Tag: ಕೇನ್ ವಿಲಿಯಮ್ಸನ್

  • 3ನೇ T20 ಪಂದ್ಯದಿಂದ ವಿಲಿಯಮ್ಸನ್ ಔಟ್ – ಕಳೆದ ಪಂದ್ಯದ ಹ್ಯಾಟ್ರಿಕ್ ವೀರನಿಗೆ ನಾಯಕತ್ವದ ಪಟ್ಟ

    3ನೇ T20 ಪಂದ್ಯದಿಂದ ವಿಲಿಯಮ್ಸನ್ ಔಟ್ – ಕಳೆದ ಪಂದ್ಯದ ಹ್ಯಾಟ್ರಿಕ್ ವೀರನಿಗೆ ನಾಯಕತ್ವದ ಪಟ್ಟ

    ವೆಲ್ಲಿಂಗ್ಟನ್: ಭಾರತ (India) ಹಾಗೂ ನ್ಯೂಜಿಲೆಂಡ್ (New Zealand) ನಡುವಿನ ಮೂರನೇ ಟಿ20 ಪಂದ್ಯದಿಂದ ಕೀವಿಸ್ ನಾಯಕ ಕೇನ್ ವಿಲಿಯಮ್ಸನ್ (Kane Williamson) ಹೊರನಡೆದಿದ್ದಾರೆ. ನಾಯಕನ ಅನುಪಸ್ಥಿತಿಯಲ್ಲಿ ಕಳೆದ ಪಂದ್ಯದ ಹ್ಯಾಟ್ರಿಕ್ ವೀರ ಟಿಮ್ ಸೌಥಿಗೆ (Tim Southee) ನಾಯಕತ್ವದ ಪಟ್ಟ ಕಟ್ಟಲಾಗಿದೆ.

    ವಿಲಿಯಮ್ಸನ್ ಮೆಡಿಕಲ್ ಚೆಕಪ್‌ಗೆ ಒಳಗಾಗುವ ಕಾರಣ ಮೂರನೇ ಟಿ20 ಪಂದ್ಯ ಆಡುತ್ತಿಲ್ಲ. ಅವರ ಬದಲಿಗೆ ಟಿಮ್ ಸೌಥಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ನ್ಯೂಜಿಲೆಂಡ್ ಕೋಚ್ ಗ್ಯಾರಿ ಸ್ಟೇಡ್ ತಿಳಿಸಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಿ ಟಿಮ್ ಸೌಥಿ ಕೊನೆಯ ಓವರ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು. ಇದನ್ನೂ ಓದಿ: ಶತಕ ಸಿಡಿಸಿ ಮೆರೆದ ಸೂರ್ಯ – ಕೀವಿಸ್ ಕಿವಿ ಹಿಂಡಿದ ಭಾರತ

    ಟೀಂ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ ತವರಿನಲ್ಲಿ ಮೂರು ಟಿ20 ಪಂದ್ಯಗಳ ಸರಣಿ ಆಡುತ್ತಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾದರೆ, ಎರಡನೇ ಪಂದ್ಯದಲ್ಲಿ ಭಾರತ 65 ರನ್‍ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದನ್ನೂ ಓದಿ: ಸಿಕ್ಸರ್‌ ವೀರ ಸೂರ್ಯ Vs ಎಬಿಡಿ – ಇಬ್ಬರಲ್ಲಿ ಯಾರು ಬೆಸ್ಟ್‌? – ಟ್ವಿಟ್ಟರ್‌ನಲ್ಲಿ ಟ್ರೆಂಡ್‌

    ಕೊನೆಯ ಟಿ20 ಪಂದ್ಯದಿಂದ ಇದೀಗ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದು, ಸರಣಿಯನ್ನು ಸಮಬಲಗೊಳಿಸಲು ನ್ಯೂಜಿಲೆಂಡ್ ತಂಡ ಹೋರಾಡಬೇಕಾಗಿದೆ. ಇತ್ತ ಭಾರತ ತಂಡ ನಾಯಕನ ಅನುಪಸ್ಥಿತಿಯ ಲಾಭವೆತ್ತಿ ಸರಣಿ ಗೆಲ್ಲುವ ತವಕದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ಪಾಕ್-ಕಿವೀಸ್ ಸೆಮಿಫೈನಲ್‌ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್

    ಪಾಕ್-ಕಿವೀಸ್ ಸೆಮಿಫೈನಲ್‌ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್

    ಕ್ಯಾನ್ಬೆರಾ: ನ್ಯೂಜಿಲೆಂಡ್ (New Zealand) ಹಾಗೂ ಪಾಕಿಸ್ತಾನ (Pakistan) ತಂಡಗಳು ಇಂದಿನ ಮೊದಲ ಸೆಮಿಫೈನಲ್ (1st Semi Final) ಪಂದ್ಯದಲ್ಲಿ ಸೆಣಸಾಡಲಿವೆ. ಇಂದಿನ ಪಂದ್ಯದಲ್ಲಿ ಗೆದ್ದು ಫೈನಲ್‌ಗೆ ಲಗ್ಗೆ ಹಾಕಲು ಉಭಯ ತಂಡಗಳು ರಣತಂತ್ರ ಹೆಣೆದಿವೆ.

    ಲೀಗ್ ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನ ಬಗ್ಗು ಬಡಿದಿರೋ ನ್ಯೂಜಿಲೆಂಡ್ (New Zealand), ಕೇವಲ ಒಂದು ಪಂದ್ಯದಲ್ಲಿ ಸೋಲುಂಡಿದೆ. ಇತ್ತ, ಪಾಕ್ ಪಡೆ ಲೀಗ್ ಪಂದ್ಯದಲ್ಲಿ ಆರಂಭಿಕ 2 ಪಂದ್ಯಗಳನ್ನ ಕೈಚೆಲ್ಲಿ ನಂತರ ಫಿನಿಕ್ಸ್‌ನಂತೆ ಎದ್ದು ಸೆಮಿಸ್‌ಗೆ ಎಂಟ್ರಿ ಕೊಟ್ಟಿದೆ. ಇದನ್ನೂ ಓದಿ: ನೆಟ್ ಪ್ರಾಕ್ಟೀಸ್ ವೇಳೆ ರೋಹಿತ್ ಶರ್ಮಾ ಬಲಗೈಗೆ ಪೆಟ್ಟು – ಟೀಂ ಇಂಡಿಯಾಗೆ ಆಘಾತ

    ಇಂದು ಮಧ್ಯಾಹ್ನ 1.30ಕ್ಕೆ ಇತ್ತಂಡಗಳು ಸಿಡ್ನಿಯ ಕ್ರೀಡಾಂಗಣದಲ್ಲಿ ಅಖಾಡಕ್ಕಿಳಿಯಲಿವೆ. ಇತ್ತಂಡಗಳಲ್ಲೂ ಬಲಿಷ್ಠ ಬ್ಯಾಟಿಂಗ್ ಹಾಗೂ ಬೌಲರ್‌ಗಳ ದಂಡೇ ಇದ್ದು ಭಾರೀ ಜಿದ್ದಾ-ಜಿದ್ದಿ ನಿರೀಕ್ಷಿಸಬಹುದಾಗಿದೆ. ಇದನ್ನೂ ಓದಿ: ಮುಂಬೈ ಗಲ್ಲಿಯಲ್ಲಿ ಅಭಿಮಾನಿಗಳ ಜೊತೆ ಕ್ರಿಕೆಟ್ ಆಡಿದ ಎಬಿಡಿ

    ನ್ಯೂಜಿಲೆಂಡ್ ಹಾಗೂ ಪಾಕ್ ತಂಡಗಳ ಟಿ-20 ವಿಶ್ವಕಪ್ (T20 Worldcup) ಮುಖಾಮುಖಿಯ ರೆಕಾರ್ಡ್ ನೋಡೋದಾದ್ರೆ, ಎರಡು ತಂಡಗಳು 6 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಪಾಕಿಸ್ತಾನ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ, ನ್ಯೂಜಿಲೆಂಡ್ ಕೇವಲ 2 ಜಯ ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಬಲಿಷ್ಠ ತಂಡಗಳ ಹಣಾ-ಹಣಿ ಇಂದು – ಐಪಿಎಲ್ ಪ್ರಿಯರಿಗೆ ಡಬಲ್ ಧಮಾಕ

    ಬಲಿಷ್ಠ ತಂಡಗಳ ಹಣಾ-ಹಣಿ ಇಂದು – ಐಪಿಎಲ್ ಪ್ರಿಯರಿಗೆ ಡಬಲ್ ಧಮಾಕ

    ಮುಂಬೈ: ತಲಾ 3 ಪಂದ್ಯಗಳನ್ನು ಗೆದ್ದು ವಿಶ್ವಾಸದಲ್ಲಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ನಾಯಕತ್ವದ ಕಿಂಗ್ಸ್ ಪಂಜಾಬ್ ಮತ್ತು ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಸೆಣಸಲಿವೆ.

    ಸಂಜೆ 7.30ಕ್ಕೆ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಹಣಾಹಣಿ ನಡೆಸಲಿವೆ. ಇದನ್ನೂ ಓದಿ: ಡಿಕೆ ಸ್ಫೋಟಕ ಫಿಫ್ಟಿ – ಕೊಹ್ಲಿ ಸ್ಟನ್ನಿಂಗ್ ಕ್ಯಾಚ್‌ – ಡೆಲ್ಲಿ ವಿರುದ್ಧ ಆರ್​ಸಿಬಿಗೆ 16 ರನ್‍ಗಳ ಜಯ

    IPL 2022 SRH (1)

    ಡಿ.ವೈ.ಪಾಟೀಲ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂಜಾಬ್ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯವು ರೋಚಕ ಹಣಾಹಣಿಗೆ ಸಾಕ್ಷಿಯಾಗಲಿವೆ. ಎರಡೂ ತಂಡಗಳೂ ಈ ಟೂರ್ನಿಯಲ್ಲಿ ಸಿಹಿ, ಕಹಿಯನ್ನು ಸಮನಾಗಿ ಅನುಭವಿಸಿದ್ದು, 5ಕ್ಕೆ ತಲಾ 3 ಪಂದ್ಯಗಳಲ್ಲಿ ಜಯ ಸಾಧಿಸಿವೆ. ಈವರೆಗೆ 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 5 ಪಂದ್ಯಗಳಲ್ಲಿ ಪಂಜಾಬ್ ಹಾಗೂ 12 ಪಂದ್ಯಗಳಲ್ಲಿ ಹೈದರಾಬಾದ್ ಗೆಲುವು ಸಾಧಿಸಿದೆ.

    ಮೊದಲೆರಡು ಪಂದ್ಯಗಳಲ್ಲಿ ಸೋತ ನಂತರ ಹೈದ್ರಾಬಾದ್ ತಂಡವು ಸತತ 3 ಪಂದ್ಯಗಳಲ್ಲಿ ಜಯ ಸಾಧಿಸಿತು. ಬ್ಯಾಟಿಂಗ್ ಲಯಕ್ಕೆ ಮರಳಿರುವ ಜೇಸನ್ ರಾಯ್ ಮತ್ತು ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸುತ್ತಿದ್ದರೆ, ಜೇಸನ್ ಹೋಲ್ಡರ್, ಭುವನೇಶ್ವರ್ ಕುಮಾರ್, ರಶೀದ್ ಖಾನ್ ಬೌಲಿಂಗ್‌ನಲ್ಲಿ ತಮ್ಮ ಪ್ರಾಬಲ್ಯ ಮೆರೆಯುತ್ತಾ ಗೆಲುವಿನ ಹಾದಿಗೆ ತರುತ್ತಿದ್ದಾರೆ.

    IPL 2022 CSK (1)

    ಪಂಜಾಬ್ ತಂಡವು ಆರ್‌ಸಿಬಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಸೋಲಿಸಿದೆ. ಅಲ್ಲದೆ ತಾನು ಸೋತ ಎರಡು ಪಂದ್ಯಗಳಲ್ಲಿಯೂ ಉತ್ತಮ ಪ್ರದರ್ಶನವನ್ನೇ ನೀಡಿತ್ತು. ಮಯಾಂಕ್ ಅಗರ್ವಾಲ್, ಶಿಖರ್ ಧವನ್, ಹೊಸಪ್ರತಿಭೆ ಜಿತೇಶ್ ಶರ್ಮಾ ಉತ್ತಮ ಲಯದಲ್ಲಿದ್ದಾರೆ. ಇದನ್ನೂ ಓದಿ: 7 ವಿಕೆಟ್‌ಗಳಿಂದ ಗೆದ್ದ ಟೀಂ ಇಂಡಿಯಾಗೆ ಶೇ.20ರಷ್ಟು ದಂಡ

    ಆಲ್‌ರೌಂಡರ್‌ಗಳ ಸವಾಲ್
    ಮೊದಲ ಬಾರಿಗೆ ಐಪಿಎಲ್ ನಾಯಕತ್ವದ ಹೊಣೆ ಹೊತ್ತಿರುವ ಭಾರತ ಕ್ರಿಕೆಟ್ ತಂಡದ ಇಬ್ಬರು ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ನಾಯಕತ್ವದ ತಂಡಗಳು ಇಂದು ಮುಖಾಮುಖಿಯಾಗವೆ. ಗುಜರಾತ್ ಹೊಸ ತಂಡದ ಸೇರ್ಪಡೆಯಿಂದ ಇದೇ ಮೊದಲಬಾರಿಗೆ ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯವು ಸಂಜೆ 7.30ಕ್ಕೆ ಪುಣೆಯಲ್ಲಿರುವ ಮಹಾರಾಷ್ಟç ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದನ್ನೂ ಓದಿ: ಅಯ್ಯರ್‌ಗೆ 12 ಲಕ್ಷ ದಂಡ – ಐಪಿಎಲ್‌ನಲ್ಲಿ ದಂಡ ಹಾಕೋದು ಯಾಕೆ?

    IPL 2022 SRH (1)

    ಬಲಿಷ್ಠ ತಂಡಗಳ ಪೈಕಿ ಈಗಾಗಲೇ ವೋಟಿಂಗ್‌ಪೋಲ್ ನಡೆಸಲಾಗುತ್ತಿದ್ದು, ಪಂಜಾಬ್ ಗೆಲುವಿಗೆ 19,764 ಮಂದಿ, ಎಸ್‌ಆರ್‌ಎಚ್‌ಗೆ 20,554 ಮಂದಿ ಬೆಂಬಲಿಸಿದ್ದಾರೆ. ಅಂತೆಯೇ ಗುಜರಾತ್ ಟೈಟನ್ಸ್‌ಗೆ 9,682 ಮಂದಿ ಪ್ರೋತ್ಸಾಹಿಸಿದ್ದು, ಚೆನ್ನೈ 10,618 ಜನರ ಬೆಂಬಲ ಗಳಿಸಿದೆ. ಚೆನ್ನೈ ಈಗಾಗಲೇ ಐಪಿಎಲ್ ಕ್ರಮಾಂಕದಲ್ಲಿ ಕೆಳಕ್ಕೆ ಕುಸಿದಿದ್ದು, ಪ್ಲೆ-ಆಫ್ ತಲುಪಲು ಮುಂದಿನ ಎಲ್ಲ ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

  • ಜೇಸನ್ ರಾಯ್ ಅಬ್ಬರಕ್ಕೆ ಮಕಾಡೆ ಮಲಗಿದ ರಾಜಸ್ಥಾನ್ ರಾಯಲ್ಸ್: ಹೈದರಾಬಾದ್‍ಗೆ ಜಯ

    ಜೇಸನ್ ರಾಯ್ ಅಬ್ಬರಕ್ಕೆ ಮಕಾಡೆ ಮಲಗಿದ ರಾಜಸ್ಥಾನ್ ರಾಯಲ್ಸ್: ಹೈದರಾಬಾದ್‍ಗೆ ಜಯ

    ದುಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 7 ವಿಕೆಟ್‍ಗಳ ಭರ್ಜರಿ ಜಯಗಳಿಸುವ ಮೂಲಕ ಐಪಿಎಲ್‌ ಟೂರ್ನಿಯಲ್ಲಿ ಎರಡನೇ ಜಯ ದಾಖಲಿಸಿದೆ.

    ರಾಜಸ್ಥಾನ ನೀಡಿದ್ದ 165 ರನ್‍ಗಳ ಗುರಿಯನ್ನು ಬೆನ್ನತ್ತಿದ ಹೈದರಾಬಾದ್, 18.3 ಓವರ್‌ಗಳಲ್ಲಿ 167 ರನ್ ಗಳಿಸಿ ಜಯದ ನಗೆ ಬೀರಿತು. ಈ ಮೂಲಕ ಯುಎಇನಲ್ಲಿ ಮೊದಲ ಜಯವನ್ನು ತನ್ನದಾಗಿಸಿಕೊಂಡಿತು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್, ದುಬೈ ಪಿಚ್‍ನಲ್ಲಿ ನಿಧಾನವಾಗಿ ಉತ್ತಮ ಮೊತ್ತ ಕಲೆ ಹಾಕಿತು. ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 164ರನ್ ಪೇರಿಸಿತು. ರಾಜಸ್ಥಾನ್ ಪರ ಜೈಸ್ವಾಲ್ 36 ರನ್ (23 ಎಸೆತ, 5 ಬೌಂಡರಿ, 1 ಸಿಕ್ಸರ್) ಗಳಿಸಿದರು. ಮಹಿಪಾಲ್ ಲೊಮರ್ 29ರನ್ (28 ಎಸೆತ, 1 ಬೌಂಡರಿ, 1 ಸಿಕ್ಸರ್) ಸಿಡಿಸಿದರೆ, ನಾಯಕ ಸಂಜು ಸ್ಯಾಮ್ಸನ್ 82 ರನ್ (57 ಎಸೆತ, 7 ಬೌಂಡರಿ, 3 ಸಿಕ್ಸರ್) ಸಿಡಿಸುವ ಮೂಲಕ ಹೈದರಾಬಾದ್ ಬೌಲರ್‍ಗಳನ್ನು ಬೆಂಡೆತ್ತಿದರು. ಸನ್ ರೈಸರ್ಸ್ ಹೈದರಾಬಾದ್ ಪರ ಸಿದ್ದಾರ್ಥ್ ಕೌಲ್ 2, ರಶೀದ್ ಖಾನ್ 1, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು. ಇದನ್ನೂ ಓದಿ: ಟಿ20 ಕ್ರಿಕೆಟ್‍ನಲ್ಲಿ ವಿರಾಟ್ ಕೊಹ್ಲಿ 10ಏ ಕಿಂಗ್

    165 ರನ್‍ಗಳ ಗುರಿ ಬೆನ್ನತ್ತಿದ ಹೈದರಾಬಾದ್‍ಗೆ ಜೇಸನ್ ರಾಯ್ ಹಾಗೂ ವೃದ್ಧಿಮಾನ್ ಸಹಾ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‍ಗೆ ಈ ಜೋಡಿ, 5.1 ಓವರ್‌ಗಳಲ್ಲಿ 57 ರನ್ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು. ಉತ್ತಮವಾಗಿ ಆಡುತ್ತಿದ್ದ ವೃದ್ಧಿಮಾನ್ ಸಹಾ 18 ರನ್ (11 ಎಸೆತ, 2 ಬೌಂಡರಿ, 1 ಸಿಕ್ಸರ್) ಮಹಿಪಾಲ್‍ಗೆ ವಿಕೆಟ್ ಒಪ್ಪಿಸಿದರು. ರಾಜಸ್ಥಾನ್ ಬೌಲರ್‌ಗಳನ್ನು ಮನ ಬಂದಂತೆ ದಂಡಿಸಿದ ಜೇಸನ್ ರಾಯ್ 60 ರನ್ (42 ಎಸೆತ, 8 ಬೌಂಡರಿ, 1 ಸಿಕ್ಸರ್) ಚಚ್ಚಿ ಚೇತನ್ ಸಕರಿಯಾಗೆ ವಿಕೆಟ್ ಕೊಟ್ಟು ಹೊರ ನಡೆದರು. ನಂತರ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಆಟವಾಡಿ ಸನ್ ರೈಸರ್ಸ್ ಹೈದರಾಬಾದ್‍ಗೆ ಗೆಲುವು ದೊರಕಿಸಿಕೊಟ್ಟರು. ಇದನ್ನೂ ಓದಿ: 5 ಎಸೆತದಲ್ಲಿ 21 ರನ್ ಚಚ್ಚಿದ ಜಡೇಜಾ – ಕೊನೆಯ ಎಸೆತದಲ್ಲಿ ಚೆನ್ನೈಗೆ ರೋಚಕ ಜಯ

    ಭರ್ಜರಿ ಬ್ಯಾಟಿಂಗ್ ಮಾಡಿದ ನಾಯಕ ಕೇನ್ ವಿಲಿಯಮ್ಸನ್, 51 ರನ್ (41 ಎಸೆತ, 5 ಬೌಂಡರಿ, 1 ಸಿಕ್ಸರ್) ಸಿಡಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಇವರಿಗೆ ಉತ್ತಮ ಸಾಥ್ ನೀಡಿದ ಅಭಿಷೇಕ್ ಶರ್ಮಾ 21 ರನ್ (16 ಎಸೆತ, 1 ಬೌಂಡರಿ, 1 ಸಿಕ್ಸರ್) ಚಚ್ಚುವ ಮೂಲಕ ತಂಡದ ಗೆಲುವಿಗೆ ಸಹಕಾರಿಯಾದರು.

  • ದುಬೈನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ – ಸನ್ ರೈಸರ್ಸ್ ನಡುವೆ ಕಾದಾಟ

    ದುಬೈನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ – ಸನ್ ರೈಸರ್ಸ್ ನಡುವೆ ಕಾದಾಟ

    ದುಬೈ: ಐಪಿಎಲ್ ದ್ವಿತೀಯಾರ್ಧದ 4ನೇ ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್ ತಂಡಗಳು ಸೆಣಸಾಡಲಿವೆ.

