Tag: ಕೆ ಚಂದ್ರಶೇಖರ್ ರಾವ್

  • ಸಿಎಂ ಕೆಸಿಆರ್‌ಗೆ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಪುರಾವೆ ನೀಡಿದ ಅಸ್ಸಾಂ ಸಿಎಂ

    ಸಿಎಂ ಕೆಸಿಆರ್‌ಗೆ ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಪುರಾವೆ ನೀಡಿದ ಅಸ್ಸಾಂ ಸಿಎಂ

    ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹಾಗೂ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನಡುವಿನ ರಾಜಕೀಯ ಕಿತ್ತಾಟ ಮುದುವರಿದಿದ್ದು, ಹಿಮಂತ ಬಿಸ್ವಾ ಅವರು ಸರ್ಜಿಕಲ್ ಸ್ಟ್ರೈಕ್‍ನ ವೀಡಿಯೋ ಪುರಾವೆಯನ್ನು ನೀಡಿ ತಿರುಗೇಟು ನೀಡಿದ್ದಾರೆ.

    ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕೆಸಿಆರ್ ಅವರಿಗೆ ನಮ್ಮ ವೀರ ಸೇನೆಯ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆ ಇಲ್ಲಿದೆ. ನೀವು ನಮ್ಮ ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ಅವರನ್ನು ಅವಮಾನಿಸುತ್ತಿದ್ದಿರಿ. ನವ ಭಾರತವು ನಮ್ಮ ಸೇನೆಗೆ ಅವಮಾನವಾದರೆ ಸಹಿಸುವುದಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.

    2016ರಲ್ಲಿ ಪಾಕಿಸ್ತಾನದಲ್ಲಿ ಭಾರತ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರಲ್ಲಿ ನಡೆದ ವೈಮಾನಿಕ ದಾಳಿಯ ಪುರಾವೆಗಳನ್ನು ಕೇಂದ್ರವು ಪ್ರಸ್ತುತಪಡಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದರು. ಇದು ಭಾರೀ ಟೀಕೆಗೆ ಒಳಗಾಗಿತ್ತು. ಆದರೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರು ನಿನ್ನೆ ಪತ್ರಿಕಾಗೋಷ್ಠಿ ಮಾಡಿ ರಾಹುಲ್ ಗಾಂಧಿ ಅವರ ಪರ ವಹಿಸಿದ್ದರು.

    ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆ ಕೇಳಿದ್ದರಲ್ಲಿ ತಪ್ಪನಿಲ್ಲ, ಸರ್ಜಿಕಲ್ ಸ್ಟ್ರೈಕ್‍ನ ಪುರಾವೆಯನ್ನು ನನಗೂ ತೋರಿಸಿ. ಇದು ಭಾರತ ಸರ್ಕಾರದ ಜವಾಬ್ದಾರಿಯಾಗಿದೆ. ಜನರಲ್ಲಿ ಆತಂಕವಿದೆ. ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ. ಅದಕ್ಕಾಗುಯೇ ಜನರು ಸಾಕ್ಷಿಯನ್ನು ಕೇಳುತ್ತಿದ್ದಾರೆ ಎಂದ ಅವರು ಇದು ಪ್ರಜಾಪ್ರಜಾಭುತ್ವ ವ್ಯವಸ್ಥೆ ನೀವು ರಾಜನಲ್ಲ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಟ್ವೀಟ್ ವಿರುದ್ಧ ಒಂದು ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

    ಈ ಬಗ್ಗೆ ಮಾತನಾಡಿದ ಹಿಮಂತ ಬಿಸ್ವಾ ಕೆಸಿಆರ್ ಭಾರತ ಸೇನೆಯನ್ನು ಅನುಮಾನಿಸಿದ್ದಕ್ಕಾಗಿ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: 7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾಗಿದ್ದ ಭೂಪ ಅರೆಸ್ಟ್

  • ನನಗೆ ಸರ್ಜಿಕಲ್ ಸ್ಟ್ರೈಕ್ ಪುರಾವೆ ತೋರಿಸಿ: ಮೋದಿ ವಿರುದ್ಧ ಕೆಸಿಆರ್ ಕಿಡಿ

    ನನಗೆ ಸರ್ಜಿಕಲ್ ಸ್ಟ್ರೈಕ್ ಪುರಾವೆ ತೋರಿಸಿ: ಮೋದಿ ವಿರುದ್ಧ ಕೆಸಿಆರ್ ಕಿಡಿ

    – ಪಂಚರಾಜ್ಯ ಚುನಾವಣೆ ವೇಳೆಯೂ ಸದ್ದು ಮಾಡಿದ ಸರ್ಜಿಕಲ್ ಸ್ಟ್ರೈಕ್
    – ಬಿಜೆಪಿ ಸರ್ಕಾರ ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿ

    ಹೈದರಾಬಾದ್: ಲೋಕಸಭಾ ಚುನಾವಣೆಯ ವೇಳೆ ಸದ್ದು ಮಾಡಿದ್ದ ಸರ್ಜಿಕಲ್ ಸ್ಟ್ರೈಕ್ ಈಗ ಪಂಚರಾಜ್ಯ ಚುನಾವಣೆಯ ವೇಳೆ ಸದ್ದು ಮಾಡಿದೆ. ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ. ನಾನು ಸಹ ಪುರಾವೆ ನೋಡಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಕೇಳಿದ್ದರಲ್ಲಿ ಯಾವ ತಪ್ಪು ಇಲ್ಲ, ಸರ್ಕಾರ ಸರ್ಜಿಕಲ್ ಸ್ಟ್ರೈಕ್‍ನ ಸಾಕ್ಷಿ ನನಗೂ ತೊರಿಸಬೇಕು. ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ಅನ್ನು ಬಿಜೆಪಿ ರಾಜಕೀಯವಾಗಿ ಬಳಸುತ್ತಿದೆ. ಗಡಿಯಲ್ಲಿ ಹೋರಾಡುತ್ತಿರುವುದು ಸೇನೆಯಾಗಿದೆ. ಯಾರಾದರೂ ಶತ್ರುಗಳು ಸಾವನ್ನಪ್ಪುತ್ತಿದ್ದರೆ ಅದಕ್ಕೆ ಕಾರಣ ಸೈನಿಕರು. ಆ ಶ್ರೇಯಸ್ಸು ಸೇನೆಗೆ ಸೇರಬೇಕು ಬಿಜೆಪಿಗಲ್ಲ ಎಂದು ವಾಗ್ದಾಳಿ ನಡೆಸಿದರು.

