Tag: ಕೇರಳ ಹೈಕೋರ್ಟ್

  • ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ; ತನಿಖೆ ಕೈಗೊಳ್ಳಲು SITಗೆ ಕೇರಳ ಹೈಕೋರ್ಟ್ ಸೂಚನೆ

    ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ; ತನಿಖೆ ಕೈಗೊಳ್ಳಲು SITಗೆ ಕೇರಳ ಹೈಕೋರ್ಟ್ ಸೂಚನೆ

    – 6 ವಾರಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನಿರ್ದೇಶನ

    ತಿರುವನಂತಪುರಂ: ಶಬರಿಮಲೆ (Sabarimala Ayyappan Temple) ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಕೇಸ್ ದಾಖಲಿಸಿ ತನಿಖೆ ಆರಂಭಿಸಲು ಕೇರಳ ಹೈಕೋರ್ಟ್ ಸೂಚನೆ ನೀಡಿದೆ.

    ನ್ಯಾ.ರಾಜಾ ವಿಜಯರಾಘವನ್, ನ್ಯಾ.ಕೆವಿ ಜಯಕುಮಾರ್ ಇದ್ದ ಪೀಠ, ದ್ವಾರಗಳಿಗೆ ಚಿನ್ನ ಲೇಪನ ವೇಳೆ ಚಿನ್ನ (Gold) ಕಳುವಾಗಿದೆ ಅನ್ನೋದನ್ನು ಗಮನಿಸಿ ಈ ನಿರ್ದೇಶನ ನೀಡಿದ್ದಾರೆ. ಅಲ್ಲದೇ, 6 ವಾರಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯದ ನಿರ್ದೇಶನ ನೀಡಿದೆ.

    Sabarimala Temple

    ತನಿಖೆಯನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಬೇಕು. ತನಿಖೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಸೋರಿಕೆ ಮಾಡಬಾರದು. ವಿಶೇಷ ತನಿಖಾ ತಂಡವು ನೇರವಾಗಿ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಶಬರಿಮಲೆ ವಿಷಯದ ಕುರಿತು ಚಿನ್ನದ ಲೇಪನಕ್ಕೆ ಮುಂದಾಗಿದ್ದ ಉನ್ನಿಕೃಷ್ಣನ್ ಪೊಟ್ಟಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸೋದನ್ನು ಹೈಕೋರ್ಟ್ (Kerala High Court) ನಿಷೇಧಿಸಿದೆ. ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಸಹ ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಲಾಗಿದೆ.

    Sabarimala Temple

    ಏನಿದು ಪ್ರಕರಣ?
    ಇತ್ತೀಚೆಗಷ್ಟೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ (Sabarimala Ayyappan Temple) ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು ಚಿನ್ನದ (Gold) ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದರು.

    2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್‌ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿದೆ.

  • ಐಟಿ ಉದ್ಯೋಗಿ ಕಿಡ್ನ್ಯಾಪ್‌ ಕೇಸ್ – 3ನೇ ಆರೋಪಿ ನಟಿ ಲಕ್ಷ್ಮಿ ಮೆನನ್‌ ಬಂಧನಕ್ಕೆ ಕೋರ್ಟ್‌ ತಡೆ

    ಐಟಿ ಉದ್ಯೋಗಿ ಕಿಡ್ನ್ಯಾಪ್‌ ಕೇಸ್ – 3ನೇ ಆರೋಪಿ ನಟಿ ಲಕ್ಷ್ಮಿ ಮೆನನ್‌ ಬಂಧನಕ್ಕೆ ಕೋರ್ಟ್‌ ತಡೆ

    ತಿರುವನಂತಪುರಂ: ಕೇರಳದ (Kerala) ಕೊಚ್ಚಿಯಲ್ಲಿ ನಡೆದ ಐಟಿ ಉದ್ಯೋಗಿಯ ಕಿಡ್ನ್ಯಾಪ್‌ ಪ್ರಕರಣದಲ್ಲಿ ಖ್ಯಾತ ನಟಿ ಲಕ್ಷ್ಮಿ ಮೆನನ್‌ ಅವ‌ರ ಹೆಸರು ಕೇಳಿಬಂದಿದೆ. ಸದ್ಯ ಪ್ರಕರಣದ ಮೂರನೇ ಆರೋಪಿಯಾಗಿರುವ ಲಕ್ಷ್ಮಿ ಮೆನನ್‌ (Lakshmi Menon) ನಿರೀಕ್ಷಣಾ ಜಾಮೀನು ಪಡೆದು ಬಂಧನ ಭೀತಿಯಿಂದ ಪಾರಾಗಿದ್ದಾರೆ.

    ಲಕ್ಷ್ಮಿ ಮೆನನ್ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ನಟಿಯ ಜೊತೆಗಿದ್ದ ಮಿಥುನ್, ಅನೀಶ್ ಹಾಗೂ ಓರ್ವ ಮಹಿಳಾ ಸ್ನೇಹಿತೆಯನ್ನು ಈಗಾಗಲೇ ಪೊಲೀಸರು (Kerala Police) ಬಂಧಿಸಿದ್ದಾರೆ. ಅಲುವಾ ಮೂಲದ ಐಟಿ ಕಂಪನಿ ಉದ್ಯೋಗಿಯೊಬ್ಬರು ತನ್ನನ್ನು ಅಪಹರಿಸಿ (Techie Kidnap Case), ಥಳಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಏಕಾಂಗಿ ನಿರೂಪಣೆ ಬಳಿಕ ಹೊಸ ಮನ್ವಂತರಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ

    ನಟಿ ಲಕ್ಷ್ಮಿ ಮೆನನ್‌ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಂತರ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ನೇತೃತ್ವದ ಪೀಠವು ನಟಿಯ ಬಂಧನಕ್ಕೆ ಸೆ.17ರಂದಿ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಅನುಶ್ರೀ ಕಲ್ಯಾಣದಲ್ಲಿ ರಾರಾಜಿಸಿದ ಅಪ್ಪು ಫೋಟೋ

    ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ
    ಕೋರ್ಟ್‌ಗೆ ಸಲ್ಲಿಸಿದ ನಿರೀಕ್ಷಿಣಾ ಜಾಮೀನು ಅರ್ಜಿಯಲ್ಲಿ ದೂರುದಾರ ಬಾರ್‌ನಲ್ಲಿ ತಮ್ಮನ್ನು ಅವಾಚ್ಯ ಶದ್ಧಗಳಿಂದ ನಿಂದಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಬಾರ್‌ನಿಂದ ಹೊರಬಂದ ನಂತರ ದೂರುದಾರರು ಕಾರಿನಲ್ಲಿ ತಮ್ಮನ್ನ ಹಿಂಬಾಲಿಸಿ ಬಿಯ‌ರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಐಟಿ ಉದ್ಯೋಗಿ ಸಲ್ಲಿಸಿರುವ ದೂರಿನ ವಿಷಯವು ಕಟ್ಟುಕಥೆಯಾಗಿದೆ. ಅಪರಾಧಕ್ಕೂ, ನನಗೂ ಯಾವ್ದೇ ಸಂಬಂಧವಿಲ್ಲ. ನನ್ನ ಹೆಸರು, ಖ್ಯಾತಿಗೆ ಕಳಂಕ ತರುವ ಉದ್ದೇಶದಿಂದ ಈ ರೀತಿ ದೂರು ಕೊಟ್ಟಿದ್ದಾರೆಂದು ಅರ್ಜಿಯಲ್ಲಿ ಹೇಳಿದ್ದಾರೆ. ಇದನ್ನೂ ಓದಿ: 1,000 ಡ್ಯಾನ್ಸರ್ಸ್ ಜೊತೆ ಮೈಸೂರಲ್ಲಿ ರಾಮ್ ಚರಣ್ ಸಿನಿಮಾ ಶೂಟಿಂಗ್

