Tag: ಕೆ.ರಘುಪತಿ ಭಟ್

  • ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡ್ತೀನಿ: ರಘುಪತಿ ಭಟ್ ಘೋಷಣೆ

    ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡ್ತೀನಿ: ರಘುಪತಿ ಭಟ್ ಘೋಷಣೆ

    – ಹಾಲಿ ಶಾಸಕ ಯಶ್ ಪಾಲ್ ಸುವರ್ಣ ಜೊತೆ ಮಾಜಿ ರಘುಪತಿ ಭಟ್ ಕೋಲ್ಡ್ ವಾರ್

    ಉಡುಪಿ: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ. ಬಿಜೆಪಿಯಲ್ಲಿ ನಿಲ್ಲಬಹುದು ಅಥವಾ ಪಕ್ಷೇತರನಾಗಿ ಸ್ಪರ್ಧಿಸಬಹುದು ಎಂದು ಉಡುಪಿ (Udupi) ಮಾಜಿ ಶಾಸಕ ಬಿಜೆಪಿಯ ಉಚ್ಚಾಟಿತ ನಾಯಕ ರಘುಪತಿ ಭಟ್ (K.Raghupati Bhat) ಹೇಳಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ಅವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

    ಇನ್ನೊಂದು ಬಾರಿ ವಿಧಾನಸಭೆಗೆ ಸ್ಪರ್ಧಿಸಬೇಕು ಎಂದು ನಿರ್ಧರಿಸಿದ್ದೇನೆ. ಜನತೆ ನನ್ನನ್ನು ಈವರೆಗೆ ಸೋಲಿಸಿಲ್ಲ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ನಾನು ಮೂರು ಬಾರಿಗೆ ಗೆದ್ದಿದ್ದೇನೆ. ಇನ್ನೂ ಮೂರುವರೆ ವರ್ಷ ಇದೆ. ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂದು ಮುಂದೆ ನಿರ್ಧರಿಸುತ್ತೇನೆಂದು ರಘುಪತಿ ಭಟ್ ಉಡುಪಿಯ ಗುಂಡಿಬೈಲಿನಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ: ಪಕ್ಷ ಸಂಘಟನೆಗಾಗಿ ಡಿಕೆಶಿ ಹೋರಾಟ ಮಾಡ್ತಿದ್ದಾರೆ, ಸಮಯ ಬಂದಾಗ ಸ್ಥಾನಮಾನ ಸಿಕ್ಕೇ ಸಿಗುತ್ತೆ: ಇಕ್ಬಾಲ್ ಹುಸೇನ್

    ಬಿಜೆಪಿ ಸೇರ್ಪಡೆ ಬಗ್ಗೆ ಉತ್ತರಿಸಿದ ಅವರು, ಪಕ್ಷ ಕರೆದರೆ ನಾನು ಬಿಜೆಪಿಗೆ ಸೇರುತ್ತೇನೆ. ಸದ್ಯದ ಬೆಳವಣಿಗೆಗಳನ್ನು ನೋಡುತ್ತಿರುವಾಗ ಬಿಜೆಪಿಗೆ ನನ್ನ ಅವಶ್ಯಕತೆ ಇಲ್ಲ ಅಂತ ಅನ್ನಿಸಿರಬೇಕು. ಹಾಗಾಗಿ ಬಿಜೆಪಿ ನನ್ನನ್ನು ಆಹ್ವಾನಿಸುತ್ತಿಲ್ಲ ಎಂದು ಹೇಳಿದ್ದಾರೆ.

