನು ಕೊಡಿಸಿದ ಒಡವೆಗಳು ಅವಳ ಬಳಿ ಇಲ್ಲ. ಶಿವಾನಂದ ವಾಲಿಗೆ ನನ್ನ ಸಂಬಂಧಿಕರು ಅಲ್ಲ. ನನ್ನ ಪತ್ನಿ ಬಳಿ ಮಾಂಗಲ್ಯ, ಕಾಲುಂಗುರ ಕೂಡ ಇಲ್ಲ. ಆದರೆ ನನ್ನ ಪತ್ನಿ ಆ ರೀತಿ ಮಾಡುವಂತರಲ್ಲ. ಹೀಗಾಗಿ ಏನೋ ನಡೆದಿದೆ. ನಮ್ಮ ಮನೆಯಲ್ಲಿ ದೆವ್ವ ಭೂತ ಕಾಣಿಸುತ್ತಾ ಇದೆ ಅಂತ ಗಂಗಾ ಕುಲಕರ್ಣಿ ನಮ್ಮ ಅತ್ತೆ ಮಾವನವರಿಗೆ ಹೆದರಿಸುತ್ತಿದ್ದರು ಎಂದು ಕೆ.ಕಲ್ಯಾಣ್ ಹೇಳಿದರು.

    ನನ್ನ ಪತ್ನಿಯ ಕುಟುಂಬಸ್ಥರು ನನ್ನ ಜೊತೆ ಸಂಪರ್ಕದಲ್ಲಿ ಇದ್ದಾರೆ. ಡೈವರ್ಸ್ ಅರ್ಜಿ ಹಾಕಿದ್ದರೆ ನನಗೆ ನೋಟಿಸ್ ಬರಬೇಕಿತ್ತು. ಆದರೆ ಶನಿವಾರ ನನಗೆ ಈ ವಿಚಾರ ಗೊತ್ತಾಗಿದೆ. ಪ್ರೀತಿಯನ್ನ, ಮನಸ್ಸುಗಳನ್ನ ಬಲವಂತವಾಗಿ ಕಟ್ಟಿ ಹಾಕಲು ಆಗಲ್ಲ. ನನ್ನ ಪತ್ನಿ ವಿವೇಚನೆಯಿಂದ ಮಾತನಾಡುತ್ತಿಲ್ಲ. ನನ್ನ ಪತ್ನಿಯ ಹೆಸರಿನ ಆಸ್ತಿ ಶಿವಾನಂದ ವಾಲಿ ಹೆಸರಿಗೆ ಹೋಗಿದೆ. ನಾನು ಮಾಟ ಮಂತ್ರ ನಂಬಲ್ಲ. ಆದರೆ ಶಿವಾನಂದ ವಾಲಿ ಮಾಟ ಮಂತ್ರದಿಂದ ನನ್ನ ಪತ್ನಿಯ ಮೇಲೆ ಬ್ಲಾಕ್ ಮ್ಯಾಜಿಕ್ ಮಾಡಿದ್ದಾರೆ. ಇದರಿಂದ ಸಂಸಾರದಲ್ಲಿ ಬಿರುಕು ಹುಟ್ಟಿಸಿದ್ದಾರೆ. ನಮ್ಮ ಜೀವನದಲ್ಲಿ ಬಿರುಕು ಇರಲಿಲ್ಲ. ಆದರೆ ಶಿವನಂದ ಬಿರುಕು ತಂದಿದ್ದಾರೆ ಎಂದಿದ್ದಾರೆ.

