Tag: ಕೇಂದ್ರ ಸರ್ಕಾರಿ ನೌಕರರು

  • ಕೇಂದ್ರ ನೌಕರರಿಗೆ ಯುಗಾದಿ ಗಿಫ್ಟ್ – ಶೇ.2 ರಷ್ಟು ಡಿಎ ಏರಿಕೆ

    ಕೇಂದ್ರ ನೌಕರರಿಗೆ ಯುಗಾದಿ ಗಿಫ್ಟ್ – ಶೇ.2 ರಷ್ಟು ಡಿಎ ಏರಿಕೆ

    ನವದೆಹಲಿ: ಯುಗಾದಿ (Yugadi) ಹಬ್ಬದ ಹೊತ್ತಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (DA) ಶೇ.2ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

    ಈ ಮೂಲಕ ತುಟ್ಟಿಭತ್ಯೆ ಶೇ.53ರಿಂದ ಶೇ.55ಕ್ಕೇರುತ್ತದೆ. ತುಟ್ಟಿಭತ್ಯೆ ಹೆಚ್ಚಳದಿಂದಾಗಿ 1.5 ಕೋಟಿ ಕೇಂದ್ರ ಸರ್ಕಾರಿ ನೌಕರರು (Central Government Employess) ಹಾಗೂ ಪಿಂಚಣಿದಾರರು ಅನುಕೂಲ ಪಡೆದುಕೊಳ್ಳಲಿದ್ದಾರೆ.ಇದನ್ನೂ ಓದಿ:ಇಂದು ಬಿಬಿಎಂಪಿ ಬಜೆಟ್‌ ಮಂಡನೆ – ಪ್ರಸಕ್ತ ವರ್ಷ 6,000 ಕೋಟಿ ತೆರಿಗೆ ವಸೂಲಿಗೆ ಪ್ರಸ್ತಾವನೆ ಸಾಧ್ಯತೆ!

    ಇನ್ನೂ ಕಳೆದ ವರ್ಷ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.50ರಿಂದ ಶೇ.53ಕ್ಕೇರಿಕೆಯಾಗಿತ್ತು. ಇದೀಗ ಸರ್ಕಾರ ಅದನ್ನು ಶೇ.2ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಡಿಎ ಇದೇ ಜನವರಿಯಿಂದ ಅನ್ವಯವಾಗಲಿದ್ದು, ಮಾರ್ಚ್ ತಿಂಗಳ ಸಂಬಳದಲ್ಲಿ ಮೂರು ತಿಂಗಳ ಅರಿಯರ್ಸ್ ಸೇರಿ ಖಾತೆಗೆ ಜಮೆಯಾಗಲಿದೆ.

    ಹಣದುಬ್ಬರದಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ನೌಕರರಿಗೆ ತುಟ್ಟಿಭತ್ಯೆ ನೆರವಾಗುತ್ತದೆ. ಹೆಚ್ಚುತ್ತಿರುವ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ತುಟ್ಟಿಭತ್ಯೆಯು ಸಹಾಯವಾಗುತ್ತದೆ. ವೇತನ ಆಯೋಗದ ಪ್ರಕಾರ, ಪ್ರತಿ 10 ವರ್ಷಕ್ಕೊಮ್ಮೆ ಮೂಲ ವೇತನವು ಪರಿಷ್ಕರಣೆಗೊಂಡರೆ, ತುಟ್ಟಿಭತ್ಯೆಯನ್ನು ಹಣದುಬ್ಬರ ಆಧಾರದ ಮೇಲೆ ಹೊಂದಾಣಿಕೆ ಮಾಡಲಾಗುತ್ತದೆ.ಇದನ್ನೂ ಓದಿ:ಪರಿಹಾರದ ಹಣದಲ್ಲಿ ಬೆಟ್ಟಿಂಗ್ – ವಂಚನೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

  • ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ಬೆಳಗ್ಗೆ 9:15ರೊಳಗೆ ಕಚೇರಿಗೆ ಬರದಿದ್ದರೇ ಅರ್ಧ ದಿನದ ಸಂಬಂಳ ಕಟ್ – ಕೇಂದ್ರ ಸರ್ಕಾರಿ ನೌಕರರಿಗೆ ಡಿಒಪಿಟಿ ಎಚ್ಚರಿಕೆ!

    ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಚಾಟೀ ಬೀಸಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು (Government Employees) ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.

    ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು (Public Work) ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.

    ಕೊವೀಡ್ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ (Biometric) ಬಳಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದೆ. ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಸಹ ಎಚ್ಚರಿಕೆ ನೀಡಿದೆ.

    ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಾಕೀತು ಮಾಡಿದೆ. ಹಿರಿಯ ಅಧಿಕಾರಿಗಳು ನೌಕರರ ಹಾಜರಾತಿ ಮತ್ತು ಸಮಯಪ್ರಜ್ಞೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸುತ್ತೊಲೆಯಲ್ಲಿ ಹೇಳಲಾಗಿದೆ.

    GOVT EMPLOYEES
    ಸಾಂದರ್ಭಿಕ ಚಿತ್ರ

    2014 ರಲ್ಲಿ ನರೇಂದ್ರ ಮೋದಿ ಮೊದಲ ಬಾರಿ ಪ್ರಧಾನಿಯಾದ ಬಳಿಕ ಕಚೇರಿ ಸಮಯವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಪ್ರಯತ್ನಿಸಿತು‌. ಇದನ್ನು ನೌಕರರು ವಿರೋಧಿಸಿದ್ದರು. ಅವರಲ್ಲಿ ಹಲವರು ದೂರದ ಪ್ರಯಾಣ ಮಾಡುತ್ತಾರೆ ಎಂದು ವಾದಿಸಿದ್ದರು. ಬಳಿಕ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ, ಹಾಜರಾತಿ ಖಚಿತಪಡಿಸಿಕೊಳ್ಳಲು, ಮೇಲ್ವಿಚಾರಣೆ ಮಾಡಲಾಯಿತು ಸೂಚಿಸಿತ್ತು. ಕೋವಿಡ್ ಬಳಿಕ ಈ ವ್ಯವಸ್ಥೆ ಮತ್ತೆ ಹಾದಿ ತಪ್ಪಿದೆ ಎನ್ನಲಾಗಿದೆ‌.

  • ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ

    ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ತುಟ್ಟಿಭತ್ಯೆ (DA) ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಮಾಹಿತಿ ನೀಡಿದರು. ಇದು ಜುಲೈ 1 ರಿಂದಲೇ ಜಾರಿಗೆ ಬರಲಿದೆ.

    ಜುಲೈ 1 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.4 ರಷ್ಟು ಡಿಎ ಹೆಚ್ಚಿಸಿ ಸಚಿವ ಸಂಪುಟ ಅನುಮೋದಿಸಿದೆ. ಇದರಿಂದ ಸರಿಸುಮಾರು 41.85 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ಆಗಲಿದೆ. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್‌ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ

    ಕೇಂದ್ರ ಸರ್ಕಾರವು ಪ್ರತಿ ವರ್ಷ ಜುಲೈ 1 ರಂದು ತುಟ್ಟಿಭತ್ಯೆಯನ್ನು ಪರಿಷ್ಕರಿಸುತ್ತದೆ. ಆದರೆ ಈ ನಿರ್ಧಾರವನ್ನು ಸಾಮಾನ್ಯವಾಗಿ ಸೆಪ್ಟೆಂಬರ್‌ನಲ್ಲಿ ಪ್ರಕಟಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಗುಡ್‍ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ

    ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಗುಡ್‍ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೀಪಾವಳಿಗೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹೆಚ್ಚಿಸಿ ಹಬ್ಬಕ್ಕೆ ಬಂಪರ್ ಗಿಫ್ಟ್ ನೀಡಿದೆ.

    ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಕೇಂದ್ರ ಸರ್ಕಾರಿ ನೌಕರರಿಗೆ ಶೇ.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನ ಕೈಗೊಳ್ಳಲಾಗಿದ್ದು, ಜುಲೈ 1, 2019 ರಿಂದಲೇ ಇದು ಪೂರ್ವನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

    ಇಷ್ಟು ದಿನಗಳ ಕಾಲ ಇದ್ದ ಶೇ.12ರಷ್ಟು ತುಟ್ಟಿ ಭತ್ಯೆ (ಡಿಎ)ಯನ್ನು ನೀಡಲಾಗುತಿತ್ತು. ಈಗ ಶೇ.17ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ತುಟ್ಟಿ ಭತ್ಯೆ ಹೆಚ್ಚಳ ಪಿಂಚಣಿದಾರರಿಗೂ ಅನ್ವಯವಾಗಲಿದೆ. ಒಟ್ಟು 50 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಜನ ಪಿಂಚಣಿದಾರರು ಇದರ ಸೌಲಭ್ಯ ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

    ಇದು ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯಾಗಿದೆ. ತುಟ್ಟಿ ಭತ್ಯೆ ಹೆಚ್ಚಳದಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 16 ಸಾವಿರ ಕೋಟಿ ರೂ. ಹೊರೆಯಾಗಲಿದೆ ಎಂದರು.