    ಕಾಂಗ್ರೆಸ್ ಸೇರ್ಪಡೆ ಮತ್ತು ಇತರ ಯಾವುದೇ ಚರ್ಚೆ ನಡೆದಿಲ್ಲ. ಕಾಂಗ್ರೆಸ್‌ನ ಯಾರೂ ನನ್ನನ್ನು ಭೇಟಿ ಆಗಿಲ್ಲ. ನಾನೂ ಯಾರನ್ನೂ ಭೇಟಿ ಆಗಿಲ್ಲ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಮಿಸ್ ಕಾಲ್ ಕೊಟ್ಟಿದ್ದೇನೆ. ಸ್ಥಾನೀಯ ಸಮಿತಿ, ನಗರ ಸಮಿತಿ ಅಪ್ರೋವ್ ಮಾಡುತ್ತದೋ ಇಲ್ಲವೋ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿಯನ್ನು ಚೆನ್ನಮ್ಮಗೆ ಹೋಲಿಸಿ ಅಪಮಾನ: ಸಿ.ಟಿ ರವಿ ಕಿಡಿ

    ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ-ಮಾಜಿ ಶಾಸಕರ ಭಿನ್ನಮತ ಜೋರಾಗಿದೆ. ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಮಾಜಿ ಬಿಜೆಪಿ ಶಾಸಕ ರಘುಪತಿ ಭಟ್ ಅಸಮಾಧಾನ ವ್ಯಕ್ತಪಡಿಸಿದರು. ನಾನು ಆರಂಭಿಸಿದ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಾಲಿ ಶಾಸಕರಿಂದ ಅಡ್ಡಗಾಲು ಹಾಕಿದ್ದಾರೆ. ನನ್ನ ಮೇಲೆ ಯಾಕೆ ವೈಯಕ್ತಿಕ ದ್ವೇಷ ಮಾಡುತ್ತಿದ್ದಾರೋ ಗೊತ್ತಿಲ್ಲ. ಯಾವುದೇ ಜನಪ್ರತಿನಿಧಿಗೆ ಇಷ್ಟು ಕೃತಜ್ಞತೆ ಇರಬಾರದು ಎಂದ ಭಟ್, ತನ್ನ ಅವಧಿಯಲ್ಲಿ ನಿರ್ಮಾಣವಾದ ಡಿಜಿಟಲ್ AI ಸಿಗ್ನಲ್‌ಗೆ ಹಾಲಿ ಶಾಸಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಈಗಿನ ಶಾಸಕರ ಬಗ್ಗೆ ನೂರಕ್ಕೆ ನೂರು ಬೇಸರ ಇದೆ. ನಾನು ವಿಧಾನಪರಿಷತ್ ಚುನಾವಣೆಯಲ್ಲಿ ಸ್ವತಂತ್ರವಾಗಿ ನಿಲ್ಲಲು ಕೂಡ ಅವರೇ ಕಾರಣ. ಟ್ರಾಫಿಕ್ ಜಂಕ್ಷನ್‌ ನನ್ನ ಯೋಜನೆ ಎನ್ನುವ ಕಾರಣಕ್ಕೆ ನಿಲ್ಲಿಸಿದ್ದಾರೆ. ನಾನು ನಗರದ ಸಮಸ್ಯೆಯನ್ನು ಅವರಿಗೆ ಕನ್ವಿನ್ಸ್ ಮಾಡಿದರೂ ಕೇಳಲಿಲ್ಲ. ಕೃತಜ್ಞತೆ ಇರುವ ಯಾವುದೇ ವ್ಯಕ್ತಿ ಹೀಗೆ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ಲಾಲಾಜಿಗೆ ಗೌರವ ಕೊಡ್ತಾರೆ, ಕುಂದಾಪುರ ಶಾಸಕ ಕೊಡ್ಗಿಯವರು ಹಾಲಾಡಿಗೆ ಗೌರವ ಕೊಡ್ತಾರೆ. ನಾನು ಪಕ್ಷದಲ್ಲಿ ಇರುವವರೆಗೆ ಯಾವ ರೀತಿ ನನ್ನನ್ನು ನಡೆಸಿಕೊಂಡು ಅನ್ನೋದು ಎಲ್ಲರಿಗೂ ಗೊತ್ತಿದೆ. ನನ್ನ ಫೋಟೋಗಳನ್ನು ತೆಗೆಸಿದರು. ಪಕ್ಷದ ಕಾರ್ಯಕ್ರಮಗಳಿಂದ ದೂರ ಇಟ್ಟರು. ವೈಯಕ್ತಿಕವಾಗಿ ನನ್ನ ವ್ಯವಹಾರಗಳಿಗೆ ಅಡ್ಡಿಪಡಿಸಿದರು. ಯಶ್ ಪಾಲ್ ಸುವರ್ಣ ಬೆಳವಣಿಗೆಯಲ್ಲಿ ನನ್ನ ಪಾತ್ರ ಏನು ಅನ್ನೋದು ಉಡುಪಿ ಜನತೆಗೆ ಗೊತ್ತಿದೆ. 2004ರಲ್ಲಿ ನಾನು ಚುನಾವಣೆ ನಿಂತಾಗ ನನ್ನ ಎದುರು ಪ್ರಚಾರ ಮಾಡಿದ್ದರು. ಬೆತ್ತಲೆ ಪ್ರಕರಣ ಆದಾಗ ನಾನು ಬೆಂಬಲ ಕೊಟ್ಟು ಯಶ್ ಪಾಲ್ ಜೊತೆಗೆ ನಿಂತೆ. ಮತ್ತೆ ಪಕ್ಷಕ್ಕೆ ಸೇರಿಸಿಕೊಂಡು ನಗರಸಭೆ ನಾಮನಿರ್ದೇಶನ ಸದಸ್ಯ ಮಾಡಿದೆ. ಎರಡು ಬಾರಿ ನಗರಸಭಾ ಸದಸ್ಯ ಮಾಡಿದೆ. ಮೀನುಗಾರಿಕಾ ಫೆಡರೇಷನ್‌ಗೂ ನಾಮನಿರ್ದೇಶನ ಮಾಡಿದೆ, ನಂತರ ಅಧ್ಯಕ್ಷರಾದರು ಎಂದು ತಿಳಿಸಿದರು.

