Tag: ಕೇಂದ್ರ ಆರೋಗ್ಯ ಇಲಾಖೆ

  • ದೇಶದಲ್ಲಿ ಮಂಕಿಪಾಕ್ಸ್ ಆತಂಕ – ಕೇಂದ್ರದಿಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಗೈಡ್‍ಲೈನ್

    ದೇಶದಲ್ಲಿ ಮಂಕಿಪಾಕ್ಸ್ ಆತಂಕ – ಕೇಂದ್ರದಿಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಗೈಡ್‍ಲೈನ್

    ನವದೆಹಲಿ: ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದಾಖಲಾದ ಬಳಿಕ ಇದೀಗ ಕೇಂದ್ರ ಆರೋಗ್ಯ ಇಲಾಖೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನೂತನ ಗೈಡ್‍ಲೈನ್ ಬಿಡುಗಡೆ ಮಾಡಿದೆ.

    ವಿದೇಶದಿಂದ ಆಗಮಿಸಿದ್ದ ಕೇರಳದ ಕೊಲ್ಲಂನ ವ್ಯಕ್ತಿಯೋರ್ವನಿಗೆ ನಿನ್ನೆ ಮಂಕಿಪಾಕ್ಸ್ ಸೋಂಕಿರುವುದು ದೃಢವಾಗಿತ್ತು. ಆ ಬಳಿಕ ಇದೀಗ ವಿದೇಶದಿಂದ ವಿಮಾನದಲ್ಲಿ ಆಗಮಿಸುವ ಪ್ರಯಾಣಿಕರ ಮೇಲೆ ಕೇಂದ್ರ ಆರೋಗ್ಯ ಇಲಾಖೆ ನಿಗಾ ವಹಿಸಲು ಮುಂದಾಗಿದೆ. ಇದನ್ನೂ ಓದಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ – ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು

    ಹೊಸ ಗೈಡ್‍ಲೈನ್:
    ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರಬಾರದು. ಇಲಿಗಳು, ಅಳಿಲುಗಳು, ಮಂಗಗಳು ಮತ್ತು ಸಸ್ತನಿಗಳು ಸೇರಿದಂತೆ ಸತ್ತ ಅಥವಾ ಜೀವಂತ ಕಾಡು ಪ್ರಾಣಿಗಳ ಸಂಪರ್ಕದಿಂದ ದೂರವಿರಬೇಕು. ಕಾಡು ಪ್ರಾಣಿಗಳ ಮಾಂಸವನ್ನು ತಿನ್ನಬಾರದು. ಆಫ್ರಿಕಾ ಸೇರಿದಂತೆ ಇತರ ದೇಶಗಳಲ್ಲಿ ಕಾಡು ಪ್ರಾಣಿಗಳಿಂದ ಉತ್ಪಾದಿಸಿದ ಉತ್ಪನ್ನಗಳಾದ ಕ್ರೀಮ್‌ ಲೋಷನ್‍ಗಳನ್ನು ಬಳಸಬಾರದು ಮತ್ತು ತರಬಾರದೆಂದು ಗೈಡ್‍ಲೈನ್‍ನಲ್ಲಿ ಸ್ಪಷ್ಟಪಡಿಸಲಾಗಿದೆ.

    ಜೊತೆಗೆ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಔಷಧಿ ಪಡೆಯಿರಿ ಮತ್ತು ಈ ಬಗ್ಗೆ ಸರಿಯಾಗಿ ಮಾಹಿತಿ ನೀಡಿ. ಜೊತೆಗೆ ಸೋಂಕಿತರೊಂದಿಗೆ ಸಂಪರ್ಕಿಸಿದವರ ಬಗ್ಗೆ ಮಾಹಿತಿ ನೀಡಿ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಗರ್ಭಪಾತ ಬೇಡ, ಮಗುವಿಗೆ ಜನ್ಮ ನೀಡಿ ದತ್ತು ಕೊಡಿ – ಅವಿವಾಹಿತ ಯುವತಿಗೆ ದೆಹಲಿ ಹೈಕೋರ್ಟ್ ಸಲಹೆ

    ವಿಶ್ವ ಆರೋಗ್ಯ ಸಂಸ್ಥೆ (WTC) ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೊಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದ್ದು, ಸಿಡುಬು ರೋಗಿಗಳಲ್ಲಿ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ. ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರತೆ ಹೊಂದಿದೆ. 1970ರಲ್ಲಿ ಮೊದಲ ಬಾರಿಗೆ ಕಾಂಗೋ ದೇಶದಲ್ಲಿ ಮಾನವನಲ್ಲಿ ಪತ್ತೆಯಾಯಿತು. ಈ ರೋಗ ಹೆಚ್ಚಾಗಿ ಆಫ್ರಿಕಾದಲ್ಲಿ ವಾಸಿಸುವವರಲ್ಲಿ ಕಂಡು ಬಂದಿದೆ. ಮಂಕಿಪಾಕ್ಸ್ ವೈರಸ್ ಇಲಿಗಳಲ್ಲಿ ಮತ್ತು ಕೋತಿಗಳಲ್ಲಿ ಹರಡುವುದು ಸಾಮಾನ್ಯ. ಸೋಂಕಾದ ಪ್ರಾಣಿಗಳು ಮನುಷ್ಯನ ಸಂಪರ್ಕ ಪಡೆದಾಗ ಅವರಿಗೂ ಹರಡುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಕೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರತದಲ್ಲಿ ಮೂರನೇ ಅಲೆ ಅಧಿಕೃತ – ವಿಶ್ವದಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭ

    ಭಾರತದಲ್ಲಿ ಮೂರನೇ ಅಲೆ ಅಧಿಕೃತ – ವಿಶ್ವದಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭ

    ನವದೆಹಲಿ: ಭಾರತದಲ್ಲಿ ಕೊರೊನಾ ಮೂರನೇ ಅಲೆ ಬಂದಿರುವುದನ್ನು ಕೇಂದ್ರ ಆರೋಗ್ಯ ಇಲಾಖೆ ಅಧಿಕೃತಗೊಳಿಸಿದೆ. ಇದಲ್ಲದೆ ವಿಶ್ವದಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭವಾಗಿದೆ ಎಂಬ ಆತಂಕಕಾರಿ ಸುದ್ದಿ ಹೊರಬಿದ್ದಿದೆ.

    ಕೇಂದ್ರ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಪ್ರಕಾರ ದೇಶದಲ್ಲಿ ಇಂದು ಒಟ್ಟು 3,17,532 ಪ್ರಕರಣ ವರದಿಯಾಗಿದ್ದು, ನಿನ್ನೆಗಿಂತ 12.2% ಹೆಚ್ಚು ಸೋಂಕು ಕಾಣಿಸಿಕೊಂಡಿದೆ. ಇಂದು 491 ಮಂದಿ ಮರಣಹೊಂದಿದ್ದಾರೆ. ಈ ಮೂಲಕ ಒಟ್ಟು ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 4,87,693ಕ್ಕೆ ಏರಿಕೆ ಕಂಡಿದೆ. ಇದನ್ನೂ ಓದಿ: ಟೆಸ್ಟ್‌ಗೆ ಕಳುಹಿಸಿ 22 ದಿನದ ನಂತರ ಬಂತು ಒಮಿಕ್ರಾನ್ ವರದಿ – ಅಷ್ಟರಲ್ಲಿ ಗುಣಮುಖಳಾಗಿ ಡಿಸ್ಚಾರ್ಜ್‌ ಆಗಿದ್ಲು ಯುವತಿ!

    ದೇಶದಲ್ಲಿ 19,24,051 ಸಕ್ರಿಯ ಪ್ರಕರಣಗಳಿವೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಹಲವು ಮಾಹಿತಿಗಳನ್ನು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಪೈಕಿ ದೇಶದಲ್ಲಿ 515 ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ 5%ಗಿಂತ ಹೆಚ್ಚಾಗಿದೆ. 11 ರಾಜ್ಯಗಳಲ್ಲಿ 50 ಸಾವಿರಕ್ಕೂ ಹೆಚ್ಚು ಕೇಸ್ ದಾಖಲಾಗಿದೆ ಎಂದು ಮಾಹಿತಿ ನೀಡಿದೆ. ಇದನ್ನೂ ಓದಿ: ಬೂಸ್ಟರ್ ಡೋಸ್ ಪಡೆದ ಬಳಿಕ ಅಜ್ಜನ ಭರ್ಜರಿ ಬ್ಯಾಟಿಂಗ್ – ವೀಡಿಯೋ ವೈರಲ್

    ಭಾರತದಲ್ಲಿ ಮೂರನೇ ಅಲೆ ದೃಢ ಪಟ್ಟಿದ್ದು, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಕೇರಳ, ಡೆಲ್ಲಿ ಮತ್ತು ಉತ್ತರ ಪ್ರದೇಶಕ್ಕೆ ಹೈಅಲರ್ಟ್ ಘೋಷಣೆ ಮಾಡಿದೆ. ಕೇಂದ್ರ ತಂಡ ಈ ರಾಜ್ಯಗಳಿಗೆ ಭೇಟಿ ಕೊಡಲಿದೆ ಎಂದು ಆರೋಗ್ಯ ಇಲಾಖೆ ಘೋಷಿಸಿದೆ. ಇದನ್ನೂ ಓದಿ: ಜನರಿಗೆ ಸಹಾಯವಾಗುವ ನಿರ್ಧಾರ ನಾಳೆ ಪ್ರಕಟ : ಅಶೋಕ್

  • 1-10 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು

    1-10 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು

    ನವದೆಹಲಿ: ಕೊರೊನಾ ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಾರದು ಎನ್ನುವ ಮಾತುಗಳ ನಡುವೆ ಈಗ 1-10 ವರ್ಷದೊಳಗಿನ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ವರದಿಗಳು ಲಭ್ಯವಾಗಿದ್ದು, ಈ ಅಂಕಿ ಅಂಶಗಳು ಆತಂಕವನ್ನು ಹೆಚ್ಚು ಮಾಡಿದೆ.

    ಮೂರನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಪ್ರತಿ ನೂರು ಮಂದಿ ಸೋಂಕಿತರ ಪೈಕಿ ಏಳು ಮಕ್ಕಳಿಗೆ ಕೊರೊನಾ ತಗುಲುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳುತ್ತಿವೆ.

    ಕಳೆದ ಮಾರ್ಚ್ ನಲ್ಲಿ 1-10 ವರ್ಷದ ಮಕ್ಕಳಲ್ಲಿ ಶೇ.2.80ರಷ್ಟು ಸೋಂಕು ಕಂಡು ಬಂದಿತ್ತು. ಅಗಸ್ಟ್ ನಲ್ಲಿ ಇದು ಶೇ.7.04ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಗೆ ತಜ್ಞರು ವರದಿ ನೀಡಿದ್ದಾರೆ. 1-10 ವರ್ಷದ ಮಕ್ಕಳಲ್ಲಿ ಸ್ಥಿರವಾಗಿ ಸೋಂಕು ಏರುತ್ತಿದ್ದು, ಮೂರನೇ ಅಲೆ ಹೆಚ್ಚಾದಲ್ಲಿ ಮಕ್ಕಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ಕೊರತೆ ಇದೆ: ಸಚಿವ ನಾಗೇಶ್

    2020 ಜೂನ್ ನಿಂದ 2021 ಪೆಬ್ರವರಿವರೆಗೂ ಅಂದರೆ ಒಂಭತ್ತು ತಿಂಗಳ ಅವಧಿಯಲ್ಲಿ ಶೇ.2.72 ರಿಂದ ಶೇ.3.59ರಷ್ಟು ವ್ಯಾಪ್ತಿಯಲ್ಲಿ ಮಕ್ಕಳಲ್ಲಿ ಸೋಂಕು ಕಂಡು ಬಂದಿತ್ತು. ಆದರೆ ಈ ವರ್ಷ ಐದು ತಿಂಗಳ ಅವಧಿಯಲ್ಲಿ ಶೇ.4, 5ರಷ್ಟು ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುವುದು ಹೆಚ್ಚಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಮಟ್ಟದಲ್ಲೂ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: ಸೆ.17 ರಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಆರಂಭ

    ಲಭ್ಯವಿರುವ ಮಾಹಿತಿಗಳ ಪ್ರಕಾರ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೈಕಿ, ಆಗಸ್ಟ್ ತಿಂಗಳಲ್ಲಿ ಮಕ್ಕಳಲ್ಲಿ ಕೊರೊನಾ ಪ್ರಕರಣಗಳು ಮಿಜೋರಾಂನಲ್ಲಿ ಅತಿ ಹೆಚ್ಚು ಅಂದರೆ ಶೇ.16.48ರಷ್ಟು ದಾಖಲಾಗಿವೆ. ದೆಹಲಿಯಲ್ಲಿ ಅತಿ ಕಡಿಮೆ ಅಂದರೆ ಶೇ.2.25ರಷ್ಟು ಪ್ರಕರಣ ದಾಖಲಾಗಿವೆ. ಮೇಘಾಲಯ ಶೇ.9.35, ಮಣಿಪುರ ಶೇ.8.74, ಕೇರಳ ಶೇ.8.62, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಶೇ.8.2, ಸಿಕ್ಕಿಂ ಶೇ.8.02, ದಾದ್ರಾ ಮತ್ತು ನಗರ ಹವೇಲಿ ಶೇ.7.69 ಹಾಗೂ ಅರುಣಾಚಲ ಪ್ರದೇಶದಲ್ಲಿ ಶೇ.7.38ರಷ್ಟು ಮಕ್ಕಳಲ್ಲಿ ಸೋಂಕು ಕಂಡು ಬಂದಿದೆ.

    ರಾಷ್ಟ್ರೀಯ ಸರಾಸರಿ ಪ್ರಮಾಣ ಶೇ.7.04ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿವೆ. ಆಗಸ್ಟ್ ನಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಪ್ರಕರಣಗಳು ಪುದುಚೇರಿ ಶೇ.6.95, ಗೋವಾ ಶೇ.6.86, ನಾಗಾಲ್ಯಾಂಡ್ ಶೇ.5.48, ಅಸ್ಸಾಂ ಶೇ.5.04, ಕರ್ನಾಟಕ ಶೇ.4.59, ಆಂಧ್ರ ಪ್ರದೇಶ ಶೇ.4.53, ಒಡಿಶಾ ಶೇ.4.18, ಮಹಾರಾಷ್ಟ್ರ ಶೇ.4.08, ತ್ರಿಪುರ ಶೇ.3.54, ದೆಹಲಿ ಶೇ.2.25ರಷ್ಟು ದಾಖಲಾಗಿವೆ.

  • ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ದೋಷ ಇದ್ಯಾ? –  ಕೆಲ ನಿಮಿಷದಲ್ಲಿ ಸರಿ ಮಾಡಿ

    ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ದೋಷ ಇದ್ಯಾ? – ಕೆಲ ನಿಮಿಷದಲ್ಲಿ ಸರಿ ಮಾಡಿ

    ನವದೆಹಲಿ: ಕೊರೊನಾ ಲಸಿಕೆ ಸ್ವೀಕರಿಸಿದವರಿಗೆ ಆನ್‍ಲೈನ್ ಮೂಲಕ ನೀಡುವ ಪ್ರಮಾಣ ಪತ್ರದಲ್ಲಿ ಯಾವುದೇ ದೋಷವಾಗಿದ್ದರೆ ಅದನ್ನು ಈಗ ಸರಿ ಮಾಡಬಹುದು.

