Tag: ಕೇರಳ ವಿಧಾನಸಭಾ ಚುನಾವಣೆ

  • ಕೇರಳದಲ್ಲಿ ಪಿಣರಾಯಿ ‘ವಿಜಯ’ನ್ ಪತಾಕೆ – ಒಂದಂಕಿಗೆ ಸೀಮಿತವಾದ ಬಿಜೆಪಿ

    ಕೇರಳದಲ್ಲಿ ಪಿಣರಾಯಿ ‘ವಿಜಯ’ನ್ ಪತಾಕೆ – ಒಂದಂಕಿಗೆ ಸೀಮಿತವಾದ ಬಿಜೆಪಿ

    – ಕಾಂಗ್ರೆಸ್ ಬೆಂಬಲಿತ ಯುಡಿಎಫ್‍ಗೆ ನಿರಾಸೆ

    ನವದೆಹಲಿ: ಕೇರಳದಲ್ಲಿ ಸಿಎಂ ಪಿಣರಾಯಿ ವಿಜಯನ್ ವಿಜಯದ ಪತಾಕೆ ಹಾರಿಸಿದ್ದು, ಮತ್ತೊಮ್ಮೆ ಸಿಎಂ ಸ್ಥಾನ ಅಲಂಕರಿಸೋದು ಪಕ್ಕಾ ಆಗಿದೆ. ಚುನಾವಣೋತ್ತರ ಸಮೀಕ್ಷೆಗಳು ಪಿಣರಾಯಿ ವಿಜಯನ್ ಗೆಲುವನ್ನೇ ಹೇಳಿತ್ತು.

    ಪಶ್ಚಿಮ ಬಂಗಾಳದಲ್ಲಿ ಎಲ್‍ಡಿಎಫ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಇಲ್ಲಿ ಅದರ ವಿರುದ್ಧವೇ ರಣರಂಗಕ್ಕೆ ಇಳಿದಿತ್ತು. ಕೇರಳದ ವಯನಾಡು ಕ್ಷೇತ್ರದ ಸಂಸದರಾಗಿರುವ ರಾಹುಲ್ ಗಾಂಧಿ ಸಾಲು ಸಾಲು ಸಮಾವೇಶಗಳಲ್ಲಿ ತೊಡಗಿಕೊಂಡಿದ್ದರು. ರಾಹುಲ್ ಗಾಂಧಿ ಕೇರಳದ ಜನಪ್ರತಿನಿಧಿ ಆಗಿದ್ದರಿಂದ ಕಾಂಗ್ರೆಸ್ ಗೆಲುವಿನ ಬಗ್ಗೆ ಹೆಚ್ಚು ಚರ್ಚೆಗಳು ನಡೆದಿದ್ದವು.

    ಯಾರಿಗೆ ಎಷ್ಟು ಕ್ಷೇತ್ರ?: ಕೇರಳ ಒಟ್ಟು ವಿಧಾನಸಭಾ ಕ್ಷೇತ್ರಗಳು – 140

    * ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ
    ಎಲ್‍ಡಿಎಫ್: 104-120
    ಯುಡಿಎಫ್+ಕಾಂಗ್ರೆಸ್: 20-36
    ಬಿಜೆಪಿ: 0-2
    ಇತರೆ: 0-2

    * ಟೈಮ್ಸ್ ನೌ-ಸಿ ವೋಟರ್
    ಎಲ್‍ಡಿಎಫ್: 74
    ಯುಡಿಎಫ್+ಕಾಂಗ್ರೆಸ್: 65
    ಬಿಜೆಪಿ: 1
    ಇತರೆ: 0

    * ಟುಡೇಸ್ ಚಾಣಕ್ಯ
    ಎಲ್‍ಡಿಎಫ್: 93-111
    ಯುಡಿಎಫ್+ಕಾಂಗ್ರೆಸ್: 26-44
    ಬಿಜೆಪಿ: 0-6
    ಇತರೆ: 0-3

    * ಸಿಎನ್‍ಎಕ್ಸ್
    ಎಲ್‍ಡಿಎಫ್: 72-80
    ಯುಡಿಎಫ್+ಕಾಂಗ್ರೆಸ್: 58-64
    ಬಿಜೆಪಿ: 1-5
    ಇತರೆ: 0