    ನಾನು ನನ್ನ ಪತ್ನಿಯನ್ನ ಮನವೊಲಿಸಬೇಕಾಗಿಲ್ಲ. ಆದರೆ ನನ್ನ ಪತ್ನಿ ನನ್ನ ಜೊತೆ ಮಾತನಾಡಲು ಬಿಡುತ್ತಿಲ್ಲ. ನಮ್ಮಿಬ್ಬರ ಮಧ್ಯೆ ಬಿರುಕು ಅನ್ನೋದೇ ಇಲ್ಲ. ಪತ್ನಿಯ ಜೊತೆ ಕೆಲ ಗಂಟೆಗಳ ಕಾಲ ಜೊತೆಗೆ ಇದ್ದರೆ ಸಾಕು ಸರಿ ಹೋಗುತ್ತದೆ. ನಾನು ನನ್ನ ಪತ್ನಿಯನ್ನ ಮನವೊಲಿಸಲು ಅವಳನ್ನ ತಬ್ಬಿಕೊಂಡು, ಮುತ್ತುಕೊಟ್ಟು. ತಲೆ ನೇವರಿಸಿ, ಕಾಲಿಗೆ ಬಿದ್ದು ಮನವೊಲಿಸಬಹುದು. ಆದರೆ ಇದೂ ನಮ್ಮ ಖಾಸಗಿ ಬದುಕು. ಈಗ ಸಾರ್ವಜನಿಕ ಆಗಿರುವುದರಿಂದ ಉತ್ತರಿಸುತ್ತಿರುವೆ. ನಮ್ಮಿಬ್ಬರ ಮಧ್ಯೆ ಕಮ್ಯೂನಿಕೇಷನ್ ಗ್ಯಾಪ್ ಆಗಿದೆ. ಕವನ, ಸಾಹಿತ್ಯದಿಂದ ಪ್ರೀತಿ ಪಡೆಯಲು ಸಾಧ್ಯವಿಲ್ಲ. ತೀರಾ ಮೀತಿ ಮೀರಿ ಡೈವರ್ಸ್ ಅಂತ ಬಂದರೆ ನ್ಯಾಯಾಲಯದಲ್ಲಿ ಕೌನ್ಸಲಿಂಗ್ ವೇಳೆ ನಾನು ಮನವೊಲಿಸುವ ಪ್ರಯತ್ನ ಮಾಡುವೆ ಎಂದರು.

    ಬಿರುಕುಗಳು ಸಹಜ. ಆದರೆ ಒತ್ತಡದಿಂದ ಬಗೆಹರಿಸಲು ಸಾಧ್ಯವಿಲ್ಲ. ಎಲ್ಲವೂ ಒಳ್ಳೆಯದಾಗುತ್ತೆ ಅನ್ನೋ ನಂಬಿಕೆ ಇದೆ. ಗಂಡ ಹೆಂಡತಿಯನ್ನ ಬದುಕಲು ಬಿಡಿ. ಹಣ ಹೋದರೆ ಗಳಿಸಬಹುದು. ಆದರೆ ಮನಸ್ಸುಗಳು ಒಡೆದರೆ ಒಂದಾಗೋದು ಕಷ್ಟ. ನನ್ನ ಪತ್ನಿಯ ಸಂಬಂಧಿಕರು ನನ್ನ ಜೊತೆ ಇದ್ದಾರೆ. ನನ್ನ ಪತ್ನಿಯನ್ನ ಕೌನ್ಸಲಿಂಗ್ ಮಾಡುತ್ತಿದ್ದಾರೆ. ಸದ್ಯಕ್ಕೆ ನನ್ನ ಪತ್ನಿ ಭಯದ ವಾತಾವರಣದಲ್ಲಿ ಇದ್ದಾರೆ. ಆಪ್ತ ಸಮಾಲೋಚನೆಗೆ ಕರೆದರೆ ನಾನು ಹೋಗುವೆ. ಪತ್ನಿಯೂ ಸಹ ಸುಧಾರಿಸಿಕೊಳ್ಳಲಿ, ನಾನು ಭೇಟಿ ಮಾಡಿ ಮನವೊಲಿಸುವೆ ಎಂದು ಕೆ.ಕಲ್ಯಾಣ್ ತಿಳಿಸಿದರು.

  • ಸರಸ, ವಿರಸ, ಸಾಮರಸ್ಯ ಇದ್ದರೆ ಸಂಸಾರ – ಘಟನೆಯ ಬಗ್ಗೆ ಕಲ್ಯಾಣ್ ಸ್ಪಷ್ಟನೆ

    ಸರಸ, ವಿರಸ, ಸಾಮರಸ್ಯ ಇದ್ದರೆ ಸಂಸಾರ – ಘಟನೆಯ ಬಗ್ಗೆ ಕಲ್ಯಾಣ್ ಸ್ಪಷ್ಟನೆ

    – ನಾನು, ನನ್ನ ಹೆಂಡ್ತಿ ಚೆನ್ನಾಗಿದ್ದೀವಿ

    ಬೆಳಗಾವಿ: ಪ್ರತಿಯೊಂದು ಸಂಸಾರದಲ್ಲೂ ಜಗಳ ನಡೆಯುತ್ತದೆ. ಸರಸ, ವಿರಸ, ಸಾಮರಸ್ಯ ಇದ್ದರೆ ಅದು ಸಂಸಾರ. ನಮ್ಮ ಸಂಸಾರ ಚೆನ್ನಾಗಿದೆ ಎಂದು ಪ್ರೇಮಕವಿ ಕೆ.ಕಲ್ಯಾಣ್ ತಮ್ಮ ದಾಂಪತ್ಯ ಜೀವನದ ಬಗ್ಗೆ ಸ್ಪಷ್ಟಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಕಲ್ಯಾಣ್, ನಮ್ಮ ತಂದೆ ತೀರಿಕೊಂಡು 14 ವರ್ಷ ಆಗಿದೆ. ನಮ್ಮ ತಾಯಿ ಎರಡೂವರೆ ವರ್ಷದ ಹಿಂದೆ ಸಾವನ್ನಪ್ಪಿದ್ದಾರೆ. ಅಲ್ಲಿಯತನಕ ನಾವೆಲ್ಲರೂ ಒಟ್ಟಿಗೆ ಇದ್ವಿ, ಆಮೇಲೆ ನಾನು, ನನ್ನ ಹೆಂಡತಿ ಒಟ್ಟಿಗೆ ಬೇರೆ ಮನೆಯಲ್ಲಿ ವಾಸಮಾಡುತ್ತಿದ್ವಿ. ನಮ್ಮ ಮನೆಯಿಂದ ಸ್ವಲ್ಪ ದೂರದಲ್ಲಿ ಪತ್ನಿಯ ಪೋಷಕರು ವಾಸಮಾಡುತ್ತಿದ್ದರು. ವಯಸ್ಸಾದರೂ ಯಾಕೆ ಬೇರೆ ಇರಬೇಕು ಎಂದು ನಮ್ಮ ಮನೆಗೆ ಕರೆದುಕೊಂಡು ಬಂದು ಒಟ್ಟಿಗೆ ವಾಸ ಮಾಡುತ್ತಿದ್ದೆವು ಎಂದರು.

    ಮೊದಲಿಗೆ ನಾನು ನನ್ನ ಹೆಂಡತಿ ಚೆನ್ನಾಗಿದ್ದೀವಿ. ನಮ್ಮಿಬ್ಬರಲ್ಲಿ ಯಾವುದೇ ಪರಸ್ಪರ ಗೊಂದಲಗಳಿಲ್ಲ. ನನ್ನ ಪತ್ನಿ ಬೆಳಗಾವಿಯವರು ನಾವಿಬ್ಬರು ಮದುವೆಯಾಗಿ 15 ವರ್ಷ ಆಗಿದೆ. ಪ್ರತಿಯೊಬ್ಬರ ಸಂಸಾರದಲ್ಲೂ ಸಣ್ಣಪುಟ್ಟ ಏಳು ಬೀಳುಗಳು ಆರೋಪಗಳಿರುತ್ತವೆ. ಸರಸ, ವಿರಸ, ಸಾಮರಸ್ಯ ಇದ್ದರೇನೆ ಅದು ಸಂಸಾರ. ನಮ್ಮ ಸಂಸಾರನೂ ಚೆನ್ನಾಗಿದೆ ಎಂದು ಸ್ಪಷ್ಟಪಡಿಸಿದರು.