    ಸ್ವತಃ ಯಡಿಯೂರಪ್ಪ ಬಳಿ ಕರೆದುಕೊಂಡು ಹೋಗಿ ಫೆಡರೇಶನ್ ಸದಸ್ಯ ಮಾಡಿದೆ, ನನಗೆ ಅವರ ಮೇಲೆ ಪ್ರೀತಿ ವಿಶ್ವಾಸ ಇಲ್ಲದೆ ಇರುತ್ತಿದ್ದರೆ ಇದೆಲ್ಲಾ ಮಾಡುತ್ತಿದ್ದನಾ? ಜಿಲ್ಲೆಯ ಅತೀ ದೊಡ್ಡ ಮಹಿಳಾ ಕಾಲೇಜಿಗೆ ಉಪಾಧ್ಯಕ್ಷ ಮಾಡಿದೆ. ನಾನು ತುಂಬಾ ಪ್ರೀತಿಯಿಂದ ಅವರನ್ನು ಬೆಳೆಸಿದ್ದೇನೆ. ನನ್ನ ದೇವಸ್ಥಾನದ ಬ್ರಹ್ಮಕಲಶಕ್ಕೂ ಅಧ್ಯಕ್ಷನಾಗಿ ಮಾಡಿದೆ. ಚುನಾವಣೆಯಲ್ಲಿ ನನ್ನ ವಾಹನದಲ್ಲಿ ಕರೆದುಕೊಂಡು ಹೋಗಿ 40 ದಿನ ಪ್ರಚಾರ ಮಾಡಿದೆ. ಬಿಜೆಪಿ ಬಿಟ್ಟು ಪಕ್ಷೇತರಾಗಲು ಮಾನಸಿಕವಾಗಿ ಯಶ್ ಪಾಲ್ ಕಾರಣ. ನಾನು ಆ ಆಘಾತದಿಂದ ಹೊರ ಬಂದಿಲ್ಲ ಎಂದರು.

