Tag: ಕೆ.ಪಿ.ಅಗ್ರಹಾರ

  • ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

    ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

    ಬೆಂಗಳೂರು: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆ.ಪಿ.ಅಗ್ರಹಾರದಲ್ಲಿ (KP Agrahara) ನಡೆದಿದೆ.

    ಗೋವರ್ಧನ್ ಆತ್ಮಹತ್ಯೆಗೊಳಗಾದ ಪತಿ. ಗೋವರ್ಧನ್ ಹಾಗೂ ಪ್ರಿಯಾ ಏಳು ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು. ಆದರೆ ಕಳೆದ ಒಂದು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಪತ್ನಿ ವಾಪಸ್ಸಾಗಿರಲಿಲ್ಲ. ಹೀಗಾಗಿ ಗೋವರ್ಧನ್ ಖಿನ್ನತೆಗೊಳಗಾಗಿದ್ದರು. ಭಾನುವಾರ ರಾತ್ರಿ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಯಂತೆಯೇ ಅಶ್ರಫ್, ರಹಿಮಾನ್ ಹತ್ಯೆಯನ್ನೂ ಎನ್‌ಐಎಗೆ ವಹಿಸಿ: ಮಂಜುನಾಥ ಭಂಡಾರಿ

    ಸೋಮವಾರ ಸಂಜೆಯಾದರೂ ಮನೆಯಿಂದ ಹೊರಬರದ ಕಾರಣ ಅನುಮಾನ ಉಂಟಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೆ.ಪಿ ಅಗ್ರಹಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    ಹೆಂಡತಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೋವರ್ಧನ್ ಸಾವಿಗೆ ಪತ್ನಿ ಪ್ರಿಯಾ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: 6 ಜನರಿದ್ದ ವಿಮಾನ ಸಾಗರದಲ್ಲಿ ಪತನ

  • ಅವಳಿಗೋಸ್ಕರ 7 ವರ್ಷ ಜೀವನ ಹಾಳುಮಾಡ್ಕೊಂಡೆ- ಪ್ರೇಯಸಿ ಮನೆ ಮುಂದೆ ಪ್ರಿಯಕರ ಆತ್ಮಹತ್ಯೆಗೆ ಯತ್ನ

    ಅವಳಿಗೋಸ್ಕರ 7 ವರ್ಷ ಜೀವನ ಹಾಳುಮಾಡ್ಕೊಂಡೆ- ಪ್ರೇಯಸಿ ಮನೆ ಮುಂದೆ ಪ್ರಿಯಕರ ಆತ್ಮಹತ್ಯೆಗೆ ಯತ್ನ

    -ಬೇರೊಬ್ಬನ ಜೊತೆ ಓಡಾಡಿದ್ರೆ ಏನ್ ಮಾಡಲಿ?

    ಬೆಂಗಳೂರು: ತಾನು ಪ್ರೀತಿಸಿದ ಯುವತಿ ಕೈಕೊಟ್ಟಳೆಂದು ಆಕೆಯ ಮನೆಯ ಮುಂದೆಯೇ ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಿಲಿಕಾನ್ ಸಿಟಿಯ ಕೆ.ಪಿ ಅಗ್ರಹಾರ 16 ನೇ ಕ್ರಾಸ್ ನಲ್ಲಿ ನಡೆದಿದೆ.

    ಮನೋಜ್ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿ. ಈತ ಪ್ರೀತಿಸಿದ ಹುಡುಗಿಯ ಮನೆ ಮುಂದೆ ನಿಂತು 5 ಲೀಟರ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ.

    ಮನೋಜ್ ಎಂಟು ವರ್ಷಗಳಿಂದ ಸ್ವಾತಿ(ಹೆಸರು ಬದಲಾಯಿಸಲಾಗಿದೆ) ಎಂಬ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಇದೀಗ ಬೇರೊಬ್ಬನ ಜೊತೆ ಓಡಾಡುತ್ತಿದ್ದಾಳೆ ಎಂದು ಶಂಕಿಸಿ ಮನೋಜ್, ಆಕೆಯ ಜೊತೆ ಜಗಳವಾಡಿದ್ದನು. ಇಬ್ಬರ ನಡುವೆ ಜಗಳವಾಗಿದ್ದರಿಂದ ಸ್ವಾತಿ, ಮನೋಜ್ ಜೊತೆಗಿನ 8 ವರ್ಷದ ಪ್ರೀತಿಗೆ ಕೊನೆ ಹಾಡಿದ್ದಳು.

    ಇಷ್ಟು ವರ್ಷ ಪ್ರೀತಿಸಿ, ಇದೀಗ ತನ್ನನ್ನು ಕೈ ಬಿಟ್ಟಳು ಎಂದು ಮನನೊಂದ ಯುವಕ ಆಕೆಯ ಮನೆಯ ಬಳಿ ಹೋಗಿ, ತನ್ನ ಗಾಡಿಯಿಂದ ಪೆಟ್ರೋಲ್ ತೆಗೆದು, ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಅಪಾಯದಿಂದ ಆತನನ್ನು ಪಾರು ಮಾಡಿದ್ದಾರೆ.

