Tag: ಕೆ.ಪಿ.ಶ್ರೀಕಾಂತ್

  • ಪಬ್ಲಿಸಿಟಿ ಯಾಕ್ರೀ ಮಾಡ್ಬೇಕು? ನಿರ್ಮಾಪಕರನ್ನೇ ಬೆಚ್ಚಿಬೀಳಿಸಿದ ಉಪೇಂದ್ರ

    ಪಬ್ಲಿಸಿಟಿ ಯಾಕ್ರೀ ಮಾಡ್ಬೇಕು? ನಿರ್ಮಾಪಕರನ್ನೇ ಬೆಚ್ಚಿಬೀಳಿಸಿದ ಉಪೇಂದ್ರ

    ರೋಬ್ಬರಿ ಎಂಟು ವರ್ಷಗಳ ನಂತರ ನಟ ಉಪೇಂದ್ರ (Upendra) ಅವರು ನಿರ್ದೇಶಕನ ಕ್ಯಾಪ್ ಧರಿಸಿದ್ದಾರೆ. ಹಾಗಾಗಿ ಅವರ ನಿರ್ದೇಶನದ ‘ಯುಐ’ (UI) ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಸಿನಿಮಾದ ಬಹುತೇಕ ಕೆಲಸಗಳು ಮುಗಿದಿದ್ದು, ಟೀಸರ್ ಅಥವಾ ಟ್ರೈಲರ್ ಯಾವಾಗ ಬರಬಹುದು ಎನ್ನುವ ಕಾಯುವಿಕೆ ಹೆಚ್ಚಾಗಿದೆ. ಅದನ್ನು ತಿಳಿಸುವುದಕ್ಕಾಗಿಯೇ ನಿರ್ಮಾಪಕ ಕೆ.ಪಿ ಶ್ರೀಕಾಂತ್ (KP Srikanth) ಮತ್ತು ನವೀನ್ ಮನೋಹರ್ (Naveen) ಒಟ್ಟಾಗಿ ಉಪ್ಪಿ ಮನೆಗೆ ಹೋಗುತ್ತಾರೆ. ಉಪ್ಪಿ ಇಬ್ಬರೂ ನಿರ್ಮಾಪಕರಿಗೆ ಬೆಚ್ಚಿ ಬೀಳಿಸುತ್ತಾರೆ.

    ಸಿನಿಮಾ ಹೇಗೆ ಬಂದಿದೆ ಅಂತ ತಿಳಿಸೋಕೆ ಒಂದು ತುಣುಕು ರಿಲೀಸ್ ಮಾಡೋಣ ಸರ್ ಎನ್ನುತ್ತಾರೆ ನಿರ್ಮಾಪಕರು. ತುಣುಕು ತೋರಿಸಿ ಸಿನಿಮಾ ಹೇಗಿದೆ ಅಂತ ಹೇಳೋದಾಗಿದ್ದರೆ, ಎರಡು ಗಂಟೆ ಸಿನಿಮಾ ಯಾಕ್ರೀ ಮಾಡಬೇಕು ಎಂದು ಪ್ರಶ್ನೆ ಮಾಡುತ್ತಾರೆ ಉಪೇಂದ್ರ. ಸಿನಿಮಾ ಪಬ್ಲಿಸಿಟಿ ಮಾಡ್ಬೇಕಲ್ಲ ಸರ್ ಎನ್ನುವ ನಿರ್ಮಾಪಕರ ಪ್ರಶ್ನೆಗೆ, ‘ಪಬ್ಲಿಸಿಟಿ  ಯಾಕ್ ಬೇಕು?’ ಎಂದು ಕೇಳುವ ಮೂಲಕ ನಿರ್ಮಾಪಕರಿಗೆ ಗಾಬರಿ ಮೂಡಿಸುತ್ತಾರೆ. ಇದೊಂದು ಪಬ್ಲಿಸಿಟಿಗಾಗಿ ಮಾಡಿದ ವಿಡಿಯೋವಾಗಿದ್ದರೂ, ಒಂದ್ ತರಹ ಬೇರೆ ರೀತಿಯಲ್ಲಿ ಸಿನಿಮಾ ಪ್ರಮೋಷನ್ ಶುರು ಮಾಡಿದ್ದಾರೆ ಉಪೇಂದ್ರ.

    ಉಪ್ಪಿಇದೊಂದು ಹೆಸರು ಕನ್ನಡಿಗರಿಗೆ ಮಾತ್ರ ಅಲ್ಲ, ದಕ್ಷಿಣ ಭಾರತದ ಜನರಲ್ಲಿ ಕಿಚ್ಚು ಮೂಡಿಸುತ್ತದೆ. ಹುಚ್ಚು ಹಿಡಿಸುತ್ತದೆ. ಅದರಲ್ಲೂ ಇವರೇ ನಿರ್ದೇಶಕ ಅದರಂತೂ ಕೇಳಬೇಕೆ? ಇಲ್ಲಿವರೆಗೆ ಉಪ್ಪಿ ನಿರ್ದೇಶನ ಮಾಡಿದ ಸಿನಿಮಾಗಳದ್ದು ಒಂದು ತೂಕವಾದರೆ, ಈ ಯುಐ ಇದೆಯಲ್ಲ ಅದು ಭೂಮಿ ತೂಕ. ಭರ್ತಿ ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಹಲವಾರು ಗ್ರೇಟ್ ಸ್ಪೆಶಾಲಿಟಿಗಳಿವೆ. ಭಾರತದಲ್ಲೇ ಮೊದಲ ಬಾರಿ ಎನ್ನುವಂಥ ವಿಷಯ ಹಾಗೂ ತಾಂತ್ರಿಕ ಕೆಲಸಗಳಿವೆ.

    ಉಪ್ಪಿ ನಿರ್ದೇಶನ ಅಂದರೆ ಅಲ್ಲಿ ಗ್ರಾಫಿಕ್ಸ್ ಗೆ ಕೆಲಸ ಅಷ್ಟೇನೂ ಇರುತ್ತಿರಲಿಲ್ಲ. ಆದರೆ ಈ ಬಾರಿ ಉಪ್ಪಿ ಹಳೇ ಸ್ಟೈಲ್ ಮರೆತು ಅತ್ಯದ್ಭುತ ನಯಾ ತಂತ್ರಜ್ಞಾನಕ್ಕೆ ಕೈ ಹಾಕಿದ್ದಾರೆ. ಕಂಪ್ಯೂಟರೈಸ್ಡ್ ಕ್ಯಾಮೆರಾ ಬಳಸುತ್ತಿದ್ದಾರೆ. ಮೊಕೊ ಬೋಟ್ ಹೆಸರಿನ ಈ ಕ್ಯಾಮೆರಾದಲ್ಲಿ ಇಲ್ಲಿವರೆಗೆ ಭಾರತದ ಯಾವುದೇ ಸಿನಿಮಾ ಚಿತ್ರೀಕರಣ ಮಾಡಿಲ್ಲ. ಅದರ ಜೊತೆಗೆ ವರ್ಚುವಲ್ ಗ್ರಾಫಿಕ್ಸ್ ಕೂಡ ಕೆಲಸ ಮಾಡಲಿದೆ. ಕೆಲವೊಂದು ತಾಂತ್ರಿಕ ವಿಷಯ ಈಗ ಅರ್ಥವಾಗುವುದಿಲ್ಲ. ಅದನ್ನು ಸಿನಿಮಾ ನೋಡಿದ ಮೇಲೆಯೇ ಅನುಭವಿಸಬೇಕು. ಈ ಹೊಸ ತಂತ್ರಜ್ಞಾನಕ್ಕೆ ನಿರ್ಮಾಪಕರಲ್ಲಿ ಒಬ್ಬರಾದ ನವೀನ್ ಮನೋಹರ್ ನಾಯ್ಡು ಬರೀ ಹೆಗಲು ಕೊಟ್ಟಿಲ್ಲ ಜೀವವನ್ನೇ ತೇಯುತ್ತಿದ್ದಾರೆ. ಉಪ್ಪಿ ಇದಕ್ಕೆ ಹೆಮ್ಮೆ ಪಡುತ್ತಾರೆ.

    `ಇದೊಂದು ಗ್ಲೋಬಲ್ ಸಿನಿಮಾ’ ಎನ್ನುತ್ತಾರೆ ಉಪ್ಪಿ. ಯಾರೇ ನೋಡಿದರೂ ಇದನ್ನು ಒಪ್ಪಿಕೊಳ್ಳಬೇಕು. ಹಾಗಿರುತ್ತದೆ ಕತೆ ಹಾಗೂ ಮೇಕಿಂಗ್ ಎನ್ನುವುದು ಇವರ ಷರಾ. ಇದುವರೆಗೆ ಮನಸಿಗೆ ಸಂಬಂಧಿಸಿದ ವಿಷಯ ಹೆಣೆಯುತ್ತಿದ್ದ ಉಪ್ಪಿ ಈ ಬಾರಿಯೂ ಹಾಗೆಯೇ ಮಾಡಿರುತ್ತಾರೆ. ಆದರೆ ವಿಷಯ ಮಾತ್ರ ಇಡೀ ವಿಶ್ವಕ್ಕೆ ಮೆಚ್ಚುಗೆಯಾಗುತ್ತದೆ ಎನ್ನುವುದು ಇವರ ನಂಬಿಕೆ. ಇದರ ಜೊತೆಗೆ ಅಪ್‌ಡೇಟ್ ತಂತ್ರಜ್ಞಾನವನ್ನು ದಿಕ್ಕೆಡಿಸುವಂತೆ ಬಳಸಿಕೊಳ್ಳಲಿದ್ದಾರೆ. ಅದಕ್ಕಾಗಿಯೇ ಹಗಲು ರಾತ್ರಿ ಬೆವರು ಸುರಿಸುತ್ತಿದ್ದಾರೆ. ಇನ್ನೇನು ಮುಕ್ತಾಯ ಹಂತಕ್ಕೆ ಬಂದಿದೆ. ಬಿಡುಗಡೆ ಬಗ್ಗೆ ಸದ್ಯಕ್ಕೆ ಮಾತಾಡೋದು ಬೇಡ.

     

    ಅದ್ಭುತ ತಂಡವನ್ನು ಕಟ್ಟಿಕೊಂಡು ಉಪ್ಪಿ ಹೊಸ ಯುದ್ಧಕ್ಕೆ ಸಜ್ಜಾಗಿದ್ದಾರೆ. ಎಲ್ಲರೂ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಅದಕ್ಕೇ ಇದನ್ನು ಮಾಡುತ್ತಿದ್ಧಾರೆ ಎಂದು ತಿಳಿಯಬೇಡಿ. ಈಗ ಆಗಬೇಕಿತ್ತು. ಆಗುತ್ತಿದೆ ಅಷ್ಟೇ. ಇದಕ್ಕೆ ಲಹರಿ ಆಡಿಯೋ (Lahari Audio) ಸಂಸ್ಥೆ ಮಾಲೀಕರ ಮಗ ಮನೋಹರ್ ನಾಯ್ಡು ಮಕ್ಕಳಾದ ಚಂದ್ರು, ನವೀನ್ ಹಾಗೂ ಸಲಗ ಕೆ.ಪಿ.ಶ್ರೀಕಾಂತ್ (KP Srikanth)ಬಂಡವಾಳ ಹಾಕಿದ್ದಾರೆ. ಎಲ್ಲರೂ ಒಂದೊಂದೆ ಕೆಲಸವನ್ನು ಹಂಚಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಡಿಟಿಂಗ್ ಟೇಬಲ್ ಮುಂದೆ ಉಪ್ಪಿ ‘ಯುಐ’: ಹೊಸ ಅಪ್ ಡೇಟ್ ಏನು?

    ಎಡಿಟಿಂಗ್ ಟೇಬಲ್ ಮುಂದೆ ಉಪ್ಪಿ ‘ಯುಐ’: ಹೊಸ ಅಪ್ ಡೇಟ್ ಏನು?

    ರೋಬ್ಬರಿ ಎಂಟು ವರ್ಷಗಳ ನಂತರ ಉಪೇಂದ್ರ ನಿರ್ದೇಶಕನ ಕ್ಯಾಪ್ ಧರಿಸಿದ್ದಾರೆ. ಈಗಾಗಲೇ ‘ಯುಐ’ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿರುವ ರಿಯಲ್ ಸ್ಟಾರ್, ಸದ್ಯ ಎಡಿಟಿಂಗ್ (Editing)ಟೇಬಲ್ ಮುಂದೆ ಕೂತು, ಕನಸನ್ನು ಹೊಲೆಯುತ್ತಿದ್ದಾರೆ. ಎಡಿಟಿಂಗ್ ಕೆಲಸ ಮುಗಿಯುತ್ತಿದ್ದಂತೆಯೇ ಮತ್ತ್ಯಾವ ಅಪ್ ಡೇಟ್ ಕೊಡ್ತಾರೋ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

    ಕನ್ನಡದ ಮತ್ತೊಂದು ಸಿನಿಮಾ ವಿಶ್ವ ಪರ್ಯಟನೆಗೆ ಸಜ್ಜಾಗಿದೆ. ಕನ್ನಡದ ಮತ್ತೊಂದು ಸಿನಿಮಾ ಸಿನಿ ಪ್ರೇಕ್ಷಕರನ್ನು ಬೆಚ್ಚಿ ಬೀಳಿಸಲಿದೆ. ಅದು ಬೇರಾವುದೂ ಅಲ್ಲ. ಒನ್ ಆನ್ ಓನ್ಲಿ ಉಪ್ಪಿ ನಿರ್ದೇಶನ ಮಾಡಿ, ನಟಿಸುತ್ತಿರುವ ಯುಐ (UI). ಯಾವಾಗ ಜನರು ಟೈಟಲ್ ಕೇಳಿದರೋ ತಲೆ ಕೆಡಿಸಿಕೊಂಡರು. ಅದಕ್ಕೆ ಉಪ್ಪಿ (Upendra) ಉತ್ತರ ಕೊಡುತ್ತಾರೆ. ಆದರೆ ಅದು ಸಿನಿಮಾ ಬಿಡುಗಡೆಯಾದ ಮೇಲೆ. ಹಾಗಿದ್ದರೆ ಏನು ನಡೆಯುತ್ತಿದೆ ಯುಐ ಅಡ್ಡದಲ್ಲಿ? ಏನು ಸ್ಪೆಶಾಲಿಟಿ ಹೊಂದಿದೆ ಈ ಸಿನಿಮಾ? ಇದನ್ನು ಗ್ಲೋಬಲ್ ಸಿನಿಮಾ ಎಂದಿದ್ದೇಕೆ ರಿಯಲ್‌ಸ್ಟಾರ್? ಆ ಕಥನ ನಿಮ್ಮ ಮುಂದೆ.

    ಉಪ್ಪಿಇದೊಂದು ಹೆಸರು ಕನ್ನಡಿಗರಿಗೆ ಮಾತ್ರ ಅಲ್ಲ, ದಕ್ಷಿಣ ಭಾರತದ ಜನರಲ್ಲಿ ಕಿಚ್ಚು ಮೂಡಿಸುತ್ತದೆ. ಹುಚ್ಚು ಹಿಡಿಸುತ್ತದೆ. ಅದರಲ್ಲೂ ಇವರೇ ನಿರ್ದೇಶಕ ಅದರಂತೂ ಕೇಳಬೇಕೆ? ಇಲ್ಲಿವರೆಗೆ ಉಪ್ಪಿ ನಿರ್ದೇಶನ ಮಾಡಿದ ಸಿನಿಮಾಗಳದ್ದು ಒಂದು ತೂಕವಾದರೆ, ಈ ಯುಐ ಇದೆಯಲ್ಲ ಅದು ಭೂಮಿ ತೂಕ. ಭರ್ತಿ ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಹಲವಾರು ಗ್ರೇಟ್ ಸ್ಪೆಶಾಲಿಟಿಗಳಿವೆ. ಭಾರತದಲ್ಲೇ ಮೊದಲ ಬಾರಿ ಎನ್ನುವಂಥ ವಿಷಯ ಹಾಗೂ ತಾಂತ್ರಿಕ ಕೆಲಸಗಳಿವೆ. ಅದಕ್ಕಾಗಿಯೇ ಬೆಂಗಳೂರು ಸಮೀಪ ಹತ್ತು ಎಕರೆ ಜಾಗದಲ್ಲಿ ಹಿಂದೆಂದೂ ಕಾಣದಂಥ ಸೆಟ್ ಹಾಕಲಾಗಿದೆ.

    ಉಪ್ಪಿ ನಿರ್ದೇಶನ ಅಂದರೆ ಅಲ್ಲಿ ಗ್ರಾಫಿಕ್ಸ್ ಗೆ ಕೆಲಸ ಅಷ್ಟೇನೂ ಇರುತ್ತಿರಲಿಲ್ಲ. ಆದರೆ ಈ ಬಾರಿ ಉಪ್ಪಿ ಹಳೇ ಸ್ಟೈಲ್ ಮರೆತು ಅತ್ಯದ್ಭುತ ನಯಾ ತಂತ್ರಜ್ಞಾನಕ್ಕೆ ಕೈ ಹಾಕಿದ್ದಾರೆ. ಕಂಪ್ಯೂಟರೈಸ್ಡ್ ಕ್ಯಾಮೆರಾ ಬಳಸುತ್ತಿದ್ದಾರೆ. ಮೊಕೊ ಬೋಟ್ ಹೆಸರಿನ ಈ ಕ್ಯಾಮೆರಾದಲ್ಲಿ ಇಲ್ಲಿವರೆಗೆ ಭಾರತದ ಯಾವುದೇ ಸಿನಿಮಾ ಚಿತ್ರೀಕರಣ ಮಾಡಿಲ್ಲ. ಅದರ ಜೊತೆಗೆ ವರ್ಚುವಲ್ ಗ್ರಾಫಿಕ್ಸ್ ಕೂಡ ಕೆಲಸ ಮಾಡಲಿದೆ. ಕೆಲವೊಂದು ತಾಂತ್ರಿಕ ವಿಷಯ ಈಗ ಅರ್ಥವಾಗುವುದಿಲ್ಲ. ಅದನ್ನು ಸಿನಿಮಾ ನೋಡಿದ ಮೇಲೆಯೇ ಅನುಭವಿಸಬೇಕು. ಈ ಹೊಸ ತಂತ್ರಜ್ಞಾನಕ್ಕೆ ನಿರ್ಮಾಪಕರಲ್ಲಿ ಒಬ್ಬರಾದ ನವೀನ್ ಮನೋಹರ್ ನಾಯ್ಡು ಬರೀ ಹೆಗಲು ಕೊಟ್ಟಿಲ್ಲ ಜೀವವನ್ನೇ ತೇಯುತ್ತಿದ್ದಾರೆ. ಉಪ್ಪಿ ಇದಕ್ಕೆ ಹೆಮ್ಮೆ ಪಡುತ್ತಾರೆ.

    `ಇದೊಂದು ಗ್ಲೋಬಲ್ ಸಿನಿಮಾ’ ಎನ್ನುತ್ತಾರೆ ಉಪ್ಪಿ. ಯಾರೇ ನೋಡಿದರೂ ಇದನ್ನು ಒಪ್ಪಿಕೊಳ್ಳಬೇಕು. ಹಾಗಿರುತ್ತದೆ ಕತೆ ಹಾಗೂ ಮೇಕಿಂಗ್ ಎನ್ನುವುದು ಇವರ ಷರಾ. ಇದುವರೆಗೆ ಮನಸಿಗೆ ಸಂಬಂಧಿಸಿದ ವಿಷಯ ಹೆಣೆಯುತ್ತಿದ್ದ ಉಪ್ಪಿ ಈ ಬಾರಿಯೂ ಹಾಗೆಯೇ ಮಾಡಿರುತ್ತಾರೆ. ಆದರೆ ವಿಷಯ ಮಾತ್ರ ಇಡೀ ವಿಶ್ವಕ್ಕೆ ಮೆಚ್ಚುಗೆಯಾಗುತ್ತದೆ ಎನ್ನುವುದು ಇವರ ನಂಬಿಕೆ. ಇದರ ಜೊತೆಗೆ ಅಪ್‌ಡೇಟ್ ತಂತ್ರಜ್ಞಾನವನ್ನು ದಿಕ್ಕೆಡಿಸುವಂತೆ ಬಳಸಿಕೊಳ್ಳಲಿದ್ದಾರೆ. ಅದಕ್ಕಾಗಿಯೇ ಹಗಲು ರಾತ್ರಿ ಬೆವರು ಸುರಿಸುತ್ತಿದ್ದಾರೆ. ಇನ್ನೇನು ಮುಕ್ತಾಯ ಹಂತಕ್ಕೆ ಬಂದಿದೆ. ಬಿಡುಗಡೆ ಬಗ್ಗೆ ಸದ್ಯಕ್ಕೆ ಮಾತಾಡೋದು ಬೇಡ.

     

    ಅದ್ಭುತ ತಂಡವನ್ನು ಕಟ್ಟಿಕೊಂಡು ಉಪ್ಪಿ ಹೊಸ ಯುದ್ಧಕ್ಕೆ ಸಜ್ಜಾಗಿದ್ದಾರೆ. ಎಲ್ಲರೂ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಅದಕ್ಕೇ ಇದನ್ನು ಮಾಡುತ್ತಿದ್ಧಾರೆ ಎಂದು ತಿಳಿಯಬೇಡಿ. ಈಗ ಆಗಬೇಕಿತ್ತು. ಆಗುತ್ತಿದೆ ಅಷ್ಟೇ. ಇದಕ್ಕೆ ಲಹರಿ ಆಡಿಯೋ (Lahari Audio) ಸಂಸ್ಥೆ ಮಾಲೀಕರ ಮಗ ಮನೋಹರ್ ನಾಯ್ಡು ಮಕ್ಕಳಾದ ಚಂದ್ರು, ನವೀನ್ ಹಾಗೂ ಸಲಗ ಕೆ.ಪಿ.ಶ್ರೀಕಾಂತ್ (KP Srikanth)ಬಂಡವಾಳ ಹಾಕಿದ್ದಾರೆ. ಎಲ್ಲರೂ ಒಂದೊಂದೆ ಕೆಲಸವನ್ನು ಹಂಚಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟಗರು 2 ಚಿತ್ರಕ್ಕೆ ನಿರ್ದೇಶಕರು ಯಾರು?: ಶಿವಣ್ಣ ಕೊಟ್ಟರು ಉತ್ತರ

    ಟಗರು 2 ಚಿತ್ರಕ್ಕೆ ನಿರ್ದೇಶಕರು ಯಾರು?: ಶಿವಣ್ಣ ಕೊಟ್ಟರು ಉತ್ತರ

    ಶಿವರಾಜ್ ಕುಮಾರ್ (Shivaraj Kumar) ಹುಟ್ಟು ಹಬ್ಬದ ದಿನದಂದು ‘ಟಗರು 2’ (Tagaru 2) ಸಿನಿಮಾದ ಪೋಸ್ಟರ್ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು ನಿರ್ಮಾಪಕ ಕೆ.ಪಿ ಶ್ರೀಕಾಂತ್ (KP Srikanth) . ಪೋಸ್ಟರ್ ನಲ್ಲಿ ಹೆಚ್ಚಿನ ಮಾಹಿತಿ ಇಲ್ಲದೇ ಇದ್ದರೂ, ಟಗರು 2 ಸಿನಿಮಾದ ಪೋಸ್ಟರ್ ಹಲವಾರು ಕುತೂಹಲಗಳನ್ನು ಹುಟ್ಟು ಹಾಕಿತ್ತು. ಕೇವಲ ನಿರ್ಮಾಪಕರ ಹೆಸರು ಇದ್ದ ಕಾರಣದಿಂದಾಗಿ ನಿರ್ದೇಶಕರು ಯಾರು ಎನ್ನುವ ಪ್ರಶ್ನೆ ಕೂಡ ಮೂಡಿತ್ತು.

    ಈ ಕುರಿತು ಸ್ವತಃ ಶಿವರಾಜ್ ಕುಮಾರ್ ಅವರ ಸ್ಪಷ್ಟನೆ ನೀಡಿದ್ದಾರೆ. ಟಗರು 2 ಸಿನಿಮಾ ಮಾಡಬೇಕು ಎನ್ನುವುದು ಈ ಹಿಂದೆಯೇ ನಿರ್ಧಾರವಾಗಿತ್ತು. ನಿರ್ದೇಶಕ ಸೂರಿ ಅವರು ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾದರು. ಟಗರು ಕಾನ್ಸೆಪ್ಟ್ ಸೂರಿ (Suri) ಅವರ ಕಲ್ಪನೆ. ಅದನ್ನು ಅವರೇ ಮಾಡಬೇಕು. ಬ್ಯಾಡ್‌ ಮ್ಯಾನರ್ಸ್ ನಂತರ ಭೇಟಿ ಮಾಡುವುದಾಗಿ ಹೇಳಿದ್ದಾರೆ. ಅವರೇ ಆ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ:ಮಳೆ, ಕೊರೆವ ಚಳಿ ನಡುವೆ ಕಾಶ್ಮೀರದಲ್ಲಿ ಸಾನ್ಯ ಟ್ರೆಕ್ಕಿಂಗ್

    ಈ ಹಿಂದೆ ದುನಿಯಾ ಸೂರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಟಗರು ಸಿನಿಮಾ ಶಿವರಾಜ್ ಕುಮಾರ್ ವೃತ್ತಿ ಬದುಕಿಗೆ ವಿಭಿನ್ನ ಚಿತ್ರ ಎನಿಸಿತ್ತು. ಈ ಸಿನಿಮಾದಲ್ಲಿ ಶಿವಣ್ಣ ಪೊಲೀಸ್ ಆಫೀಸರ್ ಪಾತ್ರ ಮಾಡಿದ್ದರು. ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದರು. ಇಂತಹ ಸಿನಿಮಾದ ಮುಂದುವರೆದ ಭಾಗ ಮುಂದೆ ಬರಲಿದೆ.

    ಪೋಸ್ಟರ್ ನಲ್ಲಿ ಸೂರಿ ಹೆಸರು ಹಾಕದೇ ಇದ್ದರೂ, ಟಗರಿನೊಂದಿಗೆ ಶಿವಣ್ಣ ಇರುವ ಪೋಸ್ಟರ್ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿದೆ. ಟಗರು ಸಿನಿಮಾವನ್ನು ನಿರ್ಮಾಣ ಮಾಡಿದ್ದ ಕೆ.ಪಿ ಶ್ರೀಕಾಂತ್ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದು, ಲಹರಿ ಫಿಲ್ಮ್ಸ್ ಕೂಡ ಕೈ ಜೋಡಿಸಿದೆ. ಮುಂದಿನ ದಿನಗಳಲ್ಲಿ ಈ ಚಿತ್ರದ ಕುರಿತು ಮತ್ತಷ್ಟು ಮಾಹಿತಿ ಸಿಗಬಹುದು.

     

    ಮೊನ್ನೆ ಶಿವರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ (Birthday) ಹಲವಾರು ಚಿತ್ರಗಳು ಘೋಷಣೆ ಆಗಿವೆ. ಅದರಲ್ಲೂ ಮೂರು ಮಲ್ಟಿಸ್ಟಾರ್ ಚಿತ್ರಗಳು ಘೋಷಣೆ ಆಗುವ ಮೂಲಕ ಕುತೂಹಲ ಮೂಡಿಸುತ್ತಿವೆ.  ಶಿವರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಗಣೇಶ್, ಪ್ರಭುದೇವ, ಉಪೇಂದ್ರ, ರಾಜ್ ಬಿ ಶೆಟ್ಟಿ, ಅಜಯ್ ರಾವ್ ಅವರು ನಟಿಸುತ್ತಿರುವುದು ಮತ್ತಷ್ಟು ಕಾಯುವಂತೆ ಮಾಡಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಟಗರು 2’ ಬಂತು ಟಗರು: ಯಾವಾಗ ಅಂತಾರೆ ಶಿವಣ್ಣ ಫ್ಯಾನ್ಸ್

    ‘ಟಗರು 2’ ಬಂತು ಟಗರು: ಯಾವಾಗ ಅಂತಾರೆ ಶಿವಣ್ಣ ಫ್ಯಾನ್ಸ್

    ಶಿವರಾಜ್ ಕುಮಾರ್ (Shivaraj Kumar) ಹುಟ್ಟು ಹಬ್ಬದ ದಿನದಂದು ‘ಟಗರು 2’ ಸಿನಿಮಾದ ಪೋಸ್ಟರ್ ಹಂಚಿಕೊಂಡು ಅಚ್ಚರಿ ಮೂಡಿಸಿದ್ದಾರೆ ನಿರ್ಮಾಪಕ ಕೆ.ಪಿ ಶ್ರೀಕಾಂತ್ (KP Srikanth) . ಪೋಸ್ಟರ್ ನಲ್ಲಿ ಹೆಚ್ಚಿನ ಮಾಹಿತಿ ಇಲ್ಲದೇ ಇದ್ದರೂ, ಟಗರು 2 ಸಿನಿಮಾದ ಪೋಸ್ಟರ್ ಹಲವಾರು ಕುತೂಹಲಗಳನ್ನು ಹುಟ್ಟು ಹಾಕಿದೆ. ಈ ಸಿನಿಮಾ ಯಾವಾಗ ಬರುತ್ತದೆ ಎಂದು ಹೇಳದೇ ಇದ್ದರೂ, ಟಗರು 2 (Tagaru 2) ಸಿನಿಮಾ ಬರುವುದು ನಿಶ್ಚಿತ ಎಂದು ಗೊತ್ತಾಗಿದೆ.

    ಈ ಹಿಂದೆ ದುನಿಯಾ ಸೂರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಟಗರು ಸಿನಿಮಾ ಶಿವರಾಜ್ ಕುಮಾರ್ ವೃತ್ತಿ ಬದುಕಿಗೆ ವಿಭಿನ್ನ ಚಿತ್ರ ಎನಿಸಿತ್ತು. ಈ ಸಿನಿಮಾದಲ್ಲಿ ಶಿವಣ್ಣ ಪೊಲೀಸ್ ಆಫೀಸರ್ ಪಾತ್ರ ಮಾಡಿದ್ದರು. ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದರು. ಇಂತಹ ಸಿನಿಮಾದ ಮುಂದುವರೆದ ಭಾಗ ಮುಂದೆ ಬರಲಿದೆ. ಇದನ್ನೂ ಓದಿ:ಕೊನೆಗೂ ಮದುವೆ ಬಗ್ಗೆ ಸಿಕ್ರೇಟ್ ಬಿಟ್ಟುಕೊಟ್ಟ ವಿಜಯ್ ದೇವರಕೊಂಡ

    ಪೋಸ್ಟರ್ ನಲ್ಲಿ ಸೂರಿ ಹೆಸರು ಹಾಕದೇ ಇದ್ದರೂ, ಟಗರಿನೊಂದಿಗೆ ಶಿವಣ್ಣ ಇರುವ ಪೋಸ್ಟರ್ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿದೆ. ಟಗರು ಸಿನಿಮಾವನ್ನು ನಿರ್ಮಾಣ ಮಾಡಿದ್ದ ಕೆ.ಪಿ ಶ್ರೀಕಾಂತ್ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದು, ಲಹರಿ ಫಿಲ್ಮ್ಸ್ ಕೂಡ ಕೈ ಜೋಡಿಸಿದೆ. ಮುಂದಿನ ದಿನಗಳಲ್ಲಿ ಈ ಚಿತ್ರದ ಕುರಿತು ಮತ್ತಷ್ಟು ಮಾಹಿತಿ ಸಿಗಬಹುದು.

    ನಿನ್ನೆ ಶಿವರಾಜ್ ಕುಮಾರ್ ಹುಟ್ಟು ಹಬ್ಬಕ್ಕೆ (Birthday) ಹಲವಾರು ಚಿತ್ರಗಳು ಘೋಷಣೆ ಆಗಿವೆ. ಅದರಲ್ಲೂ ಮೂರು ಮಲ್ಟಿಸ್ಟಾರ್ ಚಿತ್ರಗಳು ಘೋಷಣೆ ಆಗುವ ಮೂಲಕ ಕುತೂಹಲ ಮೂಡಿಸುತ್ತಿವೆ.  ಶಿವರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಗಣೇಶ್, ಪ್ರಭುದೇವ, ಉಪೇಂದ್ರ, ರಾಜ್ ಬಿ ಶೆಟ್ಟಿ, ಅಜಯ್ ರಾವ್ ಅವರು ನಟಿಸುತ್ತಿರುವುದು ಮತ್ತಷ್ಟು ಕಾಯುವಂತೆ ಮಾಡಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುದೀಪ್ ಮನೆಯಿಂದ ಮತ್ತೊಬ್ಬ ಸ್ಟಾರ್: ಸಂಚಿತ್ ಚಿತ್ರಕ್ಕೆ ಮುಹೂರ್ತ

    ಸುದೀಪ್ ಮನೆಯಿಂದ ಮತ್ತೊಬ್ಬ ಸ್ಟಾರ್: ಸಂಚಿತ್ ಚಿತ್ರಕ್ಕೆ ಮುಹೂರ್ತ

    ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ (Sanchit Sanjeev) ಇಂದು ಅಧಿಕೃತವಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಸಂಚಿತ್ ಸಂಜೀವ ನಟಿಸಿ, ನಿರ್ದೇಶನ ಮಾಡಲಿರುವ ಚಿತ್ರಕ್ಕೆ ಇಂದು ಬೆಂಗಳೂರಿನ ಗವಿಪುರಂನ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ (Muhurta) ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅತಿಥಿಯಾಗಿ ಆಗಮಿಸಿದ್ದರು.

    ಪ್ರಿಯಾ ಸುದೀಪ್, ಲಹರಿ ಸಂಸ್ಥೆ ಹಾಗೂ ಕೆ.ಪಿ.ಶ್ರೀಕಾಂತ್ (K.P. Srikanth) ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ನಟನೆಯ ಜೊತೆ ಸಂಚಿತ್ ಆಕ್ಷನ್ ಕಟ್ ಹೇಳುತ್ತಿರುವುದು ವಿಶೇಷ. ಕ್ರೈಂ-ಡ್ರಾಮಾ ಆಧರಿಸಿದ ಸಿನಿಮಾದಲ್ಲಿ ತಂದೆ ಮಗನ ಸೆಂಟಿಮೆಂಟ್ ಇದೆಯಂತೆ. ಸುದೀಪ್ (Kichcha Sudeep) ಸಲಹೆಯಂತೆ ಸಂಚಿತ್ ಈ ಸಿನಿಮಾಗಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರಂತೆ. ಬಹುತೇಕ ಹೊಸಬರೇ ಕೂಡಿಕೊಂಡು ಈ ಸಿನಿಮಾವನ್ನು ತಯಾರಿಸುತ್ತಿದ್ದಾರೆ. ಇದನ್ನೂ ಓದಿ:‘ಗೀತಾ ಗೋವಿಂದಂ’ ತಂಡದಿಂದ ಹೊಸ ಚಿತ್ರ- ರಶ್ಮಿಕಾ ಬದಲು ವಿಜಯ್‌ಗೆ ನಾಯಕಿಯಾದ ಮೃಣಾಲ್

    ಸಾಕಷ್ಟು ಸಮಯದಿಂದ ಸಂಚಿತ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಬಗ್ಗೆ ಮಾತುಗಳು ಕೇಳಿಬರುತ್ತಿತ್ತು. ಇದೀಗ ಅದು ನೆರವೇರಿದೆ. ಹಾಗಂತ ಸಂಚಿತ್ ದಿಢೀರ್ ಅಂತ ಸಿನಿಮಾ ರಂಗಕ್ಕೆ ಬರುತ್ತಿಲ್ಲ. ಈಗಾಗಲೇ ಕಿಚ್ಚನ ‘ಅಂಬಿ ನಿಂಗೆ ವಯಸ್ಸಾಯ್ತೋ’, ‘ವಿಕ್ರಾಂತ್ ರೋಣ’ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಆದರೆ ಕ್ಯಾಮೆರಾ ಮುಂದೆ ಅಲ್ಲ ಹಿಂದೆ ಗುರುತಿಸಿಕೊಂಡಿದ್ದರು. ಜೊತೆಗೆ ಮುಂಬೈನಲ್ಲಿ ನಟನೆಯನ್ನು ಕೂಡ ಕಲಿತು ಬಂದಿದ್ದಾರೆ.

     

    ಲಹರಿ ಸಂಸ್ಥೆಯ (Lahari Films) ಮನೋಹರ್ ನಾಯ್ಡು, ವೀನಸ್ ಮೂವಿಸ್‌ನ ಕೆ. ಪಿ ಶ್ರೀಕಾಂತ್ ಈಗಾಗಲೇ 2 ಸಿನಿಮಾ ನಿರ್ಮಿಸ್ತಿದ್ದಾರೆ. ಉಪೇಂದ್ರ ನಟನೆಯ ‘ಯುಐ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ಸೆಟ್ಟೇರಿ ನಿಂತೇ ಹೋಗಿದ್ದ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಮರುಜೀವ ಕೊಟ್ಟಿದ್ದಾರೆ. ಈ ಜೋಡಿಯ ಯಾದಿಗೆ ಇದೊಂದು ಚಿತ್ರ ಸೇರ್ಪಡೆಯಾಗಿದೆ.

  • ವಿಜಯದಶಮಿಗೆ ‘ಯುಐ’ ಪೋಸ್ಟರ್ ಮೂಲಕ ಮೆದುಳಿಗೆ ಹುಳು ಬಿಟ್ಟ ಉಪೇಂದ್ರ

    ವಿಜಯದಶಮಿಗೆ ‘ಯುಐ’ ಪೋಸ್ಟರ್ ಮೂಲಕ ಮೆದುಳಿಗೆ ಹುಳು ಬಿಟ್ಟ ಉಪೇಂದ್ರ

    ಪೇಂದ್ರ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಯುಐ’ (UI) ಸಿನಿಮಾದ ಮತ್ತೊಂದು ಪೋಸ್ಟರ್ (poster) ವಿಜಯ ದಶಕಮಿಗಾಗಿ ಬಿಡುಗಡೆಗೊಂಡಿದ್ದು, ಈ ಪೋಸ್ಟರ್ ಮೂಲಕವೂ ಉಪೇಂದ್ರ ನೋಡುಗರ ಮೆದುಳಿಗೆ ಹುಳು ಬಿಟ್ಟಿದ್ದಾರೆ. ಈ ಪೋಸ್ಟರ್ ಕೂಡ ವಿಭಿನ್ನವಾಗಿದ್ದು ನಾನಾ ಅರ್ಥಗಳನ್ನು ನೀಡುತ್ತಿದೆ. ಕೈಯಲ್ಲಿ ರಕ್ತಸಿಕ್ತ ಖಡ್ಗ, ಸೂರ್ಯನಿಗೆ ಮರೆಮಾಡಿ ನಿಂತಿರುವ ವ್ಯಕ್ತಿ, ವಿಶೇಷ ವೇಷಭೂಷಣ ಸೇರಿದಂತೆ ಹತ್ತು ಹಲವು ಸಂಗತಿಗಳು ಅಲ್ಲಿವೆ.

    ವಿಭಿನ್ನ ಶೀರ್ಷಿಕೆಯಿಂದಾಗಿಯೇ ಈಗಾಗಲೇ ಗಮನ ಸೆಳೆದಿರುವ ಉಪೇಂದ್ರ,(Upendra) ಸಿನಿಮಾ ಟೈಟಲ್ ಏನನ್ನು ಧ್ವನಿಸುತ್ತದೆ ಎನ್ನುವ ಕುರಿತು ಈವರೆಗೂ ಹೇಳಿಲ್ಲ. ನೀವು ಟೈಟಲ್ ಅನ್ನು ಏನು ಬೇಕಾದರೂ ಕರೆದುಕೊಳ್ಳಿ ಎಂದು ನೋಡುಗರಿಗೆ ಅಂತಿಮ ಆಯ್ಕೆ ಬಿಟ್ಟಿದ್ದಾರೆ. ಹಲವು ದಿನಗಳಿಂದ ಭರದಿಂದ ಚಿತ್ರೀಕರಣವನ್ನೂ ಆರಂಭಿಸಿರುವ ಉಪ್ಪಿ, ಸಿನಿಮಾ ರಂಗದ ಅನೇಕ ಸಂಗತಿಗಳನ್ನೂ ಈ ಚಿತ್ರದಲ್ಲಿ ಹೇಳಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ನಾನು ಲವ್ ಮಾಡೋಕೆ ಬಂದಿಲ್ಲ: ಗೊಬ್ಬರಗಾಲಗೆ ಕಾವ್ಯಶ್ರೀ ವಾರ್ನಿಂಗ್

    ಸಮಾಜ, ಮಾಧ್ಯಮ, ಕಾನೂನು, ಆಡಳಿತ ವ್ಯವಸ್ಥೆ, ಧಾರ್ಮಿಕ ಆಚರಣೆಗಳು ಹೀಗೆ ಸಾಕಷ್ಟು ವಿಷಯಗಳನ್ನು ಚಿತ್ರಕಥೆಯಲ್ಲಿ ಬೆರೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಉಪ್ಪಿ ಮಾತ್ರ ಈವರೆಗೂ ಸಿನಿಮಾದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ಜಿ.ಮನೋಹರನ್ ಮತ್ತು ಶ್ರೀಕಾಂತ್ ಕೆ.ಪಿ (K.P. Srikanth) ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಲಹರಿ ವೇಲು (Lahari Velu) ಅವರು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಉಪ್ಪಿ ಹೊಸ ಸಿನಿಮಾ ಶೂಟಿಂಗ್ ಶುರು : ಕೆಜಿಎಫ್ ಬೆಡಗಿ ಈ ಸಿನಿಮಾದ ನಾಯಕಿ?

    ಉಪ್ಪಿ ಹೊಸ ಸಿನಿಮಾ ಶೂಟಿಂಗ್ ಶುರು : ಕೆಜಿಎಫ್ ಬೆಡಗಿ ಈ ಸಿನಿಮಾದ ನಾಯಕಿ?

    ರೋಬ್ಬರಿ ಏಳು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಕನ ಕ್ಯಾಪ್ ಧರಿಸಿದ್ದಾರೆ. ಮೊನ್ನೆಯಷ್ಟೇ ಹೊಸ ಸಿನಿಮಾದ ಮುಹೂರ್ತ ಮುಗಿಸಿದ್ದ ಉಪ್ಪಿ, ಇದೀಗ ಬೆಂಗಳೂರಿನ ದೇವನಹಳ್ಳಿ ಬಳಿಯ ಖಾಸಗಿ ಹೋಟೆಲ್ ನಲ್ಲಿ ಚಿತ್ರೀಕರಣ ಆರಂಭಿಸಿದ್ದಾರೆ. ಯುಐ ಅಥವಾ ನಾನಾ ಅರ್ಥಗಳನ್ನು ಹೊಮ್ಮಿಸುವಂತಹ ಟೈಟಲ್ ಅನ್ನು ತಮ್ಮ ಸಿನಿಮಾಗೆ ಇಟ್ಟು ಕುತೂಹಲ ಮೂಡಿಸಿರುವ ಅವರು, ಈ ಚಿತ್ರಕ್ಕಾಗಿ ಯಾವ ರೀತಿಯ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನುವುದು ಸಸ್ಪೆನ್ಸ್.

    ಸಾಮಾನ್ಯವಾಗಿ ತಮ್ಮ ಚಿತ್ರಗಳಿಗೆ ಹೆಸರಾಂತ, ಪ್ರತಿಭಾನ್ವಿತ ನಾಯಕಿಯರನ್ನೇ ಆಯ್ಕೆ ಮಾಡಿಕೊಳ್ಳುವ ಉಪ್ಪಿ, ಈ ಬಾರಿಯೂ ಅದನ್ನೇ ಅನುಸರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಕೆಜಿಎಫ್ ಸಿನಿಮಾದ ಮೂಲಕ ಹೆಸರು ಮಾಡಿರುವ ಶ್ರೀನಿಧಿ ಶೆಟ್ಟಿ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಲು ಯೋಚಿಸಿದ್ದಾರೆ ಎನ್ನಲಾಗುತ್ತಿದೆ. ಒಂದು ಹಂತದ ಮಾತುಕತೆ ಕೂಡ ಮುಗಿದಿದೆಯಂತೆ. ಆದರೆ, ಅಧಿಕೃತ ಹೇಳಿಕೆ ಬಾಕಿ ಇದೆ ಎನ್ನುವ ಮಾತೂ ಇದೆ. ಇದನ್ನೂ ಓದಿ:ತಮಿಳು ಸಿನಿಮಾ ಮಾಡ್ತಾರಾ ಅಥವಾ ಕನ್ನಡದ ನಿರ್ದೇಶಕನಿಗೆ ಮಣೆ ಹಾಕ್ತಾರಾ ಯಶ್?

    ಉಪ್ಪಿ ಸಿನಿಮಾಗಳು ಅಂದಾಗ ಅಲ್ಲೊಂದು ನಿರೀಕ್ಷೆ ಇದ್ದೇ ಇರುತ್ತದೆ. ಈ ಸಿನಿಮಾ ಟೈಟಲ್ ನಿಂದಾಗಿಯೇ ಸಾಕಷ್ಟು ಕ್ಯೂರಿಯಾಸಿಟಿ ಹುಟ್ಟಿಸಿದೆ. ಅಲ್ಲದೇ, ಈಗಾಗಲೇ ರಿಲೀಸ್ ಮಾಡಿರುವ ಪೋಸ್ಟರ್ ಕೂಡ ಹಲವಾರು ಕಥೆಗಳನ್ನು ಹೇಳುತ್ತಿದೆ. ಕನ್ನಡದ ಜೊತೆ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್, ಮಲಯಾಳಂ ಭಾಷೆಯಲ್ಲೂ ಈ ಸಿನಿಮಾ ಮೂಡಿ ಬರುತ್ತಿರುವುದು ಮತ್ತೊಂದು ವಿಶೇಷ. ಅಂದಹಾಗೆ ಲಹರಿ ಸಂಸ್ಥೆಯ ಜೊತೆಗೆ ಕೆ.ಪಿ.ಶ್ರೀಕಾಂತ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

    Live Tv

  • ಉಪೇಂದ್ರ ಹೊಸ ಸಿನಿಮಾ ಮುಹೂರ್ತ : ಸುದೀಪ್, ಶಿವಣ್ಣ, ಧನಂಜಯ್ ಮತ್ತು ವಸಿಷ್ಠ ಸಿಂಹ ಹೇಳಿದ್ದೇನು?

    ಉಪೇಂದ್ರ ಹೊಸ ಸಿನಿಮಾ ಮುಹೂರ್ತ : ಸುದೀಪ್, ಶಿವಣ್ಣ, ಧನಂಜಯ್ ಮತ್ತು ವಸಿಷ್ಠ ಸಿಂಹ ಹೇಳಿದ್ದೇನು?

    ಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ಅತಿಥಿಗಳಾಗಿ ಹಿರಿಯ ನಟರಾದ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಆಗಮಿಸಿದ್ದರು. ಸಿನಿಮಾ ಮತ್ತು ಉಪೇಂದ್ರ ಕುರಿತಾಗಿ ಅತಿಥಿಗಳು ಮನದುಂಬಿ ಹಾರೈಸಿದರು. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ಶಿವರಾಜ್ ಕುಮಾರ್ ಮಾತನಾಡಿ, “ನಾನು ಉಪ್ಪಿಯನ್ನು ಸಾಕಷ್ಟು ದಿನದಿಂದ ನೋಡಿದ್ದೀನಿ. ಉಪೇಂದ್ರ ಮತ್ತು ನಾನು ಒಂದು ರೀತಿಯಲ್ಲಿ ಬಾಯ್ ಫ್ರೆಂಡ್ ತರಹ. ಉಪೇಂದ್ರ ನಿರ್ದೇಶನದ ನಾನು ನಟಿಸಿರುವ ಓಂ ಸಿನಿಮಾ ನನ್ನ ವೃತ್ತಿ ಬದುಕಿಗೆ ಟರ್ನಿಂಗ್ ಪಾಯಿಂಟ್. ಏಳು ವರ್ಷದ ನಂತರ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹಾಗಾಗಿ ಸಿನಿಮಾ ವಿಭಿನ್ನವಾಗಿಯೇ ಇರಲಿದೆ’ ಎಂದರು. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    “ನಾನು ಇವತ್ತು ವೇದಿಕೆಯ ಮೇಲೆ  ಉಪ್ಪಿ ಅಭಿಮಾನಿಯಾಗಿ ಕೂತಿದ್ದೇನೆ. ಉಪೇಂದ್ರ ಅವರು ಸಿನಿಮಾ ನಿರ್ದೇಶನ ಮಾಡುತ್ತಿರುವುದು ಖುಷಿಯಾಗಿದೆ. ಅದರಲ್ಲೂ ಕುದುರೆ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ಮೆಲೆ ಕುದುರೆ ಓಟು ಶುರು. ಆದಷ್ಟು ಬೇಗ ಸಿನಿಮಾ ಮುಗಿಸಿ, ನಾನಂತೂ ನೋಡಲು ಕಾಯುತ್ತಿದ್ದೇನೆ’ ಎಂದು ಕಿಚ್ಚ ಸುದೀಪ್. ಇದನ್ನೂ ಓದಿ : ಕನ್ನಡದ ಬಹುತೇಕ ದಿಗ್ಗಜರ ಜೊತೆ ನಟಿಸಿರುವ ನಟ ಉದಯ್ ಹುತ್ತಿನಗದ್ದೆ ನಿಧನ

    ‘ಉಪೇಂದ್ರ ಅವರು ಕಾಮಾನ್ ಮ್ಯಾನ್ ಪರವಾಗಿ ಸಿನಿಮಾ ಮಾಡುತ್ತಲೇ ಅವರನ್ನು ಎಚ್ಚರಿಸುತ್ತಾರೆ. ಈ ಪೋಸ್ಟರ್ ನಲ್ಲಿ ಎವಲ್ಯೂಷನ್ ಥಿಯೇರಿ ಇದೆ. ಅಲ್ಲಿಂದಲೇ ಕತೆ ಶುರುವಾಗುತ್ತೆ ಅನಿಸತ್ತೆ. ಒಳ್ಳೆಯ ಸಿನಿಮಾ ಬರಲಿದೆ’ ಎಂದು ಡಾಲಿ ಧನಂಜಯ್. ಇದನ್ನೂ ಓದಿ : ಕ್ಯಾಪ್ ತೊಟ್ಟು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ಪ್ರಣಿತಾ

    ಉಪೇಂದ್ರ ಅವರು ಸಿನಿಮಾಗಳನ್ನು ನೋಡುತ್ತಲೇ ಬಂದವನು ನಾನು. ಬ್ಲಾಕ್ ಟಿಕೆಟ್ ತಗೊಂಡು ಸಿನಿಮಾ ನೋಡುತ್ತಿದ್ದೆ ಎಂದು ಉಪ್ಪಿ ಮೇಲಿನ ಅಭಿಮಾನವನ್ನು ಹೇಳಿಕೊಂಡರು ವಸಿಷ್ಠ ಸಿಂಹ. ಈ ಕಾರ್ಯಕ್ರಮದಲ್ಲಿ ನಿರ್ಮಾಪಕರಾದ ಮನೋಹರ್ ನಾಯ್ಡು, ಲಹರಿ ವೇಲು, ಕೆ.ಪಿ. ಶ್ರೀಕಾಂತ್ ಸೇರಿದಂತೆ ಹಲವರು ಹಾಜರಿದ್ದರು.

  • ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ಇಂದು ಬೆಳಗ್ಗೆ ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ನಟ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್ ಮತ್ತು ಕೆ.ಪಿ. ಶ್ರೀಕಾಂತ್, ಲಹರಿ ವೇಲು ಮತ್ತು ಸಹ ನಿರ್ಮಾಪಕರಾದ ನವೀನ್ ಮನೋಹರನ್ ಸೇರಿದಂತೆ ಸಿನಿಮಾದ ತಂಡದ ಬಹುತೇಕರು ತಮ್ಮ ಸಿನಿಮಾದ ಟೈಟಲ್ ಅನ್ನು ಹಣೆ ಮೇಲೆ ಹಾಕಿಕೊಂಡು ಆಗಮಿಸಿದ್ದರು.