    ಈವರೆಗೂ ನಡೆದಿರುವ ಒಟ್ಟು 8 ಪಂದ್ಯಗಳಲ್ಲಿ, 6 ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಏಳು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಸನ್ ರೈಸರ್ಸ್ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದನ್ನೂ ಓದಿ: ಕೊನೆಯ ಓವರಿನಲ್ಲಿ ತ್ಯಾಗಿ ಜಾದೂ – ರಾಜಸ್ಥಾನಕ್ಕೆ 2 ರನ್‍ಗಳ ರೋಚಕ ಜಯ

    ಭಾರತದಲ್ಲಿ ನಡೆದ ಮೊದಲಾರ್ಧದ ಐಪಿಎಲ್ ಪಂದ್ಯಗಳಲ್ಲಿ ಸಾಲು ಸಾಲು ಪಂದ್ಯಗಳನ್ನು ಸೋತಿರುವ ಹೈದರಾಬಾದ್ ಸನ್ ರೈಸರ್ಸ್, ಟೂರ್ನಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಲು ಸಿದ್ಧತೆ ನಡೆಸಿದೆ. ಟೂರ್ನಿಯಲ್ಲಿ ಸತತ ಗೆಲುವಿನೊಂದಿಗೆ ಅಬ್ಬರಿಸುತ್ತಿರುವ ಡೆಲ್ಲಿ ಚೊಚ್ಚಲ ಐಪಿಎಲ್ ಕಿರೀಟ ಗೆಲ್ಲುವ ತವಕದಲ್ಲಿದೆ. ಉಭಯ ತಂಡದಲ್ಲೂ ಸ್ಟಾರ್ ಆಟಗಾರರ ಪಡೆಯೇ ಇದೆ. ಇದನ್ನೂ ಓದಿ: ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

    ಉಭಯ ತಂಡಗಳ ಬಲಾಬಲ ನೋಡುವುದಾದರೆ ಹೈದರಾಬಾದ್‍ಗಿಂತ, ಡೆಲ್ಲಿ ತಂಡ ಸಮತೋಲನದಿಂದ ಕೂಡಿದೆ. ಡೆಲ್ಲಿ ತಂಡದ ಬ್ಯಾಟಿಂಗ್ ಬಳಗದಲ್ಲಿ ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶಿಮ್ರಾನ್ ಹೆಟ್ಮಿಯರ್ ರಂತ ಹೊಡಿಬಡಿ ಆಟಗಾರರಿದ್ದಾರೆ. ಪ್ರಸ್ತುತ ಈ ಆಟಗಾರರೆಲ್ಲ ಫಾರ್ಮ್‍ನಲ್ಲಿರುವುದು ಡೆಲ್ಲಿ ತಂಡಕ್ಕೆ ಪ್ಲಸ್ ಆಗಲಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಆರ್, ಅಶ್ವಿನ್, ಅಮಿತ್ ಮಿಶ್ರಾ, ಕಗಿಸೊ ರಬಾಡ, ಎದುರಾಳಿ ತಂಡದ ಆಟಗಾರರನ್ನು ಕಟ್ಟಿಹಾಕಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

    ಹೈದರಾಬಾದ್ ತಂಡದಲ್ಲಿ ನಾಯಕ ಕೇನ್ ವಿಲಿಯಮ್‍ಸನ್, ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿಜಯ್ ಶಂಕರ್ ಬ್ಯಾಟಿಂಗ್ ವಿಭಾಗದಲ್ಲಿ ತಂಡಕ್ಕೆ ಬಲ ತುಂಬಾಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಚಾಂಪಿಯನ್ ಬೌಲರ್ ರಶೀದ್ ಖಾನ್, ಭುವನೇಶ್ವರ್ ಕುಮಾರ್, ಟಿ.ನಟರಾಜನ್, ಸಂದೀಪ್ ಶರ್ಮಾ ಎದುರಾಳಿಗಳನ್ನು ಕಟ್ಟಿಹಾಕಬಲ್ಲರು. ಆದರೆ ಭಾರತದಲ್ಲಿ ಸನ್ ರೈಸರ್ಸ್ ತಂಡದ ಆಟಗಾರರು ಹೇಳಿಕೊಳ್ಳುವಂತ ಪ್ರದರ್ಶನ ನೀಡದಿಲ್ಲದಿರುವು ತಂಡಕ್ಕೆ ಕೊಂಚ ಹಿನ್ನಡೆಯಾಗಬಲ್ಲದು. ಅಲ್ಲದೆ ಸ್ಟಾರ್ ಆಟಗಾರ ಜಾನಿ ಬೈರ್ ಸ್ಟೊ ಈ ಬಾರಿ ಐಪಿಎಲ್‍ನಲ್ಲಿ ಆಡದಿರಲು ನಿರ್ಧಾರಿಸಿದ್ದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

    ಡೆಲ್ಲಿ ತಂಡದಲ್ಲಿ ನಾಯಕ ರಿಷಭ್ ಪಂತ್ ಉತ್ತಮ ಫಾರ್ಮ್‍ನಲ್ಲಿದ್ದು, ಇಂದು ಕೂಡ ಉತ್ತಮ ಪ್ರದರ್ಶನ ನೀಡುವ ಹಂಬಲದಲ್ಲಿದ್ದಾರೆ. ಇನ್ನು ಸೋತು ಸುಣ್ಣವಾಗಿರುವ ಹೈದಾರಬಾದ್ ತಂಡ ಗೆಲುವಿನ ಟ್ರ್ಯಾಕ್‍ಗೆ ಮರಳುವ ತವಕದಲ್ಲಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭಗೊಳ್ಳಲಿದ್ದು ಗೆಲುವಿಗಾಗಿ ಉಭಯ ತಂಡಗಳು ಕಾದಾಟ ನಡೆಸಲಿವೆ.

  • ಕೊಹ್ಲಿ, ವಿಲಿಯಮ್ಸನ್ ನಡುವಿನ ನಾಯಕತ್ವ ವಿಭಿನ್ನತೆ ನೋಡಲು ಕಾತುರ-ಬ್ರೆಟ್ ಲೀ

    ಕೊಹ್ಲಿ, ವಿಲಿಯಮ್ಸನ್ ನಡುವಿನ ನಾಯಕತ್ವ ವಿಭಿನ್ನತೆ ನೋಡಲು ಕಾತುರ-ಬ್ರೆಟ್ ಲೀ

    ಸಿಡ್ನಿ: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದುಕೊಂಡಿದೆ. ಈ ನಡುವೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ನಡುವೆ ಇರುವಂತಹ ನಾಯಕತ್ವದ ವಿಭಿನ್ನತೆಯನ್ನು ನೋಡಲು ಕಾತುರನಾಗಿದ್ದೇನೆ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ವೇಗಿ ಬ್ರೆಟ್ ಲೀ ತಿಳಿಸಿದ್ದಾರೆ.

    ಸ್ಥಳೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಭಾಗವಹಿಸಿ ಮಾತನಾಡಿದ ಬ್ರೆಟ್ ಲೀ, ಮುಂದೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನ ಎರಡು ತಂಡದ ನಾಯಕರ ನಾಯಕತ್ವ ಮತ್ತು ಆಟ ವಿಭಿನ್ನವಾಗಿದೆ ವಿಲಿಯಮ್ಸನ್ ಶಾಂತಚಿತ್ತದ ನಾಯಕನಾದರೆ, ಕೊಹ್ಲಿ ಆಕ್ರಮಣಕಾರಿ ನಾಯಕತ್ವವನ್ನು ತೋರುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ:ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ಗೆ ಭಾರತ ತಂಡ ಪ್ರಕಟ -ಮೂವರು ಕನ್ನಡಿಗರಿಗೆ ಸ್ಥಾನ