    ಚುನಾವಣೆ ನಡೆಯುವ ರಾಜ್ಯಗಳಲ್ಲಿ ಮತದಾರರನ್ನು ತನ್ನ ಪರವಾಗಿ ಸಜ್ಜುಗೊಳಿಸಲು ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ಹೆಸರನ್ನು ಬಳಸಿಕೊಳ್ಳುತ್ತಿದೆ. ಸರ್ಜಿಕಲ್ ಸ್ಟ್ರೈಕ್ ಕುರಿತು ಪುರಾವೆ ಕೇಳುವುದರಲ್ಲಿ ತಪ್ಪೇನಿಲ್ಲ. ನಾನು ಕೂಡ ಈಗ ಸಾಕ್ಷಿಯನ್ನು ಕೇಳುತ್ತಿದ್ದೇನೆ. ಬಿಜೆಪಿಯು ಸರ್ಜಿಕಲ್ ದಾಳಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ನಾವು ಅದನ್ನು ಖಂಡಿತವಾಗಿ ಪ್ರಶ್ನಿಸುತ್ತೇವೆ ಎಂದು ಟೀಕಿಸಿದರು.

    ಬಿಜೆಪಿ ಸರ್ಕಾರ ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಅದನ್ನು ಸಾಧ್ಯವಾದಷ್ಟು ಬೇಗ ಅಧಿಕಾರದಿಂದ ಹೊರಗೆ ಕಳುಹಿಸಬೇಕು ಎಂದ ಅವರು, ರದ್ದಾದ ಕೃಷಿ ಮಸೂದೆಯಿಂದ ಹಿಡಿದು ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದವರೆಗೂ ಪ್ರಧಾನಿ ಮೋದಿಯನ್ನು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ಒಡಹುಟ್ಟಿದವರೇ ಕಾಂಗ್ರೆಸ್‌ ನಾಶ ಮಾಡ್ತಾರೆ, ಚಿಂತಿಸಬೇಡಿ: ಯೋಗಿ ಆದಿತ್ಯನಾಥ್‌

    ಈ ಹಿಂದೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬಾಲಾಕೋಟ್‍ನಲ್ಲಿ ಭಾರತ ಸೇನಾ ದಾಳಿ ನಡೆಸಿದ್ದು ನಿಜ ಎಂದು ಹೇಳುವ ಮೂಲಕ ಅಧಿಕೃತವಾಗಿ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದನ್ನು ಒಪ್ಪಿಕೊಂಡಿದ್ದರು. ಇದನ್ನೂ ಓದಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ – ಪ್ರಮುಖ ಆರೋಪಿ ಆಶಿಶ್ ಮಿಶ್ರಾ ನಾಳೆ ಬಿಡುಗಡೆ

    ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸ್ವತಃ ಈ ಬಗ್ಗೆ ಹೇಳಿಕೆ ನೀಡಿದ್ದರು. ಭಾರತದ ಸರ್ಜಿಕಲ್ ಸ್ಟ್ರೈಕ್‍ನಲ್ಲಿ ಅಪಾರ ಹಾನಿಯಾಗಿತ್ತು. ಬಾಂಬ್ ದಾಳಿಯಿಂದ ಹಾನಿ ಆಗಿತ್ತು ಎಂದು ಇಮ್ರಾನ್ ಖಾನ್ ತಿಳಿಸಿದ್ದರು. ಈ ಮೂಲಕ ಪಾಕಿಸ್ತಾನ ಭಾರತೀಯ ಸೇನೆಯಿಂದ ದಾಳಿ ಆಗಿರುವುದು ನಿಜ ಎಂದು ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದ್ದರು.

  • ತೆಲಂಗಾಣ ಜನರ ಆಶೀರ್ವಾದವಿದ್ದರೆ ನಾನು ಏನೂ ಮಾಡಲು ಸಿದ್ಧ: CM ಕೆಸಿಆರ್

    ತೆಲಂಗಾಣ ಜನರ ಆಶೀರ್ವಾದವಿದ್ದರೆ ನಾನು ಏನೂ ಮಾಡಲು ಸಿದ್ಧ: CM ಕೆಸಿಆರ್

    ಹೈದರಾಬಾದ್: ಕೇಂದ್ರ ಬಿಜೆಪಿ ಸರ್ಕಾರದ ಯಾವ ಪಿತೂರಿ, ತಂತ್ರಗಾರಿಕೆಗೂ ನಮ್ಮ ತೆಲಂಗಾಣ ಸರ್ಕಾರ ಬಲಿಯಾಗುವುದಿಲ್ಲ. ಆ ಸರ್ಕಾರವನ್ನೇ ಕಿತ್ತೊಗೆಯುತ್ತೇವೆ. ಕೇಂದ್ರ ಬಿಜೆಪಿ ಸರ್ಕಾರದ ಯಾವ ಬೆದರಿಕೆಗಳಿಗೂ ಬಗ್ಗುವುದಿಲ್ಲ, ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ವಾಗ್ಧಾಳಿ ಮಾಡಿದ್ದಾರೆ.

    ಜನಗಾಂವ್‍ನಲ್ಲಿ ತೆಲಂಗಾಣ ರಾಷ್ಟ್ರೀಯ ಸಮಿತಿ ಪಕ್ಷದ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ನಾನು ರಾಷ್ಟ್ರಮಟ್ಟದಲ್ಲಿ  ಹೋರಾಡಿ ಗುಣಾತ್ಮಕ ಬದಲಾವಣೆಗಳನ್ನು ತರುತ್ತೇನೆ. ನಮ್ಮ ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ಮೋದಿ ಸರ್ಕಾರ ಮುಂದಾಗದೆ ಇದ್ದರೆ, ನಾವೂ ಸುಮ್ಮನೆ ಇರುವುದಿಲ್ಲ. ಯಾವುದೇ ತಾರತಮ್ಯ ಮಾಡದೆ ಎಲ್ಲರನ್ನೂ ಒಂದೇ ತರ ನೋಡಿ, ಸಮಸ್ಯೆಗಳನ್ನು ಬಗೆಹರಿಸುವ ಇನ್ನೊಬ್ಬ ನಾಯಕನನ್ನು ಆಯ್ಕೆ ಮಾಡುತ್ತೇವೆ ಎಂದು ಬಿಜೆಪಿ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ಧಾರೆ.

    ತೆಲಂಗಾಣ ಜನರ ಆಶೀರ್ವಾದವಿದ್ದರೆ ನಾನು ಏನೂ ಮಾಡಲು ಸಿದ್ಧವಾಗಿದ್ದೆನೆ. ರಾಷ್ಟ್ರಮಟ್ಟದ ರಾಜಕೀಯದಲ್ಲಿ ಹೋರಾಡುತ್ತೇನೆ. ಜನರು ನನ್ನ ಬೆನ್ನ ಹಿಂದೆ ಇದ್ದು, ಬೆಂಬಲ ನೀಡಿದರೆ ಆ ದೆಹಲಿ ಕೋಟೆಯನ್ನೂ ನಾನು ಬೇಧಿಸಬಲ್ಲೆ ಎಂದು ಹೇಳಿದ ಕೆ.ಚಂದ್ರಶೇಖರ್ ರಾವ್, ಕೃಷಿ ಸುಧಾರಣೆ ಹೆಸರಲ್ಲಿ ಮೋದಿ ಸರ್ಕಾರ ಕೃಷಿ ಪಂಪ್‍ಸೆಟ್‍ಗಳಿಗೂ ವಿದ್ಯುತ್ ಮೀಟರ್ ಅಳವಡಿಸಲು ಯತ್ನಿಸುತ್ತಿದೆ. ಆದರೆ ನೀವು ನನ್ನನ್ನು ಕೊಂದರೂ ನಾನು ವಿದ್ಯುತ್ ಮೀಟರ್ ಅಳವಡಿಸುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ರಾಜಧಾನಿಗೂ ಕಾಲಿಟ್ಟ ಹಿಜಬ್ ವಿವಾದ – ಹಿಜಬ್ ತೆಗೆಯುವಂತೆ ಮಕ್ಕಳಿಗೆ ಶಿಕ್ಷಕರಿಂದ ಒತ್ತಾಯ