    ಉಡುಪಿಯಲ್ಲಿ ನಾನು ಮೂರು ಬಾರಿ ಶಾಸಕನಾಗಿದ್ದವನು. ಬಿಜೆಪಿ ನನ್ನನ್ನು ಯಾವ ರೀತಿ ನೋಡಿಕೊಳ್ಳುತ್ತಿದೆ ಎಂದು ನೆನೆದರೆ ಬೇಸರವಾಗುತ್ತದೆ. ಬಿಜೆಪಿಯ ಇತರ ನಾಯಕರು ಕೂಡ ಈ ಬಗ್ಗೆ ಯೋಚನೆ ಮಾಡಿಲ್ಲ. ನನ್ನ ಬೆಳವಣಿಗೆಯಲ್ಲಿ ಬಿಜೆಪಿಯ ಪಾತ್ರ ಇದೆ. ಹಾಗಾಗಿ ಆ ತತ್ವದಲ್ಲಿ ಇದ್ದೇನೆ. ಬಿಜೆಪಿ ಬೆಳವಣಿಗೆಯಲ್ಲಿ ನನ್ನ ಪಾತ್ರ ಇಲ್ವಾ? 1999 ರಿಂದ 23 ವರೆಗೆ ನಾನು ಅಳಿಲ ಸೇವೆ ಮಾಡಿಲ್ವಾ? ನನ್ನ ಬಗ್ಗೆ ಅವಹೇಳನ ಶಬ್ದಗಳಲ್ಲಿ ಮಾತನಾಡುತ್ತಾರೆ. ಇದು ಸಜ್ಜನ ಎಂಎಲ್ಎಗಳ ಲಕ್ಷಣ ಅಲ್ಲ. ಅವರ ವೈಯಕ್ತಿಕ ಬೆಳವಣಿಗೆಯಲ್ಲಿ ನನ್ನ ಕೊಡುಗೆ ಇದೆ. ಸ್ವಲ್ಪವಾದರೂ ಕೃತಜ್ಞತೆ ಇರಬೇಕು. ನನ್ನ ವೈಯಕ್ತಿಕ ಸೊಸೈಟಿ ವಿಚಾರ ಅಸೆಂಬ್ಲಿಯಲ್ಲಿ ಮಾತನಾಡಿದರು. ಉಡುಪಿಯ ರಾಜಕಾರಣದಲ್ಲಿ ಇಂತಹ ರಾಜಕಾರಣಿ ನೋಡಿಲ್ಲ. ನಾನು ಮಾಜಿ ಶಾಸಕರಾದ ಯುಆರ್ ಸಭಾಪತಿ, ಪ್ರಮೋದ್ ಮಧ್ವರಾಜ ಎಲ್ಲರನ್ನೂ ಫೇಸ್ ಮಾಡಿದ್ದೇನೆ. ಈ ರೀತಿಯ ದ್ವೇಷ ರಾಜಕೀಯ ಶೋಭೆಯಲ್ಲ. ಮೂರು ಬಾರಿ ಶಾಸಕನನ್ನು ನಡೆಸಿಕೊಳ್ಳುವ ರೀತಿಯಾ ಇದು? ಒಳ್ಳೆಯದಲ್ಲ.. ನಾನು ತಂದ ಸ್ಮಾರ್ಟ್ ಸಿಟಿ ಯೋಜನೆ ಅಡ್ಡಗಾಲು ಇಟ್ಟರು. ಸಿಗ್ನಲ್, ಡಿಜಿಟಲ್ ಇನ್ಫ್ರಾಸ್ಟ್ರಕ್ಚರ್, ಎಲ್ಇಡಿ ಬದಲಾವಣೆ.. ಎಲ್ಲ ಯೋಜನೆಗೂ ಅಡ್ಡಿಪಡಿಸಿದ್ದಾರೆ ಎಂದು ಭಟ್ ದೂರಿದರು. ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲು: ಪರಮೇಶ್ವರ್