    ವಿರಾಟ್ ನಾಯಕತ್ವ ಮತ್ತು ಬ್ಯಾಟಿಂಗ್ ಎರಡರಲ್ಲೂ ಆಕ್ರಮಣಕಾರಿಯಾಗಿ ಕಾಣಿಸಿಕೊಂಡರೆ, ವಿಲಿಯಮ್ಸನ್ ಶಾಂತಚಿತ್ತರಾಗಿ ನಾಯಕತ್ವ ನಿಭಾಯಿಸುತ್ತಾರೆ ಇದರೊಂದಿಗೆ ಅವರು ಸಮಯಕ್ಕೆ ಸರಿಯಾಗಿ ಬ್ಯಾಟಿಂಗ್‍ನಲ್ಲಿ ಆಕ್ರಮಣಕಾರಿ ಆಟಕ್ಕೆ ಮೊರೆ ಹೋಗುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ರೆಟ್ರೋ ಶೈಲಿಯ ಜೆರ್ಸಿಯಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    ಈ ಇಬ್ಬರೂ ಆಟಗಾರರ ಆಟ ಮತ್ತು ನಾಯಕತ್ವ ಗುಣ ಬೇರೆ ಬೇರೆಯಾಗಿದ್ದು, ವಿಲಿಯಮ್ಸನ್ ಬೋರ್ ಆಗದ ರೀತಿಯಲ್ಲಿ ಸಾಂಪ್ರಾದಾಯಿಕ ನಾಯಕತ್ವನ್ನು ನಿಭಾಯಿಸುತ್ತಿದ್ದಾರೆ ಮತ್ತು ಅವರ ಕ್ರಿಕೆಟ್ ಜ್ಞಾನ ಮೆಚ್ಚುವಂತದ್ದಾಗಿದೆ. ಕೊಹ್ಲಿ ಕೂಡ ಕ್ರಿಕೆಟ್‍ನಲ್ಲಿ ಸಾಕಷ್ಟು ಅನುಭವ ಹೊಂದಿದ್ದು ಇದೀಗ ಈ ಇಬ್ಬರು ವಿಭಿನ್ನ ನಾಯಕರ ಕಾದಾಟ ನೋಡಲು ಕಾತುರನಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ವಿಶ್ವಕಪ್‍ಗಾಗಿ ಐಸಿಸಿ ಮಹತ್ವದ ನಿರ್ಧಾರ – ಬದಲಾವಣೆಯ ಪರ್ವ ಆರಂಭ

    ಭಾರತ ಹಾಗೂ ನ್ಯೂಜಿಲ್ಯಾಂಡ್ ತಂಡಗಳ ನಡುವೆ ಟೆಸ್ಟ್ ಚಾಂಪಿಯನ್‍ಶಿಪ್ ಜೂನ್ 18ರಿಂದ ಸೌಥಾಂಪ್ಟನ್‍ನಲ್ಲಿ ನಡೆಯಲಿದ್ದು, ಈಗಾಗಲೇ ಭಾರತ ತಂಡ ಇಂಗ್ಲೆಂಡ್‍ನಲ್ಲಿ ಕ್ವಾರಂಟೈನ್‍ಗೆ ಒಳಗಾಗಿದೆ.

  • ವಿಲಿಯಮ್ಸನ್ ಬೆನ್ನಲ್ಲೇ ನಾಯಿಗೆ ಕ್ಯಾಚ್ ಟ್ರೈನಿಂಗ್ ಕೊಟ್ಟ ಅಯ್ಯರ್

    ವಿಲಿಯಮ್ಸನ್ ಬೆನ್ನಲ್ಲೇ ನಾಯಿಗೆ ಕ್ಯಾಚ್ ಟ್ರೈನಿಂಗ್ ಕೊಟ್ಟ ಅಯ್ಯರ್

    ನವದೆಹಲಿ: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೆನ್ನಲ್ಲೇ ಟೀಂ ಇಂಡಿಯಾ ಯುವ ಆಟಗಾರ ಶ್ರೇಯಸ್ ಅಯ್ಯರ್ ಅವರು ತಮ್ಮ ಸಾಕು ನಾಯಿಗೆ ಕ್ಯಾಚ್ ಹಿಡಿಯುವುದನ್ನು ಕಲಿಸಿದ್ದಾರೆ.

    ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಕ್ರೀಡಾಪಟುಗಳು, ಕ್ರಿಕೆಟಿಗರು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಅವರಲ್ಲಿ ಕೆಲವರು ತಮ್ಮ ಪ್ರೀತಿಪಾತ್ರರ ಜೊತೆ ಸಮಯ ಕಳೆಯುವುದರಲ್ಲಿ ನಿರತರಾಗಿದ್ದರೆ. ಇನ್ನು ಕೆಲವರು ತಮ್ಮ ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ವಿಡಿಯೋ, ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

    https://www.instagram.com/p/B-O4UB-nQ87/

    ಕೇನ್ ವಿಲಿಯಮ್ಸನ್ ಅವರು ಇತ್ತೀಚೆಗೆ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ನಾಯಿ ಸ್ಯಾಂಡಿ ಜೊತೆ ಕ್ರಿಕೆಟ್ ಆಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ, ವಿಲಿಯಮ್ಸನ್ ಬಾಲ್ ಅನ್ನು ತಮ್ಮ ನಾಯಿ ಸ್ಯಾಂಡಿ ಕಡೆಗೆ ಹೊಡೆಯುತ್ತಾರೆ. ಆಗ ಸ್ಯಾಂಡಿ ಕ್ಯಾಚ್ ಹಿಡಿಯುತ್ತದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಕೂಡ ತಮ್ಮ ನಾಯಿ ಬ್ರೆಟ್ಟಿಯೊಂದಿಗೆ ಕ್ರಿಕೆಟ್ ಆಡಿದ್ದಾರೆ. ಮೊದಲ ಪ್ರಯತ್ನದಲ್ಲಿ ಬ್ರೆಟ್ಟಿ ಕ್ಯಾಚ್ ಮಿಸ್ ಮಾಡಿ, ನಂತರ ಹಿಡಿಯುತ್ತದೆ. ಈ ವಿಡಿಯೋ ಅಯ್ಯರ್ ತಮ್ಮ ಟ್ವಿಟ್ಟರ್ ಹಾಗೂ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ‘ಕೇನ್ ವಿಲಿಯಮ್ಸನ್ ಅವರ ನಾಯಿ ಸ್ಯಾಂಡಿ ಬಾಲ್ ಹಿಡಿದಿದ್ದನ್ನು ನೋಡಿದ ನಂತರ ಬೆಟ್ಟಿ ಕೂಡ ಕ್ಯಾಚ್ ಹಿಡಿಯಲು ಬಯಸಿತ್ತು. ಸ್ವಲ್ಪ ಸಮಯ ತೆಗೆದುಕೊಂಡರೂ ಮೊದಲ ಕ್ಯಾಚ್ ಬಿಟ್ಟು, ಎರಡನೇ ಕ್ಯಾಚ್ ಅನ್ನು ಹಿಡಿಯಿತು ಎಂದು ಶ್ರೇಯಸ್ ಅಯ್ಯರ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

  • 2 ದಿನಗಳಲ್ಲಿ ಕೇವಲ 4 ಗಂಟೆ ಮಲಗಿ 3 ವಿಕೆಟ್ ಕಿತ್ತು ಮಿಂಚಿದ ಇಶಾಂತ್

    2 ದಿನಗಳಲ್ಲಿ ಕೇವಲ 4 ಗಂಟೆ ಮಲಗಿ 3 ವಿಕೆಟ್ ಕಿತ್ತು ಮಿಂಚಿದ ಇಶಾಂತ್

    – ಭಾರತ ಭರವಸೆ ಜೀವಂತವಾಗಿಸಿದ ಶರ್ಮಾ

    ವೆಲ್ಲಿಂಗ್ಟನ್: ಟೀಂ ಇಂಡಿಯಾ ವೇಗ ಬೌಲರ್ ಇಶಾಂತ್ ಶರ್ಮಾ ಕಳೆದ ಎರಡು ದಿನಗಳಲ್ಲಿ ಕೇವಲ 4 ಗಂಟೆಗಳ ಕಾಲ ಮಲಗಿದ್ದಾರೆ. ಇದರ ಹೊರತಾಗಿಯೂ ಅವರು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 3 ವಿಕೆಟ್‍ಗಳನ್ನು ಕಬಳಿಸುವ ಮೂಲಕ ಭಾರತದ ಭರವಸೆಯನ್ನು ಜೀವಂತವಾಗಿರಿಸಿದ್ದಾರೆ. ಆದಾಗ್ಯೂ, ತಮ್ಮ ಬೌಲಿಂಗ್ ಪ್ರದರ್ಶನ ತೃಪ್ತಿ ನೀಡಿಲ್ಲ ಎಂದು ಇಶಾಂತ್ ಶರ್ಮಾ ಹೇಳಿದ್ದಾರೆ.

    ಎರಡನೇ ದಿನದ ಆಟ ಮುಗಿದ ಬಳಿಕ ಮಾತನಾಡಿದ ಇಶಾಂತ್, ನನ್ನ ಬೌಲಿಂಗ್ ಪ್ರದರ್ಶನದಿಂದ ನಾನು ಸಂತೋಷವಾಗಿಲ್ಲ. ಏಕೆಂದರೆ ಕಳೆದ ಎರಡು ದಿನಗಳಿಂದ ನಾನು ಮಲಗಲಿಲ್ಲ. ಇದು ನನ್ನ ಬೌಲಿಂಗ್ ಮೇಲೆ ಪರಿಣಾಮ ಬೀರಿತು. ಹೇಗೆ ಬೌಲಿಂಗ್ ಮಾಡಬೇಕು ಎಂದುಕೊಂಡಿದ್ದೆನೋ ಹಾಗೆ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ತಂಡವು ನನ್ನನ್ನು ಆಡಲು ಕೇಳಿದ ತಕ್ಷಣವೇ ಮೈದಾಕ್ಕೆ ಇಳಿಯಲು ಮುಂದಾದೆ. ತಂಡಕ್ಕಾಗಿ ಏನು ಬೇಕಾದರೂ ಮಾಡಲು ನಾನು ಸಿದ್ಧನಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ವಿನಾಕಾರಣ ರನೌಟ್ ಆಗಿ ಟೀಕೆಗೆ ಗುರಿಯಾದ ಪಂತ್- ವಿಡಿಯೋ

    ಇಶಾಂತ್ ಮೂರು ದಿನಗಳ ಹಿಂದೆ 24 ಗಂಟೆಗಳ ಪ್ರಯಾಣದ ಮೂಲಕ ನ್ಯೂಜಿಲೆಂಡ್‍ಗೆ ಆಗಮಿಸಿದ್ದರು. ಇದೇ ವಿಚಾರವಾಗಿ ಮಾತನಾಡಿದ ಅವರು, ಕಳೆದ ರಾತ್ರಿ ನಾನು ಕೇವಲ 40 ನಿಮಿಷ ಮಾತ್ರ ನಿದ್ರೆ ಮಾಡಲು ಸಾಧ್ಯವಾಯಿತು. ಟೆಸ್ಟ್ ಪಂದ್ಯದ ಮೊದಲು ನಾನು ದಿನ 3 ಗಂಟೆ ಮಾತ್ರ ಮಲಗಿದ್ದೆ ಎಂದರು.

    ಪಾದದ ನೋವಿನ ನಂತರ ಟೆಸ್ಟ್ ಆಡುವ ಬಗ್ಗೆ ಯೋಚಿಸಿರಲಿಲ್ಲ. ಆದರೆ ನನ್ನ ಆಟದ ಶ್ರೇಯಸ್ಸು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಸಹಾಯಕ ಸಿಬ್ಬಂದಿಗೆ ಸಲ್ಲುತ್ತದೆ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆಡುತ್ತೇನೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ. ಏಕೆಂದರೆ ಪಾದದ ಸ್ನಾಯುಗಳಿಗೆ ಗಂಭೀರವಾದ ಗಾಯವಾಗಿದೆ ಅಂತ ಎಂಆರ್‍ಐ ಸ್ಕ್ಯಾನ್‍ನಲ್ಲಿ ತಿಳಿಸಲಾಗಿತ್ತು. ತಜ್ಞರು 6 ವಾರಗಳ ಕಾಲ ವಿಶ್ರಾಂತಿ ನೀಡುವಂತೆ ಸಲಹೆ ನೀಡಿದ್ದರು. ಆದರೆ ನಾನು ಬೇಗ ಚೇತರಿಸಿಕೊಳ್ಳಲು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಸಹಾಯಕ ಸಿಬ್ಬಂದಿ ಶ್ರಮಿಸಿದರು ಎಂದು ನೆನೆದರು.

    ವೆಲ್ಲಿಂಗ್ಟನ್‍ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 5 ವಿಕೆಟ್‍ಗೆ 216 ರನ್ ಗಳಿಸಿದೆ. ಇದಕ್ಕೂ ಮುನ್ನ ಭಾರತದ ಎರಡನೇ ದಿನದಾಟವಾಡಿ 165 ರನ್ ಆಲೌಟ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕಿವಿ ತಂಡವು ಭಾರತಕ್ಕಿಂತ 51 ರನ್‍ಗಳ ಮುನ್ನಡೆ ಸಾಧಿಸಿದೆ.

    ನ್ಯೂಜಿಲೆಂಡ್ ಪರ ಕೇನ್ ವಿಲಿಯಮ್ಸನ್ 89 ರನ್, ರಾಸ್ ಟೇಲರ್ 44 ರನ್, ಟಾಮ್ ಬ್ಲೆಂಡಾಲ್ 30 ರನ್, ಬಿಜೆ ವಾಟ್ಲಿಂಗ್ ಅಜೇಯ 14 ರನ್ ಹಾಗೂ ಕಾಲಿನ್ ಡಿ ಗ್ರ್ಯಾಂಡ್‍ಹೋಮ್ ಔಟಾಗದೆ 4 ರನ್ ಗಳಿಸಿದ್ದಾರೆ. ಇದೇ ಸಮಯದಲ್ಲಿ ಭಾರತದ ವೇಗದ ಬೌಲರ್ ಇಶಾಂತ್ ಶರ್ಮಾ 3 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 1 ವಿಕೆಟ್ ಕಿತ್ತರು.

  • ಪಂದ್ಯದಲ್ಲಿ ಗೆದ್ದಿದ್ಯಾರು? ಮೆಚ್ಚುಗೆಗೆ ಪಾತ್ರವಾಯ್ತು ಕೊಹ್ಲಿ ಮಾತು

    ಪಂದ್ಯದಲ್ಲಿ ಗೆದ್ದಿದ್ಯಾರು? ಮೆಚ್ಚುಗೆಗೆ ಪಾತ್ರವಾಯ್ತು ಕೊಹ್ಲಿ ಮಾತು

    ಮೌಂಟ್ ಮಾಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಟಿಟ್ವೆಂಟಿ ಸರಣಿಯನ್ನು ಟೀಂ ಇಂಡಿಯಾ 5-0 ಅಂತರದಲ್ಲಿ ಗೆದ್ದು ಬೀಗಿದೆ. ಸದ್ಯ ನಾಯಕ ವಿರಾಟ್ ಕೊಹ್ಲಿ ಮಾತುಗಳನ್ನು ಕೇಳಿದ್ರೆ ಪಂದ್ಯದಲ್ಲಿ ಗೆದ್ದಿದ್ಯಾರು ಎಂಬ ಸಣ್ಣ ಪ್ರಶ್ನೆಯೊಂದು ಹುಟ್ಟಿಕೊಳ್ಳುತ್ತದೆ. ಸರಣಿ ಗೆಲುವಿನ ಬಳಿಕ ಕೊಹ್ಲಿ ನ್ಯೂಜಿಲೆಂಡ್ ತಂಡದ ಪರವಾಗಿ ಮೆಚ್ಚುಗೆಯ ಮಾತುಗಳನ್ನಾಡಿದ್ದನ್ನು ಕೇಳಿ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಭಾನುವಾರ ಪಡೆದ ನಡೆದ ಪಂದ್ಯದಿಂದ ಇತ್ತಂಡಗಳ ನಾಯಕರು ವಿಶ್ರಾಂತಿ ಪಡೆದಿದ್ದರು. ಪಂದ್ಯದ ವೀಕ್ಷಿಸುತ್ತಾ ವಿರಾಟ್ ಕೊಹ್ಲಿ ಮತ್ತು ಕೇನ್ ವಿಲಿಯಮ್ಸನ್  ಮಾತನಾಡುತ್ತಿದ್ದ ಕೆಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಪಂದ್ಯದ ಬಳಿಕ ಕೊಹ್ಲಿ ಅವರಿಗೆ ನ್ಯೂಜಿಲೆಂಡ್ ತಂಡದ ನಾಯಕನ ಬಗ್ಗೆ ಕೇಳಿದಾಗ ವಿಲಿಯಮ್ಸನ್  ಬಗ್ಗೆ ಮೆಚ್ಚುಗೆ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ: 10 ರನ್ ಅಂತರದಲ್ಲಿ 4 ವಿಕೆಟ್ ಪತನ- ಕಿವೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