    ಜನ್ಮ ವರ್ಷ, ಹೆಸರು, ಲಿಂಗದಲ್ಲಿ ಆಗಿರುವ ತಪ್ಪುಗಳನ್ನು ಬಳಕೆದಾರರೇ ಕೋವಿನ್ ವೆಬ್‍ಸೈಟ್‍ಗೆ ಹೋಗಿ ಎಡಿಟ್ ಮಾಡಬಹುದು. ವಿದೇಶಗಳು ತಮ್ಮ ದೇಶಕ್ಕೆ ಬರುವ ಪ್ರಯಾಣಿಕರಿಗೆ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ಕಡ್ಡಾಯ ಮಾಡಿದೆ.  ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈಗ ತಪ್ಪನ್ನು ಸರಿ ಮಾಡಿಕೊಳ್ಳಲು ಅವಕಾಶ ನೀಡಿದೆ.

    ಲಸಿಕೆಯ ಪ್ರಮಾಣಪತ್ರದಲ್ಲಿರುವ ವರ್ಷ, ಲಿಂಗ, ಹೆಸರುಗಳು ಪಾಸ್‍ಪೋರ್ಟ್ ನಲ್ಲಿರುವ ವಿವರಗಳಿಗೆ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಜನರು ಕೇಂದ್ರ ಸರ್ಕಾರಕ್ಕೆ ದೂರು ನೀಡಿದ್ದರು. ಈ ದೂರುಗಳನ್ನು ಗಂಭೀರವಾಗಿ ಸ್ವೀಕರಿಸಿದ ಆರೋಗ್ಯ ಇಲಾಖೆ ಸಮಸ್ಯೆಯನ್ನು ಸರಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಇದನ್ನೂ ಓದಿ: ಲಸಿಕೆ ಹಾಕಿಸಿಕೊಂಡ ವರನೇ ಬೇಕೆಂದ ವಧು – ಶಶಿ ತರೂರ್ ತಬ್ಬಿಬ್ಬು

    ಎಡಿಟ್ ಹೇಗೆ ಮಾಡಬೇಕು?
    ಹಂತ 1. ಆರಂಭದಲ್ಲಿ www.cowin.gov.in  ಹೋಗಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೊಂದಾಯಿಸಿ.

    ಹಂತ 2. ಈ ವೇಳೆ ನಿಮ್ಮ ಮೊಬೈಲ್ 6 ಸಂಖ್ಯೆಯ ಒಟಿಪಿ ಬರುತ್ತದೆ.

    ಹಂತ 3: ಇಲ್ಲಿ ಕ್ಲಿಕ್ ಮಾಡಿ Verify & Proceed ಒತ್ತಿ.

    cowin corona vaccine  2

    ಹಂತ 4: ನಂತರ ಅಕೌಂಟ್ ಡಿಟೇಲ್ಸ್ ಗೆ ಹೋಗಿ.

    ಹಂತ 5: ನೀವು ಲಸಿಕೆ ತೆಗೆದುಕೊಂಡರೆ “Raise an Issue” ಕ್ಲಿಕ್ ಮಾಡಿ.

    cowin corona vaccine 1

    ಹಂತ 6: ಈ ವೇಳೆ ವೆಬ್‍ಸೈಟ್ “What is the issue?”  ಎಂದು ಕೇಳುತ್ತದೆ. ಇಲ್ಲಿ “Correction in certificate” ಕ್ಲಿಕ್ ಮಾಡಿ ಏನು ತಪ್ಪಾಗಿದೆಯೋ ಅದನ್ನು ಸರಿಪಡಿಸಿಕೊಳ್ಳಬಹುದು. ಸರಿ ಮಾಡಿದ ಬಳಿಕ ಎಲ್ಲ ಮಾಹಿತಿ ಸರಿಯಾಗಿರುವ ಪ್ರಮಾಣಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.

  • 24 ಗಂಟೆಯಲ್ಲಿ 81,533 ಮಂದಿ ಕೊರೊನಾ ಮುಕ್ತ – ಭಾರತದಲ್ಲಿ ಚೇತರಿಕೆ ಪ್ರಮಾಣ ಏರಿಕೆ

    24 ಗಂಟೆಯಲ್ಲಿ 81,533 ಮಂದಿ ಕೊರೊನಾ ಮುಕ್ತ – ಭಾರತದಲ್ಲಿ ಚೇತರಿಕೆ ಪ್ರಮಾಣ ಏರಿಕೆ

    ನವದೆಹಲಿ: ದೇಶದಲ್ಲಿ ಕೊರೊನಾದಿಂದ ಗುಣಮುಖಗೊಳ್ಳುವವರ ಪ್ರಮಾಣ 77.77% ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 81,533 ಮಂದಿ ಚೇತರಿಕೆ ಕಂಡಿದ್ದು, ಇದು ಒಂದೇ ದಿನದಲ್ಲಿ ಗುಣಮುಖಗೊಂಡವರ ಗರಿಷ್ಠ ಸಂಖ್ಯೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

