Tag: ಕೆ.ಜಿ ಬೋಪಯ್ಯ

  • ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ

    ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು: ಸಿದ್ದು ವಿರುದ್ಧ ಬೋಪಯ್ಯ ಕಿಡಿ

    ಮಡಿಕೇರಿ: ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು ಎಂದು ಏಕವಚನದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ತಿರುಗೇಟು ಕೊಟ್ಟರು.

    ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ಶಾಲೆಯಲ್ಲಿ ಸಂಘ ಪರಿವಾರದ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಕೊಡಗಿನ ಶಾಸಕರು ಸಂಘ ಪರಿವಾರದವರ ಮೇಲೆ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಶಾಸಕರು, ಶಿಬಿರದಲ್ಲಿ ಭಾಗವಹಿಸುವವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂಬ ಹೇಳಿಕೆ ನೀಡಿದ್ದರು. ಈ ಕುರಿತು ಕೆ.ಜಿ.ಬೋಪಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಭಜರಂಗದಳ ಶಿಬಿರದಲ್ಲಿ ಶಾಸಕರು ಭಾಗವಹಿಸಬಾರದು ಅಂತ ಕಾನೂನಿದ್ಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಭೂ ವಿವಾದದ ತೀರ್ಪು 108 ವರ್ಷದ ಬಳಿಕ ಪ್ರಕಟ

    ನಮ್ಮ ಪರಿವಾರದ ಕಾರ್ಯಕ್ರಮ ನಡೆಯುವಾಗ ಭೇಟಿ ಕೊಡೋದು ನನ್ನ ಕರ್ತವ್ಯ. ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನ ಕೇಳೋಕೆ ಇವನ್ಯಾರು ಸಿದ್ದರಾಮಯ್ಯ? ಎಂದು ಏಕವಚನದಲ್ಲೇ ಮಾತನಾಡಿದರು. ವಿಶ್ವ ಹಿಂದೂ ಪರಿಷತ್, ಭಜರಂಗದಳ ಪ್ರತೀ ವರ್ಷ ಅಭ್ಯಾಸ ವರ್ಗ ರಾಜ್ಯದ ವಿವಿಧೆಡೆಗಳಲ್ಲಿ ಮಾಡ್ತಾರೆ. ಈ ವರ್ಷ ಕೊಡಗಿನಲ್ಲಿ ಕಾರ್ಯಕ್ರಮ ಮಾಡಿದ್ದಾರೆ ಅಷ್ಟೇ ಎಂದರು.

    ಏನಾದ್ರೂ ತ್ರಿಶೂಲ ಬ್ಯಾನ್ ಆಗಿದೆಯಾ? ಸಿದ್ದರಾಮಯ್ಯರ ಚರಿತ್ರೆ ಎಲ್ಲರಿಗೂ ಗೊತ್ತಿದೆ. ಅಲ್ಪಸಂಖ್ಯಾತರನ್ನು ಹೇಗೆ ಓಲೈಸಲಿ ಎನ್ನುವ ಮೂಲಕವೇ ಸಿದ್ದರಾಮಯ್ಯ ದಿನಚರಿ ಶುರುವಾಗುತ್ತೆ. ಸಿದ್ದರಾಮಯ್ಯ ನಮಗೆ ಸಂವಿಧಾನದ ಬದ್ಧತೆ ಬಗ್ಗೆ ಹೇಳಿ ಕೊಡುವ ಅಗತ್ಯವಿಲ್ಲ. ಈ ಹಿಂದೆ ಇವರದೇ ಶಾಸಕ ಓರ್ವ ದಲಿತನ ಮನೆಗೆ ಡಿಜೆ ಹಳ್ಳಿ-ಕೆಜೆ ಹಳ್ಳಿಯಲ್ಲಿ ಬೆಂಕಿ ಹಾಕಿದಾಗ ಸಂವಿಧಾನ ಎಲ್ಲೋಗಿತ್ತು? ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದಾಗ ಸಂವಿಧಾನ ಇರಲಿಲ್ವಾ? ಎಂದು ಆಕ್ರೋಶಗೊಂಡರು.

    ಸಿದ್ದರಾಮಯ್ಯ ಸಂವಿಧಾನವನ್ನ ಮೊದಲು ಸರಿಯಾಗಿ ಓದಬೇಕು. ಶಿಬಿರದಲ್ಲಿ ಏರ್ ಗನ್ ಬಳಸಲು ಲೈಸನ್ಸ್ ಬೇಕಿಲ್ಲ. ಸೆಲ್ಫ್ ಡಿಫೆನ್ಸ್ ಬೇಕಲ್ವಾ? ಶಾಲೆಯಲ್ಲಿ ಅಭ್ಯಾಸ ಮಾಡಿದ್ದಾರೆ ಎಂಬುದು ಹೌದು. ಆದರೆ ಅದು ಖಾಸಗಿ ಶಾಲೆ. ಸುಮ್ಮನೆ ಸಿದ್ದರಾಮಯ್ಯ ಬಾಯಿಗೆ ಬಂದಂಗೆ ಮಾತಾಡಿದ್ರೆ ಚೆನ್ನಾಗಿರಲ್ಲ. ನಮಗೂ ಮಾತಾಡೋಕೆ ಬರುತ್ತೆ. ಹಿಂದೂ ಸಮಾಜದ ರಕ್ಷಣೆಗೆ ಅಭ್ಯಾಸ ಮಾಡಿದ್ರೆ ಅದರಲ್ಲಿ ತಪ್ಪೇನಿದೆ? ಎಲ್ಲೂ ಕಾನೂನು ಉಲ್ಲಂಘನೆ ಮಾಡಿಲ್ಲ. ಈ ಅಭ್ಯಾಸ ಮಾಡಿರುವುದು ಯುವಕರು ಸ್ವಯಂ ರಕ್ಷಣೆ ಪಡೆಯುವುದಕ್ಕೆ. ಮುಂದಿನ ದಿನಗಳಲ್ಲಿ ರಕ್ಷಣೆ ಅವಶ್ಯಕತೆ ಇದೆ ಎಂದು ತಿಳಿಸಿದರು.

