Tag: ಕೇರಳ. ಲವ್ ಜಿಹಾದ್

  • ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿ ಕೈಕೊಟ್ಟ ಯುವಕ – ಲವ್‍ಜಿಹಾದ್‍ಗೆ ಯುವತಿ ಬಲಿ?

    ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿ ಕೈಕೊಟ್ಟ ಯುವಕ – ಲವ್‍ಜಿಹಾದ್‍ಗೆ ಯುವತಿ ಬಲಿ?

    ಉಡುಪಿ: ಯುವಕನೊಬ್ಬ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಕೊನೆಗೆ ಕೈಕೊಟ್ಟಿದ್ದಾನೆ. ಈ ಹಿನ್ನೆಲೆ ಯುವತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.

    ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿದ ಯುವಕನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಲ್ಲದೇ ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯಿಸಿ ಕೊನೆಗೆ ಕೈಕೊಟ್ಟು ಪರಾರಿಯಾಗಿದ್ದಾನೆ. ಈ ಹಿನ್ನೆಲೆ ಕುಂದಾಪುರದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರಸ್ತುತ ಯುವಕ ತಲೆಮರೆಸಿಕೊಂಡಿದ್ದಾನೆ. ಹಿಂದೂ ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿದೆ. ಇದನ್ನೂ ಓದಿ: ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಕ್ಲಾಸ್ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ನಡೆದಿದ್ದೇನು?
    ಕೋಟೇಶ್ವರದ ಅಜೀಜ್(32) ಮತ್ತು ಉಪ್ಪಿನಕುದ್ರು ಗ್ರಾಮದ ನಿವಾಸಿ ಶಿಲ್ಪಾ(25) ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಪ್ರೀತಿ-ಪ್ರೇಮ ಇಬ್ಬರ ನಡುವೆ ದೈಹಿಕ ಸಂಪರ್ಕಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಅಜೀಜ್, ಶಿಲ್ಪಾಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಒತ್ತಾಯ ಮಾಡಿದ ಎಂದು ಶಿಲ್ಪಾ ಸಹೋದರ ರಾಘವೇಂದ್ರ ದೂರಿದ್ದಾರೆ.

    ಶಿಲ್ಪಾಳನ್ನು ಪ್ರೀತಿಸುವ ನಾಟಕವಾಡಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ಕೃತ್ಯಕ್ಕೆ ಅಜೀಜ್‍ನ ಹೆಂಡತಿ ಸಲ್ಮಾ ತನ್ನ ಗಂಡನಿಗೆ ಸಹಾಯ ಮಾಡಿದ್ದಾಳೆ ಎಂದು ಹಿಂದೂ ಸಂಘಟನೆಗಳು ಆರೋಪ ಮಾಡಿದೆ. ಇದೇ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಕುಂದಾಪುರ ಪೆÇಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಶಿಲ್ಪಾ ಆತ್ಮಹತ್ಯೆ ಮಾಡಿಕೊಳ್ಳಲು ಅಜೀಜ್ ಪ್ರಚೋದನೆ ನೀಡಿದ್ದಾನೆ. ಈ ಹಿನ್ನೆಲೆ ಅವನನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಫ್ಲ್ಯಾಟಿಗೆ ಕರೆಸಿಕೊಳ್ಳುತ್ತಿದ್ದ ಅಜೀಜ್
    ಮದುವೆಯಾಗಿ ಮಕ್ಕಳಿರುವ ಅಜೀಜ್ ಆಗಾಗ ತನ್ನ ಫ್ಲ್ಯಾಟಿಗೆ ಶಿಲ್ಪಾಳನ್ನು ಕರೆಸಿಕೊಳ್ಳುತ್ತಿದ್ದ. ಈ ವೇಳೆ ಶಿಲ್ಪಾಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಸಂಘಟನೆಗಳು ದೂರಿದೆ. ಕುಂದಾಪುರದ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಶಿಲ್ಪಾಳನ್ನು ಅಜೀಜ್ ಪ್ರೀತಿಯ ಹೆಸರಲ್ಲಿ ನಂಬಿಸಿದ್ದಾನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗಬೇಕು ಎಂದು ನಿರಂತರ ಕಿರುಕುಳ ನೀಡುತ್ತಿದ್ದ ಎಂದು ಸಹೋದರನ ಜೊತೆ ಶಿಲ್ಪಾ ಆಸ್ಪತ್ರೆಯಲ್ಲಿ ಹೇಳಿಕೊಂಡಿದ್ದಾಳೆ.