    ಒಂದು ಕಡೆ ದಾಖಲೆ ಪ್ರಮಾಣದಲ್ಲಿ ಸೋಂಕು ಏರಿಕೆಯಾಗುತ್ತಿದ್ದು ಸಾವು ಸಂಭವಿಸುತ್ತಿವೆ. ಮತ್ತೊಂದು ಕಡೆ ಚೇತರಿಕೆ ಪ್ರಮಾಣವೂ ಕೂಡಾ ಹೆಚ್ಚಾಗಿದೆ. ಈ ಮೂರು ವಲಯಗಳಲ್ಲಿ ಐದು ರಾಜ್ಯಗಳು ಪ್ರಮುಖ ಪಾತ್ರ ನಿರ್ವಹಿಸಿವೆ. ಈವರೆಗೂ ದೇಶದಲ್ಲಿ 36,24,196 ಮಂದಿ ಗುಣಮುಖವಾಗಿದ್ದು, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಉತ್ತರ ಪ್ರದೇಶದಲ್ಲಿ 60% ಮಂದಿ ಚೇತರಿಕೆ ಕಂಡಿದ್ದಾರೆ.

    ಕಳೆದ 24 ಗಂಟೆಯಲ್ಲಿ ದೇಶದಲ್ಲಿ 97,570 ಮಂದಿಗೆ ಸೋಂಕು ತಗುಲಿದ್ದು, ಈ ಪೈಕಿ ಈ ಐದು ರಾಜ್ಯದ 60% ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ದೆಹಲಿಯಲ್ಲಿ 69% ಸಾವುಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

  • ಒಂದೇ ದಿನದಲ್ಲಿ 50 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು – 10 ಲಕ್ಷ ಮಂದಿ ಕೊರೊನಾದಿಂದ ಗುಣಮುಖ

    ಒಂದೇ ದಿನದಲ್ಲಿ 50 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು – 10 ಲಕ್ಷ ಮಂದಿ ಕೊರೊನಾದಿಂದ ಗುಣಮುಖ

    ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದ 52,123 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈವರೆಗಿನ ಎಲ್ಲ ದಾಖಲೆಗಳನ್ನು ಪುಡಿಗಟ್ಟಿದೆ.

    ಇದೇ ಮೊದಲು ಬಾರಿಗೆ ಒಂದೇ ದಿನಕ್ಕೆ ಐವತ್ತು ಸಾವಿರ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಿನ್ನೆ 775 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 34,968ಕ್ಕೆ ಏರಿದೆ. ಸದ್ಯ 5,28,242 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    ದಾಖಲೆಯ ಸೋಂಕಿತರ ಏರಿಕೆಯ ನಡುವೆ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 10,20,582ಕ್ಕೆ ಏರಿದ್ದು, 64-65% ಮಂದಿ ಕೊರೊನಾದಿಂದ ಗುಣಮುಖವಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದೆ. ಬುಧವಾರ ಒಂದೇ ದಿನ 4,46,642 ಮಂದಿಗೆ ಕೊರೊನಾ ಟೆಸ್ಟ್ ಮಾಡಿದ್ದು, ಈವರೆಗೂ ದೇಶದಲ್ಲಿ 1,81,90,382 ಪರೀಕ್ಷೆಗಳನ್ನು ನಡೆಸಿದೆ ಎಂದು ಐಸಿಎಂಆರ್ ಹೇಳಿಕೊಂಡಿದೆ.

  • ಸಾರ್ವಜನಿಕರೇ, ಕೊರೊನಾ ಕುರಿತ ಪ್ರಶ್ನೆ ಕೇಳಿ – ಉತ್ತರ ನೀಡುತ್ತೆ ಕೇಂದ್ರ ಸರ್ಕಾರ

    ಸಾರ್ವಜನಿಕರೇ, ಕೊರೊನಾ ಕುರಿತ ಪ್ರಶ್ನೆ ಕೇಳಿ – ಉತ್ತರ ನೀಡುತ್ತೆ ಕೇಂದ್ರ ಸರ್ಕಾರ

    ನವದೆಹಲಿ: ಬೆನ್ನು ಬಿಡದೆ ಕಾಡುತ್ತಿರುವ ಕೊರೊನಾ ವೈರಸ್ ಸಂಬಂಧ ಸಾರ್ವಜನಿಕರಲ್ಲಿ ನೂರಾರು ಪ್ರಶ್ನೆಗಳಿವೆ. ಈ ಗೊಂದಲಗಳನ್ನು ಬಗೆಹರಿಸಲು ಈಗ ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದ್ದು, ವಿನೂತನ ಪ್ರಯೋಗವೊಂದನ್ನು ಆರಂಭಿಸಿದೆ.

    ಟ್ವಿಟರ್‌ನಲ್ಲಿ @CovidIndiaSeva ಗೆ ಸಾರ್ವಜನಿಕರು ನೇರವಾಗಿ ತಮ್ಮ ಪ್ರಶ್ನೆಗಳನ್ನು ಟ್ವೀಟ್ ಮಾಡಬಹುದಾಗಿದೆ. ಜನರ ಪ್ರಶ್ನೆಗಳಿಗೆ ಇನ್ಮುಂದೆ ಕೇಂದ್ರ ಆರೋಗ್ಯ ಇಲಾಖೆ ಉತ್ತರಿಸಲಿದೆ.

    ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಇತ್ತೀಚಿನ ಹೊಸ ಮಾಹಿತಿಗಳು, ಸಾರ್ವಜನಿಕರ ಪ್ರಶ್ನೆಗಳು, ಆರೋಗ್ಯ ಸೇವೆಗಳು, ರೋಗಲಕ್ಷಣಗಳನ್ನು ಹೊಂದಿರುವವರ ಸಹಾಯಕ್ಕಾಗಿ ಇಲ್ಲಿ ಮಾರ್ಗದರ್ಶನ ನೀಡಲಾಗುತ್ತದೆ.

    ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪ್ರತಿಕ್ರಿಯಿಸಿದ್ದು, ಆನ್‍ಲೈನ್ ಮೂಲಕ ಜನರಿಗೆ ಪರಿಹಾರ ಕಂಡುಕೊಂಡುವ ಪ್ರಯತ್ನ ಮಾಡುತ್ತಿರುವುದು ಸಂತಸವಾಗಿದೆ. ಇದು ಕೊರೊನಾ ವಿರುದ್ಧದ ಹೋರಾಟದ ಒಂದು ಭಾಗ ಎಂದಿದ್ದಾರೆ.

    ಇದು ಕೇವಲ ಕೇಂದ್ರ ಆರೋಗ್ಯ ಇಲಾಖೆ ಮಾತ್ರ ಒಳಗೊಂಡಿರದೇ ರಾಜ್ಯವಾರು ಪೊಲಿಸ್ ಮಹಾನಿರ್ದೇಶಕರು, ಸರ್ಕಾರ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿ ಕಾರ್ಯಾಲಯ, ಕೇಂದ್ರ ಹಣಕಾಸು, ಕೈಗಾರಿಕೆ, ವಿದೇಶಾಂಗ ಸಚಿವಾಲಗಳಿಗೂ ಟ್ಯಾಗ್ ಮಾಡಲಿದೆ. ಜನರ ಹಲವು ಪ್ರಶ್ನೆಗಳಿಗೆ ಎಲ್ಲ ಆಯಾಮಗಳಲ್ಲೂ ಉತ್ತರಿಸುವ ಪ್ರಯತ್ನ ಮಾಡಲಾಗುತ್ತಿದೆ.

    ಇದಕ್ಕಾಗಿ ತಜ್ಞರ ತಂಡವೊಂದನ್ನು ರಚಿಸಲಾಗಿದ್ದು, ಸಂಪೂರ್ಣ ಪಾರದರ್ಶಕವಾಗಿರಲಿದೆ. ಅಲ್ಲದೇ ಪ್ರಶ್ನೆಯೊಂದು ಹೆಚ್ಚು ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಮಾಡಿಕೊಂಡಿದೆ. ಕಡಿಮೆ ಸಮಯದಲ್ಲಿ ಹೆಚ್ಚು ಪರಿಣಾತ್ಮಕವಾಗಿ ಕಾರ್ಯ ನಿರ್ವಹಿಸುವ ಪ್ರಯತ್ನವೂ ಆಗಿದೆ.

  • ದೇಶದಲ್ಲಿ 24 ಗಂಟೆಯಲ್ಲಿ ಕೊರೊನಾಗೆ 30 ಮಂದಿ ಬಲಿ- 693 ಜನರಿಗೆ ಸೋಂಕು ದೃಢ

    ದೇಶದಲ್ಲಿ 24 ಗಂಟೆಯಲ್ಲಿ ಕೊರೊನಾಗೆ 30 ಮಂದಿ ಬಲಿ- 693 ಜನರಿಗೆ ಸೋಂಕು ದೃಢ

    – ಸೋಂಕಿತರ ಸಂಖ್ಯೆ 4500ಕ್ಕೆ ಏರಿಕೆ
    – 25 ಸಾವಿರ ಜಮಾತ್ ಸಭೆ ಸಂಪರ್ಕಿತರ ಕ್ವಾರಂಟೈನ್

    ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಮತ್ತಷ್ಟು ತೀವ್ರವಾಗಿದೆ. ಸೋಂಕಿತರ ಸಂಖ್ಯೆ 4502ಕ್ಕೆ ಏರಿದ್ದು, ಸಾವಿನ ಸಂಖ್ಯೆ 129 ಆಗಿದೆ.