    ಅತ್ತ, ಮಾವ ಬಂದ ಒಂದು ವಾರಕ್ಕೆ ಗಂಗಾ ಕುಲಕರ್ಣಿಯನ್ನು ಅಡಿಗೆ ಕೆಲಸಕ್ಕಾಗಿ ನೇಮಿಸಿಕೊಳ್ಳಲಾಗಿತ್ತು. ಆದರೆ ಆಕೆಯ ನಡವಳಿಕೆ ನನಗೂ ನನ್ನ ಪತ್ನಿಗೂ ಇಷ್ಟವಾಗಿರಲಿಲ್ಲ. ಅಲ್ಲದೇ ಆಕೆಯ ಬಂದ 4-5 ದಿನಗಳಲ್ಲಿ ಪತ್ನಿ, ಅತ್ತೆ, ಮಾವ ಯಾಕೋ ಸೈಲೆಂಟ್ ಆದರು. ನನಗೆ ಏನೋ ನಿಗೂಢತೆ ರೀತಿ ಕಾಣಿಸುತ್ತಿತ್ತು. ಒಂದು ದಿನ ಮಧ್ಯರಾತ್ರಿ ಅತ್ತೆ ದೇವರ ಮನೆಯಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ದೀಪ ಹಚ್ಚಿಕೊಂಡು ಬೆಳಗ್ಗೆ ಸುಮಾರು 3 ಗಂಟೆಯವರೆಗೂ ಪೂಜೆ ಮಾಡಲು ಶುರು ಮಾಡಿದರು. ಆಗ ಗಂಗಾ ಕುಲಕರ್ಣಿಯ ಸಲಹೆಯಂತೆ ಪೂಜೆ ಮಾಡುತ್ತಿದ್ದಾರೆ ಎಂಬುದು ನನಗೆ ಗೊತ್ತಾಯಿತು.

    ಪದೇ ಪದೇ ನನಗೆ ಗೊತ್ತಿರುವ ಗುರೂಜಿ ಇದ್ದಾರೆ. ಅವರ ಆಶೀರ್ವಾದ ಪಡೆದುಕೊಂಡರೆ ಒಳ್ಳೆದಾಗುತ್ತದೆ ಎಂದು ಗಂಗಾ ಕುಲಕರ್ಣಿ ಹೇಳುತ್ತಿದ್ದರು. ಒಮ್ಮೆ ಆ ವ್ಯಕ್ತಿಗೆ ಫೋನ್ ಮಾಡಿ ಕೊಟ್ಟಿದ್ದರು. ಆತನ ಹೆಸರು ಶಿವನಂದ ವಾಲಿ. ಪೂಜೆ ಮಾಡಿಸಲು ಹೇಳಿದ್ರು, ನಾನು ಒಪ್ಪಲಿಲ್ಲ. ಆದರೆ ನಮ್ಮ ಅತ್ತೆಯವರು ಗುರೂಜಿ ಜೊತೆ ಗಂಟೆಗಟ್ಟಲೇ ಫೋನಿನಲ್ಲಿ ಮಾತನಾಡುತ್ತಿದ್ದರು. ಜನವರಿ 9 ರಂದು ರಾತ್ರಿ ಬೆಳಗಾವಿಗೆ ಹೋಗಿ ಬರುತ್ತೇವೆ ಎಂದು ಪತ್ನಿ, ಅತ್ತೆ, ಮಾವ ಮೂವರು ಹೋದರು. ಆದರೆ ಜನವರಿ 10ರಂದು ಪತ್ನಿಯ ಫೋನ್ ಸ್ವಿಚ್ ಆಫ್ ಆಗಿತ್ತು. ಕೊನೆಗೆ ಜನವರಿ 17 ರಂದು ಬೆಳಗಾವಿಗೆ ಬಂದು ನೋಡಿದೆ. ಆಗ ಅತ್ತೆ ನನ್ನ ಪತ್ನಿಯನ್ನು ಭೇಟಿ ಮಾಡಲು ಬಿಡಲಿಲ್ಲ. ಅಲ್ಲಿಯೂ ಗಂಗಾ ಕುಲಕರ್ಣಿ ಹೇಳಿದಂತೆ ಪೂಜೆ ಮಾಡುತ್ತಿದ್ದರು ಎಂದು ಕಲ್ಯಾಣ್ ತಿಳಿಸಿದರು.

    ಒಂದು ದಿನ ಮೂವರು ಮನೆ ಖಾಲಿ ಮಾಡಿಕೊಂಡು ಬೇರೆ ಕಡೆ ಹೋಗಿದ್ದರು. ಆ ಮನೆಯಲ್ಲಿ ಗಂಗಾ ಕುಲಕರ್ಣಿ, ಶಿವನಂದ ವಾಲಿ ಪೂಜೆ ಮಾಡಲು ಶುರು ಮಾಡಿದ್ದರು. ಈ ವಿಚಾರ ಗೊತ್ತಾಗಿ ಬರುವಷ್ಟರಲ್ಲಿ ಆ ಮನೆಯನ್ನು ಖಾಲಿ ಮಾಡಿ ಬೇರೆ ಕಡೆ ಹೋಗಿದ್ದಾರೆ ಎಂದು ನನಗೆ ಗೊತ್ತಾಯಿತು. ಬೆಂಗಳೂರಿನ ಬಂದು ಎಲ್ಲ ಕಡೆ ಹುಡುಕಿದೆ. ಆಗ ಮೂವರು ಪತ್ತೆಯಾದರು. ಆದರೆ ಈ ವೇಳೆ ನನ್ನ ಪತ್ನಿಯನ್ನು ಮಾತನಾಡಲು ಬಿಡದೆ ರೂಮಿಗೆ ಕರೆದುಕೊಂಡು ಹೋದರು. ಆಕೆಯ ಕತ್ತಲ್ಲಿ ನಾನು ಕಟ್ಟಿದ್ದ ತಾಳಿಯೂ ಇರಲಿಲ್ಲ. ನನ್ನ ಪತ್ನಿ ಬೇರೆ ಅಪರಿಚಿತರ ಜೊತೆ ಮಾತನಾಡುವ ರೀತಿ ಮಾತಾಡಿದರು.

    ಅಲ್ಲದೇ ನನ್ನ ಪತ್ನಿಯ ತಾಯಿ ಸಂಬಂಧಿಕರಿಗೆ ಫೋನ್ ಮಾಡಿ ಲಕ್ಷಾಂತರ ಹಣಬೇಕು ಎಂದು ಕೇಳಿದ್ದಾರೆ. ಪೂಜೆ ಮಾಡಿಸಬೇಕು, ಇಲ್ಲವಾದರೆ ನಮ್ಮ ಪ್ರಾಣಕ್ಕೆ ಅಪಾಯ ಇದೆ. ಹಣವನ್ನು ಗುರೂಜಿಗೆ ಕೊಡಬೇಕು ಎಂದು ಹಣ ಕೇಳಿದ್ದಾರೆ. ಒಂದು ದಿನ ನನ್ನ ಪತ್ನಿಯ ಅಕೌಂಟ್‍ನಿಂದ ಏಕಾಏಕಿ 1.20 ಲಕ್ಷ ಹಣ ಶಿವಾನಂದ ವಾಲಿಗೆ ಅಕೌಂಟ್‍ಗೆ ವರ್ಗಾವಣೆಯಾಗಿದೆ. ಸಂಬಂಧಿಕರ ಬಳಿ ಪಡೆದಿದ್ದ ಹಣವನ್ನ ಶಿವಾನಂದ ವಾಲಿಗೆ ಕೊಟ್ಟಿದ್ದಾರೆ. ಅಲ್ಲದೇ ಬೆಳಗಾವಿಯಲ್ಲಿ ಅತ್ತೆ, ಮಾವ ಹೆಸರಿನಲ್ಲಿದ್ದ ಆಸ್ತಿಯೂ ಕೂಡ ಶಿವಾನಂದ ವಾಲಿಗೆ ವರ್ಗಾವಣೆ ಆಗಿದೆ ಎಂದರು.

    ಇದ್ದಕ್ಕಿದ್ದಂತೆ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಮೂರು ತಿಂಗಳಿನಿಂದ ಸಂಬಂಧಿಕರ ಸಂಪರ್ಕದಲ್ಲೂ ಇರಲಿಲ್ಲ. ನನ್ನ ಪತ್ನಿಯ ಕುಟುಂಬಸ್ಥರ ಜೊತೆ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ನಾನು ದೂರು ದಾಖಲಿಸಿರುವೆ. ದೂರಿನಲ್ಲಿ ನನ್ನ ಅತ್ತೆ, ಮಾವ ಕಾಣಿಸಿಕೊಳ್ಳುತ್ತಿಲ್ಲ. ನಮ್ಮ ಕುಟುಂಬಕ್ಕೆ ಸಂಬಂಧ ಇಲ್ಲದ ವ್ಯಕ್ತಿಗೆ ಆಸ್ತಿ, ಹಣ ಎಲ್ಲವನ್ನೂ ಬರೆದುಕೊಟ್ಟಿರುವ ಬಗ್ಗೆ ಹೇಳಿದ್ದೇನೆ. ದೂರು ನೀಡಿದ 48 ಗಂಟೆಯ ಒಳಗೆ ಅತ್ತೆ, ಮಾವ, ಪತ್ನಿ ಪತ್ತೆಯಾಗಿದ್ದಾರೆ. ಶಿವಾನಂದ ವಾಲಿ, ಗಂಗಾ ಕುಲಕರ್ಣಿ ಒಂದೇ ದಿನ ಫೋನ್ ಸ್ವಿಚ್ ಆಪ್ ಮಾಡಿದ್ದಾರೆ. ಅತ್ತೆ ಮಾವನಿಗೆ ವಯಸ್ಸಾಗಿದೆ. ಹೀಗಾಗಿ ಅವರು ಕಾಣಿಸಿಕೊಳ್ಳದ ಕಾರಣ ದೂರು ನೀಡಿದ್ದೆ. ಶಿವಾನಂದ ವಾಲಿ ಬಂಧನ ಆಗುತ್ತಿದ್ದಂತೆ ನನ್ಮ ಪತ್ನಿ ನನ್ನ ವಿರುದ್ಧ ಆರೋಪಗಳನ್ನ ಮಾಡಿದ್ದಾರೆ ಎಂದು ನಡೆದ ಘಟನೆಯ ಬಗ್ಗೆ ಕೆ.ಕಲ್ಯಾಣ್ ವಿವರವಾಗಿ ತಿಳಿಸಿದರು.

  • ಪ್ರೇಮಕವಿ ದಾಂಪತ್ಯದಲ್ಲಿ ಬಿರುಕು ಪ್ರಕರಣಕ್ಕೆ ಟ್ವಿಸ್ಟ್ – ಮಾಟ ಮಂತ್ರದ ವಸ್ತುಗಳು ಜಪ್ತಿ

    ಪ್ರೇಮಕವಿ ದಾಂಪತ್ಯದಲ್ಲಿ ಬಿರುಕು ಪ್ರಕರಣಕ್ಕೆ ಟ್ವಿಸ್ಟ್ – ಮಾಟ ಮಂತ್ರದ ವಸ್ತುಗಳು ಜಪ್ತಿ

    ಬೆಳಗಾವಿ: ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ವಶಕ್ಕೆ ಪಡೆದಿರುವ ಶಿವಾನಂದ ವಾಲಿ ಬಾಡಿಗೆ ಮನೆಯಲ್ಲಿ ಮಾಟ ಮಂತ್ರದ ವಸ್ತುಗಳು ಪತ್ತೆಯಾಗಿವೆ. ಇದನ್ನೂ ಓದಿ: ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು!

    ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ಗ್ರಾಮ ಶಿವಾನಂದ ವಾಲಿ ವಿರುದ್ಧ ಮಾಟ ಮಂತ್ರ ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಕುಟುಂಬಕ್ಕೆ ಶಿವಾನಂದ ವಾಲಿ ಆಪ್ತನಾಗಿದ್ದು, ಈತನ ವಿರುದ್ಧ ಕೆ.ಕಲ್ಯಾಣ್ ಅಪಹರಣದ ಆರೋಪ ಮಾಡಿದ್ದಾರೆ. ಹೀಗಾಗಿ ಪೊಲೀಸರು ಆತನ ಮನೆಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾಟ, ಮಂತ್ರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದ್ದು, ಪೊಲೀಸರು ಅವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಕೆ.ಕಲ್ಯಾಣ್ ಆರೋಪ:
    ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಉಂಟಾದ ಕಲಹ ಸದ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ತಮ್ಮ ಪತ್ನಿ ಅಶ್ವಿನಿ ಹಾಗೂ ಅತ್ತೆ, ಮಾವರನ್ನು ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಬಾಗಲಕೋಟೆ ಮೂಲದ ಗಂಗಾ ಕುಲಕರ್ಣಿ ಹಾಗೂ ಶಿವಾನಂದ ವಾಲಿ ಪುಸಲಾಯಿಸಿ ಅಪಹರಣ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪತ್ನಿ, ಅತ್ತೆ, ಮಾವನ ಅಕೌಂಟ್‍ನಿಂದ ಶಿವಾನಂದ ವಾಲಿ ತನ್ನ ಅಕೌಂಟ್‍ಗೆ 19.80ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ. ಜೊತೆಗೆ ಜಾಯಿಂಟ್ ಪ್ರಾಪರ್ಟಿಯನ್ನು ಶಿವಾನಂದ ವಾಲಿ ತನ್ನ ಹೆಸರಿಗೆ ಖರೀದಿ ಮಾಡಿಕೊಂಡಿದ್ದಾನೆ ಎಂದು ಕೆ.ಕಲ್ಯಾಣ್ ಸೆಪ್ಟೆಂಬರ್ 30ರಂದು ಮಾಳಮಾರುತಿ ಠಾಣೆಗೆ ದೂರು ನೀಡಿದ್ದು, ಎಫ್‍ಐಆರ್ ದಾಖಲಾಗಿದೆ.

    ಕೆ.ಕಲ್ಯಾಣ್ ದೂರಿನ ಮೇರೆಗೆ ಆರೋಪಿ ಶಿವಾನಂದ ವಾಲಿಯನ್ನು ಬೀಳಗಿ ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಬೀಳಗಿ ಪೊಲೀಸರು ಮಾಳಮಾರುತಿ ಠಾಣೆಗೆ ಶಿವಾನಂದನನ್ನು ಹಸ್ತಾಂತರಿಸಿದ್ದಾರೆ. ಸದ್ಯಕ್ಕೆ ಶಿವಾನಂದ ವಾಲಿ ಮಾಳಮಾರುತಿ ಠಾಣೆ ಪೊಲೀಸರ ವಶದಲ್ಲಿದ್ದಾನೆ. ಶಿವಾನಂದ ವಾಲಿ ಬಳಿ ಮಾಟ ಮಂತ್ರಕ್ಕೆ ಬಳಸುವ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮಾಟ, ಮಂತ್ರ ವಸ್ತುಗಳು ಪತ್ತೆ ಹಿನ್ನೆಲೆ ಪ್ರಕರಣ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ.

  • ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು!

    ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು!

    ಬೆಳಗಾವಿ: ಪ್ರೇಮಕವಿ, ಚಿತ್ರಸಾಹಿತಿ ಕೆ. ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

    ಕೆ. ಕಲ್ಯಾಣ್ ಅವರು ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಬೆಳಗಾವಿಯ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಕೆ. ಕಲ್ಯಾಣ್ ದೂರಿನ ಮೇರೆಗೆ ಸೆಪ್ಟೆಂಬರ್ 30ರಂದು ಎಫ್‍ಐಆರ್ ಕೂಡ ದಾಖಲಾಗಿತ್ತು.

    ಇತ್ತ ದೂರು ಸ್ವೀಕರಿಸಿದ ಪೊಲೀಸರು ಕೆ.ಕಲ್ಯಾಣ ಪತ್ನಿ ಅಶ್ವಿನಿ ಕರೆತಂದಿದ್ದಾರೆ. ಅಲ್ಲದೆ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಅಶ್ವಿನಿ ಅವರಿಂದ ಪೊಲೀಸರು ಮಾಹಿತಿಯನ್ನು ಪಡೆಯುತ್ತಿದ್ದಾರೆ.

    ಕಲ್ಯಾಣ್ ಪತ್ನಿ ಅಶ್ವಿನಿಯನ್ನು ಅತ್ತೆ, ಮಾವನನ್ನು ಪುಸಲಾಯಿಸಿ ಅಪಹರಣ ಮಾಡಿದ್ದಾರೆ. ಪತ್ನಿ ಅಶ್ವಿನಿ ಅಕೌಂಟ್‍ನಿಂದ 19 ಲಕ್ಷ ರೂಪಾಯಿ ತನ್ನ ಅಕೌಂಟ್‍ಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ಗ್ರಾಮದ ಶಿವಾನಂದ ವಾಲಿ, ಗಂಗಾ ಕುಲಕರ್ಣಿ ಎಂಬವರ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ  ಕಲ್ಯಾಣ್  ಪತ್ನಿ ಅಶ್ವಿನಿ ಕರೆತಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.