    ಎಸ್‍ಡಿಪಿಐ ಅವರು ರಾಜ್ಯಪಾಲರಿಗೆ ದೂರು ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಸ್‍ಡಿಪಿಐ ಅವರು ಹಾದಿ-ಬೀದಿಯಲ್ಲಿ ಹೋಗೋರಿಗೆಲ್ಲ ಕೌಂಟರ್ ಕೊಡಲ್ಲ. ಎಸ್‍ಡಿಪಿಐ, ಪಿಎಫ್‍ಐ ಈ ದೇಶಕ್ಕೆ ಮಾರಕ. ಅವುಗಳನ್ನ ಬ್ಯಾನ್ ಮಾಡಬೇಕು. ಎಸ್‍ಡಿಪಿಐ ಪ್ರಕರಣ ದಾಖಲು ಮಾಡಿದ್ರೆ, ಮಾಡಲಿ. ಎದುರಿಸುವ ಶಕ್ತಿ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:  ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂಗೆ ಬೆಳ್ಳಂಬೆಳಗ್ಗೆ ಶಾಕ್ – ಮನೆ ಸೇರಿ 7 ಕಡೆ ಸಿಬಿಐ ದಾಳಿ

  • ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

    ಶಾಲೆ ಆವರಣದಲ್ಲೇ ಭಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ

    ಮಡಿಕೇರಿ: ರಾಜ್ಯದಲ್ಲಿ ಹಿಜಬ್, ಆಜಾನ್ ಹಾಗೂ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ದಿನವೂ ಹಿಂದೂ ಮುಸ್ಲಿಮರ ನಡುವೆ ಧರ್ಮಯುದ್ಧ ನಡೆಯುತ್ತಿದೆ. ಆದರೂ ಯಾವುದೇ ಕೋಮುಗಲಭೆಗೆ ಅವಕಾಶ ನೀಡುವುದಿಲ್ಲ ಎಂದು ಸಬೂಬು ಹೇಳುತ್ತಿರುವ ಸರ್ಕಾರ ಇದೀಗ ಮತ್ತೊಂದು ವಿವಾದಕ್ಕೆ ದಾರಿಮಾಡಿಕೊಟ್ಟಂತಿದೆ.

    ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳ ದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಇಂದಿನಿಂದ ಶಾಲೆ ಆರಂಭ – ಈ ವರ್ಷವೂ ಮಕ್ಕಳಿಗಿಲ್ಲ ಸೈಕಲ್ ಭಾಗ್ಯ

    MDK

    ಇದರಿಂದ ಶಾಲೆಯ ಆವರಣದಲ್ಲಿ ಹಿಜಬ್‌ಗೆ ಅವಕಾಶ ಇಲ್ಲವೆಂದಿದ್ದ ಸರ್ಕಾರ ಇದೀಗ ಸಂಘ ಪರಿವಾರದಿಂದ ಶಸ್ತ್ರಾಸ್ತ್ರ ತರಬೇತಿಗೆ ಅವಕಾಶ ನೀಡಿದ್ದು ಹೇಗೆ? ಎಂಬ ಅನುಮಾನ ಶುರುವಾಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗುತ್ತಿದೆ. 

    ಕೊಡಗಿನ ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಕಳೆದ ವಾರ ಮುಕ್ತಾಯವಾದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ. ಶಾಲಾ ಆವರಣದಲ್ಲೇ ಸುಮಾರು 8 ದಿನಗಳ ಕಾಲ ಶೌರ್ಯ ಪ್ರಶಿಕ್ಷಣ ವರ್ಗದ ತರಬೇತಿ ನಡೆದಿದೆ. ಈ ತರಬೇತಿ ಶಿಬಿರ ನಡೆದ 8 ದಿನಗಳ ಅವಧಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಜಿಲ್ಲೆಯ ಕೆಲ ಮುಖಂಡರೂ ಪಾಲ್ಗೊಂಡಿದ್ದರು ಎಂದು ಮೂಲಗಳು ಖಚಿತ ಪಡಿಸಿವೆ. ಇದನ್ನೂ ಓದಿ: ಮೇನಲ್ಲೂ ಕೆಆರ್‌ಎಸ್‍ನಲ್ಲಿದೆ 100 ಅಡಿ ನೀರು – ಕೇರಳದಲ್ಲಿ ಭಾರೀ ಮಳೆ

    ರಾಜ್ಯದ ವಿವಿಧೆಡೆಯಿಂದ ಬಂದಿದ್ದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ತರಬೇತಿ ಪಡೆದುಕೊಂಡಿದ್ದಾರೆ. ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು ಹಾಗೂ ಸಂಸ್ಥೆಯ ಸಭಾಂಗಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

    ಈ ಕುರಿತು ಟ್ವೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪ್ರಮುಖರಿಗೆ ಟ್ಯಾಗ್ ಮಾಡಿ, ತನಿಖೆ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

  • ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ: ಕೆ.ಜಿ ಬೋಪಯ್ಯ

    ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ: ಕೆ.ಜಿ ಬೋಪಯ್ಯ

    ಮಡಿಕೇರಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯದಲ್ಲಿ ಸಮರ್ಥವಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ ಎಂದು ಶಾಸಕ ಕೆ.ಜಿ ಬೋಪಯ್ಯ ಹೇಳಿದ್ದಾರೆ.

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಆರಗ ಜ್ಞಾನೇಂದ್ರ ಅವರು ಅವರ ಇತಿಮಿತಿಯ ಒಳಗೆ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವರಿಗೆ ಅಸಮಾಧಾನ ಇರಬಹುದು. ಆದರೆ ಈ ದೇಶದಲ್ಲಿ ಕಾನೂನು ಇದೆ. ಕಾನೂನು ಎಲ್ಲಾರಿಗೂ ಒಂದೇ. ಅದರಂತೆ ಅವರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅವರ ಮೇಲೆ ಯಾವುದೇ ದೂರು ನನ್ನ ಬಳಿ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ಇಲ್ಲೊಂದು ವರ್ಗ ಇದೆ, ಅವರು ಗಲಾಟೆ ಮಾಡಿಯೇ ಜೀವನ ಮಾಡುವ ವರ್ಗದವಾರಾಗಿದ್ದಾರೆ. ಒಂದಿಷ್ಟು ತಾಳ್ಮೆಯಿಂದ ಅವರನ್ನು ನೋಡುತ್ತಿದ್ದಾರೆ. ಆದರೆ ಆಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತಾರೆ. ಅದಕ್ಕೆ ಅವಕಾಶ ಕೊಡಬೇಡಿ. ನೀವು ಈ ದೇಶದ ಕಾನೂನುವನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ

    ಯಾರೋ ಒಬ್ಬ ಪ್ರಚೋದನೆ ನೀಡಿದರೆ, ಅದಕ್ಕೆ ಹೋಗಿ ಪ್ರತಿಭಟನೆ ಮಾಡುವುದು ಆಸ್ಪತ್ರೆಗಳ ಮೇಲೆ ಕಲ್ಲು ತೂರಾಟ ನಡೆಸುವುದು ದೇವಾಲಯಕ್ಕೆ ಕಲ್ಲು ಹೊಡೆಯುವುದು, ಪೊಲೀಸರ ಮೇಲೆ ಹಲ್ಲೆ ನಡೆಸುವುದು ಇದೆಲ್ಲಾ ಸಹಿಸಿಕೊಂಡು ಇರುವುದಕ್ಕೆ ಆಗುವುದಿಲ್ಲ. ಅದಕ್ಕೆ ಸಚಿವರು ಹೆಚ್ಚು ಆವೇಶದಿಂದ ಮಾತಾನಾಡಿರಬಹುದು. ಆದರೆ ಅಂದು ಗಲಾಟೆಯಾಗುವ ಸಂದರ್ಭದಲ್ಲಿ ಮೂರು ಸಾವಿರ ಜನಗಳನ್ನು ಒಂದೇ ಗಂಟೆಯಲ್ಲಿ ನಿಯಂತ್ರಣ ಮಾಡಿದ್ದಾರೆ. ಅದರ ಬಗ್ಗೆ ಯಾರು ಮಾತಾನಾಡುವುದಿಲ್ಲ. ಹಾಗಾಗಿ ಗೃಹ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

     

     

  • ಸಾಮರಸ್ಯ ಬೇಕು ಅಂದ್ರೆ ಆಜಾನ್ ಸೌಂಡ್ ಕಡಿಮೆ ಮಾಡಿ: ಕೆ.ಜಿ ಬೋಪಯ್ಯ

    ಸಾಮರಸ್ಯ ಬೇಕು ಅಂದ್ರೆ ಆಜಾನ್ ಸೌಂಡ್ ಕಡಿಮೆ ಮಾಡಿ: ಕೆ.ಜಿ ಬೋಪಯ್ಯ

    ಮಡಿಕೇರಿ: ರಾಜ್ಯದಲ್ಲಿ ಸಾಮರಸ್ಯ ಬೇಕು ಅಂದ್ರೆ ಆಜಾನ್ ಸೌಂಡ್ ಕಡಿಮೆ ಮಾಡಿ ಎಂದು ಮಸೀದಿಗಳಿಗೆ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ.

    ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಈ ಹಿಂದೆಯೇ ಮಸೀದಿ ಆಗಲಿ, ಮಂದಿರ ಆಗಲಿ ಮೈಕ್ ಬಳಸದಂತೆ ಸುಪ್ರೀಂಕೋರ್ಟ್ ಹೇಳಿದೆ. ಆದರೆ ಇದುವರೆಗೆ ಆ ಕಾನೂನನ್ನು ಯಾರು ಪಾಲನೆ ಮಾಡಿಲ್ಲ. ಈಗ ಅಂತಿಮ ಸಮಯ ಅಂತ ಬಂದಿದೆ .ಹೀಗಾಗಿ ಕಾನೂನು ಮುಂದಿನ ದಿನಗಳಲ್ಲಿ ಅದರ ಕೆಲಸ ಮಾಡುತ್ತದೆ ಎಂದರು.  ಇದನ್ನೂ ಓದಿ: ಧರ್ಮ ಸಂಸತ್‍ನಲ್ಲಿ ದ್ವೇಷ ಭಾಷಣ – ದೆಹಲಿ ಪೊಲೀಸ್ ಸಲ್ಲಿಸಿದ್ದ ಅಫಿಡವಿಟ್‍ಗೆ ಸುಪ್ರೀಂ ಅಸಮಾಧಾನ

    mosque-loudspeakers

    ಈಗಾಗಲೇ ಅಜಾನ್ ಶಬ್ಧದಿಂದ ಹಾರ್ಟ್ ಪೇಷೆಂಟ್ಸ್ ಸಾಯುವಂತಾಗಿದೆ. ಬೆಳಗ್ಗೆ ಐದು ಗಂಟೆ ಆಗಿತ್ತೆಂದರೆ ಮತ್ತೆ ಮಲಗುವಂತಿಲ್ಲ ಎನ್ನುವಂತಾಗಿದೆ. ಮಸೀದಿಗಳಲ್ಲಿ ಎಷ್ಟು ಎತ್ತರಲ್ಲಿ ಮೈಕ್ ಕಟ್ಟಬೇಕು ಎಂಬ ಹಠಕ್ಕೆ ಬಿದ್ದು ಕಟ್ಟುತ್ತಿದ್ದಾರೆ. ಈಗಾಲದರೂ ಸಾಮರಸ್ಯ ಬೇಕು ಎನ್ನುವವರು ಮೈಕ್ ಸೌಂಡ್ ಕಡಿಮೆ ಮಾಡಿ ಎಂದು ಶಾಸಕ ಹೇಳಿದ್ದಾರೆ.

