Tag: ಕೇಂದ್ರ ಬಜೆಟ್‌ 2025

  • ಕೇಂದ್ರ ಬಜೆಟ್; ಆರ್ಥಿಕ ಸುಧಾರಣೆಗೆ ಐದು ವಲಯಗಳಲ್ಲಿ ಬದಲಾವಣೆ ನಿರೀಕ್ಷೆ

    ಕೇಂದ್ರ ಬಜೆಟ್; ಆರ್ಥಿಕ ಸುಧಾರಣೆಗೆ ಐದು ವಲಯಗಳಲ್ಲಿ ಬದಲಾವಣೆ ನಿರೀಕ್ಷೆ

    ನವದೆಹಲಿ: ಕೇಂದ್ರ ಬಜೆಟ್ (Union Budget 2025) ಸಮೀಸುತ್ತಿರುವ ಹಿನ್ನೆಲೆ ಭಾರತದಾದ್ಯಂತ ನಿರೀಕ್ಷೆಯು ಹೆಚ್ಚುತ್ತಿದೆ. ಹಣದುಬ್ಬರದ ನಡುವೆ ನಿಧಾನಗತಿಯ ಜಿಡಿಪಿ ಏರುತ್ತಿರುವ ಲಕ್ಷಣಗಳಿದ್ದು, ಈ ಸವಾಲುಗಳನ್ನು ಎದುರಿಸಲು ಮತ್ತು ಸುಸ್ಥಿರ ಬೆಳವಣಿಗೆಯತ್ತ ದೇಶವನ್ನು ಮುನ್ನಡೆಸುವ ದಿಟ್ಟ ಕಾರ್ಯತಂತ್ರಗಳನ್ನು ನೀಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಯಾರಿ ಮಾಡಿಕೊಳ್ಳುತ್ತಿದ್ದಾರೆ.

    ಮುಂಬರುವ ಬಜೆಟ್ ದೀರ್ಘಾವಧಿಯ ಆರ್ಥಿಕ ಅಭಿವೃದ್ಧಿಗೆ ಮಾತ್ರವಲ್ಲ, ಹೋರಾಟದ ವಲಯಗಳಿಗೆ ತಕ್ಷಣದ ಪರಿಹಾರಕ್ಕಾಗಿ ನಿರ್ಣಾಯಕವಾಗಿದೆ. ಹೀಗಾಗಿ ಬಜೆಟ್ 2025 ರಿಂದ ಐದು ಪ್ರಮುಖ ನಿರೀಕ್ಷೆಗಳನ್ನು ಮಾಡಲಾಗುತ್ತಿದೆ. ಬಜೆಟ್ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸುವುದನ್ನು ಒಳಗೊಂಡಿದ್ದು, ಇದು ಹೆಚ್ಚಿನ ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುತ್ತದೆ. ಇದನ್ನೂ ಓದಿ: ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟವಾದ ಮಂಜು – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

    ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ, ಹೆಚ್ಚಿನ ಅಬಕಾರಿ ಸುಂಕದಿಂದಾಗಿ ಇಂಧನ ಬೆಲೆ ಕಡಿಮೆಯಾಗಿಲ್ಲ. ಈ ಸುಂಕಗಳನ್ನು ಕಡಿಮೆ ಮಾಡುವುದರಿಂದ ಹಣದುಬ್ಬರದ ಒತ್ತಡವನ್ನು ನಿವಾರಿಸಬಹುದು. ಇದರಿಂದ ಸಾರ್ವಜನಿಕರ ಮೇಲಿನ ಆರ್ಥಿಕ ಹೊರೆಯನ್ನು ಗಣನೀಯವಾಗಿ ತಗ್ಗಿಸಬಹುದು ಎನ್ನಲಾಗಿದ್ದು, ಈ ಬಜೆಟ್‌ನಲ್ಲಿ ಅಬಕಾರಿ ಸುಂಕ ಇಳಿಕೆ ನಿರೀಕ್ಷಿಸಬಹುದು.

    ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಗಾರ್ಮೆಂಟ್ಸ್, ಪಾದರಕ್ಷೆಗಳು, ಪ್ರವಾಸೋದ್ಯಮ ಮತ್ತು MSMEಗಳಂತಹ ಉದ್ಯೋಗ-ಭಾರೀ ಕೈಗಾರಿಕೆಗಳ ಮೇಲೆ ಕೇಂದ್ರೀಕರಿಸಬಹುದು. ಈ ವಲಯಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುವ ಮೂಲಕ ಸರ್ಕಾರವು ಉದ್ಯೋಗಗಳನ್ನು ಸೃಷ್ಟಿಸಬಹುದು. ದೇಶೀಯ ಉತ್ಪಾದನೆಯನ್ನು ಹೆಚ್ಚಿಸಬಹುದು ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಭಾರತವನ್ನು ಪ್ರಬಲ ಆಟಗಾರನಾಗಿ ಇರಿಸಬಹುದು. ಇದನ್ನೂ ಓದಿ: ಸಿಂಗ್‌ ಅವಧಿಯಲ್ಲಿ 2.9 ಕೋಟಿ, ಮೋದಿ ಕಾಲದಲ್ಲಿ 17 ಕೋಟಿ ಉದ್ಯೋಗ ಸೃಷ್ಟಿ: ಕೇಂದ್ರ

    ಗ್ರಾಮೀಣ ಆಹಾರ ಬಳಕೆಯನ್ನು ಹೆಚ್ಚಿಸುವುದು ಆದ್ಯತೆಯಾಗಿ ಉಳಿದಿದೆ. ಉದ್ಯೋಗ ಯೋಜನೆಗಳ ಅಡಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ದೈನಂದಿನ ವೇತನವನ್ನು ಹೆಚ್ಚಿಸುವುದು, ನೇರ ಲಾಭ ವರ್ಗಾವಣೆಯನ್ನು ಹೆಚ್ಚಿಸುವುದು ಮತ್ತು ಗ್ರಾಮೀಣ ಮಾರುಕಟ್ಟೆಗಳಲ್ಲಿ ಖರೀದಿ ಸಾಮರ್ಥ್ಯ ಮತ್ತು ಬೇಡಿಕೆಯನ್ನು ಹೆಚ್ಚಿಸಲು ಕಡಿಮೆ-ಆದಾಯದ ಕುಟುಂಬಗಳಿಗೆ ಬೆಂಬಲ‌ ನೀಡುವ ನಿರೀಕ್ಷೆಗಳಿದೆ.

    ಜಾಗತಿಕ ಮಾರುಕಟ್ಟೆಯಲ್ಲಿ ಚೀನಾದ ಪ್ರಾಬಲ್ಯ ಭಾರತೀಯ ಕೈಗಾರಿಕೆಗಳಿಗೆ ಹಾನಿ ಮಾಡಿದೆ. ದೇಶೀಯ ಉತ್ಪನ್ನಗಳನ್ನು ಸ್ಪರ್ಧೆಯಿಂದ ರಕ್ಷಿಸಲು ರಕ್ಷಣಾತ್ಮಕ ಕ್ರಮಗಳಿಗಾಗಿ ಕೈಗಾರಿಕಾ ಸಂಸ್ಥೆಗಳು ಕರೆ ನೀಡುತ್ತಿವೆ. ಹೀಗಾಗಿ, ಬಜೆಟ್‌ನಲ್ಲಿ ಈ ಅಂಶವನ್ನು ಕೇಂದ್ರೀಕರಿಸಬಹುದು. ಇದನ್ನೂ ಓದಿ: ಮದ್ಯ, ಆಹಾರ ನಿರಾಕರಿಸಿದ್ದಕ್ಕೆ ರೆಸಾರ್ಟ್ ಮ್ಯಾನೇಜರ್ ಹತ್ಯೆ – ಕಾನ್‌ಸ್ಟೇಬಲ್‌ಗಳು ಅರೆಸ್ಟ್