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಸೌಲಭ್ಯ ಪಡೆಯಲು ರೈತರು ಆಧಾರ್ ಲಿಂಕ್ ಮಾಡಲು ಹೆಚ್ಚಿನ ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ. ನವೆಂಬರ್ 30ರ ವರೆಗೂ ಅವಧಿಯನ್ನು ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದೆ. ಜೊತೆಗೆ ಆಶಾ ಕಾರ್ಯಕರ್ತೆಯರ ಸಂಭಾವನೆಯನ್ನು ಒಂದು ಸಾವಿರ ರೂ.ದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

  • ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್: ಶೇ.2ರಷ್ಟು ತುಟ್ಟಿಭತ್ಯೆ ಏರಿಕೆ

    ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್: ಶೇ.2ರಷ್ಟು ತುಟ್ಟಿಭತ್ಯೆ ಏರಿಕೆ

    ನವದೆಹಲಿ: ಕೇಂದ್ರ ಸಚಿವ ಸಂಪುಟವು ಬುಧವಾರ ಶೇ.2 ರಷ್ಟು ಹೆಚ್ಚುವರಿಯಾಗಿ ತುಟ್ಟಿಭತ್ಯೆ ನೀಡಲು ನಿರ್ಧರಿಸಿದ್ದು, ಇದರಿಂದ ಒಟ್ಟು 1.1 ಕೋಟಿ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಸಹಾಯವಾಗಲಿದೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ನಿರ್ಧಾರ ಕೈಗೊಂಡಿದ್ದು, 2018 ಜುಲೈ 1ರಿಂದ ಪೂರ್ವಾನ್ವಯವಾಗುಂತೆ ಜಾರಿಯಾಗಲಿದೆ. ಈಗಾಗಲೇ ಕೇಂದ್ರ ಸರ್ಕಾರಿ ನೌಕರರು ಶೇ.7ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಈಗ ಈ ಪ್ರಮಾಣ ಶೇ.9ಕ್ಕೆ ಏರಿಕೆಯಾಗಿದೆ.

    7ನೇ ವೇತನ ಆಯೋಗದ ಶಿಫಾರಸಿನ ಹಿನ್ನೆಲೆಯಲ್ಲಿ ತುಟ್ಟಿಭತ್ಯೆ ಮತ್ತು ಪಿಚಣಿದಾರರ ತುಟ್ಟಿಭತ್ಯೆ ಪರಿಹಾರವನ್ನು(ಡಿಎಆರ್) ಏರಿಕೆ ಮಾಡಿದ್ದು, ಇದರಿಂದಾಗಿ 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ 62.03 ಲಕ್ಷ ನಿವೃತ್ತಿ ವೇತನ ಪಡೆಯುವವರಿಗೆ ಅನುಕೂಲವಾಗಲಿದೆ. 2018-19ರ ಹಣಕಾಸು ವರ್ಷದಲ್ಲಿ ತುಟ್ಟಿಭತ್ಯೆ ಏರಿಕೆಯಿಂದ 6,112.20 ಕೋಟಿ ರೂ. ಮತ್ತು ಡಿಆರ್ ಏರಿಕೆಯಿಂದ 4,074.80 ಕೋಟಿ ರೂ. ಸರ್ಕಾರ ಬೊಕ್ಕಸಕ್ಕೆ ಹೊರೆಯಾಗಲಿದೆ.

    ಸರ್ಕಾರಿ ನೌಕರರು, ಸಾರ್ವಜನಿಕ ವಲಯದ ನೌಕರರು ಹಾಗೂ ಪಿಂಚಣಿದಾರರರಿಗೆ ತುಟ್ಟಿ ಭತ್ಯೆ ಸಿಗಲಿದ್ದು, ಇದು ನೌಕರರ ಮೂಲ ವೇತನದ ಮೇಲೆ ನಿಗದಿಯಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv