Tag: ಕೆ. ರಾಜಣ್ಣ

  • ತುಮುಲ್ ಚುನಾವಣೆಯಲ್ಲಿ ಸಿಎಂ ಬಣ ಮೇಲುಗೈ – ಗುಬ್ಬಿ ಶಾಸಕ ಬಹಿರಂಗ ಅಸಮಾಧಾನ

    ತುಮುಲ್ ಚುನಾವಣೆಯಲ್ಲಿ ಸಿಎಂ ಬಣ ಮೇಲುಗೈ – ಗುಬ್ಬಿ ಶಾಸಕ ಬಹಿರಂಗ ಅಸಮಾಧಾನ

    ತುಮಕೂರು: ತುಮಕೂರು ಹಾಲು ಒಕ್ಕೂಟದ (TUMUL) ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಬಣ ಮೇಲುಗೈ ಸಾಧಿಸಿದೆ. ಸಚಿವರಾದ ಪರಮೇಶ್ವರ್ ಮತ್ತು ರಾಜಣ್ಣ ತಮ್ಮ ಬೆಂಬಲಿಗರಾದ ಪಾವಗಡ ಶಾಸಕ ವೆಂಕಟೇಶ್‌ರನ್ನು (H Venkatesh) ತುಮುಲ್ ಅಧ್ಯಕ್ಷರನ್ನಾಗಿಸಿದ್ದಾರೆ. ಇದೇ ಮೊದಲ ಬಾರಿಗೆ ನಾಮನಿರ್ದೇಶಿತ ಸದಸ್ಯರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ.

    ಈ ಬೆಳವಣಿಗೆಯಿಂದ ಪತ್ನಿಯನ್ನು ತುಮುಲ್ ಅಧ್ಯಕ್ಷರನ್ನಾಗಿ ಮಾಡಲು ಮುಂದಾಗಿದ್ದ ಗುಬ್ಬಿ ಶಾಸಕ ಶ್ರೀನಿವಾಸ್‌ರನ್ನು (Gubbi Srinivas) ಕೆರಳಿಸಿದೆ. ಸಚಿವ ರಾಜಣ್ಣ ಮತ್ತು ಪರಮೇಶ್ವರ್ ವಿರುದ್ಧ ಶ್ರೀನಿವಾಸ್ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ. ಇಬ್ಬರು ಸೇರಿಕೊಂಡು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಸಚಿವರ ವರ್ತನೆ ಬಗ್ಗೆ ಸಿಎಂ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಹುಟ್ಟಿನಿಂದ ಸಿಗುವ ಪೌರತ್ವ ರದ್ದು – ಅಮೆರಿಕದಲ್ಲಿ ಹೆಚ್ಚಾಯ್ತು ಭಾರತೀಯ ಗರ್ಭಿಣಿಯರ ಸಿಸೇರಿಯನ್‌ ಹೆರಿಗೆ ಬೇಡಿಕೆ

    ಆದರೆ ಇದಕ್ಕೆಲ್ಲಾ ರಾಜಣ್ಣ ಡೋಂಟ್ ಕೇರ್ ಎಂದಿದ್ದಾರೆ. ಪ್ರಕರಣಕ್ಕೆ ದಲಿತ ಟ್ವಿಸ್ಟ್ ಕೊಟ್ಟಿದ್ದಾರೆ. ಪರಮೇಶ್ವರ್ ನಂಗೇನು ಗೊತ್ತಿಲ್ಲಪ್ಪ ಎಂದು ಜಾರಿಕೊಂಡಿದ್ದಾರೆ. ಗುಬ್ಬಿ ಶ್ರೀನಿವಾಸ್‌ಗೆ ಅನ್ಯಾಯ ಆಗಿದೆ ಪಾಪ ಎಂದು ಬಿಜೆಪಿ ಶಾಸಕ ಸುರೇಶ್‌ಗೌಡ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ದಾಂಪತ್ಯಕ್ಕೆ ಅಂತ್ಯವಾಡಲು ಡಿವೋರ್ಸ್‌ ಮೊರೆ; ಕೇಸ್ ಕೋರ್ಟ್‌ನಲ್ಲಿರುವಾಗ್ಲೇ ಹೆಂಡ್ತಿ ಮನವೊಲಿಸಲು ಬಂದು ಸುಟ್ಟು ಕರಕಲು

  • ಡಿಕೆಶಿ ಬೇಜಾರಾಗಲು ಅವ್ರ ಆಸ್ತಿ ಬರೆಸಿಕೊಂಡಿದ್ದೀವಾ? – ಡಿಸಿಎಂ ವಿರುದ್ಧ ರಾಜಣ್ಣ ಅಸಮಾಧಾನ

    ಡಿಕೆಶಿ ಬೇಜಾರಾಗಲು ಅವ್ರ ಆಸ್ತಿ ಬರೆಸಿಕೊಂಡಿದ್ದೀವಾ? – ಡಿಸಿಎಂ ವಿರುದ್ಧ ರಾಜಣ್ಣ ಅಸಮಾಧಾನ

    ತುಮಕೂರು: ಡಿ.ಕೆ ಶಿವಕುಮಾರ್‌ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ? ಇದೆಲ್ಲ ಸುಮ್ಮನೆ ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಸಹಕಾರಿ ಸಚಿವ ಕೆಎನ್ ರಾಜಣ್ಣ  (KN  Rajanna) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

    ಡಿನ್ನರ್ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾರ್ಟಿ (Dinner Party) ಕ್ಯಾನ್ಸಲ್ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ, ಕ್ಯಾನ್ಸಲ್ ಇಲ್ಲ. ಈಗಾಗಲೇ ಈ ಬಗ್ಗೆ ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮೊನ್ನೆ ನಡೆದಿರುವ ಡಿನ್ನರ್ ಪಾರ್ಟಿ ಬಗ್ಗೆ ಗೊಂದಲ ಆಗಿದೆ. ಆ ಗೊಂದಲದ ಜೊತೆಗೆ ಇನ್ನೊಂದು ಗೊಂದಲ ಆಗೋದು ಬೇಡ. ಅದನ್ನು ಮುಂದೂಡಬೇಕು ಅಂತ ಹೇಳಿದೆ, ಅದಕ್ಕೆ ಮುಂದೂಡಿದ್ದೇವೆ ಎಂದರು. ಇದನ್ನೂ ಓದಿ: ಡಿಕೆಶಿ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬೊಮ್ಮಾಯಿ

    ಪ್ರೀ ಯೂನಿವರ್ಸಿಟಿಗಳಲ್ಲಿ ಎಸ್ಸಿ, ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ಸೀಟು ಸಿಗುತ್ತಿಲ್ಲ. ಜೊತೆಗೆ ಮ್ಯಾನೇಜ್‌ಮೆಂಟ್ ಸೀಟ್ ಪಡೆದ ಎಸ್ಸಿ, ಎಸ್ಟಿ ಮಕ್ಕಳಿಗೆ ಸ್ಕಾಲರ್ಶಿಪ್ ಸಿಗುತ್ತಿಲ್ಲ, ಹಾಸ್ಟೆಲ್ ಕೊಡುತ್ತಿಲ್ಲ. ಇಂತಹ ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡಲು ಮೀಟಿಂಗ್ ಕರೆದರೆ ಮಾಡಬೇಡಿ ಎನ್ನುತ್ತಾರೆ. ಇವರೆಲ್ಲಾ ಏನು ಎಸ್ಸಿ ಎಸ್ಟಿಗಳ ವಿರೋಧಿಗಳಾ? ಇವೆಲ್ಲಾ ಬಹಳಷ್ಟು ದಿನ ನಡೆಯಲ್ಲ. ಹಾಸ್ಟೆಲ್ ಸೀಟ್ ಸಿಗಲ್ಲ. ಸಣ್ಣಪುಟ್ಟ ಸಾಲ ಮಾಡಿ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಸೀಟು ತೆಗೆದುಕೊಂಡವನಿಗೆ ಸ್ಕಾಲರ್ಶಿಪ್ ಇಲ್ಲ. ಇದು ಎಸ್ಸಿ, ಎಸ್ಟಿ ಮಕ್ಕಳ ಜ್ವಲಂತ ಸಮಸ್ಯೆ. ಇಂತಹ ಹತ್ತು ಹಲವಾರು ಸಮಸ್ಯೆಗಳಿವೆ. ಈ ಬಗ್ಗೆ ಚರ್ಚೆ ಮಾಡಲು ಮೀಟಿಂಗ್ ಕರೆದರೆ ಇದಕ್ಕೆ ರಾಜಕೀಯ ಬಣ್ಣ ಕೊಟ್ಟು ಮಾಡಬೇಡಿ ಎಂದು ಹೇಳುತ್ತಾರೆ. ಇದು ಎಸ್ಸಿ, ಎಸ್ಟಿ ಸಮಾಜಕ್ಕೆ ಮಾಡುವ ಅನ್ಯಾಯ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿನ್ನರ್ ಸಭೆ ರದ್ದಾಗಿಲ್ಲ, ಪ್ರಧಾನ ಕಾರ್ಯದರ್ಶಿ ಕರೆ ಮೇರೆಗೆ ಮುಂದೂಡಿಕೆಯಷ್ಟೇ – ಯಾರ ವಿರೋಧವೂ ಇಲ್ಲ: ಪರಮೇಶ್ವರ್

    ಡಿನ್ನರ್ ವಿಚಾರ ಮುಂದೆ ಮೀಟಿಂಗ್ ಮಾಡಿ ಡೇಟ್ ತಿಳಿಸುತ್ತೇವೆ. ಮುಂದಿನ ತಿಂಗಳ 14ನೇ ತಾರೀಕು ಎಂಎಂ ಹಿಲ್ಸ್‌ನಲ್ಲಿ ಕ್ಯಾಬಿನೆಟ್ ನಡೆಯುತ್ತದೆ. ಚಾಮರಾಜನಗರ ಜಿಲ್ಲೆ ಹೋದರೆ ಮುಖ್ಯಮಂತ್ರಿ, ಸಚಿವ ಸ್ಥಾನ ಹೋಗುತ್ತದೆ ಎಂದು ಹೇಳುತ್ತಿದ್ದಾರೆ. ಅಷ್ಟರೊಳಗೆ ಸಭೆ ಮಾಡುತ್ತೇವೆ. ಇಲ್ಲ ಅಂದರೆ ಕ್ಯಾಬಿನೆಟ್ ಮೀಟಿಂಗ್ ಬಳಿಕ ಸಭೆ ಮಾಡಿ ತಿಳಿಸುತ್ತೇವೆ ಎಂದರು. ಇದನ್ನೂ ಓದಿ: ಭಯೋತ್ಪಾದನೆ ಜಾಗತಿಕ ಶಾಂತಿಗೆ ದೊಡ್ಡ ಬೆದರಿಕೆಯಾಗಿದೆ – ವಿದೇಶಾಂಗ ಸಚಿವ ಜೈಶಂಕರ್

  • ಮೂವರು DCM ಸೃಷ್ಠಿ- ರಾಜಣ್ಣ ಹೇಳಿಕೆಯಲ್ಲಿ ತಪ್ಪಿಲ್ಲ ಅಂದ್ರು ಶರಣಪ್ಪ

    ಮೂವರು DCM ಸೃಷ್ಠಿ- ರಾಜಣ್ಣ ಹೇಳಿಕೆಯಲ್ಲಿ ತಪ್ಪಿಲ್ಲ ಅಂದ್ರು ಶರಣಪ್ಪ

    ಯಾದಗಿರಿ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ (Congress Govt) 3 ಡಿಸಿಎಂ ಸ್ಥಾನದ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

    ರಾಜ್ಯದಲ್ಲಿ 3 ಡಿಸಿಎಂ ಹುದ್ದೆ ಸೃಷ್ಠಿ ಮಾಡಿದ್ರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Loksabha Election) ಗೆಲುವು ಸುಲಭವಾಗುತ್ತದೆ ಎನ್ನುವುದು ಸಚಿವ ಕೆ. ಎನ್. ರಾಜಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿಯಲ್ಲಿ (Yadagiri) ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿದ್ದಾರೆ. ಯಾರನ್ನು ಡಿಸಿಎಂ ಮಾಡಬೇಕು ಎನ್ನುವ ಕುರಿತು ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

    ಎಲ್ಲಾ ಸಮಾಜದಲ್ಲಿ ಕೇಳೋರು ಇರ್ತಾರೆ ಅದು ತಪ್ಪಲ್ಲ. ಕೊಡೋದು ಬಿಡೋದು ಹೈಕಮಾಂಡ್‍ಗೆ ಬಿಟ್ಟ ವಿಚಾರವಾಗಿದೆ. ಎಲ್ಲಾ ಸಮಾಜದಮರಿಗೂ ಮುಖ್ಯಮಂತ್ರಿ ಆಗುವ ಆಸೆ ಇರುತ್ತೆ. ಆದರೆ ಸಿಎಂ ಸ್ಥಾನ ಒಂದು ಮಾತ್ರ ಇರೋದು ಅದು ಭರ್ತಿಯಾಗಿದೆ. ಒಂದು ಸಮಾಜಕ್ಕೆ ಡಿಸಿಎಂ ಸ್ಥಾನ ಕೊಟ್ರೆ ನಾವು ಲೋಕ ಸಭೆ ಚುನಾವಣೆ ಗೆಲ್ಲೋಕಾಗಲ್ಲ, ಎಲ್ಲ ಸಮಾಜದವರು ಮನಸ್ಸು ಮಾಡಿದ್ರೆ ಮಾತ್ರ ಗೆಲ್ಲುಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರ

    ಕೆ. ರಾಜಣ್ಣ ಹೇಳಿದ್ದರಲ್ಲಿ ತಪ್ಪೇನಿಲ್ಲ, ದೇಶದಲ್ಲಿ ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ. ಮೊದಲೆಲ್ಲ ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಠಿಯಾಗಿದ್ದು, ಕಣ್ಣಮುಂದೆ ಇದೆ. ಎಲ್ಲಾ ಶಾಸಕರ ಅಭಿಪ್ರಾಯ ಪಡೆದು, ಈಗಾಗಲೇ ನಮ್ಮ ನಾಯಕರು ಡಿಸಿಎಂ ಹುದ್ದೆಯನ್ನು ಸೃಷ್ಠಿ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆದಮೇಲೆ ರಾಜ್ಯಕ್ಕೆ ಎಲ್ಲ ಒಳ್ಳೆಯದು ಆಗಿದೆ ಎಂದು ಸಿಎಂ ಪರ ಸಚಿವ ದರ್ಶನಾಪುರ ಬ್ಯಾಟ್ ಬೀಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]