     

  • ನಿಮ್ಮ ಮನೆ ಮೇಲೆ ಎಸಿಬಿ ದಾಳಿ ನಡೆಯುತ್ತೆ – ಬೋಪಯ್ಯಗೆ ಕರೆ ಮಾಡಿ ಬೆದರಿಕೆ

    ನಿಮ್ಮ ಮನೆ ಮೇಲೆ ಎಸಿಬಿ ದಾಳಿ ನಡೆಯುತ್ತೆ – ಬೋಪಯ್ಯಗೆ ಕರೆ ಮಾಡಿ ಬೆದರಿಕೆ

    ಮಡಿಕೇರಿ: ನಿಮ್ಮ ಮನೆಯಲ್ಲಿ ನಾಳೆ ಎಸಿಬಿ ದಾಳಿ ನಡೆಯುತ್ತದೆ. ಇದನ್ನು ತಡೆಯಲು ಒಂದು ಕೋಟಿ ರೂ. ನೀಡುವಂತೆ ಅಪರಿಚಿತ ವ್ಯಕ್ತಿಯೋರ್ವನು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರಿಗೆ ಕರೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

    ಮಡಿಕೇರಿಯಲ್ಲಿ ಇರುವ ಶಾಸಕ ಕೆ.ಜಿ ಬೋಪಯ್ಯ ಅವರ ನಿವಾಸದಲ್ಲಿ ನಿನ್ನೆ ಸಂಜೆ 6:30ರ ಆಸುಪಾಸಿಗೆ ಕರೆ ಬಂದಿದೆ. ಅಪರಿಚಿತರೊಬ್ಬರು ಕರೆಮಾಡಿ ಎಸಿಬಿ ಕಡೆಯಿಂದ ಕರೆ ಮಾಡುತ್ತಿದ್ದೇವೆ. ತಮ್ಮ ಮೇಲೆ ಎಸಿಬಿ ದಾಳಿ ಮಾಡಲು ಸಜ್ಜಾಗುತ್ತಿದ್ದು, ಈ ಎಸಿಬಿ ದಾಳಿಯನ್ನು ತಡೆಹಿಡಿಯಲು ಒಂದು ಕೋಟಿ ರೂ. ನೀಡಬೇಕೆಂದು ಎಂದು ಕನ್ನಡದಲ್ಲೇ ಅಪರಿಚಿತ ವ್ಯಕ್ತಿ ಶಾಸಕರೊಂದಿಗೆ ಮಾತಾನಾಡಿದ್ದಾನೆ.

    ಹಣ ನೀಡಿದೆ ಇದ್ದರೇ ಎಸಿಬಿ ದಾಳಿ ನಡೆಸುವುದು ಖಚಿತ ಎಂದು ತಿಳಿಸಿದ್ದಾನೆ. ಆಗ ಶಾಸಕ ಬೋಪಯ್ಯ ಮಾತಾನಾಡಿ, ಮನೆಯನ್ನು ಎಸಿಬಿ ದಾಳಿ ನಡೆಸಬಹುದು. ತಾನು ಯಾರಿಗೂ ಹಣ ನೀಡುವುದಿಲ್ಲ ಎಂದು ಖಡಕ್ ಆಗಿ ಹೇಳಿ ಫೋನ್ ಕರೆ ಕಟ್ ಮಾಡಿದ್ದಾರೆ. ದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ

    ಆದರೂ ಅಪರಿಚಿತ ವ್ಯಕ್ತಿ ಮತ್ತೆ ಬೇರೆ ಫೋನ್ ಮೂಲಕ ಕರೆ ಮಾಡಿ ಹಣದ ಬಗ್ಗೆ ವಿಚಾರ ಮಾಡಿದ್ದಾನೆ. ಆಗಲೂ ಶಾಸಕ ಬೋಪಯ್ಯ ಹಣ ನೀಡುವುದಿಲ್ಲ. ಎಸಿಬಿ ಅವರು ಬರಲಿ ತೊಂದರೆ ಇಲ್ಲ ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

    POLICE JEEP

    ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜಿ. ಬೋಪಯ್ಯ ಇಂದು ಬೆಂಗಳೂರಿನ ಐಜಿ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಅಪರಿಚಿತ ಮೊಬೈಲ್ ಸಂಖ್ಯೆಯಲ್ಲಿ ಆಂಧ್ರದ ಝಹೀಬ್ ಖಾನ್ ಹೆಸರಿನಲ್ಲಿ ಖರೀದಿಯಾಗಿರುವ ವಿಚಾರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

  • ತಲಕಾವೇರಿಯಲ್ಲಿ ತೀರ್ಥೋದ್ಭವ- ಭಕ್ತರ ದರ್ಶನಕ್ಕೆ ಸಕಲ ಸಿದ್ಧತೆ

    ತಲಕಾವೇರಿಯಲ್ಲಿ ತೀರ್ಥೋದ್ಭವ- ಭಕ್ತರ ದರ್ಶನಕ್ಕೆ ಸಕಲ ಸಿದ್ಧತೆ

    ಮಡಿಕೇರಿ: ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಆರಂಭವಾಗಿದೆ. ತಲಕಾವೇರಿಯಲ್ಲಿ ಇದೇ ಅಕ್ಟೋಬರ್ 17ರಂದು ಭಾನುವಾರ ಮಧ್ಯಾಹ್ನ 1ಗಂಟೆ 11 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಭಕ್ತರಿಗೆ ಒಲಿಯಲಿದ್ದಾಳೆ.

    ಈ ಬಾರಿ ಕಾವೇರಿ ತೀರ್ಥೊದ್ಭವ ವೀಕ್ಷಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗುತ್ತದೆ. ಅದರೆ ಕೋವಿಡ್ ಪಾಸಿಟಿವ್ ರೇಟ್ ಏರಿಳಿತ ಅಗುತ್ತಿರುವುದರಿಂದ ಜನ ದಟ್ಟಣೆ ನಿಯಂತ್ರಣದಲ್ಲಿ ಇರಬೇಕಾಗುತ್ತದೆ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

    ಇಂದು ಕಾವೇರಿ ತೀರ್ಥೊದ್ಭವ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥೂದ್ಭವ ಸಂದರ್ಭ ಸ್ಥಳೀಯರು ಆದಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ವಯಂನಿಯಂತ್ರಣ ಮಾಡಿಕೊಂಡು ಕಾವೇರಿ ದರ್ಶನ ಮಾಡಬೇಕು. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನಕ್ಕೆ ಅವಕಾಶ ಇರುತ್ತದೆ. ತಲಕಾವೇರಿ ಕುಂಡಿಕೆ ಬಳಿ ಸ್ನಾನ ಮಾಡಲು ಅವಕಾಶ ಇಲ್ಲ. ಅಲ್ಲದೆ ಈ ಬಾರಿ ತಲಕಾವೇರಿಯಲ್ಲಿ ಭಕ್ತರಿಗೆ ಊಟದ ವ್ಯವಸ್ಥೆ ಇರುವುದಿಲ್ಲ. ಕೇವಲ ಸ್ವಯಂ ಸೇವಕರು ಪೊಲೀಸ್ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗೆ ಮಾತ್ರ ಊಟ ವ್ಯವಸ್ಥೆಯನ್ನು ಕೊಡಗು ಏಕೀಕರಣ ರಂಗದ ಪ್ರಮುಖರು ಮಾಡಲ್ಲಿದ್ದಾರೆ ಎಂದು ತಿಳಿಸಿದರು.

    ಕೊಡಗಿನ ಧಾರ್ಮಿಕ ಕ್ಷೇತ್ರಗಳಿಗೆ ಬರುವ ಪ್ರವಾಸಿಗರು ವಸ್ತ್ರ ಸಂಹಿತೆ ನಿಯಮ ಪಾಲಿಸಬೇಕು. ಜಿಲ್ಲೆಯಲ್ಲಿರುವ ಹೋಮ್ ಸ್ಟೇ ಹೋಟೆಲ್ ರೇಸಾರ್ಟ್ ಮಾಲೀಕರು. ಬರುವ ಪ್ರವಾಸಿಗರಿಗೆ ಸರಿಯಾಗಿ ಮನವರಿಕೆ ಮಾಡಿ ಧಾರ್ಮಿಕ ಕ್ಷೇತ್ರಗಳಿಗೆ ಕಳುಹಿಸಬೇಕು. ಕೆಲ ಪ್ರವಾಸಿಗರು ಮದ್ಯಪಾನ ಮಾಡಿ, ತುಂಡು ಉಡುಗೆ ತೊಟ್ಟು ಬರುತ್ತಿದ್ದಾರೆ. ಕೊಡಗಿನ ತಲಕಾವೇರಿ, ಭಂಗಡೇಶ್ವರ, ಇರ್ಪು ರಾಮೇಶ್ವರ, ಪಾಡಿ ಇಗ್ಗುತಪ್ಪ, ಮಡಿಕೇರಿ ಓಂಕಾರೇಶ್ವರ ದೇವಾಲಯಗಳಿಗೆ ಹೋಗಬೇಕಾದರೆ ಸರಿಯಾದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊಂಡು ಹೋಗಬೇಕು. ಮದ್ಯಪಾನ ಮಾಡಿ ಬರುವವರಿಗೆ ಸ್ಥಳದಲ್ಲೇ ದಂಡ ಹಾಕುವ ವ್ಯವಸ್ಥೆ ಅಗಬೇಕು ಎಂದು ಶಾಸಕ ಬೋಪಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಕೊರೊನಾ ಹಿನ್ನೆಲೆ ಪವಿತ್ರ ತೀರ್ಥೋದ್ಭವ ಕ್ಷೇತ್ರ ತಲಕಾವೇರಿಯಲ್ಲಿ ಈ ಬಾರಿ ಸರಳ ರೀತಿಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇಶದ ವಿವಿಧೆಡೆಗಳಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದರು. ಆದರೆ ಕೊರಾನಾ ಹಿನ್ನೆಲೆಯಲ್ಲಿ ಹೆಚ್ಚು ಭಕ್ತರ ಆಗಮನಕ್ಕೆ ದೇವಾಲಯ ಅಡಳಿತ ಮಂಡಳಿ ಹಾಗೂ ಜಿಲ್ಲಾಡಳಿತ ತಡೆಯೊಡ್ಡಿದ್ದು, ಕಡಿಮೆ ಭಕ್ತರು ಆಗಮಿಸುವಂತೆ ಕೋರಿದೆ.

    ಈ ಬಾರಿ ತೀರ್ಥೋದ್ಭವ ವೀಕ್ಷಣಗೆ ಎಲ್ಲರಿಗೂ ಮುಕ್ತ ಅವಕಾಶ ಇದೆ. ಆದರೆ ಜನರೇ ಸ್ವಯಂಪ್ರೇರಿತವಾಗಿ ರಕ್ಷಣೆ ಮಾಡಿಕೊಳ್ಳುವ ಅಗತ್ಯ ಇರುವುದರಿಂದ ಈ ಬಾರಿ ಕಡಿಮೆ ಭಕ್ತರು ತೀರ್ಥೊದ್ಭವ ಸಂದರ್ಭದಲ್ಲಿ ಭಾಗವಹಿಸಬೇಕು. ಈ ಬಾರಿ ಕಾವೇರಿಯ ಕುಡಿಕೆ ಬಳಿ ಸ್ನಾನಕ್ಕೆ ಅವಕಾಶ ಇರುವುದಿಲ್ಲ. ಕೇವಲ ತೀರ್ಥ ಸ್ವೀಕರಿಸಿ ಹೋಗುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

  • ತೀರ್ಥೋದ್ಭವ ವೀಕ್ಷಣೆಗೆ ಭಕ್ತರಿಗೆ ಮುಕ್ತ ಅವಕಾಶ

    ತೀರ್ಥೋದ್ಭವ ವೀಕ್ಷಣೆಗೆ ಭಕ್ತರಿಗೆ ಮುಕ್ತ ಅವಕಾಶ

    ಮಡಿಕೇರಿ: ಇದೇ ಅ.17ರಂದು ಜರುಗುವ ಕೊಡಗಿನ ಪವಿತ್ರ ಕಾವೇರಿ ತೀರ್ಥೋದ್ಭವ ವೀಕ್ಷಣೆಗೆ ತಲಕಾವೇರಿ ಕ್ಷೇತ್ರಕ್ಕೆ ಭಕ್ತರಿಗೆ ಮುಕ್ತ ಅವಕಾಶ ಕಲ್ಪಿಸಲಾಗುವುದೆಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಅವರು, ಜಿಲ್ಲೆಯ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗಿದೆ. ಈ ವೇಳೆ ತೀರ್ಥೋದ್ಭವ ಸಂದರ್ಭದಲ್ಲಿ ಭಕ್ತರಿಗೆ ಭಾಗವಹಿಸಲು ಕೋವಿಡ್ ನಿಯಮದಂತೆ ಮುಕ್ತ ಅವಕಾಶ ನೀಡುವಂತೆ ಬೇಡಿಕೆ ಸಲ್ಲಿಸಲಾಗಿದೆ. ಇದಕ್ಕೆ ಸಿಎಂ ಸಮ್ಮತಿಸಿದ್ದು, ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗಾಗಿ ಈ ಬಾರಿ ಅವಕಾಶ ಸಿಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಗಣೇಶೋತ್ಸವದಂತೆ ದುರ್ಗಾದೇವಿ ಪ್ರತಿಷ್ಠಾಪನೆಗೂ ಪಾಲಿಕೆ ನಿರ್ಬಂಧ

    ಈ ಸಂಬಂಧ ನಿನ್ನೆಯೇ ಉಸ್ತುವಾರಿ ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಸಚಿವರು ಇಂದು ಜಿಲ್ಲೆಗೆ ಭೇಟಿ ನೀಡಿ ಸಭೆ ನಡೆಸಿ, ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆಂದು ತಿಳಿಸಿದರು. ಇದನ್ನೂ ಓದಿ: ಮೂವತ್ತು ಮನೆಗಳಿಗೆ ನುಗ್ಗಿದ ನೀರು- ರಸ್ತೆ ಮಧ್ಯಕ್ಕೆ ಉರುಳಿದ ಬೃಹತ್ ಮರ

    ಪೂರ್ವ ಸಿದ್ಧತಾ ಸಭೆ!
    ಪ್ರಸ್ತುತ ತಲಕಾವೇರಿ – ಭಗಂಡೇಶ್ವರ ವ್ಯವಸ್ಥಾಪನಾ ಸಮಿತಿ ಇಲ್ಲದೆ ಇರುವುದರಿಂದ ಸಂಪ್ರದಾಯದಂತೆ ತುಲಾ ಸಂಕ್ರಮಣ ಜಾತ್ರೆಯ ಜವಾಬ್ದಾರಿ ವಹಿಸುವ ನಿಟ್ಟಿನಲ್ಲಿ 7ರಂದು ಭಾಗಮಂಡಲದಲ್ಲಿ ಪೂರ್ವ ಸಿದ್ಧತಾ ಸಭೆ ಏರ್ಪಡಿರುವುದಾಗಿ ಅವರು ಸ್ಪಷ್ಟಪಡಿಸಿದರು.

  • ಸಿದ್ದರಾಮಯ್ಯ ಟಿಪ್ಪುವಿನ ವಂಶಸ್ಥರಾ?: ಕೆ.ಜಿ ಬೋಪಯ್ಯ

    ಸಿದ್ದರಾಮಯ್ಯ ಟಿಪ್ಪುವಿನ ವಂಶಸ್ಥರಾ?: ಕೆ.ಜಿ ಬೋಪಯ್ಯ

    – ರಾಷ್ಟ್ರೀಯ ಪಕ್ಷದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು

    ಮಡಿಕೇರಿ: ದೇಶಕ್ಕಾಗಿ, ಸ್ವತಂತ್ರಕ್ಕಾಗಿ ಇದುವರೆಗೆ ಆರ್‌ಎಸ್‌ಎಸ್‌ನ ಯಾರು ಸತ್ತಿಲ್ಲ. ಬಿಜೆಪಿಯವರೆ ತಾಲೀಬಾನಿಗಳು ಎಂದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಟಿಪ್ಪುವಿನ ವಂಶಸ್ಥರಾಗಿರಬೇಕು. ಹೀಗಾಗಿ ಅವರು ಬಿಜೆಪಿಯವರು ತಾಲೀಬಾನಿಗಳು ಎಂದಿದ್ದಾರೆ ಎಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.

     

    ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವಾರು ದೇಶಭಕ್ತರನ್ನು ಬೆಳೆಸಿದೆ. ಇಂದಿಗೂ ಜನರಲ್ಲಿ ದೇಶಭಕ್ತಿ ಮೂಡಿಸುತ್ತಿದೆ. ಆದರೆ ಟಿಪ್ಪುಸುಲ್ತಾನ್ ರಾಜ್ಯದಲ್ಲಿ ಸಾವಿರಾರು ಜನರನ್ನು ಬಲವಂತದಿಂದ ಮತಾಂತರ ಮಾಡಿದ. ನೂರಾರು ಹಿಂದೂ ದೇವಾಲಯಗಳನ್ನು ನಾಶ ಮಾಡಿದ. ಅಂತವನ ಜಯಂತಿಯನ್ನು ಆಚರಣೆಗೆ ತಂದಿದ್ದವರು ಸಿದ್ದರಾಮಯ್ಯ ಎಂದು ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರೇ ಒಬ್ಬ ದೊಡ್ಡ ಭಯೋತ್ಪಾದಕ: ಕಟೀಲ್

    ಹಿಂದೂ ಮುಸ್ಲಿಂ ಎಂಬ ಬೇಧ ಭಾವಗಳನ್ನು ಸೃಷ್ಟಿಸಿ ಸಮಾಜದಲ್ಲಿ ಒಡಕು ಮೂಡಿಸುವ ಸಿದ್ದರಾಮಯ್ಯನವರದು ತಾಲೀಬಾನ್ ಸಂಸ್ಕೃತಿ ಅಲ್ಲವೆ? ಎಂದು ಪ್ರಶ್ನಿಸಿದ್ದಾರೆ. ಒಬ್ಬ ಮಾಜಿ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯನವರು ಇಂತಹ ಮಾತನಾಡುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ. ಬಿಜೆಪಿ ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ಪಕ್ಷದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕಾಗಿತ್ತು ಎಂದು ಬೋಪಯ್ಯ ಎಚ್ಚರಿಕೆಯನ್ನು ನೀಡಿದ್ದಾರೆ.

  • ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿ ರಾಜ್ಯದಲ್ಲೂ ಕಾನೂನು ತನ್ನಿ: ಬೋಪಯ್ಯ

    ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿ ರಾಜ್ಯದಲ್ಲೂ ಕಾನೂನು ತನ್ನಿ: ಬೋಪಯ್ಯ

    ಮಡಿಕೇರಿ: ಮತಾಂತರ ತಡೆಗೆ ಉತ್ತರ ಪ್ರದೇಶದ ರೀತಿಯಲ್ಲಿ ರಾಜ್ಯದಲ್ಲೂ ಕಾನೂನು ತರಬೇಕಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು.

    ಕಲಾಪದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಗೂಳಿಹಟ್ಟಿ ಶೇಖರ್, ಚಿತ್ರದುರ್ಗದಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಮತಾಂತರವಾಗಿದ್ದಾರೆ. ನನ್ನ ಹೆತ್ತ ತಾಯಿಯನ್ನೂ ಮತಾಂತರ ಮಾಡಿದ್ದಾರೆ ಎಂದು ಹೇಳಿದರು. ಇದೇ ವೇಳೆ ಮಾತನಾಡಿದ ಬೋಪಯ್ಯ, ಎಲ್ಲ ಕಡೆ ಮತಾಂತರ ಹೆಚ್ಚಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದರೆ ಕಾಯ್ದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್

    ಕೆಲವು ಚರ್ಚ್‍ಗಳಲ್ಲಿ ಬ್ರೈನ್ ವಾಶ್ ಮಾಡುತ್ತಿದ್ದಾರೆ, ತಾಯಿಗೂ ಬ್ರೈನ್ ವಾಶ್ ಮಾಡಿದ್ದಾರೆ. ದಲಿತರು, ಹಿಂದುಳಿದ ವರ್ಗದವರನ್ನು ಜಾಸ್ತಿ ಮತಾಂತರ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಪಿಡುಗು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಗೂಳಿಹಟ್ಟಿ ಶೇಖರ್ ಒತ್ತಾಯಿಸಿದರು.

    ಸದಸ್ಯರ ಮಾತುಗಳನ್ನು ಕೇಳಿದ ಗೃಹಸಚಿವ ಆರಗ ಜ್ಞಾನೇಂದ್ರ, ಆಮಿಷವೊಡ್ಡಿ ಮತಾಂತರ ಮಾಡುವುದು ಅಪರಾಧ. ಶಾಂತಿ ಭಂಗವುಂಟು ಮಾಡುವ ಆತಂಕವೂ ಇದೆ. ಮುಂದೆ ಏನು ಮಾಡಬೇಕು ಎಂಬ ಕುರಿತು ರಾಜ್ಯ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಹೇಳಿದರು.

  • ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ: ಎಚ್.ಕೆ.ಕುಮಾರಸ್ವಾಮಿ

    ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ: ಎಚ್.ಕೆ.ಕುಮಾರಸ್ವಾಮಿ

    – ಸಿಎಂ ಅವರ ಸಜ್ಜನಿಕೆ ಸೌಜನ್ಯವನ್ನು ಮೆಚ್ಚುತ್ತೇನೆ

    ಹಾಸನ: ಬಿಜೆಪಿ ಸರ್ಕಾರವು ದಲಿತ ವಿರೋಧಿ, ಮಹಿಳಾ ವಿರೋಧಿ ಸರ್ಕಾರ ಎಂದು ಘಂಟಾಘೋಷವಾಗಿ ಹೇಳುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹಾಸನದಲ್ಲಿ ಹೇಳಿದ್ದಾರೆ.

    ಮಂತ್ರಿಮಂಡಲ ರಚನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಮಂತ್ರಿಮಂಡಲವು ಅತ್ಯಂತ ಅಸಮತೋಲನದಿಂದ ಕೂಡಿದೆ. 30 ಜನ ಮಂತ್ರಿಗಳಿದ್ದರೂ 17 ಜಿಲ್ಲೆಗಳಿಗೆ ಪ್ರಾತಿನಿಧ್ಯ ಕೊಟ್ಟಿಲ್ಲ. ಅದು ಅಲ್ಲದೇ ಆರೋಪ ಇರೋರಿಗೆ ಮಂತ್ರಿ ಸ್ಥಾನವನ್ನು ಕೊಟ್ಟಿದ್ದಾರೆ. ಇವರು ದಲಿತ ವಿರೋಧಿ ಮತ್ತು ಮಹಿಳಾ ವಿರೋಧಿ ಸರ್ಕಾರವೆಂದು ನಾನು ಘಂಟಾಘೋಷವಾಗಿ ಹೇಳುತ್ತೇನೆ ಎಂದು ಕಿಡಿಕಾರಿದರು.