    ಕೇರಳದಲ್ಲಿ ನೆಲೆ ಇಲ್ಲದ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ಆದ್ರೆ ಒಂದಂಕಿ ಸಾಧನೆ ಮಾತ್ರ ಆಗಿದೆ. ಕೊರೊನಾ ಸಮಯದಲ್ಲಿ ನಿರ್ವಹಣೆ ಪಿಣರಾಯಿ ವಿಜಯನ್ ಪ್ಲಸ್ ಪಾಯಿಂಟ್ ಅಂತ ವಿಮರ್ಶಕರು ಒತ್ತಿ ಒತ್ತಿ ಹೇಳಿದ್ದಾರೆ. ಇತ್ತ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅವರನ್ನ ಬಿಜೆಪಿ ಕರೆ ತಂದಿತ್ತು. ಇ.ಶ್ರೀಧರನ್ ಅವರೇ ಬಿಜೆಪಿಯ ಸಿಎಂ ಅಭ್ಯರ್ಥಿ ಅಂತ ಇಡೀ ಚುನಾವಣೆಯಲ್ಲಿ ಬಿಂಬಿತವಾಗಿತ್ತು. ಇತ್ತ ನಮ್ಮ ರಾಜ್ಯದ ಸಚಿವರು ಸಹ ಕೇರಳದಲ್ಲಿ ಕ್ಯಾಂಪೇನ್ ಗಳಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಅಸ್ಸಾಂ ಚಹಾ ತೋಟದಲ್ಲಿ ಎರಡನೇ ಬಾರಿ ಅರಳಿದ ಕಮಲ

    2016ರ ಫಲಿತಾಂಶ: 2016ರಲ್ಲಿ ಪಿಣರಾಯಿ ಸರ್ಕಾರ 91ರ ಶಾಸಕರೊಂದಿಗೆ ಸರ್ಕಾರ ರಚನೆ ಮಾಡಿತ್ತು. ಆಡಳಿತ ವಿರೋಧ ಅಲೆಯ ನಡುವೆಯೂ ಎಲ್‍ಡಿಎಫ್ ಮತ್ತಷ್ಟು ಕ್ಷೇತ್ರ ಗೆದ್ದು ಸರ್ಕಾರ ರಚನೆ ಮಾಡಲಿದೆ ಚುನಾವಣೋತ್ತರ ಸಮೀಕ್ಷೆ ಹೇಳಿದೆ. 2016ರಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ 47 ಸೀಟ್ ಗೆದ್ದಿತ್ತು. ಬಿಜೆಪಿ ಒಂದು ಕ್ಷೇತ್ರದಲ್ಲಿ ಮಾತ್ರ ಕಮಲ ಅರಳಿತ್ತು. ಕೇರಳದ ಜನ ಸಿಎಂ ವಿಜಯನ್ ಅವರನ್ನ ಮತ್ತೊಮ್ಮೆ ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಲು ಇಷ್ಟಪಡುತ್ತಾರೆ. ಮಾಜಿ ಸಿಎಂ ಉಮ್ಮನ್ ಚಾಂಡಿ ಎರಡನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ದೀದಿ ಅಧಿಕಾರಕ್ಕೆ

    ಇದನ್ನೂ ಓದಿ: ಮಸ್ಕಿ, ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ – ಬೆಳಗಾವಿಯಲ್ಲಿ ಮತ್ತೆ ಬಿಜೆಪಿ

  • ಕಾಂಗ್ರೆಸ್-ಎಡಪಕ್ಷಗಳ ನಡ್ವೆ ಫಿಕ್ಸಿಂಗ್: ಪ್ರಧಾನಿ ಮೋದಿ

    ಕಾಂಗ್ರೆಸ್-ಎಡಪಕ್ಷಗಳ ನಡ್ವೆ ಫಿಕ್ಸಿಂಗ್: ಪ್ರಧಾನಿ ಮೋದಿ

    – ಒಬ್ಬರು ಚಿನ್ನ, ಮತ್ತೊಬ್ಬರು ಬೆಳ್ಳಿ ಕದ್ರು

    ತಿರುವನಂತಪುರ: ವಿಧಾನಸಭಾ ಚುನಾವಣೆ ಹಿನ್ನೆಲೆ ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪಲಕ್ಕಾಡದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಮತ್ತು ಎಡಪಕ್ಷಗಳು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿವೆ. ಕೇರಳದ ಜನತೆ ಎಲ್‍ಡಿಎಫ್-ಯುಡಿಎಫ್ ರಾಜಕಾರಣಕ್ಕೆ ಬೇಸತ್ತಿದ್ದು, ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ ಎಂದು ಹೇಳಿದರು.