    ಕೊಹ್ಲಿ ಹೇಳಿದ್ದೇನು? ವಿಲಿಯಮ್ಸನ್ ಮತ್ತು ನನ್ನ ಮಾನೋಭಾವನೆ ಒಂದೇ ಆಗಿದೆ. ಬಹುತೇಕ ಸಂದರ್ಭಗಳಲ್ಲಿಯೂ ಇಬ್ಬರೂ ಒಂದೇ ರೀತಿಯಲ್ಲಿ ಯೋಚಿಸುತ್ತವೆ. ನನ್ನ ಪ್ರಕಾರ ನ್ಯೂಜಿಲೆಂಡ್ ತಂಡ ಸೂಕ್ತ ವ್ಯಕ್ತಿಯ ನಾಯಕತ್ವದಲ್ಲಿದೆ. ತಂಡವನ್ನು ಮುನ್ನಡೆಸಲು ವಿಲಿಯಮ್ಸನ್ ಸೂಕ್ತ ಮತ್ತು ಸಮರ್ಥ ವ್ಯಕ್ತಿ. ಅವರ ಮುಂದಿನ ಭವಿಷ್ಯ ಮತ್ತು ಏಕದಿನ ಸರಣಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸುತ್ತೇನೆ. ಎಲ್ಲ ಕ್ರಿಕೆಟ್ ಅಭಿಮಾನಿಗಳು ನ್ಯೂಜಿಲೆಂಡ್ ತಂಡದ ಆಟವನ್ನು ನೋಡಲು ಇಷ್ಟಪಡುತ್ತಾರೆ. ಇತರೆ ತಂಡಗಳು ನ್ಯೂಜಿಲೆಂಡ್ ಎಂಬ ಬಲಿಷ್ಠ ಟೀಂ ವಿರುದ್ಧ ಆಡಲು ಇಷ್ಟಪಡುತ್ತೇವೆ ಎಂದು ಕೊಹ್ಲಿ ಹೇಳಿದ್ದಾರೆ. ಇದನ್ನೂ ಓದಿ: ಮಿಂಚಿನ ವೇಗದಲ್ಲಿ ರನೌಟ್ ಮಾಡಿದ ರಾಹುಲ್- ವಿಡಿಯೋ

    ಕೊಹ್ಲಿ ಮಾತುಗಳಿಗೆ ಕ್ರಿಕೆಟ್ ಅಂಗಳದಲ್ಲಿ ಮೆಚ್ಚುಗೆ ಕೇಳಿ ಬರುತ್ತಿದೆ. ಟೀಂ ಇಂಡಿಯಾ 5-0 ಅಂತರದಲ್ಲಿ ಗೆದ್ದರೂ, ನ್ಯೂಜಿಲೆಂಡ್ ಒಂದು ಬಲಿಷ್ಠ ತಂಡ ಎಂದು ಕೊಹ್ಲಿ ಹಾಡಿ ಹೊಗಳಿದ್ದಾರೆ. ಕೊಹ್ಲಿ ಮಾತು ಕೇಳಿದವರು ಒಂದು ಕ್ಷಣ ಸರಣಿಯಲ್ಲಿ ಗೆದ್ದಿದ್ಯಾರು ಎಂದು ಪ್ರಶ್ನೆ ಮಾಡಿಕೊಂಡಿದ್ದುಂಟು. ಇದನ್ನೂ ಓದಿ: ಕೆಟ್ಟ ದಾಖಲೆಗೆ ಗುರಿಯಾದ ಶಿವಂ ದುಬೆ

  • ರಾಹುಲ್, ಅಯ್ಯರ್ ಸ್ಫೋಟಕ ಬ್ಯಾಟಿಂಗ್, ಟೀಂ ಇಂಡಿಯಾದ ಎಲ್ಲರಿಂದ ಸಿಕ್ಸರ್ – 6 ವಿಕೆಟ್‍ಗಳ ಜಯ

    ರಾಹುಲ್, ಅಯ್ಯರ್ ಸ್ಫೋಟಕ ಬ್ಯಾಟಿಂಗ್, ಟೀಂ ಇಂಡಿಯಾದ ಎಲ್ಲರಿಂದ ಸಿಕ್ಸರ್ – 6 ವಿಕೆಟ್‍ಗಳ ಜಯ

    – 6 ಎಸೆತಗಳು ಇರುವಂತೆಯೇ 204 ರನ್ ಹೊಡೆದ ಭಾರತ
    – ಶ್ರೇಯಸ್ ಅಯ್ಯರ್‌ಗೆ ಪಂದ್ಯಶ್ರೇಷ್ಠ ಪ್ರಶಸ್ತಿ

    ಆಕ್ಲೆಂಡ್: ಕೆ.ಎಲ್.ರಾಹುಲ್ ಹಾಗೂ ಅಯ್ಯರ್ ಸ್ಫೋಟಕ ಅರ್ಧಶತಕ, ವಿರಾಟ್ ಕೊಹ್ಲಿ ತಾಳ್ಮೆಯ ಬ್ಯಾಟಿಂಗ್‍ನಿಂದ ಟೀಂ ಇಂಡಿಯಾ 6 ವಿಕೆಟ್‍ಗಳ ಜಯ ಸಾಧಿಸಿದೆ.

    ಈಡನ್ ಪಾರ್ಕ್ ನಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ 203 ರನ್ ಗಳ ಭಾರೀ ಮೊತ್ತವನ್ನು ಬೆನ್ನಟ್ಟಿದ ಭಾರತ 6 ಎಸೆತಗಳು ಬಾಕಿ ಇರುವಂತೆ 204 ರನ್ ಗಳಿಸಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

    ಕೆ.ಎಲ್.ರಾಹುಲ್ 56 ರನ್ (27 ಎಸೆತ, 4 ಬೌಂಡರಿ, 3 ಸಿಕ್ಸರ್), ವಿರಾಟ್ ಕೊಹ್ಲಿ 45 ರನ್ (32 ಎಸೆತ, 3 ಬೌಂಡರಿ, ಸಿಕ್ಸ್), ಶ್ರೇಯಸ್ ಅಯ್ಯರ್ ಔಟಾಗದೆ 58 ರನ್ ( 29 ಎಸೆತ, 3 ಸಿಕ್ಸರ್) ಹಾಗೂ ಮನೀಶ್ ಪಾಂಡೆ ಔಟಾಗದೇ 14 ರನ್ (12 ಎಸೆತ, 1 ಸಿಕ್ಸ್) ಗಳಿಸಿದರು. ಟೀಂ ಇಂಡಿಯಾದ ಎಲ್ಲ ಆಟಗಾರರು ಈ ಪಂದ್ಯದಲ್ಲಿ ಸಿಕ್ಸ್ ಹೊಡೆದಿರುವುದು ವಿಶೇಷ. ಕೆ.ಎಲ್.ರಾಹುಲ್ ಹಾಗೂ ಅಯ್ಯರ್ ತಲಾ 3 ಸಿಕ್ಸರ್ ಸಿಡಿಸಿದರೆ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ದುಬೆ, ಮನೀಷ್ ಪಾಂಡೆ ತಲಾ ಒಂದೊಂದು ಸಿಕ್ಸ್ ಹೊಡೆದರು.