    ಏನಿದು ಪ್ರಕರಣ? ದೂರುದಾರ ಹೇಳಿದ್ದೇನು?
    ದೂರುದಾರರಾದ ಅಲಿಯಾರ್ ಶಾ ಸಲೀಂ ಪ್ರಕಾರ, ಕೆಲವು ದಿನಗಳ ಹಿಂದೆ ಬಾರ್‌ನಲ್ಲಿ ಯಾವುದೋ ಒಂದು ವಿಚಾರಕ್ಕೆ ಲಕ್ಷ್ಮಿ ಮೆನನ್‌ ಅವರ ಗ್ಯಾಂಗ್, ಅಲಿಯಾರ್ ಮತ್ತು ಅವರ ಸ್ನೇಹಿತನೊಂದಿಗೆ ತಗಾದೆ ತೆಗೆದು, ಜೋರಾಗಿ ಜಗಳವಾಡಿದೆ. ಇದಾದ ಬಳಿಕ ಅಲಿಯಾರ್ ಅವರನ್ನ ಹಿಂಬಾಲಿಸಿ ಹೋಗಿ, ಅವರ ಕಾರನ್ನು ಎರ್ನಾಕುಲಂ ನಾರ್ತ್ ಓವರ್‌ಬ್ರಿಡ್ಜ್ ಸಮೀಪದಲ್ಲಿ ನಟಿಯ ಗ್ಯಾಂಗ್ ತಡೆದಿದೆ. ಈ ವೇಳೆ ಆರೋಪಿಗಳಾದ ಲಕ್ಷ್ಮಿ ಮೆನನ್, ಮಿಥುನ್, ಅನೀಶ್ ಮತ್ತು ಸೋನಾಮೋಲ್ ಸೇರಿದಂತೆ ಒಂದು ಗ್ಯಾಂಗ್, ದೂರುದಾರ ಅಲಿಯಾರ್‌ರನ್ನು ಕಾರಿನಿಂದ ಬಲವಂತವಾಗಿ ಎಳೆದು, ಮತ್ತೊಂದು ವಾಹನದಲ್ಲಿ ಕರೆದೊಯ್ದು, ದೈಹಿಕವಾಗಿ ಹಲ್ಲೆ ಮಾಡಿ, ಗಂಭೀರ ಬೆದರಿಕೆ ಹಾಕಿದ್ದಾರೆ. ಇದಾದ ನಂತರ, ಅಲಿಯಾ‌ರ್ ಅವರನ್ನು ಅಲುವಾ-ಪರವೂರ್ ಜಂಕ್ಷನ್‌ನಲ್ಲಿ ಬಿಟ್ಟು ಅಲ್ಲಿಂದ ಪರಾರಿಯಾದರು ಎಂದು ಅಲಿಯಾ‌ರ್ ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಬಳಿಕ ನಟಿ ಕೂಡ ಗ್ಯಾಂಗ್‌ನಲ್ಲಿದ್ದರು ಎಂಬುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದಾರೆ. ದೂರಿನ ಆಧಾರದ ಮೇಲೆ ಲಕ್ಷ್ಮಿ ಮನನ್‌ ಅವರನ್ನ ಪ್ರಕರಣದ 3ನೇ ಆರೋಪಿಯಾಗಿ ಹೆಸರಿಸಲಾಗಿದೆ. ಬಾರ್‌ನಲ್ಲಿ ನಡೆದ ಜಗಳವೇ ಅಪಹರಣ ಮತ್ತು ಥಳಿತಕ್ಕೆ ಕಾರಣ ಎಂದು ತಿಳಿದುಬಂದಿದೆ.

    ಘಟನೆ ಬಳಿಕ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಆದ್ರೆ ಲಕ್ಷ್ಮಿ ಮೆನನ್‌ ಈವರೆಗೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ತನಿಖೆ ಪ್ರಗತಿಯಲ್ಲಿದೆ.

    ತಮಿಳು, ಮಲಯಾಳಂ ಚಿತ್ರಗಳಲ್ಲಿ ಖ್ಯಾತಿ ಪಡೆದಿದ್ದ ಲಕ್ಷ್ಮಿ ಮೆನನ್‌, ಸುಂದರ ಪಾಂಡಿಯನ್, ರೆಕ್ಕಾ, ‘ಚಂದ್ರಮುಖಿ 2 ವೇದಾಲಂ, ಕೊಂಬನ್, ಪಾಂಡ್ಯನಾಡು ಮೊದಲಾದ ಹಿಟ್‌ ಸಿನಿಮಾಗಳಲ್ಲಿ ನಟಿಸಿದ್ದಾರೆ.

  • Kerala |  ಕೌಟುಂಬಿಕ ನ್ಯಾಯಾಲಯದಾಚೆ ವಿವಾದ ಇತ್ಯರ್ಥಕ್ಕೆ ‘ಸಾಮರಸ್ಯ ತಾಣ’

    Kerala | ಕೌಟುಂಬಿಕ ನ್ಯಾಯಾಲಯದಾಚೆ ವಿವಾದ ಇತ್ಯರ್ಥಕ್ಕೆ ‘ಸಾಮರಸ್ಯ ತಾಣ’

    ತಿರುವಂತನಪುರಂ: ಕೌಟುಂಬಿಕ ವ್ಯಾಜ್ಯಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಗೊಳಿಸುವುದನ್ನು ಪ್ರೋತ್ಸಾಹಿಸುವುದಕ್ಕಾಗಿ ಕೇರಳ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಾಮರಸ್ಯ ತಾಣ ಎಂಬ ವಿಶಿಷ್ಟ ಯೋಜನೆ ಪ್ರಾರಂಭಿಸಿದೆ.

    ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಕೆಎಲ್‌ಎಸ್‌ಎ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ಎ ಮುಹಮ್ಮದ್ ಮುಸ್ತಾಕ್ ಅವರು ಯೋಜನೆ ಉದ್ಘಾಟಿಸಿದರು.ಇದನ್ನೂ ಓದಿ: ಸಿಎಂ ಪತ್ನಿಗೆ ಇಡಿ ನೋಟಿಸ್ ರಾಜಕೀಯ ಅನ್ನೋಕ್ಕಾಗಲ್ಲ, ಉತ್ತರ ಕೊಡಲಿ – ಸತೀಶ್ ಜಾರಕಿಹೊಳಿ

    ದುಬಾರಿ ಮತ್ತು ಸಮಯ ಹಿಡಿಯುವ ವ್ಯಾಜ್ಯಗಳನ್ನು ತಪ್ಪಿಸುವ ಮೂಲಕ ಹಾಗೂ ಕಕ್ಷಿದಾರರ ನಡುವೆ ಸೌಹಾರ್ದಯುತವಾಗಿ ವ್ಯಾಜ್ಯಗಳನ್ನು ಬಗೆಹರಿಸುವ ಮೂಲಕ ನ್ಯಾಯಾಲಯಗಳ ಮೇಲಿನ ಪ್ರಕರಣದ ಬಾಕಿಯ ಹೊರೆಯನ್ನು ‘ಸಾಮರಸ್ಯ ತಾಣ’ ತಗ್ಗಿಸುವ ನಿರೀಕ್ಷೆಯಿದೆ. ಈ ಯೋಜನೆ ಆಪ್ತಸಮಾಲೋಚನೆ, ಮಧ್ಯಸ್ಥಿಕೆ ಸೇವೆ, ಕಾನೂನು ಮಾರ್ಗದರ್ಶನ ಅಥವಾ ಕಾನೂನು ನೆರವು, ಭಾವನಾತ್ಮಕ ಬೆಂಬಲ ಹಾಗೂ ಕ್ಷೇಮ ಕಾರ್ಯಕ್ರಮಗಳನ್ನು ಉಚಿತವಾಗಿ ನೀಡುತ್ತದೆ. ದಾವೆದಾರರು ಯೋಜನೆಯಡಿ ಸೇವೆ ಪಡೆಯಲು ರಾಜ್ಯದ ಹದಿನಾಲ್ಕು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಒಂದನ್ನು ಸಂಪರ್ಕಿಸಬಹುದು.

