Tag: ಕೇಂದ್ರ ಪರಿಸರ ಸಚಿವಾಲಯ

  • ಕೇಂದ್ರ ಪರಿಸರ ಸಚಿವಾಲಯದಿಂದ ಪ್ಲಾಸ್ಟಿಕ್ ಬಳಕೆ ಮೇಲೆ ಹೊಸ ರೂಲ್ಸ್

    ಕೇಂದ್ರ ಪರಿಸರ ಸಚಿವಾಲಯದಿಂದ ಪ್ಲಾಸ್ಟಿಕ್ ಬಳಕೆ ಮೇಲೆ ಹೊಸ ರೂಲ್ಸ್

    ನವದೆಹಲಿ: ಕೇಂದ್ರ ಪರಿಸರ ಸಚಿವಾಲಯವು 2022ರ ಒಳಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ತಿದ್ದುಪಡಿ ನಿಯಮಗಳನ್ನು ಜಾರಿಗೊಳಿಸಿದ್ದು, ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಿದೆ.

    ಹೊಸ ಅಧಿಸೂಚನೆಯ ಪ್ರಕಾರ, 2021ರ ಸೆಪ್ಟೆಂಬರ್ 30ರಿಂದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‍ಗಳ ಗಾತ್ರವನ್ನು 50 ರಿಂದ 75 ಮೈಕ್ರಾನ್‍ಗಳಿಗೆ ಮತ್ತು 120 ಮೈಕ್ರಾನ್‍ಗಳಿಗೆ ಹೆಚ್ಚಿಸಲಾಗುತ್ತಿದೆ. ಪ್ಲಾಸ್ಟಿಕ್ ಬ್ಯಾಗ್‍ಗಳ ಗಾತ್ರವನ್ನು ಹೆಚ್ಚಿಸುವುದರಿಂದ ಅವುಗಳನ್ನು ಮರು ಬಳಸಬಹುದು ಎಂದು ಕೇಂದ್ರ ಪರಿಸರ ಸಚಿವಾಲಯ ತಿಳಿಸಿದೆ.

    ಪಾಲಿಸ್ಟೈರಿನ್ ಸೇರಿದಂತೆ ಕೆಲವು ಸಿಂಗಲ್ ಯೂಸ್ ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು 2022ರ ಜುಲೈ 1ರಿಂದ ನಿಷೇಧಿಸಲಾಗುತ್ತಿದ್ದು, ಪ್ಲಾಸ್ಟಿಕ್ ಇಯರ್ ಬಡ್ಸ್, ಪ್ಲಾಸ್ಟಿಕ್ ಧ್ವಜ, ಕ್ಯಾಂಡಿ ಸ್ಟಿಕ್, ಐಸ್ ಕ್ರೀಮ್ ಸ್ಟಿಕ್, ಪ್ಲೇಟ್, ಕಪ್, ಗ್ಲಾಸ್, ಫೋರ್ಕ್‍ಗಳು, ಸ್ಪೂನ್‍ಗಳು, ಚಾಕು, ಸ್ಟ್ರಾ, ಟ್ರೇಗಳು, ಸ್ವೀಟ್ ಬಾಕ್ಸ್, ಆಹ್ವಾನ ಪತ್ರಿಕೆಗಳು ಮತ್ತು ಸಿಗರೇಟ್ ಪ್ಯಾಕ್, ಪಿವಿಸಿ ಬ್ಯಾನರ್‍ಗಳಲ್ಲಿ 100 ಮೈಕ್ರಾನ್‍ಗಿಂತ ಕಡಿಮೆ ಪ್ಲಾಸ್ಟಿಕ್‍ಗಳನ್ನು ಬಳಸಲಾಗುತ್ತದೆ.  ಇದನ್ನೂ ಓದಿ:ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿ ಪಕ್ಕದ ರಸ್ತೆಯಲ್ಲೇ ಕಿಡಿಗೇಡಿಗಳ ಓಡಾಟ!

  • ಆಕಸ್ಮಿಕವಾಗಿ ಗರ್ಭಿಣಿ ಆನೆ ಪಟಾಕಿ ತುಂಬಿದ ಹಣ್ಣನ್ನು ಸೇವಿಸಿರಬಹುದು- ಪರಿಸರ ಸಚಿವಾಲಯ

    ಆಕಸ್ಮಿಕವಾಗಿ ಗರ್ಭಿಣಿ ಆನೆ ಪಟಾಕಿ ತುಂಬಿದ ಹಣ್ಣನ್ನು ಸೇವಿಸಿರಬಹುದು- ಪರಿಸರ ಸಚಿವಾಲಯ

    ನವದೆಹಲಿ: ಕೇರಳದಲ್ಲಿ ಆಕಸ್ಮಿಕವಾಗಿ ಗರ್ಭಿಣಿ ಆನೆ ಪಟಾಕಿ ತುಂಬಿದ ಹಣ್ಣನ್ನು ಸೇವಿಸಿರಬಹುದು ಎಂದು ಕೇಂದ್ರ ಪರಿಸರ ಸಚಿವಾಲಯ ಅಭಿಪ್ರಾಯಪಟ್ಟಿದೆ.

    ಪ್ರಾಥಮಿಕ ವರದಿಗಳ ಪ್ರಕಾರ 15 ವರ್ಷದ ಆನೆ ಪಟಾಕಿ ತುಂಬಿದ ಪೈನಾಪಲ್ ತಿಂದ ಪರಿಣಾಮ ಮೃತಪಟ್ಟಿದೆ ಎನ್ನಲಾಗಿದೆ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಅದು ಪೈನಾಪಲ್ ಅಲ್ಲ, ತೆಂಗಿನಕಾಯಿ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ಆನೆಗೆ ಉಂಟಾಗಿದ್ದ ಗಾಯಗಳು ಕನಿಷ್ಠ ಎರಡು ವಾರಗಳಷ್ಟು ಹಳೆಯದ್ದಾಗಿದೆ ಎಂದು ಕೇಂದ್ರ ಪರಿಸರ ಸಚಿವಾಲಯ ತಿಳಿಸಿದೆ.

    ಕಾಡು ಹಂದಿಗಳು ತೋಟ, ಗದ್ದೆಗಳಿಗೆ ಪ್ರವೇಶಿಸದಂತೆ ಹಾಗೂ ಹಿಮ್ಮೆಟ್ಟಿಸಲು ಸ್ಥಳೀಯರು ಕಾನೂನುಬಾಹಿರವಾಗಿ ಸ್ಫೋಟಕ ತುಂಬಿದ ಹಣ್ಣುಗಳನ್ನು ಇಡುತ್ತಾರೆ. ಆನೆಯ ಸಾವಿಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದು, ಅವರ ಬಂಧನಕ್ಕಾಗಿ ಬಲೆ ಬೀಸಲಾಗಿದೆ ಎಂದು ಸಚಿವಾಲಯ ಹೇಳಿದೆ.

    ಸಾಮಾಜಿಕ ಜಾಲತಾಣದಲ್ಲಿ ವದಂತಿ ಮತ್ತು ಸುಳ್ಳ ಸುದ್ದಿಗಳು ಪ್ರಸಾರವಾಗುತ್ತಿವೆ. ಅವುಗಳನ್ನು ನಂಬಬೇಡಿ ಎಂದು ಪರಿಸರ ಸಚಿವ ಬಾಬುಲ್ ಸುಪ್ರಿಯೋ ಜನರನ್ನು ಕೋರಿದ್ದಾರೆ. ಆನೆ ಸಾವಿನ ಪ್ರಕರಣವನ್ನು ಕೇರಳ ಸರ್ಕಾರ ಮತ್ತು ಸಚಿವಾಲಯದ ಎಲ್ಲಾ ಇಲಾಖೆಗಳು ಪಕ್ಷಪಾತವಿಲ್ಲದೆ ನಿರ್ವಹಿಸುತ್ತಿವೆ ಎಂದು ಸ್ಪಷ್ಟಪಡಿಸಿದೆ.

    ಗರ್ಭಿಣಿ ಆನೆ ಮಾನವನ ಸ್ವಾರ್ಥಕ್ಕಾಗಿ ಪ್ರಾಣ ಬಿಟ್ಟಿದೆ ಎಂದು ತಿಳಿದು ಇಡೀ ವಿಶ್ವವೇ ಮರುಗಿತ್ತು. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಯಾಗಿತ್ತು. ಇಡೀ ದೇಶದಲ್ಲೇ ಸ್ಟಾರ್ ನಟ-ನಟಿಯರು ಕ್ರಿಕೆಟ್ ಆಟಗಾರರು ಕೂಡ ಆನೆ ಸಾವಿಗೆ ನ್ಯಾಯ ಕೊಡಿಸಿ ಎಂದು ಟ್ವೀಟ್ ಮಾಡಿದ್ದರು. ಈ ವಿಚಾರವಾಗಿ ಟ್ವೀಟ್ ಮಾಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನೆಯ ಸಾವಿಗೆ ನ್ಯಾಯ ಸಿಗುತ್ತದೆ ಎಂದು ಹೇಳಿದ್ದರು.