    ದೇಶದಲ್ಲಿ ಒಂದೇ ದಿನ 693 ಮಂದಿಗೆ ಸೋಂಕು ದೃಢವಾಗಿದ್ದು, 24 ಗಂಟೆಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ. 291 ಜನ ಸೋಂಕಿನಿಂದ ಗುಣ ಮುಖರಾಗಿದ್ದಾರೆ. 1,445 ಕೇಸ್‍ಗಳು ಜಮಾತ್‍ಗೆ ಸಂಬಂಧಿಸಿದ್ದು, ತಬ್ಲಿಘಿಗಳು ಮತ್ತು ಅವರ ಸಂಪರ್ಕದಲ್ಲಿರುವ 25,500 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಜೊತೆಗೆ 1,750 ತಬ್ಲಿಘಿ ಕಾರ್ಯಕರ್ತರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಅಂತ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

    ಕೊರೊನಾಗೆ ಬಲಿಯಾದವರ ಪೈಕಿ ಶೇ.63ರಷ್ಟು 60 ವರ್ಷ ಮೇಲ್ಪಟ್ಟವರೇ ಆಗಿದ್ದಾರೆ. ಸೋಂಕಿತರ ಪೈಕಿ ಶೇ.76 ರಷ್ಟು ಪುರುಷರು, ಶೇ.24 ರಷ್ಟು ಮಹಿಳೆಯರು ಇದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವಿವರ ನೀಡಿದೆ.

    ಇದೇ ವೇಳೆ 5 ಲಕ್ಷ ರ‍್ಯಾಪಿಡ್ ಟೆಸ್ಟ್ ಕಿಟ್‍ಗಳಿಗೆ ಆರ್ಡರ್ ಮಾಡಲಾಗಿದ್ದು, 2.5 ಲಕ್ಷ ಕಿಟ್‍ಗಳು ಈ ತಿಂಗಳಲ್ಲಿ ಬರಲಿವೆ ಅಂತ ಐಸಿಎಂಆರ್ ಹೇಳಿದೆ. ಮುಂಬೈನ ವೋಕ್ಹಾರ್ಡ್ ಆಸ್ಪತ್ರೆಯ 26 ನರ್ಸ್ ಗಳು, ಮೂವರು ವೈದ್ಯರಿಗೆ ಕೊರೊನಾ ಸೋಂಕಾಗಿದ್ದು, ಆಸ್ಪತ್ರೆಯನ್ನೇ ಬಂದ್ ಮಾಡಲಾಗಿದೆ.

    ಯಾವ ರಾಜ್ಯದಲ್ಲಿ ಎಷ್ಟು ಸೋಂಕಿತರು?
    ಮಹಾರಾಷ್ಟ್ರ        781 (33 ಏರಿಕೆ)
    ತಮಿಳುನಾಡು     621 (50 ಏರಿಕೆ)
    ದೆಹಲಿ                523 (23 ಏರಿಕೆ)
    ಕೇರಳ               327 (13 ಏರಿಕೆ)
    ಉತ್ತರ ಪ್ರದೇಶ   305 (27 ಏರಿಕೆ)

    ಈ ಮಧ್ಯೆ ಸೆಲೆಬ್ರಿಟಿಗಳು, ರಾಜಕೀಯ ಗಣ್ಯರ ವಲಯದಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್, ಕೊರೊನಾ ಸೋಂಕಿನಿಂದ ಚೇತರಿಕೆ ಕಂಡಿದ್ದು ಡಿಸ್ಚಾರ್ಜ್ ಆಗಿದ್ದಾರೆ. 6ನೇ ಬಾರಿ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

  • ಕೊರೊನಾ ಎಫೆಕ್ಟ್- ಕಠಿಣ ಕ್ರಮಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ ಆರೋಗ್ಯ ಇಲಾಖೆ ಸೂಚನೆ

    ಕೊರೊನಾ ಎಫೆಕ್ಟ್- ಕಠಿಣ ಕ್ರಮಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ ಆರೋಗ್ಯ ಇಲಾಖೆ ಸೂಚನೆ

    ನವದೆಹಲಿ: ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಬುಧವಾರ ಮಹತ್ವದ ಆದೇಶಗಳನ್ನು ನೀಡಿದ್ದ ಕೇಂದ್ರ ಆರೋಗ್ಯ ಇಲಾಖೆ ಈಗ ಎಲ್ಲ ರಾಜ್ಯಗಳಿಗೂ ಕೆಲವು ನಿರ್ದೇಶನಗಳನ್ನು ನೀಡಿದೆ.

    ಈ ಸಂಬಂಧ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ಕಾರ್ಯದರ್ಶಿ ಪ್ರೀತಿ ಸುದನ್, ಆಯಾ ರಾಜ್ಯಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

    ಕೇಂದ್ರ ಸರ್ಕಾರದ ನಿಲುವಿನಂತೆ ರಾಜ್ಯಗಳಲ್ಲೂ ಸರ್ಕಾರಿ ಕಚೇರಿಗಳಲ್ಲಿ ದಟ್ಟಣೆ ಕಡಿಮೆ ಮಾಡಲು ಕೆಲಸ ಸಮಯದ ನಿರ್ವಹಣೆ ಮಾಡಿ ಕಚೇರಿಗಳಲ್ಲಿ ಹೆಚ್ಚು ದಟ್ಟನೆಯಾಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರೆ ಸೇವೆಗಳ ಸಮಯ ಬದಲಿಸಿ ಸಾಧ್ಯವಿದ್ದ ಖಾಸಗಿ ಸಂಸ್ಥೆಗಳಲ್ಲಿ ಮನೆಯಿಂದ ಕೆಲಸ ಮಾಡಲು ಸೂಚಿಸಿ ಎಂದು ಪತ್ರದಲ್ಲಿ ಹೇಳಿದ್ದಾರೆ.