    ಸರ್ಕಾರಿ ಆಸ್ಪತ್ರೆ, ಮೆಡಿಕಲ್ ಕಾಲೇಜು ಯೋಜನೆ ಪ್ರಗತಿ ಇಲ್ಲ. ಅಭಿವೃದ್ಧಿ ಕಾರ್ಯಗಳಲ್ಲಿ ಯಾರಿಗಾದರೂ ಕಿಕ್ ಬ್ಯಾಕ್ ಸಿಗುತ್ತಾ? ನಾನು ಹೋರಾಟ ಸಂಘಟನೆಗಳಿಂದಲೇ ರಾಜಕೀಯಕ್ಕೆ ಬಂದವನು. ಇದಕ್ಕೆಲ್ಲ ನಾನು ಹೆದರಿ ಕುಳಿತುಕೊಳ್ಳುವವನಲ್ಲ. ಇದರಿಂದ ಜನರಿಗೆ ಅಡ್ಡಿಯಾಗುತ್ತಿದೆ. ನಾನು ನನ್ನ ವ್ಯವಹಾರದಲ್ಲಿ ಬಿಸಿಯಾಗಿದ್ದೇನೆ. ಅಯೋಧ್ಯೆಗೆ ಹೋಗಿ ಕೆಲಸ ಮಾಡಿ ಬಂದೆ. ಈಗ ಕಾಪು ಮಾರಿಗುಡಿಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ರಘುಪತಿ ಭಟ್ ಹೇಳಿದರು.

  • ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

    ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ

    ಬೆಂಗಳೂರು/ಉಡುಪಿ: ಬಿಜೆಪಿ (BJP) ಬಂಡಾಯ ಅಭ್ಯರ್ಥಿಯಾಗಿ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಪಕ್ಷದಿಂದ ಮಾಜಿ ಶಾಸಕ ರಘುಪತಿ ಭಟ್‌ (Raghupati Bhat) ಅವರನ್ನು ಉಚ್ಚಾಟಿಸಲಾಗಿದೆ.

    ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನ ಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: 24 ಗಂಟೆಯೊಳಗೆ ಚುನಾವಣಾ ಕಣದಿಂದ ನಿವೃತ್ತರಾಗಿ: ರಘುಪತಿ ಭಟ್‍ಗೆ ಸುನಿಲ್ ಕುಮಾರ್ ಎಚ್ಚರಿಕೆ

    ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಆದೇಶದಲ್ಲಿ ತಿಳಿಸಿದೆ.

    ಈ ಮೊದಲು ಪಕ್ಷೇತರ ಸ್ಪರ್ಧೆಗೆ ಸ್ಪಷ್ಟನೆ ಕೊಡುವಂತೆ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿತ್ತು. ಇದೀಗ ಶಿಸ್ತು ಸಮಿತಿಯಿಂದ ರಘುಪತಿ ಭಟ್ ಉಚ್ಚಾಟನೆ ಮಾಡಿ ಅದೇಶ ಹೊರಡಿಸಲಾಗಿದೆ. ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ. ಇದನ್ನೂ ಓದಿ: ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ಇಲ್ಲ: ಕೆ.ರಘುಪತಿ ಭಟ್‌ ಬೇಸರ

  • ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ಇಲ್ಲ: ಕೆ.ರಘುಪತಿ ಭಟ್‌ ಬೇಸರ

    ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ಇಲ್ಲ: ಕೆ.ರಘುಪತಿ ಭಟ್‌ ಬೇಸರ

    – ನಾನು ಮುಸ್ಲಿಮರು, ಕ್ರೈಸ್ತ ವಿರೋಧಿಯಲ್ಲ

    ಮಡಿಕೇರಿ: ಹಿಂದುತ್ವ ಮತ್ತು ರಾಷ್ಟ್ರೀಯವಾದವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದವರಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪುತ್ತಿದೆ ಎಂಬ ಭಾವನೆ ಬಲವಾಗುತ್ತಿದೆ ಎಂದು ನೈರುತ್ಯ ಪದವೀಧರರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ರಘುಪತಿ ಭಟ್‌ (K.Raghupati Bhat) ಹೇಳಿದರು.

    ಮಡಿಕೇರಿಯಲ್ಲಿ ಮಾತನಾಡಿದ ಅವರು, ನನಗೆ ಪಕ್ಷದಿಂದ ಯಾವುದೇ ನೋಟಿಸ್ ಬಂದಿಲ್ಲ. ಬಂದರೆ ವಿವರವಾದ ಉತ್ತರ ಕೊಡುವೆ. ಮಾತ್ರವಲ್ಲ,‌‌‌ ಪಕ್ಷದ ಶಿಸ್ತು ಸಮಿತಿ ವಿಚಾರಣೆಗೆ ಕರೆದರೆ ಹಾಜರಾಗಿ ವಿವರಣೆ ಕೊಡುವೆ ಎಂದು ತಿಳಿಸಿದರು. ಇದನ್ನೂ ಓದಿ: 24 ಗಂಟೆಯೊಳಗೆ ಚುನಾವಣಾ ಕಣದಿಂದ ನಿವೃತ್ತರಾಗಿ: ರಘುಪತಿ ಭಟ್‍ಗೆ ಸುನಿಲ್ ಕುಮಾರ್ ಎಚ್ಚರಿಕೆ

    ನನಗೆ ಏಕೆ ಎರಡು ಬಾರಿ ಟಿಕೆಟ್ ಕೊಡಲಿಲ್ಲ ಎಂಬುದು ಗೊತ್ತಿಲ್ಲ. ಯಾರು ಟಿಕೆಟ್ ತಪ್ಪಿಸಿದರು ಎಂಬುದೂ ಗೊತ್ತಿಲ್ಲ. ಆದರೆ ಯಾರೋ ನಾಯಕರು ತಪ್ಪಿಸಿದ್ದಂತೂ ಹೌದು ಎಂದರು.

    ಹಿಜಬ್ ವಿಷಯವನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಕೆಲವು ಹೆಣ್ಣುಮಕ್ಕಳನ್ನು ಕೆಲವೊಂದು ಸಂಘಟನೆಗಳು ದಾರಿ ತಪ್ಪಿಸಿದರು. ನಾನು ಮುಸ್ಲಿಮರು ಮತ್ತು ಕ್ರೈಸ್ತರ ವಿರೋಧಿ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಬುರ್ಖಾಧಾರಿ ಮಹಿಳಾ ಮತದಾರರ ವಿಶೇಷ ತಪಾಸಣೆಗೆ ಒತ್ತಾಯ – ಬಿಜೆಪಿ ಮನವಿಗೆ ಓವೈಸಿ ಕೆಂಡಾಮಂಡಲ

    ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಗುರುವಾರ ಶಿಫಾರಸು ಮಾಡಲಾಗಿತ್ತು.

  • ಉಡುಪಿಯ 2 ಸಾವಿರ ಎಕ್ರೆ ಹಡಿಲು ಭೂಮಿಯಲ್ಲಿ ಬೇಸಾಯ- ಕೊರೊನಾ ಕಾಲದಲ್ಲಿ ಸ್ವಾವಲಂಬಿ ಯೋಜನೆ

    ಉಡುಪಿಯ 2 ಸಾವಿರ ಎಕ್ರೆ ಹಡಿಲು ಭೂಮಿಯಲ್ಲಿ ಬೇಸಾಯ- ಕೊರೊನಾ ಕಾಲದಲ್ಲಿ ಸ್ವಾವಲಂಬಿ ಯೋಜನೆ

    ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ 2000 ಎಕ್ರೆ ಹಡಿಲು ಭೂಮಿಯನ್ನು, ಈ ಮಳೆಗಾಲದ ಆರಂಭದಲ್ಲಿ ಬಿತ್ತನೆ ಮಾಡಿ ಬೆಳೆ ತೆಗೆಯುವ ಯೋಜನೆ ಆರಂಭವಾಗಿದೆ. ಉಡುಪಿಯ ಎಲ್ಲಾ ನಗರಸಭೆ ಅವಾರ್ಡ್ ಮತ್ತು ಪಂಚಾಯತ್ ಗಳಲ್ಲಿ ಭೂಮಿಯನ್ನು ಗುರುತು ಮಾಡಲಾಗಿದೆ.

    ಉಡುಪಿಯಲ್ಲಿ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದರೋತ್ತಾನ ಯೋಜನೆಗೆ ಸಿದ್ಧತೆ ನಡೆಯುತ್ತಿದೆ. ಮೂಡುಸಗ್ರಿ ವಾರ್ಡಿನ ಹಡಿಲು ಭೂಮಿ ಕೃಷಿ ಚಟುವಟಿಕೆಗಳನ್ನು ಶಾಸಕ ಕೆ. ರಘುಪತಿ ಭಟ್ ವೀಕ್ಷಣೆ ಮಾಡಿದರು. ಈಗ ಕೃಷಿಭೂಮಿ ಸುತ್ತಮುತ್ತಲಿನ ತೋಡುಗಳನ್ನು ಅಭಿವೃದ್ಧಿಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ

    ಮೂಡುಸಗ್ರಿಯ 1.50 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದೆ. ಊರಿನ ಹಿರಿಯರು, ಭೂ ಮಾಲಕರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಯುವಕರು ಕೊರೊನಾ ಕಾಲದಲ್ಲಿ ಬೇಸಾಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

    ಪರ್ಕಳ ವಾರ್ಡಿನಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸುಮಾರು 200 ಎಕರೆ ಹಡಿಲು ಭೂಮಿ ಕೃಷಿ ಮಾಡಲಾಗುತ್ತಿದೆ. ಇಲ್ಲಿನ ಸ್ಥಳೀಯರು ಹಡಿಲು ಗದ್ದೆಯಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್ ಬಾಟಲಿ ಗಳನ್ನು ತೆಗೆದು ಉಳುಮೆ ಕೆಲಸಕ್ಕೆ ಗದ್ದೆಯನ್ನು ಹದ ಮಾಡಿದರು. ರೈತರು ಸತ್ಯಾನ ವಹಿಸುತ್ತಿರುವ ಸವಾಲು ಕೃಷಿ ಇಲಾಖೆಯಿಂದ ಬೇಕಾಗಿರುವ ಸಾಮಾಗ್ರಿಗಳು ಬಿತ್ತನೆಬೀಜ ದ ಬಗ್ಗೆ ಮಾಹಿತಿಗಳನ್ನು ಶಾಸಕ ರಘುಪತಿ ಭಟ್ ಸಂಗ್ರಹಿಸಿದರು.

    ಶಾಸಕ ರಘುಪತಿ ಭಟ್ ಮಾತನಾಡಿ, ಸಾಂಕ್ರಾಮಿಕ ಕೊರೊನಾ ಇರುವುದರಿಂದ ಲಾಕ್‍ಡೌನ್ ಆಗಿದೆ. ಕೃಷಿ ಚಟುವಟಿಕೆಗೆ ಅವಕಾಶ ಇದೆ. ಹಡಿಲು ಬಿದ್ದಿರುವ ಫಲವತ್ತಾದ ಭೂಮಿಯಲ್ಲಿ ಮತ್ತೆ ಬೆಳೆಸುವುದು ನಮ್ಮ ಆಲೋಚನೆ. ಪ್ರತಿವರ್ಷ ಒಂದೆರಡು ಸಾವಿರ ಎಕರೆ ಹಡಿಲು ಭೂಮಿಯನ್ನು ಗುರುತಿಸಿ ಅಲ್ಲಿ ಹಸಿರು ಬಳಸುತ್ತೇವೆ. ನಮ್ಮ ಅನ್ನವನ್ನು ನಾವು ಬೆಳೆದರೆ ಅದಕ್ಕಿಂತ ದೊಡ್ಡ ಸ್ವಾವಲಂಬಿ ಬದುಕು, ಆತ್ಮನಿರ್ಭರತೆ ಮತ್ತೊಂದು ಕೆಲಸ ಇಲ್ಲ ಎಂದರು.

    ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್, ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ಸ್ಥಳೀಯರಾದ ರಂಜಿತ್ ಶೆಟ್ಟಿ ಮತ್ತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆಂಪೇಗೌಡ, ಕೃಷಿ ವಿಜ್ಞಾನ ಕೇಂದ್ರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್ ಹಾಗೂ ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.