    ಮತಾಂತರವಾಗಲು ಒಪ್ಪದೇ ಇದ್ದಾಗ ನೀನು ಎಲ್ಲಾದರೂ ಹೋಗಿ ಸಾಯಿ ಎಂದು ಬೈದಿದ್ದ ಎನ್ನಲಾಗಿದೆ ಎಂದು ಶಿಲ್ಪಾಳ ಸಹೋದರ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ ಶಿಲ್ಪಾ ಮತ್ತು ಅಜೀಜ್ ನಡುವಿನ ಸಂಭಾಷಣೆಯ ಫೋಟೋ, ಅವರಿಬ್ಬರೂ ಬಹಳ ಆತ್ಮೀಯವಾಗಿದ್ದ ಫೋಟೋಗಳು ಲಭ್ಯವಾಗಿದೆ. ಇದನ್ನೂ ಓದಿ:  ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಇನ್ಮುಂದೆ ಸಿಗುತ್ತೆ ಇಳಕಲ್ ಸೀರೆ 

    ಅಜೀಜ್ ಅಕ್ರಮ ದನಸಾಗಾಟ ಪಡಿತರ ಅಕ್ಕಿ ಸಾಗಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬ ಆರೋಪ ಸಹ ಕೇಳಿಬರುತ್ತಿದೆ. ಪರಿಣಾಮ ಕುಂದಾಪುರ ಪೊಲೀಸರು ಮೂರು ತಂಡಗಳನ್ನು ರಚಿಸಿ ಆರೋಪಿಯ ಪತ್ತೆಗೆ ಹುಡುಕಾಟ ಮಾಡುತ್ತಿದ್ದಾರೆ.

  • ನಾನು ಯಾವ ಟೈಂನಲ್ಲಾದ್ರೂ ಕೊಲೆಯಾಗ್ಬಹುದು- ಸಹಾಯಕ್ಕೆ ಕೇರಳ ಲವ್ ಜಿಹಾದ್ ಸಂತ್ರಸ್ತೆಯಿಂದ ಮನವಿ

    ನಾನು ಯಾವ ಟೈಂನಲ್ಲಾದ್ರೂ ಕೊಲೆಯಾಗ್ಬಹುದು- ಸಹಾಯಕ್ಕೆ ಕೇರಳ ಲವ್ ಜಿಹಾದ್ ಸಂತ್ರಸ್ತೆಯಿಂದ ಮನವಿ

    ತಿರುವನಂತಪುರ: ಭಾರೀ ವಿವಾದಕ್ಕೀಡಾಗಿ ಕೋರ್ಟ್ ಮೆಟ್ಟಿಲೇರಿದ್ದ ಕೇರಳದ ಲವ್ ಜಿಹಾದ್ ಪ್ರಕರಣದ ಪ್ರಮುಖ ಕೇಂದ್ರ ಬಿಂದುವಾಗಿದ್ದ ಯುವತಿ ಇದೀಗ ಮತ್ತೊಂದು ಹೊಸ ವಿಡಿಯೋ ಮೂಲಕ ಮನವಿ ಮಾಡಿದ್ದಾಳೆ.

    ಯುವತಿ ಅಖಿಲಾ ಅಶೋಕನ್ ಅಥವಾ ಹಾದಿಯಾ ಆಗಸ್ಟ್ 17ರಂದು ಈ ರೀತಿ ಮನವಿ ಮಾಡಿಕೊಂಡಾಗ ಹೋರಾಟಗಾರ ರಾಹುಲ್ ಈಶ್ವರ್ ವಿಡಿಯೋ ಮಾಡಿದ್ದು, ಗುರುವಾರ ಬಹಿರಂಗವಾಗಿದೆ.

    ವಿಡಿಯೋದಲ್ಲೇನಿದೆ?: `ನಾನು ನಾಳೆ ಅಥವಾ ನಾಳಿದ್ದು ಹೀಗೆ ಯಾವುದೇ ಸಮಯದಲ್ಲಿ ಇಲ್ಲಿ ಕೊಲೆಯಾಗಬಹುದು ಅನ್ನೋ ನಂಬಿಕೆ ನನ್ನಲ್ಲಿದೆ. ನನಗೆ ಗೊತ್ತು ತಂದೆಗೆ ನನ್ನ ಮೇಲೆ ವಿಪರೀತ ಸಿಟ್ಟಿದೆ. ನಾನು ನಡೆದುಕೊಂಡು ಹೋಗುವಾಗ ಅವರು ಹೊಡೆಯುತ್ತಾರೆ. ಹಾಗೆಯೇ ಒದೆಯುತ್ತಾರೆ. ಇದರಿಂದ ತಲೆ ಅಥವಾ ನನ್ನ ದೇಹದ ಯಾವುದೇ ಭಾಗಕ್ಕಾಗಾದ್ರೂ ಗಂಭೀರ ಗಾಯಗಳಾಗಿ ಸಾಯುತ್ತೇನೆ. ಹೀಗಾಗಿ ನನ್ನನ್ನು ಇಲ್ಲಿಂದ ಹೊರಗಡೆ ಕರೆದುಕೊಂಡು ಹೋಗಿ ಅಂತ ವಿಡಿಯೋದಲ್ಲಿ ಆಕೆ ಮನವಿ ಮಾಡಿದ್ದಾಳೆ.

    24 ವರ್ಷದ ಹೋಮಿಯೋಪತಿ ವೈದ್ಯೆ ಅಖಿಲ ಇಸ್ಲಾಂಗೆ ಮತಾಂತರಗೊಂಡು ಹೆಸರನ್ನು ಹಾದಿಯಾ ಎಂದು ಬದಲಾಯಿಸಿಕೊಂಡು ಮುಸ್ಲಿಂ ಯುವಕ ಶಫಿನ್ ಜಹಾನ್ ಎಂಬಾತನ ಜತೆ 2016ರಲ್ಲಿ ವಿವಾಹವಾಗಿದ್ದಳು. ಕೇರಳದ ಮಲಪ್ಪುರಂ ಜಿಲ್ಲೆಯಿಂದ ಹಾದಿಯಾಳನ್ನು ಅಪಹರಿಸಿ, ಆಕೆಯ ಗೆಳೆಯರು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಅಂತ ಹಾದಿಯಾ ತಂದೆ ಆರೋಪಿಸಿದ್ದರು.

    ಈ ಕುರಿತು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಇದೊಂದು ಲವ್ ಜಿಹಾದ್ ಎಂದು ಬಣ್ಣಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕೇರಳ ಪೊಲೀಸರಿಗೆ ಆದೇಶ ನೀಡಿತ್ತು. ಅಲ್ಲದೇ ಯುವಕ ಶಫಿನ್ ಜಾಹನ್ ಗೆ ಉಗ್ರರೊಂದಿಗೆ ಸಂಪರ್ಕವಿರುವುದನ್ನು ಕೋರ್ಟ್ ಒಪ್ಪಿಕೊಂಡಿತ್ತು. ಕೇರಳದ ಹಿಂದೂ ಯುವತಿಯೊಬ್ಬಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮುಸ್ಲಿಂ ಯುವಕನ ಜತೆ ವಿವಾಹವಾದ ಪ್ರಕರಣದ ಬಗ್ಗೆ ಎನ್‍ಐಎ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಪ್ರಕರಣದ ವಿಚಾರವನ್ನು ಈ ವರ್ಷದ ಆರಂಭದಲ್ಲಿ ಕೈಗೆತ್ತಿಕೊಂಡ ಹೈ ಕೋರ್ಟ್ ವಯಸ್ಕರ ಒಪ್ಪಿಗೆ ಇಲ್ಲದೇ ಈ ಮದುವೆ ನಡೆಯಲು ಹೇಗೆ ಸಾಧ್ಯ ಅಂತ ಪ್ರಶ್ನಿಸಿತ್ತು.

    ಯುವತಿ ಹಾದಿಯಾ ಈ ಮೊದಲು ಒಂದು ವಿಡಿಯೋ ಬಿಡುಗಡೆ ಮಾಡಿದ್ದು ಅದರಲ್ಲಿ `ಮತಾಂತರಗೊಂಡ ಪ್ರಕರಣ ಬೆಳಕಿಗೆ ಬಳದ ಬಳಿಕ ನನ್ನ ಮನೆಯವರು ನನ್ನ ಕೂಡಿ ಹಾಕಿದ್ದು. ಎಲ್ಲೂ ಹೊರ ಹೊಗುವಂತಿಲ್ಲ. ಅಲ್ಲದೇ ನನ್ನ ಮನೆಯ ಹೊರಗಡೆ ಪೋಲೀಸ್ ಅಧಿಕಾರಿಗಳು ಕೂಡ ಕಾವಲು ಕಾಯುತ್ತಿದ್ದಾರೆ. ಇಲ್ಲಿ ಹೇಗೆ ಜೀವನ ಮಾಡಲು ಸಾಧ್ಯ? ಇದು ನನ್ನ ಜೀವನಾನಾ? ಅಂತ ತನ್ನ ಅಲವತ್ತುಕೊಂಡಿದ್ದಳು.