    ಈ ರಾಜ್ಯದ ಜನರಿಗೆ ಕುಡಿಯಲು ಮತ್ತು ನೀರಾವರಿಗೆ ಸಾಕಷ್ಟು ನೀರು ಒದಗಿಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿದ್ದೆನೆ. ತೆಲಂಗಾಣ ಅಭಿವೃದ್ಧಿಯಲ್ಲಿ ಯಾವುದೇ ರೀತಿಯಲ್ಲೂ ರಾಜಿಯಾಗುವುದಿಲ್ಲ ಎಂದಿದ್ದಾರೆ.

  • ಮಾಸ್ಕ್ ಧರಿಸದವರಿಗೆ 1,000 ರೂ. ದಂಡ ವಿಧಿಸಿದ ತೆಲಂಗಾಣ ಸಿಎಂ

    ಮಾಸ್ಕ್ ಧರಿಸದವರಿಗೆ 1,000 ರೂ. ದಂಡ ವಿಧಿಸಿದ ತೆಲಂಗಾಣ ಸಿಎಂ

    ಹೈದರಾಬಾದ್: ಮಹಾಮಾರಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಧ್ಯೆ ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಜನರು ಕೂಡ ಇದ್ದಾರೆ. ಹೀಗಾಗಿ ಮಾಸ್ಕ್ ಧರಿಸದೇ ಅಸಡ್ಡೆ ತೋರಿಸುವ ಜನರಿಗೆ 1,000ರೂ. ದಂಡ ವಿಧಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಗುರುವಾರ ಅಧಿಕಾರಿಗಳಿಗೆ ತಿಳಿಸಿದ್ದಾರೆ.

    ಗುರುವಾರ ಪ್ರಧಾನಿ ನರೇಂದ್ರ ಮೋದಿಯವರು ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ್ದ ಸಿಎಂ ಚಂದ್ರಶೇಖರ್ ನಂತರ ಆರೋಗ್ಯ ಅಧಿಕಾರಿಗಳೊಂದಿಗೆ ಪ್ರಸ್ತುತ ಕೊರೊನಾ ಸೋಂಕಿನ ಬಗ್ಗೆ ಚರ್ಚೆ ನಡೆಸಿದರು.

    ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಸಿಎಂ ಚಂದ್ರಶೇಖರ್ ರಾವ್ ಅಧಿಕಾರಿಗಳಿಗೆ ತಿಳಿಸಿದರು. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಎಲ್ಲ ಆರೋಗ್ಯ ಸಿಬ್ಬಂದಿಗೂ ಲಸಿಕೆ ನೀಡಬೇಕು ಹಾಗೂ ಈ ಪ್ರಕ್ರಿಯೆ ಈ ವಾರದೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದಾರೆ.

    ಕೊರೊನಾ ತಡೆಗಟ್ಟಲು ಮಾಸ್ಕ್ ಧರಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಮಾಸ್ಕ್ ಧರಿಸದಿದ್ದರೆ, ಪ್ರತಿ ವ್ಯಕ್ತಿಗೆ 1000 ರೂ. ದಂಡ ವಿಧಿಸಬೇಕು ಹಾಗೂ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆಯ ಡಿಜಿಪಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ 45 ವರ್ಷಕ್ಕೂ ಮೇಲ್ಪಟ್ಟ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವಂತೆ ಆಗ್ರಹಿಸಿದರು.

  • ಕೆಸಿಆರ್‌ ಕರೆದಿರುವ ಸಭೆಗೆ ನಾನು ಹೋಗ್ತೀನಿ: ಎಚ್‌ಡಿಕೆ

    ಕೆಸಿಆರ್‌ ಕರೆದಿರುವ ಸಭೆಗೆ ನಾನು ಹೋಗ್ತೀನಿ: ಎಚ್‌ಡಿಕೆ

    – ಬಿಜೆಪಿ ಎದುರಿಸಲು ಪ್ರಾದೇಶಿಕ ಪಕ್ಷಗಳ ಮೈತ್ರಿ
    – ಕಾಂಗ್ರೆಸ್‌ ದೇಶದಲ್ಲಿ ಅಪ್ರಸ್ತುತ

    ಮೈಸೂರು: ಬಿಜೆಪಿ ವಿರುದ್ಧ ಒಂದಾಗಲು ತೆಲಂಗಾಣ ಸಿಎಂ ಚಂದ್ರಶೇಖರ್‌ ರಾವ್‌ ಕರೆದ ಸಭೆಗೆ ನಾನು ಹೋಗುತ್ತಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

    ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್‌ ಅಪ್ರಸ್ತುತವಾಗಿದ್ದು, ಅವರೇ ವೇದಿಕೆಯನ್ನು ನಿರ್ಮಾಣ ಮಾಡಿಕೊಟ್ಟಿದ್ದಾರೆ. ಬಿಜೆಪಿಗೆ ಪರ್ಯಾಯವಾಗಲು ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂಬ ನಿಟ್ಟಿನಲ್ಲಿ ಚಂದ್ರಶೇಖರ್‌ ರಾವ್‌ ಮುಂದೆ ಸಭೆ ನಡೆಸಲಿದ್ದಾರೆ. ನನ್ನ ಜೊತೆ ಕೆಸಿಆರ್‌ ಕರೆ ಮಾಡಿ ಮಾತನಾಡಿದ್ದು ನಾನು ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು.

    ಏನಿದು ಒಕ್ಕೂಟ?
    ತೆಲಂಗಾಣದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬಿಜೆಪಿಯನ್ನು ಸೋಲಿಸಲು ಪ್ರಾದೇಶಿಕ ಪಕ್ಷಗಳನ್ನು ಸೇರಿಸಿ ಒಕ್ಕೂಟ ರಚಿಸಲು ಮುಂದಾಗಿದ್ದಾರೆ.

    ಈಗಾಗಲೇ ಕೆಸಿಆರ್ ದೇಶದ ವಿವಿಧ ರಾಜ್ಯಗಳಲ್ಲಿ ಇರುವ ಪ್ರಾದೇಶಿಕ ಪಕ್ಷಗಳ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು ಡಿಸೆಂಬರ್‌ನಲ್ಲಿ ತೆಲಂಗಾಣದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಲ್ಲ ನಾಯಕರು ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ.

    ಯಾರಿಗೆಲ್ಲ ಆಹ್ವಾನ?
    ಎನ್‍ಸಿಪಿ ನಾಯಕ ಶರದ್ ಪವಾರ್, ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಎಸ್‍ಪಿ ನಾಯಕಿ ಮಾಯಾವತಿ, ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್, ಬಿಜೆಡಿಯ ನವೀನ್ ಪಟ್ನಾಯಕ್, ಡಿಎಂಕೆ ಸ್ಟಾಲೀನ್ ಅವರಿಗೆ ಆಹ್ವಾನ ನೀಡಲಾಗಿದೆ.ಈ ಪಕ್ಷಗಳ ನಾಯಕರು ಮಾತ್ರವಲ್ಲದೇ ಇನ್ನೂ ಅನೇಕ ರಾಜಕೀಯ ಪಕ್ಷಗಳು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

    ಮೈತ್ರಿಕೂಟ ಯಾಕೆ?
    ಬಿಹಾರದಲ್ಲಿ ಬಿಜೆಪಿ ಜೊತೆಗೂಡಿ ಜೆಡಿಯು ಮತ್ತೆ ಅಧಿಕಾರಕ್ಕೆ ಏರಿದ ಜೊತೆಗೆ ದೇಶದ 59 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 41ರಲ್ಲಿ ಗೆಲುವು ಸಾಧಿಸಿದೆ. ಇಷ್ಟೇ ಅಲ್ಲದೇ ತೆಲಂಗಾಣ ಉಪ ಚುನಾವಣೆಯಲ್ಲೂ ಬಿಜೆಪಿ ಜಯಗಳಿಸಿದ ಬಳಿಕ ಮೈತ್ರಿಕೂಟ ರಚಿಸಲು ಕೆಸಿಆರ್ ಆಸಕ್ತಿ ವಹಿಸಿದ್ದಾರೆ.

     

    ತೆಲಂಗಾಣದ ದುಬ್ಬಕ್ಕ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ ರಘುನಂದನ್ ರಾವ್ ಟಿಆರ್‌ಎಸ್ ಅಭ್ಯರ್ಥಿ ವಿರುದ್ಧ 1,079 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಟಿಆರ್‌ಎಸ್ ಮಧ್ಯೆ ಸ್ಪರ್ಧೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಫಲಿತಾಂಶದ ದಿನ ಬಿಜೆಪಿ ಅಭ್ಯರ್ಥಿಗೆ ಕೊನೆಯಲ್ಲಿ ಮುನ್ನಡೆ ಸಿಕ್ಕಿದ ಪರಿಣಾಮ ಜಯಗಳಿಸಿದ್ದರು.

    ಈ ಚುನಾವಣೆಯ ಬಳಿಕ ಹೈದರಾಬಾದ್‌ ಪಾಲಿಕೆ ಚುನಾವಣೆಯಲ್ಲೂ ಬಿಜೆಪಿ ಭರ್ಜರಿ ಸಾಧನೆ ಮಾಡಿದೆ.150 ವಾರ್ಡ್‍ಗಳ ಪೈಕಿ 49ರಲ್ಲಿ ಬಿಜೆಪಿ ಜಯ ಸಾಧಿಸಿದೆ. ಸಿಎಂ ಚಂದ್ರಶೇಖರ್‌ ರಾವ್‌ ಅವರ ಟಿಆರ್‌ಎಸ್‌ 55, ಅಸಾದುದ್ದೀನ್ ಒವೈಸಿಯ ಎಐಎಂಎಂ 44 ವಾರ್ಡ್‌ಗಳನ್ನು ಗೆದ್ದುಕೊಂಡರೆ ಕಾಂಗ್ರೆಸ್‌ 2 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಸಾಧನೆಯೊಂದಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಬಳಿಕ ತೆಲಂಗಾಣದಲ್ಲಿ ಅಧಿಕಾರ ಹಿಡಿಯಲು ಮಾಡಿದ ಮೊದಲ ದೊಡ್ಡ ಪ್ರಯತ್ನ ಫಲ ನೀಡಿದೆ.

    ದಿನೇ ದಿನೇ ನೆಲೆ ಇಲ್ಲದ ರಾಜ್ಯದಲ್ಲಿ ಬಿಜೆಪಿ ಸಂಘಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹೊರತಾದ ಪಕ್ಷಗಳ ಜೊತೆ ಮೈತ್ರಿ ಮಾಡಲು ಕೆಸಿಆರ್ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷಗಳ ಜೊತೆ ಮಾತುಕತೆ ನಡೆಸಲು ಈ ತಿಂಗಳಿನಲ್ಲೇ ಸಭೆ ನಡೆಸಲಿದ್ದಾರೆ.

  • ಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಒಕ್ಕೂಟ ರಚನೆಗೆ ಮುಂದಾದ ಕೆಸಿಆರ್

    ಬಿಜೆಪಿ ಸೋಲಿಸಲು ಪ್ರಾದೇಶಿಕ ಪಕ್ಷಗಳ ಒಕ್ಕೂಟ ರಚನೆಗೆ ಮುಂದಾದ ಕೆಸಿಆರ್

    – ಡಿಸೆಂಬರ್‌ನಲ್ಲಿ ನಾಯಕರ ಜೊತೆ ಸಭೆ
    – ಹೈದರಾಬಾದ್ ಮಹಾನಗರ ಪಾಲಿಕೆಯ ಮೇಲೆ ಬಿಜೆಪಿ ಕಣ್ಣು

    ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬಿಜೆಪಿಯನ್ನು ಸೋಲಿಸಲು ಪ್ರಾದೇಶಿಕ ಪಕ್ಷಗಳನ್ನು ಸೇರಿಸಿ ಒಕ್ಕೂಟ ರಚಿಸಲು ಮುಂದಾಗಿದ್ದಾರೆ.

    ಈಗಾಗಲೇ ಕೆಸಿಆರ್ ದೇಶದ ವಿವಿಧ ರಾಜ್ಯಗಳಲ್ಲಿ ಇರುವ ಪ್ರಾದೇಶಿಕ ಪಕ್ಷಗಳ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು ಡಿಸೆಂಬರ್‌ನಲ್ಲಿ ತೆಲಂಗಾಣದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎಲ್ಲ ನಾಯಕರು ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ ಎಂದು ವರದಿಯಾಗಿದೆ.

    ಯಾರಿಗೆಲ್ಲ ಆಹ್ವಾನ?
    ಎನ್‍ಸಿಪಿ ನಾಯಕ ಶರದ್ ಪವಾರ್, ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಿಡಿಎಸ್ ಮುಖ್ಯಸ್ಥ ಎಚ್‍ಡಿ ಕುಮಾರಸ್ವಾಮಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಎಸ್‍ಪಿ ನಾಯಕಿ ಮಾಯಾವತಿ, ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್, ಬಿಜೆಡಿಯ ನವೀನ್ ಪಟ್ನಾಯಕ್, ಡಿಎಂಕೆ ಸ್ಟಾಲೀನ್ ಅವರಿಗೆ ಆಹ್ವಾನ ನೀಡಲಾಗಿದೆ.

    ಈ ಪಕ್ಷಗಳ ನಾಯಕರು ಮಾತ್ರವಲ್ಲದೇ ಇನ್ನೂ ಅನೇಕ ರಾಜಕೀಯ ಪಕ್ಷಗಳು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಮೈತ್ರಿಕೂಟದ ಸಭೆಗೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಲಾಗಿದ್ಯಾ ಇಲ್ಲವೋ ಎನ್ನುವುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ.

     

    ಮೈತ್ರಿಕೂಟ ಯಾಕೆ?
    ಬಿಹಾರದಲ್ಲಿ ಬಿಜೆಪಿ ಜೊತೆಗೂಡಿ ಜೆಡಿಯು ಮತ್ತೆ ಅಧಿಕಾರಕ್ಕೆ ಏರಿದ ಜೊತೆಗೆ ದೇಶದ 59 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 41ರಲ್ಲಿ ಗೆಲುವು ಸಾಧಿಸಿದೆ. ಇಷ್ಟೇ ಅಲ್ಲದೇ ತೆಲಂಗಾಣ ಉಪ ಚುನಾವಣೆಯಲ್ಲೂ ಬಿಜೆಪಿ ಜಯಗಳಿಸಿದ ಬಳಿಕ ಮೈತ್ರಿಕೂಟ ರಚಿಸಲು ಕೆಸಿಆರ್ ಆಸಕ್ತಿ ವಹಿಸಿದ್ದಾರೆ.

    ತೆಲಂಗಾಣದ ದುಬ್ಬಕ್ಕ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ ರಘುನಂದನ್ ರಾವ್ ಟಿಆರ್‌ಎಸ್ ಅಭ್ಯರ್ಥಿ ವಿರುದ್ಧ 1,079 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಟಿಆರ್‌ಎಸ್ ಮಧ್ಯೆ ಸ್ಪರ್ಧೆ ನಡೆಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಫಲಿತಾಂಶದ ದಿನ ಬಿಜೆಪಿ ಅಭ್ಯರ್ಥಿಗೆ ಕೊನೆಯಲ್ಲಿ ಮುನ್ನಡೆ ಸಿಕ್ಕಿದ ಪರಿಣಾಮ ಜಯಗಳಿಸಿದ್ದರು.

    ಹೈದರಾಬಾದ್ ಮೇಲೆ ಕಣ್ಣು:
    ಬಿಜೆಪಿ ಈಗಾಗಲೇ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆ ಗೆಲ್ಲಲು ಸಮಾವೇಶಗಳನ್ನು ಆಯೋಜಿಸುವ ಮೂಲಕ ಪಕ್ಷ ಸಂಘಟನೆ ಮಾಡುತ್ತಿದೆ. ಇದರ ಜೊತೆ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ(ಜಿಎಚ್‍ಎಂಸಿ) ಚುನಾವಣೆಯ ಮೇಲೆ ಕಣ್ಣು ಹಾಕಿದೆ.

    ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭುಪೇಂದ್ರ ಯಾದವ್ ನೇತೃತ್ವದಲ್ಲಿ ಜಿಎಚ್‍ಎಂಸಿ ಚುನಾವಣೆಗೆ ತಂಡ ರಚನೆಯಾಗಿದೆ. ಈ ತಂಡದಲ್ಲಿ ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್, ಬೆಂಗಳೂರಿನ ಬೊಮ್ಮನಹಳ್ಳಿಯ ಶಾಸಕ ಸತೀಶ್ ರೆಡ್ಡಿ, ಮಹಾರಾಷ್ಟ್ರದ ಬಿಜೆಪಿ ನಾಯಕ ಅಶಿಶ್ ಶೇಲಾರ್ ಗುಜರಾತಿನ ಪ್ರದೀಪ್ ಸಿಂಗ್ ವಾಘೇಲಾ ಇದ್ದಾರೆ.

    ದಿನೇ ದಿನೇ ಬಿಜೆಪಿಯ ದೇಶವ್ಯಾಪಿ ಸಂಘಟನೆ ನಡೆಸಿ ಚುನಾವಣೆಯಲ್ಲಿ ಜಯಗಳಿಸುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ತಡೆ ಹಾಕಲು ಕೆಸಿಆರ್‌ ಈಗ ಪ್ರಾದೇಶಿಕ ಪಕ್ಷಗಳ ನಾಯಕರ ಜೊತೆ ಮಾತುಕತೆ ನಡೆಸಿ ಕಮಲದ ಓಟಕ್ಕೆ ಬ್ರೇಕ್‌ ಹಾಕಲು ಮುಂದಾಗುತ್ತಿದ್ದಾರೆ.

  • ಸಚಿವಾಲಯದ ಆವರಣದಲ್ಲಿ ಮಸೀದಿ, ಮಂದಿರ, ಚರ್ಚ್ ನಿರ್ಮಾಣ: ತೆಲಂಗಾಣ ಸಿಎಂ

    ಸಚಿವಾಲಯದ ಆವರಣದಲ್ಲಿ ಮಸೀದಿ, ಮಂದಿರ, ಚರ್ಚ್ ನಿರ್ಮಾಣ: ತೆಲಂಗಾಣ ಸಿಎಂ

    – ಮುಸ್ಲಿಂ ಮುಖಂಡರ ಒತ್ತಡಕ್ಕೆ ಮಣಿದು ನಿರ್ಧಾರ

    ಹೈದರಾಬಾದ್: ಮುಸ್ಲಿಂ ಮುಖಂಡರ ಒತ್ತಡಕ್ಕೆ ಮಣಿದು ರಾಜ್ಯ ಸಚಿವಾಲಯದ ಆವರಣದಲ್ಲಿ 2 ಮಸೀದಿ, 1 ದೇವಸ್ಥಾನ, 1 ಚರ್ಚ್ ನಿರ್ಮಿಸುವ ನಿರ್ಧಾರವನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಕೈಗೊಂಡಿದ್ದಾರೆ.

    ಪ್ರಗತಿ ಭವನದಲ್ಲಿ ಮುಸ್ಲಿಂ ಸಮುದಾಯದ ಹಿರಿಯ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಸಿಎಂ ಚಂದ್ರಶೇಖರ್ ರಾವ್ ಈ ನಿರ್ಧಾರ ಕೈಗೊಂಡಿದ್ದಾರೆ. ಗಂಗಾ, ಯಮುನಾ, ತೆಹ್ಜೀಬ್ ಸಂಕೇತವಾಗಿ ಇವುಗಳನ್ನು ನಿರ್ಮಿಸುತ್ತಿರುವುದಾಗಿ ಚಂದ್ರಶೇಖರ್ ರಾವ್ ಹೇಳಿದ್ದಾರೆ. ಎಲ್ಲ ಪೂಜಾ ಸ್ಥಳಗಳಿಗೆ ಒಂದೇ ದಿನ ಅಡಿಪಾಯ ಹಾಕಿ, ಒಂದೇ ದಿನ ನಿರ್ಮಾಣ ಕಾರ್ಯ ಪ್ರಾರಂಭಿಸಿ, ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿದ್ದಾರೆ.