    ಹೆಚ್ಚು ಜನಸಂಖ್ಯೆ ಸೇರುವ ಶಿಕ್ಷಣ ಸಂಸ್ಥೆಗಳು, ಚಿತ್ರಮಂದಿರಗಳು, ವಸ್ತು ಸಂಗ್ರಹಾಲಯಗಳು, ಜಿಮ್‍ಗಳು, ಪರೀಕ್ಷಾ ಕೇಂದ್ರಗಳು ಇತ್ಯಾದಿಗಳನ್ನು ಕ್ಲೋಸ್ ಮಾಡಿ. ಕ್ರೀಡಾಕೂಟಗಳು, ಧಾರ್ಮಿಕ ಕಾರ್ಯಕ್ರಮಗಳು, ಸಣ್ಣ ಪುಟ್ಟ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಎಚ್ಚರಿಕೆ ವಹಿಸಿ. ಬಸ್ ಮೆಟ್ರೋ ರೈಲು ವಿಮಾನ ನಿಲ್ದಾಣಗಳಲ್ಲಿ ಜನ ಸಮೂಹ ಸೇರದಂತೆ ನೋಡಿಕೊಳ್ಳಬೇಕು. ಸೋಂಕು ಹರಡಂತೆ ಎಚ್ಚರಿಕೆ ವಹಿಸಬೇಕು ಮತ್ತು ಜನರ ನಡುವೆ ಅಂತರ ಕಾಯ್ದುಕೊಳ್ಳಲು ಜಾಗೃತಿ ಮೂಡಿಸಿಲು ಸೂಚಿಸಿದೆ.

    ಆರೋಗ್ಯ ಕಾರಣಗಳು, ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಹೊರೆತುಪಡಿಸಿ ಹಿರಿಯ ನಾಯಕರು ಮನೆಯಿಂದ ಹೊರಬಾರದಂತೆ ಸೂಚನೆ ನೀಡಿ. ಹತ್ತು ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಉಳಿಸಿಕೊಳ್ಳಲು ಸಲಹೆ ನೀಡಿ ಸಾರ್ವಜನಿಕ ಸ್ಥಳಗಳಿಂದ ಅಂತರ ಕಾಯ್ದುಕೊಳ್ಳಲು ಸೂಚಿಸಿ ಮಾಸ್ಕ್ ಸ್ಯಾನಿಟೈಜರ್ ಸೇರಿ ಔಷಧಿಗಳನ್ನು ಲಭ್ಯತೆ ಖಚಿತಪಡಿಸಿಕೊಂಡು ಬೆಲೆ ಏರಿಕೆಯಾಗದಂತೆ ನಿಯಂತ್ರಿಸಿ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

  • ಕೊರೊನಾಗೆ ದೇಶದಲ್ಲಿ 4ನೇ ಬಲಿ – ಪಂಜಾಬ್‍ನಲ್ಲಿ ವ್ಯಕ್ತಿ ಸಾವು

    ಕೊರೊನಾಗೆ ದೇಶದಲ್ಲಿ 4ನೇ ಬಲಿ – ಪಂಜಾಬ್‍ನಲ್ಲಿ ವ್ಯಕ್ತಿ ಸಾವು

    ನವದೆಹಲಿ: ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿರುವ ಕೊರೊನಾ ವೈರಸ್ ಸೋಂಕಿಗೆ ಪಂಜಾಬ್ ನಲ್ಲಿ ಮೊದಲ ಬಲಿಯಾಗಿದ್ದು ದೇಶದಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

    ಕೊರೊನಾ ಸೋಂಕಿನಿಂದ ವ್ಯಕ್ತಿ ಮೃತರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಖಚಿತಪಡಿಸಿದೆ. ಮೃತ ವ್ಯಕ್ತಿ 70 ವರ್ಷದವರಾಗಿದ್ದು ಜಪಾನ್ ನಿಂದ ಭಾರತಕ್ಕೆ ವಾಪಸ್ ಆಗಿದ್ದರು. ತಪಾಸಣೆ ವೇಳೆ ಇವರಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು.

    ಮೃತ ವೃದ್ಧನಿಗೆ ಕೊರೊನಾ ಸೊಂಕಿನ ಜೊತೆಗೆ ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದರು. ಇಂದು ಅವರು ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

    ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಇದುವರೆಗೂ ದೇಶದಲ್ಲಿ 142 ಮಂದಿ ಭಾರತೀಯರು 25 ವಿದೇಶಿ ಪ್ರವಾಸಿಗರಿಗೆ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದೆ. ಇದುವರೆಗೂ 15 ಮಂದಿ ಸಂಪೂರ್ಣ ಗುಣ ಮುಖರಾಗಿದ್ದಾರೆ.

    ಕರ್ನಾಟಕದಲ್ಲಿ 14 ಮಂದಿಯಲ್ಲಿ ವೈರಸ್ ಸೋಂಕು ದೃಢಪಟ್ಟಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.