    ಬೆಳಗ್ಗೆ ಎಂಟು ಗಂಟೆಗೆ ಸ್ಪೆಷಲ್ ಗೆಟಪ್ ನಲ್ಲಿ ಉಪೇಂದ್ರ ಮತ್ತು ಟೀಮ್ ಎಂಟ್ರಿ ಕೊಟ್ಟು ಕುತೂಹಲಕ್ಕೆ ಕಾರಣವಾದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಮುಂದೆ ಉಪ್ಪಿ ಅಭಿಮಾನಿಗಳು ಸೇರಿಕೊಂಡು, ಅವರು ಕೂಡ ತಮ್ಮ ನೆಚ್ಚಿನ ನಟನ ಸಿನಿಮಾ ಟೈಟಲ್ ಅನ್ನು ಹಣೆ ಮೇಲೆ ಹಾಕಿಕೊಂಡು ಉಪೇಂದ್ರ ಅವರಿಗೆ ಜೈಕಾರ ಹಾಕುತ್ತಿದ್ದರು. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

    ಈ ಚಿತ್ರಕ್ಕೆ ವಿಚಿತ್ರ ರೀತಿಯಲ್ಲಿ ಟೈಟಲ್ ಇಟ್ಟಿದ್ದಾರೆ ಉಪೇಂದ್ರ. ಅದನ್ನು ಧಾರ್ಮಿಕ ಚಿಹ್ನೆ (ನಾಮ) ಎಂದಾದರೂ, ಕರೆಯಬಹುದು ‘ಯು’ ಮತ್ತು ‘ಐ’ ಎಂದಾದರು ಅಂದುಕೊಳ್ಳಬಹುದು. ನೀನು ಮತ್ತು ನಾನು ಅಂತಾದರೂ ಊಹಿಸಿಕೊಳ್ಳಬಹುದು. ಈ ಚಿತ್ರಕ್ಕೆ ಏನೆಂದು ಕರೆಯಬಹುದು ಎನ್ನುವುದಕ್ಕೆ ಪ್ರೇಕ್ಷಕರಿಗೆ ಬಿಟ್ಟು ತಮ್ಮ ಪಾಡಿಗೆ ತಾವು ಇಂದು ಚಿತ್ರಕ್ಕೆ ಮುಹೂರ್ತ ಮಾಡಿದ್ದಾರೆ ನಿರ್ದೇಶಕರು.  ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

    ಈ ಸಮಾರಂಭಕ್ಕೆ ಹಿರಿಯ ನಟ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಅತಿಥಿಗಳಾಗಿ ಆಗಮಿಸಿದ್ದರು. ನೆಚ್ಚಿನ ನಟ ಉಪೇಂದ್ರ ಅವರ ಬಗ್ಗೆ ಅತಿಥಿಗಳೆಲ್ಲ ಮಾತನಾಡಿದರು.

  • ಹೊಸ ಸಿನಿಮಾದ ಲುಕ್ ಟೆಸ್ಟ್ : ಹೈದರಾಬಾದ್ ನಲ್ಲಿದ್ದಾರೆ ಉಪ್ಪಿ

    ಹೊಸ ಸಿನಿಮಾದ ಲುಕ್ ಟೆಸ್ಟ್ : ಹೈದರಾಬಾದ್ ನಲ್ಲಿದ್ದಾರೆ ಉಪ್ಪಿ

    ತ್ತೆ ನಿರ್ದೇಶಕನ ಕ್ಯಾಪ್ ಧರಿಸಿ ಅಭಿಮಾನಿಗಳ ಮುಂದೆ ನಿಂತಿದ್ದಾರೆ ಉಪೇಂದ್ರ. ಈ ಬಾರಿಯೂ ಅವರು ಪ್ರೇಕ್ಷಕನ ಮೆದುಳಿಗೆ ಕೈ ಹಾಕಿದ್ದು, ಈಗಾಗಲೇ ರಿಲೀಸ್ ಆದ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಕುತೂಹಲ ಮೂಡಿಸಿದ್ದಾರೆ. ಸಿನಿಮಾದ ಟೈಟಲ್ ಇಂಥದ್ದೇ ಅಂತ ಹೇಳುವುದು ಕಷ್ಟ. ಅಲ್ಲದೇ, ನಾನಾ ರೀತಿಯ ಅರ್ಥಗಳು ಹುಟ್ಟುವಂತೆ ಫಸ್ಟ್ ಲುಕ್ ಇತ್ತು. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ಇದೀಗ ಅದೇ ಸಿನಿಮಾದ ಮುಹೂರ್ತ ಬೆಂಗಳೂರಿನ ಬನ್ನಿ ಮಹಾಂಕಾಳಿ ದೇವಸ್ಥಾನವೊಂದರಲ್ಲಿ ಜೂ.3 ರಂದು ನಡೆಯಲಿದೆ. ಅಂದು ಹಲವು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರಂತೆ ಉಪ್ಪಿ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ನಲ್ಲೇ ತಯಾರಾಗುತ್ತಿರುವುದರಿಂದ ಭಾರೀ ಬಜೆಟ್ ನಲ್ಲೇ ನಿರ್ಮಾಣವಾಗಲಿದೆಯಂತೆ. ಎಲ್ಲ ಭಾಷೆಯ ನೋಡುಗರಿಗೂ ಕನೆಕ್ಟ್ ಆಗುವಂತಹ ಕಥೆಯನ್ನೇ ಈ ಚಿತ್ರಕ್ಕೂ ಆಯ್ಕೆ ಮಾಡಿಕೊಂಡಿದ್ದಾರಂತೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಮುಹೂರ್ತದ ದಿನದಂದು ಸರ್ಪ್ರೈಸ್ ಕೊಡುವುದಕ್ಕಾಗಿ ಉಪ್ಪಿಯ ಲುಕ್ ಟೆಸ್ಟ್ ಕೂಡ ನಡೆದಿದ್ದು, ಸದ್ಯ ಉಪೇಂದ್ರ ಅವರು ಹೈದರಾಬಾದ್ ನಲ್ಲಿ ಬೀಡುಬಿಟ್ಟಿದ್ದಾರೆ. ಲುಕ್ ಟೆಸ್ಟ್ ಮತ್ತು ಫೋಟೋ ಶೂಟ್ ನಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ಸಿನಿಮಾದಲ್ಲೂ ಉಪ್ಪಿಯದ್ದು ವಿಭಿನ್ನ ರೀತಿಯ ಗೆಟಪ್ ಇರಲಿದೆಯಂತೆ. ಹಾಗಾಗಿ ಹಲವು ಬಗೆಯಲ್ಲಿ ಲುಕ್ ಟೆಸ್ಟ್ ನಡೆದಿದೆಯಂತೆ. ಇದನ್ನೂ ಓದಿ : ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

    ಲಹರಿ ಫಿಲ್ಮ್ಸ್‍ ಮತ್ತು ಕೆ.ಪಿ. ಶ್ರೀಕಾಂತ್ ಜಂಟಿಯಾಗಿ ಈ ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ನಲ್ಲೂ ಈ ಸಿನಿಮಾ ತಯಾರಾಗಲಿದೆಯಂತೆ. ಉಪೇಂದ್ರ ಅವರ ಹೊರತಾಗಿ, ಸಿನಿಮಾದಲ್ಲಿ ಯಾರೆಲ್ಲ ತಾರೆಯರು ಇರಲಿದ್ದಾರೆ ಎನ್ನುವುದು ಜೂ.3 ರನಂತರ ಗೊತ್ತಾಗಲಿದೆ. ಅಷ್ಟೂ ಭಾಷೆಗೂ ಸಲ್ಲುವಂತಹ ಕಲಾವಿದರ ಆಯ್ಕೆ ಕೂಡ ಆಗಿದೆಯಂತೆ. ಸಿನಿಮಾ ಮುಹೂರ್ತದ ದಿನದಂದು ಹಲವು ವಿಚಾರಗಳನ್ನು ಉಪ್ಪಿ ಹಂಚಿಕೊಳ್ಳಲಿದ್ದಾರೆ.