    7 ವರ್ಷದಿಂದ ಅವಳನ್ನು ನಾನು ಪ್ರೀತಿ ಮಾಡುತ್ತಿದ್ದೇನೆ. ಈಗ ಅವಳು ಬೇರೋಬ್ಬನ ಜೊತೆ ಓಡಾಡುತ್ತಿರುವುದನ್ನು ನೋಡಿದ್ದೇನೆ. ಅದಕ್ಕೆ ಸಾಕ್ಷಿ ಕೂಡ ನನ್ನ ಬಳಿ ಇದೆ. ಇಷ್ಟು ದಿನ ಅವಳಿಗೋಸ್ಕರ ಜೀವನ ಹಾಳು ಮಾಡಿಕೊಂಡಿದ್ದೇನೆ. ಇದೀಗ ಅವಳೇ ಬೇರೊಬ್ಬನ ಜೊತೆ ಓಡಾಡುತ್ತಿದ್ದಾಳೆ ಅಂದರೆ ಏನು ಮಾಡಲಿ ಅಣ್ಣಾ ಎಂದು ಸ್ಥಳೀಯರೊಬ್ಬರು ಯಾಕೆ ಪೆಟ್ರೋಲ್ ಸುರಿದುಕೊಂಡೆ ಎಂದು ಕೇಳಿದಾಗ ಮನೋಜ್ ತಿಳಿಸಿದ್ದಾನೆ.

    ಘಟನೆ ಸಂಬಂಧ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಖತರ್ನಾಕ್ ಕಳ್ಳರ ಬಂಧನ – ಕಳ್ಳರ ಐಡಿಯಾ ಕೇಳಿದ್ರೆ ನೀವೇ ದಂಗಾಗ್ತೀರಿ!

    ಖತರ್ನಾಕ್ ಕಳ್ಳರ ಬಂಧನ – ಕಳ್ಳರ ಐಡಿಯಾ ಕೇಳಿದ್ರೆ ನೀವೇ ದಂಗಾಗ್ತೀರಿ!

    – 1 ಕೋಟಿ ರೂ. ಮೌಲ್ಯದ 4 ಕೆಜಿ ಚಿನ್ನಾಭರಣ ವಶ

    ಬೆಂಗಳೂರು: ಮನೆ ಮುಂದೆ ರಂಗೋಲಿ ನೋಡಿಕೊಂಡು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರನ್ನು ಹೆಡೆಮುರಿಕಟ್ಟುವಲ್ಲಿ ಕೆ.ಪಿ. ಅಗ್ರಹಾರ ಪೊಲೀಸರು ಯಶಸ್ವಿಯಾಗಿದ್ದಾರೆ.

    ರಾಜಾ ಅಲಿಯಾಸ್ ಜಪಾನ್ ರಾಜಾ, ಕಿರಣ್ ಕುಮಾರ್ ಹಾಗೂ ನಾಗರಾಜ್ ಅಲಿಯಾಸ್ ಮತ್ತಿನಾಗ ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕೆ.ಪಿ.ಅಗ್ರಹಾರ ಸೇರಿದಂತೆ ವಿಜಯನಗರ, ಎಚ್‍ಎಸ್‍ಆರ್ ಲೇಔಟ್ ಹಾಗೂ ಹಲವು ಠಾಣೆಯಯಲ್ಲಿ ಪ್ರಕರಣ ದಾಖಲಾಗಿತ್ತು.

    ಕಳ್ಳತನ ಹೇಗೆ ಮಾಡ್ತಿದ್ರು?
    ಬಂಧಿತ ಆರೋಪಿಗಳು ಮೊದಲು ಬೈಕಿನಲ್ಲೇ ಮನೆಯನ್ನು ಗಮನಿಸುತ್ತಿದ್ದರು. ಮುಖ್ಯವಾಗಿ ಹಾಲಿನ್ ಪ್ಯಾಕ್, ರಂಗೋಲಿ, ಪೇಪರ್‍ಗಳನ್ನು ನೋಡಿ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದರು. ಯಾವ ಮನೆಯಲ್ಲಿ ರಂಗೋಲಿ ಇರುತ್ತಿರಲಿಲ್ಲವೋ ಅಥವಾ ಯಾವ ಮನೆಯಲ್ಲಿ ಹಾಲಿನ ಪ್ಯಾಕ್ ಹಾಗೂ ಪೇಪರ್‍ಗಳನ್ನು ತೆಗೆದುಕೊಳ್ಳದೇ ಇರುತ್ತಿದ್ದರೋ ಅಂತಹ ಮನೆಗಳೇ ಇವರಿಗೆ ಟಾರ್ಗೇಟ್ ಆಗಿರುತ್ತಿತ್ತು. ಮನೆಯನ್ನು ಗುರುತಿಸಿದ ಬಳಿಕ ಕ್ಷಣಮಾತ್ರದಲ್ಲಿ ಮನೆಯನ್ನು ದೋಚುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv