Tag: ಕೇಂದ್ರಸರ್ಕಾರ

  • ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ಸ್‌ಗೆ ಸಿಗಲಿದೆ ಪ್ರಶಸ್ತಿ

    ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ಸ್‌ಗೆ ಸಿಗಲಿದೆ ಪ್ರಶಸ್ತಿ

    ನವದೆಹಲಿ: ಸಾಮಾಜಿಕ ಜಾಲತಾಣ ವಿಡಿಯೋ ಅಪ್ಲೋಡ್ ಮಾಡುತ್ತಿರುವ ಕಂಟೆಂಟ್ ಕ್ರಿಯೆಟರ್ಸ್‌ಗೆ (Content Creators) ಗುಡ್‌ನ್ಯೂಸ್. ಕೇಂದ್ರ ಸರ್ಕಾರ  ( Central Government) ಈಗ ಕಂಟೆಂಟ್ ಕ್ರಿಯೆಟರ್ಸ್‌ಗೆ ಪ್ರಶಸ್ತಿ ನೀಡಲು ಮುಂದಾಗಿದೆ.

    ಇತ್ತಿಚಿನ ದಿನಗಳಲ್ಲಿ ಎಲ್ಲಿ ನೋಡಿದರು ಸಾಮಾಜಿಕ ಜಾಲತಾಣಗಳದೆ ಹವಾ. ಸಣ್ಣ ಮಕ್ಕಳಿಂದ ಹಿಡಿದು ಎಲ್ಲರು ಸೋಷಿಯಲ್ ಮೀಡಿಯಾದಲ್ಲಿ (Social Media) ತೊಡಗಿಕೊಂಡಿರುತ್ತಾರೆ. ಅದರಲ್ಲಿ ಸಾಮಾಜಿಕ ಜಾಲತಾಣದ ಪ್ರಭಾವಿಗಳಿಂದ ಇನ್ನೂ ಹೆಚ್ಚಾಗಿದೆ. ಅಂತಹ ಪ್ರಭಾವಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣಕ್ಕೆ ಶ್ರಮಿಸಿದ ಪ್ರಧಾನಿ ಮೋದಿಗೆ HDD ಧನ್ಯವಾದ

    ದೇಶದ ವಿವಿಧ ಭಾಷೆ ಮತ್ತು ವರ್ಗಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ನೀಡುವ ಮಾದರಿಯಲ್ಲಿ ಸುಮಾರು 20 ವಿಭಾಗಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಲು ಮುಂದಾಗಿದೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಪೂಜೆ- ಯೋಗಿ ಆದಿತ್ಯನಾಥ್‌ಗೆ ಟಿಎಂಸಿ ನಾಯಕ ಎಚ್ಚರಿಕೆ

    ಯೂಟ್ಯೂಬ್, ಇನ್‌ಸ್ಟಾಗ್ರಾಮ್ ನಂತಹ ಸಾಮಾಜಿಕ ಜಾಲತಾಣದಲ್ಲಿ ತೊಡಗಿಕೊಂಡಿರುವ ಪ್ರಭಾವಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತೆ. 20 ವರ್ಗಗಳಲ್ಲಿ ದೇಶದ ಶಕ್ತಿ ಮತ್ತು ಸಂಸ್ಕೃತಿಯನ್ನು ತೋರಿಸಿದವರಿಗೆ ಒಂದು ಪ್ರಶಸ್ತಿಯನ್ನು ನೀಡಲಾಗುತ್ತೆ. ಜೊತೆಗೆ ಗ್ರೀನ್ ಚಾಂಪಿಯನ್ಸ್, ಸ್ವಚ್ಛತಾ ರಾಯಭಾರಿಗಳು ಮತ್ತು ಟೆಕ್ ಕ್ರಿಯೇಟರ್ಸ್ ಎಂಬ ವಿವಿಧ ವಿಭಾಗದಲ್ಲಿ ಪ್ರಶಸ್ತಿಗಳು ಇರಲಿವೆ. ಇದನ್ನೂ ಓದಿ: ಸಂಸತ್ತಿನಲ್ಲಿ ಇಂದು ರಾಮ ಮಂದಿರ ಗೊತ್ತುವಳಿ: ಬಿಜೆಪಿ ಸಂಸದರಿಗೆ ವಿಪ್‌ ಜಾರಿ

  • ಆನ್‌ಲೈನ್‌ಲೂ ಸಿಗಲಿದೆ ಭಾರತ್ ಬ್ರ್ಯಾಂಡ್ ಅಕ್ಕಿ – ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಿಗುತ್ತೆ?

    ಆನ್‌ಲೈನ್‌ಲೂ ಸಿಗಲಿದೆ ಭಾರತ್ ಬ್ರ್ಯಾಂಡ್ ಅಕ್ಕಿ – ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಿಗುತ್ತೆ?

    ಬೆಂಗಳೂರು: ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ (Bharath Brand) ಅಕ್ಕಿ ಗ್ರಾಹಕರಿಗೆ ಆನ್‌ಲೈನ್‌ಲೂ (Online) ಸಹ ಸಿಗಲ್ಲಿದ್ದು, ನಗರದಲ್ಲಿಯೂ ಅಕ್ಕಿ ಸಿಗಲಿದೆ

    ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ. ಈ ಹಣದುಬ್ಬರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಈ ಹಿಂದೆ ಕೇಂದ್ರ ಸರ್ಕಾರದಿಂದ ತಂದತಹ ಭಾರತ್ ಅಟ್ಟಾ ಹಾಗೂ ಕಡಲೆ ಬೇಳೆಗೆ ಸಿಲಿಕಾನ್ ಸಿಟಿಯ ಜನರಿಂದ ಭರ್ಜರಿ ಪ್ರಿತಿಕ್ರಿಯೆ ಬಂದಿತ್ತು. ನಗರದಲ್ಲಿ 2,81,572 ಕೆ.ಜಿ ಭಾರತ್ ದಾಲ್ ಮತ್ತು 1,22,190 ಕೆ.ಜಿ ಗೋಧಿ ವ್ಯಾಪಾರವಾಗಿತ್ತು. ಇದನ್ನೂ ಓದಿ: ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ: ರಾಮಲಿಂಗಾರೆಡ್ಡಿ

    ಇದೀಗ ಭಾರತ್ ಬ್ರ‍್ಯಾಂಡ್ ಅಡಿಯಲ್ಲಿ ಅಕ್ಕಿಯನ್ನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್) ಮೂಲಕ ಮಾರಾಟ ಮಾಡಲು ಪ್ಲಾನ್ ಮಾಡಿದೆ. ಈ ಅಕ್ಕಿಯ ವಿತರಣೆ ಮಂಗಳವಾರ (ಫೆ.6) ಆರಂಭವಾಗುವ ಸಾಧ್ಯತೆಯಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ತಲುಪಿಸುವ ಪ್ಲಾನ್ ಮಾಡಿಕೊಂಡಿದೆ.ಇದನ್ನೂ ಓದಿ: ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಅಂತಾರೆ: ಸಿದ್ದರಾಮಯ್ಯ

    ಪ್ರಮುಕವಾಗಿ ಭಾರತ್ ಬ್ರಾಂಡ್‌ನ ಅಕ್ಕಿ ಅಮೇಜಾನ್, ಫ್ಲಿಪ್ ಕಾರ್ಟ್ ನಂತಹ ಆನ್‌ಲೈನ್ ಶಾಪಿಂಗ್ ಆಪ್ಲಿಕೇಶನಲ್ಲೂ ಸಹ ಖರೀದಿಸಬಹುದು. ಇದರಿಂದ ಜನ ಸಾಮಾನ್ಯರಿಗೆ ಇನಷ್ಟು ಸುಲಭವಾಗಲಿದೆ. ಇದನ್ನೂ ಓದಿ:KSRTCಗೆ 800 ʻಅಶ್ವಮೇಧʼ ಕ್ಲಾಸಿಕ್ ಬಸ್‌ಗಳ ಬಲ – 100 ಬಸ್‌ಗಳಿಗೆ ಸಿದ್ದರಾಮಯ್ಯರಿಂದ ಚಾಲನೆ

    ನಗರದ ಯಾವ ಪ್ರಮುಖ ಪ್ರದೇಶಗಳಲ್ಲಿ ಅಕ್ಕಿ ಸಿಗಲ್ಲಿದೆ ಎಂಬುದರ ಪಟ್ಟಿ ಹೀಗಿದೆ.
    ಬಸವೇಶ್ವರ ನಗರ, ದೀಪಾಂಜಲಿ ನಗರ, ಮಹಾಕ್ಷ್ಮಿ ಲೇಔಟ್, ಗಾಯತ್ರಿ ನಗರ, ನಾಗಸಂದ್ರ, ಅಬ್ಬಿಗೆರೆ, ಚಿಕ್ಕಬಣ್ಣಾವರ, ಥಣಿಸಂದ್ರ, ಹೆಸರಘಟ್ಟ, ಯಲಹಂಕ, ಮಾಗಡಿ ರೋಡ್, ಕೊಡಿಗೆಹಳ್ಳಿ, ಶೇಷಾದ್ರಿಪುರಂ, ಸಂಜಯ್ ನಗರ, ಜಕ್ಕೂರು, ಬನಶಂಕರಿ, ಕುಮಾರಸ್ವಾಮಿ ಲೇಔಟ್, ಜೆ.ಸಿ. ನಗರ, ಡೈರಿ ಸರ್ಕಲ್, ಕೊಡಿಗೆಹಳ್ಳಿ ಸೇರಿದಂತೆ ಸುಮಾರು 50 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವ್ಯಾನ್ ಮೂಲಕ ಅಕ್ಕಿ ಪೂರೈಸಿ ಮನೆ ಮನೆಗೆ ತಲುಪಿಸಲಾಗುತ್ತೆ.  ಇದನ್ನೂ ಓದಿ:ಪತಿಯೊಂದಿಗೆ ಅಕ್ರಮ ಸಂಬಂಧ – ಗೆಳತಿಯ ಮನೆಗೆ ನುಗ್ಗಿ ಪತ್ನಿಯಿಂದ ದಾಂಧಲೆ

  • ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

    ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

    ನವದೆಹಲಿ: ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್ (General Bipin Rawat) ಹುತಾತ್ಮರಾದ 9 ತಿಂಗಳ ಬಳಿಕ ಕೇಂದ್ರ ಸರ್ಕಾರ (Central Government Of India) ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (Anil Chauhan) (ನಿವೃತ್ತ) ಅವರನ್ನ ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥ (CDS)ರಾಗಿ ನೇಮಕ ಮಾಡಿದೆ.

    ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ 2021ರ ಮೇ ತಿಂಗಳಲ್ಲಿ ಪೂರ್ವ ಕಮಾಂಡ್ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಇದನ್ನೂ ಓದಿ: 500 ರೂ. ಕೊಟ್ರೆ ಒಂದು ರಾತ್ರಿ ಜೈಲಲ್ಲಿ ಇರಲು ಅವಕಾಶ

    ತಮಿಳುನಾಡಿನ (Tamilnadu) ಕುನೂರು ಬಳಿ ವಾಯುಸೇನೆಯ MI17V5 ಹೆಲಿಕಾಪ್ಟರ್ ಪತನವಾಗಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹುತಾತ್ಮರಾದರು. ಇದರೊಂದಿಗೆ ದುರಂತದಲ್ಲಿ 13 ಜನರೂ ಹುತಾತ್ಮರಾದರು. ಇದರಲ್ಲಿ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಕೂಡ ಕೊನೆಯುಸಿರೆಳೆದರು. ಸೇನಾ ಸಿಬ್ಬಂದಿಯ ಮೊದಲ ಮುಖ್ಯಸ್ಥರಾಗಿದ್ದ ಜನರಲ್ ಬಿಪಿನ್ ರಾವತ್ ದೇಶದ ರಕ್ಷಣೆಗಾಗಿ 4 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು.

    ಅವರು ಮೃತಪಟ್ಟ 9 ತಿಂಗಳ ಬಳಿಕ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಚೌಹಾಣ್ ಅವರನ್ನು ನೇಮಕ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಲ್ಪಸಂಖ್ಯಾತರ ಮೀಸಲಾತಿ ನಿಲ್ಲಿಸುತ್ತೇವೆ – ತೆಲಂಗಾಣ ಸರ್ಕಾರದ ವಿರುದ್ಧ ಶಾ ಗುಡುಗು

    ಅಲ್ಪಸಂಖ್ಯಾತರ ಮೀಸಲಾತಿ ನಿಲ್ಲಿಸುತ್ತೇವೆ – ತೆಲಂಗಾಣ ಸರ್ಕಾರದ ವಿರುದ್ಧ ಶಾ ಗುಡುಗು

    ಹೈದರಾಬಾದ್: ತೆಲಂಗಾಣದಲ್ಲಿ ಚುನಾವಣೆ ರಣಕಹಳೆ ಮೊಳಗಿಸುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಆಡಳಿತಾರೂಢ TRS (ತೆಲಂಗಾಣ ರಾಷ್ಟ್ರ ಸಮಿತಿ) ಸರ್ಕಾರದ ವಿರುದ್ಧ ಗುಡುಗಿದ್ದಾರೆ.

    ರಾಜ್ಯ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ 2ನೇ ಹಂತದ ಪಾದಯಾತ್ರೆಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ಟಿಆರ್‌ಎಸ್ ಸರ್ಕಾರವು ಧರ್ಮಾಧಾರಿತ ಮೀಸಲು ಜಾರಿಗೆ ತರಲು ಹೊರಟಿದ್ದು, ಇದರಿಂದ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ ಮೇಲೆ ಪರಿಣಾಮ ಬೀರುತ್ತದೆ. ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮುಸ್ಲಿಮರಿಗೆ ಶೇ.12ರಷ್ಟು ಮೀಸಲು ನೀಡಲು ಮುಂದಾಗಿದ್ದು, ಇದನ್ನು ನಾವು ಕೊನೆಗೊಳಿಸುತ್ತೇವೆ ಎಂದು ಶಾ ಹೇಳಿದ್ದಾರೆ. ಇದನ್ನೂ ಓದಿ: 18ನೇ ಶತಮಾನದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಹಿಂದೂಗೆ ಸಂತನ ಪಟ್ಟ!

    ಮುಂದಿನ ವರ್ಷ ತೆಲಂಗಾಣ ರಾಜ್ಯದಲ್ಲಿ ಅಲ್ಪಸಂಖ್ಯಾತರ ಮೀಸಲಾತಿಯನ್ನು ಬಿಜೆಪಿ ಕೊನೆಗೊಳಿಸಲಿದೆ. ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಇದರ ಪ್ರಯೋಜನ ನೀಡಲಿದೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ಸಂಕಲ್ಪ

    ಆಡಳಿತಾರೂಢ ಟಿಆರ್‌ಎಸ್ ಸರ್ಕಾರವು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ.4 ರಷ್ಟಿದ್ದ ಮೀಸಲಾತಿಯನ್ನು 2014ರ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಶೇ.12ಕ್ಕೆ ಹೆಚ್ಚಿಸಲು ಮುಂದಾಯಿತು. ಏಪ್ರಿಲ್ 2017 ರಲ್ಲಿ, ತೆಲಂಗಾಣ ವಿಧಾನಸಭೆಯು ಮುಸ್ಲಿಮರಿಗೆ ಶೇ.4 ರಿಂದ 12, ಪರಿಶಿಷ್ಟ ಪಂಗಡಗಳಿಗೆ ಶೇ.6 ರಿಂದ 10ಕ್ಕೆ ಮೀಸಲಾತಿಯನ್ನು ಹೆಚ್ಚಿಸುವ ಮಸೂದೆಯನ್ನು ಅಂಗೀಕರಿಸಿತು. ಮಸೂದೆಯನ್ನು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಕಳುಹಿಸಿದೆ. ಆದರೆ, ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಧರ್ಮಾಧಾರಿತ ಮೀಸಲಾತಿಯನ್ನು ವಿರೋಧಿಸಿದೆ ಎಂದು ಹೇಳಿದ್ದಾರೆ.

    ಅಲ್ಲದೆ, 2023ರ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್‌ಎಸ್ ಪಕ್ಷವನ್ನು ಸೋಲಿಸಿ, ಕಮಲ ಅರಳಿಸುವಂತೆ ಶಾ ಮನವಿ ಮಾಡಿದ್ದಾರೆ.

  • PSI ಅಕ್ರಮದಲ್ಲಿ ಭಾಗಿಯಾಗಿರುವ ಬಿಜೆಪಿಯವರೇ ಗಿಳಿಪಾಠ ಹೇಳುತ್ತಿದ್ದಾರೆ – ರಾಮಲಿಂಗಾರೆಡ್ಡಿ

    PSI ಅಕ್ರಮದಲ್ಲಿ ಭಾಗಿಯಾಗಿರುವ ಬಿಜೆಪಿಯವರೇ ಗಿಳಿಪಾಠ ಹೇಳುತ್ತಿದ್ದಾರೆ – ರಾಮಲಿಂಗಾರೆಡ್ಡಿ

    ಬೆಂಗಳೂರು: PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಬಿಜೆಪಿ ಅವರೇ ಇದ್ದಾರೆ. ಆದರೂ ಗಿಳಿಪಾಠ ಹೇಳಲು ಶುರು ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಿಎಸ್‌ಐ ಹಗರಣದಲ್ಲಿ ಕಾಂಗ್ರೆಸ್‌ನವರು ದಾಖಲೆಗಳಿಲ್ಲದೆ ಆರೋಪ ಮಾಡುತ್ತಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿ ಸಚಿವರು, ನಾಯಕರು ಮಾತಾಡಿರೋದು, ಟ್ವೀಟ್ ಮಾಡಿರೋದನ್ನೂ ನೋಡಿದ್ದೇನೆ. ಇದು ಬಿಜೆಪಿಯ ಎಡಬಿಡಂಗಿ ತನ ತೋರುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ಅಳವಡಿಸುವುದು ಮೂಲಭೂತ ಹಕ್ಕಲ್ಲ: ಅರ್ಜಿ ವಜಾ

    PSI SCAM

    ಈ ಹಗರಣದಲ್ಲಿ ಏನು ದಾಖಲೆ ಇಲ್ಲ ಅಂದರೆ ಅಷ್ಟು ಜನರನ್ನ ಯಾಕೆ ಅರೆಸ್ಟ್ ಮಾಡ್ತಿದ್ದಾರೆ? ಏನು ಆಗಿಲ್ಲ ಅಂದ್ರೆ ನೇಮಕಾತಿ ಏಕೆ ರದ್ದು ಮಾಡಿರೋದು? ಅಧಿಕಾರಿಗಳನ್ನೇಕೆ ವರ್ಗಾವಣೆ ಮಾಡಿದ್ದಾರೆ? ದಿವ್ಯಾ ಹಾಗರಗಿಯನ್ನೇಕೆ ಬಂಧನ ಮಾಡಿದ್ದಾರೆ? ಬಿಜೆಪಿ ಅವರಿಗೆ ಏನ್ ಮಾತಾಡ್ತಿದ್ದೀವಿ ಅಂತಾನೇ ಗೊತ್ತಿಲ್ಲ. ಯಾರೋ ಹೇಳ್ತಿದ್ದಾರೆ ಅಂತ ಬಿಜೆಪಿ ಅವರು ಗಿಳಿ ಪಾಠ ಒಪ್ಪಿಸುತ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡ್ತಾರೆ ಅಂದರೆ ಅವರ ಸಂಸ್ಕೃತಿ ಬಿಂಬಿಸುತ್ತೆ: ಶ್ರೀನಿವಾಸ ಪೂಜಾರಿ

    ಪ್ರಕರಣದಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಭಾಗಿ ವಿಚಾರವಾಗಿ ಮಾತನಾಡಿದ ರೆಡ್ಡಿ, ಯಾವ ಪಕ್ಷದವರೇ ಆಗಿದ್ದರೂ ಕ್ರಮ ಆಗಲಿ. ಪ್ರಿಯಾಂಕ್ ಖರ್ಗೆ ದಾಖಲೆ ಇಲ್ಲದೆ ಮಾತನಾಡೋದಿಲ್ಲ. ಪ್ರಭು ಚವ್ಹಾಣ್, ಬಿಜೆಪಿ ಎಂಎಲ್‌ಸಿಗಳು ಪತ್ರ ಬರೆದಿದ್ದರು. ಆಗ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ? ದಾಖಲೆ ನಾವು ಯಾಕೆ ಕೊಡಬೇಕು? ನಾವು ಕೊಟ್ಟರೆ ಇವರೇ ಬೇಕಾ ತನಿಖೆ ಮಾಡೋಕೆ? ಬಿಜೆಪಿ ಅವರೇ ಇದರ ಹಿಂದೆ ಇದ್ದಾರೆ ಎಂಬುದು ಈ ಬೆಳವಣಿಗೆಗಳಿಂದ ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಸಿಎಂ ಆಗಿದ್ದಕ್ಕೆ ರಾಜ್ ಠಾಕ್ರೆಗೆ ಧ್ವನಿವರ್ಧಕಗಳ ಸಮಸ್ಯೆ: ಸಂಜಯ್ ರಾವತ್

    who

    ಸಾವಿನಲ್ಲಿ ಬಿಜೆಪಿ ಬಂಡವಾಳ ಬಯಲು: ಕೋವಿಡ್ ಸಾವಿನ ವಿಚಾರದಲ್ಲಿ WHO ನೀಡಿರುವ ವರದಿ ಕುರಿತು ಮಾತನಾಡಿ, ಕೊರೊನಾದಲ್ಲಿ ಲಕ್ಷಾಂತರ ಜನ ಮೃತಪಟ್ಟಿದ್ದಾರೆ ಅಂತ ನಾವು ಹೇಳುತ್ತಿದ್ದೇವು. ಯಾರೂ ನಮ್ಮ ಮಾತು ಕೇಳಿರಲಿಲ್ಲ. ಆದರೆ ಇವತ್ತು 47 ಲಕ್ಷ ಜನ ಸತ್ತಿದ್ದಾರೆ ವರದಿ ಹೇಳಿದೆ. ಕೇಂದ್ರ ಸರ್ಕಾರದ ಬಣ್ಣ ಈಗ ಬಯಲಾಗಿದೆ. ನಾನು ವಿಧಾನಸಭೆ ಅಧಿವೇಶನದಲ್ಲಿ ಕೋವಿಡ್ ಸಾವು ಸುಳ್ಳು ಲೆಕ್ಕ ಕೊಟ್ಟಿದ್ದಾರೆ ಅಂತ ಹೇಳಿದ್ದೆ. ಇವತ್ತು ಅದು ಸತ್ಯ ಆಗಿದೆ. ಕರ್ನಾಟಕದಲ್ಲಿ 3.5 ಲಕ್ಷ ಜನ ಸತ್ತಿದ್ದಾರೆ. ಇದನ್ನ ರಾಜ್ಯ ಮತ್ತು ಕೇಂದ್ರ ಸರ್ಕಾರ ಮುಚ್ಚಿಟ್ಟಿತ್ತು. ಇವತ್ತು ಎಲ್ಲ ಬಂಡವಾಳ ಬಯಲಾಗಿದೆ. ಕೋವಿಡ್ ನಿರ್ವಹಣೆ ರಾಜ್ಯ, ಕೇಂದ್ರ ಸರ್ಕಾರ ವಿಫಲವಾಗಿದೆ ಅಂತ ಆಕ್ರೋಶ ಹೊರ ಹಾಕಿದ್ದಾರೆ.

  • ಭಾರತದಲ್ಲಿ ಕೋವಿಡ್‌ನಿಂದ 47 ಲಕ್ಷ ಮಂದಿ ಸಾವು – WHO ವರದಿ

    ಭಾರತದಲ್ಲಿ ಕೋವಿಡ್‌ನಿಂದ 47 ಲಕ್ಷ ಮಂದಿ ಸಾವು – WHO ವರದಿ

    ನವದೆಹಲಿ: ಭಾರತದಲ್ಲಿ ಕೋವಿಡ್‌ನಿಂದಾಗಿ 47 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ಮಾಡಿದೆ.

    ಕೋವಿಡ್‌ನಿಂದಾಗಿ ಮೃತಪಟ್ಟವರ ಅಂಕಿ-ಅಂಶದ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷಗಳ ನಾಯಕರ ನಡುವೆ ನಡೆಯುತ್ತಿತ್ತು. ವಿಶ್ವ ಆರೋಗ್ಯ ಸಂಸ್ಥೆಯ ಈ ವರದಿಯು ಕೇಂದ್ರ ಸರ್ಕಾರದ ಅಂಕಿ-ಅಂಶಕ್ಕಿಂತಲೂ 10 ಪಟ್ಟು ಹೆಚ್ಚು ಮರಣ ಪ್ರಕರಣಗಳು ದಾಖಲಿಸಲಾಗಿದೆ. ಇದನ್ನೂ ಓದಿ: ಬೇಡ ಎಂದರೂ ಬಿಡ್ಲಿಲ್ಲ, ನೆಲಕ್ಕೆ ಕೆಡವಿ ಮಹಿಳೆಗೆ ಕೋವಿಡ್ ಪರೀಕ್ಷೆ – ವೀಡಿಯೋ ವೈರಲ್