    ವಿವಾಹ ಸಂಬಂಧಗಳಷ್ಟೇ ಅಲ್ಲದೆ, ಸಹಜೀವನದಂತಹ ಮದುವೆಯ ಸ್ವರೂಪದಲ್ಲಿನ ಸಂಬಂಧಗಳು ಸಹ ಸಾಮರಸ್ಯ ತಾಣದ ವ್ಯಾಪ್ತಿಗೆ ಬರುತ್ತವೆ. ಪ್ರಕ್ರಿಯೆಯಲ್ಲಿ ಹಂಚಿಕೊಳ್ಳಲಾಗುವ ಎಲ್ಲಾ ಚರ್ಚೆ, ದಾಖಲೆಗಳು ಮತ್ತು ಮಾಹಿತಿ ಕಟ್ಟುನಿಟ್ಟಾಗಿ ಗೌಪ್ಯವಾಗಿರುತ್ತದೆ. ಒಂದೊಮ್ಮೆ ಜಾರಿಗೊಳಿಸಬೇಕಾದ ನಿಯಮವನ್ನು ರಾಜಿ ಒಪ್ಪಂದ ಹೊಂದಿದ್ದರೆ, ಅಂತಹ ಪ್ರಕರಣವನ್ನು ಲೋಕ್ ಅದಾಲತ್ ಮುಂದೆ ಮಂಡಿಸಬಹುದು. ನಂತರ ಅದು ಒಪ್ಪಂದದ ನಿಯಮಗಳ ಆಧಾರದ ಮೇಲೆ ತೀರ್ಪು ನೀಡಲಿದೆ.

    ಈ ಪ್ರಕ್ರಿಯೆ ರಾಜಿ ಸಂಧಾನವನ್ನು ಔಪಚಾರಿಕವಾಗಿ ಗುರುತಿಸಲು ಮತ್ತು ಕಾನೂನುಬದ್ಧವಾಗಿ ಹಿಡಿದಿಡಲು ಅನುಮತಿಸುತ್ತದೆ. ಇದು ದೀರ್ಘಾವಧಿಯ ದಾವೆಯ ಅಗತ್ಯವಿಲ್ಲದೆಯೇ ರಾಜಿ ಸಂಧಾನ ಪಾಲನೆ ಖಚಿತಪಡಿಸಿಕೊಳ್ಳಲು ಪಕ್ಷಕಾರರಿಗೆ ತ್ವರಿತ ಮತ್ತು ಹೆಚ್ಚು ದಕ್ಕಬಹುದಾದ ಮಾರ್ಗ ಕಲ್ಪಿಸುತ್ತದೆ.ಇದನ್ನೂ ಓದಿ: ಸಿಎಂ ಪತ್ನಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ – ಡಿಕೆಶಿ

  • ಕನ್ನಡ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಿಸಿದ್ದ ಕೇರಳ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ – ಕನ್ನಡ ಶಿಕ್ಷಕರನ್ನೇ ನೇಮಿಸುವಂತೆ ಆದೇಶ

    ಕನ್ನಡ ಶಾಲೆಗೆ ಮಲಯಾಳಂ ಶಿಕ್ಷಕಿ ನೇಮಿಸಿದ್ದ ಕೇರಳ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ – ಕನ್ನಡ ಶಿಕ್ಷಕರನ್ನೇ ನೇಮಿಸುವಂತೆ ಆದೇಶ

    ಮಂಗಳೂರು: ಕನ್ನಡ ಶಾಲೆಗೆ ಮಲಯಾಳಂ (Malayalam) ಶಿಕ್ಷಕಿಯನ್ನು ನೇಮಿಸಿದ್ದ ಕೇರಳ‌ ಸರ್ಕಾರಕ್ಕೆ‌ ಕೇರಳ ಹೈಕೋರ್ಟ್ (Kerala High Court) ತಪರಾಕಿ ಹಾಕಿದ್ದು, ಕನ್ನಡ ತಿಳಿದ ಶಿಕ್ಷಕರನ್ನೇ ನೇಮಿಸುವಂತೆ ಆದೇಶಿಸಿದೆ.

    ಕರ್ನಾಟಕದ (Karnataka) ಗಡಿಭಾಗ ಕೇರಳದ ಕಾಸರಗೋಡು ಜಿಲ್ಲೆಯ ಅಡೂರು‌ ಸರ್ಕಾರಿ ಪ್ರಾಥಮಿಕ ಶಾಲೆಗೆ ಕೇರಳ ಸರ್ಕಾರ ಕನ್ನಡ ತಿಳಿಯದ ಮಲಯಾಳಿ ಶಿಕ್ಷಕಿಯನ್ನು ನೇಮಿಸಿತ್ತು. ಇದರಿಂದ ಸಮಸ್ಯೆಗೀಡಾದ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದು, ಎರಡು ತಿಂಗಳಿನಿಂದ ಕೋರ್ಟ್ ಹೋರಾಟ ನಡೆಸಿದ್ದರು. ಇದನ್ನೂ ಓದಿ: ಧಾರವಾಡ ಮೂಲದ ಆಸ್ಟ್ರೇಲಿಯಾ ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಆಸ್ಟ್ರೇಲಿಯಾದ ಕಠಿಣ ಕಾನೂನುಗಳೇ ಸಾವಿಗೆ ಕಾರಣ

    ಪೋಷಕರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು, ಕೇರಳ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಚಾಟಿ ಬೀಸಿದೆ. ಕನ್ನಡ ಮಕ್ಕಳಿಗೆ ಮಲಯಾಳಿ ಶಿಕ್ಷಕಿಯನ್ನ ನೇಮಿಸಿ ಭಾಷಾ ಅಲ್ಪಸಂಖ್ಯಾತ ಮಕ್ಕಳಿಗೆ ಅನ್ಯಾಯ ಮಾಡಲಾಗುತ್ತಿದೆ. ಇಂತಹ ಘಟನೆ ಅಡೂರು ಶಾಲೆಯಲ್ಲಿ ಮಾತ್ರವಲ್ಲ ಕಾಸರಗೋಡಿನ‌ ಹೆಚ್ಚಿನ ಕನ್ನಡ ಶಾಲೆಗಳಲ್ಲಿ ಅನ್ಯಾಯ ಆಗುತ್ತಿದೆ ಎಂದು ಪೋಷಕರ ಕಡೆಯ ವಕೀಲರು ವಾದ ಮಾಡಿದ್ದರು.

    ಈ‌ ವಾದವನ್ನ ಪುರಸ್ಕರಿಸಿದ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಕನ್ನಡಿಗರಿಗೆ ಜಯ ಸಿಕ್ಕಂತಾಗಿದೆ. ಇದನ್ನೂ ಓದಿ: ಚಂದ್ರನ ಮೇಲಿರುವ ಚಂದ್ರಯಾನ-3 ಲ್ಯಾಂಡರ್‌ ಫೋಟೋ ಸೆರೆ ಹಿಡಿದ ಚಂದ್ರಯಾನ-2ರ ಆರ್ಬಿಟರ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • SC-ST ಕಾಯ್ದೆಯಡಿ ಅಮಾಯಕರು ಸುಳ್ಳು ಪ್ರಕರಣಗಳಿಗೆ ಬಲಿಯಾಗ್ತಿದ್ದಾರೆ : ಕೇರಳ ಹೈಕೋರ್ಟ್

    SC-ST ಕಾಯ್ದೆಯಡಿ ಅಮಾಯಕರು ಸುಳ್ಳು ಪ್ರಕರಣಗಳಿಗೆ ಬಲಿಯಾಗ್ತಿದ್ದಾರೆ : ಕೇರಳ ಹೈಕೋರ್ಟ್

    ತಿರುನಂತರಪುರಂ: ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ (SC-ST (POA) Act) ಅಡಿಯಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಪರಿಗಣಿಸುವಾಗ ಎಚ್ಚರಿಕೆಯಿಂದ ವಿಶ್ಲೇಷಣೆ ಮಾಡಬೇಕು ಎಂದು ಕೇರಳ ಹೈಕೋರ್ಟ್ (Kerala High Court) ಸೂಚಿಸಿದೆ.

    ಅನೇಕ ಅಮಾಯಕರು ಸುಳ್ಳು ಪ್ರಕರಣಗಳಿಗೆ ಬಲಿಯಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಆದ್ದರಿಂದ ಎಸ್ಸಿ-ಎಸ್ಟಿ ಕಾಯ್ದೆ ಅಡಿಯ ಪ್ರಕರಣಗಳು ಬಂದಾಗ ನ್ಯಾಯಾಲಯಗಳು (Court) ಹೆಚ್ಚಿನ ವಿವರಗಳಿಗೆ ಗಮನ ಕೊಡಬೇಕು ಎಂದು ನ್ಯಾಯಮೂರ್ತಿ ಎ. ಬದ್ರುದ್ದೀನ್ ಅವರಿದ್ದ ಏಕಸದಸ್ಯ ಪೀಠ ಹೇಳಿದೆ. ಇದನ್ನೂ ಓದಿ: ಝಿಕಾ ಆತಂಕ – ಕಾಂಡೋಮ್ ಜಾಗೃತಿ ಬಳಿಕ ಗರ್ಭಿಣಿಯರ ಮೇಲೆ ತೀವ್ರ ನಿಗಾ

    ಎಸ್ಸಿ-ಎಸ್ಟಿ ಕಾಯ್ದೆ (ದೌರ್ಜನ್ಯ ತಡೆ) ಅಡಿಯಲ್ಲಿ ಅನೇಕ ಮುಗ್ಧರು ಸುಳ್ಳು ಪ್ರಕರಣಗಳಿಗೆ ಬಲಿಯಾಗುತ್ತಿರುವುದು ಆಘಾತಕಾರಿ ಘಟನೆ. ಆದ್ದರಿಂದ ನ್ಯಾಯಾಲಯಗಳು ಪ್ರಕರಣಗಳನ್ನು ಮೂಲದಿಂದ ವಿಶ್ಲೇಷಣೆ ಮಾಡುವ ಅಗತ್ಯವಿದೆ. ಪ್ರಕರಣದ ಹುಟ್ಟು, ಅಪರಾಧದ ನೋಂದಣಿಯಾಗುವುದಕ್ಕೂ ಮುಂಚಿನ ಪೂರ್ವಕಥೆಗಳು, ದೂರುದಾರ ಮತ್ತು ಆರೋಪಿ (Accused) ನಡುವಿನ ದ್ವೇಷದ ಅಸ್ತಿತ್ವ ಈ ಎಲ್ಲ ಅಂಶಗಳನ್ನು ಉಲ್ಲೇಖಿಸಬೇಕು. ಜೊತೆಗೆ ಜಾಮೀನು ಅರ್ಜಿ ಪರಿಗಣಿಸುವಾಗ ಹಿಂದಿನ ವಿವಾದಗಳು, ಪ್ರಕರಣಗಳು ಹಾಗೂ ದೂರುಗಳನ್ನು ಪರಿಗಣಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

    ವಿಶೇಷ ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ಸಮಯದಲ್ಲಿ ಕೋರ್ಟ್ ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ. ಇದನ್ನೂ ಓದಿ: ತನ್ನ ಚುನಾವಣೆಯ ಗೆಲುವಿನ ರಹಸ್ಯ ರಿವೀಲ್ ಮಾಡಿದ ಮೋದಿ

    court order law

    ಏನಿದು ಪ್ರಕರಣ?
    ಬ್ಯಾಂಕ್‌ಗೆ ಹೋದಾಗ ಅಲ್ಲಿದ್ದ ಮಹಿಳಾ ಉದ್ಯೋಗಿ ತನ್ನನ್ನು ಜಾತಿ ಹೆಸರಿನಿಂದ ನಿಂದಿಸಿದ್ದಾಳೆ ಎಂದು ಆರೋಪಿಸಿ ಎಸ್ಸಿ-ಎಸ್ಟಿ ಕಾಯ್ದೆ (ದೌರ್ಜನ್ಯ ತಡೆ) ಅಡಿ ಕೇಸ್ ವ್ಯಕ್ತಿಯೊಬ್ಬರು ಪ್ರಕರಣ ದಾಖಲಿಸಿದ್ದರು. ಆದರೆ ದೂರುದಾರ ವ್ಯಕ್ತಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗಿರಲಿಲ್ಲ. ಮಹಿಳೆಯೊಂದಿಗೆ ಕೆಲಸ ಮಾಡುತ್ತಿದ್ದವರಲ್ಲಿ ಒಬ್ಬರಾಗಿದ್ದರು. ಪದೇ-ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದರಿಂದ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದರು. ಈ ಲೈಂಗಿಕ ಕಿರುಕುಳದ ದೂರನ್ನು ಹಿಂತೆಗೆದುಕೊಳ್ಳುವಂತೆ ಬೆದರಿಸಲು ಮಾಡಿದ ಪ್ರಯತ್ನಗಳಲ್ಲಿ ಇದೂ ಒಂದಾಗಿದೆ ಎಂದು ಮಹಿಳಾ ಪರ ವಕೀಲರು ವಾದಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ವರಾಹರೂಪಂ ವಿವಾದ – ಹೊಂಬಾಳೆ ಫಿಲ್ಮ್ಸ್‌ ಅರ್ಜಿಯನ್ನು ವಜಾಗೊಳಿಸಿದ ಕೇರಳ ಹೈಕೋರ್ಟ್‌

    ವರಾಹರೂಪಂ ವಿವಾದ – ಹೊಂಬಾಳೆ ಫಿಲ್ಮ್ಸ್‌ ಅರ್ಜಿಯನ್ನು ವಜಾಗೊಳಿಸಿದ ಕೇರಳ ಹೈಕೋರ್ಟ್‌

    ತಿರುವನಂತಪುರಂ: ಕಾಂತಾರ ಚಿತ್ರದ ʼವರಾಹರೂಪಂʼ ಹಾಡಿನ ಬಳಕೆಗೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಬೇಕೆಂದು ಕೋರಿ ಹೊಂಬಾಳೆ ಫಿಲ್ಮ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್‌ ವಜಾಗೊಳಿಸಿದೆ.