    ಸಚಿವಾಲಯದ ಹಳೆಯ ಕಟ್ಟಡವನ್ನು ಕೆಡುವುವಾಗ ಒಂದು ದೇವಸ್ಥಾನ, ಎರಡು ಮಸೀದಿಗಳಿಗೆ ಹಾನಿಯಾಗಿತ್ತು, ಈ ಹಿನ್ನೆಲೆ ಮುಸ್ಲಿಂ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಚಂದ್ರಶೇಖರ್ ರಾವ್ ಈ ನಿರ್ಧಾರ ಕೈಗೊಂಡಿದ್ದಾರೆ.

    ಒಂದು ಇಮಾಮ್ ಕ್ವಾರ್ಟರ್ಸ್ ಸೇರಿ ತಲಾ 750 ಚ.ಅಡಿ ಒಟ್ಟು 1,500 ಚ.ಅಡಿಯಲ್ಲಿ 2 ಮಸೀದಿಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದೆ. ಈ ಹಿಂದೆ ಮಸೀದಿಗಳಿದ್ದ ಜಾಗದಲ್ಲೇ ಹೊಸ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಹೊಸ ಮಸೀದಿಗಳನ್ನು ನಿರ್ಮಿಸಿದ ಬಳಿಕ ರಾಜ್ಯ ವಕ್ಫ್ ಬೋರ್ಡ್ ಗೆ ಹಸ್ತಾಂತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

    ದೇವಸ್ಥಾನವನ್ನು 1,500 ಚ.ಅಡಿ ಜಾಗದಲ್ಲಿ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕ ಇದನ್ನೂ ಸಹ ಧಾರ್ಮಿಕ ದತ್ತಿ ಇಲಾಖೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲ ಬೆಳವಣಿಗೆ ನಡೆಯುತ್ತಿರುವಾಗಲೇ ಕ್ರಿಶ್ಚಿಯನ್ ಸಮುದಾಯದವರು ಸಹ ಚರ್ಚ್‍ಗಾಗಿ ಬೇಡಿಕೆ ಇಟ್ಟಿದ್ದಾರೆ. ಹೊಸ ಸಚಿವಾಲಯದ ಕಟ್ಟಡದ ಆವರಣದಲ್ಲಿ ಚರ್ಚ್ ಸಹ ಇರಬೇಕು ಎಂದು ಬೇಡಿಕೆ ಇಟ್ಟಿದೆ. ಹೀಗಾಗಿ ಚರ್ಚ್ ಸಹ ನಿರ್ಮಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

    ರಾಜ್ಯವು ಎಲ್ಲ ಧರ್ಮಗಳನ್ನು ಸಮಾನವಾಗಿ ಪರಿಗಣಿಸುತ್ತದೆ. ತೆಲಂಗಾಣ ಧಾರ್ಮಿಕ ಸಹಿಷ್ಣುತೆಯನ್ನು ಪಾಲಿಸುತ್ತದೆ ಎಂದು ಸಿಎಂ ಕೆಸಿಆರ್ ಹೇಳಿದ್ದಾರೆ. ಈ ಕುರಿತು ತೆಲಂಗಾಣದಲ್ಲಿ ಇದೀಗ ಭಾರೀ ಚರ್ಚೆ ನಡೆಯುತ್ತಿದೆ.

    ಅನಾಥ ಮುಸ್ಲಿಂ ಮಕ್ಕಳಿಗಾಗಿ ಆಶ್ರಯ ಕೇಂದ್ರ ನಿರ್ಮಾಣ ಕಾಮಗಾರಿ ಸಹ ಅಂತಿಮ ಹಂತದಲ್ಲಿದ್ದು, ಇನ್ನೂ 18 ಕೋಟಿ ರೂ.ಗಳನ್ನು ಇದೀಗ ಕೆಸಿಆರ್ ಸರ್ಕಾರ ಬಿಡುಗಡೆ ಮಾಡುತ್ತಿದೆ. ಅಲ್ಲದೆ ಹೈದರಾಬಾದ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ಮುಸ್ಲಿಂ ಕೇಂದ್ರವನ್ನು ಸ್ಥಾಪಿಸಲು ಸಹ ಕೆಸಿಆರ್ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಜಾಗವನ್ನು ಸಹ ಸರ್ಕಾರ ಗುರುತಿಸಿದೆ.

    ಅಲ್ಲದೆ ಮುಸ್ಲಿಂ ಸಮುದಾಯದವರಿಗಾಗಿ ಸಮಾಧಿ ಸ್ಥಳ(ಖಬ್ರಾಸ್ತಾನ್)ಗಳನ್ನು ಸಹ ಗುರುತಿಸಲು ಸರ್ಕಾರ ಮುಂದಾಗಿದ್ದು, ನಗರದ ಹಲವು ಸ್ಥಳಗಳಲ್ಲಿ 150-200 ಖಬ್ರಾಸ್ತಾನ್ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಇಷ್ಟು ಮಾತ್ರವಲ್ಲದೆ ಉರ್ದುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಗುರುತಿಸಲು ಕೆಸಿಆರ್ ಮುಂದಾಗಿದ್ದಾರೆ. ಉರ್ದು ಭಾಷೆಯ ರಕ್ಷಣೆ, ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ಆಯೋಜಿಸಲು ಕೆಸಿಆರ್ ಯೋಜನೆ ರೂಪಿಸಿದ್ದಾರೆ. ಸರ್ಕಾರ ನಡೆಸಿದ ಸಭೆಯಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಇವರ ಸಹೋದರ ಅಕ್ಬರುದ್ದೀನ್ ಓವೈಸಿ ಸಹ ಸಭೆಯಲ್ಲಿ ಭಾಗವಹಿಸಿದ್ದರು.

  • ಆಂಧ್ರದಲ್ಲಿ ಎನ್ಆರ್‌ಸಿ ಜಾರಿ ಇಲ್ಲ- ಜಗನ್ ಘೋಷಣೆ

    ಆಂಧ್ರದಲ್ಲಿ ಎನ್ಆರ್‌ಸಿ ಜಾರಿ ಇಲ್ಲ- ಜಗನ್ ಘೋಷಣೆ

    ಹೈದರಾಬಾದ್: ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್‌ಸಿ) ಜಾರಿ ವಿರುದ್ಧ ದೇಶಾದ್ಯಂತ ವಿರೋಧ ವ್ಯಕ್ತವಾಗಿ ಪ್ರತಿಭಟನೆ ಕಾವು ಹೆಚ್ಚಾಗುತ್ತಿದೆ. ಈ ನಡುವೆ ಎನ್‍ಆರ್ ಸಿಯನ್ನು ತಮ್ಮ ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂಬ ಮುಖ್ಯಮಂತ್ರಿಗಳ ಸಾಲಿಗೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಹೊಸ ಸೇರ್ಪಡೆಯಾಗಿದ್ದಾರೆ.