    ಭಾರತವು 2025 ರ ಬಜೆಟ್‌ಗಾಗಿ ಕುತೂಹಲದಿಂದ ಕಾಯುತ್ತಿರುವಾಗ, ಈ ಉದ್ದೇಶಿತ ಕ್ರಮಗಳು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು, ಹಣದುಬ್ಬರವನ್ನು ಸರಾಗಗೊಳಿಸುವ ಮತ್ತು ಉದ್ಯೋಗಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿವೆ. ಪ್ರಮುಖ ಕ್ಷೇತ್ರಗಳಲ್ಲಿ ಬದಲಾವಣೆ ಭಾರತವು ತನ್ನ ಪ್ರಸ್ತುತ ಆರ್ಥಿಕ ಸವಾಲುಗಳನ್ನು ಜಯಿಸಲು ಮತ್ತು ಹೆಚ್ಚು ಸಮೃದ್ಧ ಭವಿಷ್ಯಕ್ಕೆ ದಾರಿ ಮಾಡಿಕೊಡಲು ಸಹಾಯ ಮಾಡುತ್ತದೆ.

  • Budget 2025 | 15 ಲಕ್ಷ ರೂ.ವರೆಗೆ ಆದಾಯ ತೆರಿಗೆ ಕಡಿತ ಸಾಧ್ಯತೆ – ಯಾರಿಗೆ ಲಾಭ?

    Budget 2025 | 15 ಲಕ್ಷ ರೂ.ವರೆಗೆ ಆದಾಯ ತೆರಿಗೆ ಕಡಿತ ಸಾಧ್ಯತೆ – ಯಾರಿಗೆ ಲಾಭ?

    ನವದೆಹಲಿ: ಫೆಬ್ರವರಿ 1 ರಂದು ಮಂಡನೆಯಾಗಲಿರುವ 2025-26ನೇ ಸಾಲಿನ ವಾರ್ಷಿಕ ಬಜೆಟ್‌ನಲ್ಲಿ 15 ಲಕ್ಷ ರೂ.ಗಳ ವರೆಗೆ ಆದಾಯ ತೆರಿಗೆ (Income Tax) ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

    ಮಧ್ಯಮ ವರ್ಗಗಳ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶ ಹಾಗೂ ಆರ್ಥಿಕತೆ ವೇಗವಾಗಿ ಬೆಳೆಯಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಈ ಚಿಂತನೆ ಮಾಡಿದೆ. ಸದ್ಯಕ್ಕೆ ಯಾವುದೇ ಕಡಿತದ ಗಾತ್ರವನ್ನು ನಿರ್ಧರಿಸಿಲ್ಲ. ಬಜೆಟ್‌ ಮಂಡನೆಗೆ ದಿನಾಂಕ ಸಮೀಪವಾಗುತ್ತಿದ್ದಂತೆ ನಿರ್ಧಾರ ಸ್ಪಷ್ಟವಾಗಲಿದೆ ಎಂದು ಹೆಸರು ಹೇಳಲಿಚ್ಚಿಸದ ಸರ್ಕಾರಿ ಮೂಲಗಳು ತಿಳಿಸಿವೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿಗೆ 2,244 ಕೋಟಿ, ಕಾಂಗ್ರೆಸ್‌ಗೆ 289 ಕೋಟಿ – ಯಾವ ಪಕ್ಷಕ್ಕೆ ಎಷ್ಟು ದೇಣಿಗೆ ಸಿಕ್ಕಿದೆ?

    ಪ್ರಮುಖವಾಗಿ ವಸತಿ ಬಾಡಿಗೆಗಳಂತಹ ವಿನಾಯಿತಿಗಳನ್ನು ತೆಗೆದುಹಾಕುವ 2020ರ ತೆರಿಗೆ ವ್ಯವಸ್ಥೆಯನ್ನು ಆರಿಸಿಕೊಂಡರೆ, ಈ ಕ್ರಮವು ಕೋಟ್ಯಂತರ ತೆರಿಗೆದಾರರಿಗೆ, ವಿಶೇಷವಾಗಿ ಹೆಚ್ಚಿನ ಜೀವನ ವೆಚ್ಚದಿಂದ ಹೊರೆಯಾಗಿರುವ ನಗರವಾಸಿಗಳಿಗೆ ಪ್ರಯೋಜನ ನೀಡುತ್ತದೆ. 2020ರ ತೆರಿಗೆ ಪದ್ದತಿಯಲ್ಲಿ 3 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳ ವರೆಗಿನ ವಾರ್ಷಿಕ ಆದಾಯಕ್ಕೆ ಶೇ.5 ರಿಂದ ಶೇ.20ರ ವರೆಗೆ ತೆರಿಗೆ ವಿಧಿಸಲಾಗುತ್ತಿತ್ತು. ಈ ಪ್ರಮಾಣ ಗರಿಷ್ಠ 30% ರಷ್ಟಿತ್ತು.

    ಇದೀಗ ಕೇಂದ್ರ ಸರ್ಕಾರ ಮುಂದಿಟ್ಟಿರುವ ನೂತನ ಪ್ರಸ್ತಾಪದಲ್ಲಿ ದೇಶದ ತೆರಿಗೆದಾರರು 2 ತೆರಿಗೆ ವ್ಯವಸ್ಥೆಗಳಲ್ಲಿ ಒಂದನ್ನು ಆಯ್ಕೆ ಮಾಡಬಹುದು. ಅದೇನೆಂದರೆ ವಸತಿ ಬಾಡಿಗೆ ಮತ್ತು ವಿಮೆಯ ಮೇಲೆ ವಿನಾಯಿತಿ ಅನುಮತಿಸುವ ಒಂದು ತೆರಿಗೆ ಪದ್ದತಿ ಮತ್ತು ಮತ್ತೊಂದು 2020ರಲ್ಲಿ ಪರಿಚಯಿಸಲಾದ ತೆರಿಗೆ ಪದ್ದತಿ. ಇದು ಸ್ವಲ್ಪ ಕಡಿಮೆ ತೆರಿಗೆ ದರಗಳನ್ನು ನೀಡುತ್ತದೆಯಾದರೂ ಪ್ರಮುಖ ವಿನಾಯಿತಿಗಳನ್ನ ಅನುಮತಿಸುವುದಿಲ್ಲ ಎಂದು ವರದಿ ಹೇಳಿದೆ.

    ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು ಅರ್ಥಶಾಸ್ತ್ರಜ್ಞರನ್ನು ಭೇಟಿಯಾಗಿದ್ದರು. ಈ ವೇಳೆ ತಜ್ಞರು ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಆದಾಯ ತೆರಿಗೆ ಕಡಿತಗೊಳಿಸುವಂತೆ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಅಲ್ಲದೇ ಕಸ್ಟಮ್ಸ್ ಸುಂಕಗಳನ್ನು ತರ್ಕಬದ್ಧಗೊಳಿಸಬೇಕು ಮತ್ತು ರಫ್ತುಗಳನ್ನು ಬೆಂಬಲಿಸುವ ಕ್ರಮಗಳನ್ನ ಪರಿಚಯಿಸಬೇಕು ಎಂದು ಸಹ ಮನವಿ ಮಾಡಿದ್ದರು.

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025ರ ಫೆಬ್ರವರಿ 1 ರಂದು 2025-26ನೇ ಸಾಲಿನ ವಾರ್ಷಿಕ ಬಜೆಟ್‌ ಮಂಡಿಸಲಿದ್ದಾರೆ. ಇದನ್ನೂ ಓದಿ: ಮೈಗೆ ಬೆಂಕಿ ಹಚ್ಚಿಕೊಂಡು ಸಂಸತ್‌ ಭವನದ ಕಡೆ ಓಡಿದ ವ್ಯಕ್ತಿ – ದೇಹದ 95% ಭಾಗ ಸುಟ್ಟು ಆಸ್ಪತ್ರೆಗೆ ದಾಖಲು