    ನ್ಯಾಯಮೂರ್ತಿ ಸಿಎಸ್ ಡಯಾಸ್ ಅವರ ಏಕಸದಸ್ಯ ಪೀಠವು, ಅರ್ಜಿದಾರರು ಭಾರತದ ಸಂವಿಧಾನದ 227ನೇ ವಿಧಿಯ ಅಡಿಯಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ. ಸಿವಿಲ್ ಪ್ರಕ್ರಿಯಾ ಸಂಹಿತೆಯಲ್ಲಿ ಸೂಚಿಸಲಾದ ಕಾರ್ಯವಿಧಾನವನ್ನು ಸಂಪೂರ್ಣವಾಗಿ ಬೈಪಾಸ್ ಮಾಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

    ಕೆಳ ನ್ಯಾಯಾಲಯಗಳು ಹೊರಡಿಸಿದ ಪ್ರತಿಯೊಂದು ಮಧ್ಯಂತರ ಆದೇಶಗಳಿಗೆ ನಾವು ಆದೇಶವನ್ನು ನೀಡಲು ಸಾಧ್ಯವಿಲ್ಲ. ಒಂದು ವೇಳೆ ಆದೇಶ ನೀಡಿದರೆ ಮೂಲ ನ್ಯಾಯವ್ಯಾಪ್ತಿಯ ನ್ಯಾಯಾಲಯಗಳು ಮತ್ತು ಮೇಲ್ಮನವಿ ನ್ಯಾಯಾಲಯಗಳು ನಿಷ್ಕ್ರಿಯವಾಗುತ್ತವೆ. ಈ ನ್ಯಾಯಾಲಯವು ಇಂತಹ ಕೇಸ್‌ಗಳಿಂದ ತುಂಬಿ ತುಳುಕುತ್ತದೆ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾಗೊಳಿಸಿದೆ.

    ಈ ಅರ್ಜಿಯನ್ನು ಈಗ ವಿಚಾರಣೆಗೆ ಪರಿಗಣಿಸಲಾಗದು ಎಂದ ಕೋರ್ಟ್‌ ಕಾನೂನಿನಲ್ಲಿ ಲಭ್ಯವಿರುವ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಹೊಂಬಾಳೆ ಫಿಲ್ಮ್ಸ್‌ನವರಿಗೆ ಸಲಹೆಯನ್ನು ನೀಡಿತು. ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಸಿಹಿ ಸುದ್ದಿ

    ಏನಿದು ಪ್ರಕರಣ?
    ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’(Thaikkudam Bridge) ಕಾಂತಾರ ಸಿನಿಮದ ʼವರಾಹರೂಪಂʼ ಕೃತಿಚೌರ್ಯದ ಆರೋಪ ಮಾಡಿ ಕೇಸ್‌ ದಾಖಲಿಸಿದೆ. ಅರ್ಜಿಯನ್ನು ಮಾನ್ಯ ಮಾಡಿದ ಪಾಲಕ್ಕಾಡ್ ಜಿಲ್ಲಾ ನ್ಯಾಯಾಲಯ ಮತ್ತು ಕೋಝಿಕ್ಕೋಡ್ ಪ್ರಧಾನ ಜಿಲ್ಲಾ ನ್ಯಾಯಾಲಯ ಕಾಂತಾರ ನಿರ್ಮಾಪಕರಿಗೆ ವರಾಹರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ: ಗುರೂಜಿ ಮಾಡಿದ ಆ ಒಂದು ತಪ್ಪಿನಿಂದ, ಮನೆ ಮಂದಿಗೆ ಬಿಗ್ ಬಾಸ್ ಗುನ್ನ

    ತಡೆಯಾಜ್ಞೆಯ ಆದೇಶದಂತೆ ಹೊಂಬಾಳೆ ಫಿಲ್ಮ್ಸ್ ಮುಂದಿನ ಆದೇಶದವರೆಗೆ ಸಿಂಕ್ರೊನೈಸ್ ಮಾಡಿದ ವರಾಹರೂಪಂ ಗೀತೆಯೊಂದಿಗೆ ಕಾಂತಾರ ಚಿತ್ರದ ಪ್ರದರ್ಶನ, ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ, ಸ್ಟ್ರೀಮಿಂಗ್ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಹೊಂಬಾಳೆ ಫಿಲ್ಮ್ಸ್‌ ಹೈಕೋರ್ಟ್‌ ಮೊರೆ ಹೋಗಿತ್ತು.

    ಸೆಪ್ಟೆಂಬರ್ 30 ರಂದು ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾದ ಕ್ಲೈಮ್ಯಾಕ್ಸ್‌ನಲ್ಲಿರುವ ವರಾಹರೂಪಂ ಹಾಡು ಭಾರೀ ಜನಪ್ರಿಯತೆ ಪಡೆದಿದೆ. ಈಗಾಗಲೇ ಒಟ್ಟು 400 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿರುವ ಕಾಂತಾರ ಸಿನಿಮಾದ ವರಾಹರೂಪಂ ಹಾಡಿಗೆ ಅಜನೀಶ್‌ ಲೋಕನಾಥ್‌ ಸಂಗೀತ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಕ್ಕಳನ್ನು ಹೆರುವ ವಿಷಯದ ಆಯ್ಕೆ ಮಹಿಳೆಗೆ ಬಿಟ್ಟಿದ್ದು – ಹೈಕೋರ್ಟ್

    ಮಕ್ಕಳನ್ನು ಹೆರುವ ವಿಷಯದ ಆಯ್ಕೆ ಮಹಿಳೆಗೆ ಬಿಟ್ಟಿದ್ದು – ಹೈಕೋರ್ಟ್

    ತಿರುವನಂತಪುರಂ: ಗರ್ಭ ಧರಿಸುವ ಅಥವಾ ಧರಿಸದೇ ಇರುವ ಮಹಿಳೆಯ ಸಂತಾನೋತ್ಪತ್ತಿ (Reproductive) ಆಯ್ಕೆ ವಿಚಾರದಲ್ಲಿ ಮಹಿಳಾ ಹಕ್ಕಿಗೆ (Woman’s Right) ಯಾವುದೇ ನಿರ್ಬಂಧವಿಲ್ಲ ಎಂದು ಕೇರಳ ಹೈಕೋರ್ಟ್ (Kerala High Court) ಹೇಳಿದೆ.

    ಸುಚಿತ್ರಾ ಶ್ರೀವಾಸ್ತವ ವರ್ಸಸ್ ಚಂಡೀಗಢ ಆಡಳಿತ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ನೀಡಿದ ತೀರ್ಪನ್ನು ಉಲ್ಲೇಖಿಸಿ ನ್ಯಾಯಮೂರ್ತಿ ವಿ.ಜಿ ಅರುಣ್ ನೇತೃತ್ವದ ಏಕಸದಸ್ಯ ಪೀಠವು, ಸಂವಿಧಾನದ-21 (Constitution of India) ವಿಧಿಯ ಅಡಿ ಸಂತಾನೋತ್ಪತ್ತಿ ಆಯ್ಕೆ ವಿಚಾರದಲ್ಲಿ ನಿರ್ಧಾರ ಕೈಗೊಳ್ಳುವ ಹಕ್ಕು ಮಹಿಳೆಗೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 

    ಗರ್ಭಧರಿಸುವ ಅಥವಾ ಗರ್ಭಧರಿಸದೇ ಇರುವ ತನ್ನ ಆಯ್ಕೆಯ ಹಕ್ಕನ್ನು ಚಲಾಯಿಸಲು ಮಹಿಳೆಗೆ ಯಾವುದೇ ನಿರ್ಬಂಧವಿರುವುದಿಲ್ಲ. ಇದು ಆಕೆಯ ವೈಯಕ್ತಿಕ ಸ್ವಾತಂತ್ರ‍್ಯದ ಭಾಗವಾಗಿದೆ ಎಂದು ಪೀಠವು ತನ್ನ ಆದೇಶದಲ್ಲಿ ತಿಳಿಸಿದೆ.

    20 ವಾರ ಮೀರಿದ ಗರ್ಭಾವಸ್ಥೆಯನ್ನು ಗರ್ಭಪಾತ ಮಾಡಿಸುವ ಆಯ್ಕೆ ವಿಧಾನದಿಂದ ಅವಿವಾಹಿತ ಮಹಿಳೆಯನ್ನು ಹೊರಗಿಡುವುದು ಸಂವಿಧಾನ 14ನೇ ವಿಧಿಗೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಇತ್ತೀಚೆಗೆ ಹೇಳಿದ್ದನ್ನು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿತು.

    ಸಹಪಾಠಿಯೊಂದಿಗೆ ನಡೆಸಿದ ಒಪ್ಪಿತ ಲೈಂಗಿಕ ಸಂಪರ್ಕದಿಂದಾಗಿ ಗರ್ಭ ಧರಿಸಿದ್ದನ್ನು ತೆಗೆಸಲು ಕೋರಿ 23 ವರ್ಷದ ಎಂಬಿಎ ವಿದ್ಯಾರ್ಥಿನಿ (MBA Student) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಪೀಠವು ಈ ಆದೇಶ ಮಾಡಿತು.

    ಏನಿದು ಪ್ರಕರಣ?
    ಗರ್ಭ ನಿರೋಧಕ ವಿಫಲವಾಗಿದ್ದರಿಂದ ಎಂಬಿಎ ವಿದ್ಯಾರ್ಥಿನಿ ಗರ್ಭ ಧರಿಸಿದ್ದಳು. ಅಲ್ಲದೇ ಆಕೆ ಪಾಲಿಸಿಸ್ಟಿಕ್ ಓವೇರಿಯನ್ ಕಾಯಿಲೆಯಿಂದ ಬಳಲುತ್ತಿದ್ದಳು. ಅಲ್ಟ್ರಾ ಸೌಂಡ್ ಸ್ಕ್ಯಾನ್ ಮಾಡಿಸಿದ ಬಳಿಕ ಗರ್ಭಧರಿಸುವ ವಿಚಾರ ತಿಳಿದಿದೆ.

    ವಿದ್ಯಾರ್ಥಿನಿ ನಿಯಂತ್ರಿತವಾಗಿ ಮುಟ್ಟಾಗದೇ ಇರುವುದರಿಂದ ತಪಾಸಣೆಗೆ ವೈದ್ಯರ ಬಳಿ ತೆರಳಿದ್ದಳು. ಈ ವೇಳೆ ವೈದ್ಯರು ಅಲ್ಟ್ರಾ ಸ್ಕ್ಯಾನ್ ಮಾಡಿಸಲು ಸೂಚಿಸಿದ್ದಾರೆ. ಬಳಿಕವೇ ಈ ವಿಚಾರ ತಿಳಿದಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಯಾತನೆ ಅನುಭವಿಸುತ್ತಿದ್ದು, ಲೈಂಗಿಕ ಸಂಬಂಧ ಹೊಂದಿದ್ದ ಸಹಪಾಠಿಯು ಉನ್ನತ ಶಿಕ್ಷಣ ಪಡೆಯಲು ವಿದೇಶಕ್ಕೆ ತೆರಳಿದ್ದಾನೆ ಎಂದು ಆಕೆ ಮನವಿಯಲ್ಲಿ ವಿವರಿಸಿದ್ದಾಳೆ.

    ಗರ್ಭಧಾರಣೆಯನ್ನು ಮುಂದವರಿಸಿದರೆ ಮಾನಸಿಕ ವೇದನೆ ಹೆಚ್ಚಾಗಲಿದೆ. ಜೊತೆಗೆ ಮಗು ಪಡೆಯುವುದು ಶಿಕ್ಷಣ ಮತ್ತು ಜೀವನ ನಿರ್ವಹಣೆಗೆ ಅಡ್ಡಿಯಾಗಲಿದೆ. ಗರ್ಭಾವಸ್ಥೆಯು 24 ವಾರ ದಾಟಿರುವುದರಿಂದ ಯಾವುದೇ ಆಸ್ಪತ್ರೆ ಗರ್ಭಪಾತ ಮಾಡಿಸಲು ಸಿದ್ಧವಿಲ್ಲ. ಹೀಗಾಗಿ, ನ್ಯಾಯಾಲಯ ಮೆಟ್ಟಿಲೇರಿದ್ದಾಗಿ ಆಕೆ ಮನವಿಯಲ್ಲಿ ಉಲ್ಲೇಖಿಸಿದ್ದಳು. ಇದನ್ನೂ ಓದಿ: ಕೋಟೆ ನಾಡಿನಲ್ಲಿ ದಾರುಣ ಘಟನೆ – ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಇದನ್ನು ಪರಿಗಣಿಸಿರುವ ಪೀಠವು ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿಕೊಳ್ಳಲು ಅನುಮತಿಸಿದೆ. ಪ್ರಕ್ರಿಯೆ ನಡೆಸಲು ವೈದ್ಯಕೀಯ ತಂಡ ರಚಿಸುವಂತೆ ಸಂಬಂಧಿತ ಆಸ್ಪತ್ರೆಗೆ ನಿರ್ದೇಶಿಸಿದೆ. ಒಂದೊಮ್ಮೆ ಮಗು ಜೀವಂತವಾಗಿ ಉಳಿದರೆ ಮಗುವಿಗೆ ಅತ್ಯುತ್ತಮ ವೈದ್ಯಕೀಯ ವ್ಯವಸ್ಥೆ ಮಾಡುವಂತೆ ನ್ಯಾಯಾಲಯವು ಆಸ್ಪತ್ರೆಗೆ ನಿರ್ದೇಶನ ನೀಡಿದೆ.

    ಅರ್ಜಿದಾರರ ಪರ ವಕೀಲರಾದ ಆಕಾಶ್ ಎಸ್, ಗಿರೀಶ್ ಕುಮಾರ್, ವಿ.ಎಸ್ ವರಲಕ್ಷ್ಮೀ ಹಾಗೂ ಎಸ್. ನೀತು ವಾದಿಸಿದರು.

    Live Tv
    [brid partner=56869869 player=32851 video=960834 autoplay=true]

  • PFI ನಿಂದ 5.06 ಕೋಟಿ ಪರಿಹಾರ ಕೇಳಿದ KSRTC

    PFI ನಿಂದ 5.06 ಕೋಟಿ ಪರಿಹಾರ ಕೇಳಿದ KSRTC

    ತಿರುವನಂತಪುರಂ: ರಾಷ್ಟ್ರೀಯ ತನಿಖಾ ದಳ (NIA) ದಾಳಿ ವಿರೋಧಿಸಿ ಪಿಎಫ್‌ಐ (PFI) ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಭಾರೀ ನಷ್ಟವಾಗಿದ್ದು ಕೇರಳ ಸಾರಿಗೆ ಸಂಸ್ಥೆಯು ಪಿಎಫ್‌ಐನಿಂದ 5.06 ಕೋಟಿ ಪರಿಹಾರ ಕೇಳಿ ಹೈಕೋರ್ಟ್‌ಗೆ (Kerala HighCourt) ಅರ್ಜಿ ಸಲ್ಲಿಸಿದೆ.

    ಕಳೆದ ಸೆಪ್ಟೆಂಬರ್‌ 23ರಂದು ಎನ್‌ಐಎ 15 ರಾಜ್ಯಗಳಲ್ಲಿ 93 ಕಡೆ ನಡೆಸಿದ ದಾಳಿಯಲ್ಲಿ ನೂರಾರು ಪಿಎಫ್‌ಐ (PFI) ಕಾರ್ಯಕರ್ತರನ್ನು ವಶಕ್ಕೆ ಪಡೆದು, ಹಲವರನ್ನು ಬಂಧಿಸುವ ಕೆಲಸ ಮಾಡಿತ್ತು. ಇದನ್ನು ಖಂಡಿಸಿದ ಪಿಎಫ್‌ಐ ಕಾರ್ಯಕರ್ತರು ಹಿಂಸಾತ್ಮಕ ಪ್ರತಿಭಟನೆಗೆ ಮುಂದಾಗಿ ತಿರುವನಂತಪುರಂ, ಕೊಲ್ಲಂ, ಕೋಝಿಕ್ಕೋಡ್, ವಯನಾಡ್ ಮತ್ತು ಅಲಪ್ಪುಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿ ಸಾಕಷ್ಟು ಬಸ್‌ಗಳನ್ನ ಜಖಂಗೊಳಿಸಿದ್ದರು.

    70ಕ್ಕೂ ಹೆಚ್ಚು ಬಸ್‌ಗಳು (BUS) ಜಖಂ:
    ಪಿಎಫ್‌ಐ ಕಾರ್ಯಕರ್ತರು ನಡೆಸಿದ 12 ಗಂಟೆಗಳ ಪ್ರತಿಭಟನೆಯಲ್ಲಿ 70ಕ್ಕೂ ಹೆಚ್ಚು ಬಸ್ಸುಗಳು ಹಾನಿಯಾಗಿವೆ. ಅಲ್ಲದೇ ಬಸ್‌ ಚಾಲಕರು, ಪ್ರಯಾಣಿಕರೂ ಗಾಯಗೊಂಡಿದ್ದಾರೆ ಸಾರಿಗೆ ಸಚಿವ ಎ. ರಾಜು ಹೇಳಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಹಿಂಸಾಚಾರ – PFI ವಿರುದ್ಧ ಹೈಕೋರ್ಟ್‌ನಿಂದ ಸ್ವಯಂಪ್ರೇರಿತ ಕೇಸ್‌

    ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು, ಟ್ರಕ್‌ಗಳು ಮತ್ತು ಖಾಸಗಿ ವಾಹನಗಳ ಮೇಲೆ ಮುಂಜಾನೆ ಕಲ್ಲು ತೂರಾಟ ನಡೆದಿತ್ತು. ಕಲ್ಲು ತೂರಾಟದಿಂದ ಹಲವು ಬಸ್ ಚಾಲಕರು ಗಾಯಗೊಂಡಿದ್ದರು. ಕಣ್ಣೂರಿನಲ್ಲಿ ದ್ವಿಚಕ್ರ ವಾಹನದ ಮೇಲೆ ಕಚ್ಚಾ ಬಾಂಬ್ ಎಸೆಯಲಾಗಿತ್ತು. ಕೊಲ್ಲಂನಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸುವ ಸಮಯದಲ್ಲಿ ಇಬ್ಬರು ಪೊಲೀಸರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಇದನ್ನೂ ಓದಿ: NIA ಮಿಡ್‌ನೈಟ್ ಆಪರೇಷನ್- ಬೆಂಗ್ಳೂರಿನಲ್ಲಿ ಶಂಕಿತ ಉಗ್ರ ಯಾಸಿರ್ ಅರೆಸ್ಟ್

    ಯಾವುದೇ ಅನುಮತಿ ಪಡೆಯದೇ ಬಂದ್‌ ಕರೆ ಕೊಟ್ಟ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌ ಪಿಎಫ್‌ಐ ನಾಯಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿತು. ಮುಷ್ಕರ ಬೆಂಬಲಿಸದ ನಾಗರಿಕರು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಲು ಸರ್ಕಾರಕ್ಕೆ ಸೂಚನೆ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಪತಿಯ ಅನುಮತಿಯಿಲ್ಲದೇ ಪತ್ನಿ ಗರ್ಭಪಾತ ಮಾಡಿಸಿಕೊಳ್ಳಬಹುದು – ಕೇರಳ ಹೈಕೋರ್ಟ್

    ಪತಿಯ ಅನುಮತಿಯಿಲ್ಲದೇ ಪತ್ನಿ ಗರ್ಭಪಾತ ಮಾಡಿಸಿಕೊಳ್ಳಬಹುದು – ಕೇರಳ ಹೈಕೋರ್ಟ್

    ತಿರುವನಂತಪುರಂ: ವಿವಾಹಿತ ಮಹಿಳೆ ಗರ್ಭಪಾತ ಮಾಡಿಸಲು ಪತಿಯ ಅನುಮತಿಯನ್ನು ಪಡೆಯುವ ಅಗತ್ಯವಿಲ್ಲ ಎಂದು ಕೇರಳ ಹೈಕೋರ್ಟ್ (Kerala High Court) ಸೋಮವಾರ ತಿಳಿಸಿದೆ.

    ಕೇರಳ ಹೈಕೋರ್ಟ್‍ನಲ್ಲಿ ನ್ಯಾಯಮೂರ್ತಿ ವಿಜಿ ಅರುಣ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿತು. 21 ವರ್ಷ ವಯಸ್ಸಿನ ಗರ್ಭಿಣಿಯೊಬ್ಬರು (Pregnancy) 21 ವಾರಗಳ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ (Medical Termination of Pregnancy Act) ಮುಕ್ತಾಯಗೊಳಿಸಲು ಅನುಮತಿ ಕೋರಿ ಸಲ್ಲಿಸಿದ ಮನವಿಯ ಮೇರೆಗೆ ನ್ಯಾಯಾಲಯವು ಈ ಆದೇಶವನ್ನು ನೀಡಿದೆ. ಈ ವೇಳೆ ಗರ್ಭಿಣಿ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿರುವುದಿಲ್ಲ ಅಥವಾ ವಿಧವೆಯಾಗಿರುವುದಿಲ್ಲ.

    ಗರ್ಭಾವಸ್ಥೆಯ ಮತ್ತು ಹೆರಿಗೆಯ ಸಮಯದಲ್ಲಿ ಒತ್ತಡ ಮತ್ತು ನೋವು ಅನುಭವಿಸುವುದು ಮಹಿಳೆಯರು ಎಂಬ ಕಾರಣವನ್ನು ಉಲ್ಲೇಖಿಸಿ, ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸಲು ಮಹಿಳೆ ತನ್ನ ಪತಿಯ ಅನುಮತಿಯನ್ನು ಪಡೆಯುವ ಯಾವುದೇ ಅಗತ್ಯವಿರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಎಕ್ಸಾಂ ನಡೆಯುತ್ತಿದ್ದ ಸ್ಕೂಲ್‍ಗೆ ನುಗ್ಗಿದ ಹಿಂದೂ ಮುನ್ನನ್ನಿ ಸದಸ್ಯರು – ಶಾಲೆ ಮುಚ್ಚುವಂತೆ ಒತ್ತಾಯ

    court order law

    ಮಹಿಳೆ ತಾನು ಪ್ರೀತಿ ಮಾಡುತ್ತಿದ್ದ ವ್ಯಕ್ತಿ ಜೊತೆಗೆ ಕೆಲವು ತಿಂಗಳ ಹಿಂದೆಯಷ್ಟೇ ಓಡಿ ಹೋಗಿ ಮದುವೆಯಾಗಿದ್ದಳು. ಆದರೆ ಮದುವೆಯ ನಂತರ ಆತ ಮತ್ತು ಆತನ ತಾಯಿ ಇಬ್ಬರು ಆಕೆಯನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದರು. ಅಲ್ಲದೇ ಮಹಿಳೆ ಗರ್ಭಿಣಿಯಾದ ವೇಳೆ ಆಕೆಯನ್ನು ಅನುಮಾನದಿಂದ ಕಾಣಲು ಆರಂಭಿಸಿದ. ಆಕೆಯನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಆಕೆಯ ಭಾವನೆಗಳಿಗೆ ಸ್ಪಂದಿಸುತ್ತಿರಲಿಲ್ಲ. ದಿನೇ ದಿನೆ ಆಕೆಯ ಪತಿ ಮತ್ತು ಅತ್ತೆ ಚಿತ್ರಹಿಂಸೆ ನೀಡಲಾರಂಭಿಸಿದರು. ಕೊನೆಗೆ ಗಂಡನ ಮನೆ ಬಿಟ್ಟು ಮಹಿಳೆ ತವರು ಸೇರಬೇಕಾಯಿತು.

    ನಂತರ ಮಹಿಳೆ ತನ್ನ ಗರ್ಭಾವಸ್ಥೆಯನ್ನು ಮುಕ್ತಾಯಗೊಳಿಸಲು ನಿರ್ಧರಿಸಿ, ಕ್ಲಿನಿಕ್ ಅನ್ನು ಸಂಪರ್ಕಿಸಿದರು. ಆದರೆ ಕ್ಲಿನಿಕ್‍ನವರು ನೀವು ಪತಿಯಿಂದ ಬೇರ್ಪಟ್ಟಿರುವುದು ಸಾಬೀತಾಗಿದೆ ಎನ್ನಲು ಯಾವುದಾದರೂ ದಾಖಲೆ ನೀಡುವಂತೆ ತಿಳಿಸಿತು. ಈ ವೇಳೆ ಯಾವುದೇ ಕಾನೂನು ದಾಖಲೆ ಇಲ್ಲದ ಕಾರಣ ಮಹಿಳೆ ಈ ಕುರಿತಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಳು. ಇದನ್ನೂ ಓದಿ: ಕಟೀಲ್ ಒಬ್ಬ ವಿದೂಷಕ, ಪಾಪ ಇನ್ನೂ ಮೆಚ್ಯೂರಿಟಿ ಇಲ್ಲ: ಸಿದ್ದರಾಮಯ್ಯ

    ಮಹಿಳೆ ತನ್ನ ಪತಿಯ ಮೇಲೆ ಕ್ರಿಮಿನಲ್ ದೂರು ದಾಖಲಿಸಿದ್ದು, ಪತಿ ತನ್ನೊಂದಿಗೆ ಜೀವನ ನಡೆಸಲು ಇಚ್ಛಿಸುತ್ತಿಲ್ಲ ಎಂಬ ಅಂಶವನ್ನು ಕೋರ್ಟ್ ವಿಚಾರಣೆ ವೇಳೆ ಗಮನಿಸಿದೆ. ಆಕೆಯ ವೈವಾಹಿಕ ಜೀವನದಲ್ಲಿ ತೀವ್ರ ಬದಲಾವಣೆಯಾಗಿರುವುದನ್ನು ನ್ಯಾಯಾಲಯ ಗಮನದಲ್ಲಿಟ್ಟುಕೊಂಡು, ಅರ್ಜಿದಾರರಿಗೆ ಕೊಟ್ಟಾಯಂನ ವೈದ್ಯಕೀಯ ಕಾಲೇಜು ಅಥವಾ ಇತರ ಯಾವುದೇ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆ ಗರ್ಭಧಾರಣೆಯನ್ನು ಮುಕ್ತಾಯಗೊಳಿಸಲು ಅನುಮತಿ ನೀಡಿ ಆದೇಶವನ್ನು ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಪತ್ನಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಹೈಕೋರ್ಟ್

    ಪತ್ನಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಹೈಕೋರ್ಟ್

    ತಿರುವನಂತರಪುರಂ: ಹೆಂಡತಿಯನ್ನು ಇತರ ಮಹಿಳೆಯರಿಗೆ ಹೋಲಿಸುವುದು ಹಾಗೂ ಆಕೆ ನಿರೀಕ್ಷೆಯ ಸಂಗಾತಿಯಲ್ಲ ಎಂದು ಅವಳನ್ನು ನಿರಂತರವಾಗಿ ನಿಂದಿಸುವುದು ಮಾನಸಿಕ ಕ್ರೌರ್ಯಕ್ಕೆ ಸಮವಾಗಿದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

    ಸುಮಾರು 13 ವರ್ಷಗಳ ಕಾಲದಿಂದ ಪತ್ನಿಯಿಂದ ಬೇರ್ಪಟ್ಟಿದ್ದ ಪತಿಯು ತಮ್ಮ ಮದುವೆಯನ್ನು ರದ್ದು ಮಾಡಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿ ಈ ತೀರ್ಪು ನೀಡಿದೆ. ಮಹಿಳೆಯೂ ಪತಿಯಿಂದ ಈ ರೀತಿಯ ನಡುವಳಿಕೆಯನ್ನು ಸಹಿಸಿಕೊಳ್ಳಬಾರದು ಎಂದಿದೆ.

    ನ್ಯಾಯಮೂರ್ತಿಗಳಾದ ಅನಿಲ್ ಕೆ. ನರೇಂದ್ರನ್ ಹಾಗೂ ಸಿಎಸ್ ಸುಧಾ ಅವರ ಪೀಠವು ವಿಚ್ಛೇದಿತ ಕಾಯ್ದೆಯಡಿಯಲ್ಲಿ ಈ ತೀರ್ಪನ್ನು ನೀಡಿದೆ. ಪತಿಯು ಪದೇ ಪದೇ ಪತ್ನಿಯನ್ನು ತಮ್ಮ ನಿರೀಕ್ಷೆಯ ಪತ್ನಿಯಲ್ಲ ಎನ್ನುವುದರ ಜೊತೆಗೆ ಇತರ ಮಹಿಳೆಯರೊಂದಿಗೆ ಹೋಲಿಕೆ ಮಾಡುವುದು ಮಾನಸಿಕ ಕ್ರೌರ್ಯವಾಗಿದೆ. ಇದನ್ನು ಪತ್ನಿಯು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಸಹೋದ್ಯೋಗಿ ಗಟ್ಟಿಯಾಗಿ ತಬ್ಬಿಕೊಂಡಿದ್ರಿಂದ ಮುರಿಯಿತಂತೆ ಮಹಿಳೆಯ 3 ಪಕ್ಕೆಲುಬು!

    ದಾಖಲೆಗಳ ಪ್ರಕಾರ ದಂಪತಿ ಕೇವಲ ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ಒಟ್ಟಿಗೆ ಇದ್ದಂತೆ ಕಂಡುಬರುತ್ತದೆ. ನಂತರ ಅವರು ಬೇರ್ಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಪತಿಯು ಪತ್ನಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ವಿಚಾರಣೆ ಸಂದರ್ಭದಲ್ಲಿ ತಿಳಿದುಬಂದಿದೆ. ಜೊತೆಗೆ ಪತ್ನಿಯು ದೈಹಿಕವಾಗಿ ಆಕರ್ಷಣೀಯವಾಗಿ ಇಲ್ಲ ಎಂಬ ಕಾರಣಕ್ಕೆ ಆಕೆಯೊಂದಿಗೆ ಪತಿ ಒಡನಾಟದಲ್ಲಿ ತೊಡಗಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದಿದೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಕೊಡಲಿಯಿಂದ ಪತ್ನಿ ಹತ್ಯೆಗೈದ ಪತಿ

    Law

    ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಪತಿ, ಪತ್ನಿಯರಾಗಿ ಮುಂದುವರಿಯಲು ಹೆಚ್ಚು ಉತ್ಸಾಹಕರಾಗಿಲ್ಲ. ಪತ್ನಿಗೆ 26 ಮತ್ತು ಪತಿಗೆ 29 ವರ್ಷ ವಯಸ್ಸಾಗಿದ್ದು, ಮದುವೆ ಬಳಿಕ ಅವರ ನಡುವೆ ಯಾವುದೇ ಭಾವನಾತ್ಮಕ ಸಂಬಂಧ ಏರ್ಪಟ್ಟಂತೆ ಕಾಣುತ್ತಿಲ್ಲ ಎಂದು ನ್ಯಾಯಾಲಯ ಹೇಳಿದೆ.

    Live Tv
    [brid partner=56869869 player=32851 video=960834 autoplay=true]