    corona who

    ಕೋವಿಡ್ ಸಾವುಗಳಿಗೆ ಸಂಬಂಧಿಸಿದ ಡಬ್ಲ್ಯೂಎಚ್‌ಒ ವರದಿಯನ್ನು ಕೇಂದ್ರ ಸರ್ಕಾರ ಆಕ್ಷೇಪಿಸಿದೆ. ಸಾವಿನ ಪ್ರಮಾಣ ಅಂದಾಜಿಸುವ ಡಬ್ಲ್ಯೂಎಚ್‌ಒ ಮಾದರಿಯನ್ನು ಭಾರತ ನಿರಂತರವಾಗಿ ಆಕ್ಷೇಪಿಸುತ್ತಿದ್ದು, ಈ ನಡುವೆಯೂ ವಿಶ್ವ ಆರೋಗ್ಯ ಸಂಸ್ಥೆ ವರದಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿಕೆ ನೀಡಿದೆ.

    ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಮರಣ ಪ್ರಮಾಣವನ್ನು ಅಂದಾಜಿಸಲು ಡಬ್ಲ್ಯೂಎಚ್‌ಒ ಅನುಸರಿಸಿರುವ ಮಾದರಿ ಹಾಗೂ ಅಂಕಿ-ಅಂಶಗಳ ಸಂಗ್ರಹ ಕ್ರಮವು ಪ್ರಶ್ನಾರ್ಹವಾಗಿದೆ. ಅಲ್ಲದೆ, ಸಾವಿಗಳಿಗೆ ಸಂಬಂಧಿಸಿದಂತೆ ನಾಗರಿಕ ನೋಂದಣಿ ವ್ಯವಸ್ಥೆಯಡಿ (CRS) ಅಧಿಕೃತ, ವಿಶ್ವಾಸನೀಯ ಅಂಕಿ ಅಂಶಗಳು ಲಭ್ಯವಿವೆ. ಹೀಗಾಗಿ, ಹೆಚ್ಚುವರಿ ಸಾವುಗಳನ್ನು ಬಿಂಬಿಸುವ ಮಾದರಿಯನ್ನು ಅನುಸರಿಸಬಾರದು ಎಂದು ವಾದಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ

    ಜನವರಿ 2020ರಿಂದ ಡಿಸೆಂಬರ್ 2021ರ ವರೆಗೂ ಭಾರತದಾದ್ಯಂತ ಕೋವಿಡ್ ಕಾರಣಗಳಿಂದ ಸಾವಿಗೀಡಾದವರ ಸಂಖ್ಯೆ 47,40,894 ಮುಟ್ಟಿತ್ತು. ಆರೋಗ್ಯ ಇಲಾಖೆಯ ದಾಖಲೆಯ ಪ್ರಕಾರ 2021ರ ಅಂತ್ಯಕ್ಕೆ ಸುಮಾರು 4,81,000 ಪ್ರಕರಣ ದಾಖಲಾಗಿತ್ತು. ಪ್ರಸ್ತುತ ದೇಶದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,23,000 ದಾಟಿದೆ. ಇದನ್ನೂ ಓದಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ

    ಜಗತ್ತಿನಾದ್ಯಂತ ಎರಡು ವರ್ಷಗಳಲ್ಲಿ ಕೋವಿಡ್ ಮತ್ತು ಅದಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಸುಮಾರು 1.5 ಕೋಟಿ ಮಂದಿ ಮೃತಪಟ್ಟಿದ್ದಾರೆ ಎಂದು WHO ವರದಿ ಹೇಳಿದೆ. ಸುಮಾರು 60 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿತ್ತು ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

  • 2024 ಮೋದಿ ಒನ್ಸ್‌ಮೋರ್‌ – ಜರ್ಮನಿ ಭಾರತೀಯರಿಂದ ಘೋಷಣೆ

    2024 ಮೋದಿ ಒನ್ಸ್‌ಮೋರ್‌ – ಜರ್ಮನಿ ಭಾರತೀಯರಿಂದ ಘೋಷಣೆ

    ಬರ್ಲಿನ್: ಜರ್ಮನಿಯ ಬರ್ಲಿನ್‌ಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರಮೋದಿ ಅವರು ಜರ್ಮನಿಯ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸಹ-ಅಧ್ಯಕ್ಷತೆಯಲ್ಲಿ ಬರ್ಲಿನ್‌ನಲ್ಲಿ ಕಾರ್ಯಕ್ರಮ ನಡೆಯಿತು.

    ಬರ್ಲಿನ್‌ನ ಮುಖ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ ಮಾಡಲು ವೇದಿಕೆಗೆ ಬರುತ್ತಿದ್ದಂತೆ ಅಲ್ಲಿ ನೆಲೆಸಿರುವ ಭಾರತೀಯರು `2024 ಒನ್ಸ್ಮೋರ್ ಮೋದಿ’ (2024ರ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು) ಎಂದು ಜಯಘೋಷ ಕೂಗಿದರು. ಇದನ್ನೂ ಓದಿ: ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ: ಹರಿಯಾಣ ಶಾಸಕ ಅಸೀಮ್‌ ಪ್ರತಿಜ್ಞೆ

    NARENDRA MODI (2)

    ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮೆಲ್ಲರನ್ನು ನೋಡಿ ತುಂಬಾ ಸಂತೋಷವಾಗುತ್ತಿದೆ. ಯುವಸಮೂಹವೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇನ್ನಷ್ಟು ಖುಷಿ ನೀಡಿದೆ ಎಂದರು.

    ಈ ಹಿಂದೆ ವಿದೇಶಿಯರ ಆಳ್ವಿಕೆಯಿಂದ ದೇಶ ತನ್ನ ಸ್ವಾಭಿಮಾನವನ್ನೇ ಕಳೆದುಕೊಂಡಿತ್ತು. ಇಂದು ಅಭಿವೃದ್ಧಿಯ ಆದಿಯಲ್ಲಿ ಮುನ್ನಡೆಯುತ್ತಿದೆ. ದೇಶದ ಸಂಪನ್ಮೂಲದಲ್ಲಿ ಎಂದಿಗೂ ಕೊರತೆಯಾಗುವುದಿಲ್ಲ ಎಂದೂ ಅವರು ಹೇಳಿದರು. ಇದನ್ನೂ ಓದಿ: ಬಾಬರಿ ಧ್ವಂಸ ವೇಳೆ ಶಿವಸೇನೆ ಎಲ್ಲಿತ್ತು ಎಂದು ನಿಮ್ಮ ನಾಯಕರನ್ನು ಕೇಳಿ: ಬಿಜೆಪಿಗೆ ರಾವತ್ ತಿರುಗೇಟು

    ಮುಂದುವರಿದು, ಯಾವುದೇ ಸುಧಾರಣೆಗೆ ರಾಜಕೀಯ ಇಚ್ಛಾಶಕ್ತಿ ಬೇಕು. ಇಂದು ಭಾರತದಲ್ಲಿ ಜೀವನ ಗುಣಮಟ್ಟ, ಶಿಕ್ಷಣದ ಗುಣಮಟ್ಟ ಸೇರಿದಂತೆ ಎಲ್ಲ ಕ್ಷೇತ್ರಗಳೂ ಮುನ್ನಡೆಯುತ್ತಿವೆ. ಅಧಿಕಾರ ಶಾಹಿಯಾಗಿದ್ದ ಕಚೇರಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತಿವೆ. ಸರ್ಕಾರ ತನ್ನ ಸುಧಾರಣೆಗಳ ಮೂಲಕ ದೇಶವನ್ನು ಪರಿವರ್ತಿಸುತ್ತಿದೆ ಎಂದು ತಿಳಿಸಿದರು.

    NARENDRA MODI (3)

    ಡಿಜಿಟಲ್ ಕ್ಷೇತ್ರದ ಬಗ್ಗೆ ರಾಜಕೀಯ ಇಚ್ಚಾಶಕ್ತಿಯಿದೆ. 2021ರಲ್ಲಿ ಪ್ರಪಂಚದಾದ್ಯಂತ ನಡೆದ ನೈಜ ಪಾವತಿಗಳಲ್ಲಿ ಶೇ.40 ರಷ್ಟು ಭಾರತದಲ್ಲೇ ನಡೆದಿದೆ. ಇದು ಡಿಜಿಟಲ್ ಇಂಡಿಯಾದ ಪೂರಕ ಬೆಳವಣಿಗೆ ಎಂದರು.

    ರೈತರ ಪರಿಹಾಧನ, ವಿದ್ಯಾರ್ಥಿವೇತನ ಇತರ ಸರ್ಕಾರದ ನೆರವುಗಳು ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸುಮಾರು 10 ಸಾವಿರ ಸೇವೆಗಳು ಆನ್‌ಲೈನ್‌ನಲ್ಲೇ ಲಭ್ಯವಾಗುತ್ತಿದೆ. ಹಾಗಾಗಿ ಯಾರಿಗೂ ವಂಚನೆಯಾಗುವುದಿಲ್ಲ. ಇನ್ನು ಮುಂದೆ `ನಾನು ದೆಹಲಿಯಿಂದ 1 ರೂ. ಕಳುಹಿಸಿದರೆ, ಜನರಿಗೆ 15 ಪೈಸೆ ಮಾತ್ರ ತಲುಪುತ್ತದೆ’ ಎಂದು ಯಾವ ಪ್ರಧಾನಿಯೂ ಹೇಳಬೇಕಾಗಿಲ್ಲ’ ಎಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದರು. ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

    NARENDRA MODI (3) (1)

    ಭಾರತ ಕಳೆದ 3 ದಶಕಗಳಿಂದ ರಾಜಕೀಯ ಅಸ್ಥಿರ ವಾತಾವರಣ ಕಂಡಿತ್ತು. 30 ವರ್ಷಗಳ ನಂತರ 2014 ರಲ್ಲಿ ಪೂರ್ಣ ಬಹುಮತದ ಸರ್ಕಾರ ಸ್ಥಾಪಿತವಾದ ಮೇಲೆ 2019ರಿಂದ ಸರ್ಕಾರವನ್ನು ಬಲಪಡಿಸಲಾಗಿದೆ. ನಾವಿಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಸಿಕ್ಕಿದ ಬಳಿಕ ಜನಿಸಿದ ಮೊದಲ ಪ್ರಧಾನಿ ನಾನು. 100 ವರ್ಷಗಳ ಸ್ವಾತಂತ್ರ‍್ಯವನ್ನು ಆಚರಿಸುವ ಗುರಿಯತ್ತ ವೇಗವಾಗಿ ಹೆಜ್ಜೆ ಇಡುತ್ತಿದೆ ಭಾರತ ಎಂದು ಹೇಳಿದರು.

  • ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ

    ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ

    ಬಾಗಲಕೋಟೆ: ಸದ್ಯ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಪರ್ಸೆಂಟೇಜ್ ಪ್ರಕರಣ ಕಾವು ಪಡೆದುಕೊಂಡಿರುವ ಹೊತ್ತಿನಲ್ಲೇ ಶಿರಹಟ್ಟಿ ಜಗದ್ಗುರು ದಿಂಗಾಲೇಶ್ವರ ಸ್ವಾಮೀಜಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದಾರೆ.

    DINGALESWARA

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಈಚೆಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ. ಅವು ಏನಾಗ್ತಿವೆ ಎಂದು ಎಲ್ಲರಿಗೂ ಗೊತ್ತಿದೆ. ಒಬ್ಬ ಸ್ವಾಮೀಜಿಗೆ ಅನುದಾನ ಬಿಡುಗಡೆ ಮಾಡಬೇಕಿದ್ರೆ 30 ಪರ್ಸೆಂಟ್ ಕಮಿಷನ್ ಕೊಡಬೇಕು. ಆಗಲೇ ಮಠಗಳಳಲ್ಲಿ ಕಟ್ಟಡ ಕೆಲಸ ಶುರುವಾಗುತ್ತದೆ. ನೀವು ಇಷ್ಟು ದುಡ್ಡು ಕಟ್ಟದಿದ್ರೆ ನಿಮ್ಮ ಕೆಲಸ ಆಗಲ್ಲ ಎಂದು ಅಧಿಕಾರಿಗಳೇ ಹೇಳುವ ಪರಿಸ್ಥಿತಿ ಬಂದಿದೆ ಅಂದರೆ, ಭ್ರಷ್ಟಾಚಾರ ಎಲ್ಲಿಗೆ ಬಂದಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಇಬ್ಬರು, ಮೂವರು ಸಚಿವರನ್ನು ಬಿಟ್ಟು ಎಲ್ರೂ 40% ಕಮಿಷನ್ ಪಡೆಯುತ್ತಿದ್ದಾರೆ: ಎಂ.ಬಿ ಪಾಟೀಲ್

    prahlad joshi

    ಈಗ ಕಿಡಿಗೇಡಿಗಳ ಸರ್ಕಾರವೇ ಬರುತ್ತಿದೆ. ಉತ್ತರ ಕರ್ನಾಟಕಕ್ಕಾಗಿ ಕಾಕಾಗಳು (ಖಾದಿ -ಖಾವಿ) ಒಂದಾಗಿವೆ. ಆದರೆ, ಎಂದಿಗೂ ನಮ್ಮ ಹಕ್ಕು, ಸ್ವತ್ತನ್ನು ಕಳೆದುಕೊಳ್ಳಬಾರದು, ಅನ್ನೋದು ಎಸ್.ಆರ್.ಪಾಟೀಲ್ ಅವ್ರ ತಂಡದ ಮಾತಾಗಿದೆ. ಇನ್ನೇನು ಕೃಷ್ಣಾ ಮಹದಾಯಿ, ನವಲಿ ಯೋಜನೆಗಳು ಕಾರ್ಯರೂಪಕ್ಕೆ ಬಂದ್ರೆ ನಿಮ್ಮ ಭಾಗದ ಜನರ ಬಾಳು ಹಸನಾಗುತ್ತದೆ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಜನರೇ ತಕ್ಕಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು: ಡಾ.ನಾರಾಯಣ ಗೌಡ

    SR PATIL

    ಕೆಲಸ ಮಾಡದಿದ್ರೆ ಏನ್ ಉಪಯೋಗ?: ಈ ಭಾಗದ ಮಂತ್ರಿಯೊಬ್ಬ ಸದಾ ಪ್ರಧಾನಮಂತ್ರಿ ಅವರೊಂದಿಗೆ ಇರ್ತಾನೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಏನೂ ಕೊಡುಗೆ ನೀಡ್ತಿಲ್ಲ. ಪ್ರಧಾನಿ ಹಿಂದೆ ಓಡಾಡೋದೆ ದೊಡ್ಡ ಕೆಲಸ ಅನ್ಕೊಂಡಿದ್ದಾನೆ. ನೀನು ಪಿಎಂ ಜೊತೆ ಅಡ್ಡಾಡಿದ್ರೂ, ಈ ಭಾಗಕ್ಕೆ ಏನು ಮಾಡದೇ ಇದ್ರೆ, ಪ್ರಯೋಜನ ಇಲ್ಲ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಿರುದ್ಧ ಏಕವಚನದಲ್ಲೇ ಸ್ವಾಮೀಜಿ ಲೇವಡಿ ಮಾಡಿದರು.

    ದೆಹಲಿ ಸರ್ಕಾರಕ್ಕೆ ಟಾಂಗ್: ನಮ್ಮ ಉತ್ತರ ಕರ್ನಾಟಕದವರು ಸ್ವಲ್ಪ ಜಾಗೃತರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು. ಕೆಲ ಭಾಗಗಳಲ್ಲಿ ಸ್ವಾಮೀಜಿಗಳಲ್ಲೇ ಇರುವ ತಾರತಮ್ಯ ನಿಲ್ಲಬೇಕು. ಈ ಹೋರಾಟ ಇಲ್ಲಿಗೆ ನಿಲ್ಲೋದು ಬೇಡ. ಇದು ಮುಂದುವರಿಯಬೇಕು. ಎಲ್ಲಿಯ ತನಕ ಈ ಭಾಗ ಅಭಿವೃದ್ಧಿ ಆಗುವವರೆಗೆ ನಿಮ್ಮ ಹೋರಾಟ ನಿಲ್ಲಬಾರದು. ನಾವೆಲ್ಲ ನಿಮ್ಮ ಜೊತೆಗಿರುತ್ತೇವೆ ಎಂದು ಹೋರಾಟಕ್ಕೆ ಬೆಂಬಲ ಘೋಷಿಸಿದರು.

  • 5 ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ- ಭಾರತಕ್ಕೆ 4ನೇ ಅಲೆಯ ಮುನ್ಸೂಚನೆ

    ನವದೆಹಲಿ: ಈಗಾಗಲೇ ಚೀನಾ ದೇಶದ ಶಾಂಘೈನಗರದಲ್ಲಿ ಕೋವಿಡ್ ಹೆಚ್ಚಳವಾಗಿದ್ದು ಹಿರಿಯ ನಾಗರಿಕರ ಸರಣಿ ಸಾವುಗಳು ಸಂಭವಿಸುತ್ತಿದೆ. ಕೊರೊನಾ ನಿಯಂತ್ರಿಸಲು ಚೀನಾ ಸರ್ಕಾರವೂ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಇದೀಗ ಭಾರತದಲ್ಲೇ 5 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿರುವುದು ನಾಲ್ಕನೇ ಅಲೆಯ ಮುನ್ಸೂಚನೆ ನೀಡಿದಂತಾಗಿದೆ. ‌

    CORONA CHINA

    ಚೀನಾ, ಅಮೆರಿಕ ಮತ್ತು ಯೂರೋಪ್‌ನ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಕೊರೊನಾ ವೈರಸ್‌ನ ರೂಪಾಂತರ ತಳಿಯಾದ ಓಮೈಕ್ರಾನ್‌ನ ಉಪ ತಳಿಯಾದ XE ತಳಿಯೂ ಸಹ ಭಾರತದಲ್ಲಿ 2 ಪ್ರಕರಣಗಳು ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಹಾಗಾಗಿ ಭಾರತದ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಇದನ್ನೂ ಓದಿ: XE ರೂಪಾಂತರಿ ಮಾರಣಾಂತಿಕವಲ್ಲ: ಮಹಾರಾಷ್ಟ್ರ ಸಚಿವ

    ದೇಶದ ಕೇರಳ, ಹರಿಯಾಣ, ಮಹಾರಾಷ್ಟ್ರ ದೆಹಲಿ ಹಾಗೂ ಮಿಜೋರಾಂಗಳಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿದ್ದು, ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರವು ಆಯಾ ರಾಜ್ಯ ಸರ್ಕಾರಗಳಿಗೆ ಸೂಚಿಸಿ ಪತ್ರ ಬರೆದಿದೆ. ಕೋವಿಡ್ ಹೆಚ್ಚಳದ ಬಗ್ಗೆ ನಿಗಾ ವಹಿಸಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ನಿಯಂತ್ರಣಾ ಕ್ರಮ ಕೈಗೊಳ್ಳಬೇಕು ಎಂದೂ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:  26 ಮಿಲಿಯನ್ ಜನರ ಕೋವಿಡ್ ಪರೀಕ್ಷೆಗೆ ಸಾವಿರಾರು ಮಿಲಿಟರಿ, ವೈದ್ಯರನ್ನು ಶಾಂಘೈಗೆ ಕಳುಹಿಸಿದ ಚೀನಾ

    covid

    ಭಾರತದಲ್ಲಿ ವರದಿಯಾದ ಒಟ್ಟು ಹೊಸ ಪ್ರಕರಣಗಳಲ್ಲಿ ಶೇ 31.8ರಷ್ಟು. ಕೋವಿಡ್ ಪಾಸಿಟಿವಿಟಿ ದರ ಅಲ್ಲಿ ಶೇ.13.45 ರಿಂದ 15.53ಕ್ಕೆ ಹೆಚ್ಚಾಗಿದೆ. ಅಲ್ಲದೆ ಕಳೆದ ವಾರ ಕೇರಳದಲ್ಲಿ 2321 ಹೊಸ ಪ್ರಕರಣಗಳು ವರದಿಯಾಗಿವೆ. ಏ.1ಕ್ಕೆ ಅಂತ್ಯಗೊAಡ ಒಂದು ವಾರ ದೆಹಲಿಯಲ್ಲಿ 724ಪ್ರಕರಣಗಳು ವರದಿಯಾಗಿದ್ದವು. ಆದರೆ ಏಪ್ರಿಲ್ 8ರ ಹೊತ್ತಿಗೆ 826 ಹೊಸ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರದಲ್ಲಿ ಶೇ 0.51 ರಿಂದ 1.25ರಷ್ಟು ಹೆಚ್ಚಾಗಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

    ಭಾನುವಾರವೂ ಸಹ ಭಾರತದಾದ್ಯಂತ 1,054 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 29 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

  • ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಭಾಷೆ ಬಳಕೆಯಾಗಬೇಕು: ಅಮಿತ್ ಶಾ

    ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಭಾಷೆ ಬಳಕೆಯಾಗಬೇಕು: ಅಮಿತ್ ಶಾ

    ನವದೆಹಲಿ: ಇಂಗ್ಲಿಷ್‌ಗೆ ಪರ್ಯಾಯವಾಗಿ ದೇಶದಲ್ಲಿ ಹಿಂದಿ ಬಳಕೆಯಾಗಬೇಕು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

    ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೀಗ ಸಚಿವ ಸಂಪುಟದ ಶೇ.70ರಷ್ಟು ಕಾರ್ಯಸೂಚಿ ಹಿಂದಿಯಲ್ಲೇ ಸಿದ್ಧವಾಗಿದೆ ಎಂದು ಸಭೆಗೆ ತಿಳಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಭ್ರಷ್ಟಾಚಾರ ಕಿತ್ತೊಗೆಯುವ ಸಮಯ ಬಂದಿದೆ: ಕೇಜ್ರಿವಾಲ್

    Amith

    ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಧಿಕೃತ ಭಾಷೆಯಲ್ಲಿ ಸರ್ಕಾರ ಸಂವಹನ ನಡೆಸಬೇಕು ಎಂದು ನಿರ್ಧರಿಸಿದ್ದಾರೆ. ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ. ದೇಶದ ಅಧಿಕೃತ ಭಾಷೆಯನ್ನು ಘೋಷಿಸುವ ಮೂಲಕ ದೇಶದ ಏಕತೆಯ ಪ್ರಮುಖ ಭಾಗವನ್ನಾಗಿ ಮಾಡುವ ಸಮಯ ಇದೀಗ ಬಂದಿದೆ. ಒಂದು ರಾಜ್ಯದ ಜನರು ಇನ್ನೊಂದು ರಾಜ್ಯದ ಜನರ ಜೊತೆ ಭಾರತದ ಭಾಷೆಯಲ್ಲೇ ಸಂವಹನ ಮಾಡಬೇಕು ಎಂದು ಅಮಿತ್ ಶಾ ಹೇಳಿದರು.

    ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿಯನ್ನೇ ಬಳಸಬೇಕು ವಿನಾ: ಬೇರೆ ಭಾಷೆಯನ್ನಲ್ಲ. ಬೇರೆ ಭಾಷೆಯಲ್ಲಿರುವ ಪದಗಳನ್ನು ಹಿಂದಿಗೆ ತರುವ ಮೂಲಕ ಭಾಷೆಯನ್ನು ಸರಳಗೊಳಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಅಸ್ತಿತ್ವಕ್ಕಾಗಿ ಶಸ್ತ್ರಾಸ್ತ್ರ ಹಿಡಿಯುವಂತಾಗಿದೆ: ಯತಿ ನರಸಿಂಹಾನಂದ ವಿರುದ್ಧ ಖರ್ಗೆ ಕಿಡಿ 

    shah

    ಈಗಾಗಲೇ 8 ಈಶಾನ್ಯ ರಾಜ್ಯಗಳಲ್ಲಿ 22,000 ಹಿಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈಶಾನ್ಯದ 9 ಬುಡಕಟ್ಟು ಸಮುದಾಯಗಳು ತಮ್ಮ ಉಪಭಾಷೆಗಳ ಲಿಪಿಗಳನ್ನು ದೇವನಗರಿಗೆ ಪರಿವರ್ತಿಸಿದ್ದಾರೆ. ಈಶಾನ್ಯದ ಎಲ್ಲ 8 ರಾಜ್ಯಗಳು ಶಾಲೆಗಳಲ್ಲಿ 10ನೇ ತರಗತಿಯವರೆಗೆ ಹಿಂದಿಯನ್ನು ಕಡ್ಡಾಯಗೊಳಿಸಲು ಒಪ್ಪಿಕೊಂಡಿವೆ. ಹೀಗಾಗಿ ಇಂಗ್ಲಿಷ್‌ಗೆ ಪರ್ಯಾಯವಾಗಿ ಹಿಂದಿ ಭಾಷೆಯನ್ನೇ ಅನುಷ್ಠಾನಗೊಳಿಸಬೇಕು ಎಂದು ಅಮಿತ್ ಶಾ ಸಭೆಗೆ ತಿಳಿಸಿದ್ದಾರೆ.