    ಸರ್ಕಾರವು ಹೆಚ್ಚು ಸಂಖ್ಯೆಯಿರುವ ಬಲಗೈ ಸಮುದಾಯಕ್ಕೆ ಮಂತ್ರಿ ಸ್ಥಾನ ಕೊಟ್ಟಿಲ್ಲ. ಮಹಿಳೆಯರಿಗೂ ಸಹ ಸರಿಯಾದ ಪ್ರಾತಿನಿಧ್ಯ ಕೊಟ್ಟಿಲ್ಲ. ಗೊಲ್ಲ ಸಮಾಜದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮಂತ್ರಿ ಸ್ಥಾನ ನೀಡಿಲ್ಲ. ಚುನಾವಣೆ ವೇಳೆ ಶಿರಾದ ಗೊಲ್ಲ ಸಮುದಾಯಕ್ಕೆ ನಿಗಮ ಸ್ಥಾಪಿಸುತ್ತೇವೆ ಎಂದಿದ್ದರು. ಆದರೆ ಆ ಕಡೆ ಗಮನವೇ ಕೊಟ್ಟಿಲ್ಲ. ರಾಜಕಾರಣಿಗಳು ಸಂದರ್ಭಕ್ಕೆ ತಕ್ಕಂತೆ ಏನಾದ್ರು ಆಶ್ವಾಸನೆ ಕೊಡುತ್ತೇವೆ. ಆದರೆ ಅದನ್ನು ಈಡೇರಿಸುವುದಿಲ್ಲ ಎಂದು ಟೀಕಿಸಿದ್ದಾರೆ.

    ಹಾಸನದಲ್ಲಿನ ಪ್ರವಾಹ ಕುರಿತು ಮಾತನಾಡಿದ ಅವರು, ಇಲ್ಲಿ 4 ವರ್ಷಗಳಿಂದ ಮಳೆಯಾಗುತ್ತಿದೆ. ಸಚಿವರು, ಅಧಿಕಾರಿಗಳು ಮಳೆ ಬಂದಾಗ ಬಂದು ಸಮೀಕ್ಷೆ ಮಾಡುತ್ತಿದ್ದಾರೆ. ಆ ಸಮೀಕ್ಷೆಗೆ ತಕ್ಕಂತೆ ಹಣವನ್ನು ಸಹ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ. 2017 ರಲ್ಲಿ 321 ಕೋಟಿ ರೂ. 2018 ರಲ್ಲಿ 178 ಕೋಟಿ ರೂ. 2019 ರಲ್ಲಿ 160 ಕೋಟಿ ರೂ. 2021 ರಲ್ಲಿ 78 ಕೋಟಿ ರೂ ನಷ್ಟ ಎಂದು ಜಿಲ್ಲಾಡಳಿತ ಸಮೀಕ್ಷೆ ಮಾಡಿದೆ ಎಂದು ತಿಳಿಸಿದ್ದಾರೆ.

    ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾರವಾರಕ್ಕೆ ಪ್ರವಾಹ ವಿಚಾರವಾಗಿ ಹೋಗಿ ಬಂದಿದ್ದಾರೆ. ಅದೇ ರೀತಿ ಎಲ್ಲ ಜಿಲ್ಲೆಗೂ ಸಿಎಂ ಬಂದು ಇಲ್ಲಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಅವರು ಸಕಲೇಶಪುರಕ್ಕೂ ಬರಬೇಕು ನಾವು ಸ್ವಾಗತ ಮಾಡುತ್ತೇವೆ. ಅವರು ಇಲ್ಲಿಗೆ ಬಂದಾಗ ಅನುಕೂಲ ಹೆಚ್ಚಾಗುತ್ತೆ. ಮಳೆಯಿಂದ ಕಾಫಿ, ಏಲಕ್ಕಿ, ಮೆಣಸು, ಭತ್ತದ ಬೆಳೆಗಳು ಸಾಕಷ್ಟು ಹಾನಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ 225 ಕಿಲೋಮೀಟರ್ ರಸ್ತೆ ಹಾಳಾಗಿದೆ. ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಕನಿಷ್ಠ ನೂರು ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

    ಕೆ.ಜಿ.ಬೋಪಯ್ಯ ಅವರು ಆರು ಬಾರಿ ಶಾಸಕರಾಗಿದ್ದಾರೆ. ಅವರಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು. ನಮಗೂ ಬೇಜಾರಾಗಿದೆ, ಹಾಸನ ಜಿಲ್ಲೆಗೆ, ಕೊಡಗಿಗೆ ಮಂತ್ರಿ ಸ್ಥಾನ ಕೊಡಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿಎಂಗೆ ಹೆಚ್‍ಡಿಡಿ ಮನೆಗೆ ಹೋಗುವ ಅವಶ್ಯಕತೆ ಏನಿತ್ತು? ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡೋದು ಬೇಡ: ಶಾಸಕ ಪ್ರೀತಂ ಗೌಡ

    ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಸಿಎಂ ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಅವರ ಸಜ್ಜನಿಕೆ ಸೌಜನ್ಯವನ್ನು ಮೆಚ್ಚುತ್ತೇನೆ. ಅದನ್ನು ಸ್ವಾಗತ ಮಾಡುತ್ತೇನೆ. ಅದು ಅಲ್ಲದೇ ದೇವೇಗೌಡರು ಅತ್ಯಂತ ಹಿರಿಯ ರಾಜಕಾರಣಿ, ಮಾಜಿಪ್ರಧಾನಮಂತ್ರಿಯಾಗಿದ್ದವರು. ರಾಜ್ಯದ ಹಿತದೃಷ್ಟಿಯಿಂದ ದೇವೇಗೌಡರ ಮನೆಗೆ ಭೇಟಿ ಕೊಟ್ಟಿದ್ದಾರೆ. ಅವರ ಸಲಹೆ ಎಲ್ಲರಿಗೂ ಅಗತ್ಯವಿದೆ. ಅದನ್ನು ಪ್ರಶ್ನೆ ಮಾಡುವುದು ಸಣ್ಣತನ, ಅಲ್ಪತನ, ಅನುಭವದ ಕೊರತೆ ಇರುವವರು ಮಾತ್ರ ಆ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಶಾಸಕ ಪ್ರೀತಂಗೌಡ ಅವರಿಗೆ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ: ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು- ಪ್ರೀತಂ ಗೌಡಗೆ ಎಚ್‍ಡಿಕೆ ತಿರುಗೇಟು