    ಐದು ವರ್ಷ ಒಬ್ಬರು ಲೂಟಿ ಮಾಡ್ತಾರೆ, ಮತ್ತೈದು ವರ್ಷ ಮತ್ತೊಬ್ಬರು ಕನ್ನ ಹಾಕ್ತಾರೆ. ಒಬ್ಬರು ಚಿನ್ನ ಮತ್ತು ಮತ್ತೊಬ್ಬರು ಬೆಳ್ಳಿ ಕದ್ದರು. ಕಾಂಗ್ರೆಸ್ ಮತ್ತು ಎಡಪಕ್ಷಗಳು ಒಂದೇ ಆಗಿವೆ. ಉತ್ತರ ಪ್ರದೇಶದಲ್ಲಿ ಜೊತೆಯಾಗಿದ್ದು, ಚುನಾವಣೆ ಹಿನ್ನೆಲೆ ಇಲ್ಲಿ ಪ್ರತ್ಯೇಕವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಕೇರಳ ವಿಕಾಸದ ಕುರಿತು ಮಾತನಾಡಿ ಮತಯಾಚನೆ ಮಾಡಿದರು. ದೇಶದ ಜನತೆ ವಿಕಾಸ ಮತ್ತು ವಿಶ್ವಾಸದ ಮೇಲೆ ಬಿಜೆಪಿ ಜೊತೆ ಕೈ ಜೋಡಿಸುತ್ತಿದ್ದಾರೆ ಎಂದು ಹೇಳಿದರು. ಈ ವೇದಿಕೆ ಮೇಲಿದ್ದ ಮೆಟ್ರೋ ಮ್ಯಾನ್ ಇ.ಶ್ರೀಧರನ್ ಅವರನ್ನ ಹಾಡಿ ಹೊಗಳಿದರು. ಕೆಲವರು ಸ್ವಾರ್ಥ ಅಥವಾ ತಮ್ಮ ಲಾಭಕ್ಕಾಗಿ ರಾಜಕಾರಣಕ್ಕೆ ಬರುತ್ತಾರೆ. ಆದ್ರೆ ಶ್ರೀಧರನ್, ತಮ್ಮ ಜೀವನವನ್ನೇ ದೇಶಕ್ಕೆ ಅರ್ಪಿಸಿಕೊಂಡಿದ್ದಾರೆ. ಈ ವಯಸ್ಸಿನಲ್ಲಿಯೂ ಕೇರಳ ಜನತೆಯ ಸೇವೆಗೆ ಮುಂದಾಗಿದ್ದಾರೆ ಎಂದು ಹೇಳಿದರು.

  • ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭ

    ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭ

    – ದೆಹಲಿಯಲ್ಲಿ ವರಿಷ್ಠರ ತಂತ್ರಗಾರಿಕೆ

    ನವದೆಹಲಿ: ಕೇರಳ ವಿಧಾನಸಭಾ ಚುನಾವಣೆಗೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರ ತಂತ್ರಗಾರಿಕೆ ಹಿನ್ನೆಲೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಿವಾಸದಲ್ಲಿ ಮಹತ್ವದ ಸಭೆ ನಡೆಯಿತು.

    ಈ ಬಾರಿ ಕೇರಳ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಶತಾಯಗತಾಯ ಹೆಚ್ಚು ಸ್ಥಾನಗಳಿಸುವ ಗುರಿ ಇಟ್ಟುಕೊಂಡಿದೆ. ಇತ್ತೀಚೆಗೆ ಕರ್ನಾಟಕದವರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಕೇರಳ ಚುನಾವಣೆಯ ಪ್ರಭಾರಿಯಾಗಿ ಬಿಜೆಪಿ ಹೈಕಮಾಂಡ್ ನೇಮಕ ಮಾಡಿತ್ತು. ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಅವರನ್ನು ಸಹಪ್ರಭಾರಿಯಾಗಿ ನಿಯೋಜಿಸಲಾಗಿದೆ. ಕೆಲವು ದಿನಗಳ ಹಿಂದೆ ಜೆಪಿನಡ್ಡಾ ಕೇರಳಕ್ಕೆ ಭೇಟಿ ನೀಡಿ ಪಕ್ಷದ ರ್ಯಾಲಿಯಲ್ಲಿ ಭಾಗಿವಹಿಸಿದ್ದರು.

    ಕೇರಳ ಭೇಟಿಯ ಬಳಿಕ ನಡ್ಡಾ ಕರೆದಿದ್ದ ಈ ಸಭೆಯಲ್ಲಿ ಮುಖಂಡರು ಭಾಗವಹಿಸಿ ಚರ್ಚಿಸಿದರು. ಪ್ರಭಾರಿಗಳ ಈ ಪ್ರಥಮ ಸಭೆಯಲ್ಲಿ ಚುನಾವಣಾ ತಂತ್ರಗಾರಿಯ ಕುರಿತು ಮಹತ್ವದ ಚರ್ಚೆಗಳು ನಡೆದವು. ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ, ಕೇಂದ್ರ ಸಚಿವರಾದ ವಿಕೆಸಿಂಗ್, ಕಿಷನ್ ರೆಡ್ಡಿ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.