Tag: ಕೇರಳ ಬಾಂಬ್‌ ಬ್ಲಾಸ್ಟ್‌

  • ಬುದ್ಧಿವಂತ.. ಗಲ್ಫ್‌ ರಾಷ್ಟ್ರದಲ್ಲಿ ಒಳ್ಳೆ ಸಂಬಳದ ಕೆಲಸ ಬಿಟ್ಟು ಬಾಂಬ್‌ ಸ್ಫೋಟಿಸಿದ್ಯಾಕೆ; ತಲೆ ಕೆಡಿಸಿಕೊಂಡ ಪೊಲೀಸರು

    ಬುದ್ಧಿವಂತ.. ಗಲ್ಫ್‌ ರಾಷ್ಟ್ರದಲ್ಲಿ ಒಳ್ಳೆ ಸಂಬಳದ ಕೆಲಸ ಬಿಟ್ಟು ಬಾಂಬ್‌ ಸ್ಫೋಟಿಸಿದ್ಯಾಕೆ; ತಲೆ ಕೆಡಿಸಿಕೊಂಡ ಪೊಲೀಸರು

    ತಿರುವನಂತಪುರಂ: ಮೂರು ದಿನಗಳ ಹಿಂದೆ ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರದಲ್ಲಿ ಬಾಂಬ್‌ ಸ್ಫೋಟದ (Kerala Blasts) ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದ ಡೊಮಿನಿಕ್ ಮಾರ್ಟಿನ್ ಅಸಾಧಾರಣ ಬುದ್ಧಿವಂತ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ. ಆರೋಪಿಯ ಜೀವನ, ವೃತ್ತಿ ಬಗ್ಗೆಯೂ ಮಾಹಿತಿ ಹಂಚಿಕೊಂಡಿದ್ದಾರೆ.

    ಕೊಲ್ಲಿ ರಾಷ್ಟ್ರದಲ್ಲಿ (Gulf) ಕೈತುಂಬ ಸಂಬಳ ಸಿಗುತ್ತಿದ್ದ ಕೆಲಸ ಬಿಟ್ಟು ಬಂದಿದ್ದ. ಅಸಾಧಾರಣ ಬುದ್ಧಿವಂತಿಕೆ ಮತ್ತು ಶ್ರದ್ಧೆಯ ವ್ಯಕ್ತಿ ಈತ. ಆಘಾತಕಾರಿ ಕೃತ್ಯಕ್ಕಾಗಿ ಒಳ್ಳೆ ಸಂಬಳದ ಕೆಲಸ ಬಿಟ್ಟು ಬಂದು ಬಾಂಬ್‌ ಸ್ಫೋಟಿಸಿದ್ಯಾಕೆ ಎಂಬುದು ಅಧಿಕಾರಿಗಳನ್ನು ಗೊಂದಲಕ್ಕೀಡು ಮಾಡಿದೆ. ಎಲೆಕ್ಟ್ರಾನಿಕ್ಸ್‌ನಲ್ಲಿ ಆತನ ಪ್ರವೀಣತೆಯನ್ನು ಪೊಲೀಸರು ಗಮನಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಸ್ಫೋಟ ಪ್ರಕರಣ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

    ಮಂಗಳವಾರ ವಿಶೇಷ ತನಿಖಾ ತಂಡ, ಮಾರ್ಟಿನ್‌ನನ್ನು ಆಲುವಾ ಬಳಿಯ ಅಥಣಿಯಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ದಿದ್ದು ನಿರ್ಣಾಯಕ ಸಾಕ್ಷ್ಯಾಧಾರಗಳ ಅನ್ವೇಷಣೆ ನಡೆಸಿದೆ. ಆರೋಪಿ ಸ್ಫೋಟಕ ಸಾಧನೆಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದಾನೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

    ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದೆ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೇ 50 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಸ್ಫೋಟಕ್ಕೆ ಬಳಸಿದ ವಸ್ತುಗಳು ಯಾವುವು? ಸ್ಫೋಟಕ ಹೇಗೆ ತಯಾರಿಸಲಾಯಿತು ಎಂಬ ಬಗ್ಗೆ ಆರೋಪಿ ವಿವರಗಳನ್ನು ಪೊಲೀಸರಿಗೆ ನೀಡಿದ್ದಾನೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ಆರೋಪಿ ಮಾರ್ಟಿನ್ ಭಾನುವಾರ ಪೊಲೀಸರ ಮುಂದೆ ಶರಣಾದಾಗ, ತಾನು ಖರೀದಿಸಿದ ಸಾಮಗ್ರಿಗಳ ಬಿಲ್‌ಗಳನ್ನು ನೀಡಿದ್ದಾನೆ. ಇದು ಆತನ ವಿರುದ್ಧದ ಪ್ರಕರಣವನ್ನು ಮತ್ತಷ್ಟು ಬಲಪಡಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ವಿದೇಶದಲ್ಲಿ ಒಳ್ಳೆ ಕೆಲಸದಲ್ಲಿದ್ದ ಮಾರ್ಟಿನ್ ಸ್ಫೋಟದಲ್ಲಿ ಏಕೆ ಭಾಗಿಯಾಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳಲು ತನಿಖಾ ತಂಡವು ಇನ್ನೂ ಕಾರ್ಯನಿರ್ವಹಿಸುತ್ತಿದೆ. ಪ್ರಕರಣ ಮುಂದುವರಿದಂತೆ ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆ ಇದೆ. ಇದನ್ನೂ ಓದಿ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತೀಯ ದ್ವೇಷಕ್ಕೆ ಪ್ರಚೋದನೆ ಆರೋಪ – ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸ್‌

    ಮತೀಯ ದ್ವೇಷಕ್ಕೆ ಪ್ರಚೋದನೆ ಆರೋಪ – ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸ್‌

    ತಿರುವನಂತಪುರಂ: ಕೇರಳದ ಕಲಮಶ್ಯೇರಿಯಲ್ಲಿ ಇತ್ತೀಚೆಗೆ ನಡೆದ ಬಾಂಬ್‌ ಬ್ಲಾಸ್ಟ್‌ ಹಿನ್ನೆಲೆಯಲ್ಲಿ ವಿವಿಧ ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡಿಸುವ ಹೇಳಿಕೆ ನೀಡಿದ್ದ ಆರೋಪದ ಮೇಲೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrashekhar) ವಿರುದ್ಧ ಕೇರಳದಲ್ಲಿ ಪ್ರಕರಣ ದಾಖಲಾಗಿದೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಜಂಟಿಯಾಗಿ ಅವರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153(A), ಸೆಕ್ಷನ್ 120(o) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

    ಮಲಪ್ಪುರಂ ಜಿಲ್ಲೆಯಲ್ಲಿ ಇಸ್ಲಾಮಿಸ್ಟ್ ಗ್ರೂಪ್ (Islamic Group) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಹಮಾಸ್ ನಾಯಕನ ವರ್ಚುವಲ್ ಭಾಷಣ ಮತ್ತು ಕೊಚ್ಚಿ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಸಚಿವರು ಇತ್ತೀಚೆಗೆ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕೇರಳ ಪೊಲೀಸರ (Kerala Police) ಸೈಬರ್ ಸೆಲ್‌ ಎಫ್‌ಐಆರ್ ದಾಖಲಿಸಿದೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ಕೇರಳದಲ್ಲಿ ಬಾಂಬ್‌ ಬ್ಲಾಸ್ಟ್‌ ಬೆನ್ನಲ್ಲೇ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಡುವೆ ಮಾತಿನ ಚಕಮಕಿ ಆರಂಭವಾಗಿತ್ತು. ಸ್ಫೋಟದ ನಂತರ, ಚಂದ್ರಶೇಖರ್ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಟೀಕಿಸುವ ಪೋಸ್ಟ್‌ಗಳನ್ನು ಟ್ವಟ್ಟರ್‌ ಎಕ್ಸ್‌ ಖಾತೆಯಲ್ಲಿ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

    ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವ ರಾಜೀವ್‌ ಚಂದ್ರಶೇಖರ್‌, ನಾನು ಯಾವುದೇ ನಿರ್ದಿಷ್ಟ ಸಮುದಾಯದ ಬಗ್ಗೆ ಮಾತನಾಡಿಲ್ಲ. ನಾನು ನಿರ್ದಿಷ್ಟವಾಗಿ ಹಮಾಸ್ ಅನ್ನು ಉಲ್ಲೇಖಿಸಿದ್ದೇನೆ. ಹಮಾಸ್ ಅನ್ನು ಸಮುದಾಯದೊಂದಿಗೆ ಸಮೀಕರಿಸಲು ಪಿಣರಾಯಿ ವಿಜಯನ್ ಬಯಸುತ್ತಿರುವಂತಿದೆ ಎಂದು ದೂರಿದ್ದರು. ಇದನ್ನೂ ಓದಿ: Kerala Bomb Blast: ಬಾಂಬ್ ಇಟ್ಟಿದ್ದು ನಾನೇ ಅಂತಾ ಪೊಲೀಸರಿಗೆ ವ್ಯಕ್ತಿ ಶರಣು!

    ರಾಜೀವ್‌ ಚಂದ್ರಶೇಖರ್‌ ಟ್ವೀಟ್‌ನಲ್ಲಿ ಏನಿತ್ತು?
    ಕಾಂಗ್ರೆಸ್ ಮತ್ತು ಸಿಪಿಎಂನ ಓಲೈಕೆ ರಾಜಕಾರಣದ ಬೆಲೆಯನ್ನು ಎಲ್ಲ ಸಮುದಾಯಗಳ ಮುಗ್ಧರು ಭರಿಸಬೇಕಾಗುತ್ತದೆ. ಅದನ್ನೇ ಇತಿಹಾಸ ನಮಗೆ ಕಲಿಸಿದೆ. ಭಯೋತ್ಪಾದಕ ಹಮಾಸ್ ಅನ್ನು ದ್ವೇಷ ಹರಡಲು ಮತ್ತು ಕೇರಳದಲ್ಲಿ ಜಿಹಾದ್‌ಗೆ ಕರೆ ನೀಡಲು ಕಾಂಗ್ರೆಸ್/ಸಿಪಿಎಂ/ಯುಪಿಎ/ಇಂಡಿಯಾ ಬ್ಲಾಕ್‌ ಬಳಸಿಕೊಳ್ಳುತ್ತಿವೆ. ಇದು ತುಷ್ಟೀಕರಣ ರಾಜಕೀಯ. ಇದು ಬೇಜವಾಬ್ದಾರಿ ಹುಚ್ಚು ರಾಜಕಾರಣದ ಪರಮಾವಧಿ. ಸಾಕು! ಎಂದು ಟ್ವೀಟ್‌ ಮಾಡಿದ್ದರು.

    ಇದರೊಂದಿಗೆ ನೀವು ನಿಮ್ಮ ಹಿತ್ತಲಿನಲ್ಲಿ ಹಾವುಗಳನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ. ಅವು ನಿಮ್ಮ ನೆರೆಹೊರೆಯವರನ್ನು ಕಚ್ಚುತ್ತವೆ. ಅಂತಿಮವಾಗಿ ಆ ಹಾವುಗಳು ಹಿತ್ತಲಿನಲ್ಲಿ ಯಾರನ್ನು ಕಂಡರೂ ಅವರ ಮೇಲೆ ಆಕ್ರಮಣ ಮಾಡುತ್ತವೆ ಎಂಬ ಹಿಲರಿ ಕ್ಲಿಂಟನ್ ಅವರ ಕೋಟ್‌ ಅನ್ನು ಉಲ್ಲೇಖಿಸಿದ್ದರು.

    ಕೇರಳದ ಕಲಮಶ್ಯೇರಿಯಲ್ಲಿ ಪ್ರಾರ್ಥನಾ ಮಂದಿರದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದರು. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]