    ರಾಜ್ಯಗಳಲ್ಲಿ ಎನ್‍ಆರ್ ಸಿ ಜಾರಿ ಕುರಿತು ಪಕ್ಷದ ಸಂಸದರು ಅಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಜಗನ್ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಗನ್, ಎನ್ಆರ್‌ಸಿ ಜಾರಿ ಮಾಡುವ ಕುರಿತು ನನ್ನ ಸಹೋದದರಿಗೆ ಅಭಿಪ್ರಾಯ ತಿಳಿಸುವಂತೆ ಹೇಳಿದ್ದೆ. ಸದ್ಯ ಈ ಕುರಿತು ಸ್ಪಷ್ಟ ನಿರ್ಧಾರವನ್ನು ಮಾಡಿದ್ದು, ಆಂಧ್ರಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಎನ್ಆರ್‌ಸಿ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದಿದ್ದಾರೆ.

    ಎನ್‍ಆರ್ ಸಿ ಬೆಂಬಲ ನೀಡದಿರುವ ಕುರಿತ ಈ ನಿರ್ಧಾರ ಪ್ರಕಟಿಸುವ ಮುನ್ನ ಜಗನ್, ತಮ್ಮ ಸಂಪುಟದ ಉಪಮುಖ್ಯಮಂತ್ರಿ ಅಜ್ಮತ್ ಬಾಷಾ ಅವರ ಅಭಿಪ್ರಾಯ ಪಡೆದಿದ್ದರು. ಜಗನ್ ಅವರ ಈ ನಿರ್ಧಾರ ಎನ್‍ಆರ್ ಸಿ ಜಾರಿ ಮಾಡುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳುದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ಅವರ ಮೇಲಿನ ಒತ್ತಡವನ್ನು ಹೆಚ್ಚಿಸಿದೆ. ಕಾಂಗ್ರೆಸ್ ಪಕ್ಷ ಸಹ ಸಿಎಂ ಕೆಸಿಆರ್ ಅವರಿಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಭಾನುವಾರವರೆಗೂ ಡೆಡ್ ಲೈನ್ ನೀಡಿತ್ತು. ಆದರೆ ಈ ಕುರಿತು ಕೆಸಿಆರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ‘ಈ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ಪ್ರಾಮಾಣಿಕ ನಾಗರಿಕರನ್ನು ರಕ್ಷಿಸುತ್ತದೆ. ಕೇಂದ್ರ ಸರ್ಕಾರ ಆದೇಶಗಳನ್ನು ನೀಡಿದಾಗ ಈ ಕುರಿತು ಮಾತನಾಡೋಣ’ ಎಂಬುವುದು ಅವರ ಸದ್ಯದ ನಿರ್ಧಾರ ಎಂದು ಅವರ ಅಪ್ತ ವಲಯದಿಂದ ಕೇಳಿ ಬಂದಿದೆ.

    ದೇಶದಲ್ಲಿ ಇದುವರೆಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ್ ಸಿಎಂ ನಿತಿಶ್ ಕುಮಾರ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಮಧ್ಯ ಪ್ರದೇಶ ಸಿಎಂ ಕಮಲ್‍ನಾಥ್, ರಾಜಸ್ಥಾನ ಸಿಎಂ ಆಶೋಕ್ ಗೆಹ್ಲೋಟ್, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಎನ್ಆರ್‌ಸಿ ಜಾರಿ ಮಾಡುವುದಿಲ್ಲ ಎಂದಿದ್ದಾರೆ.

  • ಸ್ವಗ್ರಾಮದ ಪ್ರತಿ ಕುಟುಂಬಕ್ಕೂ 10 ಲಕ್ಷ ರೂ. ಘೋಷಿಸಿದ ಕೆಸಿಆರ್

    ಸ್ವಗ್ರಾಮದ ಪ್ರತಿ ಕುಟುಂಬಕ್ಕೂ 10 ಲಕ್ಷ ರೂ. ಘೋಷಿಸಿದ ಕೆಸಿಆರ್

    ಹೈದರಾಬಾದ್: ತಮ್ಮ ಸ್ವಗ್ರಾಮ ಚಿಂತಾಮಡಕ ಗ್ರಾಮದಲ್ಲಿ ನೆಲೆಸಿರುವ ಪ್ರತಿ ಕುಟುಂಬಕ್ಕೂ 10 ಲಕ್ಷ ರೂಪಾಯಿ ಹಣ ನೀಡುವುದಾಗಿ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರು ಘೋಷಿಸಿದ್ದಾರೆ.

    ಚಿಂತಾಮಡಕದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಚಿಂತಾಮಡಕ ಗ್ರಾಮದಲ್ಲಿ ಇರುವ ಪ್ರತಿ ಕುಟುಂಬಕ್ಕೂ 10 ಲಕ್ಷ ರೂ. ನೀಡುವುದಾಗಿ ಹೇಳಿದ್ದಾರೆ. ಅಲ್ಲದೆ ಈ ಹಣದಿಂದ ಕೃಷಿಗೆ ಬೇಕಾದ ಅಗತ್ಯ ಉಪಕರಣಗಳನ್ನು ಖರೀದಿಸಿ. ಉತ್ತಮ ಸೌಕರ್ಯವಿರುವ ಮನೆಗಳನ್ನು ಕಟ್ಟಿಸಿಕೊಳ್ಳಿ. ಆಧುನಿಕ ಸೋಲಾರ್ ಶಕ್ತಿಯ ಉಪಕರಣ ಬಳಸಿ, ಈ ಹಣವನ್ನು ಸದುಪಯೋಗ ಮಾಡಿಕೊಳ್ಳಿ ಎಂದಿದ್ದಾರೆ.

    ಅಷ್ಟೇ ಅಲ್ಲದೆ ಗ್ರಾಮದಲ್ಲಿ ರಸ್ತೆ, ದೇಗುಲ ಹಾಗೂ ಇತರೇ ಸೌಕರ್ಯವನ್ನು ಕಲ್ಪಿಸುವ ಉದ್ದೇಶದಿಂದ ಅಭಿವೃದ್ಧಿಗಾಗಿ ಅನುದಾನವನ್ನು ಕೂಡ ಸರ್ಕಾರದಿಂದ ಬಿಡುಗಡೆ ಮಾಡಲಾಗುತ್ತಿದೆ.

    ಇದು ನನ್ನ ಕರ್ತವ್ಯ. ನಿಮಗೆ ಅನುಕೂಲವಾಗಬೇಕು, ಪ್ರತಿಯೊಬ್ಬ ವ್ಯಕ್ತಿ ಕೂಡ ಆರೋಗ್ಯವಾಗಿರಬೇಕು, ಸಿರಿವಂತನಾಗಬೇಕು ಎಂದು ಚಿಂತಾಮಡಕವನ್ನು ಒಂದು ಮಾದರಿ ಗ್ರಾಮವನ್ನಾಗಿಸಬೇಕೆಂಬ ಆಸೆಯನ್ನು ಕೆಸಿಆರ್ ವ್ಯಕ್ತಪಡಿಸಿದರು. ಅಲ್ಲದೆ ಚಿಂತಾಮಡಕದ ಜನರ ಆಶೀರ್ವಾದವೇ ಈ ಯಶಸ್ಸಿಗೆ ಕಾರಣ. ರಾಜಕೀಯಕ್ಕೆ ಬರಲು ತೆಲಂಗಾಣ ಚಳುವಳಿ ನಡೆಯಲು ಸಿದ್ಧಿಪೇಟೆ ಪ್ರೇರಣೆ ಎಂದು ಜನರನ್ನು ಕೆಸಿಆರ್ ಅಭಿನಂದಿಸಿದರು.

    ಸಿದ್ಧಿಪೇಟೆ ಅಭಿವೃದ್ಧಿಗೆ 25 ಕೋಟಿ, ರಂಗನಾಯಕ ಸಾಗರ ಕೆರೆ ಅಭಿವೃದ್ಧಿಗೆ 5 ಕೋಟಿ ಮತ್ತು ಸಿದ್ಧಿಪೇಟೆ ವಿಧಾನಸಭೆ ವ್ಯಾಪ್ತಿಗೆ ಬರುವ ಪ್ರತಿ ಪಂಚಾಯ್ತಿಗೂ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಜೊತೆ ಮುಸ್ತಾಬಾದ್ ಮತ್ತು ಗುಡೂರ್ ಗ್ರಾಮಕ್ಕೆ ತಲಾ 1 ಕೋಟಿ ಹಾಗೂ ಡಬ್ಬಾಕ್ ಗ್ರಾಮಕ್ಕೆ 10 ಕೋಟಿ ರೂ. ಅನುದಾನ ನೀಡುವುದಾಗಿ ಜನರಿಗೆ ಮಾತು ಕೊಟ್ಟಿದ್ದಾರೆ.

    ಈ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನೂ ಕೂಡ ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕೆಸಿಆರ್ ಸೂಚಿಸಿದ್ದು, ಮತ್ತೆ ನವೆಂಬರ್ ನಲ್ಲಿ ಗ್ರಾಮಗಳಿಗೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದಾರೆ.

  • ನೀತಿ ಆಯೋಗದ ಮೊದಲ ಸಭೆಗೆ ಮೂವರು ಮುಖ್ಯಮಂತ್ರಿಗಳು ಗೈರು

    ನೀತಿ ಆಯೋಗದ ಮೊದಲ ಸಭೆಗೆ ಮೂವರು ಮುಖ್ಯಮಂತ್ರಿಗಳು ಗೈರು

    ನವದೆಹಲಿ: ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ನೀತಿ ಆಯೋಗದ ಸಭೆಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆ.

    ನೀತಿ ಆಯೋಗದ ಐದನೇ ಆಡಳಿತ ಮಂಡಳಿ ಸಭೆ ಶನಿವಾರ ನಡೆದಿದ್ದು, ಸಭೆಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್(ಕೆಸಿಆರ್) ಅವರು ಸಭೆಗೆ ಗೈರಾಗಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜನಯಗಳಿಸಿ ಅಧಿಕಾರದ ಗದ್ದುಗೆಯನ್ನೇರಿದ ಎನ್‍ಡಿಎ ಸರ್ಕಾರದ ಮೊದಲ ನೀತಿ ಆಯೋಗದ ಸಭೆಯನ್ನು ಮೂವರು ಮುಖ್ಯಮಂತ್ರಿಗಳು ತಿರಸ್ಕರಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ರಾಷ್ಟ್ರದ ಪ್ರಮುಖ ನಾಯಕರು, ಅಧಿಕಾರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‍ಗಳು ಭಾಗವಹಿಸಿದ್ದರು.

    ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಹವಾಮಾನದ ವೈಪರಿತ್ಯದಿಂದಾಗಿ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ. ಅಮರಿಂದರ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಕುರಿತು ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕರೆದಿದ್ದ ಸಭೆಗೂ ಗೈರಾಗಿದ್ದಾರೆ.

    ಕಾಲೇಶ್ವರಂ ನೀರಾವರಿ ಯೋಜನೆಗೆ ಚಾಲನೆ ನೀಡುತ್ತಿರುವ ಹಿನ್ನೆಲೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಟಿಆರ್‍ಎಸ್ ನಾಯಕ ಹಾಗೂ ಮಾಜಿ ಸಂಸದ ಬಿ.ವಿನೋದ್ ಕುಮಾರ್ ಮಾಹಿತಿ ನೀಡಿದ್ದಾರೆ.

    ಈ ಕುರಿತು ಅಧಿಕಾರಿಗಳು ಪ್ರತಿಕ್ರಿಯಿಸಿ ಗುರುವಾರದ ನಂತರ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವ ಕುರಿತು ಕೆಸಿಆರ್ ಖಚಿತಪಡಿಸಿದ್ದರು. ಇದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ರೈತಬಂಧು ಯೋಜನೆ ಕುರಿತು ನೀತಿ ಆಯೋಗದ ಸಭೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ತಯಾರಾಗಿದ್ದರು. ಈ ಯೋಜನೆ ವಿವಿಧ ರಾಜ್ಯಗಳಿಗೆ ಮಾದರಿಯಾಗಲಿದೆ ಎಂದು ಸಹ ಹೇಳಿದ್ದರು. ಆದರೆ, ದಿಢೀರನೆ ನೀತಿ ಆಯೋಗದ ಸಭೆಯನ್ನು ಕೆಸಿಆರ್ ತಿರಸ್ಕರಿಸಲು ಕಾರಣ ಏನೆಂಬುದು ತಿಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಾಲೇಶ್ವರಂ ನೀರಾವರಿ ಯೋಜನೆ ಉದ್ಘಾಟನೆಗೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲು ಪ್ರಧಾನಿಗಳ ಭೇಟಿಗೆ ಅನುಮತಿ ಕೋರಿದ್ದರು. ಆದರೆ, ಪ್ರಧಾನಿ ಕಾರ್ಯಾಲಯದಿಂದ ಅನುಮತಿ ದೊರೆಯದ ಹಿನ್ನೆಲೆ ಕೆಸಿಆರ್ ಅವರು ಅಸಮಾಧಾನಗೊಂಡು ನೀತಿ ಆಯೋಗದ ಸಭೆಗೆ ಗೈರಾಗುತ್ತಿದ್ದಾರೆ ಎಂದು ವರದಿಯಾಗಿದೆ.

    ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯೊಂದಿಗೆ ತಮ್ಮ ಅಸಮಾಧಾನವನ್ನು ಮುಂದುವರಿಸಿದ್ದು, ನೀತಿ ಆಯೋಗದ ಸಭೆಯಿಂದ ಏನೂ ಫಲಪ್ರದವಿಲ್ಲ. ರಾಜ್ಯದ ಯೋಜನೆಗಳಿಗೆ ಹಣ ನೀಡುವ ಅಧಿಕಾರ ನೀತಿ ಆಯೋಗಕ್ಕಿಲ್ಲ ಎಂದು ದೂರಿದ್ದಾರೆ.