Tag: ಕೇಂದ್ರ ಆರೋಗ್ಯ ಸಚಿವ

  • ಭಾರತದಲ್ಲಿ ಓಮಿಕ್ರಾನ್‌ ಪತ್ತೆಯಾಗಿಲ್ಲ: ಕೇಂದ್ರ ಆರೋಗ್ಯ ಸಚಿವ

    ಭಾರತದಲ್ಲಿ ಓಮಿಕ್ರಾನ್‌ ಪತ್ತೆಯಾಗಿಲ್ಲ: ಕೇಂದ್ರ ಆರೋಗ್ಯ ಸಚಿವ

    ನವದೆಹಲಿ: ಕೊರೊನಾ ವೈರಸ್‌ ರೂಪಾಂತರ ಓಮಿಕ್ರನ್‌ಗೆ ಸಂಬಂಧಿಸಿದ ಒಂದೇ ಒಂದು ಪ್ರಕರಣ ಕೂಡ ಈವರೆಗೂ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನುಸುಖ್‌ ಮಾಂಡವೀಯ ಹೇಳಿದ್ದಾರೆ.

    ರಾಜ್ಯಸಭೆಯಲ್ಲಿ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಶಂಕಿತ ಪ್ರಕರಣಗಳನ್ನು ತ್ವರಿತವಾಗಿ ಪರೀಕ್ಷೆಗೆ ಒಳಪಡಿಸುತ್ತಿದ್ದೇವೆ. ಜಿನೋಮ್‌ ಅನುಕ್ರಮಗಳನ್ನು ಪಾಲಿಸುತ್ತಿದ್ದೇವೆ. ಕೊರೊನಾ ಸಾಂಕ್ರಾಮಿಕದಿಂದ ನಾವು ಈಗಾಗಲೇ ಬಹಳಷ್ಟು ಕಲಿತಿದ್ದೇವೆ. ಪ್ರಸ್ತುತ ನಮ್ಮಲ್ಲಿ ಸಾಕಷ್ಟು ಪ್ರಯೋಗಾಲಯಗಳು, ಸಂಪನ್ಮೂಲಗಳಿವೆ. ಈ ಸಂದಿಗ್ಧತೆಯನ್ನು ನಿರ್ವಹಿಸಲು ನಾವು ಸಮರ್ಥರಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ರೂಪಾಂತರಿ ನಮ್ಮ ದೇಶದಲ್ಲೂ ಇರಬಹುದು: ಡಾ.ಸಿ.ಎಸ್ ಮಂಜುನಾಥ್

    ಐಸಿಎಂಆರ್‌ ಸಾಂಕ್ರಾಮಿಕ ರೋಗತಜ್ಞ ಡಾ. ಸಮಿರಾನ್‌ ಪಾಂಡೆ ಅವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತದಲ್ಲಿ ಓಮಿಕ್ರಾನ್‌ ಹೊಸ ತಳಿ ಪತ್ತೆಯಾಗುವುದರೆ ಯಾವುದೇ ಅಚ್ಚರಿ ಪಡಬೇಕಾಗಿಲ್ಲ. ಅದು ತುಂಬಾ ವೇಗವಾಗಿ ಹರಡುವ ತಳಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದರು. ಇದನ್ನೂ ಓದಿ: OMICRON ಸೋಂಕಿಗೆ ಪ್ರತ್ಯೇಕ ಆಸ್ಪತ್ರೆ: ದೆಹಲಿ ಸರ್ಕಾರ

    ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರದ ಆರೋಗ್ಯ ಸಚಿವರು ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿರುವ ಓಮಿಕ್ರಾನ್‌ ತಳಿ ಈಗ ಯುಕೆ, ಜರ್ಮನಿ, ಜಪಾನ್‌, ಹಾಂಗ್‌ಕಾಂಗ್‌ಗೂ ಹರಡಿದೆ. ಆದರೆ ಭಾರತದಲ್ಲಿ ಈವರೆಗೂ ಹೊಸ ತಳಿಯ ಒಂದು ಪ್ರಕರಣವೂ ದೃಢಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • ಕೇಂದ್ರ ಆರೋಗ್ಯ ಸಚಿವರಿಂದ ಕರೆ- ಚಾಮರಾಜನಗರಕ್ಕೆ ಮೆಚ್ಚುಗೆ

    ಕೇಂದ್ರ ಆರೋಗ್ಯ ಸಚಿವರಿಂದ ಕರೆ- ಚಾಮರಾಜನಗರಕ್ಕೆ ಮೆಚ್ಚುಗೆ

    – ಹಾಟ್‍ಸ್ಪಾಟ್‍ಗಳ ಮಧ್ಯೆ ಇದ್ದರೂ ಕೊರೊನಾ ಬಂದಿಲ್ಲ
    – ದಕ್ಷಿಣ ಭಾರತದ ಏಕೈಕ ಜಿಲ್ಲೆ ಚಾಮರಾಜನಗರ

    ಚಾಮರಾಜನಗರ: ಹಾಟ್‍ಸ್ಪಾಟ್‍ಗಳ ಮಧ್ಯೆ ಇದ್ದರೂ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಗೆ ದೂರವಾಣಿ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಹೌದು. ರಾಜ್ಯದಲ್ಲಿ, ಅದರಲ್ಲೂ ದಕ್ಷಿಣ ಭಾರತದ ಜಿಲ್ಲೆಗಳಲ್ಲಿ ಕೊರೊನಾ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಗೆ ಚಾಮರಾಜನಗರ ಜಿಲ್ಲೆ ಪಾತ್ರವಾಗಿದೆ. ವಿಶೇಷವೆಂದರೆ ಜಿಲ್ಲೆಯು ಕೊರೊನಾ ಹಾಟ್‍ಸ್ಪಾಟ್ ಜಿಲ್ಲೆ ಹಾಗೂ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ತಮಿಳುನಾಡು, ಕೇರಳ ರಾಜ್ಯಗಳು ಒಂದೆಡೆಯಾದರೆ ಮೈಸೂರು, ಮಂಡ್ಯ ಇನ್ನೊಂದೆಡೆ ಇವೆ. ಹೀಗಿದ್ದರೂ ಜಿಲ್ಲೆಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿಲ್ಲ.

    ಜಿಲ್ಲಾಡಳಿತದ ಕಾರ್ಯವೈಖರಿ, ತೆಗೆದುಕೊಂಡ ಕ್ರಮಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ವಿಚಾರವನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಧ್ಯಮಗಳ ಜೊತೆಗೆ ಹಂಚಿಕೊಂಡಿದ್ದಾರೆ.

    “ಕೇಂದ್ರ ಆರೋಗ್ಯ ಸಚಿವರ ಕರೆ ನಿರೀಕ್ಷೆ ಮಾಡಿರಲಿಲ್ಲ. ಬಹಳ ಆಶ್ಚರ್ಯ ಜೊತೆಗೆ ಹೆಮ್ಮೆಯಾಯ್ತು. ಬಹಳ ಖುಷಿಯಾಗಿದೆ, ಜೊತೆಗೆ ಜವಾಬ್ದಾರಿಯೂ ಹೆಚ್ಚಾಗಿದೆ. ಕೇಂದ್ರ ಸಚಿವರೇ ಕರೆ ಮಾಡಿರುವುದು ಬಹಳ ಅಪರೂಪದ ಸಂಗತಿ. ನಮ್ಮ ಇಡೀ ತಂಡಕ್ಕೆ ಹಾಗೂ ಜಿಲ್ಲೆಯ ಜನತೆಗೆ ಅಭಿನಂದನೆ ಸಲ್ಲಿಸಿದರು” ಎಂದು ಡಾ.ಎಂ.ಆರ್.ರವಿ ಹೇಳಿದ್ದಾರೆ.

    “ಸ್ವತಃ ಆರೋಗ್ಯ ಸಚಿವರೇ ಖುದ್ದಾಗಿ ಗುರುತಿಸಿರುವುದು ಹೆಮ್ಮೆಯ ಸಂಗತಿ. ದೆಹಲಿಗೆ ಬಂದಾಗ ತಮ್ಮ ಕಚೇರಿಗೆ ಬಂದು ಹೋಗುವಂತೆ ಆರೋಗ್ಯ ಸಚಿವರು ತಿಳಿಸಿದ್ದಾರೆ” ಎಂದರು.

    ದಕ್ಷಿಣ ಭಾರತದಲ್ಲಿಯೇ ಚಾಮರಾಜನಗರ ಕೊರೊನಾ ಮುಕ್ತ ಜಿಲ್ಲೆಯಾಗಿದೆ. ಇದುವರೆಗೂ ತೆಲಂಗಾಣದ ವಾರಂಗಲ್ ಗ್ರಾಮೀಣ ಹಾಗೂ ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಮಾತ್ರ ಕೊರೊನಾ ಪತ್ತೆಯಾಗಿರಲಿಲ್ಲ. ಆದರೆ ವಾರಂಗಲ್ ಗ್ರಾಮೀಣ ಭಾಗದಲ್ಲಿ ಮಂಗಳವಾರ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ದಕ್ಷಿಣ ಭಾರತದಲ್ಲಿ ಕೊರೊನಾ ಮುಕ್ತ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಚಾಮರಾಜನಗರ ಪಾತ್ರವಾಗಿದೆ.

  • WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಾ.ಹರ್ಷವರ್ಧನ್

    WHO ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಾ.ಹರ್ಷವರ್ಧನ್

    ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

    ಇಡೀ ಜಗತ್ತು ಕೋವಿಡ್-19 ವೈರಸ್‍ನಿಂದ ಬಳಲುತ್ತಿರುವ ಸಮಯದಲ್ಲಿ ಡಾ.ಹರ್ಷ್ ವರ್ಧನ್ ಅವರು ನೇಮಕಾತಿಯಾಗಿದ್ದಾರೆ. ಬಂದಿದೆ. ಜಪಾನ್‍ನ ಡಾ. ಹಿರೊಕಿ ನಕಟನಿ ಅವರು ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದರು. ಅವರ ಸ್ಥಾನವನ್ನು ಡಾ.ಹರ್ಷವರ್ಧನ್ ವಹಿಸಿಕೊಂಡಿದ್ದು, 34 ಮಂದಿ ಸದಸ್ಯರನ್ನು ಈ ಕಾರ್ಯಕಾರಿ ಮಂಡಳಿ ಹೊಂದಿದೆ. ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ 194 ದೇಶಗಳು ಮಂಗಳವಾರದ ಸಭೆಯಲ್ಲಿ ಸಹಿ ಮಾಡಿದ್ದವು.

    ಇದು ಪೂರ್ಣ ಪ್ರಮಾಣದ ಹುದ್ದೆಯಲ್ಲ, ಅಧ್ಯಕ್ಷರಾದವರು ಕಾರ್ಯಕಾರಿ ಮಂಡಳಿಯ ಸಭೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಮೇ 22ರಿಂದ 3 ವರ್ಷಗಳವರೆಗೆ ಭಾರತದ ಪ್ರತಿನಿಧಿಯನ್ನು ನಾಮಾಂಕಿತ ಮಾಡುವುದಕ್ಕೆ ಕಳೆದ ವರ್ಷ ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ-ಪೂರ್ವ ಏಷ್ಯಾ ಗ್ರೂಪ್ ಅವಿರೋಧವಾಗಿ ತೀರ್ಮಾನಿಸಿತ್ತು.

    ಅಧಿಕಾರ ಸ್ವೀಕರಿಸಿ ಮಾತನಾಡಿದ ಡಾ. ಹರ್ಷ್ ವರ್ಧನ್, “ನನ್ನ ವೈಯಕ್ತಿಕ ಧ್ಯೇಯವಾಕ್ಯವೆಂದರೆ ಸಂಪತ್ತು ಇಲ್ಲದವರ ಆರೋಗ್ಯವನ್ನು ಕಾಪಾಡುವುದು” ಎಂದು ಹೇಳಿದ್ದಾರೆ.

    “ಹೆಮ್ಮಾರಿ ಕೊರೊನಾ ವೈರಸ್‍ನಿಂದ ವಿಶ್ವಾದ್ಯಂತ 3.30 ಲಕ್ಷಕ್ಕೂ ಹೆಚ್ಚು ಮೃತಪಟ್ಟಿದ್ದು ದುಃಖ ತಂದಿದೆ. ಅಷ್ಟೇ ಅಲ್ಲದೆ ಪ್ರಪಂಚದಾದ್ಯಂತ ಆರ್ಥಿಕ ಹೊಡೆತ ಉಂಟಾಗಿದೆ. ಈ ಸಾಂಕ್ರಾಮಿಕ ರೋಗದಿಂದಾಗಿ ವಿಶ್ವ ಜಾಗತಿಕ ಬಿಕ್ಕಟ್ಟು ಎದುರಿಸುತ್ತಿರುವ ಸಮಯದಲ್ಲಿ ಈ ಕಚೇರಿಗೆ ಪ್ರವೇಶಿಸುತ್ತಿದ್ದೇನೆ. ಮುಂದಿನ 2 ದಶಕಗಳಲ್ಲಿ ಅನೇಕ ಆರೋಗ್ಯ ಸವಾಲುಗಳು ಎದುರಾಗುತ್ತವೆ ಎನ್ನುವುದನ್ನ ನಾವು ಅರ್ಥಮಾಡಿಕೊಂಡಿದ್ದೇವೆ. ಎಲ್ಲಾ ಸವಾಲುಗಳನ್ನ ಹಂಚಿಕೆಕೊಂಡು ಪರಿಹಾರ ಕಂಡುಕೊಳ್ಳಬೇಕಿದೆ” ಎಂದು ತಿಳಿಸಿದರು.

    ‘ಬಡತನದ ಸಮಯದಲ್ಲೇ ನಾವು ನಮ್ಮ ದೇಶದಲ್ಲಿ ಸಿಡುಬು ಮತ್ತು ಪೋಲಿಯೊವನ್ನು ನಿರ್ಮೂಲನೆ ಮಾಡಿದ್ದೇವೆ. ತೀರಾ ಇತ್ತೀಚೆಗೆ ಕೊರೊನಾ ವಿರುದ್ಧದ ಹೋರಾಟದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಭಾರೀ ಪ್ರಯಾಣದ ಸಾವು ನೋವು ತಡೆದಿದ್ದೇವೆ. ಸದ್ಯದ ಮಾಹಿತಿ ಪ್ರಕಾರ ಭಾರತದಲ್ಲಿ ಕೇವಲ ಶೇ.3ರಷ್ಟು ಜನ ಸೋಂಕಿತರು ಮೃತಪಟ್ಟಿದ್ದಾರೆ. 135 ಕೋಟಿ ಜನಸಂಖ್ಯೆ ಹೊಂದಿರುವ ದೇಶದಲ್ಲಿ ಕೇವಲ 1 ಲಕ್ಷಕ್ಕೂ ಅಧಿಕ ಜನರಿಗೆ ಮಾತ್ರ ಸೋಂಕು ದೃಢಪಟ್ಟಿದೆ. ಈ ಪೈಕಿ ಶೇ.40ಕ್ಕಿಂತ ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ” ಎಂದು ಮಾಹಿತಿ ನೀಡಿದರು.

  • ಕೊರೊನಾ ತಡೆಗೆ ಬಿಸಿಲಿನಲ್ಲಿ ಕುಳಿತುಕೊಳ್ಳಿ- ಆರೋಗ್ಯ ಸಚಿವ ಅಶ್ವಿನಿ ಚೌಬೆ

    ಕೊರೊನಾ ತಡೆಗೆ ಬಿಸಿಲಿನಲ್ಲಿ ಕುಳಿತುಕೊಳ್ಳಿ- ಆರೋಗ್ಯ ಸಚಿವ ಅಶ್ವಿನಿ ಚೌಬೆ

    – ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ

    ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಇತ್ತ ಜನ ಸಹ ಆತಂಕಕ್ಕೊಳಗಾಗುತ್ತಿದ್ದಾರೆ. ಈ ನಡುವೆಯೇ ರಾಜಕಾರಣಿಗಳು ವಿವಿಧ ಬಗೆಯ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೆ ಕಾರಣರಾಗುತ್ತಿದ್ದಾರೆ. ಇದೀಗ ಕೇಂದ್ರದ ಆರೋಗ್ಯ ಖಾತೆಯ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅದೇ ರೀತಿ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದಾರೆ.

    ಕೊರೊನಾ ವೈರಸ್ ತಡೆಗೆ ಸಲಹೆ ನೀಡಿರುವ ಅವರು, ಕೊರೊನಾ ವೈರಸ್‍ನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು 15 ನಿಮಿಷ ಬಿಸಿಲಿನಲ್ಲಿ ಕುಳಿತುಕೊಳ್ಳಿ, ಇದರಿಂದಾಗಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕೊರೊನಾ ವೈರಸ್ ಸಾಯುತ್ತದೆ ಎಂದು ಹೇಳಿದ್ದಾರೆ. ಈ ಹಿಂದೆ ಸಹ ಕ್ಯಾನ್ಸರ್ ಚಿಕಿತ್ಸೆಗೆ ಗೋಮೂತ್ರವನ್ನು ಬಳಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಇದೀಗ ಕೊರೊನಾ ತಡೆಗೆ ಸಲಹೆ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.

    ಬೆಳಗ್ಗೆ ಸುಮಾರು 11ರಿಂದ ಮಧ್ಯಾಹ್ನ 12ರ ಮಧ್ಯೆ ಬಿಸಿಲು ಜೋರಾಗಿರುತ್ತದೆ. ಈ ವೇಳೆ ಬಿಸಿಲಿನಲ್ಲಿ 15 ನಿಮಿಷಗಳ ಕಾಲ ಕುಳಿತುಕೊಂಡರೆ ವಿಟಮಿನ್ ಡಿ ಲೆವೆಲ್ ಹೆಚ್ಚುತ್ತದೆ. ಇದರಿಂದಾಗಿ ರೋಗ ನಿರೋಧಕ ಶಕ್ತಿ ಸಹ ಹೆಚ್ಚುತ್ತದೆ. ಈ ಮೂಲಕ ಕೊರೊನಾ ವೈರಸ್ ಕೊಲ್ಲಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಕಳೆದ ರಾತ್ರಿಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ವಿಚಾರವಾಗಿ ಯಾವುದೇ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡಬಾರದು. ಈ ಕುರಿತು ಸಚಿವರು ಹಾಗೂ ಸಂಸದರು ಎಚ್ಚರಿಕೆಯಿಂದ ಇರಬೇಕು. ಈ ಸಾಂಕ್ರಾಮಿಕ ರೋಗದ ವಿಚಾರವಾಗಿ ಅನಗತ್ಯವಾಗಿ ಟ್ವೀಟ್ ಮಾಡುವುದಾಗಲಿ, ಹೇಳಿಕೆ ನೀಡುವುದಾಗಲಿ ಮಾಡಬಾರದು ಎಂದು ಸೂಚಿಸಿದ್ದರು.

    ಸೋಮವಾರವಷ್ಟೇ ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾ ವೈರಸ್ ತಡೆಗೆ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಮೂರು ಪುಟಗಳ ಹೇಳಿಕೆ ಬಿಡುಗಡೆ ಮಾಡಿದೆ. ಇದರಲ್ಲಿ ಬಿಸಿಲಿನಲ್ಲಿ ಕುಳಿತುಕೊಳ್ಳುವುದರಿಂದ ಕೊರೊನಾ ವೈರಸ್ ತಡೆಯಬಹುದು ಎಂಬ ಸಾಲುಗಳು ಎಲ್ಲಿಯೂ ಇಲ್ಲ. ಹೀಗಾಗಿ ಇದೀಗ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

    ಒಟ್ಟು 173 ರಾಷ್ಟ್ರ ಹಾಗೂ ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಹರಡಿದ್ದು, ಈವರೆಗೆ ಸುಮಾರು 2,18,455 ಮಂದಿಗೆ ಸೋಂಕು ತಗುಲಿದೆ. ಚೀನಾದಲ್ಲಿ 3,245 ಮಂದಿ ಸೇರಿದಂತೆ ವಿಶ್ವದೆಲ್ಲೆಡೆ ಒಟ್ಟು 8,938 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 85,664 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಪ್ರಸ್ತುತ 1,23,853 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

    ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್‍ಗೆ ಈವರೆಗೆ 169 ಮಂದಿ ತುತ್ತಾಗಿದ್ದು, 14 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 152 ಮಂದಿ ಕೊರೊನಾದಿಂದ ಬಳಲುತ್ತಿದ್ದು 4 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಒಟ್ಟು 14 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನೆರೆಯ ಮಹಾರಾಷ್ಟ್ರದಲ್ಲಿ ಬುಧವಾರದವರೆಗೆ 44 ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ.

  • ಯಾದಗಿರಿಗೆ ಮೆಡಿಕಲ್ ಕಾಲೇಜು ಮಂಜೂರು

    ಯಾದಗಿರಿಗೆ ಮೆಡಿಕಲ್ ಕಾಲೇಜು ಮಂಜೂರು

    ಯಾದಗಿರಿ: ಜಿಲ್ಲೆಯ ಜನರ ಬಹು ದಿನ ಕನಸು ಕೊನೆಗೂ ನನಸಾಗಿದೆ. ಹೈದರಾಬಾದ್ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶ ಎನ್ನಲಾಗುತ್ತಿದ್ದ ಯಾದಗಿರಿ ಜಿಲ್ಲೆಗೆ ಅಗತ್ಯವಿದ್ದ ಮೆಡಿಕಲ್ ಕಾಲೇಜು ಮಂಜೂರು ಮಾಡಲಾಗಿದೆ.

    ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಕೇಂದ್ರ ಸರ್ಕಾರದಿಂದ ಅಧಿಕೃತ ಘೋಷಣೆ ಮಾಡಿದ್ದಾರೆ.ಸಂಸದ ರಾಜಾ ಅಮರೇಶ್ ನಾಯಕ್ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವರು, ನಿಮ್ಮ ನಾಯಕತ್ವದಲ್ಲಿ ಕಾರ್ಯ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ.

    ಗ್ರಾಮ ವಾಸ್ತವ್ಯ ಸಮಯದಲ್ಲಿ ಅಂದಿನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೆಡಿಕಲ್ ಕಾಲೇಜು ಮಂಜೂರಾತಿಗೆ ತಡೆ ನೀಡಿದ್ದರು. ಇದರಿಂದ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿ ಯಾದಗಿರಿ ಬಂದ್ ಸಹ ಮಾಡಲಾಗಿತ್ತು. ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ನಾನು ಮುಖ್ಯಮಂತ್ರಿಯಾದರೆ ಮೆಡಿಕಲ್ ಕಾಲೇಜು ಮಂಜೂರು ಮಾಡುತ್ತೇನೆ ಎಂದು ಬಿಜೆಪಿ ನಾಯಕರು ಹಾಗೂ ಜಿಲ್ಲೆಯ ಜನರಿಗೆ ಮಾತು ಕೊಟ್ಟಿದ್ದರು. ಸಿಎಂ ಯಡಿಯೂರಪ್ಪ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು ಜಿಲ್ಲೆಯ ಜನರಿಗೆ ಖುಷಿ ತಂದಿದೆ.

    ರಾಜ್ಯ ಸಂಪುಟ ಸಭೆಯ ಬಳಿಕ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಅವರು, ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ 525 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.