    ಕೀವಿಸ್ ತಂಡ ನೀಡಿದ್ದ 204 ರನ್‍ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಭಾರತ ಆರಂಭದಲ್ಲೇ ಆಘಾತದಕ್ಕೆ ಒಳಗಾಯಿತು. 7 ರನ್ ಗಳಿಸಿದ್ದ ಹಿಟ್‍ಮ್ಯಾನ್ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು. ಆಗ ಮೈದಾಕ್ಕಿಳಿದ ವಿರಾಟ್ ಕೊಹ್ಲಿ ಆರಂಭಿಕ ಬ್ಯಾಟ್ಸ್‌ಮನ್‌ ಕೆ.ಎಲ್.ರಾಹುಲ್‍ಗೆ ಸಾಥ್ ನೀಡಿದರು. ಸ್ಫೋಟಕ ಬ್ಯಾಟಿಂಗ್ ತೋರಿದ ಕೆ.ಎಲ್.ರಾಹುಲ್ 23ನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿ ಸ್ಫೋಟಕ ಅರ್ಧಶತಕ ದಾಖಲಿಸಿದರು. ಆದರೆ ಇನ್ನಿಂಗ್ಸ್ ನ 10ನೇ ಓವರ್ ನಲ್ಲಿ ವಿಕೆಟ್ ಒಪ್ಪಿಸಿದರು. ಇವರಿಬ್ಬರು ಎರಡನೇ ವಿಕೆಟಿಗೆ 51 ಎಸೆತಗಳಲ್ಲಿ 99 ರನ್ ಜೊತೆಯಾಟವಾಡಿದರು. ತಂಡದ ಮೊತ್ತ 115 ರನ್ ಆಗಿದ್ದಾಗ ರಾಹುಲ್ ಔಟಾದರೆ 121 ರನ್ ಆದಾಗ 45 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ವಿಕೆಟ್ ಒಪ್ಪಿಸಿ ಪೆವಿಲಿಯನ್‍ಗೆ ತೆರಳಿದರು.

    ಬಳಿಕ ಮೈದಾಕ್ಕಿಳಿದ ಶಿವಂ ದುಬೈ 13 ರನ್ (9 ಎಸೆತ, ಬೌಂಡರಿ, 1 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆ ಶ್ರೇಯಸ್ ಅಯ್ಯರ್ ಅವರಿಗೆ ಮನೀಶ್ ಪಾಂಡೆ ಸಾಥ್ ನೀಡಿದರು. ಈ ಜೋಡಿ ವಿಕೆಟ್ ಕಾಯ್ದುಕೊಂಡು ತಂಡದ ಗೆಲುವಿಗೆ ಪಾತ್ರರಾದರು. ಶ್ರೇಯಸ್ ಅಯ್ಯರ್ ಔಟಾಗದೆ 58 ರನ್ ಹಾಗೂ ಮನೀಶ್ ಪಾಂಡೆ 14 ರನ್ ಗಳಿಸಿದರು. ಇನ್ನಿಂಗ್ಸ್ ನ 19ನೇ ಓವರ್‌ನ ಕೊನೆಯ ಎಸೆತದಲ್ಲಿ ಶ್ರೇಯಸ್ ಅಯ್ಯರ್ ಸಿಕ್ಸ್ ಸಿಡಿಸಿ ತಂಡವನ್ನು ಗೆಲ್ಲಿಸಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ತಂಡವು ಕಾಲಿನ್ ಮನ್ರೊ 59 ರನ್ (42 ಎಸೆತ, 6ಬೌಂಡರಿ, 2 ಸಿಕ್ಸರ್), ಕೇನ್ ವಿಲಿಯಮ್ಸನ್ 51 ರನ್ (26 ಎಸೆತ, 4 ಬೌಂಡರಿ, 4 ಸಿಕ್ಸರ್), ರಾಸ್ ಟೇಲರ್ 54 ರನ್ (27 ಎಸೆತ, 3 ಬೌಂಡರಿ, 3 ಸಿಕ್ಸರ್) ಹಾಗೂ ಮಾರ್ಟಿನ್ ಗಪ್ಟಿಲ್ 30 ರನ್ (19 ಎಸೆತ, 4 ಬೌಂಡರಿ, ಸಿಕ್ಸ್) ಸಹಾಯದಿಂದ 7 ವಿಕೆಟ್ ನಷ್ಟಕ್ಕೆ 203 ರನ್ ಪೇರಿಸಿತ್ತು. 58 ರನ್ ಹೊಡೆದು ಜಯದಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಶ್ರೇಯಸ್ ಅಯ್ಯರ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಧೋನಿಯನ್ನು ಹಿಂದಿಕ್ಕಿದ ವಿಲಿಯಮ್ಸನ್:
    ನಾಯಕನಾಗಿ ಟಿ20ಯಲ್ಲಿ ಅತಿ ಹೆಚ್ಚು ಗಳಿಸಿ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರನ್ನು ಹಿಂದಿಕ್ಕಿದ್ದಾರೆ. ಈ ಸಾಲಿನಲ್ಲಿ ದಕ್ಷಿಣ ಆಫ್ರಿಕಾದ ಫಾ ಡು ಪ್ಲೆಸಿಸ ಅಗ್ರಸ್ಥಾನದಲ್ಲಿದ್ದಾರೆ. ಡು ಪ್ಲೆಸಿಸ್ 1,273 ರನ್ ಗಳಿಸಿ ಮುಂಚೂಣಿಯಲ್ಲಿ ಇದ್ದಾರೆ. ಈ ಪಂದ್ಯದಲ್ಲಿ 51 ಗಳಿಸುವ ಮೂಲಕ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನಕ್ಕೆ ಏರಿದ್ದಾರೆ. ವಿಲಿಯಮ್ಸನ್ ನಾಯಕನಾಗಿ ಟಿ20ಯಲ್ಲಿ 1134 ರನ್ ಗಳಿಸಿದ್ದಾರೆ. ಮೂರನೇ ಸ್ಥಾನಕ್ಕೆ ಕುಸಿದಿರುವ ಎಂ.ಎಸ್.ಧೋನಿ 1,112 ರನ್ ಗಳಿಸಿದ್ದರು. ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 1,077 ರನ್ ಗಳಿಸಿದ್ದಾರೆ.

    ಆಕ್ಲೆಂಡ್ ಮೈದಾನ ಬಹಳ ಸಣ್ಣಾಗಿದ್ದು ಈ ಸ್ಟೇಡಿಯಂನಲ್ಲಿ ರಗ್ಬಿ ಆಡಲು ಬಳಕೆ ಮಾಡುತ್ತಾರೆ. ಪಿಚ್ ನಿಂದ ಬೌಂಡರಿಗೆ 55 ಮೀಟರ್ ದೂರವಿದೆ. ಹೀಗಾಗಿ ಈ ಪಿಚ್ ನಲ್ಲಿ ಬ್ಯಾಟ್ಸ್ ಮನ್ ಗಳು ಬೌಂಡರಿ, ಸಿಕ್ಸರ್ ಗಳನ್ನು ಸುಲಭವಾಗಿ ಹೊಡೆಯುತ್ತಾರೆ.

    ಭಾರತದ ರನ್ ಏರಿದ್ದು ಹೇಗೆ?
    ಎಸೆತ – ರನ್
    29 ಎಸೆತ – 50 ರನ್
    53 ಎಸೆತ – 100 ರನ್
    90 ಎಸೆತ – 150 ರನ್
    114 ಎಸೆತ – 204 ರನ್